Author: AIN Author

ಬೆಂಗಳೂರು: ಕನ್ನಡಿಗ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಕುಟುಂಬ  ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅಯೋಧ್ಯೆಯಲ್ಲೇ ನಿಖಿಲ್‌ ಕುಮಾರಸ್ವಾಮಿ ಬರ್ತ್‌ ಡೇ ಆಚರಿಸಿಕೊಂಡರು. ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು ನನ್ನ ಪುಣ್ಯ. ಈ ಸಂತೋಷದ ಗಳಿಗೆಯಲ್ಲಿ ತಾತ ದೇವೇಗೌಡ ಅವರು ಮತ್ತು ಅಜ್ಜಿ ಚೆನ್ನಮ್ಮ ಅವರು ಹಾಗೂ ತಂದೆಯವರಾದ ಕುಮಾರಸ್ವಾಮಿ ಅವರು ಜೊತೆಯಲ್ಲಿದ್ದಿದ್ದು ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ ಎಂದು ನಿಖಿಲ್‌ ಕುಮಾರ್‌ ಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ ವಾಜಪೇಯಿ ಕೂಡ 6 ವರ್ಷ ಪ್ರಧಾನಿ ಆಗಿದ್ದರು. ಆದರೆ, ರಾಮ ಮಂದಿರದ ಮೊದಲ ಕಲ್ಲು ಸ್ವೀಕಾರ ಮಾಡೋಕು ಅವತ್ತು ವಾಜಪೇಯಿ ಅವರಿಗೆ ಕಷ್ಟ ಆಯ್ತು. ಇದು ಮೋದಿ ಅವರ ಪೂರ್ವ ಜನ್ಮ ಪುಣ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದರು.

Read More

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್‌ ಆಟಗಾರ ಸಾವನ್ನಪ್ಪಿರುವ ಘಟನೆ ರಾಮಮೂರ್ತಿ ನಗರ ಫ್ಲೈ ಓವರ್ ಮೇಲೆ‌ ನಿನ್ನೆ ರಾತ್ತಿ ನಡೆದಿದೆ. ಮೊನೀಶ್ ಅವರು ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್. ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಬುಸಾಪಾಳ್ಯ ನಿವಾಸಿಯಾಗಿದ್ದ ಮೊನೀಶ್ ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್‌ಗಳ ಪರ‌ ಕಣಕ್ಕಿಳಿದಿದ್ದರು. ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್‌ಬಾಲ್‌ ಅಸೋಸಿಯೇಷನ್ (ಬಿಡಿಎಫ್ಎ) ಎ ಡಿವಿಷನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.

Read More

ದೊಡ್ಡಬಳ್ಳಾಪುರ:- ನಗರದ‌ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ ಸೆಟ್ ಹಾಕಲಾಗಿದೆ. ಬಿಜೆಪಿ ಯುವಘಟಕ ರಾಜ್ಯಾಧ್ಯಕ್ಷ ಹಾಗೂ ಸ್ಥಳಿಯ ಶಾಸಕ ದೀರಜ್ ಮುನಿರಾಜು ಅವರು ರಾಮಮಂದಿರ ಸೆಟ್​ ಅನ್ನು ನಿರ್ಮಾಣ ಮಾಡಿಸಿದ್ದಾರೆ. ಈ ಸೆಟ್​ ಜನರ ಕಣ್ಮನ ಸೆಳೆಯುತ್ತಿದೆ. ರಾಮಮಂದಿರ ಸೆಟ್ ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೇ ಪೋಷಕರು ಮಕ್ಕಳಿಗೆ ರಾಮ, ಸೀತೆ ಮತ್ತು ಆಂಜನೇಯನ ವೇಷ ಹಾಕಿಸಿ ಸೆಟ್​ ಮುಂದೆ ನಿಲ್ಲಿಸಿ ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಅಲ್ಲದೇ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ ವೀಕ್ಷಿಸಲು ಬೃಹತ್ ಎಲ್ಇಡಿ ವಾಲ್ ಅಳವಡಿಸಲಾಗಿದೆ.

