Author: AIN Author

ಹೋಟೆಲ್‌ಗಳಲ್ಲಿ ಸಾಮಾನ್ಯವಾಗಿ ರೋಟಿ, ಬಟರ್ ನಾನ್, ಕುಲ್ಚಾ ಮುಂತಾದ ಆಹಾರಗಳೊಂದಿಗೆ ಗ್ರೇವಿ ತಿಂದಿರುತ್ತೀರಿ. ಗ್ರೇವಿಗಳಲ್ಲಿ ಅನೇಕ ವಿಧಗಳಿವೆ. ಕಾಜೂ ಗ್ರೇವಿ, ಪನೀರ್ ಗ್ರೇವಿ, ಪಾಲಕ್ ಪನೀರ್ ಮುಂತಾದವುಗಳು ರೋಟಿಗಳಿಗೆ ಅದ್ಭುತ ಕಾಂಬಿನೇಷನ್ ಆಗಿದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಪಾಲಕ್ ಪನೀರ್ ಯಾವ ರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವರೀತಿ ತಯಾರಿಸುವುದು ಎಂಬುದನ್ನು ತಿಳಿದುಕೊಳ್ಳಿ ಬೇಕಾಗುವ ಸಾಮಗ್ರಿಗಳು: ಪಾಲಕ್ ಸೊಪ್ಪು – 1 ಕಪ್ ಪನೀರ್ ಕ್ಯೂಬ್ಸ್ – 100 ಗ್ರಾಂ ಪಲಾವ್ ಎಲೆ -2 ಜೀರಿಗೆ – ಅರ್ಧ ಚಮಚ ಚೆಕ್ಕೆ – ಸ್ವಲ್ಪ ಏಲಕ್ಕಿ – 1 ಬೆಣ್ಣೆ – 2 ಚಮಚ ಕಸೂರಿ ಮೇತಿ – 2 ಚಮಚ ಹಸಿರು ಮೆಣಸಿನ ಕಾಯಿ – 3 ಬೆಳ್ಳುಳ್ಳಿ – 5 ಎಸಳು ಶುಂಠಿ – ಅರ್ಧ ಇಂಚು ಗರಂ ಮಸಾಲ – ಅರ್ಧ ಚಮಚ ಅಚ್ಚ ಖಾರದ ಪುಡಿ – ಅರ್ಧ ಚಮಚ ಅರಶಿಣ –…

Read More

ಮೈಸೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದ ರೈತರಿಂದ 2.25 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಗಳಂತಹ ಅಧಿಕೃತ ಸಂಗ್ರಹಣ ಏಜೆನ್ಸಿಗಳು ರೈತರಿಂದ 1.71 ಲಕ್ಷ ಮೆ.ಟನ್‌ ಪರಿವರ್ತಿತ ಅಕ್ಕಿ ಸೇರಿ ಒಟ್ಟು 2.25 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಖರೀದಿಗೆ ಅನುಮತಿ ನೀಡಲಾಗಿದ್ದು, ಪ್ರತಿ ಎಕರೆಯಿಂದ ಕನಿಷ್ಠ 25 ರಿಂದ ಗರಿಷ್ಠ 40 ಕ್ವಿಂಟಾಲ್‌ವರೆಗೆ ಖರೀದಿಸಲಾಗುತ್ತಿದೆ. ನೋಂದಣಿ ಆರಂಭ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಟಾಸ್ಕ್‌ಫೋರ್ಸ್‌ ರಚಿಸಿ, ಸಭೆ ನಡೆಸಬೇಕು. ನ. 20ರೊಳಗೆ ಜಿಲ್ಲಾ ಮಟ್ಟದಲ್ಲಿಅಕ್ಕಿ ಗಿರಣಿಗಳ ಹಲ್ಲಿಂಗ್‌ ಸಾಮರ್ಥ್ಯ, ಭತ್ತ ಸಂಗ್ರಹಣ ಸಾಮರ್ಥ್ಯ, ಪರಿವರ್ತಿತ ಅಕ್ಕಿಯ ಸಾರವರ್ಧನೆ ಬಗ್ಗೆ ಟಾಸ್ಕ್‌ಫೋರ್ಸ್‌ನಿಂದ ಮಾಹಿತಿ ಸಂಗ್ರಹಿಸಬೇಕು. ಬೆಂಬಲ ಬೆಲೆಯಡಿ ಭತ್ತ ಖರೀದಿ ಬಗ್ಗೆ ಡಿ. 30ರವರೆಗೆ ರೈತರಿಗೆ ಸೂಕ್ತ ಮಾಹಿತಿ ನೀಡಬೇಕು. ಭತ್ತ…

