ಕಲಬುರಗಿ: ತೀವ್ರ ಚರ್ಚೆಗೆ ಗ್ರಾಸವಾಗಿರುವ KEA ಸ್ಪರ್ಧಾತ್ಮಕ ಪರೀಕ್ಷೆ ಇಂದು ಮತ್ತು ನಾಳೆ ಅಂದ್ರೆ ನವೆಂಬರ್ 18 &19 ರಂದು ನಡೆಯಲಿವೆ..ವಿಶೇಷ ಅಂದ್ರೆ ಈ ಹಿಂದೆ ಕಲಬುರಗಿಯಲ್ಲಿ ನಡೆದ ಪರೀಕ್ಷೆಯಲ್ಲಿ ಎಡವಟ್ಟುಗಳಾಗಿ ವಿವಾದಕ್ಕೆ ಕಾರಣವಾದ ಹಿನ್ನಲೆ ಸರ್ಕಾರ ಎಚ್ಚೆತ್ತುಕೊಂಡಿದೆ. ಅದಕ್ಕಾಗಿ ಹಲವು ಕಂಡೀಷನ್ಸ್ ಹಾಕಿದೆ ಆದ್ರೆ ಮಂಗಲಸೂತ್ರ ಕಾಲುಂಗುರ ಧರಿಸಲು ಯಾವುದೇ ಅಭ್ಯಂತರವಿಲ್ಲ ಅಂತ ಹೇಳಿದೆ..ಜಿಲ್ಲೆಯಲ್ಲಿ 14 ಎಕ್ಸಾಂ ಸೆಂಟರ್ ಗಳಿದ್ದು 14058 ಜನ ಪರೀಕ್ಷೆ ಬರೆಯಲಿದ್ದಾರೆ ಎನ್ನಲಾಗಿದೆ..
Author: AIN Author
ದೊಡ್ಮನೆಯ ಆಟ 6 ವಾರಗಳನ್ನ ಪೂರೈಸಿದೆ. ದಿನದಿಂದ ದಿನಕ್ಕೆ ರೋಚಕ ಹಂತಗಳನ್ನ ತಲುಪುತ್ತಿದೆ. ಇನ್ನೂ ಪ್ರತಿ ವಾರದಂತೆ ಈ ವಾರವೂ ಕೂಡ ಕಳಪೆ ಯಾರೆಂದು ತೀರ್ಮಾನಿಸಿ ಮನೆಮಂದಿ ಜೈಲಿಗಟ್ಟಿದ್ದಾರೆ. ನಟಿ ತನಿಷಾ ಕುಪ್ಪಂಡಗೆ (Tanisha Kuppanda) ಜೈಲೂಟ ಫಿಕ್ಸ್ ಆಗಿದೆ. ದೊಡ್ಮನೆಯ ಆಟ ಜದರ್ದಸ್ತ್ ಆಗಿ ಮೂಡಿ ಬರುತ್ತಿದೆ. ಬಿಗ್ ಮನೆಯ (Bigg Boss House) ಡ್ರಾಮಾ ನೋಡೋಕೆ ಅಭಿಮಾನಿಗಳು ಪ್ರತಿ ದಿನ ಹಾಜರಿ ಹಾಕ್ತಿದ್ದಾರೆ. ಹೀಗಿರುವಾಗ ಮನೆಯ ಬಹುಮತದೊಂದಿಗೆ ಜೈಲಿಗೆ ಹೋಗಿದ್ದಾರೆ ತನಿಷಾ. ಇಡೀ ವಾರದ ಟಾಸ್ಕ್, ಆ್ಯಕ್ಟಿವಿಟಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ತನಿಷಾಗೆ ಕಳಪೆ ಹಣೆಪಟ್ಟಿ ಹೋಗಿದೆ. ಟಾಸ್ಕ್ವೊಂದರಲ್ಲಿ ನಿಧಾನವಾಗಿ ಆಟ ಆಡಿದ್ರು ಅನ್ನೋದನ್ನೇ ಕಾರಣ ಇಟ್ಟುಕೊಂಡು ವಿನಯ್, ನಮ್ರತಾ ಕಳಪೆ ಕೊಟ್ಟರು. ಅದಕ್ಕಾಗಿ ಮೂವರ ಪತ್ರ ಮಿಸ್ ಆಯ್ತು ಎಂದು ತನಿಷಾಗೆ ಟಾರ್ಗೆಟ್ ಮಾಡಿದ್ದಾರೆ ಮನೆಮಂದಿ. ಸಂಗೀತಾ (Sangeetha Sringeri) ಜೊತೆಗಿನ ಜಗಳ, ಟಾಸ್ಕ್ನಲ್ಲಿ ಯಡವಟ್ಟು, ಇವೆಲ್ಲವೂ ಸೇರಿ ತನಿಷಾ ವಿರುದ್ಧ ಮನೆಮಂದಿ ನಿಂತಿದ್ದರು. ಮನೆಮಂದಿಯ ಬಹುಮತ…
