ಹುಬ್ಬಳ್ಳಿ:- ಮುಂದಿನ ತಿಂಗಳಿಂದ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯದ ಜೊತೆಗೆ ರಾಗಿ ಮಾಲ್ಟ್ ಅಥವಾ ಗಂಜಿ ಭಾಗ್ಯ ಯೋಜನೆಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರದ ಮುಖ್ಯ ಮಂತ್ರಿಗಳಿಗೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಿ.ರಾಜ್ಯ ಘಟಕ ಹುಬ್ಬಳ್ಳಿ ಇದರ ರಾಜ್ಯಾಧ್ಯಕ್ಷ ಅಶೋಕ.ಎಮ್.ಸಜ್ಜನ.ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ರಾಜ್ಯ ಕಾರ್ಯಾಧ್ಯಕ್ಷರಾದ ಶರಣಪ್ಪಗೌಡ್ರ.ಆರ್.ಕೆ.ಎಮ್.ವಿ.ಕುಸುಮಾ.ರಾಜ್ಯ ಗೌರವಾಧ್ಯಕ್ಷರಾದ ಎಲ್.ಆಯ್.ಲಕ್ಕಮನವರ.ಶಿಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ ಮೇಟಿ. ಹಾಗೂ ರಾಜ್ಯ ಜಿಲ್ಲೆ ತಾಲೂಕಾ ಹಂತದ ಪದಾಧಿಕಾರಿಗಳು ಸ್ವಾಗತಿಸಿ ಹರ್ಷವ್ಯಕ್ತಪಡಿಸಿದ್ದಾರೆ. ಸಿರಿಧಾನ್ಯಯುಕ್ತ ಆಹಾರವನ್ನು ವಾರದಲ್ಲಿ ಒಂದೆರಡು ದಿನಗಳಾದರೂ ಶಾಲಾ ವಿದ್ಯಾರ್ಥಿಗಳಿಗೆ ನೀಡಬೇಕೆಂದು ನಮ್ಮ ಸಂಘವು ಬಹುಬ ದಿನಗಳಿಂದ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತಾ ಬಂದಿದ್ದೆವು.ಈಗ ನೂತನ ಸರ್ಕಾರ ಮಕ್ಕಳ ಆಹಾರ ಪದ್ಧತಿಯಲ್ಲಿ ಪೌಷ್ಟಿಕಾಂಶ ನಾರಿನಾಂಶ ಸರಳ ಜೀರ್ಣ ಕ್ರಿಯೆ ಹೊಂದಿರುವ ರಾಗಿ ಮಾಲ್ಟ್ ಅತ್ಯಂತ ಅನುಕೂಲಕರವಾಗಿದೆ.ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಸರದಿ ಪ್ರಕಾರ ಎಲ್ಲಾ…
Author: AIN Author
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಸಸ್ಪಂಡ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ. ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುತ್ತಾರೆ ಎಂದು ಅವರು ಹೇಳಿದ್ದಾರೆ. ಅಮಾನತು ಹಿನ್ನೆಲೆ: ಪಕ್ಷದ…
