Author: AIN Author

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ನಡುವಿನ ಫೋನ್‌ ಸಂಭಾಷಣೆಯಲ್ಲಿ ಪ್ರಸ್ತಾಪಗೊಂಡಿದ್ದ ವಿವೇಕಾನಂದ ಎನ್ನುವ ಹೆಸರು ಕಳೆದ ರಾತ್ರಿ ಹೊರಬಿದ್ದ ಪೊಲೀಸ್‌ ಇನಸ್ಪೆಕ್ಟರ್‌ʼಗಳ ವರ್ಗಾವಣೆ ಪಟ್ಟಿಯಲ್ಲಿ ಪ್ರತ್ಯಕ್ಷವಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟೀಕಾಪ್ರಹಾರ ನಡೆಸಿರುವ ಅವರು; ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಎಂದು ಪ್ರಶ್ನೆ ಮಾಡಿದ್ದಾರೆ. https://ainlivenews.com/eskom-online-service-will-be-suspended-for-these-2-days-in-the-state/ ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ… ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ.. ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ. ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ!? ಓಹ್! ಒಂದು…

Read More

ಹುಬ್ಬಳ್ಳಿ: ವಿಶ್ವಕಪ್ ಕ್ರಿಕೆಟ್ ಹಿನ್ನಲೆಯಲ್ಲಿ, ಈಗಾಗಲೇ ಭಾರತ ತಂಡ 10 ಪಂದ್ಯಗಳನ್ನು ಗೆಲವು ಸಾಧಿಸಿ ಈಗ ಪೈನಲ್‌ಗೆ ಬಂದಿದ್ದು ಇಡೀ ಭಾರಿತಿಯರಲ್ಲಿ ಕುತೂಹಲ ಮೂಡಿಸಿದೆ. ನಾಳೆ ಇಂಡಿಯಾ vs ಆಸ್ಟ್ರೇಲಿಯಾ ನಡೆಯುವ ವಿಶ್ವಕಪ್ ಕ್ರಿಕೆಟ್  ಪಂದ್ಯದಲ್ಲಿ ಭಾರತ ಅತೀ ಹೆಚ್ಚು ರನ್‌ಗಳಿಂದ ವಿಜಯ ಪತಾಕಿ ಹಾರಿಸಲೆಂದು ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ,  ಹಾಗೂ ಕ್ರಿಕೆಟ್ ಅಭಿಮಾನಿಗಳು ಕ್ರಿಕೆಟ್ ಆಡುವುದರ ಮೂಲಕ ಶುಭಕೋರಿದರು. ಇನ್ನು ಅಭಿಮಾನಿಗಳು ಕೈಯಲ್ಲಿ ಆಟಗಾರರ ಭಾವಚಿತ್ರ ಹಿಡಿದು ವಂದೇ ಮಾತರಂ, ಇಂಡಿಯಾ ಇಂಡಿಯಾ ಎಂದು ಘೋಷಣೆ ಕೂಗುತ್ತ ಶುಭ ಹಾರೈಸಿದರು.

Read More

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಹಿರಿಯ ಶಾಸಕ ಆರ್. ಅಶೋಕ ಅವರ ಆಯ್ಕೆಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಶಾಸಕರಲ್ಲಿ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,ವಿರೋಧ ಪಕ್ಷದ ನಾಯಕನ ಆಯ್ಕೆ ಗೆ ಶಾಸಕರ ಅಪಸ್ವರ ಹಿನ್ನೆಲೆಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ಕೊಟ್ಟ ಅವರು, ಭಾರತೀಯ ಜನತಾ ಪಕ್ಷದ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿದೆ ಶುಕ್ರವಾರಬೆಳಿಗ್ಗೆ ಮೊದಲು ಶಾಸಕರನ್ನ ಪ್ರತ್ಯೇಕವಾಗಿ ಮಾತನಾಡಿಸಲಾಯಿತು ಈ‌ ಸಂದರ್ಭದಲ್ಲಿ ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಚ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ ಗೌತಮ ಆಗಮಿಸಿದ್ದರು. ಯಾವುದೇ ಭಿನ್ನಾಭಿಪ್ರಾಯ ಬರದಂತೆ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ ಎಲ್ಲ…

