ಟೆಕ್ಸಾಸ್: ಗರ್ಭಿಣಿ ಮಹಿಳೆಯೋರ್ವಳನ್ನೂ ಅಪಹರಿಸಿ ಆಕೆಯನ್ನೂ ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರ ಮಾಡಿದ ವ್ಯಕ್ತಿಯೊಬ್ಬನನ್ನು ಅರೆಸ್ಟ್ ಮಾಡಲಾಗಿದೆ. ಹೌದು ಐದು ವರ್ಷಗಳ ಹಿಂದೆ ಮಹಿಳೆಯನ್ನು ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದಕ್ಕಾಗಿ ಟೆಕ್ಸಾಸ್ನ ವ್ಯಕ್ತಿ ಲೀ ಕಾರ್ಟರ್ (Lee Carter) ಎಂಬಾತನನ್ನು ಬಂಧಿಸಲಾಗಿದೆ. 52 ವರ್ಷದ ಮಹಿಳೆ ಗರ್ಭಿಣಿಯಾಗಿದ್ದಾಗ ಕಾರ್ಟರ್ ಬೀದಿಯಿಂದ ಆಕೆಯನ್ನು ಅಪಹರಿಸಿದ್ದು, ಆತನ ವಿರುದ್ಧ ಅಪಹರಣ (kidnapping) ಆರೋಪ ಹೊರಿಸಲಾಗಿದೆ. ಹೂಸ್ಟನ್ನಲ್ಲಿರುವ (Houston) ಕಾರ್ಟರ್ನ ಮನೆಗೆ ಹತ್ತಿರದಲ್ಲಿದ್ದ ಗ್ಯಾರೇಜ್ನಲ್ಲಿ ಮಹಿಳೆಯನ್ನು ಲಾಕ್ ಮಾಡಲಾಗಿದೆ ಎಂದು ಪೊಲೀಸರು ಪತ್ತೆ ಮಾಡಿದರು. ಎಪ್ರಿಲ್ 7, 2023 ರಂದು ಬಹಿರಂಗಪಡಿಸಿದ ದಾಖಲೆಗಳ ಪ್ರಕಾರ ಹೂಸ್ಟನ್ನ 5251 ಪೆರ್ರಿ ಸ್ಟ್ರೀಟ್ಗೆ ಹೋಗುತ್ತಿರುವಾಗ ಹೂಸ್ಟನ್ ಪೊಲೀಸರು ಗ್ಯಾರೇಜ್ನಿಂದ ಧ್ವನಿ ಕೇಳಿದರು ಎಂದು ಹೇಳಲಾಗಿದೆ. ಅಧಿಕಾರಿಗಳು ಗ್ಯಾರೇಜ್ನ ಕಿಟಕಿಯನ್ನು ಒಡೆದಿರುವುದನ್ನು ವಿಡಿಯೊ ತೋರಿಸುತ್ತದೆ. ಅವರು ಒಳಗೆ ನಾಯಿ ಮತ್ತು ಹಾಸಿಗೆಯನ್ನು ಕಂಡುಕೊಂಡರು, ಅಲ್ಲಿ ಮಹಿಳೆಯನ್ನು ಸೆರೆಯಲ್ಲಿ ಇರಿಸಲಾಗಿತ್ತು. ಸಂತ್ರಸ್ತೆ ಸುಮಾರು 30 ವರ್ಷ ವಯಸ್ಸಿನವಳಾಗಿದ್ದು, ಆಕೆಯನ್ನು ರಕ್ಷಿಸಿದಾಗ ಆಕೆ ಕೇವಲ 70 ಪೌಂಡ್ಗಳಷ್ಟು ತೂಕವಿದ್ದರು.ಅವಳು…
Author: AIN Author
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ- ಜೆಡಿಎಸ್ ನಾಯಕರ ಹೈವೋಲ್ಟೇಜ್ ಸಭೆ ಆರಂಭವಾಗಿದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದ್ದು, ಸಭೆಯಲ್ಲಿ ಬಿಜೆಪಿ ಕಡೆಯಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ, https://ainlivenews.com/see-how-many-health-benefits-drinking-buttermilk-has/ ಮಾಜಿ ಸಿಎಂ ಗಳಾದ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ವಿಪಕ್ಷನಾಯಕ ಆರ್.ಅಶೋಕ್, ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಜೆಡಿಎಸ್ ಕಡೆಯಿಂದ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಜಿಟಿ ದೇವೇಗೌಡರ, ಬಂಡೆಪ್ಪ ಕಾಶಂಪೂರ್, MLC ಭೋಜೇಗೌಡ, ತಿಪ್ಪೇಸ್ವಾಮಿ ಭಾಗಿಯಾಗಿದ್ದಾರೆ.
