Author: AIN Author

ಬೆಂಗಳೂರು: ರೈತರ ಟೊಮೊಟೊ ತೋಟಕ್ಕೆ ನುಗ್ಗಿ ನಾಲ್ಕು ಕಾಡಾನೆಗಳು, ಬೆಳೆ ನಾಶ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಿಕ್ಕ ಹಾಗಡೆ ಗ್ರಾಮದಲ್ಲಿ ನಡೆದಿದೆ ರಾಜಪ್ಪ ಎಂಬವರಿಗೆ ಸೇರಿದ  ಒಂದು ಎಕರೆ ಟಮೋಟೊ ತೋಟದಲ್ಲಿ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ..ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ ಹರಿಸಿಕೊಂಡು ಕಾಡುನಿಂದ ನಾಡಿನಕಡೆ  ಮುಖ ಮಾಡುತ್ತಿದೆ ಅದರಲ್ಲೂ ತಮಿಳುನಾಡು ಗಡಿ ಭಾಗದ ವನಕನಹಳ್ಳಿ ಡೆಂಕಣಿಕೋಟೆ ಶಾಣ್ಮಾವು ಹೊಸೂರು ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಕರ್ನಾಟಕದ ಗಡಿಭಾಗದಲ್ಲಿ ಕಾಣಿಸಿಕೊಂಡಿದೆ ಇದರಿಂದ  ಜನರಿಗೆ ನಿದ್ದೆಗೆಡಿಸಿದೆ,ಅದು ಮಾತ್ರವಲ್ಲದೆ ಕಾಡಂಚಿನಲ್ಲಿರುವ ಗ್ರಾಮಗಳಿಗೆ ಮತ್ತು ರೈತರಿಗೆ ತಲೆನೋವಾಗಿ ಪರಿಣಮಿಸಿದೆ, ವರ್ಷವೆಲ್ಲ ಕಷ್ಟಪಟ್ಟು ಬೆಳೆದ ಬೆಳೆ, ಕಾಡಾನೆಗಳಿಂದಾಗಿ ರೈತನ ಬಾಳಿಗೆ ಕೊಳ್ಳೆ ಇಟ್ಟಿದೆ.. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಇನ್ನು  ಕಳೆದ ರಾತ್ರಿ ನಾಲ್ಕು ಕಾಡಾನೆಗಳು ತೋಟಕ್ಕೆ ಲಗ್ಗೆ ಇಟ್ಟು ಟೆಮೋಟೊ ರಾಗಿ ಮೊದೆ ತಿಂದು ಕಾಡಾನೆಗಳು ದಾಂದಲೆ ನಡೆಸಿದ್ದಲ್ಲದೆ  ರೈತನಿಗೆ ಲಕ್ಷಾಂತರ ರೂಪಾಯಿ ಬೆಳೆ ಹಾನಿ ಮಾಡಿದೆ ಅದಲ್ಲದೆ ತೋಟಕ್ಕೆ ನುಗ್ಗಿ ಸಂಪೂರ್ಣ…

Read More

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾತೆಂಡೂಲ್ಕರ್ ಮತ್ತು ಶುಭಮನ್ ಗಿಲ್​ ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಆದರೆ ಇದಕ್ಕೆ ಇವರಿಬ್ಬರೂ ಈವರೆಗೂ ಯಾವ ಪ್ರತಿಕ್ರಿಯೆಗಳನ್ನೂ ನೀಡಿಲ್ಲ. ಆದ್ರೆ ಇದರ ನಡುವೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಹಾಗೂ ಶುಭಮನ್ ಗಿಲ್ ಸೋದರಿ ಶಹ್ನೀಲ್‌ ಜೊತೆ ಓಡಾಡುತ್ತಿರುವ ವೀಡಿಯೋವೊಂದು ಪಪಾರಾಜಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವೀಡಿಯೋದಲ್ಲಿ ಕಾರಿನ ಹಿಂದಿನ ಸೀಟಿನಲ್ಲಿ ಸಾರಾ ತೆಂಡೂಲ್ಕರ್ ಹಾಗೂ ಶುಭಂ ಸೋದರಿ ಶಹ್ನೀಲ್‌ ಗಿಲ್ ಕುಳಿತಿರುವುದನ್ನು ಕಾಣಬಹುದು. ಇನ್ನು ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ವೀಡಿಯೋ ನೋಡಿದ ಜನ ಸಾರಾ ಹಾಗೂ ಶುಭಮನ್ ಗಿಲ್ ಪ್ರೇಮ ಸಂಬಂಧ ಖಚಿತವಾಗಿದೆ. ಇದೇ ಕಾರಣಕ್ಕೆ ಶುಭಮನ್ ಗಿಲ್ ಸೋದರಿ ಜೊತೆ ಸಾರಾ ಓಡಾಡುತ್ತಿದ್ದಾಳೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಶುಭಮನ್ ಗಿಲ್‌ಗೆ ಕಂಗ್ರಾಟ್ಸ್ ಹೇಳಿದ್ದಾರೆ. https://twitter.com/Gladlyel/status/1748762941879648370?ref_src=twsrc%5Etfw%7Ctwcamp%5Etweetembed%7Ctwterm%5E1748762941879648370%7Ctwgr%5Ea532200c5ef3adda13fd70e47fbb5a11fa425eac%7Ctwcon%5Es1_&ref_url=https%3A%2F%2Fwww.india.com%2Fsports%2Fis-shubman-gill-still-dating-sara-tendulkar-shahneel-gills-recent-video-sparks-fresh-rumours-watch-6670087%2F ಶುಭಮನ್ ಮತ್ತು ಸಾರಾ ತೆಂಡೂಲ್ಕರ್ ಯಾವಾಗಲೂ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರರ ಪೋಸ್ಟ್‌ಗಳಿಗೆ ಕಾಮೆಂಟ್,…