ಬೆಂಗಳೂರು: ಸಿಎಂ ಇಬ್ರಾಹಿಂ (CM Ibrahim) ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಿರುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (HD DeveGowda) ಆದೇಶ ಹೊರಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದೊಡ್ಡಗೌಡರು ಈ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ (BJP-JDS Alliance) ವಿಚಾರದಲ್ಲಿ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ತಾನೇ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡು ಪ್ರತ್ಯೇಕ ಸಭೆ ನಡೆಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ. ಅಮಾನತು ಹಿನ್ನೆಲೆ: ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿಯ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ…
ಮೋಹಕ ತಾರೆ ರಮ್ಯಾ (Ramya) ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಟ್ರೈಲರ್ ಇದೀಗ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಟ್ರೈಲರ್ ರಿಲೀಸ್ ಸಮಾರಂಭ ನಡೆದಿದೆ. ಚಿತ್ರದ ಟ್ರೈಲರ್ ಭಾವನಾತ್ಮಕವಾಗಿ ಮೂಡಿ ಬಂದಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅನಿಕೇತ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ (Raj B Shetty), ಪ್ರೇರಣಾ ರೋಲ್ನಲ್ಲಿ ಸಿರಿ ರವಿಕುಮಾರ್ (Siri Ravikumar) ಜೀವತುಂಬಿದ್ದು, ಇಡೀ ಟ್ರೈಲರ್ ಎಮೋಷನಲ್ ಆಗಿ ನೋಡುಗರಿಗೆ ಕನೆಕ್ಟ್ ಆಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಅನಿಕೇತ್ಗೆ ಹೆಲ್ತ್ ಕೌನ್ಸಿಲರ್ ಆಗಿ ಪ್ರೇರಣಾ ಜೊತೆಯಾಗುತ್ತಾರೆ. ಕಥೆಯಲ್ಲಿ ಏನಾಗುತ್ತೆ ಎಂಬುದನ್ನ ಸುಳಿವು ಬಿಟ್ಟು ಕೊಡದೇ ಸಿನಿಮಾ ನೋಡುವಂತೆ ಪ್ರೇರಣೆ ನೀಡಿದೆ ಈ ಟ್ರೈಲರ್. ಭಾವನಾತ್ಮಕವಾಗಿ ಪ್ರೇಕ್ಷಕರನ್ನ ಸೆಳೆಯುತ್ತಿದೆ ಈ ಟ್ರೈಲರ್. ರಿಲೀಸ್ ಆಗಿರೋ ಟ್ರೈಲರ್ ನೋಡಿಯೇ ರಾಜ್ ಬಿ ಶೆಟ್ಟಿ, ಸಿರಿ ನಟನೆಗೆ ಫ್ಯಾನ್ಸ್ ಕಡೆಯಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಒಂದೊಳ್ಳೆ ವಿಭಿನ್ನ ಕಥೆಗೆ ನಟಿ ರಮ್ಯಾ ನಿರ್ಮಾಣದ ಮೂಲಕ…