ನವದೆಹಲಿ: ಐಪಿಎಲ್ ಟೂರ್ನಿಯ ಶೀರ್ಷಿಕೆ ಪ್ರಾಯೋಜಕತ್ವ ಮತ್ತೆ ಟಾಟಾ ಸಂಸ್ಥೆಯ ಪಾಲಾಗಿದೆ. 2028ರ ವರೆಗೆ ಐಪಿಎಲ್ ಪ್ರಾಯೋಜಕತ್ವ ಪಡೆದಿರುವ ಟಾಟಾ ಸಂಸ್ಥೆಯು ಪ್ರತಿ ಆವೃತ್ತಿಗೆ ಬಿಸಿಸಿಐಗೆ ₹500 ಕೋಟಿ ಪಾವತಿಸಲಿದೆ. 2022-23ರ ಆವೃತ್ತಿಗಳಲ್ಲಿ ಟಾಟಾ ಸಂಸ್ಥೆ ಶೀರ್ಷಿಕೆ ಹಕ್ಕು ಪಡೆದಿತ್ತು. ವರ್ಷಕ್ಕೆ ತಲಾ 335 ಕೋಟಿ ರು ಪಾವತಿಸಿತ್ತು. https://ainlivenews.com/see-how-many-health-benefits-drinking-buttermilk-has/ ಇತ್ತೀಚೆಗಷ್ಟೆ ಬಿಸಿಸಿಐ ಶೀರ್ಷಿಕೆ ಪ್ರಾಯೋಜಕತ್ವಕ್ಕಾಗಿ ಟೆಂಡರ್ ಆಹ್ವಾನಿಸಿತ್ತು. ಟಾಟಾ ಸಂಸ್ಥೆಗೆ ಆಯೋಜನೆ ಹಕ್ಕು ಸಿಕ್ಕಿದ್ದು, 5 ವರ್ಷಗಳಲ್ಲಿ ಒಟ್ಟು 2500 ಕೋಟಿ ರು, ಬಿಸಿಸಿಐಗೆ ಪಾವತಿಸಲಿದೆ. 2008ರಲ್ಲಿ ಐಪಿಎಲ್ ಆರಂಭಗೊಂಡಾಗ ಡಿಎಲ್ಎಫ್ 5 ವರ್ಷಕ್ಕೆ ಪ್ರಾಯೋಜಕತ್ವ ಪಡೆದು, ಪ್ರತಿ ವರ್ಷಕ್ಕೆ 40 ಕೋಟಿ ರು ಪಾವತಿಸಿತ್ತು.
ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತ ರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಆಗ್ರಹಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ ಅಥವಾ ಕಾಂಗ್ರೆಸ್ ಪಕ್ಷದ ಜಹಗೀರಲ್ಲ. ಈ ಅಂಶವನ್ನು ಕಾಂಗ್ರೆಸ್ ಗೂಂಡಾಗಳು ಅರ್ಥ ಮಾಡಿಕೊಂಡರೆ ಒಳಿತು ಎಂದು ಎಚ್ಚರಿಕೆ ನೀಡಿದೆ. ಹಿರಿಯ ಸಹಕಾರಿ ಧುರೀಣರು, ಮಾಜಿ ಶಾಸಕರು ಹಾಗೂ ನಮ್ಮ ಗೌರವಾನ್ವಿತ ನಾಯಕರು, ಜನಾನುರಾಗಿಗಳು ಆಗಿದ್ದ ಶ್ರೀ ಕೆ.ಬಿ.ಪಿಳ್ಳಪ್ಪನವರ ವಿಗ್ರಹ ಸ್ಥಾಪನೆ ಮಾಡುವ ಬಗ್ಗೆ ಸ್ವತಃ ಶಾಸಕ ಪ್ರದೀಪ್ ಈಶ್ವರ್ ಅವರೇ ನೀಡಿದ್ದ ಭರವಸೆಯನ್ನು ಆರು ತಿಂಗಳಾದರೂ ಈಡೇರಿಸದ ಬಗ್ಗೆ ನಮ್ಮ…
ಅಯೋಧ್ಯೆ: ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಮಹೋತ್ಸವಕ್ಕೆ ಗಂಟೆಗಳ ಎಣಿಕೆ ಆರಂಭವಾಗಿದೆ. ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈಗಾಗಲೇ ಅಯೋಧ್ಯೆಗೆ ದೇಶದ ಗಣ್ಯಾತಿಗಣ್ಯರು ಆಗಮಿಸ್ತಿದ್ದಾರೆ. ಭಾನುವಾರ ಗಣ್ಯರ ಆಗಮನದ ಸಂಖ್ಯೆ ಇನ್ನೂ ಹೆಚ್ಚಲಿದೆ. ಈ ಹೊತ್ತಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಮಮಂದಿರ (Ayodhya Ram Mandir) ಕಾರಣಕ್ಕಾಗಿ ಅಯೋಧ್ಯೆ ನಗರಿ ದೇಶದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ದೇಶ-ವಿದೇಶಗಳ 11 ಸಾವಿರ ವಿವಿಐಪಿಗಳು ರಾಮನೂರಿಗೆ ಆಗಮಿಸುವ ಕಾರಣ ಗರಿಷ್ಠ ಭದ್ರತೆ ಒದಗಿಸಲಾಗಿದೆ. ಭೂಮಿ, ನೀರು, ವಾಯುಪ್ರದೇಶದಲ್ಲಿ ತೀವ್ರ ನಿಗಾ ಇರಿಸಲಾಗಿದೆ. ಅಯೋಧ್ಯೆ ಮೇಲೆ ದಾಳಿ ನಡೆಸೋದಾಗಿ ಖಲಿಸ್ಥಾನ್ ಉಗ್ರ ಪನ್ನೂನ್ ಎಚ್ಚರಿಕೆ ಮೇಲೆ ಎಚ್ಚರಿಕೆ ನೀಡ್ತಿದ್ದಾನೆ. ಇದರ ಜೊತೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಷ್ ದಾಳಿ ನಡೆಸುವ ಸಂಭವ ಇದೆ ಎಂದು ಗುಪ್ತಚರ ಪಡೆಗಳು ಎಚ್ಚರಿಸಿವೆ. ಹೀಗಾಗಿ ಅಯೋಧ್ಯೆಯಲ್ಲಿ ಗರಿಷ್ಠ ಮಟ್ಟದ ಮಟ್ಟದ ನಿಗಾ ವಹಿಸಲಾಗಿದೆ. ರಾಮಮಂದಿರದ ಬಳಿ ಮೂರು ಹಂತದ ಭದ್ರತೆ ಏರ್ಪಾಟು ಮಾಡಲಾಗಿದೆ. https://ainlivenews.com/see-how-many-health-benefits-drinking-buttermilk-has/ ಅಯೋಧ್ಯಾ ನಗರಿಯಲ್ಲಿ ಭದ್ರತಾ ಪಡೆಗಳ ಪ್ಯಾಟ್ರೋಲಿಂಗ್ ಹೆಚ್ಚಿದೆ.…
‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ ‘ಕೆಟಿಎಂ’ ಸಿನಿಮಾ ಟೀಸರ್ ನಿಂದಲೇ ಭಾರೀ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೆಲೋಡಿ ಹಾಡು ಅನಾವರಣಗೊಂಡಿದೆ. ಸೋಜಿಗ ಎಂಬ ಸಾಂಗ್ ಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ಸಂಚಿತ್ ಹೆಗ್ಡೆ ಧ್ವನಿಯಾಗಿದ್ದು, ಚೇತನ್ ರಾವ್ ಮ್ಯೂಸಿಕ್ ಶ್ರಮ ಹಾಡಿಗಿದೆ. ದೀಕ್ಷಿತ್ ಹಾಗೂ ಕಾಜಲ್ ಕುಂದರ್ ಸೋಜಿಗ ಸಿಂಗಿಂಗ್ ಧಮಾಕದಲ್ಲಿ ಮಿಂಚಿದ್ದಾರೆ. ‘ಅಥರ್ವ’ ಸಿನಿಮಾ ಖ್ಯಾತಿಯ ಅರುಣ್, ಈ ‘ಕೆಟಿಎಂ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅರುಣ್ ಆಕ್ಷನ್ ಕಟ್ ಹೇಳಿರುವ ಎರಡನೇ ಸಿನಿಮಾ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ನಿರತವಾಗಿರುವ ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಮೊದಲ ಹಂತವಾಗಿ ಇಂಟ್ರಸ್ಟಿಂಗ್ ಟೀಸರ್ ಬಿಡುಗಡೆ ಮಾಡಿತ್ತು. ಸ್ಯಾಂಡಲ್ವುಡ್ನ 50 ಮಂದಿ ಸೆಲೆಬ್ರಿಟಿಗಳು ‘ಕೆಟಿಎಂ’ ಟೀಸರ್ ರಿಲೀಸ್ ಮಾಡಿ ಶುಭ ಕೋರಿದ್ದರು. ನವಿರಾದ ಪ್ರೇಮ್ ಕಹಾನಿ ಒಳಗೊಂಡಿರುವ ‘ಕೆಟಿಎಂ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ದೀಕ್ಷಿತ್, ನಾಲ್ಕು ಶೇಡ್ನಲ್ಲಿ ತೆರೆ…
ನವದೆಹಲಿ: ವ್ಯಕ್ತಿಯೊಬ್ಬ ಹೆಲಿಕಾಪ್ಟರ್ ಮೂಲಕ ಬಂದು ಕಸದ ಬುಟ್ಟಿಗೆ ಕಸ ಎಸೆದು ಮರಳಿದ್ದಾನೆ. ಈ ವಿಡಿಯೋ ಭಾರಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ದೇವರೇ ನನ್ನನ್ನು ಇಷ್ಟು ಶ್ರೀಮಂತನಾಗಿ ಮಾಡಿಬಿಡು, ನಾನು ಹೆಲಿಕಾಪ್ಟರ್ ಮೂಲಕ ಕಸ ಎಸೆಯುವಂತಾಗಲಿ ಎಂದು ಹಲವರು ಬೇಡಿಕೊಂಡಿದ್ದಾರೆ. ಹೆಲಿಕಾಪ್ಟರ್ ಪೈಲೆಟ್ ಬಳಿ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾನೆ. ನೆಲದ ಮೇಲೆ ಸಾಮಾನ್ಯ ಕಸದ ಬುಟ್ಟಿಯನ್ನು ಇಡಲಾಗಿತ್ತು. ಈ ಬುಟ್ಟಿಗೆ ಕಸ ಎಸೆಯಲು ಹೆಲಿಕಾಪ್ಟರ್ ಮೂಲಕ ಆಗಮಿಸಿದ ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ನಲ್ಲಿದ್ದ ಕಸವನ್ನು ಬುಟ್ಟಿಗೆ ಎಸೆದಿದ್ದಾನೆ. ಕಸದ ಬುಟ್ಟಿಗೆ ಕೆಲ ಎತ್ತರದಲ್ಲೇ ಹೆಲಿಕಾಪ್ಟರ್ನಲ್ಲಿ ಆಗಸದಲ್ಲೇ ಹಾರಾಡಿಸಿ ಕಸ ಎಸೆಯಲಾಗಿದೆ. ಬಳಿಕ ಮರಳಿದ್ದಾನೆ. https://twitter.com/raajcar/status/1745838051216281977?ref_src=twsrc%5Etfw ಕೆಲವರು ಈತನ ಪೈಲೆಟ್ ಸ್ಕಿಲ್ ಕುರಿತು ಮಾತನಾಡಿದ್ದಾರೆ. ಉತ್ತಮ ಪೈಲೆಟ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಕಸ ಎಸೆಯಲು ಹೆಲಿಕಾಪ್ಟರ್ ಬಳಸಿದ ಈ ಶ್ರೀಮಂತ ಯಾರು ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಡಿಯೋ ಶೂಟ್ ಆಗಿರುವ ಸ್ಥಳ ಹಾಗೂ ಇತರ…
ನವದೆಹಲಿ: ‘ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ’ ಹೆಸರಿನಲ್ಲಿ ಸ್ವೀಟ್ಸ್ ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಆನ್ಲೈನ್ ಶಾಪಿಂಗ್ ಸಂಸ್ಥೆಯೊಂದಕ್ಕೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಇನ್ನೂ ಆಗಿಲ್ಲ. ಈ ಹೊತ್ತಿನಲ್ಲಿ ರಾಮಮಂದಿರದ ಪ್ರಸಾದ ಎಂದು ಹೇಳಿಕೊಂಡು ಸ್ವೀಟ್ಸ್ ಮಾರಾಟ ಮಾಡುವ ಮೂಲಕ ಗ್ರಾಹಕರ ದಾರಿ ತಪ್ಪಿಸಲಾಗುತ್ತಿದೆ ಎಂದು ಆನ್ಲೈನ್ ಶಾಪಿಂಗ್ ಸಂಸ್ಥೆಯೊಂದರ ವಿರುದ್ಧ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ದೂರು ನೀಡಿತ್ತು. ಈ ಸಂಬಂಧ ಸಂಸ್ಥೆಗೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಇಂತಹ ಕ್ರಮಗಳು ಗ್ರಾಹಕರನ್ನು ತಪ್ಪುದಾರಿಗೆಳೆಯುತ್ತವೆ. https://ainlivenews.com/see-how-many-health-benefits-drinking-buttermilk-has/ ಗ್ರಾಹಕರ ಖರೀದಿ ನಿರ್ಧಾರಗಳ ಮೇಲೂ ಪ್ರಭಾವ ಬೀರುತ್ತವೆ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಎಚ್ಚರಿಸಿದೆ.ಆನ್ಲೈನ್ ಶಾಪಿಂಗ್ ಸಂಸ್ಥೆಗೆ ಸಿಸಿಪಿಎ ನೋಟಿಸ್ ನೀಡಿದ್ದು, 7 ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಇಲ್ಲದಿದ್ದರೆ, ಗ್ರಾಹಕ ಸಂರಕ್ಷಣಾ ಕಾಯ್ದೆ,-2019 ರ ನಿಬಂಧನೆಗಳ ಅಡಿಯಲ್ಲಿ ಕಂಪನಿಯ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ.
