Author: AIN Author

ಹಿಂದಿನಿಂದಲೂ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಕಾಪಿಡಲು ವಿವಿಧ ರೀತಿಯಿಂದ ಪ್ರಯತ್ನ ಮಾಡುತ್ತಿದ್ದರು. ಯಾಕೆಂದರೆ ಸೌಂದರ್ಯವಿದ್ದರೆ ಆಗ ಗುಂಪಿನಲ್ಲಿ ಎದ್ದು ಕಾಣಬಹುದಾಗಿದೆ. ಇಂತಹ ಸೌಂದರ್ಯ ಪಡೆಯಲು ಆಯುರ್ವೇದದ ನೆರವನ್ನು ಹಿಂದಿನವರು ಪಡೆದುಕೊಳ್ಳುತ್ತಿದ್ದರು. ಆದರೆ ಈಗ ತಕ್ಷಣವೇ ಎಲ್ಲವೂ ಸಿಗಬೇಕಾಗಿರುವ ಕಾರಣದಿಂದಾಗಿ ಹೆಚ್ಚು ಸಮಯ ಕಾದು ಫಲಿತಾಂಶ ನೋಡುವಂತಹ ವ್ಯವದಾನವು ಯಾರಲ್ಲಿಯೂ ಇಲ್ಲ. ಹೀಗಾಗಿ ರೆಡಿಮೇಡ್ ಉತ್ಪನ್ನಗಳಿಗೆ ಮಾರು ಹೋಗುವುದು ಹೆಚ್ಚಾಗುತ್ತಿದೆ. ಇದು ತಕ್ಷಣಕ್ಕೆ ಕಾಂತಿ ನೀಡಿದರೂ ಬಳಿಕ ಹಲವಾರು ಸಮಸ್ಯೆಗಳನ್ನು ಉಂಟು ಮಾಡುವುದು. ಹೀಗಾಗಿ ಆಯುರ್ವೇದವು ಸ್ವಲ್ಪ ನಿಧಾನವಾಗಿ ಫಲಿತಾಂಶ ನೀಡಿದರೂ ಅದರ ಪರಿಣಾಮ ಮಾತ್ರ ಶಾಶ್ವತ ಮತ್ತು ಯಾವುದೇ ರೀತಿಯ ಅಡ್ಡಪರಿಣಾಮವನ್ನು ಅದು ಉಂಟು ಮಾಡುವುದಿಲ್ಲ. ಈ ಲೇಖನದಲ್ಲಿ ಮಹಿಳೆಯ ತ್ವಚೆಯ ಸೌಂದರ್ಯಕ್ಕಾಗಿ ಕೆಲವೊಂದು ಮನೆಮದ್ದುಗಳನ್ನು ಹೇಗೆ ಬಳಸಿಕೊಳ್ಳುವುದು ಎಂದು ತಿಳಿಯುವ. ಹಿಂದೆ ರಾಜಮಹಾರಾಜರ ಹಾಗೂ ಕೆಲವೊಂದು ಋಷಿಗಳ ಪತ್ನಿಯರು ಮೊದಲು ಹಾಲಿನಲ್ಲಿ ತ್ವಚೆ ಸ್ವಚ್ಛಗೊಳಿಸಿದ ಬಳಿಕ ಗುಲಾಬಿ ನೀರಿನಲ್ಲಿ ಹೋಗಿ ಸ್ನಾನ ಮಾಡಿಕೊಳ್ಳುತ್ತಿದ್ದರು ಎಂದು ಪುರಾಣಗಳು ಕೂಡ ಹೇಳಿವೆ.…

Read More

ಅಯೋಧ್ಯೆ: ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ ಎಂದು  ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ. https://ainlivenews.com/pm-modi-pays-homage-to-balaram-in-ayodhya-hindu-dream-come-true/ ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಮೋದಿ ಹೇಳಿದರು.