Read More

ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಎರಡು ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಹಿಂದೆ ಸರಿದಿದ್ದಾರೆ. ಐದು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ಜನವರಿ 25ರಂದು ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು, ವೈಯಕ್ತಿಕ ಕಾರಣದಿಂದ ಕೊಹ್ಲಿ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಗಳ ಮೂಲಕ ತಿಳಿದು ಬಂದಿದೆ. ಭಾರತ ತಂಡದಿಂದ ಬಿಡುಗಡೆ ಮಾಡುವಂತೆ ವಿರಾಟ್‌ ಕೊಹ್ಲಿ ಬಿಸಿಸಿಐ ಎದುರು ಮನವಿ ಮಾಡಿಕೊಂಡಿದ್ದಾರೆ ಎಂದು ಬೆಳವಣಿಗೆಗೆ ಹತ್ತಿರದ ಮೂಲಗಳು ತಿಳಿಸಿವೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ “ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ವಿರಾಟ್‌ ಕೊಹ್ಲಿ ಮನವಿ ಮಾಡಿದ್ದು, ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಎರಡು ಪಂದ್ಯಗಳಿಂದ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ವೈಯಕ್ತಿಕ ಕಾರಣ ಕೊಟ್ಟು ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ,” ಎಂದು ಮೂಲಗಳು ಮಾಹಿತಿ ನೀಡಿವೆ. ಟೀಮ್ ಇಂಡಿಯಾ ಪರ ಆಡುವುದಕ್ಕೆ ಮೊದಲ ಆದ್ಯತೆ ನೀಡುವ ವಿರಾಟ್‌ ಕೊಹ್ಲಿ, ಇದೀಗ ಅನಿವಾರ್ಯ ಕಾರಣದಿಂದಾಗಿ ಇಂಗ್ಲೆಂಡ್‌…

Read More

ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನಗೊಂಡಿದ್ದು, ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿದೆ.  ದೇಶದ ಮೂಲೆ ಮೂಲೆಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಗಣ್ಯರನ್ನ ಆಹ್ವಾನಿಸಲಾಗಿತ್ತು. ಅಂತೆಯೇ ಮುಕೇಶ್‌ ಅಂಬಾನಿ ಕುಟುಂಬಸ್ಥರು ಸಹ ಈ ಸಂಪನ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ಹಂಚಿಕೊಂಡರು. ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ(Rishabh Shetty), ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್‌ ಬಚ್ಚನ್‌, ತೆಲುಗು ನಟರಾದ ಚಿರಂಜೀವಿ, ರಾಮ್‌ಚರಣ್, ಪವನ್‌ ಕಲ್ಯಾಣ್‌ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್‌, ಕತ್ರಿನಾ ಕೈಫ್‌ ಸೇರಿದಂತೆ ಅನೇಕ ನಟ ನಟಿಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಕೇವಲ…