Read More

ಮೆಸೇಜಿಂಗ್ ಪ್ಲ್ಯಾಟ್‌ಫಾರ್ಮ್‌ ವಾಟ್ಸಾಪ್ ತನ್ನ ಬಳಕೆದಾರರಿಗೆ ಹೊಸ ಹೊಸ ಫೀಚರ್‌ಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಅಂತೆಯೇ, ಇದೀಗ ವಾಟ್ಸಾಪ್ ದೊಡ್ಡ ಗುಂಪುಗಳಿಗೆ ವಾಯ್ಸ್‌ ಚಾಟ್‌ ವೈಶಿಷ್ಟ್ಯವನ್ನು ಅಧಿಕೃತವಾಗಿ ಹೊರತರಲು ಪ್ರಾರಂಭಿಸಿದೆ. ಈ ಬಗ್ಗೆ ವಾಟ್ಸಾಪ್ ಮಾಹಿತಿ ನೀಡಿದೆ. ಈ ಹಿಂದೆ ಬೀಟಾದಲ್ಲಿ ಗುರುತಿಸಲಾಗಿದ್ದ ಈ ವೈಶಿಷ್ಟ್ಯವು, ಈಗಾಗಲೇ ಲಭ್ಯವಿರುವ ಗ್ರೂಪ್ ಚಾಟ್ ವೈಶಿಷ್ಟ್ಯಕ್ಕಿಂತ ಬಹುವಿಧದಲ್ಲಿ ಭಿನ್ನವಾಗಿದೆ. ಸದ್ಯ ಇರುವ ಗ್ರೂಪ್ ಚಾಟ್ ವೈಶಿಷ್ಟ್ಯಕ್ಕಿಂತ ಹೊಸ ವಾಯ್ಸ್‌ ಚಾಟ್ ವೈಶಿಷ್ಟ್ಯ ಇನ್ನಷ್ಟು ಬಳಕೆದಾರ ಸ್ನೇಹಿಯಾಗಿದೆ. ಯಾಕೆಂದರೆ, ಗುಂಪಿನಲ್ಲಿರುವ ಪ್ರತಿಯೊಬ್ಬ ಸದಸ್ಯರಿಗೆ ರಿಂಗ್ ಮಾಡುವ ಗ್ರೂಪ್ ಚಾಟ್ ವೈಶಿಷ್ಟ್ಯಕ್ಕಿಂತ ಭಿನ್ನವಾಗಿ, ಇದರಲ್ಲಿ ಸಂದೇಶ ಸ್ವೀಕರಿಸುವವರಿಗೆ ರಿಂಗ್ ಮಾಡದೆ ಧ್ವನಿ ಚಾಟ್ ಅನ್ನು ಸದ್ದಿಲ್ಲದೆ ಪ್ರಾರಂಭಿಸಲಾಗುತ್ತದೆ. ಇದರಲ್ಲಿ ರಿಂಗಿಂಗ್ ಬದಲಿಗೆ ನೋಟಿಫಿಕೇಷನ್ ಹಾಗೂ ಇನ್-ಚಾಟ್ ಬಬಲ್ ಇರುತ್ತದೆ. ಅದು ಬಳಕೆದಾರರನ್ನು ಗ್ರೂಪ್‌ಗೆ ಸೇರಲು ಅನುವು ಮಾಡಿಕೊಡುತ್ತದೆ. ವಾಯ್ಸ್ ಚಾಟ್ ಆರಂಭಿಸುವುದು ಹೇಗೆ…? ವಾಯ್ಸ್ ಚಾಟ್ ಆರಂಭಿಸಬೇಕಾದರೆ ಬಳಕೆದಾರರು ಏನು ಮಾಡಬೇಕು ಎಂಬ ಬಗೆಗಿನ ಮಾಹಿತಿಯನ್ನು ಇಲ್ಲಿ ನೋಡೋಣ.…

