Author: AIN Author

ಬೆಂಗಳೂರು: ಸೈದ್ಧಾಂತಿಕವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಎದುರಿಸುವ ಶಕ್ತಿ ಇಲ್ಲದಿದ್ದರೆ ನಿಮ್ಮ ಸೋಲನ್ನು ಒಪ್ಪಿಕೊಳ್ಳಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು (Ramesh Babu) ಅವರು ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ. ಕೆಪಿಸಿಸಿ‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಂಪ್ರದಾಯವಿದೆ. ಯಾವುದೇ ರಾಜಕಾರಣಿಯನ್ನು ವೈಯಕ್ತಿಕ ದ್ವೇಷದಿಂದ ಟೀಕಿಸುವುದು, https://ainlivenews.com/see-how-many-health-benefits-drinking-buttermilk-has/ ಕೆಳಮಟ್ಟದ ಟೀಕೆಗಳು ಮತ್ತು ಚಾರಿತ್ರ್ಯ ವಧೆ ಮಾಡುವಂತಹ ಟೀಕೆಗಳನ್ನು ಮಾಡುವುದು ಕಡಿಮೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ಕೆಲವು ಬಿಜೆಪಿ ನಾಯಕರುಗಳು ವ್ಯತಿರಿಕ್ತವಾಗಿ ತಮ್ಮ ವರ್ತನೆಯನ್ನು ಬದಲಾಯಿಸಿಕೊಂಡಿದ್ದಾರೆ. ಮನುಷ್ಯತ್ವ ಮರೆತು ಮಾತನಾಡುವರು, ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದರು.

Read More

ಬಿಗ್ ಬಾಸ್ ಮನೆಯಲ್ಲಿಈ ಬಾರಿ ಸಾಕಷ್ಟು ವಿಚಾರಗಳ ಬಗ್ಗೆ ಸುದೀಪ್ ಸ್ಪರ್ಧಿಗಳ ಜೊತೆ ಚರ್ಚಿಸಿದ್ದಾರೆ. ಇಡೀ ಸೀಸನ್‌ನಲ್ಲಿ ಉತ್ತಮವಾಗಿ ಆಡಿದವರಿಗೆ ಬಿಗ್ ಬಾಸ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಸಂಗೀತಾ (Sangeetha) ಮತ್ತು ವಿನಯ್‌ಗೆ (Vinay) ಕಿಚ್ಚನ ಕೊನೆಯ ಚಪ್ಪಾಳೆ ಸಿಕ್ಕಿದೆ. ದೊಡ್ಮನೆ ಆಟದಲ್ಲಿ ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್ ಮತ್ತು ವರ್ತೂರು ಸಂತೋಷ್ ಫಿನಾಲೆಗೆ ಟಿಕೆಟ್ ಪಡೆದು ಫೈನಲಿಸ್ಟ್ ಆಗಿದ್ದಾರೆ. ಇನ್ನೂ ಇಬ್ಬರಿಗೆ ಮಾತ್ರ ಫಿನಾಲೆಗೆ ಬರಲು ಅವಕಾಶ ಸಿಗಲಿದೆ. ಇದರ ನಡುವೆ ಈ ಸೀಸನ್‌ನಲ್ಲಿ ವಿನಯ್- ಸಂಗೀತಾ ಇಲ್ಲ ಅಂದ್ರೆ ಸಂಪೂರ್ಣ ಅಂತ ಅನಿಸೋದಿಲ್ಲ ಎಂದು ಇಬ್ಬರಿಗೆ ಮೆಚ್ಚುಗೆ ಸಲ್ಲಿಸುತ್ತಾ ಕಿಚ್ಚನ ಚಪ್ಪಾಳೆ ನೀಡಿದ್ದಾರೆ ಸುದೀಪ್. ಈ ವಾರಾಂತ್ಯ ಸುದೀಪ್‌ ಮಾತನಾಡಿ,  ಕೆಲ ವಾರ ಕಿಚ್ಚನ ಚಪ್ಪಾಳೆ ಕೊಟ್ಟೆ, ಇನ್ನೂ ಕೆಲ ವಾರ ಚಪ್ಪಾಳೆ ಕೊಡಬೇಕು ಅಂತ ಅನಿಸಿರಲಿಲ್ಲ, ಕೊಡಲಿಲ್ಲ. ಈ ಜರ್ನಿಯಲ್ಲಿ ಬೈಸಿಕೊಂಡಿದ್ದಾರೆ, ತಪ್ಪು ಮಾಡಿದ್ದಾರೆ, ಅತ್ತಿದ್ದಾರೆ, ನಕ್ಕಿದ್ದಾರೆ. ಈ ಸೀಸನ್‌ನಲ್ಲಿ ವಿನಯ್,…