Read More

ಹುಬ್ಬಳ್ಳಿ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇತ್ತ ವಾಣಿಜ್ಯ ನಗರಿ ಹುಬ್ಬಳ್ಳಿ ಸಂಪೂರ್ಣವಾಗಿ ಕೇಸರಿಮಯಗೊಂಡಿದೆ. ಹೌದು, ನಗರದ ಪ್ರತಿ ನಗರ, ಬಡಾವಣೆಗಳಲ್ಲಿ ಕೇಸರಿ ಧ್ವಜಗಳು, ಭಗವಾ ಧ್ವಜಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲದೇ ಬೈಕ್, ಆಟೋ, ಶಾಲುಗಳು, ಹೀಗೆ ಪ್ರತಿಯೊಂದು ಕಡೆಗೆ ಜೈಶ್ರೀಮ ಬಾವುಟ ರಾರಾಜಿಸುತ್ತಿವೆ. ನಗರದ ಶಿವಾಜಿನಗರದಲ್ಲೂ ಛತ್ರಪತಿ ಶಿವಾಜಿ ಮಹಾರಾಜ ಸೇವಾ ಸಂಸ್ಥೆ ವತಿಯಿಂದ, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯ ನೇರ ಪ್ರಸಾರಕ್ಕೆ ಬೃಹತ್ ವೇದಿಕೆ ನಿರ್ಮಿಸಿ ಎಲ್.ಇ.ಡಿ ಸ್ಕ್ರೀನ್ ಮೂಲಕ ಪ್ರಸಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದೇ ರೀತಿಯಲ್ಲಿ ವಿವಿಧೆಡೆ ನೇರ ಪ್ರಸಾರ ನಡೆಯಲಿದೆ. ಇನ್ನು ಯುವಕರು ಬೈಕ್ ರ‌್ಯಾಲಿ ನಡೆಸುತ್ತಿದ್ದಾರೆ. ಎಲ್ಲೆಡೆ ಜೈಶ್ರೀರಾಮ ಘೋಷಣೆ ಮುಗಿಲು ಮುಟ್ಟಿದೆ. ಪೊಲೀಸರು ಕೂಡಾ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ರೀತಿಯಲ್ಲಿ ಭದ್ರತೆ ಕೈಗೊಂಡಿದ್ದು, ಡಿಸಿಪಿ ಪಿ.ರಾಜೀವ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಿಟಿ ರೌಂಡ್ ನಡೆಸುತ್ತಿದ್ದಾರೆ.

Read More

ಕಠ್ಮಂಡು: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ (Pran Prathistha ceremony) ಕ್ಷಣಗಣನೆ ನಡೆಯುತ್ತಿದ್ದರೆ, ಇತ್ತ ರಾಮನ ಅತ್ತೆ ಮನೆ ನೇಪಾಳದಲ್ಲಿಯೂ ಹಬ್ಬದ ಸಡಗರ ಜೋರಾಗಿದೆ. ಹೌದು. ನೇಪಾಳದ ಜನಕಪುರದಲ್ಲಿರುವ (Janakpur) ಜಾನಕಿ ದೇವಾಲಯದಲ್ಲಿ ಸಕಲ ತಯಾರಿಗಳು ನಡೆದಿದೆ. ಇನ್ನೂ ದೇಗುಲವು ವಿದ್ಯುದ್ದೀಪಗಳಿಂದ ಕಣ್ಮನ ಸೆಳೆಯುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದ್ದಂತೆಯೇ, ಜನಕ್‌ಪುರದಲ್ಲಿ ಸಂತೋಷ ಮತ್ತು ಹಬದ ರೀತಿಯಲ್ಲಿ ಸಂಭ್ರಮಿಸಲಾಗುತ್ತದೆ. ಇದು ಎರಡು ಸ್ಥಳಗಳ ನಡುವೆ ಹಂಚಿಕೊಂಡಿರುವ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸಂಪರ್ಕವನ್ನು ಒತ್ತಿಹೇಳುತ್ತದೆ. ಈ ಸಂಬಂಧ ಶ್ರೀರಾಮ ಯುವ ಸಮಿತಿಯ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ಚೌಧರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತ್ರೇತಾಯುಗದ ವನವಾಸದ ಸಂದರ್ಭದಲ್ಲಿ ರಾಮಚಂದ್ರ ಅನುಭವಿಸಿದ ನೋವು ಕಲಿಯುಗದಲ್ಲಿಯೂ ಮುಂದುವರಿದಿದೆ. ಬರೋಬ್ಬರಿ 500 ವರ್ಷಗಳ ಹೋರಾಟವನ್ನು ಮಾಡಬೇಕಾಯಿತು. ಈ ಸಮಯದಲ್ಲಿ ಅವರು ಟಾರ್ಪಾಲಿನ ಅಡಿಯಲ್ಲಿ ಆಶ್ರಯ ಪಡೆಯಬೇಕಾಗಿತ್ತು. ಅವರ ನೋವು ನಿಜಕ್ಕೂ ಎಲ್ಲಾ ಹಿಂದೂಗಳ ನೋವಾಗಿದೆ. ನಮ್ಮ ಪೂರ್ವಜರು ಕಷ್ಟಪಟ್ಟು ಹೋರಾಡಿದರು. ಇದೀಗ ಅಂತಿಮ ಫಲಿತಾಂಶವು ಇಂದು…

