Author: AIN Author

ಪುಟ್ಟಗೌರಿ ಮದುವೆ’ ಧಾರಾವಾಹಿಯ ಮೂಲಕ ನಟನೆಗೆ ಕಾಲಿಟ್ಟ ನಮ್ರತಾ ಗೌಡ (Namrata), ಬಿಗ್‌ ಬಾಸ್‌ (Bigg Boss Kannada) ವೇದಿಕೆಗೆ ಕಾಲಿಟ್ಟಿದ್ದು ‘ಡೊಂಟ್ ಯು ನೋ… ಐ ಆಮ್ ವೆರಿ ಸೆಕ್ಸಿ’ ಎಂದು ಹಾಡುತ್ತ… ಸೌಂದರ್ಯ, ಆತ್ಮವಿಶ್ವಾಸ ಮತ್ತು ಸ್ಪಷ್ಟತೆಯ ಹದವಾದ ಮಿಶ್ರಣದಂತೆ ಕಾಣಿಸಿದ್ದ ನಮ್ರತಾ ಅವರಿಗೆ ಪ್ರೀಮಿಯರ್ ವೇದಿಕೆಯಲ್ಲಿ ಶೇಕಡಾ ಮತಗಳು ಬಂದಿದ್ದವು. ಈ ಸೀಸನ್‌ನ ಮೊದಲ ಸ್ಪರ್ಧಿಯಾಗಿ ಅವರು ಬಿಗ್‌ಬಾಸ್‌ ಮನೆಯೊಳಗೆ ಕಾಲಿಟ್ಟಿದ್ದರು. ‘ಹ್ಯಾಪಿ ಬಿಗ್‌ಬಾಸ್‌’ ಎಂಬ ಟ್ಯಾಗ್‌ಲೈನ್‌ ಅನ್ನು ತಮ್ಮ ವ್ಯಕ್ತಿತ್ವಕ್ಕೂ ನೇತುಹಾಕಿಕೊಂಡಂತಿದ್ದ ನಮ್ರತಾ ಅವರು ಸದಾ ನಗುನಗುತ್ತಲೇ ಎಲ್ಲರ ಗಮನ ಸೆಳೆದಿದ್ದರು. ಬಿಗ್‌ಬಾಸ್ ಮನೆಯೊಳಗೆ ದಿನಗಳನ್ನು ಕಳೆಯಲಾರಂಭಿಸಿದಂತೆ, ವಿನಯ್, ತುಕಾಲಿ ಸಂತೋಷ್, ಇಶಾನಿ, ಮೈಕಲ್, ಸ್ನೇಹಿತ್‌, ಗೌರಿಶ್ ಮತ್ತು ಸಿರಿ ಅವರ ಜೊತೆಗೆ ಆಪ್ತರಾಗಿದ್ದರು. ‘ಶಾಡೋ’, ‘ಚಮಚ’ ‘ಇನ್‌ಪ್ಲ್ಯೂಯೆನ್ಸ್‌ ಆಗುವವರು’ ಪದೇ ಪದೇ ಇಂಥ ಮಾತುಗಳನ್ನು ಕೇಳುತ್ತಲೇ ಬಂದ ನಮ್ರತಾ, ಬಿಗ್‌ಬಾಸ್‌ ಮನೆಯಲ್ಲಿ ಹದಿನೈದು ವಾರಗಳನ್ನು ಉಳಿದುಕೊಂಡಿರುವುದೇ ಈ ಎಲ್ಲವಕ್ಕೂ ಉತ್ತರದಂತಿತ್ತು. ಈ ಸೀಸನ್‌ನಲ್ಲಿ ಹಲವು…