Read More

ಇಸ್ಲಾಮಾಬಾದ್:  ಪಾಕ್‌ ನಟಿ ಸನಾ ಜಾವೇದ್‌ ಅವರನ್ನ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್‌ (Shoaib Malik), ವಿವಾಹವಾಗಿದ್ದಾರೆ. ಈ ಕುರಿತ ಫೋಟೋಗಳನ್ನು ಸ್ವತಃ ಶೋಯೆಬ್‌ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈವರಿಬ್ಬರ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಂತೆ ಪಾಕ್‌ ನಟಿ ಸನಾ ಜಾವೇದ್‌ (Sana Javed) ಯಾರು ಎಂಬ ಚರ್ಚೆ ಹುಟ್ಟಿಕೊಂಡಿದೆ. ಈ ಕುರಿತು ತಿಳಿಯಬೇಕಾದ್ರೆ ಮುಂದೆ ಓದಿ ಸನಾ ಜಾವೇದ್‌ ಬಗ್ಗೆ ನಿಮಗೆ ಗೊತ್ತಾ? ಸನಾ ಜಾವೇದ್‌ 1993ರ ಮಾರ್ಚ್‌ 25ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಜನಿಸಿದರು. 2012ರಲ್ಲಿ ತೆರೆಕಂಡಿದ್ದ ʻಶೆಹರ್-ಎ-ಝಾತ್ʼ ಹಾಸ್ಯ ಟಿವಿ ಕಾರ್ಯಕ್ರಮದ ಮೂಲಕ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದರು. ನಂತರದಲ್ಲಿ ʻಖಾನಿʼ ರೊಮ್ಯಾಂಟಿಕ್‌ ವೆಬ್‌ಸಿರೀಸ್‌ನಲ್ಲಿ ಕಾಣಿಸಿಕೊಂಡರು. ಈ ಬೆನ್ನಲ್ಲೇ ರುಸ್ವಾಯಿ, ಡಂಕ್‌ನಂತಹ ಸೀರಿಯಲ್‌ಗಳಲ್ಲೂ ಗುರುತಿಸಿಕೊಂಡು ಫೇಮಸ್‌ ಆದ್ರು. ʻಖಾನಿʼ (Khaani) ಸೀರಿಯಲ್‌ನಲ್ಲಿ ತೋರಿದ ಉತ್ತಮ ಅಭಿನಯಕ್ಕಾಗಿ ʻಲಕ್ಸ್ ಸ್ಟೈಲ್ ಅವಾರ್ಡ್ಸ್ʼಪ್ರಶಸ್ತಿ ಪಡೆಯುವಲ್ಲಿಯೂ ಸನಾ ಜಾವೇದ್‌ ಯಶಸ್ವಿಯಾದರು.  ನಟಿಯಾಗಿದ್ದ ಜಾವೇದ್‌ 2020ರಲ್ಲಿ ಗೀತರಚನಕಾರ ಹಾಗೂ…