Read More

ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದ ನಟ ನಾನಾ ಪಾಟೇಕರ್ (Nana Patekar) ಕೊನೆಗೂ ಕ್ಷಮೆ (Apologized) ಕೇಳಿದ್ದಾರೆ. ಶೂಟಿಂಗ್ ಸಮಯದಲ್ಲಿ ಫೋಟೋಗಾಗಿ ಅಭಿಮಾನಿಯೊಬ್ಬ ಪಾಟೇಕರ್ ಬಳಿ ಬಂದಿದ್ದ, ಅಭಿಮಾನಿಗೆ ಫೋಟೋ ಕೊಡುವ ಬದಲು, ಕಪಾಳಕ್ಕೆ ಬಾರಿಸಿದ್ದರು ನಾನಾ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ನಾನಾ ಪಾಟೇಕರ್ ಅಭಿಮಾನಿಯ ಕೆನ್ನೆಗೆ ಹೊಡೆದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಆ ವಿಡಿಯೋ ವೈರಲ್ ಕೂಡ ಆಗಿತ್ತು. ಅನೇಕರು ನಾನಾ ನಡೆಯನ್ನು ಖಂಡಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಸಿನಿಮಾದ ದೃಶ್ಯ ಎನ್ನುವಂತೆ ಬಿಂಬಿಸಲಾಗಿತ್ತು. ಆದರೆ, ಅದು ಸಿನಿಮಾದ ವಿಡಿಯೋ ಅಲ್ಲ ಎನ್ನುವುದನ್ನು ನಾನಾ ಒಪ್ಪಿಕೊಂಡಿದ್ದಾರೆ. ಅಭಿಮಾನಿಗೆ ಹೊಡೆದಿರುವುದು ನನಗೂ ನೋವಾಗಿದೆ. ಅವರು ನನ್ನ ಸಿನಿಮಾ ತಂಡದವರು ಅಂದುಕೊಂಡಿದ್ದೆ. ಆ ನಂತರ ನಾನು ಅವರನ್ನು ಹುಡುಕಿ ಕ್ಷಮೆ ಕೇಳೋಣ ಅಂದುಕೊಂಡಿದ್ದೆ. ಆದರೆ, ಅವರು ಭಯದಿಂದ ಓಡಿದ್ದರು. ನನ್ನಿಂದ ತಪ್ಪಾಗಿದೆ ದಯವಿಟ್ಟು ಕ್ಷಮಿಸಿ. ನಾನು ಎಂದೂ ಆ ರೀತಿ ಮಾಡಿದವನು ಅಲ್ಲ…

Read More

ಖರ್ಜೂರವು ಸಾಕಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ತೂಕ ನಷ್ಟಕ್ಕೆ ಸಹಕಾರಿಯಾಗುವುದರ ಜೊತೆಗೆ ಮೆದುಳಿನ ಆರೋಗ್ಯಕ್ಕೂ ಒಳ್ಳೆಯದು. ಇದು ಇನ್ನೇನೆಲ್ಲಾ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ ಅನ್ನೋದನ್ನು ತಿಳಿಯೋಣ. ಖರ್ಜೂರದ ಪೋಷಣೆ ಖರ್ಜೂರವು ಕಬ್ಬಿಣ ಮತ್ತು ನಾರಿನ ಜೊತೆಗೆ ಇತರ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಖರ್ಜೂರದಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಪೊಟ್ಯಾಶಿಯಂ ಇದೆ. ಇದರ ಜೊತೆಗೆ, ಕಾರ್ಬೋಹೈಡ್ರೇಟ್‌ಗಳು, ಸಕ್ಕರೆ, ವಿಟಮಿನ್ ಬಿ 6 ಸಹ ಖರ್ಜೂರದಲ್ಲಿ ಕಂಡುಬರುತ್ತವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ, ದೇಹವು ಈ ಎಲ್ಲಾ ಅಗತ್ಯ ಪೋಷಕಾಂಶಗಳನ್ನು ಉತ್ತಮ ಪ್ರಮಾಣದಲ್ಲಿ ಪಡೆಯುತ್ತದೆ. ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಖರ್ಜೂರವು ನೈಸರ್ಗಿಕ ಜೀವಸತ್ವಗಳು, ಅಗತ್ಯ ಅಮೈನೋ ಆಮ್ಲಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ. ಇದು ನಿಮ್ಮ ಮೆದುಳಿನ ಕೋಶಗಳ ಆರೋಗ್ಯವನ್ನು ಉತ್ತೇಜಿಸಲು ಮತ್ತು ನಿರ್ವಹಿಸಲು ಸಹಾಯ ಮಾಡುತ್ತದೆ. ಖರ್ಜೂರದಲ್ಲಿರುವ ಪೊಟ್ಯಾಸಿಯಮ್ ಅಂಶಗಳು ನಿಮ್ಮ ನರಮಂಡಲವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಮೆದುಳಿನ ಕಾರ್ಯವನ್ನು ಉತ್ತಮವಾಗಿಸುತ್ತದೆ. ​ಖರ್ಜೂರಗಳು ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತವೆ ರಕ್ತಹೀನತೆಯ…

