Author: AIN Author

ಕಲಬುರಗಿ :-ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಾಳೆ ಅಹಮದಾಬಾದನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಾವಳಿಯ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆಯನ್ನು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಮಾಡಲಾಗಿದೆ. ಹೀಗಾಗಿ ಸಾರ್ವಜನಿಕರು, ಕ್ರೀಡಾಪಟುಗಳು ಹೆಚ್ಚಿನ‌ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯ ವೀಕ್ಷಿಸಬೇಕೆಂದು ಕ್ರೀಡಾ ಇಲಾಖೆಯ ಸಹಾಯಕ‌ ನಿರ್ದೇಶಕಿ ಗಾಯತ್ರಿ ತಿಳಿಸಿದ್ದಾರೆ. ವೀಕ್ಷಣೆಗೆ LED ಪರದೆ ಮತ್ತು ಸೌಂಡ್ ಸಿಸ್ಟಮ್ ಅಳವಡಿಸಿಲಾಗಿದೆ ಎಂದಿದ್ದಾರೆ…

Read More

ಮಂಡ್ಯ :- ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಕುಂದು ಕೊರತೆ ಅರ್ಜಿಯನ್ನು 15 ದಿನದೊಳಗಾಗಿ ವಿಲೇವಾರಿ ಮಾಡಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದರು. ಸಾರ್ವಜನಿಕರು ತಮ್ಮ ಕುಂದು ಕೊರತೆಗೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಯ ಅಧಿಕಾರಿಗಳನ್ನು ಸಂಪರ್ಕಿಸಿ. ಕೆಲಸವಾಗದೇ ಇದ್ದ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸಿ. ಈ ಹಂತದಲ್ಲೂ ಕೆಲಸವಾಗದಿದ್ದಲ್ಲಿ ನನ್ನ ಕಛೇರಿಯನ್ನು ಸಂಪರ್ಕಿಸಬಹುದು ಎಂದರು. ಕೊಪ್ಪ ಹೋಬಳಿಗೆ ಸಂಬಂಧಿಸಿದಂತೆ 8 ಗ್ರಾಮ ಪಂಚಾಯಿತಿಗಳಿದ್ದು, ಈ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಪರಿಹರಿಸಲು ಇಂದು ಜನತಾ ದರ್ಶನವನ್ನು ಆಯೋಜಿಸಲಾಗಿದೆ. ಕೊಪ್ಪ ಭಾಗದ ಜನರು ಆಧಾರ್ ತಿದ್ದುಪಡಿ ಹಾಗೂ ನೋಂದಣಿಗಾಗಿ ತಾಲೂಕು ಅಥವಾ ಜಿಲ್ಲಾ ಕೇಂದ್ರಕ್ಕೆ ತೆರಳಬೇಕಿತ್ತು…

Read More

ಬೆಂಗಳೂರು:- ಅಶೋಕ್ ಗುಡುಗಿದರೆ ವಿಧಾನಸೌಧ ನಡುಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಹಿಂದೆ ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ನಡುಗುವುದು ಅಂತಾ ಜನರು ಮಾತಾಡುತ್ತಿದ್ದರು. ಮುಂದಿನ ದಿನಗಳಲ್ಲಿ ಅಶೋಕ್ ಗುಡುಗಿದರೆ ವಿಧಾನಸಭೆ ನಡುಗಬೇಕು ಆ ರೀತಿಯಲ್ಲಿ ಅಶೋಕ್ ಸದನದಲ್ಲಿ ಹೋರಾಟ ಮಾಡುತ್ತಾರೆ, ಮಾತನಾಡುತ್ತಾರೆ ಎಂದರು. ನಿನ್ನೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಶೋಕ್ ಅವರನ್ನ ವಿಪಕ್ಷ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. ಏಳು ಬಾರಿ ಶಾಸಕರಾಗಿ, ಡಿಸಿಎಂ ಆಗಿ, ಹಲವು ಖಾತೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಿರಿಯರ ಅಪೇಕ್ಷೆಯಂತೆ ಮೋದಿ ಅವರು, ನಡ್ಡಾ, ಅಮಿತ್ ಶಾ ಅವರು ಬಿಜೆಪಿ ಮುನ್ನಡೆಸಿಕೊಂಡು ಹೋಗುವಂತೆ ಜವಾಬ್ದಾರಿ ನೀಡಿದ್ದಾರೆ. ಕಳೆದ ಆರು ತಿಂಗಳಿಂದ ಆಡಳಿತ ಪಕ್ಷ‌ ಕಾಂಗ್ರೆಸ್ ವಿಪಕ್ಷ ನಾಯಕರಿಲ್ಲ, ರಾಜ್ಯಾಧ್ಯಕ್ಷ ಇಲ್ಲ ಅಂತ ಟೀಕೆಮಾಡುತ್ತಿದ್ದರು. ನಮ್ಮ ರಾಷ್ಟ್ರೀಯ ನಾಯಕರ ತೀರ್ಮಾನ ದಿಂದ‌ ನನ್ನ, ಅಶೋಕ್ ಅವರನ್ನ ಆಯ್ಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಹೇಗಾಗಿದೆ ಅಂದರೆ ನಮ್ಮ‌…

Read More

ಬೆಂಗಳೂರು:- ನನ್ನನ್ನು ಜೈಲಿಗೆ ಹಾಕಲು ಸಿದ್ಧತೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,, ಅವರು ಏನೇನೋ ದೊಡ್ಡ ಸ್ಕೀಮು, ತಂತ್ರ, ಲೆಕ್ಕಾಚಾರ ಹಾಕುತ್ತಿದ್ದಾರೆ. ಎಲ್ಲವೂ ನಡೆಯಲಿ ಬಿಡಿ. ನನ್ನನ್ನು ಜೈಲಿಗೆ ಹಾಕಲು ಸಿದ್ಧತೆ ಮಾಡುತ್ತಿದ್ದಾರೆ. ಅವರಿಗೆ ನಾನು ಶುಭ ಕೋರುತ್ತೇನೆ” ಎಂದು ತಿಳಿಸಿದರು. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ. ಕುಮಾರಣ್ಣ ಹಾಗೂ ವಿಜಯೇಂದ್ರ ಅವರು ಈಗ ಪಾರ್ಟ್ನರ್​ಗಳು. ಅವರ ಮಧ್ಯೆಯೇ ಗೊಂದಲ ಇರುವಾಗ ನಾನು ಹೇಗೆ ಪ್ರತಿಕ್ರಿಯೆ ನೀಡಲಿ. ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಪಕ್ಷದ ಅಧ್ಯಕ್ಷರಾಗಿದ್ದವರು. ಅವರು ಆ ಸ್ಥಾನಗಳಿಗೆ ತಕ್ಕಂತೆ ಗೌರವ ಉಳಿಸಿಕೊಳ್ಳಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ಅವರ ತಂದೆಯವರು ಅನೇಕ ಬಾರಿ ಈ ಬಗ್ಗೆ ಸಲಹೆ ನೀಡಿದ್ದಾರೆ ಎಂಬ ವಿಚಾರ ಕೇಳಿದೆ. ದೇವೇಗೌಡರು, ಯಡಿಯೂರಪ್ಪ, ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಸದಾನಂದಗೌಡರು, ಬಸವರಾಜ ಬೊಮ್ಮಾಯಿ ಅವರು ಕೂಡ ಮಾಜಿ ಮುಖ್ಯಮಂತ್ರಿಗಳು. ಅವರುಗಳು ಇವರಂತೆ…