ಬಿಗ್ ಬಾಸ್ ಮನೆಯಲ್ಲಿ ಇರೋದು ಏಳು ಜನ. ಈಗಾಗಲೇ ಸಂಗೀತಾ ಶೃಂಗೇರಿ ಡೈರೆಕ್ಟ್ ಆಗಿ ಫಿನಾಲೆಗೆ ಆಯ್ಕೆಯಾಗಿದ್ದಾರೆ. ತುಕಾಲಿ ಸಂತು ಅವರು ನಾಮಿನೇಷನ್ ತೂಗುಕತ್ತಿಯಿಂದ ತಪ್ಪಿಸಿಕೊಂಡಿದ್ದಾರೆ. ಹಾಗಾಗಿ ವರ್ತೂರು ಸಂತೋಷ, ವಿನಯ್, ಕಾರ್ತಿಕ್, ಡ್ರೋನ್ ಪ್ರತಾಪ್ (Drone Pratap) ಮತ್ತು ನಮ್ರತಾ ಸೆಣೆಸಾಡೋದು ಅನಿವಾರ್ಯವಾಗಿದೆ. ಮಿಡ್ ವೀಕ್ ಎಲಿಮಿನೇಷನ್ (Elimination) ಅಂತ ಈಗಾಗಲೇ ತನಿಷಾ ಕುಪ್ಪಂಡ ಅವರನ್ನು ಮನೆಯಿಂದ ಕಳುಹಿಸಲಾಗಿದೆ. ಫಿನಾಲೆ ವೇದಿಕೆಯ ಮೇಲೆ ಐದೇ ಐದು ಜನರು ಇರುವ ಕಾರಣದಿಂದಾಗಿ ಇನ್ನೂ ಇಬ್ಬರನ್ನೂ ಮನೆಯಿಂದ ಹೊರ ಕಳುಹಿಸಬೇಕಿದೆ. ಹಾಗಾಗಿ ಈ ವಾರ ಮತ್ತ್ಯಾರು ಮನೆಯಿಂದ ಹೊರ ಬರುತ್ತಾರೆ ಎನ್ನುವ ಕುತೂಹಲ ಶುರುವಾಗಿದೆ. ಕಳೆದ ಸುದೀಪ್ ಅವರು ವರ್ತೂರು ಸಂತೋಷ್ ಅಥವಾ ತುಕಾಲಿ ಸಂತು ಇಬ್ಬರಲ್ಲಿ ಒಬ್ಬರು ಮನೆಯಿಂದ ಆಚೆ ಹೋಗಲು ರೆಡಿಯಾಗಿ ಎಂದು ಹೇಳುವ ಮೂಲಕ ಶಾಕ್ ನೀಡಿದ್ದರು. ಈ ಬಾರಿ ತುಕಾಲಿ ಬಚಾವ್ ಆಗಿದ್ದಾರೆ. ಸದ್ಯ ನಾಮಿನೇಟ್ ಆಗಿರುವ ಕಂಟೆಸ್ಟೆಂಟ್ ಗಳ ಪೈಕಿ ವಿನಯ್, ಕಾರ್ತಿಕ್ ಹಾಗೂ ಡ್ರೋನ್…
ನಮ್ಮ ಮನೆಯ ಸುತ್ತ ಇಟ್ಟಿರುವ ವಸ್ತುಗಳನ್ನು ಸರಿಯಾದ ನಿರ್ದೇಶನ ಮತ್ತು ನಿಯಮಗಳ ಪ್ರಕಾರ ಇಡದಿದ್ದರೆ, ಅವು ಮನೆಯನ್ನು ಸಂಕಷ್ಟಕ್ಕೆ ದೂಡಬಹುದು. ಇವುಗಳಲ್ಲಿ ನಿಮ್ಮ ಮನೆಯ ಪೊರಕೆ ಮತ್ತು ಮಾಪ್ ಕೂಡ ಸೇರಿವೆ. ವಾಸ್ತವವಾಗಿ, ನಾವು ಈ ವಸ್ತುಗಳಿಂದ ಮನೆಯನ್ನು ಸ್ವಚ್ಛಗೊಳಿಸಬಹುದು, ಆದರೆ ಈ ವಸ್ತುಗಳಿಗೆ ವಾಸ್ತು ನಿಯಮಗಳನ್ನು ಅನುಸರಿಸಲು ನಮಗೆ ಸಾಧ್ಯವಾಗುವುದಿಲ್ಲ. ಈ ವಸ್ತುಗಳನ್ನು ಸರಿಯಾಗಿ ಇಡದಿದ್ದರೆ ಮನೆಯಲ್ಲಿ ನೆಗೆಟಿವ್ ಎನರ್ಜಿ ಬರಬಹುದು. ವಾಸ್ತು ಪ್ರಕಾರ ನೀವು ಯಾವ ಸ್ಥಳದಲ್ಲಿ ಪೊರಕೆ ಮತ್ತು ಮಾಪ್ ಇಡಬೇಕು, ಇದರಿಂದ ಸಂತೋಷ ಮತ್ತು ಸಮೃದ್ಧಿ ಉಳಿಯುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಈ ಸ್ಥಳಗಳಲ್ಲಿ ಪೊರಕೆ ಮತ್ತು ಮಾಪ್ ಇಡಬೇಡಿ ವಾಸ್ತುವನ್ನು ನಂಬುವುದಾದರೆ, ಮನೆಯ ಕೆಲವು ದಿಕ್ಕುಗಳಲ್ಲಿ ಮರತೂ ಕೂಡ ನೀವು ಪೊರಕೆ ಮತ್ತು ಮಾಪ್ ಅನ್ನು ಇಡಬಾರದು. ಆ ಸ್ಥಳಗಳಲ್ಲಿ ವಿಶೇಷವಾಗಿ ನಿಮ್ಮ ಪೂಜಾ ಕೊಠಡಿ, ಅಡುಗೆ ಕೋಣೆ ಮತ್ತು ಮಲಗುವ ಕೋಣೆ ಸೇರಿವೆ. ಈ ಯಾವುದೇ ಸ್ಥಳಗಳಲ್ಲಿ ನೀವು ಎಂದಿಗೂ ಬ್ರೂಮ್ ಅಥವಾ ಮಾಪ್…