ಕಲಬುರಗಿ :ಈ ಕಾಂಗ್ರೆಸ್ ಸರ್ಕಾರ ಬಂದು ಏಳು ತಿಂಗಳು ಕಳೆಯುತ್ತಾ ಬರುತ್ತಿದೆ ಆದರೆ ಇಲ್ಲಿಯವರೆಗೆ ಒಂದೇ ಒಂದು ಹೊಸ ಪಡಿತರ ಚೀಟಿ ನೀಡಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗು ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತಲ್ಕೂರ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ತೆಲ್ಕೂರ್ ಹೊಸ ಪಡಿತರ ಚೀಟಿ ಪಡೆಯಬೇಕು ಎಂದು ರಾಜ್ಯದಲ್ಲಿ ಲಕ್ಷಾಂತರ ಜನರು ಅರ್ಜಿ ಸಲ್ಲಿಸಿದ್ದಾರೆ. ಎಲ್ಲಿ ಬಡವರಿಗೆ ಅನ್ನಭಾಗ್ಯದ ಹಣ ಹಾಗೂ ಗೃಹಲಕ್ಷ್ಮಿ ಹಣ ನೀಡಬೇಕಾಗಿ ಬರುತ್ತದೆ ಎನ್ನುವ ಭಯದಲ್ಲಿ ಸುಮಾರು 2ಲಕ್ಷ 95 ಸಾವಿರ ಕುಟುಂಬಗಳಿಗೆ ಪಡಿತರ ಚೀಟಿ ನೀಡದೇ ಬಾಕಿ ಉಳಿಸಿಕೊಂಡಂತೆ ಕಾಣುತ್ತಿದೆ ಅಂತ ಆರೋಪಿಸಿದ್ದಾರೆ…
ಬೆಂಗಳೂರು:- ನರೇಗಾ ಯೋಜನೆಯಲ್ಲಿ ಮಾನವ ದಿನಗಳನ್ನ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬರಗಾಲವಿರುವ ಕಾರಣ ನರೇಗಾ ಯೋಜನೆಯ ಮಾನವ ದಿನಗಳನ್ನು 100 ದಿನಗಳ ಬದಲು 150 ದಿನಗಳಿಗೆ ಏರಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದರು. ಕನಕಪುರ ತಾಲೂಕಿನಲ್ಲಿ ಪ್ರತಿ ರೈತರಿಗೂ ನರೇಗಾ ಯೋಜನೆಯ ಲಾಭ ದೊರೆಯುವಂತೆ ಮಾಡಿದ್ದೇನೆ. ಸಾಕಷ್ಟು ಜನ ರೈತರು ಕೊಟ್ಟಿಗೆ ಸೇರಿದಂತೆ ಸಾಕಷ್ಟು ಅನುಕೂಲ ಮಾಡಿಕೊಂಡಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ನಮ್ಮ ತಾಲೂಕಿಗೆ ಉತ್ತಮವಾಗಿ ನರೇಗಾ ಯೋಜನೆ ಬಳಸಿಕೊಂಡ ತಾಲೂಕು ಎಂದು ವಿಧಿಯಿಲ್ಲದೇ ಪ್ರಶಸ್ತಿ ನೀಡಬೇಕಾಯಿತು” ಎಂದರು. ನಾನು ರಾಜ್ಯದ ಎಲ್ಲ ಸಂಸದರಿಗೆ ಮತ್ತು ರೈತರ ಮಕ್ಕಳು ಎಂದು ಹೇಳಿಕೊಂಡು ಬಿಜೆಪಿ ಜೊತೆ ಸೇರಿರುವವರ ಬಳಿ ಕೈ ಮುಗಿದು ಕೇಳುತ್ತೇನೆ, ಇಡೀ ರಾಜ್ಯದ ಇತಿಹಾಸದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿವೆ. ನರೇಗಾ ಯೋಜನೆ ಪ್ರಕಾರ ಬರಗಾಲ ಬಂದಾಗ ಮಾನವ ದಿನಗಳನ್ನು…
ಪೀಣ್ಯ ದಾಸರಹಳ್ಳಿ: ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯ ಅಕಾಡೆಮಿ ಹಾಗೂ ಇಚ್ಚಾ ಫೌಂಡೇಶನ್ ಸಹಯೋಗದೊಂದಿಗೆ ತಮಿಳುನಾಡಿನ ಹೊಸೂರು ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಸಮಾರಂಭ ಜರುಗಿತು. ಮ್ಯೆಸೂರಿನ ಅರ್.