Read More

ಕಲಬುರ್ಗಿ:- ಬಿಸಿಲೂರು ಕಲಬುರಗಿಯಲ್ಲಿ ನಡೆದ ರಾಮೋತ್ಸವದಲ್ಲಿ ಶ್ರೀ ರಾಮನ 101 ಅಡಿ ಎತ್ತರದ ಭಾವಚಿತ್ರಕ್ಕೆ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು ಕ್ಷೀರಾಭಿಷೇಕ ಮಾಡಿದ್ರು. ಜೈ ಶ್ರೀರಾಮ ಘೋಷಣೆ ಮೂಲಕ ಸಡಗರ ಸಂಭ್ರಮ ಆಚರಿಸಿದ ಕೇಸರಿ ಕಾರ್ಯಕರ್ತರು ಅಯೋಧ್ಯ ಪ್ರಭುವಿಗೆ ನಮೋ ನಮೋ ಅಂತ ಮಂತ್ರ ಜಪಿಸಿ ರಾಮ ಭಕ್ತಿ ಪ್ರದರ್ಶಿಸಿದರು. ಇದೇವೇಳೆ ಮತ್ತೊಂದೆಡೆ ನಡೆದ ರಾಮೋತ್ಸವದಲ್ಲಿ ಭಕ್ತರು ರಂಗೋಲಿಯಲ್ಲಿ ರಾಮನ ಚಿತ್ರ ಬಿಡಿಸಿ ಭಕ್ತಿ ವ್ಯಕ್ತಪಡಿಸಿದ್ರು.

Read More

ಮನೆಯ ಏಳಿಗೆಗೆ, ಸಂಪತ್ತಿನ ಅಧಿದೇವತೆ ಲಕ್ಷ್ಮಿ ದೇವಿಯ ಕೃಪೆ ಬಹಳ ಮುಖ್ಯ. ಅಂದರೆ ಲಕ್ಷ್ಮೀ ದೇವಿಯನ್ನು ಸಂತುಷ್ಟಗೊಳಿಸಿದರೆ ಹಣಕಾಸಿನ ತೊಂದರೆ ಯಾವತ್ತು ಎದುರಾಗುವುದೇ ಇಲ್ಲ. ಲಕ್ಷ್ಮೀಯನ್ನು ಒಲಿಸಿಕೊಳ್ಳಬೇಕಾದರೆ, ಕೆಲವು ಅಭ್ಯಾಸಗಳಿಂದ ದೂರವಿರಬೇಕು. ಇಂದು ಅಡುಗೆ ಮನೆಗೆ ಸಂಬಂಧಿಸಿದ  ಕೆಲವು ವಿಷಯಗಳ ಬಗ್ಗೆ ತಿಳಿಸಲಿದ್ದೇವೆ. ಅಡುಗೆ ಮನೆಯಲಿ ನಡೆಯುವ  ಈ ವಿಷಯಗಳು ಲಕ್ಷ್ಮೀಗೆ ಇಷ್ಟವಾಗುವುದಿಲ್ಲವಂತೆ.  ಅಡುಗೆಮನೆಯಲ್ಲಿ ಈ ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಿ :  ಅಕ್ಕಿ: ಪ್ರತಿ ಪೂಜೆ ಮತ್ತು ಶುಭ ಕಾರ್ಯಗಳಲ್ಲಿ ಅಕ್ಕಿ ಅಥವಾ ಅಕ್ಷತೆ ಬಳಕೆ ಕಡ್ಡಾಯವಾಗಿದೆ. ಅಕ್ಕಿಯು ಮಂಗಳಕರ ಸಂಕೇತವಾಗಿದೆ. ಅಕ್ಕಿಯನ್ನು ಅಡುಗೆಮನೆಯಲ್ಲಿ ಇಡಬೇಕಾಗುತ್ತದೆ. ಅಕ್ಕಿಯು ಖಾಲಿಯಾಗುವ ಮುನ್ನವೇ ತಂದಿಟ್ಟುಕೊಳ್ಳಿ. ಇಲ್ಲವಾದರೆ ಕೆಟ್ಟದಾಗುತ್ತದೆ. ಹೌದು ಮನೆಯಲ್ಲಿ ಅಕ್ಕಿ ಸಂಪೂರ್ಣವಾಗಿ ಖಾಲಿಯಾದರೆ, ಶುಕ್ರ ಕೆಟ್ಟ ಪರಿಣಾಮಗಳನ್ನು ನೀಡಲು ಪ್ರಾರಂಭಿಸುತ್ತಾನೆಯಂತೆ. ಇದರಿಂದ ಹಣದ ಕೊರತೆ ಎದುರಾಗಬಹುದು. ಆರ್ಥಿಕ ಸಮಸ್ಯೆ ಉಂಟಾಗಬಾರದು ಎಂದಾದರೆ ಮನೆಯಲ್ಲಿ ಅಕ್ಕಿಯನ್ನು ಯಾವತ್ತೂ ಖಾಲಿ ಮಾಡಬೇಡಿ. ಅರಿಶಿನ: ಅಕ್ಕಿಯಂತೆ ಅರಿಶಿನವನ್ನು ಕೂಡಾ ಪೂಜೆ ಮತ್ತು ಶುಭ ಕಾರ್ಯಗಳಲ್ಲಿ ಬಳಸಲಾಗುತ್ತದೆ. ಅಡುಗೆಮನೆಯಲ್ಲಿ ಅರಿಶಿನ ಮುಗಿದರೆ ಗುರು…

