ಬೆಂಗಳೂರು: ರಾಮಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ (Congress) ನಾಯಕರ ಹೇಳಿಕೆಗಳು, ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಘಟನೆ, ಇದೆಲ್ಲವನ್ನೂ ನೋಡಿದಾಗ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. https://ainlivenews.com/see-how-many-health-benefits-drinking-buttermilk-has/ ರಾಮಮಂದಿರ (Ram Mandir) ಉದ್ಘಾಟನೆ ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲದಲ್ಲಿದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ, ಕರ್ನಾಟಕದಲ್ಲಿ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿ ಯವರನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಬಂಧನ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.
Author: AIN Author
ಜನವರಿ 22 ರಂದೇ ನಟ ನಿಖಿಲ್ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ (Nikhil Birthday). ಹೀಗಾಗಿ ಇದೇ ದಿನ ನಿಖಿಲ್ ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ಮಾಹಿತಿ ಹಂಚಿಕೊಂಡು ಕ್ಷಮೆ ಕೇಳಿದ್ದಾರೆ. ಪತ್ರದಲ್ಲೇನಿದೆ..?: ಜನವರಿ 22 ರಂದು ನನ್ನ ಹುಟ್ಟುಹಬ್ಬವಾಗಿದ್ದು, ಈ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಕ್ಷಮೆ ಇರಲಿ ಎಂದಿದ್ದಾರೆ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಬೇಕಿದೆ. ಹೀಗಾಗಿ ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಸಿದರೆ ಅದೇ ನನಗೆ ಸಂತೋಷ. https://ainlivenews.com/see-how-many-health-benefits-drinking-buttermilk-has/ ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ರೀತಿಯ ದುಂದುವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ ಆದಷ್ಟು ಬೇಗ ಭೇಟಿ ಮಾಡೋಣ ಎಂದಿದ್ದಾರೆ. ಒಟ್ಟಿನಲ್ಲಿ ರಾಮಂದಿರದ ಕಾರ್ಯಕ್ರಮದಲ್ಲಿ ಭಾಗಿ ಆಗ್ತಿರುವ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆಗೆ ನಿಖಿಲ್ ಅವರು ಬ್ರೇಕ್ ಹಾಕಿದ್ದಾರೆ.
ದಿಸ್ಪುರ್: ಮುಂದಿನ ಮೂರು ವರ್ಷಗಳಲ್ಲಿ ಭಾರತ ನಕ್ಸಲಿಸಂ ಮುಕ್ತ ರಾಷ್ಟ್ರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭರವಸೆ ಕೊಟ್ಟಿದ್ದಾರೆ. ಅಸ್ಸಾಂನ (Assam) ಸಲೋನಿಬರಿಯಲ್ಲಿ ಸಶಸ್ತ್ರ ಸೀಮಾ ಬಲದ 60ನೇ ಪುನರುತ್ಥಾನ ದಿನಾಚರಣೆಯ (Sashastra Seema Bal’s 60th Raising Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ಮುಂದಿನ ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ನಕ್ಸಲ್ ಸಮಸ್ಯೆಯಿಂದ 100% ಮುಕ್ತವಾಗಲಿದೆ ಎಂದಿದ್ದಾರೆ. https://ainlivenews.com/see-how-many-health-benefits-drinking-buttermilk-has/ ಎಲ್ಲಾ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಸಂಸ್ಕೃತಿ, ಇತಿಹಾಸ, ಭೂಗೋಳ ಮತ್ತು ಭಾಷೆಯನ್ನು ಸೂಕ್ಷ್ಮವಾಗಿ ಸಂಯೋಜಿಸುವಲ್ಲಿ ವಿಶಿಷ್ಟ ಪಾತ್ರ ವಹಿಸುತ್ತದೆ. ಅಲ್ಲದೇ ಗಡಿ ಪ್ರದೇಶಗಳಲ್ಲಿ ಜನರನ್ನು ದೇಶದ ಇತರ ಭಾಗಗಳಿಗೆ ಹತ್ತಿರವಾಗುವಂತೆ ಮಾಡುತ್ತದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಸಶಸ್ತ್ರ ಸೀಮಾ ಬಲದ 60ನೇ ಪುನರುತ್ಥಾನ ದಿನಾಚರಣೆಯ ಅಂಗವಾಗಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
ಚೆನ್ನೈ: ತಮಿಳುನಾಡಿಗೆ 3 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಮೇಶ್ವರಂನಲ್ಲಿರುವ ಶ್ರೀ ಅರುಲ್ಮಿಗು ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ 2.10ಕ್ಕೆ ಹೆಲಿಕಾಪ್ಟರ್ ಮೂಲಕ ರಾಮೇಶ್ವರಂ (Rameshwaram) ಪಕರುಂಬುವಿನ ಅಮೃತಾನಂದ ಶಾಲಾ ಆವರಣಕ್ಕೆ ಪ್ರಧಾನಿ ಮೋದಿ ಆಗಮಿಸಿದರು. ಅಲ್ಲಿಂದ ಮಧ್ಯಾಹ್ನ 3.10ಕ್ಕೆ ಅಗ್ನಿತೀರ್ಥದಲ್ಲಿ ಪುಣ್ಯಸ್ನಾನ ಮಾಡಿದರು. ನಂತರ ದೇವಸ್ಥಾನದಲ್ಲಿ ನಡೆಯುತ್ತಿದ್ದ ರಾಮಾಯಣ ಪಥ ಮತ್ತು ಭಜನಾ ಸಂಧ್ಯಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya) ನಡೆಯಲಿರುವ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದವರೆಗೆ 11 ದಿನಗಳ, https://twitter.com/ANI/status/1748675224806289713?ref_src=twsrc%5Etfw%7Ctwcamp%5Etweetembed%7Ctwterm%5E1748675224806289713%7Ctwgr%5E190836ded6dcbab334bc8fe2f30de9fd907917c8%7Ctwcon%5Es1_&ref_url=https%3A%2F%2Fpublictv.in%2Fpm-modi-takes-holy-dip-in-agni-theerth-beach-prays-at-rameswaram-temple%2F ವ್ರತದಲ್ಲಿರುವ ಪ್ರಧಾನಿ ಮೋದಿ ಶನಿವಾರ ತಿರುಚಿರಾಪಳ್ಳಿಗೆ ಆಗಮಿಸಿದರು. ಇದಕ್ಕೂ ಮುನ್ನ ಪ್ರಧಾನಿಯವರು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ತಮ್ಮ ಭೇಟಿಯ ವೇಳೆ ಮೋದಿ ಅವರು ದೇವಾಲಯದ ಆವರಣದಲ್ಲಿ ‘ಆಂಡಾಳ್’ ಎಂಬ ಆನೆಯ ಬಳಿಯಿಂದ ಆಶೀರ್ವಾದ ಪಡೆದರು.