Read More

ಇಂದು ಕೋಟ್ಯಾಂತರ ಭಾರತೀಯರ ಕನಸು ನನಸಾಗಿದ ದಿನ.  ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರತಿಷ್ಠಾಪನೆ ಆಗಿದೆ. ಈ ಸುಸಂದರ್ಭದಲ್ಲಿ ಸಿರಿ ಮ್ಯೂಸಿಕ್ ಅರ್ಪಿಸುವ ಹಾಗೂ ನಟಿ ರೂಪಿಕಾ (Roopika) ಅವರ ಗೆಜ್ಜೆ ಡ್ಯಾನ್ಸ್ ಸ್ಟುಡಿಯೋ ಸಾರಥ್ಯದಲ್ಲಿ ಮೂಡಿಬಂದಿರುವ ಜಾನಕಿ ರಾಮ (Janaki Rama) ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಸುರಪುರದ ಶಾಸಕರಾದ ರಾಜುಗೌಡ, ಡಿ ಎಸ್ ಮ್ಯಾಕ್ಸ್ ನ ಎಂ ಡಿ ದಯಾನಂದ್,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಟಿ ಪ್ರಿಯಾಂಕ ಉಪೇಂದ್ರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಪೊಲೀಸ್ ಅಧಿಕಾರಿ ಶಂಕರ್ ಸೇರಿದಂತೆ ಅನೇಕ ಗಣ್ಯರು ಸೇರಿ ಅದ್ದೂರಿಯಾಗಿ ಮೂಡಿಬಂದಿರುವ “ಜಾನಕಿ ರಾಮ”  ಆಲ್ಭಂ ಸಾಂಗ್ ಬಿಡುಗಡೆ ಮಾಡಿದರು. ಹಾಡನ್ನು ವೀಕ್ಷಿಸಿದ ಎಲ್ಲಾ ಗಣ್ಯರು ಮಾತನಾಡಿ, “ಈ ಹಾಡನ್ನು ನೋಡಿದಾಗ ಮೈ ರೋಮಾಂಚನವಾಯಿತು. ಇಂದು ಇಲ್ಲೇ ರಾಮನ ಪ್ರತಿಷ್ಠಾ ವೈಭವ ನೋಡಿದ…

Read More

ಬಿಗ್‌ಬಾಸ್ Bigg Boss Kannada) ಮನೆಯಲ್ಲಿ ‘ಬೆಂಕಿ’ ಎಂದೇ ಎಲ್ಲರಿಂದಲೂ ಹೇಳಿಸಿಕೊಳ್ಳುತ್ತಿದ್ದವರು ತನಿಷಾ ಕುಪ್ಪಂಡ. ಸ್ನೇಹಿತರಿಗೆ ಬೆಚ್ಚನೆಯ ಭಾವ ನೀಡುತ್ತ, ಎದುರಾಳಿಯಾಗಿ ನಿಂತರೆ ಸುಡುವ ಕೋಪವನ್ನೂ ತೋರುತ್ತಿದ್ದ ಅವರಿಗೆ ಈ ಬಿರುದು ಒಪ್ಪುವಂಥದ್ದೇ ಆಗಿದೆ. ನಡುವಲ್ಲಿ ಕಾಲುನೋವಾಗಿ ವಾಪಸ್ ಬರುತ್ತಾರೋ ಇಲ್ಲವೋ ಎಂಬ ಹಂತ ತಲುಪಿದರೂ, ಬಿಡದೇ ವಾಪಸ್ ಬಂದು ಸಾಕಷ್ಟು ಆಟವಾಡಿ ನೂರಕ್ಕೂ ಅಧಿಕ ದಿನ ಉಳಿದಿಕೊಂಡಿದ್ದ ತನಿಷಾ ಕುಪ್ಪಂಡ ಕಳೆದ ವಾರ ಮಿಡ್‌ವೀಕ್ ಎಲಿಮಿನೇಷನ್‌ನಲ್ಲಿ ಮನೆಯಿಂದ ಹೊರಗೆ ಬಂದಿದ್ದರು. ‘ಇನ್ನಷ್ಟು ದಿನ ಉಳಿದುಕೊಳ್ಳುತ್ತೇನೆ’ ಎಂಬ ವಿಶ್ವಾಸದಲ್ಲಿಯೇ ಇದ್ದ ಅವರಿಗೆ ಎಲಿಮಿನೇಷನ್ ಶಾಕ್ ಕೊಟ್ಟಿತ್ತು. ಅದಕ್ಕಾಗಿ ಹೋಗುವಾಗ ಕಣ್ಣೀರು ಹಾಕುತ್ತ ಮನೆಯ ಸದಸ್ಯರಿಗೂ ಜರಿದು, ‘ಬಿಗ್‌ಬಾಸ್ ಯಾಕಿಷ್ಟುಕೆಟ್ಟದಾಗಿ ಕಳಿಸಿಕೊಡ್ತೀರಾ?’ ಎಂದು ಕೇಳುತ್ತಲೇ ಹೊರಗೆ ಹೋದರು. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ನಲ್ಲಿ ಮತ್ತೆ ವೇದಿಕೆಗೆ ಬಂದು ಕಿಚ್ಚನ ಜೊತೆಗೆ ಬಿಚ್ಚುಮಾತುಗಳನ್ನಾಡಿದ ತನಿಷಾ ಕುಪ್ಪಂಡ ಮನೆಯಿಂದ ಹೊರಗೆ ಬಂದಕೂಡಲೇ ಜಿಯೊಸಿನಿಮಾಗೆ ಎಕ್ಸ್‌ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ಅದರ ಅಕ್ಷರರೂಪ ಇಲ್ಲಿದೆ. ಆ ಸಂದರ್ಭದಲ್ಲಿ…