Read More

ಗದಗ:- ಹಿಂದೂ-ಮುಸ್ಲಿಂ ಯುವಕರಿಂದ ಮಸೀದಿಯಲ್ಲಿ ಶ್ರೀರಾಮನ ಆರಾಧನೆ ಮಾಡಿರುವ ದೃಶ್ಯ ಗದಗ ಜಿಲ್ಲೆ ನರಗುಂದ ತಾಲೂಕಿನ ಹುಣಸಿಕಟ್ಟಿಯಲ್ಲಿ ಜರುಗಿದೆ ಮಸೀದಿ ಎದುರು ಜೈ ಶ್ರೀರಾಮ ಎಂದು ಶ್ರೀರಾಮ ಭಕ್ತರು ಬರೆದಿದ್ದಾರೆ. ವೇದೋಕ್ತ ಮಂತ್ರಪುಷ್ಪಾಂಜಲಿ ಮೂಲಕ ಭಾರತಮಾತೆಗೆ ಪೂಜೆ-ಪುನಸ್ಕಾರ ಮಾಡಲಾಗಿದೆ. ಶ್ರೀರಾಮನ ಸ್ಮರಣೆ ಹೆಸರಲ್ಲಿ ಹುಣಸಿಕಟ್ಟಿ ಗ್ರಾಮ ಭಾವೈಕ್ಯತೆ ಮೆರೆದಿದೆ. ಮಸೀದಿಯಲ್ಲಿ ಶೋಡಷೋಪಚಾರದ ಮೂಲಕ ಅಭಿಷೇಕ ಮಾಡಲಾಗಿದೆ.

Read More

ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಶಾಸ್ತ್ರೋಕ್ತವಾಗಿ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಬೆಳ್ಳಿ ರಾಮಮಂದಿರ ಪ್ರತಿರೂಪವನ್ನು (Ram Mandir Replica) ಉಡುಗೊರೆಯಾಗಿ ನೀಡಿದರು. ಇದಕ್ಕೂ ಮುನ್ನ ಗೋವಿಂದ್ ದೇವ್ ಗಿರಿ ಜಿ ಮಹಾರಾಜ್ ಸ್ವಾಮೀಜಿ ಮೋದಿಗೆ ಶಾಲು ಹೊದಿಸಿ ಗೌರವಿಸಿದರು. ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್‌ ಅವರು RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೂ ಬೆಳ್ಳಿಯಿಂದ ನಿರ್ಮಿಸಲಾದ ರಾಮಮಂದಿರ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಲಾಯಿತು. ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.

Read More

ಗದಗ:- ಜಿಲ್ಲೆಯಲ್ಲಿ ಶ್ರೀರಾಮನ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆಯದ ಹಿನ್ನಲೆ ಸಂಕ್ಷಿಪ್ತ ಮೆರವಣಿಗೆಗೆ ಶ್ರೀರಾಮಸೇನಾ ಕಾರ್ಯಕರ್ತರು ಕಾಂಜ್ ಮೇಳದೊಂದಿಗೆ ಕೈಯ್ಯಲ್ಲಿ ಶ್ರೀರಾಮನ ಭಾವಚಿತ್ರ ಹಿಡಿದು ಮೆರವಣಿಗೆ ಮಾಡಿದ್ದಾರೆ. ಜೋಡಮಾರುತಿ ದೇವಸ್ಥಾನದಿಂದ ತ್ರಿಕೂಟೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ಮಾಡಲಾಗಿದೆ. ಕೇಸರಿ ಶಾಲು ಧರಿಸಿ ಮೆರವಣಿಗೆಯಲ್ಲಿ ಯುವಕರು, ಹಿರಿಯರು ಪಾಲ್ಗೊಂಡಿದ್ದು, ಶ್ರೀರಾಮ‌ ಜೈಕಾರ ಕೂಗಿ ಮೆರವಣಿಗೆಯಲ್ಲಿ ಮಹಿಳೆಯರು ಸಾಗಿದ್ದಾರೆ. ಮೆರವಣಿಗೆಗೆ ತಂದಿದ್ದ ಮೂರ್ತಿಗಳನ್ನು ಮಾರುತಿ ದೇವಸ್ಥಾನದ ಎದುರು ಶ್ರೀರಾಮಸೇನೆ ದರ್ಶನಕ್ಕೆ ಇಟ್ಟಿದೆ.