Read More

ಭಾರತೀಯ ಮಾಜಿ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ (Sania Mirza) ಹಾಗೂ ಪಾಕ್‌ ಕ್ರಿಕೆಟಿಗ ಶೋಯೆಬ್‌ ಮಲಿಕ್‌ (Shoaib Malik) ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ ಎಂದು ಸಾನಿಯಾ ಕುಟುಂಬ ಹೇಳಿದ್ದು, ಕೆಲ ವರ್ಷಗಳಿಂದ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಶೋಯೆಬ್‌ ಮಲಿಕ್‌ ಅವರು ಪಾಕ್‌ ನಟಿ ಸನಾ ಜಾವೇದ್‌ (Sana Javed) ಅವರೊಂದಿಗೆ ವಿವಾಹವಾದ ಬಳಿಕ ಸುದ್ದಿ ಹೊರಬೀಳುತ್ತಿದ್ದಂತೆ ಸಾನಿಯಾ ಕುಟುಂಬ ಸ್ಫಷ್ಟನೆ ನೀಡಿದೆ ಸಾನಿಯಾ ಯಾವಾಗಲೋ ತನ್ನ ವೈಯಕ್ತಿಕ ಜೀವನವನ್ನು ಸಾರ್ವಜನಿಕರಿಂದ ದೂರವಿಟ್ಟಿದ್ದಾಳೆ. ಆದರೆ ಶೋಯೆಬ್‌ ರಿಂದ ವಿಚ್ಛೇದನ ಪಡೆದು ಕೆಲವು ತಿಂಗಳಾಗಿವೆ. ಈಗ ಅದರ ಬಗ್ಗೆ ಮಾತನಾಡುವ ಸಂದರ್ಭ ಬಂದಿದೆ ಎಂದು ಹೇಳಿದೆ. ಅಲ್ಲದೇ ಸಾನಿಯಾ ಸಹ ಶೋಯೆಬ್‌ ಮುಂದಿನ ಜೀವನಕ್ಕೆ ಶುಭಹಾರೈಸಿದ್ದಾಳೆ ಎಂಬುದಾಗಿ ಕುಟುಂಬ ತಿಳಿಸಿದೆ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಪಾಕ್‌ನ ನಟಿ ಸನಾ ಜಾವೇರದ್ ಅವರನ್ನು ಮದುವೆಯಾದ ಸುದ್ದಿ ಹೊರ ಬೀಳುತ್ತಿದ್ದಂತೆ, ಪಾಕಿಸ್ತಾನದಲ್ಲಿರುವ ಸಾನಿಯಾ ಮಿರ್ಜಾ ಅಭಿಮಾನಿಗಳು ಸಾನಿಯಾ ಬೆಂಬಲಿಸಿ ಎಕ್ಸ್‌…

