ಬೆಂಗಳೂರು:- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಿದೆ. ಪೂರ್ವ ವಲಯದ ಇಂದಿರಾನಗರ 100 ಅಡಿ ರಸ್ತೆ ಮತ್ತು ಸಿ.ಎಂ.ಹೆಚ್ ರಸ್ತೆಯಲ್ಲಿ ಯೋಜನಾ ವಿಭಾಗದಿಂದ ಕೈಗೊಂಡಿರುವ ವೈಟ್ ಟಾಪಿಂಗ್ ರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ಮಾಡಿಕೊಂಡಿದ್ದ ಒತ್ತುವರಿಯನ್ನು ತೆರವುಗೊಳಿಸಿ, ಇನ್ನು ಮುಂದೆ ಒತ್ತುವರಿ ಮಾಡಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು. ಕೆಲವೆಡೆ ಹೊಟೇಲ್, ಕಾರ್ ಶೋರೂಮ್ ಮುಂಭಾಗ ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಕಾಂಕ್ರಿಂಟ್ ರ್ಯಾಂಪ್ ಅನ್ನು ನಿರ್ಮಿಸಿದ್ದು, ಅದನ್ನು ಸ್ಥಳದಲ್ಲೇ ಜೆಸಿಬಿಯ ಮೂಲಕ ತೆರವುಗೊಳಿಸಲಾಯಿತು. ಅದಲ್ಲದೆ ಆಸ್ಪತ್ರೆಯ ಮುಂಭಾಗ ಸ್ಟೀಲ್ ರ್ಯಾಂಪ್ ಅಳವಡಿಸಿದ್ದು, ಅದನ್ನು ಅವಶ್ಯಕತೆಯಿರುವಾಗ ಮಾತ್ರ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಕಲ್ಟ್ ಫಿಟ್ ಬಳಿ ಶಾಶ್ವತ ನಾಮಫಲಕ ಅಳವಡಿಸಿದ್ದು, ಅದನ್ನು ಸ್ಥಳದಲ್ಲೇ ತೆರವುಗೊಳಸಲಾಗಿದೆ. ಬಹುತೇಕ ಕಡೆ ಪಾದಚಾರಿ ಮಾರ್ಗಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿದ್ದು, ಪಾದಚಾರಿ ಮಾರ್ಗಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡದಂತೆ ನೋಡಿಕೊಳ್ಳಲು ಮಳಿಗೆಗಳ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ. ಪಾದಚಾರಿ ಮಾರ್ಗದಲ್ಲಿ ಗಣೇಶ ಮೂರ್ತಿಗಳನ್ನಿಟ್ಟಿದ್ದು, ಅವುಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಲು ಸಂಬಂಧಪಟ್ಟವರಿಗೆ…
Author: AIN Author
ಹಾಸನ: ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಪಂದ್ಯಇರುವ ಹಿನ್ನೆಲೆಯಲ್ಲಿ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ ಯಾರಿಗೆ ಗೆಲುವು ಎಂದು ಹಾಗೆ ಭಾತರಕ್ಕೆ ಒಲಿಯಲಿ ಎಂದು ಎಲ್ಲಾ ಕಡೆಯಿಂದ ಪೂಜೆಗಳನ್ನು ಸಹಮಾಡುತ್ತಿದ್ದಾರೆ. ಹಾಗೆ ಅದೇರೀತಿ ಟೀಂ ಇಂಡಿಯಾಗೆ ವಿಭಿನ್ನ ರೀತಿ ಶುಭ ಕೋರಿದ ಅಭಿಮಾನಿಗಳು ಹಾಸನ ನಗರದ ಪ್ರಮುಖ ಬೀದಿಗಳಲ್ಲಿ ರನ್ನಿಂಗ್ ಮಾಡಿ ಜಯಘೋಷ ಹಾಗೂ ಟೀಂ ಇಂಡಿಯಾ ಜರ್ಸಿ ಧರಿಸಿ ಶುಭ ಕೋರಿದ ಹತ್ತಾರು ಅಭಿಮಾನಿಗಳು ಸುಮಾರು 10ಕಿ.ಮಿ ಜಾಗಿಂಗ್ ಮಾಡಿ ಭಾರತ ಪರ ಜಯ ಘೋಷ ಕೂಗಿ ಶುಭಾಶಯಜಿಲ್ಲಾ ಕ್ರೀಡಾಂಗಣ, ಎನ್.ಆರ್ ವೃತ್ತ, ಡಿ.