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣಕ್ಕೆ ಇಂದಿಗೆ 153 ವರ್ಷಗಳ ಇತಿಹಾಸ. ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ನಿವೃತ್ತ ರೈಲ್ವೆ ಅಧಿಕಾರಿಗಳು ಕೇಕ್ ಕಟ್ ಮಾಡಿ, ಸಂಭ್ರಮಾಚರಣೆ ನಡೆಸಿದರು. ಬೆಂಗಳೂರಿನಲ್ಲಿ (Bengaluru) ರೈಲ್ವೆ ವೈಭವದ 153 ವರ್ಷಗಳ ಇತಿಹಾಸವನ್ನ ಸಾರ್ವಜನಿಕರಿಗೆ ತಿಳಿಸಲು ನೈರುತ್ಯ ರೈಲ್ವೆಯಿಂದ, ರೈಲು ನಿಲ್ದಾಣ ಮಹೋತ್ಸವ ಆಚರಿಸಲಾಯಿತು. KSR ರೈಲ್ವೆ ನಿಲ್ದಾಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಬೆಂಗಳೂರು ವಿಭಾಗದ ರೈಲ್ವೆ ಅಧಿಕಾರಿಗಳು ಭಾಗಿಯಾಗಿದ್ರು. ಹಲವು ವರ್ಷಗಳಿಂದ KSR ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿ, ನಿವೃತ್ತಿ ಹೊಂದಿದ ನೌಕರರು ಕೂಡ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡರು. ಬೆಂಗಳೂರಿಗೆ ಆಗಸ್ಟ್ 1, 1864 ರಲ್ಲಿ ಬಂದ ಮೊದಲ ರೈಲಿನಿಂದ ಹಿಡಿದು, ನಗರದಿಂದ ಯಾವೆಲ್ಲ ಪ್ರದೇಶಗಳಿಗೆ ರೈಲು ಮಾರ್ಗ ವಿಸ್ತರಿಸಿತು, ನಗರದ ಪ್ರಗತಿಗೆ ರೈಲು ಸೇವೆ ಹೇಗೆ ಸಹಾಯವಾಯ್ತು ಹಾಗೂ ಹಂತ ಹಂತವಾಗಿ ಬೆಳವಣಿಗೆಯ ಮೈಲಿಗಲ್ಲಿನ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಾಯಿತು.
ಬೆಂಗಳೂರು:ರಾಜ್ಯದ ವಿರೋಧ ಪಕ್ಷಸ ನಾಯಕರಾಗಿ ಮಾಜಿ ಸಚಿವ ಆರ್ ಅಶೋಕ್ ಆಯ್ಕೆ ಆಗಿದ್ದಾರೆ. ಈ ಹಿನ್ನೆಲೆ ಪಕ್ಷದ ಹಿರಿಯ ಮುಖಂಡರು ಸೇರಿ ಹಲವರು ಆರ್ ಅಶೋಕ್ ಅವರಿಗೆ ಶುಭ ಹಾರೈಸಿದ್ದಾರೆ. https://x.com/hd_kumaraswamy/status/1725559534826201174?t=Wm-fDvrr__zmXbOD2A1AsA&s=08 ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭನಗರ ಕ್ಷೇತ್ರದ ಶಾಸಕರಾದ ಅಶೋಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅಶೋಕ್ ಅವರು ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಪ್ರಬಲ ಹೋರಾಟ ನಡೆಸುವುದರ ಜತೆಗೆ, ರಾಜ್ಯದ ಜನರ ದನಿಯಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಲಿ ಎಂದು ಹಾರೈಸುತ್ತೇನೆ.