Read More

ಹಿಂದೂಗಳ ಪವಿತ್ರ ಸ್ಥಳ ವಾರಣಾಸಿಯ (Varanasi) ನೆಲವನ್ನು ಸ್ಪರ್ಶಿಸಬೇಕು ಎನ್ನುವುದು ಹಲವರ ಗುರಿಯಾಗಿರುತ್ತದೆ. ಅದರಲ್ಲೂ ಗಂಗಾ ಆರತಿಯ ಪೂಜೆಯಲ್ಲಿ ಭಾಗಿಯಾಗುವುದು ಪುಣ್ಯದ ಕೆಲಸವೆಂದೇ ಭಾವಿಸಲಾಗಿದೆ. ಇಂತಹ ಗಂಗಾ ಆರತಿ ಪೂಜೆಯಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ (Sunny Leone) ) ಭಾಗಿಯಾಗಿದ್ದಾರೆ. ಸನ್ನಿ ಲಿಯೋನ್ ಜೊತೆ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ (Abhishek Singh) ಕೂಡ ಪವಿತ್ರ ಗಂಗಾ ಆರತಿಯ ಪೂಜೆಯಲ್ಲಿ ಭಾಗಿಯಾಗಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಪಿಂಕ್ ಸಲ್ವಾರ್ ಧರಿಸಿ, ಕುತ್ತಿಗೆಗೆ ಚಂಡು ಹೂವಿನ ಮಾಲೆ ಹಾಕಿಕೊಂಡಿರುವ ಸನ್ನಿ, ಪೂಜೆಗೆ ಉತ್ಸಾಹದಿಂದಲೇ ಭಾಗಿಯಾಗಿದ್ದಾರೆ. ಸನ್ನಿ ಲಿಯೋನ್ ಜೊತೆ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ (Abhishek Singh) ಕೂಡ ಪವಿತ್ರ ಗಂಗಾ ಆರತಿಯ ಪೂಜೆಯಲ್ಲಿ ಭಾಗಿಯಾಗಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  ಪಿಂಕ್ ಸಲ್ವಾರ್ ಧರಿಸಿ, ಕುತ್ತಿಗೆಗೆ ಚಂಡು ಹೂವಿನ ಮಾಲೆ ಹಾಕಿಕೊಂಡಿರುವ ಸನ್ನಿ, ಪೂಜೆಗೆ ಉತ್ಸಾಹದಿಂದಲೇ ಭಾಗಿಯಾಗಿದ್ದಾರೆ.

Read More

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಪಕ್ಕದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಬೆಳಗಿನ ಜಾವದಲ್ಲಿ ವಾಹುವಿಹಾರಿಗಳಿಂದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು. ಕೆನಾರ ಬ್ಯಾಂಕ್ ಶಾಖೆಯಲ್ಲಿದ್ದ ಕಡತಗಳು ಬೆಂಕಿಗಾಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆಯಾಗಿದೆ.

Read More

ಬೆಂಗಳೂರು : ಆರ್​. ಅಶೋಕ್ ಅವರನ್ನು ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. https://ainlivenews.com/eskom-online-service-will-be-suspended-for-these-2-days-in-the-state/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ದಿನಗಳಿಂದ ನಾವು ನೀವೆಲ್ಲರೂ ಕಾಯುತ್ತಿದ್ದಂತಹ ವಿಪಕ್ಷ ನಾಯಕನ ಸ್ಥಾನಕ್ಕೆ ಆರ್​. ಅಶೋಕ್ ಆಯ್ಕೆ ಮಾಡಿದ್ದಾರೆ. ಎಲ್ಲಾ ಶಾಸಕರುಗಳು ಸಹ ಒಗ್ಗಟ್ಟಾಗಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಅಧ್ಯಕ್ಷನಾಗಿ ಅಶೋಕ್​ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನಾವೆಲ್ಲ ಒಗ್ಗಟ್ಟಾಗಿ, ಒಂದಾಗಿ, ರಾಜ್ಯದಲ್ಲಿರುವ ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ರಾಜ್ಯದ ಜನರ ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ನಮ್ಮೆಲ್ಲರ ಮುಮದಿನ ಗುರಿ ಲೋಕಸಭೆ ಚುನಾವಣೆ. 28 ಲೋಕಸಭಾ ಕ್ಷೇತ್ರಗಳನ್ನೂ ನಾವು ಗೆಲ್ಲುತ್ತೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುತ್ತೇವೆ. ಮತ್ತೊಮ್ಮೆ ಮೋದಿ ಅವರನ್ನು ದೇಶದ ಪ್ರಧಾನಿಯಾಗಿ ಆಯ್ಕೆ…

