ಸ್ಯಾಂಡಲ್ವುಡ್ ಸಲಗ ನಟ ದುನಿಯಾ ವಿಜಯ್ ಅವರಿಗೆ 50ನೇ ಹುಟ್ಟುಹಬ್ಬದ ಸಂಭ್ರಮ. ನಟ ದುನಿಯಾ ವಿಜಯ್, ಅವರ ತಂದೆ ತಾಯಿಯ ಸಮಾಧಿ ಬಳಿಯೇ ಕೇಕ್ ಕತ್ತರಿಸಿ ತಮ್ಮ ಬರ್ತ್ಡೇ ಸೆಲಬ್ರೆಟ್ ಮಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅವರ ನಟನೆ ಮತ್ತು ನಿರ್ದೇಶನದ ಬಹುನಿರೀಕ್ಷಿತ ‘ಭೀಮ’ ಸಿನಿಮಾದ ಟೀಸರ್ ಕೂಡ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಷ್ಟೇ ಅಲ್ಲದೇ ದುನಿಯಾ ವಿಜಯ್ ಅವರ VK29 (29ನೇ ಸಿನಿಮಾ) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. VK29 ಈ ಪೋಸ್ಟರ್ನಲ್ಲಿ ಇದು ಆಳಿದವರ ಕಥೆಯಲ್ಲ.. ಅಳಿದು ಉಳಿದವರ ಕಥೆ.. ಎನ್ನುವ ಅಡಿ ಬರಹ ಕೊಟ್ಟಿದ್ದಾರೆ. ಮಣ್ಣಿನ ಕಥೆಗಳಿಗೆ ಹೆಸರುವಾಸಿಯಾಗಿರುವ ಜಡೇಶ್ VK29 ಮೂಲಕ ಮತ್ತೊಂದು ಸೊಗಡಿನ ಸಿನಿಮಾ ಮಾಡುವ ಸೂಚನೆ ನೀಡಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಮಗಳು ಮೋನಿಕಾ ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಈ ಚಿತ್ರದ ಕುರಿತ ಇನ್ನಷ್ಟು ವಿಶೇಷ ವಿಚಾರಗಳನ್ನು ಮುಂದಿನ ದಿನಗಳಲ್ಲಿ ಹೇಳಿಕೊಳ್ಳುವುದಾಗಿ ಚಿತ್ರತಂಡ ಮಾಹಿತಿ…
Author: AIN Author
ದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಮಲ್ಲಿಕ್ ಮತ್ತೊಂದು ಮದುವೆಯಾಗಿದ್ದು ಇವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಮಲಿಕ್ ಅವರು ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಸನಾ ಜಾವೇದ್ ಅವರೊಂದಿಗೆ ಹಸೆಮಣೆ ಏರಿರುವ ಫೋಟೊಗಳನ್ನು ಶೋಯಬ್ ಮಲಿಕ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಇತ್ತೀಚೆಗೆ ಹರಿದಾಡಿದ್ದವು. ಬುಧವಾರವಷ್ಟೇ ಸಾನಿಯಾ ಮಿರ್ಜಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಪೋಸ್ಟ್ವೊಂದು ಇದಕ್ಕೆ ಪುಷ್ಠಿ ನೀಡುವಂತಿತ್ತು. ಸನಾ ಜಾವೇದ್ ಜೊತೆ ಮಲಿಕ್ ಮದುವೆ ಆಗಿರೋದು ಅಭಿಮಾನಿಗಳಿಗೆ ಬಿಗ್ ಶಾಕ್ ಆಗಿದೆ. ಸಾನಿಯಾ ಮಿರ್ಜಾ ಅಭಿಮಾನಿಗಳು ಕೂಡ ದಿಗ್ಭ್ರಮೆ ಹೊಂದಿದ್ದಾರೆ. ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010ರಲ್ಲಿ ಹೈದರಾಬಾದ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ…