ಸಿ ಕಚೇರಿ, ಶಂಕರಮಠ ರಸ್ತೆ ಮೂಲಕ ರನ್ನಿಂಗ್ ಇಂದು ಭಾರತ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು:- ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡಲಿರುವ ಟೀಮ್ ಇಂಡಿಯಾಗೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಭ ಕೋರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯುತ್ತಿದೆ. ಇಡೀ ದೇಶ ಭಾರತ ಗೆಲ್ಲಬೇಕೆಂದು ಪೂಜೆ ಸಲ್ಲಿಸ್ತಿದೆ. ಇಡೀ ದೇಶ ನಿರೀಕ್ಷೆ ಯಲ್ಲಿದೆ ಎಲ್ಲರೂ ಪೂಜೆ, ಎಲ್ಲರ ಆಶಯವೂ ಭಾರತ ಗೆಲ್ಲಬೇಕು ಅನ್ನೋದಾಗಿದೆ. ಒಂದೂ ಪಂದ್ಯ ಸೋಲದೇ ಭಾರತ ಸತತ ಗೆದ್ದುಕೊಂಡು ಬಂದಿದೆ. ಹಾಗಾಗಿ ಇವತ್ತಿನ ಫೈನಲ್ ಸಹ ಭಾರತಕ್ಕೆ ಉತ್ತಮ ಗೆಲ್ಲುವು ಸಿಗಲಿ. ಆಲ್ ದ ಬೆಸ್ಟ್ ಅಂತ ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಶುಭ ಕೋರ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಡಾಲಿ ಧನಂಜಯ್ ಹಾಗೂ ಸತ್ಯದೇವ್ ಕಾಂಬಿನೇಷನ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಝೀಬ್ರಾ ಎಂಬ ಮಾಸ್ ಎಂಟರ್ಟೇನರ್ ಚಿತ್ರವಾಗಿದ್ದು, ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇಬ್ಬರದ್ದೂ 26ನೇ ಸಿನಿಮಾ ಎಂಬುದು ವಿಶೇಷ. ಝೀಬ್ರಾ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್, ಸತ್ಯರಾಜ್, ಸುನೀಲ್ ವರ್ಮ, ಜೆನಿಫರ್ , ಸುರೇಶ್ಚಂದ್ರ ಮೆನನ್, ಕಲ್ಯಾಣಿ ನಟರಾಜ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಪ್ಯಾನ್ ಇಂಡಿಯಾ ‘ZEBRA’ ಚಿತ್ರಕ್ಕೆ…
ಬೆಂಗಳೂರು:- ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಷಣದ ಸಿಡಿ ಒದಗಿಸಲು ಹೈಕೋರ್ಟ್ ಸೂಚನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾದ ಕ್ರಿಮಿನಲ್ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಲ್ಲೇಖಿಸಿರುವ ಹೇಳಿಕೆಯ ವಿಡಿಯೊದ ಸಿಡಿಯನ್ನು ಒದಗಿಸಿ’ ಎಂದು ಪ್ರಕರಣದ ಫಿರ್ಯಾದುದಾರರಿಗೆ ಹೈಕೋರ್ಟ್ ಸೂಚಿಸಿದೆ. ಬೆಳ್ತಂಗಡಿ ಠಾಣಾ ಪೊಲೀಸರು ನನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಹರೀಶ್ ಪೂಂಜಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಇದೇ ವೇಳೆ ಫಿರ್ಯಾದುದಾರರ ಪರ ವಕೀಲ ಬಿ.ಲತೀಫ್, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದೆ ಎನ್ನಲಾಗಿದೆ.
ಬೆಂಗಳೂರು:- ಬಿಜೆಪಿಯ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿವೈ ವಿಜಯೇಂದ್ರ ಅವರು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ ದೊಡ್ಡ ಜವಾಬ್ದಾರಿ ಹೊತ್ತ ಹಿನ್ನೆಲೆ, ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇನ್ನೂ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇದರ ಪರಿಣಾಮ MP ಎಲೆಕ್ಷನ್ ಮೇಲೆ ಬಿದ್ದರೂ ಅಚ್ಚರಿ ಇಲ್ಲ ಎಂದೇ ಹೇಳಲಾಗುತ್ತಿದೆ.