Read More

ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಆರ್.ಆರ್.ನಗರ ಪೊಲೀಸರು (R R Nagara Police)ಸಿಟಿ ಸಿವಿಲ್ ಕೋರ್ಟ್ ಗೆ ಸಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದರು. ನಟ ದರ್ಶನ್ ಅವರನ್ನೂ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿದ್ದರು. ಇದೀಗ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿದ್ದಾರೆ. ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಉಲ್ಲೇಖ ಮಾಡಿದ್ದಾರೆ. ಅಕ್ಟೋಬರ್ 28 ರಂದು ದರ್ಶನ್ ಮನೆಯ ಮುಂದೆ ಈ ಘಟನೆ ನಡೆದಿದ್ದು, ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಮನೆಯ ನಾಯಿ ಕಚ್ಚಿತ್ತು. ಆಗ ಅಮಿತಾ ಜಿಂದಾಲ್ ಕೊಟ್ಟ ದೂರಿನ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಕೇರ್ ಟೇಕರ್ ಹೇಮಂತ್ ಹಾಗೂ ನಟ ದರ್ಶನ್ ಆರೋಪಿಗಳಾಗಿ ಮಾಡಿ ಎಫ್ ಐ ಆರ್ ದಾಖಲಾಗಿತ್ತು.

Read More

ಬಾದಾಮಿಯಂತಹ ವಿವಿಧ ಒಣ ಬೀಜಗಳು ಹೃದಯಕ್ಕೆ ಆರೋಗ್ಯಕರ ಆಹಾರಗಳಾಗಿವೆ. ಇದರೊಟ್ಟಿಗೆ ಕಡಲೆಕಾಯಿಯೂ ಅಷ್ಟೇ ಪರಿಣಾಮಕಾರಿಯಾಗಿದೆ. ನಾವು ಪ್ರತಿನಿತ್ಯ ಸಿಹಿ ಅಥವಾ ಖಾರದ ತಿನಿಸಿನೊಡನೆ ಕಡಲೇಕಾಯಿ ಬೀಜವನ್ನು ಸೇವನೆ ಮಾಡುತ್ತೇವೆ. ಇದರಲ್ಲಿ ಆರೋಗ್ಯಕ್ಕೆ ಅಗತ್ಯವಾದ ಪ್ರೋಟೀನ್, ಆರೋಗ್ಯಕರ ಕೊಬ್ಬು, ಪೋಷಕಾಂಶಗಳು ಹೇರಳವಾಗಿದೆ. ಹೀಗಾಗಿ ನಿಮ್ಮ ಆಹಾರ ಪದ್ದತಿಯಲ್ಲಿ ಕಡಲೆಕಾಯಿಯನ್ನು ಸೆರ್ಪಡೆ ಮಾಡಿಕೊಳ್ಳುವುದರ ಮೂಲಕವಾಗಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದಾಗಿದೆ. * ಕಡಲೆಕಾಯಿ ಕೊಲೆಸ್ಟ್ರಾಲ್ ನಿಯಂತ್ರಿಸಿ ಹೃದಯಕ್ಕೆ ರಕ್ಷಾ ಕವಚವಾಗುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಕಡಿಮೆ ಮಾಡುವ ಮೂಲಕ ಪಾಶ್ರ್ವವಾಯು ಬಾರದಂತೆ ಆರೋಗ್ಯ ಕಾಪಾಡುತ್ತದೆ. * ಸರಿಯಾದ ಪ್ರಮಾಣದಲ್ಲಿ ಕಡಲೇಕಾಯಿ ಸೇವಿಸುವುದರಿಂದ ಪುರುಷ ಮತ್ತು ಮಹಿಳೆಯರ ಪಿತ್ತಕೋಶದಲ್ಲಿ ಕಲ್ಲುಗಳು ಕಂಡು ಬರುವುದಿಲ್ಲ. * ಕಡಲೆಕಾಯಿಯಲ್ಲಿ ಹೆಚ್ಚಿನ ಅಂಶದ ಕ್ಯಾಲೋರಿ ಮತ್ತು ಕೊಬ್ಬು ಕಂಡು ಬಂದರೂ ಅವು ತೂಕ ಹೆಚ್ಚಿಸುವುದಿಲ್ಲ ,ಆರೋಗ್ಯಕರ ಕೊಬ್ಬು ಮತ್ತು ತೂಕ ಕಾಯ್ದುಕೊಳ್ಳುವ ಮೂಲಕ ಬೊಜ್ಜಿನ ದೇಹದ ಅಪಾಯ ತಡೆಯುತ್ತವೆ. * ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಿಸುವುದಿಲ್ಲ. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಟೈಪ್ 2…