ಭಾಗ್ಯ ಅವರ ಸಂಘಟನಾ ಕೌಶಲ್ಯ ಹಾಗೂ ಸಮಾಜ ಸೇವೆ ಮತ್ತು ವರ್ಷಿತಾ ಸೇವಾ ಪೌಂಡೇಶನ್ ಸಂಸ್ಥೆ ಕರುನಾಡ ರಕ್ಷಣಾ ಪರಿಷತ್ ಯಲ್ಲಿನ ಸೇವೆ ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ಅವರು ‘ನನ್ನ ಸ್ನೇಹಿತರ ಹಾಗೂ ಹಿತೈಷಿಗಳ ಸಹಕಾರದಿಂದ ನಾನು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದು, ಈ ನನ್ನ ಸೇವೆ ಮುತ್ತು ಸಂಘಟನೆಯಲ್ಲಿನ ಕಾರ್ಯಗಳನ್ನು ಹಾಗೂ ಸೇವೆಯನ್ನು ಗುರುತಿಸಿ ವಿವಿಧ ಆಯಾಮಗಳನ್ನ ಮಾಡಿ ಸಮಾಜದಲ್ಲಿನ ಹೋರೆ ಕೋರೆಗಳನ್ನು ತಿದ್ದುವ ಕಾರ್ಯವನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿಯವರು ನನಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದ್ದು ತುಂಬಾ ಖುಷಿಯಾಗಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಡವರಿಗೆ ಹಾಗೂ ಕಾರ್ಮಿಕರಿಗೆ ಸಹಾಯ…
ಚಿತ್ರದುರ್ಗ:- ರಾಜ್ಯದಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, ಭರ್ತಿ ಮಾಡುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, PSI ಹಗರಣದಿಂದ ಗೊಂದಲ ಉಂಟಾಗಿದ್ದು. ಮರು ಪರೀಕ್ಷೆಗೆ ಈಗಾಗಲೇ ಸಿದ್ದತೆ ನಡೆದಿದೆ. 1000 PSI ಹಂತ ಹಂತವಾಗಿ ನೇಮಕಕ್ಕೆ ಸರ್ಕಾರ ಸಿದ್ದವಿದೆ. 3000 ಸಾವಿರ ಪೊಲೀಸ್ ಪೇದೆ ಹುದ್ದೆಗೆ ನೇಮಕಾತಿಗೆ ತಯಾರಿ ನಡೆಸುತ್ತಿದ್ದೇವೆ. DCRE ಸೆಲ್ ಗಳಿಗೆ ನಾವು ದೂರು ಸ್ವೀಕರಿಸಲು ಅಧಿಕಾರ ನೀಡಿದ್ದೇವೆ ಎಂದರು. ಇನ್ನೂ ಮುರುಘಾ ಶ್ರೀ ಕೇಸ್ ವಿಚಾರವಾಗಿ ಮಾತನಾಡಿ, ಕೋರ್ಟ್ ಆದೇಶ ಏನೂ ಬಂದಿದೆ, ಚಾಚು ತಪ್ಪದೇ ಪಾಲಿಸುತ್ತೇವೆ. ಕೋರ್ಟ್ ನಲ್ಲಿ ವಿಷಯ ಇರುವುದರಿಂದ ಕೋರ್ಟ್ ಆದೇಶದಂತೆ ನಡೆದುಕೊಳ್ಳುತ್ತೇವೆ ಎಂದರು. CM ಪಟಾಲಂ ನನ್ನ ಕಳ್ಳನಾಗಿ ಮಾಡುತ್ತಿದ್ದಾರೆ ಎಂಬ HDK ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಆಗಿ ಎರಡು ಬಾರಿ HDK ಕೆಲಸ ಮಾಡಿದ್ದಾರೆ. ಟೀಕೆ ಟಿಪ್ಪಣಿ ಮಾಡಲಿ ನಾವು ಬೇಡ ಎಂದು ಹೇಳಲ್ಲ. ಸಲಹೆ ಬೇಕು…
