ತುಮಕೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್ನಲ್ಲಿ ಸ್ಟಡ್ ಫಾರಂನ ಟೌನ್ಶಿಪ್ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್ಕೋರ್ಸ್ ಕುಣಿಗಲ್ಗೆ ಶಿಫ್ಟ್ ಮಾಡಲು ಸಲಹೆ ನೀಡಿದ್ದೇನೆ ಎಂದರು. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು.…
Author: AIN Author
ಹಾಸನಾಂಬ ಫಿಲ್ಮ್ಸ್ ಸಂಸ್ಥೆಯು ನಿರ್ಮಾಣದ ಕಿರುಚಿತ್ರಗಳ ಸಿನಿಮಾಗಳಿಗೆ ಆಸಕ್ತ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಆಡಿಷನ್ ನಡೆಸಲಾಗುತ್ತಿದೆ. ಈ ಅವಕಾಶವನ್ನು ಜಿಲ್ಲೆಯ ಆಸಕ್ತ ಕಲಾವಿದರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಾಸನಾಂಬ ಫಿಲ್ಮ್ಸ್ನ ದಿಲೀಪ್ ಗೌಡ ಹೇಳಿದರು. ನಗರದ ವಾಸವಿ ಇಂಗ್ಲೀಷ್ ಶಾಲೆಯಲ್ಲಿ ಹಾಸನಾಂಬ ಫಿಲ್ಮ್ಸ್ ಸಂಸ್ಥೆಯ ಕಿರುಚಿತ್ರಗಳ ನಿರ್ಮಾಣಕ್ಕೆ ಕಲಾವಿದರ ಆಡಿಷನ್ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಸಂಸ್ಥೆ ಅನೇಕ ಕಿರುಚಿತ್ರಗಳನ್ನು ನಿರ್ಮಾಣ ಮಾಡಿ ಜನಮನ್ನಣೆ ಗಳಿಸಿದೆ. ಜನರಿಗೆ ಅನೇಕ ಉತ್ತಮ ಸಂದೇಶಗಳನ್ನು ನೀಡುವ ನಿಟ್ಟಿನಲ್ಲಿ ಕಿರುಚಿತ್ರಗಳನ್ನು ಮಾಡಲಾಗುತ್ತಿದೆ. ಆಸಕ್ತ ಕಲಾವಿದರು, ಸಿನಿಮಾಗಳಲ್ಲಿ ನmನೆ ಮಾಡಲು ಆಸಕ್ತಿ ಹೊಂದಿದವರು, ವೇದಿಕೆಗಳಿಂದ ವಂಚಿತರಾದವರು, ನಮ್ಮ ಬ್ಯಾನರ್ ಅಡಿ ನಿರ್ಮಾಣ ಮಾಡಲಾಗುತ್ತಿರುವ ಕಿರು ಸಿನಿಮಾಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ಈ ಅವಕಾಶವನ್ನು ಜಿಲ್ಲೆಯ ಆಸಕ್ತ ಕಲಾವಿದರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಹಾಸನಾಂಬ ಫಿಲ್ಮ್ಸ್ ಸಂಸ್ಥೆಯ ಸೂರ್ಯ ಅವರು ಮಾತನಾಡಿ, ನಮ್ಮ ಕಿರುಸಿನಿಮಾಗಳಲ್ಲಿ ನಟನೆ ಮಾಡಲು ಚಿಕ್ಕಮಗಳೂರು, ಹಾಸನ, ಬೆಂಗಳೂರು, ತಿಪಟೂರು ಸೇರಿದಂತೆ ವಿವಿಧೆಡೆಯಿಂದ ಅನೇಕ…
ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡಿರುವ ಹಿನ್ನೆಲೆ ಅಯೋಧ್ಯೆಯ ಪ್ರಮುಖ ರಸ್ತೆಗಳು ಹೂವುಗಳು, ಶಿಲ್ಪಕಲೆ, ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿವೆ. ಅಯೋಧ್ಯೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಪುನರ್ನಿರ್ಮಾಣ ಕಾರ್ಯಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿರುವ ಅಯೋಧ್ಯೆಯ ಧಾಮ್ ಜಂಕ್ಷನ್. ಜನವರಿ 22 ರಾಮ ಮಂದಿರ ಉದ್ಘಾಟನೆಗೆ ಕೂಡಾ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಅಯೋಧ್ಯೆಯ ಸರಯೂ ನದಿಯ ದಡದಲ್ಲಿ ದೀಪಗಳ ಬೆಳಕಿನಲ್ಲಿ ಹೊಳೆಯುತ್ತಿರುವ ನೀರು. ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡುವವರು ಹನುಮಂತನ ಚಿತ್ರವಿರುವ ಕೇಸರಿ ಧ್ವಜಗಳನ್ನು ಮಾರಾಟಕ್ಕೆ ಇಟ್ಟಿದ್ದು ರಸ್ತೆ ಪೂರ್ತಿ ಕೇಸರಿಮಯವಾಗಿ ಕಾಣುತ್ತಿತ್ತು. ಪ್ರಧಾನಿ ಮೋದಿ ಆಗಮಿಸುವ ರಸ್ತೆಯಲ್ಲಿ ಕೇಸರಿ ಬಣ್ಣದ ಚೆಂಡು ಹೂಗಳಿಂದ ವಿನ್ಯಾಸ ಮಾಡಿದ ಕಳಶವನ್ನು ಅಲಂಕಾರ ಮಾಡಲಾಗಿತ್ತು. ಈ ರಸ್ತೆಗೆ ರಾಮ್ ಪಥ್ ಎಂದು ನಾಮಕರಣ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಹೂವಿನ ಅಲಂಕಾರದ ಜವಾಬ್ಧಾರಿಯನ್ನು ಲಲಿತ್ ಕುಮಾರ್ ಸಿಂಗ್ ಎಂಬುವವರು ವಹಿಸಿಕೊಂಡಿದ್ದು,…
ಪೀಣ್ಯ ದಾಸರಹಳ್ಳಿ:’ ನಾವು ಸಾಕ್ಷಾತ್ ದೇವರನ್ನು ನೋಡಿಲ್ಲ. ಆದರೆ ನಾಡಿಗೆ ಅಕ್ಷರ, ಅನ್ನದಾಸೋಹ, ಭಕ್ತಿ, ಪೂಜೆ ನೀಡಿದ ಸಿದ್ದಗಂಗಾಶ್ರೀ ಅಂತಹ ಮಹಾನ್ ಪುರುಷರನ್ನು ದೇವರ ರೂಪದಲ್ಲಿ ಕಂಡಿದ್ದೇವೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು. ಭುವನೇಶ್ವರಿ ಬಡಾವಣೆಯಲ್ಲಿ ಕಾಯಕಯೋಗಿ ಸಹಕಾರ ಸಂಘ ಮತ್ತು ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ವೇದಿಕೆ ಹಾಗೂ ಇತರೆ ಸಂಘದ ವತಿಯಿಂದ ಸಿದ್ದಗಂಗಾ ಶ್ರೀಗಳ 5ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಸ್ವಾಮೀಜಿ ಪುತ್ತಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಿದ್ದಗಂಗಾ ಮಠ ಅನೇಕ ಭಕ್ತ ಸಮೂಹವನ್ನು ಹೊಂದಿರುವ ಮಠ. ಶ್ರೀಗಳ ನೆನಪು ಮಠದಲ್ಲಿ ಹಾಗೂ ಸಮಾಜದ ಮಧ್ಯೆ ಸೂರ್ಯ ಚಂದ್ರ ಇರುವರಿಗೂ ಇರುತ್ತದೆ. ಅಂತಹ ಆರಾಧ್ಯ ದೈವ ತ್ರಿವಿಧ ದಾಸೋಹಿಯನ್ನು ದರ್ಶನ ಪಡೆದಿದ್ದ ನಾವೇ ಧನ್ಯರು’ ಎಂದರು. ಸಂಘದ ಅಧ್ಯಕ್ಷ ಕಾಯಕಯೋಗಿ ಬಸವರಾಜಣ್ಣ ಮಾತನಾಡಿ ‘ಸರ್ಕಾರವು ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆಯ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸಿದೆ. ಆದ ಕಾರಣ ಈ ಕ್ಷೇತ್ರದಲ್ಲಿ ಭಕ್ತರು ರಸ್ತೆಗಳಲ್ಲಿ, ಮನೆಗಳಲ್ಲಿ ಸ್ವಾಮೀಜಿ ಭಾವಚಿತ್ರ ಇಟ್ಟು ಕೈಲಾದಷ್ಟು…
ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ ಡೀಪ್ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿತ್ತು. https://ainlivenews.com/another-record-breaking-katera-movie-rs-200-crore-club-poster-release/ ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್ಫೇಕ್ ಮಾಡುವವರ ವಿರುದ್ಧ…
ದಾವಣಗೆರೆ: ಅಯೋಧ್ಯೆಯಲ್ಲಿ ಸೋಮವಾರ ಪ್ರಭು ಶ್ರೀರಾಮನ ಪ್ರಾಣಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿಯೂ ರಾಮಭಕ್ತರ ಸಂಭ್ರಮ ಜೋರಾಗಿದೆ. ಅಯೋಧ್ಯೆಯಲ್ಲಿನ ಕಾರ್ಯಕ್ರಮ ಯಶಸ್ವಿಯಾಗಲೆಂದು ದಾವಣಗೆರೆಯ ಸುಪರ್ ಮಾಮ್ಸ್ ಗ್ರುಪ್ ನ ಮಹಿಳೆಯರು ಸಾಮೂಹಿಕವಾಗಿ ರಾಮೋತ್ಸವವನ್ನ ಆಚರಣೆ ಮಾಡಿದ್ದಾರೆ. https://ainlivenews.com/another-record-breaking-katera-movie-rs-200-crore-club-poster-release/ ದಾವಣಗೆರೆಯ ವಿದ್ಯಾನಗರದ ಪಾರ್ಕ್ ನಲ್ಲಿ ಸುಮಾರು ನೂರಕ್ಕು ಹೆಚ್ಚು ಮಹಿಳೆಯರು ರಾಮನಿಗೆ ವಿಶೇಷ ಪೂಜೆಯನ್ನ ಸಲ್ಲಿಸಿದರು. ಈ ವೇಳೆ ಶ್ರೀರಾಮ, ಸೀತಾ ಹಾಗೂ ಆಂಜನೇಯನ ವೇಷ ತೊಟ್ಟ ಮಕ್ಕಳಿಗೆ ಆರತಿಯನ್ನ ಬೆಳಗಿ ಪೂಜೆ ಸಲ್ಲಿಸಲಾಯಿತು. ಪೂಜೆ ಹಿನ್ನಲೆಯಲ್ಲಿ ಮಹಿಳೆಯರು ಸುಮಾರು ಎರಡು ಗಂಟೆಗಳ ಕಾಲ ರಾಮ ಜಪವನ್ನ ಮಾಡಿದರು.
ಬೆಂಗಳೂರು: ಬೆಂಗಳೂರಿನಲ್ಲಿ ಸರಿಯಾಗಿ ಫುಟ್ ಪಾತ್ ನಲ್ಲಿ ನಡೆಯೋದೇ ಕಷ್ಟ. ಅತ್ತೊಂದ್ರಲ್ಲಿ ಫುಟ್ಪಾತ್ಗಳ ಮೇಲೆ ಯಮರೂಪಿ ಟ್ರಾನ್ಸ್ ಫಾರ್ಮರ್ ಗಳು ಜನರ ಪಾಲಿಗೆ ಕಂಟಕ ತಂದಿವೆ.ಇವುಗಳ ಬಳಿ ಸ್ವಲ್ಪ ಯಾಮಾರಿದ್ರೂ ಯಮನ ಪಾದ ಸೇರೋದು ಗ್ಯಾರಂಟಿ.ಆದ್ರೂ ಬೆಸ್ಕಾಂ ಮಾತ್ರ ತಲೆನೇ ಕೆಡಿಸಿಕೊಳ್ತಿಲ್ಲ. ನಗದ ಗಲ್ಲಿ ಗಲ್ಲಿಯಲ್ಲೂ ಡೆಡ್ಲಿ ಟ್ರಾನ್ಸ್ ಫಾರ್ಮರ್ ಗಳು ಜನರ ಬಲಿಗಾಗಿ ಕಾಯ್ತಿವೆ. ಹಾಗಾದ್ರೆ ನಿಗದಲ್ಲಿ ಇನ್ನೂ ಎಷ್ಟಿವೆ ಡೆಡ್ಲಿ ಟಾನ್ಸ್ ಫಾರ್ಮಸ್ಸ್ ಬನ್ನಿ ಹೇಳ್ತಿವೆ. ಬೆಸ್ಕಾಂ ಇದು. ಮನೆ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಸರ್ಕಾರಿ ಇಲಾಖೆ. ಆದ್ರೆ ಇತ್ತೀಚಿಗೆ ಈ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಬೇಜವಾಬ್ದಾರಿ ಎದ್ದು ಕಾಣ್ತಿದೆ. ಇವರು ಮಾಡ್ತಿರೋ ಎಡವಟ್ಟುಗಳಿಂದ ಜನನ ಬೀದಿ ಹೆಣವಾಗ್ತಿದ್ದಾರೆ. ಇತ್ತೀಚಿಗೆ ಕಾಡುಗೋಡಿ ಬಳಿ ವಿದ್ಯುತ್ ಅವಘಡದಿಂದ ದೊಡ್ಡ ಅನಾಹುತವೇ ನಡೆದುಹೋಗಿದೆ. ಆದ್ರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಡೇಜರ್ ಟ್ರಾನ್ಸ್ ಫಾರ್ಮರ್ ಗಳನ್ನು ದುಸಸ್ಥಿ ಮಾಡುವ ಯತ್ನಕ್ಕೆ ಅಧಿಕಾರಿಗಳು ಮುಂದಾಗಿಲ್ಲ. ನಗರದಲ್ಲಿ ಇನ್ನೂ ಸಾವಿರಾರು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳು…
ಬೆಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿಯಾಗಿದ್ದು, ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. https://ainlivenews.com/see-how-many-health-benefits-drinking-buttermilk-has/ ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ. 2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.
ತುಮಕೂರು, ಜನವರಿ 21: ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು. ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಚಾರ ಮಾಡಲಾಗುವುದು ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ…
ಹೈದರಾಬಾದ್: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆದಿವೆ. ಈ ಹೊತ್ತಿನಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO), ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರವನ್ನು ಬಿಡುಗಡೆ ಮಾಡಿದೆ. ಆಕಾಶದಿಂದ ಅಯೋಧ್ಯೆಯ ರಾಮಮಂದಿರ ಹೇಗೆ ಕಾಣುತ್ತದೆ ಎಂಬ ಚಿತ್ರವನ್ನು ಹೈದರಾಬಾದ್ನ ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಬಿಡುಗಡೆ ಮಾಡಿದೆ. ಈ ಚಿತ್ರಗಳನ್ನು ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹದಿಂದ ತೆಗೆಯಲಾಗಿದೆ. ಇದರಲ್ಲಿ ದಶರಥ ಮಹಲ್, ಅಯೋಧ್ಯೆಯ ರೈಲು ನಿಲ್ದಾಣ ಮತ್ತು ಪವಿತ್ರ ಸರಯೂ ನದಿ ಕಾಣಿಸುತ್ತದೆ. ಇಂಡಿಯನ್ ರಿಮೋಟ್ ಸೆನ್ಸಿಂಗ್ ಸಿರೀಸ್ ಉಪಗ್ರಹದ ಮೂಲಕ ತೆಗೆದ ಈ ಚಿತ್ರಗಳಲ್ಲಿ 2.7 ಎಕರೆ ಇರುವ ಪವಿತ್ರ ರಾಮಮಂದಿರ ಸಂಕೀರ್ಣವು ನಮಗೆ ಕಾಣುತ್ತದೆ. https://ainlivenews.com/see-how-many-health-benefits-drinking-buttermilk-has/ ಸೋಮವಾರ (ಜ.22) ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈ ಸಮಾರಂಭದಿಂದ ದೇಶದೆಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಜನ ತಮ್ಮ ಸುತ್ತಮುತ್ತಲಿನ ದೇವಾಲಯಗಳು ಸೇರಿದಂತೆ, ಮನೆಯಲ್ಲೂ ಈ ಸಮಾರಂಭವನ್ನು ದೀಪಾವಳಿಯಂತೆ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.