Read More

ಲಕ್ನೋ: ಉತ್ತರ ಪ್ರದೇಶದ (Uttar Pradesh) ಸಹರಾನ್‌ಪುರ (Saharanpur) ಜಿಲ್ಲೆಯ ಧರ್ಮಗುರುವೊಬ್ಬರು, ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ (Beauty Parlour) ಮುಸ್ಲಿಂ ಮಹಿಳೆಯರು (Muslim Women) ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ. ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದು ‘ನಿಷಿದ್ಧ’ ಮತ್ತು ‘ಕಾನೂನುಬಾಹಿರ’ ಎಂದು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ (Mufti Asad Kasmi) ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಬೇಕು. ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದರು. https://ainlivenews.com/how-to-make-hotel-style-palak-paneer-antira-here-it-is/ ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋಸ್ ಮಾಡಿಸಿದ್ದಕ್ಕಾಗಿ ಆಕೆಯ ಪತಿ ಸೌದಿ ಅರೇಬಿಯಾದಿಂದ ಫೋನ್ ಮಾಡಿ ತ್ರಿವಳಿ ತಲಾಖ್ ನೀಡಿದ್ದಾರೆ. ಆಕೆಯ ಪತಿ ಸೌದಿಯಿಂದ ವೀಡಿಯೊ ಕಾಲ್ ಮಾಡಿ ಮಾತನಾಡುವ ಸಂದರ್ಭ ಪತ್ನಿ ಐಬ್ರೋಸ್ ಮಾಡಿಸಿರುವುದನ್ನು ಗಮನಿಸಿದ್ದಾರೆ. ಈ ಕುರಿತು ಆಕೆಯನ್ನು ಪತಿ ಪ್ರಶ್ನಿಸಿದ್ದು, ಆಕೆಯ ವಿವರಣೆಯಿಂದ…

Read More

ಬೆಂಗಳೂರು: ನವೆಂಬರ್​ 24ರಿಂದ ನ.26ರವರೆಗೆ ಎಸ್ಕಾಂ ಆನ್​ಲೈನ್​ ಸೇವೆ ಸ್ಥಗಿತಗೊಳ್ಳಲಿದೆ. ನ.24ರಂದು ಮಧ್ಯಾಹ್ನ 12ರಿಂದ ನ.26ರ ಬೆಳಗ್ಗೆ 11.59ರವರೆಗೆ ಬಂದ್​ ಆಗಿರಲಿದೆ. https://ainlivenews.com/good-news-for-non-veg-lovers-meat-sales-in-kmf-model/ ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. 2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ.