ಗದಗ: ಕುಡಿದ ಮತ್ತಿನಲ್ಲಿ ತಂದೆಯೇ ಹಸುಗೂಸನ್ನು ಹೊತ್ತು ತಂದು ಅಮಾನವೀಯವಾಗಿ ವರ್ತಿಸಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಗದುಗಿನ ಖಾಸಗಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ಮಗುವಿನ ತಾಯಿ ಗದಗ ತಾಲೂಕಿನ ಡಂಬಳ ಗ್ರಾಮ ಮತ್ತು ತಂದೆ ಸವಣೂರ ತಾಲೂಕಿನ ಕೃಷ್ಣಾಪುರದವರಾಗಿದ್ದು ಇಬ್ಬರೂ ಪ್ರೇಮ ವಿವಾಹವಾಗಿದ್ದು. ಯಾವುದೋ ಕಾರಣಕ್ಕೆ ಗಂಡ ಹೆಂಡತಿಯ ನಡುವೆ ಮನಸ್ಥಾಪ ಆಗಿ ಗಂಡ ಹಸುಗೂಸನ್ನು ಎತ್ತಿಕೊಂಡು ಗದಗದಿಂದ ತನ್ನೂರಿಗೆ ಹೋಗುವಾಗ ಲಕ್ಷೇಶ್ವರ ಪಟ್ಟಣಕ್ಕೆ ಬಂದಿದ್ದಾನೆ. ಲಕ್ಷೇಶ್ವರ ಬಸ್ ನಿಲ್ದಾಣದಲ್ಲಿ ವೃದ್ಧೆಯೋರ್ವರ ಕೈಯಲ್ಲಿ ಕೂಸನ್ನು ಕೊಟ್ಟು ಮದ್ಯ ಕುಡಿಯಲು ಹೋಗಿದ್ದನಂತೆ. ಈ ವೇಳೆ ತಾನು ಹೋಗುವ ಬಸ್ ಬಂದ ಹಿನ್ನಲೆ ವೃದ್ಧೆ ಕೂಸನ್ನು ಅಲ್ಲಿಯೇ ಬಿಟ್ಟು ಬಸ್ ಹತ್ತಿದ್ದಾಳೆ. ವಾಪಸ್ ಬಂದ ಪಾಪಿ ತಂದೆ ಕೂಸನ್ನು ಎತ್ತಿಕೊಂಡು ಹಸುಗೂಸಿನ ಪ್ರಜ್ಞೆಯೂ ಇಲ್ಲದೇ ರಸ್ತೆಯುದ್ದಕ್ಕೂ ಜೋತಾಡಿಸಿದ್ದಾನೆ. ತಾಯಿಯಿಂದ ಬೇರ್ಪಟ್ಟ ಕೂಸು ಹಸಿವು, ನೋವಿನಿಂದ ಕಿರಚಾಡಿದೆ. ಇದನ್ನು ಕಂಡು ಮಕ್ಕಳ ಕಳ್ಳನೆಂದು ಭಾವಿಸಿದ ಸಾರ್ವಜನಿಕರು…
ಬಳ್ಳಾರಿ:- ದಸರಾ ಹಾಗೂ ದೀಪಾವಳಿ ನೆಪದಲ್ಲಿ ಇಲಾಖೆ ಹೆಸರಿನಲ್ಲಿ ಅಗ್ನಿಶಾಮಕ ದಳದ ನೌಕರ ಎಂ.ಪ್ರಭಾಕರ್ ಸ್ವಾಮಿ ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಪ್ರತಿ ಅಂಗಡಿಗೆ ತೆರಳಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಬ್ಬದ ನೆಪದಲ್ಲಿ ಪೆಟ್ರೋಲ್ ಬಂಕ್, ರಸಗೊಬ್ಬರ, ಮದ್ಯದಂಗಡಿ ಸೇರಿದಂತೆ ವಿವಿಧ ಕಡೆ 500 ರಿಂದ 1000 ರೂ.ವರೆಗೆ ಚಂದಾ ವಸೂಲಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಕುರಿತು ಠಾಣೆಯ ಅಗ್ನಿಶಾಮಕ ವಾಹನ ಚಾಲಕ ಶಾಂತಪ್ಪ ಅವರು, ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಹೀಗಾಗಿ ಶಾಂತಪ್ಪ ಸೇರಿದಂತೆ ಕೆಲ ಸಿಬ್ಬಂದಿಯು, ಪ್ರಭಾಕರ್ ಸ್ವಾಮಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು:- ವಿ.