Read More

ಆಗ್ರಾ: ಕುಟುಂಬದೊಂದಿಗೆ ತಾಜ್‌ ಮಹಲ್ ವೀಕ್ಷಣೆಗೆ ಬಂದಿದ್ದ ವೇಳೆ ಹಿರಿಯ ನಾಗರಿಕರೊಬ್ಬರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರ ಜೊತೆ ಇದ್ದ ಪುತ್ರ ಸಿಪಿಆರ್ ಮಾಡಿ ತಂದೆಯನ್ನು ಉಳಿಸಿಕೊಂಡಿದ್ದಾರೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೃದ್ಧರೊಬ್ಬರು ತಮ್ಮ ಕುಟುಂಬದೊಂದಿಗೆ ವಿಶ್ವ ಪ್ರಸಿದ್ಧ ಪ್ರೇಮ ಸೌಧ ತಾಜ್‌ ಮಹಲ್ ವೀಕ್ಷಣೆಗೆ ಆಗಮಿಸಿದ್ದರು. ಅಲ್ಲಿ ತಾಜ್ ಮಹಲ್ ಕಟ್ಟಡದೊಳಗೆ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಮಗ ತಂದೆಗೆ ಪ್ರಥಮ ಚಿಕಿತ್ಸೆಯ ಭಾಗವಾಗಿ ಸಿಪಿಆರ್ ಮಾಡಿದ್ದಾರೆ. ಈ ದೃಶ್ಯವನ್ನು ಅಲ್ಲಿದ್ದ ಇತರ ಪ್ರವಾಸಿಗರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಈ ದೃಶ್ಯ ವೈರಲ್ ಆಗಿದೆ.  ಮಗ ಮಾಡಿದ ಸಿಪಿಆರ್‌ನಿಂದಾಗಿ ತಂದೆ (Father) ಸ್ವಲ್ಪ ಹೊತ್ತಿನಲ್ಲೇ ಎಚ್ಚರಗೊಂಡಿದ್ದು, ಕೂಡಲೇ ಅವರನ್ನು ಕುಟುಂಬದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. https://www.youtube.com/watch?v=N1dDJ_dHIKA&ab_channel=Dailynewsvideo  ಸಿಪಿಆರ್‌  ಮಾಡಿದರೆ ವೈದ್ಯಕೀಯ ಪರಿಣಿತರು ರೋಗಿಯ ಸಹಾಯಕ್ಕೆ ಬರುವವರೆಗೂ ಅವರಲ್ಲಿ ರಕ್ತ ಸುಗಮವಾಗಿ ಚಲನೆಯಾಗುವಂತೆ ಮಾಡಬಹುದಾಗಿದೆ.  ಪ್ರಥಮ ಚಿಕಿತ್ಸಾ ತರಬೇತಿ ಇಲ್ಲದ ಜನರು ಸಹ ಸಿಪಿಆರ್ ಮಾಡುವ ಮೂಲಕ…