ಬಾಲಿವುಡ್ ಖ್ಯಾತ ನಟಿ ಮಾಧುರಿ ದೀಕ್ಷಿತ್ ರಾಜಕಾರಣಕ್ಕೆ ಪ್ರವೇಶ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಬಿಟೌನ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಹಲವಾರು ನಟ ನಟಿಯರು ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಮಾಧುರಿ ರಾಜಕೀಯ ಅಖಾಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಬಿಜೆಪಿಯಿಂದ ಟಿಕೆಟ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬಿಜೆಪಿಯ ಮುಖಂಡರು ಮಾಧುರಿಯನ್ನು ಸಂಪರ್ಕಿಸಿದ್ದಾರಂತೆ. ಅಲ್ಲದೇ, ಪುಣೆಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ ಎನ್ನಲಾಗುತ್ತಿದೆ. ಪುಣೆಯ ಲೋಕಸಭಾ ಕ್ಷೇತ್ರವು ಅತ್ಯಂತ ಪ್ರತಿಷ್ಠಿತ ಕಣವಾಗಿದ್ದು, ಇಲ್ಲಿಂದಲೇ ಮಾಧುರಿ ಅವರನ್ನು ಅಖಾಡಕ್ಕೆ ಇಳಿಸಲು ಚಿಂತನೆ ಮಾಡಲಾಗುತ್ತಿದೆ. ಬಿಜೆಪಿ ಮತ್ತು ಮಾಧುರಿ ನಡೆವೆ ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ಮಾಡಲಾಗಿದೆ. ಬಹುತೇಕ ಬಿಜೆಪಿಯನ್ನು ಮಾಧುರಿ ಸೇರುವುದು ಪಕ್ಕಾ ಎನ್ನುವ ಮಾಹಿತಿ ಇದೆ.
ಅಂಕಾರಾ: ಬ್ರಿಟನ್ (Britain) ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ 41 ಬಾರಿ ಸ್ಕ್ರೂಡ್ರೈವರ್ನಿಂದ ಇರಿದು ಹತ್ಯೆಗೈದ ಘಟನೆ ಟರ್ಕಿಯ (Turkey) ಇಸ್ತಾಂಬುಲ್ನ ಹೋಟೆಲ್ನಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಅಹ್ಮತ್ ಯಾಸಿನ್ (28) ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಪತ್ನಿಗೆ ಸ್ಕ್ರೂಡ್ರೈವರ್ ಇರಿದು ಹತ್ಯೆಗೈದಿರುವುದು ದೃಢವಾಗಿದೆ. ಮಹಿಳೆಯ ಕಿರುಚಾಟ ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಪ್ರವೇಶಿಸಿದಾಗ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. https://ainlivenews.com/what-happens-if-tea-coffee-is-given-to-children/ ದಂಪತಿ ಇಂಗ್ಲೆಂಡ್ನಿಂದ ಬಂದು ಹೊಟೆಲ್ನಲ್ಲಿ ತಂಗಿದ್ದರು ಎಂದು ತಿಳಿದು ಬಂದಿದೆ. ಡ್ರಗ್ಸ್ ಸೇವಿಸಿದ ಬಳಿಕ ಇಬ್ಬರ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಮಹಿಳೆಯ ಹತ್ಯೆಯ ಬಳಿಕ ಆರೋಪಿ ಸ್ಕ್ರೂಡ್ರೈವರ್ನ್ನು ಎಸೆದಿದ್ದು, ಸಾಕ್ಷ ನಾಶಕ್ಕೆ ಯತ್ನಿಸಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸೂಕ್ತ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ. ನಾವು ಯಾರಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪುವುದಿಲ್ಲ. ಹಾಗಂತ ನಾವು ದ್ವೇಷದ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮುಯ್ಯ (Siddaramaiah) ಹೇಳಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳೆ ಕುಮಾರಸ್ವಾಮಿ (HD Kumaraswamy) ಮನೆ ದೇವರು. ಕುಮಾರಸ್ವಾಮಿ ಹೊಟ್ಟೆಕಿಚ್ಚಿನಿಂದ ದ್ವೇಷದಿಂದ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಹೇಳುವುದೆಲ್ಲ ಸುಳ್ಳು. ಕುಮಾರಸ್ವಾಮಿ ಇವತ್ತಿನವರೆಗೆ ಯಾವುದಾದರೂ ಸತ್ಯ ಹೇಳಿದ್ರೆ ತೋರಿಸಿ. ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಿದ್ದಾರಾ ಹೇಳಿ. ಕುಮಾರಸ್ವಾಮಿ ಬರೀ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. ನಮ್ಮ ಮಗನ ವಿಚಾರದಲ್ಲಿ ನಿನ್ನೆ ಸುಮ್ಮನೆ ಸುಳ್ಳು ಹಬ್ಬಿಸಿದ್ರು. ನನ್ನ ಮಗ ನನಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದಾನೆ. ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪಾ. ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ. ಅದಕ್ಕೆ ಬೇರೆ ಬೇರೆ ಅರ್ಥ…
ಚೀನಾ: ತಂತ್ರಜ್ಞಾನ ವಲಯದಲ್ಲಿ ಜಗತ್ತಿನ ವೇಗಕ್ಕಿಂತ ಒಂದು ಹೆಜ್ಜೆ ಮುಂದಿರುವ ಚೀನಾ, ಇದೀಗ ವಿಶ್ವದ ಅತ್ಯಂತ ವೇಗದ ಇಂಟರ್ನೆಟ್ ಅನ್ನು ಅನಾವರಣಗೊಳಿಸಿದೆ. ಹೊಸ ತಲೆಮಾರಿನ ವೇಗದ ಇಂಟರ್ನೆಟ್ ಎಂದೇ ಬಣ್ಣಿಸಲಾಗಿರುವ ಇದರಲ್ಲಿ 1 ಸೆಕೆಂಡ್ಗೆ 1.2 ಟೆರಾಬೈಟ್ ವೇಗದಲ್ಲಿ ಮಾಹಿತಿ ರವಾನಿಸಬಹುದಾಗಿದೆ. ಅಂದರೆ ಒಂದು ಸೆಕೆಂಡ್ಗೆ ಎಚ್ಡಿ ಗುಣಮಟ್ಟದ 156 ಚಲನಚಿತ್ರಗಳನ್ನು ಒಂದೆಡೆಯಿಂದ ಇನ್ನೊಂದೆಡೆಗೆ ರವಾನಿಸಬಲ್ಲದು. ಇಡೀ ವಿಶ್ವದ ಜೀವನಾಡಿಯಾಗಿರುವ ಇಂಟರ್ನೆಟ್ ಸೆಕೆಂಡ್ಗೆ 100 ಗಿಗಾಬೈಟ್ ವೇಗದಲ್ಲಿ ಮಾಹಿತಿ ರವಾನಿಸುತ್ತಿದೆ. ಇನ್ನು ಅಮೆರಿಕ ಇತ್ತೀಚೆಗಷ್ಟೇ ತನ್ನ 5ನೇ ತಲೆಮಾರಿನ ಅಂದರೆ ಸೆಕೆಂಡ್ಗೆ 400 ಗಿಗಾಬೈಟ್ ವೇಗದ ಇಂಟರ್ನೆಟ್ ಅನಾವರಣಗೊಳಿಸಿತ್ತು. ಆದರೆ ಚೀನಾ ಜಾಗತಿಕ ಮಟ್ಟದಲ್ಲಿ ಲಭ್ಯವಿರುವ ವೇಗಕ್ಕಿಂತ 12 ಪಟ್ಟು ವೇಗದ ಇಂಟರ್ನೆಟ್ ವೇಗ ಸಾಧಿಸುವ ಮೂಲಕ ಜಾಗತಿಕ ಕಂಪನಿಗಳಿಗೆ ಸವಾಲು ಎಸೆದಿದೆ.