ಬೆಂಗಳೂರು: ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರದಿಂದ ರಜೆ ಕೊಡೋದಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Sivakumar) ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಜೆ ಘೋಷಣೆ ಮಾಡಲು ಬಿಜೆಪಿಯಿಂದ (BJP) ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ನಮ್ಮ ಭಕ್ತಿ, ನಮ್ಮ ಗೌರವ, ನಮ್ಮ ಧರ್ಮ ಪ್ರಚಾರಕ್ಕೆ ನಾವು ಏನು ಮಾಡಲ್ಲ. ನಮ್ಮ ಭಾವನೆ ಇದೆಯಲ್ಲ. ನಮ್ಮ ಮಂತ್ರಿಗಳೇ ಎಲ್ಲಾ ದೇವಸ್ಥಾನಗಳಲ್ಲಿ ಮಾಡಬೇಕಾದ ಆಚರಣೆಗಳಿಗೆ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ. ಪೂಜೆ, ಪುನಸ್ಕಾರ ಏನು ಮಾಡಬೇಕೋ ಆ ಕೆಲಸ ಮಾಡ್ತಿದ್ದೇವೆ. ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ. https://ainlivenews.com/see-how-many-health-benefits-drinking-buttermilk-has/ ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಅಂತ ಹೇಳ್ತಿದ್ದೇವೆ ಎಂದರು. ಸಿದ್ದರಾಮಯ್ಯ (Siddaramaiah) ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ. ಯಾರು ಒತ್ತಡ ಹಾಕೋದು ಬೇಕಿಲ್ಲ. ನಮ್ಮ ಕರ್ತವ್ಯ ನಾವು ಮಾಡ್ತೀವಿ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು…
ಬೆಂಗಳೂರು: ಸೈದ್ಧಾಂತಿಕವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಎದುರಿಸುವ ಶಕ್ತಿ ಇಲ್ಲದಿದ್ದರೆ ನಿಮ್ಮ ಸೋಲನ್ನು ಒಪ್ಪಿಕೊಳ್ಳಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು (Ramesh Babu) ಅವರು ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಂಪ್ರದಾಯವಿದೆ. ಯಾವುದೇ ರಾಜಕಾರಣಿಯನ್ನು ವೈಯಕ್ತಿಕ ದ್ವೇಷದಿಂದ ಟೀಕಿಸುವುದು, https://ainlivenews.com/see-how-many-health-benefits-drinking-buttermilk-has/ ಕೆಳಮಟ್ಟದ ಟೀಕೆಗಳು ಮತ್ತು ಚಾರಿತ್ರ್ಯ ವಧೆ ಮಾಡುವಂತಹ ಟೀಕೆಗಳನ್ನು ಮಾಡುವುದು ಕಡಿಮೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ಕೆಲವು ಬಿಜೆಪಿ ನಾಯಕರುಗಳು ವ್ಯತಿರಿಕ್ತವಾಗಿ ತಮ್ಮ ವರ್ತನೆಯನ್ನು ಬದಲಾಯಿಸಿಕೊಂಡಿದ್ದಾರೆ. ಮನುಷ್ಯತ್ವ ಮರೆತು ಮಾತನಾಡುವರು, ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದರು.
ಬಿಗ್ ಬಾಸ್ ಮನೆಯಲ್ಲಿಈ ಬಾರಿ ಸಾಕಷ್ಟು ವಿಚಾರಗಳ ಬಗ್ಗೆ ಸುದೀಪ್ ಸ್ಪರ್ಧಿಗಳ ಜೊತೆ ಚರ್ಚಿಸಿದ್ದಾರೆ. ಇಡೀ ಸೀಸನ್ನಲ್ಲಿ ಉತ್ತಮವಾಗಿ ಆಡಿದವರಿಗೆ ಬಿಗ್ ಬಾಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಸಂಗೀತಾ (Sangeetha) ಮತ್ತು ವಿನಯ್ಗೆ (Vinay) ಕಿಚ್ಚನ ಕೊನೆಯ ಚಪ್ಪಾಳೆ ಸಿಕ್ಕಿದೆ. ದೊಡ್ಮನೆ ಆಟದಲ್ಲಿ ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್ ಮತ್ತು ವರ್ತೂರು ಸಂತೋಷ್ ಫಿನಾಲೆಗೆ ಟಿಕೆಟ್ ಪಡೆದು ಫೈನಲಿಸ್ಟ್ ಆಗಿದ್ದಾರೆ. ಇನ್ನೂ ಇಬ್ಬರಿಗೆ ಮಾತ್ರ ಫಿನಾಲೆಗೆ ಬರಲು ಅವಕಾಶ ಸಿಗಲಿದೆ. ಇದರ ನಡುವೆ ಈ ಸೀಸನ್ನಲ್ಲಿ ವಿನಯ್- ಸಂಗೀತಾ ಇಲ್ಲ ಅಂದ್ರೆ ಸಂಪೂರ್ಣ ಅಂತ ಅನಿಸೋದಿಲ್ಲ ಎಂದು ಇಬ್ಬರಿಗೆ ಮೆಚ್ಚುಗೆ ಸಲ್ಲಿಸುತ್ತಾ ಕಿಚ್ಚನ ಚಪ್ಪಾಳೆ ನೀಡಿದ್ದಾರೆ ಸುದೀಪ್. ಈ ವಾರಾಂತ್ಯ ಸುದೀಪ್ ಮಾತನಾಡಿ, ಕೆಲ ವಾರ ಕಿಚ್ಚನ ಚಪ್ಪಾಳೆ ಕೊಟ್ಟೆ, ಇನ್ನೂ ಕೆಲ ವಾರ ಚಪ್ಪಾಳೆ ಕೊಡಬೇಕು ಅಂತ ಅನಿಸಿರಲಿಲ್ಲ, ಕೊಡಲಿಲ್ಲ. ಈ ಜರ್ನಿಯಲ್ಲಿ ಬೈಸಿಕೊಂಡಿದ್ದಾರೆ, ತಪ್ಪು ಮಾಡಿದ್ದಾರೆ, ಅತ್ತಿದ್ದಾರೆ, ನಕ್ಕಿದ್ದಾರೆ. ಈ ಸೀಸನ್ನಲ್ಲಿ ವಿನಯ್,…
ಇಸ್ಲಾಮಾಬಾದ್: ಪಾಕ್ ನಟಿ ಸನಾ ಜಾವೇದ್ ಅವರನ್ನ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ (Shoaib Malik), ವಿವಾಹವಾಗಿದ್ದಾರೆ. ಈ ಕುರಿತ ಫೋಟೋಗಳನ್ನು ಸ್ವತಃ ಶೋಯೆಬ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈವರಿಬ್ಬರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಂತೆ ಪಾಕ್ ನಟಿ ಸನಾ ಜಾವೇದ್ (Sana Javed) ಯಾರು ಎಂಬ ಚರ್ಚೆ ಹುಟ್ಟಿಕೊಂಡಿದೆ. ಈ ಕುರಿತು ತಿಳಿಯಬೇಕಾದ್ರೆ ಮುಂದೆ ಓದಿ ಸನಾ ಜಾವೇದ್ ಬಗ್ಗೆ ನಿಮಗೆ ಗೊತ್ತಾ? ಸನಾ ಜಾವೇದ್ 1993ರ ಮಾರ್ಚ್ 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಜನಿಸಿದರು. 2012ರಲ್ಲಿ ತೆರೆಕಂಡಿದ್ದ ʻಶೆಹರ್-ಎ-ಝಾತ್ʼ ಹಾಸ್ಯ ಟಿವಿ ಕಾರ್ಯಕ್ರಮದ ಮೂಲಕ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದರು. ನಂತರದಲ್ಲಿ ʻಖಾನಿʼ ರೊಮ್ಯಾಂಟಿಕ್ ವೆಬ್ಸಿರೀಸ್ನಲ್ಲಿ ಕಾಣಿಸಿಕೊಂಡರು. ಈ ಬೆನ್ನಲ್ಲೇ ರುಸ್ವಾಯಿ, ಡಂಕ್ನಂತಹ ಸೀರಿಯಲ್ಗಳಲ್ಲೂ ಗುರುತಿಸಿಕೊಂಡು ಫೇಮಸ್ ಆದ್ರು. ʻಖಾನಿʼ (Khaani) ಸೀರಿಯಲ್ನಲ್ಲಿ ತೋರಿದ ಉತ್ತಮ ಅಭಿನಯಕ್ಕಾಗಿ ʻಲಕ್ಸ್ ಸ್ಟೈಲ್ ಅವಾರ್ಡ್ಸ್ʼಪ್ರಶಸ್ತಿ ಪಡೆಯುವಲ್ಲಿಯೂ ಸನಾ ಜಾವೇದ್ ಯಶಸ್ವಿಯಾದರು. ನಟಿಯಾಗಿದ್ದ ಜಾವೇದ್ 2020ರಲ್ಲಿ ಗೀತರಚನಕಾರ ಹಾಗೂ…
ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಆರ್.ಆರ್.ನಗರ ಪೊಲೀಸರು (R R Nagara Police)ಸಿಟಿ ಸಿವಿಲ್ ಕೋರ್ಟ್ ಗೆ ಸಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು. ನಟ ದರ್ಶನ್ ಅವರನ್ನೂ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿದ್ದಾರೆ. ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಉಲ್ಲೇಖ ಮಾಡಿದ್ದಾರೆ. ಅಕ್ಟೋಬರ್ 28 ರಂದು ದರ್ಶನ್ ಮನೆಯ ಮುಂದೆ ಈ ಘಟನೆ ನಡೆದಿದ್ದು, ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಮನೆಯ ನಾಯಿ ಕಚ್ಚಿತ್ತು. ಆಗ ಅಮಿತಾ ಜಿಂದಾಲ್ ಕೊಟ್ಟ ದೂರಿನ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಕೇರ್ ಟೇಕರ್ ಹೇಮಂತ್ ಹಾಗೂ ನಟ ದರ್ಶನ್ ಆರೋಪಿಗಳಾಗಿ ಮಾಡಿ ಎಫ್ ಐ ಆರ್ ದಾಖಲಾಗಿತ್ತು.