Read More

ಗದಗ: ಕುಡಿದ ಮತ್ತಿನಲ್ಲಿ ತಂದೆಯೇ ಹಸುಗೂಸನ್ನು ಹೊತ್ತು ತಂದು ಅಮಾನವೀಯವಾಗಿ ವರ್ತಿಸಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಗದುಗಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಮಗುವಿನ ತಾಯಿ ಗದಗ ತಾಲೂಕಿನ ಡಂಬಳ ಗ್ರಾಮ ಮತ್ತು ತಂದೆ ಸವಣೂರ ತಾಲೂಕಿನ ಕೃಷ್ಣಾಪುರದವರಾಗಿದ್ದು ಇಬ್ಬರೂ ಪ್ರೇಮ ವಿವಾಹವಾಗಿದ್ದು. ಯಾವುದೋ ಕಾರಣಕ್ಕೆ ಗಂಡ ಹೆಂಡತಿಯ ನಡುವೆ ಮನಸ್ಥಾಪ ಆಗಿ ಗಂಡ ಹಸುಗೂಸನ್ನು ಎತ್ತಿಕೊಂಡು ಗದಗದಿಂದ ತನ್ನೂರಿಗೆ ಹೋಗುವಾಗ ಲಕ್ಷೇಶ್ವರ ಪಟ್ಟಣಕ್ಕೆ ಬಂದಿದ್ದಾನೆ. ಲಕ್ಷೇಶ್ವರ ಬಸ್ ನಿಲ್ದಾಣದಲ್ಲಿ ವೃದ್ಧೆಯೋರ್ವರ ಕೈಯಲ್ಲಿ ಕೂಸನ್ನು ಕೊಟ್ಟು ಮದ್ಯ ಕುಡಿಯಲು ಹೋಗಿದ್ದನಂತೆ. ಈ ವೇಳೆ ತಾನು ಹೋಗುವ ಬಸ್ ಬಂದ ಹಿನ್ನಲೆ ವೃದ್ಧೆ ಕೂಸನ್ನು ಅಲ್ಲಿಯೇ ಬಿಟ್ಟು ಬಸ್ ಹತ್ತಿದ್ದಾಳೆ. ವಾಪಸ್ ಬಂದ ಪಾಪಿ ತಂದೆ ಕೂಸನ್ನು ಎತ್ತಿಕೊಂಡು ಹಸುಗೂಸಿನ ಪ್ರಜ್ಞೆಯೂ ಇಲ್ಲದೇ ರಸ್ತೆಯುದ್ದಕ್ಕೂ ಜೋತಾಡಿಸಿದ್ದಾನೆ. ತಾಯಿಯಿಂದ ಬೇರ್ಪಟ್ಟ ಕೂಸು ಹಸಿವು, ನೋವಿನಿಂದ ಕಿರಚಾಡಿದೆ. ಇದನ್ನು ಕಂಡು ಮಕ್ಕಳ ಕಳ್ಳನೆಂದು ಭಾವಿಸಿದ ಸಾರ್ವಜನಿಕರು…

Read More

ಭಾರತೀಯ ತಂಡವು ಕ್ರಿಕೆಟ್ ವಿಶ್ವಕಪ್ ಫೈನಲ್‌ಗೆ ತಲುಪಿದ ನಂತರ, ಸ್ಪೋರ್ಟ್ಸ್ ಫೀವರ್ ಹಿಂದೆ ದೇಶವನ್ನು ಹಿಡಿಯಲಿಲ್ಲ. ರಾಷ್ಟ್ರವು “ಪುರುಷರಲ್ಲಿ ಪುರುಷರನ್ನು” ಉತ್ಸಾಹದಿಂದ ಬೆಂಬಲಿಸುತ್ತಿದ್ದಂತೆ, ಅಂತಿಮ ಪಂದ್ಯದಲ್ಲಿ ಗೆಲುವು ಹೇಗೆ ಪಡೆಯುವುದು ಎಂಬ ಪ್ರಶ್ನೆಗಳು ತಂಡದ ಹಿಂದೆ ರ್ಯಾಲಿ ಮಾಡುವ ಪ್ರತಿಯೊಬ್ಬರ ಆಲೋಚನೆಗಳು ಮತ್ತು ಚರ್ಚೆಗಳಲ್ಲಿ ಪ್ರಾಬಲ್ಯ ಹೊಂದಿವ ಈಗ-ವೈರಲ್ ವೀಡಿಯೊದಲ್ಲಿ, ಸಾಧಗುರು ಅವರ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಂಡಿದ್ದಾರೆ, ಒಬ್ಬ ವ್ಯಕ್ತಿಯು ವಿಶ್ವಕಪ್ ಅನ್ನು ಮರಳಿ ತರಲು ಭಾರತೀಯ ಕ್ರಿಕೆಟ್ ತಂಡಕ್ಕೆ ಒಂದು ಸಲಹೆಗಾಗಿ ಸದ್ಗುರು ಅವರನ್ನು ಕೇಳಿದರು. ತನ್ನ ಅಸಮರ್ಥ ಶೈಲಿಯಲ್ಲಿ ಪ್ರತಿಕ್ರಿಯಿಸುತ್ತಾ, ಸದ್ಗುರು, “ಕಪ್ ಗೆಲ್ಲಲು ಪ್ರಯತ್ನಿಸಬೇಡಿ, ಡ್ಯಾಮ್ ಚೆಂಡನ್ನು ಹೊಡೆಯಿರಿ! ಈ 1 ಬಿಲಿಯನ್ ಜನರು ಕಪ್‌ಗಾಗಿ ಬೇಯಿಸುವ ಬಗ್ಗೆ ನೀವು ಯೋಚಿಸಿದರೆ, ನೀವು ಚೆಂಡನ್ನು ಕಳೆದುಕೊಳ್ಳುತ್ತೀರಿ, ಅಥವಾ ನೀವು ವಿಶ್ವಕಪ್ ಗೆದ್ದರೆ ಸಂಭವಿಸುವ ಇತರ ಎಲ್ಲ ಕಾಲ್ಪನಿಕ ಸಂಗತಿಗಳ ಬಗ್ಗೆ ಯೋಚಿಸಿದರೆ, ಚೆಂಡು ನಿಮ್ಮ ವಿಕೆಟ್‌ಗಳನ್ನು ಹೊಡೆದುರುಳಿಸುತ್ತದೆ. ” ಹಾಗಾದರೆ, ಈ ವಿಶ್ವಕಪ್ ಗೆಲ್ಲುವುದು ಹೇಗೆ?…