Read More

ವಿದೇಶಿಗರು ಹಾಗೂ ಭಾರತೀಯರ ಜೀವನ ಶೈಲಿ ಭಿನ್ನವಾಗಿದೆ. ಕೌಟುಂಬಿಕ ಹಲ್ಲೆ, ಹಿಂಸೆ ಸೇರಿದಂತೆ ಗಂಭೀರ ಸಮಸ್ಯೆಯಲ್ಲಿ ವಿಚ್ಛೇದನ ಅನಿವಾರ್ಯ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಎಲ್ಲರೂ ಅಂದುಕೊಂಡಂತೆ ವಿಚ್ಛೇದನ ಪ್ರಕ್ರಿಯೆ ಅಷ್ಟು ಸುಲಭವಲ್ಲ. ಇಲ್ಲಿ ನಾನಾ ಸಮಸ್ಯೆಗಳು ಎದುರಾಗುತ್ತವೆ. ಮಹಿಳೆ ಅದ್ರಲ್ಲೂ ಕೆಲಸವಿಲ್ಲದ ಗೃಹಿಣಿ ಡಿವೋರ್ಸ್ ನಿರ್ಧಾರಕ್ಕೆ ಬರುವ ಮೊದಲು ಪ್ರತಿಯೊಂದು ಅಂಶವನ್ನು ಅರ್ಥ ಮಾಡಿಕೊಳ್ಳಬೇಕು. ವಿಚ್ಛೇದನಕ್ಕಿಂತ ಮೊದಲು ನೀವು ಯಾವೆಲ್ಲ ವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂಬುದನ್ನು ನಾವಿಂದು ನಿಮಗೆ ಹೇಳ್ತೇವೆ. ವಿಚ್ಛೇದನಕ್ಕಿಂತ ಮೊದಲು ನೆನಪಲ್ಲಿಡಬೇಕಾದ ವಿಷಯ :- *ವಿಚ್ಛೇನದ ಬಗ್ಗೆ ಕಾನೂನು ಸಲಹೆ *ಆರ್ಥಿಕ ಸ್ಥಿತಿ *ಮಕ್ಕಳಾದ್ಮೇಲೆ ವಿಚ್ಛೇದನ *ಮಾನಸಿಕ ಬೆಂಬಲ ಮುಖ್ಯ *ಎಲ್ಲವನ್ನೂ ನಿಭಾಯಿಸುವ ಶಕ್ತಿ ವಿಚ್ಛೇನದ ಬಗ್ಗೆ ಕಾನೂನು ಸಲಹೆ:- ಮೊದಲು ವಿಚ್ಛೇದನ ಪ್ರಕ್ರಿಯೆಯಲ್ಲಿ ಏನೆಲ್ಲ ಮಾಡಬೇಕು ಎಂಬುದನ್ನು ವಕೀಲರಿಂದ ತಿಳಿದುಕೊಳ್ಳಿ. ಹಕ್ಕುಗಳು, ಜವಾಬ್ದಾರಿಗಳು ಮತ್ತು ಒಳಗೊಂಡಿರುವ ಕಾನೂನು ಪ್ರಕ್ರಿಯೆಗಳನ್ನು ಅರ್ಥಮಾಡಿಕೊಳ್ಳಿ. ಆರ್ಥಿಕ ಸ್ಥಿತಿ:- ಮೊದಲು ನಿಮ್ಮ ಆರ್ಥಿಕ ಸ್ಥಿತಿ ಗಮನಿಸಿ. ನೀವು ಕನಿಷ್ಠ…

Read More

ಹೆಚ್ಚಿನ ಜನರು ತೂಕ ಕಡಿಮೆ ಮಾಡಿಕೊಳ್ಳಲು ಮತ್ತು ತೂಕ ನಿಯಂತ್ರಣಕ್ಕಾಗಿ ಗ್ರೀನ್ ಟೀ ಕುಡಿಯುತ್ತಾರೆ. ಇದು ಕೇವಲ ತೂಕ ಕಡಿಮೆ ಮಾಡುವುದಲ್ಲದೇ ಹೃದಯ ಸಂಬಂಧಿ ಸಮಸ್ಯೆ ಹಾಗೂ ಕರುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಹಲವಾರು ರೋಗಕ್ಕೆ ರಾಮಬಾಣ ​ ಹೆಚ್ಚಿನ ಜನರು ಗ್ರೀನ್​ ಟೀ ಅಂದ್ರೆ ಮುಖ ತಿರುಗಿಸಿಕೊಳ್ಳುತ್ತಾರೆ. ಕನಿಷ್ಠ ಪಕ್ಷ ಅದರ ಉಪಯೊಗವನ್ನು ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡಲ್ಲ. ಈ ಗ್ರೀನ್​ ಟೀ, ಹಲವಾರು ಗಿಡ ಮೂಲಿಕೆಯಿಂದ ಕೂಡಿದ್ದು, ಹಲವಾರು ಕಾಯಿಲೆಗಳಿಗೆ ಮದ್ದಾಗಿದೆ. ಇದು ಪರಿಧಮನಿಯ ಕಾಯಿಲೆ, ಟೈಪ್ 2 ಮಧುಮೇಹ ಮತ್ತು ಬೊಜ್ಜು, ಚರ್ಮ ಸಂಬಂಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಸೌಂದರ್ಯವರ್ಧಕ ಗ್ರೀನ್ ಟೀಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರೊಂದಿಗೆ ತ್ವಚ್ಛೆಯ ಅಂದವನ್ನು ಹೆಚ್ಚಿಸುವ ಗುಣವೂ ಇದರಲ್ಲಿದೆ. ಸೌಂದರ್ಯ ಉತ್ಪನ್ನಗಳಲ್ಲಿ ಕೂಡ ಗ್ರೀನ್​ ಟೀಯನ್ನು ಬಳಕೆ ಮಾಡುತ್ತಾರೆ. ಇದು ಯುವಿ ಕಿರಣಗಳಿಂದ ತ್ವಚ್ಚೆಯನ್ನು ರಕ್ಷಿಸುವ ಗುಣ, ಅಕಾಲಿಕ ನೆರೆ ತಡೆಯುವುದು, ಉರಿಯೂತದ ಲಕ್ಷಣಗಳನ್ನು ನಿವಾರಿಸುತ್ತದೆ.…