Read More

ಸಿಹಿ ಅಡುಗೆಯನ್ನು ಮಾಡಬೇಕು ಎಂದು ನೀವೆನಾದ್ರೂ ಪ್ಲ್ಯಾನ್‌ ಮಾಡಿದ್ದರೆ, ಗಸಗಸೆ ಪಾಯಸವನ್ನು ಮಾಡಿ ಸವಿಯಿರಿ. ಬೆಲ್ಲವನ್ನು ಬಳಸಿಕೊಂಡು ಅತ್ಯಂತ ಸರಳವಾಗಿ ಈ ಪಾಯಸವನ್ನು  ಮಾಡುವ ವಿಧಾನ ಈ ಕೆಳಗಿನಂತಿದೆ. ಬೇಕಾಗುವ ಸಾಮಗ್ರಿಗಳು: * ಗೋಡಂಬಿ-ಸ್ವಲ್ಪ * ಬಾದಾಮಿ-ಸ್ವಲ್ಪ * ಕಪ್ ತೆಂಗಿನಕಾಯಿ- 1ಕಪ್‌ * ಕಪ್ ಬೆಲ್ಲ-   1ಕಪ್‌ * ಏಲಕ್ಕಿ ಪುಡಿ- ಸ್ವಲ್ಪ * ಗಸಗಸೆ- 2ಕಪ್‌ * ತುಪ್ಪ- ಅರ್ಧ ಕಪ್‌ * ಒಣದ್ರಾಕ್ಷಿ- ಸ್ವಲ್ಪ ಮಾಡುವ ವಿಧಾನ: * ಬಾಣಲೆಯಲ್ಲಿ ಗಸಗಸೆ, ಗೋಡಂಬಿ, ಬಾದಾಮಿ, ಗಸಗಸೆ ತುಪ್ಪವನ್ನು ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. * ಹುರಿದ ಪದಾರ್ಥಗಳು, ತೆಂಗಿನಕಾಯಿ ತುರಿ ಸ್ವಲ್ಪ ನೀರನ್ನು ಮಿಕ್ಸಿ ಜಾರಿಗೆ ಹಾಕಿ ರುಬ್ಬಿಕೊಳ್ಳಬೇಕು. * ಒಂದು ಪಾತ್ರೆಯಲ್ಲಿ ಸ್ವಲ್ಪ ತುಪ್ಪ, ಬೆಲ್ಲವನ್ನು ಕರಗಿಸಿಕೊಳ್ಳಬೇಕು.  * ನಂತರ ಈ ಪಾತ್ರೆಗೆ ತಯಾರಾದ ಪೇಸ್ಟ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬೇಕಾದಲ್ಲಿ ಸ್ವಲ್ಪ ನೀರನ್ನು ಸೇರಿಸಿಕೊಳ್ಳಿ * ನಂತರ ಇನ್ನೊಂದು ಬಾಣಲೆಗೆ ತುಪ್ಪ, ಗೋಡಂಬಿ, ಒಣದ್ರಾಕ್ಷಿಯನ್ನು…

Read More

ಚಿಕ್ಕೋಡಿ: ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ನಾನು ಬಿಡುವುದಿಲ್ಲ. ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ ನನಗೆ ಶಿಕ್ಷೆ ವಿಧಿಸಲು ಪ್ಲ್ಯಾನ್ ಮಾಡಿದ್ದ. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬ್ಯಾಂಕ್‍ಗೆ ವಂಚನೆ ಹೆಸರಿನಲ್ಲಿ 420 ಕೇಸ್ ದಾಖಲಿಸಿದ್ದಾನೆ. ನನ್ನ ಹೆಸರು ಟಿವಿಯಲ್ಲಿ ಬರೋದನ್ನು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಏಕವಚನದಲ್ಲೇ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಕಾಗವಾಡ ಶಾಸಕ ರಾಜು ಕಾಗೆ ವಿರುದ್ಧ ಮಾಜಿ ಶಾಸಕ ಶ್ರೀಮಂತ ಪಾಟೀಲ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ, ಕೇಸ್ ದಾಖಲಿಸಿ ಟಿವಿಯಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ. ನಾನು ಗಟ್ಟಿಯಾಗೇ ಇದ್ದೇನೆ. ನನ್ನ ಹಿಮ್ಮೆಟ್ಟಿಸಲು ಡಿ.ಕೆ ಶಿವಕುಮಾರ್ ಅಪ್ಪ ಬಂದರೂ ನಾನು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರ ಸೇರಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 98,43,577 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024 ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಅದರಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 50,78,525 ಪುರುಷ ಮತದಾರರರು, 47,63,268 ಮಹಿಳಾ ಮತದಾರರು ಹಾಗೂ 1,784 ಇತರೆ ಮತದಾರರು ಸೇರಿ ಒಟ್ಟು 98,43,577 ಮತದಾರರಿದ್ದಾರೆ ಎಂದು ತಿಳಿಸಿದರು. ನಗರದಲ್ಲಿ ಬರುವ ಕೇಂದ್ರ, ಉತ್ತರ, ದಕ್ಷಿಣ ಮತ್ತು ಬೆಂಗಳೂರು ನಗರದ ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಎಲ್ಲಾ ಮತದಾರರ ನೊಂದಣಾಧಿಕಾರಿಗಳ ಕಛೇರಿ, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಛೇರಿ ಹಾಗೂ ವಾರ್ಡ್ ಕಛೇರಿಗಳಲ್ಲಿ ಪ್ರಕಟಿಸಲಾಗಿರುತ್ತದೆ. ಮತದಾರರು ತಮ್ಮ…