Read More

ಬೆಂಗಳೂರು : ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ ಸೀತ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದರು. ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂದರು. ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು…

Read More

ಧಾರವಾಡ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಪ್ರಾಣ ಪ್ರತಿಷ್ಠಾನ ಇಂದು ನೇರವೇರಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಕ್ಷೌರಕರೊಬ್ಬರು ಗ್ರಾಹಕರಿಗೆ ಉಚಿತ ಕಟ್ಟಿಂಗ್ ಮಾಡುವ ಮೂಲಕ ಶ್ರೀರಾಮನ ಮೇಲೆನ ಭಕ್ತಿ ಸಮರ್ಪಿಸಿದ್ದಾರೆ.‌ ಧಾರವಾಡದ ನಿವಾಸಿಯಾದ ಶಿವಾನಂದ ಹಡಪದ ಎಂಬಾತರೇ ಉಚಿತವಾಗಿ ತಮ್ಮ ಕ್ಷೌರಿಕ್ ಶಾಪನಲ್ಲಿ ಉಚಿತವಾಗಿ ಇಂದು ಒಂದು ದಿನ ಕಟ್ಟಿಂಗ್ ಮಾಡುವ ಸಂಕಲ್ಪ‌ ಮಾಡಿದ್ದಾರೆ. ಅಪ್ಪ ರಾಮ ಹಾಗೂ ಹನುಮಂತ ಭಕ್ತರಾಗಿರೋ ಶಿವಾನಂದವರು ಈ ಹಿಂದಿನಿಂದಲೂ ಜಯಂತಿಗಳಂದು ವಿಶೇಷ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ. ಅಯೋಧ್ಯಯಲ್ಲಿ ಐತಿಹಾಸಿಕ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಉಚಿತ ಕಟ್ಟಿಂಗ ಮಾಡಿ ತಮ್ಮ ಭಕ್ತಿ ತೋರಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಇಂದು ಸಂಜೆಯವರೆಗೆ ಪಲಾವ್ ನೀಡಿ ದೇವರ ಕೃಪೆಗೆ ಪಾತ್ರರಾಗಿದ್ದಾರೆ.

Read More

ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ತಲೆಎತ್ತಿರುವ ಭವ್ಯ ರಾಮಮಂದಿರದಲ್ಲಿಂದು (Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿದೆ. ಅದಕ್ಕಾಗಿ ರಾಮನೂರಿನ ಎಲ್ಲ ಬೀದಿ-ಬೀದಿಗಳು ತಳಿರು ತೋರಣಗಳಿಂದ ಅಲಂಕೃತಗೊಂಡಿದೆ. ಧನುರ್ಧಾರಿ ರಾಮನ ಚಿತ್ರ, ರಾಮಚರಿತ ಮಾನಸದ ಸಾಲುಗಳನ್ನು ನಗರದ ಗೋಡೆ-ಗೋಡೆಗಳ ಮೇಲೂ ಬರೆಯಲಾಗಿದೆ. ಶತಮಾನಗಳ ಕನಸು ಇಂದು ನನಸಾಗುತ್ತಿದ್ದು, ಅಯೋಧ್ಯೆ ತುಂಬಾ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೂ (Bengaluru) ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಗರದಲ್ಲಿರುವ ರಾಮಭಂಟ ಹನುಮನ ದೇವಾಲಯಗಳ ಮುಂದೆ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಹೊಸ ಗುಡ್ಡದ ಹಳ್ಳಿಯ ವೀರಾಂಜನೇಯ ಸ್ವಾಮಿ ದೇವಸ್ಥಾನ, ಯಲಹಂಕ, ಬ್ಯಾಟರಾಯನಪುರ, ರಾಜಾಜಿನಗರದ ವೀರಾಂಜನೇಯ ಸ್ವಾಮಿ ದೇವಸ್ಥಾನ, ದೀಪಾಂಜಲಿನಗರದಲ್ಲಿರುವ ಗಾಳಿ ಆಂಜನೇಯ ಸ್ವಾಮಿದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳ ಮುಂದೆ ಖಾಕಿ ಕಣ್ಗಾವಲು ಇರಿಸಲಾಗಿದೆ ನಗರದ ಅತಿಸೂಕ್ಷ್ಮ ಪ್ರದೇಶಗಳು ಹಾಗೂ ಪೆಂಡಲ್‌ಗಳು ಪ್ಲೆಕ್ಸ್‌ ಬಂಟಿಂಗ್ಸ್‌ಗಳು ಕಟ್ಟಿರುವ ಸ್ಥಳಗಲ್ಲಿ ಭದ್ರತೆ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನಗಳ ಮುಂದೆ ಭದ್ರತೆ ನಿಯೋಜನೆ ಮಾತ್ರವಲ್ಲದೇ ಪ್ರಮುಖ ಏರಿಯಾಗಳಲ್ಲಿ ಪೊಲೀಸರು ಬೀಟ್‌ ನಡೆಸುತ್ತಿದ್ದಾರೆ ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ ನೆರವೇರುವ…