Read More

ಭಾರತ ದೇಶದ ಇತಿಹಾಸದಲ್ಲೇ ಕರ್ನಾಟಕ ರಾಜ್ಯದಲ್ಲಿ ಐದು ಗ್ಯಾರಂಟಿಯನ್ನು ನಿಡಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂದಲೆಳಿಯ ಅಂತರದಲ್ಲಿ ಸಿದ್ದು ಕೊಣ್ಣೂರ ಅವರು ಸೋತಿದ್ದಾರೆ. ಸೋತರು ಇಡೀ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಧೈರ್ಯವನ್ನು ತುಂಬಿ ಉತ್ತಮ ರೀತಿ ಸಾರ್ವಜನಿಕ ಕೆಲಸ ಮಾಡುತ್ತಿದ್ದಾರೆ. 70 ನಿಗಮ ಸ್ಥಾನದಲ್ಲಿ ಈಗಾಗಲೇ 20 ನಿಗಮ ಸ್ಥಾನ ನೀಡಿದ್ದಾರೆ ಆದರೆ ಈ ಬಾರಿ ತೇರದಾಳ ಮತಕ್ಷೇತ್ರದಲ್ಲಿ ಸಿದ್ದು ಕೊಣ್ಣೂರ ಅವರಿಗೆ ನಿಗಮ ಸ್ಥಾನ ನೀಡಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ನಮಗೆ ಸಹಾಯವಾಗುತ್ತದೆ ಎಂದು ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ನಿರೀಕ್ಷಣ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರೋ ಯೋಜನೆಗಳನ್ನು ನಾವು ಜಾರಿ ಮಾಡಿದ್ದೇವೆ ಎಂದು ಹೇಳಲು ಹಿಂಜರಿಯುವುದಿಲ್ಲ ತೇರದಾಳ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಸಿದ್ದು ಸವದಿ ಹಿಟ್ಲರ್ ಆಡಳಿತದಂತೆ ನಡೆಸುತ್ತಿದ್ದಾರೆ…