Read More

ಬೆಂಗಳೂರು: ಅಯೋಧ್ಯಾ ನಗರದ ರಾಮಮಂದಿರದಲ್ಲಿ ಇಂದು ರಾಮನ ಪ್ರಾಣಪ್ರತಿಷ್ಟಾ ಕಾರ್ಯವು ವಿಜೃಂಭಣೆಯಿಂದ ನೆರವೇರಿತು. ಪ್ರಧಾನಿ ಮೋದಿ ಈ ಕಾರ್ಯವನ್ನು ನಿಗದಿತ ಸಮಯಕ್ಕೆ ಸರಿಯಾಗಿ ನೆರವೇರಿಸಿದ್ದಾರೆ. ಸುಮಾರು 500 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದ್ದು, ದೇಶಾದ್ಯಂತ ಸಂತಸ ಮನೆ ಮಾಡಿದೆ. ಹಾಗೆ ಸಿಲಿಕಾನ್ ಸಿಟಿಯಲ್ಲಿಇಂದೇ ತಮ್ಮ  ಡೆಲಿವರಿ ಆಗಬೇಕೆಂದು ತುಂಬಾ ಜನ ಕಾಯುತ್ತಿದ್ದರು. ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾನೆ ದಿನ ಕಂದಮ್ಮಗಳನ್ನು ಪಡೆಯಲು ಕೆಲ ಪೋಷಕರು ಆಸಕ್ತಿ ವಹಿಸಿದ್ದರು ಹಾಗಾಗಿ ಇಂದು ಮಕ್ಕಳಿಗೆ ಜನ್ಮ ಕೊಡಲು ಪೋಷಕರು ಆಸಕ್ತಿ ವಹಿಸಿದ್ದಾರೆ. ಹಾಗಾದ್ರೆ ಇಲ್ಲಿವರೆಗೆ ಎಷ್ಟು ಜನ ಮಕ್ಕಳನ್ನು ಪಡೆದರು ಗೊತ್ತಾ ಇಲ್ಲಿದೆ ನೋಡಿ! ವಾಣಿವಿಲಾಸ್ ಆಸ್ಪತ್ರೆಯಲ್ಲಿ 28 ಕಂದಮ್ಮಗಳು ಜನಿಸಿದ್ದು, ಈ ಪೈಕಿ 10 ನಾರ್ಮಲ್, 1 ಸಿಸೇರಿಯನ್ ಮಾಡಲಾಗಿದೆ. ಗಂಡು 16, ಹೆಣ್ಣು 12 ​ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಈ…

Read More

ಬೆಂಗಳೂರು: ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು ಎಂದು ನಗರದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಫೆಸ್‌ ಬುಕ್‌ ಪೇಜ್‌ʼನಲ್ಲಿ ಬರೆದುಕೊಂಡಿರುವ ಅವರು,  ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್‌) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ https://m.facebook.com/story.phpstory_fbid=pfbid0QFGpZTbTP59vDeSLgxqbeK8JA8HwEejWikeTuU8dwnLGKCkGpVLUhZPmQCLCtkcil&id=100044576433033&mibextid=Nif5oz  ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ…

Read More

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ (Allahu Akbar) ಎಂದು ಘೋಷಣೆ ಕೂಗಿದ ಘಟನೆ ನಡೆಯಿತು. ಶಿವಮೊಗ್ಗದ (Shivamogga) ಶಿವಪ್ಪನಾಯಕ ವೃತ್ತದಲ್ಲಿ, ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಸಿಹಿ ವಿತರಿಸಿದರು. ಈ ವೇಳೆ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ. ನೀವು ಮೋದಿ ಪರ ಕೆಲಸ ಮಾಡ್ತಿದ್ದೀರಾ ಎಂದು ಈ ವೇಳೆ ಪೊಲೀಸರಿಗೆ ಮುಸ್ಲಿಂ ಮಹಿಳೆಯರು ಅವಾಜ್ ಹಾಕಿದ್ದಾರೆ. ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರು ಮುಸ್ಲಿಂ ಮಹಿಳೆಯರ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಪ್ರತಿಯೊಬ್ಬರಿಂದಲೂ ಜೈ ಶ್ರೀರಾಮ್ ಘೋಷಣೆ ಮೊಳಗಿಬಂತು. ಮುಸ್ಲಿಂ ಮಹಿಳೆ ಬಂಧಿಸುವಂತೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರು ಪೊಲೀಸರನ್ನು ಒತ್ತಾಯಿಸಿದರು. ಮುಸ್ಲಿಂ ಮಹಿಳೆ ನ್ಯೂಸೆನ್ಸ್ ಮಾಡ್ತಿದ್ದರೂ ಸುಮ್ಮನಿದ್ದೀರಾ…

Read More