Read More

ಬೆಂಗಳೂರು:- ನಗರ ಸೇರಿ ರಾಜ್ಯಾದ್ಯಂತ ಇಂದು ಮೋಡಕವಿದ ವಾತಾವರಣ ಹಾಗೂ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ನಗರಗಳ ಹವಾಮಾನ ವರದಿ: ಬೆಂಗಳೂರು: 29-19 ಮಂಗಳೂರು: 31-23 ಶಿವಮೊಗ್ಗ: 32-17 ಬೆಳಗಾವಿ: 31-16 ಮೈಸೂರು: 33-19 ಮಂಡ್ಯ: 33-19 ಮಡಿಕೇರಿ: 31-17 ರಾಮನಗರ: 32-19 ಹಾಸನ: 30-17 ಚಾಮರಾಜನಗರ: 33-19 ಚಿಕ್ಕಬಳ್ಳಾಪುರ: 29-17 ಕೋಲಾರ: 29-18 ತುಮಕೂರು: 31-18 ಉಡುಪಿ: 31-22 ಕಾರವಾರ: 31-21 ಚಿಕ್ಕಮಗಳೂರು: 29-16 ದಾವಣಗೆರೆ: 32-18 ಹುಬ್ಬಳ್ಳಿ: 33-17 ಚಿತ್ರದುರ್ಗ: 31-18 ಹಾವೇರಿ: 33-18 ಬಳ್ಳಾರಿ: 34-21 ಗದಗ: 33-17 ಕೊಪ್ಪಳ: 33-19 ರಾಯಚೂರು: 34-22 ಯಾದಗಿರಿ: 33-21 ವಿಜಯಪುರ: 33-18 ಬೀದರ್: 31-19 ಕಲಬುರಗಿ:…

Read More

ಬೆಂಗಳೂರು : ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಜರ್ಮನಿಯ ಮ್ಯೂನಿಚ್‌ನಲ್ಲಿ ಯಶಸ್ವಿ ಸೊಂಟದ (ತೊಡೆಸಂದು) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸೂರ್ಯಕುಮಾ‌ರ್ ಅವರ ಪತ್ನಿ ದೇವಿಶಾ ಅವರೊಂದಿಗೆ ಜರ್ಮನಿಯಲ್ಲಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಸೂರ್ಯ ಕುಮಾರ್ ಅವರು ಭಾರತ ಮತ್ತು ಅಫ್ಘಾನಿಸ್ಥಾನ ನಡುವಿನ ರೋಚಕ ಹಣಾಹಣಿಯನ್ನು ವೀಕ್ಷಿಸಿ ಸಂಭ್ರಮಿಸಿದ್ದಾರೆ. ಶಸ್ತ್ರಚಿಕಿತ್ಸೆ ನಡೆದಿದೆ, ಎಲ್ಲರ ಕಾಳಜಿ ಮತ್ತು ನನ್ನ ಆರೋಗ್ಯ ಚೇತರಿಕೆಗೆ ಕೋರಿದ ಶುಭಾಶಯಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಮತ್ತು ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ನಿಮಗೆ ಹೇಳಲು ನನಗೆ ಸಂತೋಷಪಡುತ್ತೇನೆ ಎಂದು ಸೂರ್ಯಕುಮಾರ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. SKY ಐಪಿಎಲ್​ ಆಡೋದು ಡೌಟ್? ಒಂದು ವಾರದಲ್ಲಿ ಸೂರ್ಯಕುಮಾರ್ ಯಾದವ್ ಭಾರತಕ್ಕೆ ಮರಳುವ ಸಾಧ್ಯತೆಯಿದೆ. ಬಳಿಕ, ಬೆಂಗಳೂರಿನ ಎನ್​ಸಿಎಯಲ್ಲಿ ರಿಹ್ಯಾಬ್​ನಲ್ಲಿರುವುದಾಗಿ ತಿಳಿಸಿದ್ದಾರೆ. ಸೂರ್ಯ ಎರಡನೇ ಬಾರಿ ತೊಡೆಸಂದು ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈಗ ಚೇತರಿಸಿಕೊಳ್ಳಲು ಎರಡು ತಿಂಗಳು ಬೇಕಾಗಬಹುದು. ಐಪಿಎಲ್​-2024 ರ ವೇಳೆಗೆ ಫಿಟ್ ಆಗಬಹುದು ಎಂದು ಹೇಳಲಾಗುತ್ತಿದೆ.