Read More

ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ನ್ಯೂಜಿಲೆಂಡ್‌ ಹೈವೋಲ್ಟೇಜ್‌ ಸೆಮಿಫೈನಲ್‌ ಪಂದ್ಯ ವೀಕ್ಷಣೆಗೆ ಮಾಜಿ ಕ್ಯಾಪ್ಟನ್‌ ಧೋನಿ (M.S.Dhoni) ಬರುತ್ತಾರೆಂದು ಅಭಿಮಾನಿಗಳು ಊಹಿಸಿದ್ದರು. ಆದರೆ ಮಾಹಿ ಅನುಪಸ್ಥಿತಿ ಅಭಿಮಾನಿಗಳ ಊಹೆಯನ್ನು ಸುಳ್ಳಾಗಿಸಿದೆ. ಇತ್ತ ಹೈವೋಲ್ಟೇಜ್‌ ಪಂದ್ಯ ನಡೆಯುತ್ತಿದ್ದರೆ, ಅತ್ತ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್‌ ಪತ್ನಿಯೊಂದಿಗೆ ತಮ್ಮ ಪೂರ್ವಜರ ಮನೆಯಲ್ಲಿ ಸಮಯ ಕಳೆದಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪ್ರಪಂಚದಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಬುಧವಾರ, ಭಾರತವು ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯ ಆಡಿದ್ದ ವೇಳೆ, ಅನೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎಂ.ಎಸ್‌.ಧೋನಿಯನ್ನು ನೋಡುವ ಉತ್ಸುಕದಲ್ಲಿದ್ದರು. ಆದರೆ, ನೆಚ್ಚಿನ ಪ್ರೀತಿಯ ಕೂಲ್‌ ಕ್ಯಾಪ್ಟನ್‌ ಎಂದೇ ಖ್ಯಾತಿ ಗಳಿಸಿದ್ದ ಧೋನಿ ತನ್ನ ಪತ್ನಿಯೊಂದಿಗೆ ಉತ್ತರಾಖಂಡದ ತನ್ನ ಪೂರ್ವಜರ ಹಳ್ಳಿಗೆ ಹೋಗಿದ್ದರು. ಧೋನಿ ಪತ್ನಿ ಸಾಕ್ಷಿ ಸಿಂಗ್ ಅವರು, ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿರುವ ಸುಂದರವಾದ ಲ್ವಾಲಿ ಗ್ರಾಮದಲ್ಲಿ ಇಬ್ಬರೂ…

Read More

ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಇಂದು ನಡೆಯಲಿರುವ ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಜರಾಗುವ ನಿರೀಕ್ಷೆಯಿದೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ…

Read More