ಬಾದಾಮಿಯಂತಹ ವಿವಿಧ ಒಣ ಬೀಜಗಳು ಹೃದಯಕ್ಕೆ ಆರೋಗ್ಯಕರ ಆಹಾರಗಳಾಗಿವೆ. ಇದರೊಟ್ಟಿಗೆ ಕಡಲೆಕಾಯಿಯೂ ಅಷ್ಟೇ ಪರಿಣಾಮಕಾರಿಯಾಗಿದೆ. ನಾವು ಪ್ರತಿನಿತ್ಯ ಸಿಹಿ ಅಥವಾ ಖಾರದ ತಿನಿಸಿನೊಡನೆ ಕಡಲೇಕಾಯಿ ಬೀಜವನ್ನು ಸೇವನೆ ಮಾಡುತ್ತೇವೆ. ಇದರಲ್ಲಿ ಆರೋಗ್ಯಕ್ಕೆ ಅಗತ್ಯವಾದ ಪ್ರೋಟೀನ್, ಆರೋಗ್ಯಕರ ಕೊಬ್ಬು, ಪೋಷಕಾಂಶಗಳು ಹೇರಳವಾಗಿದೆ. ಹೀಗಾಗಿ ನಿಮ್ಮ ಆಹಾರ ಪದ್ದತಿಯಲ್ಲಿ ಕಡಲೆಕಾಯಿಯನ್ನು ಸೆರ್ಪಡೆ ಮಾಡಿಕೊಳ್ಳುವುದರ ಮೂಲಕವಾಗಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದಾಗಿದೆ. * ಕಡಲೆಕಾಯಿ ಕೊಲೆಸ್ಟ್ರಾಲ್ ನಿಯಂತ್ರಿಸಿ ಹೃದಯಕ್ಕೆ ರಕ್ಷಾ ಕವಚವಾಗುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಕಡಿಮೆ ಮಾಡುವ ಮೂಲಕ ಪಾಶ್ರ್ವವಾಯು ಬಾರದಂತೆ ಆರೋಗ್ಯ ಕಾಪಾಡುತ್ತದೆ. * ಸರಿಯಾದ ಪ್ರಮಾಣದಲ್ಲಿ ಕಡಲೇಕಾಯಿ ಸೇವಿಸುವುದರಿಂದ ಪುರುಷ ಮತ್ತು ಮಹಿಳೆಯರ ಪಿತ್ತಕೋಶದಲ್ಲಿ ಕಲ್ಲುಗಳು ಕಂಡು ಬರುವುದಿಲ್ಲ. * ಕಡಲೆಕಾಯಿಯಲ್ಲಿ ಹೆಚ್ಚಿನ ಅಂಶದ ಕ್ಯಾಲೋರಿ ಮತ್ತು ಕೊಬ್ಬು ಕಂಡು ಬಂದರೂ ಅವು ತೂಕ ಹೆಚ್ಚಿಸುವುದಿಲ್ಲ ,ಆರೋಗ್ಯಕರ ಕೊಬ್ಬು ಮತ್ತು ತೂಕ ಕಾಯ್ದುಕೊಳ್ಳುವ ಮೂಲಕ ಬೊಜ್ಜಿನ ದೇಹದ ಅಪಾಯ ತಡೆಯುತ್ತವೆ. * ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಿಸುವುದಿಲ್ಲ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಟೈಪ್ 2…