Read More

ಕಲಬುರಗಿ: ಅಚ್ಚರಿ ಎಂಬಂತೆ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣವೊಂದು ಕಲಬುರಗಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ ಆಳಂದ ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ವಿದ್ಯಾರ್ಥಿನಿ ಕಲಬುರಗಿ (Kalaburagi) ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದಾಗೆಲ್ಲ ಆಕೆ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರ ಆಕೆಯನ್ನು ಬಳಸಿಕೊಳ್ಳುತ್ತಿದ್ದನು. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್‌ ಮಾಡುತ್ತಿದ್ದ. ಹೀಗೆ ಕಳೆದ ಮಾರ್ಚ್ ನಿಂದ ವಿದ್ಯಾರ್ಥಿನಿ ಹಲವು ಬಾರಿ ತನ್ನ ಅಣ್ಣನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು. ಅಲ್ಲದೇ ಈ ವಿಚಾರವನ್ನು ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದನು. ಹೀಗಾಗಿ ಆಕೆ ಅತ್ಯಾಚಾರ ವಿಚಾರವನ್ನು ಮುಚ್ಚಿಟ್ಟಿದ್ದಳು. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಇತ್ತ ವಿದ್ಯಾರ್ಥಿನಿ ದಪ್ಪ ಇರೋದ್ರಿಂದ ಕುಟುಂಬಸ್ಥರು ಕೂಡ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯದಲ್ಲಿ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು.‌ ಈ ವೇಳೆ ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Read More

ದೊಡ್ಡಬಳ್ಳಾಪುರ: ಬೈಕ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರದ ಟಿಬಿ ವೃತ್ತದಲ್ಲಿ  ನಡೆದಿದೆ. ತಾಲೂಕಿನ ಕೆಳಗಿನ ಜೂಗನಹಳ್ಳಿ ನಿವಾಸಿ ಹನುಮಂತರಾಯಪ್ಪ (60) ಗಾಯಗೊಂಡಿರುವ ವ್ಯಕ್ತಿ. ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಪೆಟ್ರೋಲ್ ಟ್ಯಾಂಕರ್ ಚಕ್ರದ ಕೆಳಗೆ ಬೈಕ್ ಸಿಲುಕಿ ನುಜ್ಜುಗುಜ್ಜಾಗಿದೆ, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ, ಪರಿಶೀಲನೆ‌ ನಡೆಸಿದರು.

Read More

ಉಗಾಂಡಾ: ವಿದೇಶಾಂಗ ಸಚಿವ ಎಸ್. ಜೈಶಂಕರ್ (Jai Shankar) ಅವರು ಉಗಾಂಡಾದ (Uganda) ಕಂಪಾಲಾದಲ್ಲಿ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಮತ್ತು ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ಡಾ.ರಿಯಾದ್ ಅಲ್-ಮಲಿಕಿ (Riyad al-Maliki) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲಿಪ್ತ ಚಳವಳಿಯ (NAM) ಎರಡು ದಿನಗಳ ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಜೈಶಂಕರ್ ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿದ್ದಾರೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ಈ ಕುರಿತು ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಜೈಶಂಕರ್ ಅವರು, ಡಾ. ರಿಯಾದ್ ಅಲ್-ಮಲಿಕಿ ಅವರನ್ನು ಭೇಟಿಯಾಗಲು ಸಂತೋಷವಾಯಿತು ಎಂದಿದ್ದಾರೆ. ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಅವರೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು. ಅವರು ಕೂಡ ಸಂಘರ್ಷದ ಮಾನವೀಯ ಮತ್ತು ರಾಜಕೀಯ ಆಯಾಮಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಮಾನವೀಯ ಬಿಕ್ಕಟ್ಟಿನಿಂದ ಜರ್ಜರಿತವಾಗಿರುವ ಗಾಜಾಕ್ಕೆ ಸೂಕ್ತ ಪರಿಹಾರ ಕ್ರಮದ ಅಗತ್ಯವಿದ್ದು, ಇದು ಯುದ್ಧ ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡುವಂತಿರಬೇಕು ಎಂದು ಜೈಶಂಕರ್‌ ತಿಳಿಸಿದ್ದಾರೆ. 

Read More