ಬೆಂಗಳೂರು: ಸೈದ್ಧಾಂತಿಕವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಎದುರಿಸುವ ಶಕ್ತಿ ಇಲ್ಲದಿದ್ದರೆ ನಿಮ್ಮ ಸೋಲನ್ನು ಒಪ್ಪಿಕೊಳ್ಳಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು (Ramesh Babu) ಅವರು ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಂಪ್ರದಾಯವಿದೆ. ಯಾವುದೇ ರಾಜಕಾರಣಿಯನ್ನು ವೈಯಕ್ತಿಕ ದ್ವೇಷದಿಂದ ಟೀಕಿಸುವುದು, ಕೆಳಮಟ್ಟದ ಟೀಕೆಗಳು ಮತ್ತು ಚಾರಿತ್ರ್ಯ ವಧೆ ಮಾಡುವಂತಹ ಟೀಕೆಗಳನ್ನು ಮಾಡುವುದು ಕಡಿಮೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ಕೆಲವು ಬಿಜೆಪಿ ನಾಯಕರುಗಳು ವ್ಯತಿರಿಕ್ತವಾಗಿ ತಮ್ಮ ವರ್ತನೆಯನ್ನು ಬದಲಾಯಿಸಿಕೊಂಡಿದ್ದಾರೆ. ಮನುಷ್ಯತ್ವ ಮರೆತು ಮಾತನಾಡುವರು, ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದರು. ಖರ್ಗೆಯವರ ಬಗ್ಗೆ ಅವರ ಕಾರ್ಯಗಳ ಬಗ್ಗೆ ಸೈದ್ಧಾಂತಿಕವಾಗಿ ಆರೋಗ್ಯಕರವಾಗಿ ಟೀಕೆ ಮಾಡಿದರೆ ನಾವು ಸ್ವೀಕಾರ ಮಾಡುತ್ತೇವೆ. ಹಿಂದೆ ಎಸ್ಎಂ ಕೃಷ್ಣರವರು ಕಾಂಗ್ರೆಸ್ನಲ್ಲಿದ್ದಾಗ ಸದಾನಂದ ಗೌಡರ (Sadananda Gowda) ನಗುವಿನ ಬಗ್ಗೆ ಟೀಕೆಯ ಮಾತನಾಡಿ ಮತ್ತೆ…
ಬೆಂಗಳೂರು: ಇಡೀ ದೇಶವೇ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕಾಗಿ ಕಾದು ಕುಳಿತಿದೆ. ರಾಮನಾಮದ ಜಪ ಎಲ್ಲ ಕಡೆ ಜೋರಾಗಿದೆ. ರಾಮ ಎಂಬ ಎರಡಕ್ಷರ ಹೊಸದೊಂದು ಅನುಭವ ನೀಡುತ್ತಿದೆ. ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾನ (Ram Lalla) ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ (Bengaluru) ಬೃಹತ್ ರಾಮನ ಮೂರ್ತಿ ಜನರನ್ನ ಆಕರ್ಷಿಸುತ್ತಿದೆ. ಸೋಮವಾರ ಐತಿಹಾಸಿಕ ಬಾಲರಾಮನ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಕನ್ನಡಿಗ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರೋ ಬಾಲರಾಮನ ವಿಗ್ರಹ ಮಂದಿರ ಸೇರಿದ್ದು, ಪ್ರಾಣಪ್ರತಿಷ್ಠಾಪನೆಯ ಕಾರ್ಯ ಸೋಮವಾರ ನಡೆಯಲಿದೆ. ಅಂದಿನ ಈ ವಿಜೃಂಭಣೆಯ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತುರದಿಂದ ಕಾಯುತ್ತಿದೆ ಇನ್ನು ಸಿಲಿಕಾನ್ ಸಿಟಿಯ ಹೃದಯ ಭಾಗದಲ್ಲಿ 15 ಅಡಿಯ ಬೃಹತ್ ರಾಮನ ಫೈಬರ್ ಮೂರ್ತಿ ನೆಲೆ ನಿಂತಿದ್ದಾನೆ. ಹೌದು, ನೀಲಾಕಾರನಾಗಿ ಕಲಾವಿದರ ಕೈಯಲ್ಲಿ ಮೂಡಿರುವ ರಾಮನ ಮೂರ್ತಿ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿರುವ ಆಂಜನೇಯ ದೇವಾಲಯದ ಹೊರಗೆ ಬರುವ ಜನರಿಗೆ ದರ್ಶನ ನೀಡುತ್ತಿದ್ದಾನೆ.
ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾ (Ram Lalla) ಪ್ರಾಣಪ್ರತಿಷ್ಠೆ ಹಿನ್ನೆಲೆ ರಾಜ್ಯದಲ್ಲಿ ಸೋಮವಾರ ರಜೆ ಘೋಷಣೆ ಮಾಡಿ ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya), ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಈ ಕಾಂಗ್ರೆಸ್ (Congress) ಸರ್ಕಾರ ರಾಮಮಂದಿರದ (Ram Mandir) ಉದ್ಘಾಟನಾ ಕಾರ್ಯಕ್ರಮದಲ್ಲೂ ರಾಜಕೀಯ ಮಾಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ರಜೆ ಘೋಷಣೆ ಮಾಡಿಲ್ಲ. ಅಂದು ರಾಜ್ಯದ ಕೋಟ್ಯಂತರ ಜನ ರಾಮ ಪ್ರತಿಷ್ಠಾಪನೆಯನ್ನು ನೋಡಲು ಕಾಯುತ್ತಿದ್ದಾರೆ. ಆದ್ರೆ ರಾಜ್ಯಸರ್ಕಾರ ಅಂದು ರಜೆ ನೀಡದೇ ಮೌನವಹಿಸಿದೆ ಎಂದು ಕಿಡಿಕಾರಿದ್ದಾರೆ ಈಗಾಗಲೇ ದೇಶದಲ್ಲಿ ಬಿಜೆಪಿ (BJP) ಸರ್ಕಾರ ಇರುವ ರಾಜ್ಯಗಳು ರಜೆ ಘೋಷಣೆ ಮಾಡುತ್ತಿವೆ. ಇಡೀ ದೇಶ ಸೋಮವಾರ ರಾಮ ಲಲ್ಲಾ ಪ್ರತಿಷ್ಠಾಪನೆಗೆ ಕಾತರದಿಂದ ಕಾಯುತ್ತಿದೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರ ರಜೆ ಘೋಷಣೆ ಮಾಡಬೇಕು. ಸಾವಿರಾರು ಸಂಘಟನೆಗಳು ಸಿಎಂಗೆ ಮನವಿ…
ಅಯೋಧ್ಯೆ (ಉತ್ತರ ಪ್ರದೇಶ): ರಾಮಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆ (Pran Pratistha) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಕಠಿಣ ವ್ರತ ಕೈಗೊಂಡಿದ್ದಾರೆ. ವ್ರತದ ಭಾಗವಾಗಿ ಮೋದಿಯವರು (Narendra Modi) ಪ್ರತಿನಿತ್ಯ ಒಂದು ಗಂಟೆಗೂ ಅಧಿಕ ಕಾಲ ವಿಶೇಷ ಮಂತ್ರ ಪಠಣ ಮಾಡುತ್ತಿದ್ದಾರೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮೂಲಗಳು ತಿಳಿಸಿವೆ. 11 ದಿನಗಳ ಕಠಿಣವ್ರತ ಕೈಗೊಂಡಿರುವ ಪ್ರಧಾನಿ ಮೋದಿ ಪ್ರತಿದಿನ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಪುಣ್ಯಸ್ನಾನ ಮಾಡಿ, ಸುಮಾರು 1 ಗಂಟೆ 11 ನಿಮಿಷಗಳ ಕಾಲ ಮಂತ್ರ ಪಠಣ ಮಾಡುತ್ತಿದ್ದಾರೆ. ಕೆಲ ಆಧ್ಯಾತ್ಮಿಕ ಮಹಾ ಗುರುಗಳಿಂದ ಪ್ರಧಾನಿ ಈ ಮಂತ್ರವನ್ನು ಸ್ವೀಕರಿಸಿದ್ದರು. ಅವರ 11 ದಿನಗಳ ವ್ರತದಲ್ಲಿ ಈ ವಿಧಾನವು ಅತ್ಯಂತ ನಿರ್ಣಾಯಕವಾಗಿದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೇ ವ್ರತದ ಭಾಗವಾಗಿ ಮೋದಿಯವರು (Narendra Modi) ಕೇವಲ ಎಳನೀರು ಸೇವನೆ ಮಾಡುತ್ತಿದ್ದಾರೆ. ಕೇವಲ ಹೊದಿಕೆಯೊಂದಿಗೆ ನೆಲದ ಮೇಲೆ ಮಲಗುತ್ತಿದ್ದಾರೆ. 11-ದಿನಗಳ ಈ ವಿಶೇಷ ವ್ರತದಲ್ಲಿ,…
ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾ (Prana Pratishtha) ಕಾರ್ಯಕ್ರಮ ಸಮಿಪಿಸುತ್ತಿದ್ದಂತೆ, ಇಂದು (ಶುಕ್ರವಾರ) ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನಿತ ಗಣ್ಯರಿಗಾಗಿ ಪ್ರವೇಶ ಪತ್ರದ ಮಾದರಿಯನ್ನು ಬಿಡುಗಡೆ ಮಾಡಿದೆ. ಪ್ರವೇಶ ಪತ್ರದಲ್ಲಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರ ದೇವಾಲಯಕ್ಕೆ ಪ್ರವೇಶ ಸಿಗಲಿದೆ ಎಂದು ಸ್ಪಷ್ಟಪಡಿಸಿದೆ. ಅಯೋಧ್ಯೆ (Ayodhya) ರಾಮಮಂದಿರದ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ 3,000 ವಿವಿಐಪಿಗಳು ಸೇರಿ 7,000 ಕ್ಕೂ ಹೆಚ್ಚು ಗಣ್ಯ ಅತಿಥಿಗಳಿಗೆ ಆಮಂತ್ರಣ ಪತ್ರಿಕೆ ಮತ್ತು ಪ್ರವೇಶ ಪತ್ರಗಳನ್ನು ಕಳುಹಿಸಿದೆ. ಕ್ಯೂಆರ್ ಕೋಡ್ ಹೊಂದಿದ್ದು, ಅದನ್ನು ಸ್ಕ್ಯಾನ್ ಮಾಡಿದ ಬಳಿಕ ಮಾತ್ರ ಕಾರ್ಯಕ್ರಮಕ್ಕೆ ಪ್ರವೇಶ ಸಿಗಲಿದೆ ಎಂದು ತಿಳಿಸಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಬಾಲರಾಮನ ಪ್ರಾಣಪ್ರತಿಷ್ಠಾ ಉತ್ಸವಕ್ಕೆ ಪ್ರವೇಶ ಪಡೆಯಬೇಕಾದರೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನೀಡಿದ ಪ್ರವೇಶ ಪತ್ರದಲ್ಲಿರುವ ಕ್ಯೂಆರ್…
ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ನಡೆಸಿರುವ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಮರ್ಥವಾಗಿ ನ್ಯಾಯಮಂಡಿಸಲು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ದಾವೆ ಹೂಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2012ರಲ್ಲಿ ಶಾಸಕ ಅಭಯ ಪಾಟೀಲ ವಿರುದ್ಧ ಅಕ್ರಮವಾಗಿ ಆಸ್ತಿ ಕಬಳಿಕೆ ಮಾಡಿರುವ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ನ್ಯಾಯಾಲಯದಲ್ಲೂ ವಾದ ವಿವಾದ ನಡೆಯಿತು. ಲೋಕಾಯುಕ್ತ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅದು ರದ್ದಾಗಿತ್ತು. ಈಗ ಸುಪ್ರೀಂಕೋರ್ಟ್ ನಲ್ಲಿ ಮತ್ತೆ ಪ್ರಕರಣ ದಾಖಲಿಸಲಾಗಿದೆ ಎಂದರು. ನಾನು ಯಾವುದೇ ವ್ಯಕ್ತಿಯ ವಿರುದ್ಧ ಹೋರಾಟ ನಡೆಸಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದೇನೆ. ಸುಪ್ರೀಂಕೋಟ್೯ ಲೋಕಾಯುಕ್ತರು ಶಾಸಕ ಅಭಯ ಪಾಟೀಲಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದರು. ನ್ಯಾ. ನಿತಿನ್ ಬೋಳಬಂದಿ ಉಪಸ್ಥಿತರಿದ್ದರು.