ಸೋಮಣ್ಣ ಕಾಂಗ್ರೆಸ್ ಸೇರಿದರೆ ನಮ್ಮದೇನು ತಕರಾರಿಲ್ಲ ಎಂದು ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಾಜಿ ಸವಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಿದರೆ ನಮ್ಮದೇನು ತಕರಾರು ಇಲ್ಲ. ಅವರು ಬಂದ್ರೆ ನಾವು ಸ್ವಾಗತ ಮಾಡುತ್ತೇವೆ. ಏನು ಬೆಳವಣಿಗೆ ಆಗುತ್ತಿದೆ ಎಂದು ಗೊತ್ತಿಲ್ಲ. ಸೋಮಣ್ಣ ಅವರು ಬಿಜೆಪಿ ಪ್ರಭಾವಿ ಮುಖಂಡರಾಗಿದ್ದಾರೆ. ಅವರು ಕಾಂಗ್ರೆಸ್ಗೆ ಬಂದರೆ ಸ್ವಾಗತ ಮಾಡುತ್ತೇವೆ. ರಾಜಕೀಯ ರಂಗದಲ್ಲಿ ಅವರದ್ದೇ ಆದ ಶಕ್ತಿ ಇರುತ್ತದೆ ಎಂದು ತಿಳಿಸಿದರು. ಪುತ್ತೂರಿನಲ್ಲಿ ಬಜರಂಗದಳದವರ ಗಡಿಪಾರು ಮಾಡಲು ನೋಟಿಸ್ ನೀಡಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಯಾರೂ ಸಹ ಕಾನೂನನ್ನು ಹೊರತು ಪಡಿಸಿ ಕೆಲಸ ಮಾಡಲಾಗಲ್ಲ. ಇಲಾಖೆಯಲ್ಲಿ ಬೇರೇನೂ ಕೆಲಸ ಮಾಡಲಾಗಲ್ಲ. ಬಜರಂಗದಳದವರಾಗಲಿ, ಬೇರೆಯವರೇ ಇರಲಿ, ಸಂಘ – ಸಂಸ್ಥೆಗಳಿರಲಿ ಹಾಗೂ ವೈಯಕ್ತಿಕವೇ ಇರಲಿ ಕಾನೂನಿನ ಚೌಕಟ್ಟಿನಲ್ಲಿ ಇದ್ದರೆ ನಮ್ಮ ಸಹಕಾರ ಇರುತ್ತದೆ. ಪೊಲೀಸ್ ಇಲಾಖೆ ಇರೋದು ಯಾಕೆ? ಎಂದು ಪ್ರಶ್ನಿಸಿದರು. ಪೊಲೀಸ್ ಇರುವುದು ಕಾನೂನು ವಿರುದ್ಧ ಇರುವವರ ಮೇಲೆ ಕ್ರಮ…
ಬೆಂಗಳೂರು:- ಲುಲು ಮಾಲ್ ಜಮೀನಿನ ಕುರಿತು ಕುಮಾರಸ್ವಾಮಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏನೇನು ಪಟ್ಟಿ ಕೊಡ್ತಾರೆ, ಅದಕ್ಕೆ ಲೆಕ್ಕ ಕೊಡೋಣ. ತಪ್ಪು ಮಾಡಿದ್ದರೆ ಬೇಕಾದರೆ ಗಲ್ಲಿಗೆ ಹಾಕಲಿ ಎಂದರು. ಜನರೇ ಅವರಿಗೆ ಉತ್ತರ ಕೊಟ್ಟಿದ್ದಾರೆ. ಅವರ ಮಾತು, ಆಚಾರ, ವಿಚಾರಕ್ಕೆ ಉತ್ತರ ನೀಡಿದ್ದಾರೆ. ಇನ್ನೂ ಏನು ಬೇಕಾದರೂ ನಾನು ಉತ್ತರ ಕೊಡುತ್ತೇನೆ. ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರ ಒಂದು ಸಂಸ್ಥೆಯದ್ದು. ಅವರು ದಾಖಲೆ ಮಾಡಿ ಟೆಂಡರ್ ಹಾಕಿದ್ದಾರೆ. ಅದನ್ನು ನಮ್ಮ ಸ್ನೇಹಿತರು ತೆಗೆದುಕೊಂಡಿದ್ದರು. ಅದನ್ನು ನಾನು ಅವರ ಬಳಿ ತೆಗೆದುಕೊಂಡಿದ್ದೇನೆ. ಏನಾದರೂ ತಪ್ಪು ಮಾಡಿದ್ದರೆ ಬೇಕಾದರೆ ಗಲ್ಲಿಗೆ ಹಾಕಲಿ. ಅವರಿಗೆ ಇನ್ನೂ ಗೊತ್ತಿಲ್ಲ. ಅವರ ತಂದೆ 10-15 ವರ್ಷದ ಹಿಂದೆಯೇ ತನಿಖೆ ಮಾಡಿಸಿದ್ದಾರೆ” ಎಂದರು ಎಲ್ಲದಕ್ಕೂ ನಾನು ರೆಡಿ ಇದ್ದೇನೆ. ಈ ಬ್ಲಾಕ್ಮೇಲ್ಗೆ ನಾನು ಹೆದರಲ್ಲ. ಅವರಿಗೆ ಏನು ದಾಖಲೆ ಬೇಕೋ…