ಯಶ್ (Yash) ಬಾಲಿವುಡ್ನಲ್ಲಿ ರಾಕಿ ಹವಾ ನಿಂತಿಲ್ಲ. ನಿಲ್ಲೋದೂ ಇಲ್ಲ. ಹೊಸ ಸಿನಿಮಾ ಘೋಷಣೆ ಆಗಿಲ್ಲ. ಅಷ್ಟರಲ್ಲಿ ಬಾಲಿವುಡ್ ಸ್ಟಾರಿಣಿಯೊಬ್ಬರು ಯಶ್ ಜೊತೆ ಮಾತ್ರ ನಟಿಸುತ್ತೇನೆ. ಪ್ರಭಾಸ್, ಅಲ್ಲು ನಕೋ ಬಾಬಾ ಎಂದಿದ್ದಾಳೆ. ಅದ್ಯಾಕೆ ಎಲ್ಲರನ್ನೂ ಬಿಟ್ಟು ರಾಕಿ ಹಿಂದೆ ಬಿದ್ದಳಾ ಹೆಣ್ಣು? ಪ್ರಭಾಸ್ ಫ್ಯಾನ್ಸ್ ಕುದ್ದಿದ್ಯಾಕೆ? ಇಲ್ಲಿದೆ ಮಾಹಿತಿ. ಯಶ್ ಜೊತೆ ನಟಿಸೋದು ಹೆವ್ವಿ ಇಷ್ಟ. ಅದೇ ಲೈಫ್ ಟೈಮ್ ಅಚೀವ್ಮೆಂಟು. ಇಲ್ದಿದ್ರೆ ನಂಗ್ಯಾಕೆ ಲೋಕದ ನಂಟು. ಹೀಹಮ್ಮೋ ನೌಟಂಕಿ ನಟಿಯರಿಗೆ ಕಮ್ಮಿ ಇಲ್ಲ. ಕೆಜಿಎಫ್ (KGF) ಬರೋಕೂ ಮುಂಚೆ ಯಶ್ ಇದ್ರೂ. ಮುಂದೆಯೂ ರ್ತಾರೆ. ಆದರೆ ನಾಲಿಗೆಗೆ ಬಣ್ಣ ಬಳಿದುಕೊಳ್ಳುವ ಹುಟ್ಟಾ ಕಲಾವಿದೆಯರಿಗೆ ಆಗ ನೆನಪಾಗಲಿಲ್ಲ. ಈಗ ನೆನಪಾಗೋದು ನಿಲ್ಲಲ್ಲ. ಆ ಸಾಲಿಗೆ ಒಂದು ಮಗುವಿನ ತಾಯಿ ಕರೀನಾ ಕಪೂರ್ ಸೇರಿದ್ದಾರೆ. ಪ್ರಭಾಸ್, ರಾಮ್ಚರಣ್, ವಿಜಯ್ ದೇವರಕೊಂಡ ನಕೋ ಯಶ್ ಮಾತ್ರ ಬೇಕು ಅನ್ನೋದಾ ಕರೀನಾ (Kareena Kapoor) ಹೀಗಂದಿದ್ದೇ ಐತಿಹಾಸಿಕ ಸಾಧನೆ ಅಂದುಕೊಳ್ಳಬೇಕಿಲ್ಲ. ಕರೀನಾಗೆ ಮದುವೆಯಾಗಿದೆ. ಮಗು…
ಬೆಂಗಳೂರು:- ನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ ಮಾಡಿದ್ದು, ಯುವತಿಯನ್ನು ರಕ್ಷಣೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿಪೊಲೀಸರು ದಾಳಿ ಮಾಡಿದ್ದಾರೆ. ಓರ್ವ ಯುವತಿಯನ್ನು ರಕ್ಷಿಸಿ ಕಬ್ಬನ್ ಪಾರ್ಕ್ ಠಾಣೆಗೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ. ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತ ಮೇರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 25ರವರೆಗೂ ಮಳೆಯಾಗಲಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡದಲ್ಲೂ ಮಳೆಯಾಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಪುತ್ತೂರಿನಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇತ್ತೀಚೆಗೆ ಪ್ರಕಾಶ್ ವೀರ್ (Prakash Veer) ಅವರ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿತ್ತು. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು. ಆದರೆ, ಈ ಕುರಿತು ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದಾರೆ. ಶುಭದಿನವೆಂದು ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ಮಾಡಿದ್ದೇವೆ. ಆದರೆ, ಚಿತ್ರದ ಫಸ್ಟ್ ಲುಕ್ (First Look) ಆಗಲಿ, ಪೋಸ್ಟರ್ ಆಗಲಿ ಯಾವುದು ನಾವು ಬಿಡುಗಡೆ ಮಾಡಿಲ್ಲ. ಕಾಟೇರ ಚಿತ್ರದ ನಂತರ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದಾರೆ. ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್…