ಬೆಂಗಳೂರು: ರಾಮಮಂದಿರ ಉದ್ಘಾಟನಾ ದಿನದಂದು ರಜೆ ನೀಡಬೇಕು ಎಂದು ವಿರೋಧ ಪಕ್ಷದ ಒತ್ತಾಯ ವಿಚಾರ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಮಮಂದಿರ ಉದ್ಘಾಟನಾ ದಿನದಂದು ರಜೆ ನೀಡಬೇಕು ಎಂದು ಗೊತ್ತಿಲ್ಲ ನನಗೆ, ಆ ವಿಚಾರ ಗೊತ್ತಿಲ್ಲ ಆ ಪತ್ರ ನನಗೆ ಬಂದಿಲ್ಲ ನೋಡ್ತೀನಿ ಎಂದಷ್ಟೇ ಹೇಳಿದರು. https://ainlivenews.com/ta-sharavana-honored-for-his-achievements-in-the-field-of-commerce-in-bahrain/ ಸಿಎಂ,ಸಚಿವರು ಅಯೋಧ್ಯೆಗೆ ತೆರಳುವ ವಿಚಾರ ಬಗ್ಗೆಯೂ ಮಾತನಾಡಿ ನಾನು ಇನ್ನೊಂದು ದಿನ ಹೋಗ್ತೀನಿ ಅಂತ ಹೇಳಿದ್ದೇನೆ ತಾನೇ ಮತ್ತೆ ಮತ್ತೆ ಅದೇ ಪ್ರಶ್ನೆ ಕೇಳ್ತೀರಾ ಎಂದ ಸಿಎಂ ಗರಂ ಆದರು. ರಾಜಕೀಯ ಮಾಡ್ತಿದ್ದಾರೆ ಅದಕ್ಕೆ ನಾನು ಹೋಗ್ತಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದರು.
ಬೆಂಗಳೂರು: ಬಹ್ರೇನ್ನಲ್ಲಿರುವ ಭಾರತದ ರಾಯಭಾರಿ ಕಚೇರಿಯಲ್ಲಿ ಆಯೋಜಿಸಿದ ಸಂವಾದದಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಭಾಗಿಯಾಗಿದರು. ವಾಣಿಜ್ಯ ಕ್ಷೇತ್ರದಲ್ಲಿ ಟಿ.ಎ.ಶರವಣ ಅವರ ಸಾಧನೆಗಳನ್ನು ಗುರುತಿಸಿ, ಬಹ್ರೇನ್ನಲ್ಲಿ, ಬಹರೈನ್ ಇಂಡಿಯಾ ಇಂಟರ್ನ್ಯಾಶನಲ್ ಅವಾರ್ಡ್-2024 ನೀಡಿ ಗೌರವಿಸಿದರು ಇದೇ ಸಂದರ್ಭದಲ್ಲಿ ದ್ವೀಪ ಹಾಗೂ ಸೌದಿ ಅರೇಬಿಯದಲ್ಲಿ ಸಕ್ರಿಯವಾಗಿರುವ ಕರ್ನಾಟಕ ಮೂಲದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ನನ್ನನ್ನು ಇಲ್ಲಿಗೆ ಕರೆಸಿ ಗೌರವ ನೀಡಿದಕ್ಕೆ ತುಂಬು ಹೃದಯದಿಂದ ಧನ್ಯವಾದ ತಿಳಿಸುತ್ತೇನೆ ಕರ್ನಾಟಕದಿಂದ ಇಲ್ಲಿ ಬಂದಿದ್ದೆ ತುಂಬಾ ಸಂತೋಷವಾಗಿದೆ. ನಾವು ಇಲ್ಲಿ ಕೂಡ ಬ್ಯುಸಿನೆಸ್ ಮಾಡ್ತಿರೋದಕ್ಕೆ ಖುಷಿಯಾಗುತ್ತಿದೆ ಎಂದು ಟಿ.ಎ.ಶರವಣ ಅವರು ತಿಳಿಸಿದರು.