Read More

ಬೆಂಗಳೂರು: ನಾನ್ ಪ್ರೀಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡುತ್ತಿದೆ. ಬರುವ ಹೊಸ ವರ್ಷದಿಂದ ಕೆಎಂಎಫ್ (KMF) ಮಾದರಿಯಲ್ಲೇ ಕುರಿ ಹಾಗೂ ಮೇಕೆ ಮಾಂಸ ಮಾರಾಟ (Meet Sale) ಮಾಡುವ ಪ್ಲಾನ್ ಮಾಡಲಾಗಿದೆ. ರಾಜ್ಯದ ತುಮಕೂರು (Tumakuru) ಹಾಗೂ ಚಿತ್ರದುರ್ಗದ (Chitradurga) ಕುರಿ ಹಾಗೂ ಮೇಕೆ ಮಾಂಸಕ್ಕೆ ಎಲ್ಲೆಡೆ ಭಾರೀ ಬೇಡಿಕೆ ಇದೆ. ಈ ಉತ್ತಮ ಗುಣಮಟ್ಟದ, ರೋಗರಹಿತ ಮಾಂಸವನ್ನು ಮಾರಾಟ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಜ್ಜಾಗುತ್ತಿದೆ. ಕರ್ನಾಟಕ ಸರ್ಕಾರ, ಪಶುಸಂಗೋಪನೆ ಇಲಾಖೆ (Department of Animal Husbandry)  ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಮಾದರಿಯಲ್ಲಿಯೇ ರಾಜ್ಯದಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ. ಪಶುಸಂಗೋಪನಾ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಈ ಮಳಿಗೆಗಳು ಹೊಸ ವರ್ಷದಿಂದ ಆರಂಭವಾಗುವ ಪ್ಲಾನ್ ಮಾಡಲಾಗಿದೆ. ಈಗಾಗಲೇ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ 46 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್…

Read More

ಮೈಸೂರು: ತನ್ನ ಜತೆಗಿರುವ ಪೋಟೊವನ್ನು ಹೆಂಡತಿಗೆ ಕಳುಹಿಸುವೆ ಎಂದು ಬೆದರಿಕೆ ಹಾಕಿ ವಿವಾಹಿತನಿಗೆ ೧೦ಲಕ್ಷಕ್ಕೆ ಬೇಡಿಕೆಯಿಟ್ಟ ಮಹಿಳೆಯ ವಿರುದ್ಧ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಳ್ಳಾರಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್‌ ಯುವತಿ ವಿರುದ್ದ ಇಂತಹದೊಂದು ದೂರು ದಾಖಲಿಸಿದ್ದಾರೆ. ರಂಗನಾಥ್‌ ಅವರ ಸ್ನೇಹಿತ ಕಲ್ಲೇಶ್‌ ಅವರ ಮೂಲಕ ಯುವತಿ ಪರಿಚಿತರಾಗಿದ್ದಾರೆ. ಎರಡು-ಮೂರು ಭೇಟಿಗಳಲ್ಲಿ ಯುವತಿಯನ್ನು ರಂಗನಾಥ್‌ರನ್ನು ಪ್ರೀತಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇದಕ್ಕೊಪ್ಪದ ರಂಗನಾಥ್‌ ಯುವತಿ ಪ್ರೀತಿ ನಿರಾಕರಿಸಿದ್ದಾರೆ. ಇದಾಗಿಯೂ ಬೆಂಗಳೂರಿನ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ಯುವತಿ ರಂಗನಾಥ್‌ ವಿರುದ್ಧ ತಿರುಗಿ ಬಿದ್ದಿದ್ದು, ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾರೆ. ಇದಾಗಿಯೂ ಮಾನಸಿಕವಾಗಿ ಹಣಕ್ಕಾಗಿ ಪೀಡಿಸಿದ್ದಾರೆ. ಇದರಿಂದಾಗ ಬೇಸತ್ತು ಪ್ರಾರಂಭದಲ್ಲಿ ೩೨೫೦೦ ರೂ.ಗಳನ್ನು ಸಹ ನೀಡಿರುತ್ತೇನೆ. ಇದಾದ ಬಳಿಕವೂ ಯುವತಿ ಹಣ ನೀಡುವಂತೆ ದುಂಬಾಲು ಬಿದ್ದಿದ್ದು, ಹಣ ನೀಡಲು ನಿರಾಕರಿಸಿದ್ದೇನೆ. https://ainlivenews.com/how-to-make-hotel-style-palak-paneer-antira-here-it-is/ ಈ ಹಿನ್ನೆಲೆಯಲ್ಲಿ ಶ್ರೀನಿವಾಸ್‌ ಎಂಬುವವರನ್ನು ಮೈಸೂರಿಗೆ ಕಳುಹಿಸಿದ್ದು, ಆತ ೧೦ಲಕ್ಷ ರೂ. ನೀಡಿ ಇಲ್ಲದಿದ್ದರೆ ನಿನ್ನ ಹಾಗೂ…

Read More