Read More

ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ (Dhruva Sarja) ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ (Rudrakshi) ಮತ್ತು ಮಗನಿಗೆ ಹಯಗ್ರೀವ (Hayagriva) ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನಡೆದಿದೆ. ಅಯೋಧ್ಯೆ ಬಾ;ಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ  ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು. ಆಂಜನೇಯ ಗುಡಿಯನ್ನೇ ಈ ಕುಟುಂಬ ನಿರ್ಮಾಣ ಮಾಡಿದೆ. ಧ್ರುವ ಸಿನಿಮಾದಲ್ಲಿ ಹನುಮನ ಕುರಿತಾಗಿ ಸನ್ನಿವೇಶವೋ, ಹಾಡೋ ಇದ್ದೇ ಇರುತ್ತದೆ. ಹನುಮನ ಉಸಿರಾಗಿರುವ ರಾಮನ ಮಂದಿರ ಉದ್ಘಾಟನೆ ದಿನದಂದು ತಮ್ಮ ಪುತ್ರಿ ಹಾಗೂ ಪುತ್ರನಿಗೆ ನಾಮಕರಣ ಮಾಡಿದ್ದು ವಿಶೇಷ. ಇಂದು ಧ್ರುವ ಸರ್ಜಾ ಮಕ್ಕಳಿಗೆ ನಾಮಕರಣ ಮಾಡಿದ್ದರೆ, ಅನೇಕ ಮಹಿಳೆಯರು ಇಂದೇ ಹೆರಿಗೆ ಮಾಡಿಸುವಂತೆ ವೈದ್ಯರ ದುಂಬಾಲು ಬಿದ್ದಿರುವ ಘಟನೆಗಳು ನಡೆದಿವೆ.…

Read More

ಬೆಂಗಳೂರು: ಇದೇ ಜನವರಿ 23ರಂದು ಪಿಎಸ್‌ಐ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಲ್‌ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ತರುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು (Guidelines) ಹೊರಡಿಸಲಾಗಿದೆ ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು? * ಪೂರ್ಣ ತೋಳಿನ ಅಂಗಿಗಳನ್ನ ಧರಿಸುವಂತಿಲ್ಲ * ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಧರಿಸಿರಬೇಕು * ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್‌ಗಳಿಗೆ ಅನುಮತಿ ಇಲ್ಲ * ಶರ್ಟ್ ಅಥವಾ ಪ್ಯಾಂಟ್‌ಗಳಿಗೆ ಜಿಪ್ ಪ್ಯಾಕೆಟ್‌ಗಳು, ದೊಡ್ಡ ದೊಡ್ಡ ಗುಂಡಿಗಳು, ಹೆಚ್ಚುವರಿ ಡಿಸೈನ್ ಇರಬಾರದು * ಪರೀಕ್ಷಾ ಹಾಲ್‌ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ * ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ * ಚೈನ್, ಕಿವಿಯೋಲೆ, ಉಂಗುರ, ಕೈ…

Read More

ಕಲಬುರ್ಗಿ:- ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನಲೆ ಕಲಬುರಗಿಯಲ್ಲಿ ರಾಮೋತ್ಸವ ಆಚರಿಸಿದ್ದು ಖಮಿತಕರ್ ಸೇವಾ ಬಳಗದಿಂದ ಅನ್ನದಾನ ಕಾರ್ಯ ಮಾಡಲಾಯಿತು. ನಗರದ ಕೃಷ್ಣೇಶ್ವರ ಗುಡಿಯಲ್ಲಿ ಇವತ್ತು ನಿರಂತರ ಪೂಜಾ ಕೈಂಕರ್ಯ ನಡೆದಿದ್ದು ರಾಮೋತ್ಸವದಲ್ಲಿ ಭಾಗಿಯಾದ ನೂರಾರು ಭಕ್ತರಿಗೆ ಅನ್ನದಾನ ಸೇವಾ ವ್ಯವಸ್ಥೆ ಮಾಡಲಾಗಿತ್ತು. ಸಂಸದ ಡಾ. ಉಮೇಶ್ ಜಾಧವ್ ಹಾಗು RSS ಪ್ರಮುಖರು ಸೇರಿದಂತೆ ನೂರಾರು ರಾಮ ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

Read More