Read More

ಬೆಂಗಳೂರು:- ಬೆಂಗಳೂರು ನಗರದಾದ್ಯಂತ ಅನ್‌ಬಾಕ್ಸಿಂಗ್ ಬೆಂಗಳೂರು ಪೌಂಡೇಷನ್ ವತಿಯಿಂದ ಡಿಸೆಂಬರ್-2023ರ ಮಾಹೆಯಲ್ಲಿ “ಬೆಂಗಳೂರು ಹಬ್ಬ”ಕ್ಕೆ* ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಹಬ್ಬ ಆಚರಣೆಗೆ ಪಾಲಿಕೆ ಸಹಕಾರ ನೀಡುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಘನತೆ ಹಾಗೂ ಬೆಂಗಳೂರಿನ ಬ್ರಾಂಡ್ ಅನ್ನು ಹೆಚ್ಚಿಸುವ ಸಲುವಾಗಿ ಇದೇ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬವನ್ನು ಆಚರಿಸಲಾಗುತ್ತಿದ್ದು, ಅದಕ್ಕೆ ಬೇಕಾದಂತಹ ಸಹಕಾರವನ್ನು ಪಾಲಿಕೆಯಿಂದ ನೀಡಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು ಸೂಕ್ತ ಕ್ರಮಗಳನ್ನು ಕೈಗೊಂಡು ಅಗತ್ಯ ಸಹಕಾರವನ್ನು ನೀಡಬೇಕೆಂದು ಸೂಚನೆ ನೀಡಿದರು. ಬೆಂಗಳೂರು ಹಬ್ಬವನ್ನು 2024ರಿಂದ ಆಯಾ ಖುತುವಿಗೆ ತಕ್ಕಂತೆ ಹಬ್ಬಗಳನ್ನು ಆಚಾರಿಸಲಾಗುತ್ತದೆ. ಬೆಂಗಳೂರು ಹಬ್ಬಕ್ಕೆ ಪ್ರಮುಖ ಸ್ಥಳ, ಜಂಕ್ಷನ್‌ಗಳು, ಮೇಲುಸೇತುವೆ, ಉದ್ಯಾನವನಗಳು, ಮಾರುಕಟ್ಟೆಗಳನ್ನು ಗುರುತಿಸಿ…

Read More

ಬೆಂಗಳೂರು:ಬಿ‌ಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಯುವ ಮತದಾರರ ನೋಂದಣಿ ಕಾರ್ಯಕ್ರಮ ವನ್ನು ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಶ್ರೀ ಆರ್ ರಾಮಚಂದ್ರನ್ ಅವರು ಇಂದು ಉದ್ಘಾಟಿಸಿದರು. ದೇಶದೆಲ್ಲೆಡೆ ಇಂದು ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಜಾಗೃತಿ ವೇದಿಕೆ (Voters Awareness Forum) ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ (Electoral Literact Club) ಗಳನ್ನೂ ಸಹಾ ಉದ್ಘಾಟಿಸಿದರು. ಬಿ‌ಎಂಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಬಿ. ಪದ್ಮ, ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕಿ ಡಾ. ಕೆ ವೀಣಾ, ಸಂಯೋಜಕಿ ಶ್ರೀಮತಿ ಬಿ. ಭಾನು ಹಾಗೂ ಸುಮಾರು 1000 ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More

ಮೈಸೂರು: ನಾಳೆ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯ ವಿರುದ್ಧ ಭಾರತದ ವಿಶ್ವ ಕಪ್ ಗೆದ್ದು ಬರಲಿ ಎಂದು ಕ್ರಿಕೆಟ್ ಪ್ರೇಮಿಗಳಿಂದ ವಿದ್ಯಾರ್ಥಿಗಳ ಜೊತೆ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಭಾರತದ ತಂಡದ ಆಟಗಾರರ ಭಾವಚಿತ್ರ ಹಿಡಿದು ಭಾರತದ ತಂಡದ ಆಟಗಾರರಿಗೆ ಶುಭಕೋರಿ ಹಾಗೂ ಗೆದ್ದು ಬಾ ಗೆದ್ದು ಬಾ ಬಾರತ ಗೆದ್ದು ಬಾ, ನಮ್ಮದೇ ನಮ್ಮದೇ ವಿಶ್ವಕಪ್ ನಮ್ಮದೇ, ಹಲವಾರು ಘೋಷಣೆ ಕೂಗುತ್ತಾ ಶುಭ ಹಾರೈಸಿದರು, ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ. ಪ್ರಕಾಶ್ ರವರು ಮಾತನಾಡಿ ವಿಶ್ವಕಪ್ ನಲ್ಲಿ ಭಾರತದ ತಂಡವು ಸತತವಾಗಿ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಎಉ ಬಂದಿದ್ದು ಕ್ರಿಕೇಟ್‌ ಪ್ರೇಮಿಗಳ ಮನವನ್ನು ಗೆದ್ದಿದೆ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಪ್ರತಿಯೊಬ್ಬ ಆಟಗಾರರೂ ಸಹ ಅತ್ಯುತ್ತಮ ಸಮನ್ವತೆ ಮತ್ತು ಸಮರ್ಥ ಪ್ರದರ್ಶನದಿಂದಾಗಿ ಈ ಭಾರಿ ವಿಶ್ವಕಪ್ ಗೆಲ್ಲಲಿದೆ ಎಂದರು. https://ainlivenews.com/high-speed-internet-unveiled-in-china-100-gb-net-per-second/ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನರೇಂದ್ರ ಮೋದಿ ಬಂದಿ ವೀಕ್ಷಣೆ ಮಾಡುತ್ತಿರುವುದು ನಮ್ಮ…

Read More

ಬೆಂಗಳೂರು:- ಬಿ.ವೈ. ವಿಜಯೇಂದ್ರ ಬಳಸಿ ಬೀಸಾಡಲು ತಂದಿರುವ ಹೊಸ “ಹರಕೆಯ ಕುರಿ” ಎಂದು ಹೇಳುವ ಮೂಲಕ ಕಾಂಗ್ರೆಸ್ ಟೀಕೆ ಮಾಡಿದ್ದಾರೆ https://twitter.com/INCKarnataka/status/1725783706164732361?ref_src=twsrc%5Etfw%7Ctwcamp%5Etweetembed%7Ctwterm%5E1725783706164732361%7Ctwgr%5Efd36467f82f04de22cb4b4251f90aa48ab6f0b24%7Ctwcon%5Es1_c10&ref_url=http%3A%2F%2Fapi-news.dailyhunt.in%2F ಲಿಂಗಾಯತ ನಾಯಕರನ್ನು ಬಳಸಿ ಬೀಸಾಡುವುದೇ ಬಿಜೆಪಿಯ ಅಜೆಂಡಾ! ◆ಯಡಿಯೂರಪ್ಪರನ್ನು ಎರಡೆರಡು ಬಾರಿ ಕಣ್ಣೀರು ಹಾಕಿಸಿ ಹುದ್ದೆಯಿಂದ ಕೆಳಗಿಳಿಸಿ ಕಳಿಸಿತ್ತು. ◆ಜಗದೀಶ್ ಶೆಟ್ಟರ್ ರವರನ್ನು ಅಧಿಕಾರದಿಂದ ದೂರವಿಟ್ಟು ವಂಚಿಸಿತ್ತು. ◆ವಿ. ಸೋಮಣ್ಣರನ್ನು ವ್ಯವಸ್ಥಿತವಾಗಿ ಸೋಲಿನ ಹೊಂಡಕ್ಕೆ ತಳ್ಳಲಾಗಿತ್ತು. ◆ಲಕ್ಷ್ಮಣ್ ಸವದಿಯವರನ್ನು ಮೂಲೆಗುಂಪು ಮಾಡಿ ಕೂರಿಸಲಾಗಿತ್ತು. ◆ಈಗ ಸಿಎಂ ಆಗಿದ್ದ ಬೊಮ್ಮಾಯಿಯವರು ಆಟಕ್ಕೂ ಇಲ್ಲ, ಲೆಕ್ಕಕ್ಕೂ ಇಲ್ಲದಂತೆ ನಿರ್ಲಕ್ಷಿಸಲಾಗಿದೆ. ಇದೇ ಮಾದರಿಯಲ್ಲಿ ವಿಜಯೇಂದ್ರ ಕೂಡ ಬಳಸಿ ಬೀಸಾಡಲು ತಂದಿರುವ ಹೊಸ ‘ಹರಕೆಯ ಕುರಿ’ ಅಷ್ಟೇ! ಎಂದಿದೆ.

Read More