Read More

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಹೃದಯ ಭಾಗದಲ್ಲಿರುವ 13 ಎಕರೆ ಬೆಲೆಬಾಳುವ ಭೂಮಿಯಲ್ಲಿ ರೈಲ್ವೆ ವೈದ್ಯಕೀಯ ಕಾಲೇಜು ಸ್ಥಾಪಿಸ ಬೇಕೇ ವಿನಹ ಅದನ್ನು ಖಾಸಗಿ ವ್ಯಕ್ತಿಗಳಿಗೆ 99 ವರ್ಷ ಲೀಸ್ ನೀಡಬಾರದು ಎಂದು ನೈರುತ್ಯ ರೈಲ್ವೆ ವಲಯ ಬಳಕೆದಾರರ ಸಲಹಾ ಸಮಿತಿ ಅಧ್ಯಕ್ಷ ಮಹೇಂದ್ರ ಸಿಂಘಿ ಆಗ್ರಹಿಸಿದ್ದಾರೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೈಲ್ವೆ ಮಂಡಳಿ ಅಧ್ಯಕ್ಷರು ಮತ್ತು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ. ಹುಬ್ಬಳ್ಳಿಯ ಕೇಂದ್ರ ಸ್ಥಳದಲ್ಲಿರುವ ರೈಲ್ವೆ ಭೂಮಿಯಲ್ಲಿ ರೈಲ್ವೆ ವೈದ್ಯಕೀಯ ಸ್ಥಾಪನೆ ಮಾಡಿದರೆ ನೈರುತ್ಯ ರೈಲ್ವೆ ವಲಯದ ಸಾವಿರಾರು ನೌಕರರಿಗೆ ಅನುಕೂಲವಾಗಲಿದೆ ಅಲ್ಲದೆ ನೂರಾರು ಕೋಟಿ ರೂಪಾಯಿ ಬೆಲೆಬಾಳುವ ಜಮೀನು ರೈಲ್ವೆ ಇಲಾಖೆಗೆ ಉಳಿದುಕೊಳ್ಳಲಿದೆ. 2009- 10ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನಲ್ಲಿ ಅಂದಿನ ರೈಲ್ವೆ ಸಚಿವೆ ಆಗಿದ್ದ ಶ್ರೀಮತಿ ಮಮತಾ ಬ್ಯಾನರ್ಜಿಯವರು ನೈರುತ್ಯ ರೈಲ್ವೆ ವಲಯಕ್ಕೆ ರೈಲ್ವೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದಾರೆ. ಆದರೆ…

Read More

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುವುದರ ಜೊತೆಗೆ ಶಿಕ್ಷಣವಂತರನ್ನಾಗಿ ಮಾಡಬೇಕಿದೆ. ಶಿಕ್ಷಣ ವಂತ ಎಂಬುವುದು ಸರ್ವತೋಮುಖ ಅಭಿವೃದ್ಧಿಯಾಗಿದೆ. ದೇಶ, ಸಂಸ್ಕೃತಿ, ಪರಂಪರೆ, ಸಂಪ್ರದಾಯ ಭಾಷಯ ಬಗ್ಗೆ ಯಾರಿಗೆ ಯಾರಿಗೆ ಅಭಿಮಾನವಿರುತ್ತದೆಯೋ ಅವನು ನಿಜವಾದ ಶಿಕ್ಷಣವಂತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಶನಿವಾರ ತಾಲೂಕಿನ ವರೂರ ಗ್ರಾಮದ ಎಸ್ ಡಿಎಂ ಜೈನ್ ಮಠ ಟ್ರಸ್ಟ್ ಎ.ಜಿ.ಎಂ.ರೂರಲ್ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜಿನ ವತಿಯಿಂದ ನಗರದ ಕುಸುಗಲ್ ರಸ್ತೆ ನಲ್ಲಿ ಏರ್ಪಡಿಸಿದ್ದ ಉತ್ತರ ಕರ್ನಾಟಕದ ಶಿಕ್ಷಣ ತಂತ್ರಜ್ಞಾನರ ಸಭೆ ಯಲ್ಲಿ ಭಾಗವಹಿಸಿ ಮಾತನಾಡಿದರು. ಜಗತ್ತಿನಲ್ಲಿ ಭಾರತ ಯುವ ದೇಶವಾಗಿದೆ. ವಿಶ್ವವೂ ಈಗ ಭಾರತವನ್ನು ನಂಬುತ್ತಿದೆ. ಜಗತ್ತಿನ ಸಮಸ್ಯೆಗಳಲ್ಲಿ ನಮಗೆನು ಬೇಕು ಎಂಬುವುದರ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ದೇಶದ ಹಿತಕ್ಕೆ ಬೇಕಾದ ನಿರ್ಣಯವನ್ನು ನಾವು ತೆಗೆದುಕೊಳ್ಳುತ್ತಿದ್ದೇವೆ ಎಂದರು. ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಕ್ರಿಯಾಶೀಲ, ಮೂಲಸೌಕರ್ಯ ಬೆಳೆಸುವ ಶಕ್ತಿ ಶಿಕ್ಷಕರಿಗೆ‌. ಅಂಕ ಪಡೆದು ವಿದೇಶಕ್ಕೆ ಹೋಗುವ ಮನಸ್ಥಿತಿ ಸದ್ಯ ಬದಲಾಗಬೇಕಿದೆ. ವಿದ್ಯಾರ್ಥಿಗಳಿಗೆ ಇರುವ ಗುರುತಿಸುವ ಕೆಲಸ ಶಿಕ್ಷಣ…