Read More

ಚೆನ್ನೈ : ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಪ್ಪಟ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಮಿಳುನಾಡಿನ ಕುಡ್ಡಲೂರು ಜಿಲ್ಲೆಯ ತಿತ್ತಕುಡಿ ನಿವಾಸಿಯಾಗಿರುವ ಕೃಷ್ಣನ್‌ ಅವರೇ ಆತ್ಮಹತ್ಯೆಗೆ ಶರಣಾದ ಅಭಿಮಾನಿ. ಆರ್ಥಿಕ ಸಂಕಷ್ಟವೇ ಆತ್ಮಹತ್ಯಗೆ ಕಾರಣ ಎಂದು ತಿಳಿದುಬಂದಿದೆ. ಕೃಷ್ಣನ್ ಅವರು ಧೋನಿ ಹಾಗೂ ಸಿಎಸ್​ಕೆ ತಂಡದ ದೊಡ್ಡ ಅಭಿಮಾನಿಯಾಗಿದ್ದರು. ಮೃತ ಕೃಷ್ಣನ್ 2020ರಲ್ಲಿ ತಮ್ಮ ಮನೆಗೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಬಣ್ಣದ ಪೇಂಟ್‌ ಮಾಡಿಸಿದ್ದರು. ಅಲ್ಲದೆ, ಮನೆಗೆ ‘ಹೋಂ ಆಫ್‌ ಧೋನಿ ಫ್ಯಾನ್’ (ಧೋನಿ ಅಭಿಮಾನಿಯ ಮನೆ) ಎಂಬ ಹೆಸರನ್ನಿಟ್ಟಿದ್ದರು. ಸಿಎಸ್‌ಕೆ ಲಾಂಛನ ಹಾಗೂ ಧೋನಿ ಅವರ ಚಿತ್ರ ಕೂಡ ಮೂಡಿಸಿದ್ದರು. ಇದಕ್ಕಾಗಿ ಅವರು ರೂ 1.5 ಲಕ್ಷ ರೂ. ಖರ್ಚು ಮಾಡಿದ್ದರು. ಕೃಷ್ಣನ್‌ ಅಭಿಮಾನವನ್ನು ಸ್ವತಃ ಧೋನಿ ಕೊಂಡಾಡಿದ್ದರು. ಮೃತ ಕೃಷ್ಣನ್ ದುಬೈಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಊರಿಗೆ ವಾಪಸಾಗಿದ್ದರು. ದುಬೈಯಲ್ಲಿ ಜರ್ಮನ್‌ ಟ್ರೇಡಿಂಗ್‌ ಕಂಪನಿಯೊಂದರಲ್ಲಿ ಅವರು ಮಾರ್ಕೆಟ್‌…

Read More

ಇಂದು ಶ್ರೀರಾಮಲಲ್ಲಾ (Ramlalla) ಪ್ರಾಣಪ್ರತಿಷ್ಠಾಪನೆಗೆ ಕೆಲವೇ ಗಂಟೆ ಬಾಕಿ ಇದೆ. ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ (Ayodhya) ಭಾರತೀಯ ಸಿನಿಮಾ ರಂಗದ ಅನೇಕ ತಾರೆಯರು ಭಾಗಿಯಾಗಿದ್ದಾರೆ. ಈಗಾಗಲೇ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ(Rishabh Shetty), ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್‌ ಬಚ್ಚನ್‌, ತೆಲುಗು ನಟರಾದ ಚಿರಂಜೀವಿ, ರಾಮ್‌ಚರಣ್, ಪವನ್‌ ಕಲ್ಯಾಣ್‌ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್‌, ಕತ್ರಿನಾ ಕೈಫ್‌ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸಿದ್ದಾರೆ. ಕೇವಲ ಸಿನಿಮಾ ನಟರು ಮಾತ್ರವಲ್ಲ, ಕ್ರೀಡಾ ತಾರೆ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ವೆಂಕಟೇಶ್‌ ಪ್ರಸಾದ್‌, ಆರ್‌.ಅಶ್ವಿನ್‌, ಸೈನಾ ನೆಹ್ವಾಲ್‌ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸಿದ್ದು, ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

Read More