Read More

ಕಲಬುರಗಿ: ನಾಳೆ ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಭು ಶ್ರೀರಾಮ ಚಂದ್ರನ ಎಲ್ಲ ಧಾರ್ಮಿಕ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಅಂತ ಕಲಬುರಗಿಯ ಸಂಗಮೇಶ್ವರ ಬಡಾವಣೆಯಲ್ಲಿರುವ ಶ್ರೀ ಸತ್ಯಾತ್ಮತೀರ್ಥ ಸೇವಾ ಸಮಿತಿ ಇವತ್ತು ಸಾಮೂಹಿಕ ಪಾರಾಯಣ ನಡೆಸಿತು.. ಸುಮಾರು 50 ಅಧಿಕ ಸಂಖ್ಯೆಯ ರಾಮ ಭಕ್ತರು ಸಂಕಲ್ಪ ಮಾಡಿದ್ದು ರಾಮ ಮಂದಿರ ಉದ್ಘಾಟನೆ ಸಡಗರವನ್ನ ಇಡೀ ದೇಶವೇ ಕಣ್ತುಂಬಿಕೊಳ್ಳುತ್ತಿದೆ..ಹೀಗಾಗಿ ಎಲ್ಲ ಕಾರ್ಯಗಳು ಯಶಸ್ವಿಯಾಗಿ ನಡೆಯಲಿ ಅಂತ ಪಾರಾಯಣ ಮಾಡ್ತಿದ್ದೇವೆ ಅನ್ನೋದು ಸಮಿತಿಯ ಮುಖ್ಯಸ್ಥ ಸಮೀರ್ ದೇಶಪಾಂಡೆ ಮಾತು..

Read More

ಹುಬ್ಬಳ್ಳಿ : ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರರ ಕಾರ್ಯಾಲಯದಲ್ಲಿ ತಾಲೂಕು ಆಡಳಿತದಿಂದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ, ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ್, ಸಮಾಜದ ಮುಖಂಡರಾದ ಮಂಜುನಾಥ ಬೈರನ್ನವರ, ಗುರಪ್ಪ ಜಿಡ್ಡಿ, ರಾಮಣ್ಣ ಗುಗ್ಗರಿ, ಮಂಜುನಾಥ ಗಡಿಯನ್ನವರ, ಗುರಪ್ಪ ಕರಬಣ್ಣವರ, ಬಸವರಾಜ್ ದಾಸನಾಯ್ಕಾರ್, ಯಲ್ಲಪ್ಪ ಅಳಗವಾಡಿ, ಭೀಮಶಿ ಅಡವೆನ್ನವರ್, ರವಿ ಹಡಗಲಿ, ಬಸವರಾಜ್ ಗಡಿಯನ್ನವರ್, ಗಂಗಪ್ಪ ಬಾರಕೇರ, ಅರ್ಜುನ ಬಾರಕೇರ, ಲಕ್ಷ್ಮಣ ಅಂಬಿಗೇರ, ಗುರುನಾಥ ಸುಣಗಾರ, ಶಿವಾನಂದ್ ಬಾರಕೇರ, ಮಂಜುನಾಥ್, ಎಲ್. ಜೆ. ಅಂಬಿಗೇರ, ಹನಮಂತಪ್ಪ ನಾಯ್ಕೊಡಿ, ಸುರೇಶ್ ಹೆಬ್ಬಳ್ಳಿ, ದೊಡ್ಡಪ್ಪ ಬಾರಕೇರ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

Read More