Author: AIN Author

ಬೆಂಗಳೂರು:- ವ್ಹೀಲಿಂಗ್ ಮಾಡಿದ ಪ್ರಕರಣಕ್ಕೆ ಸಂಧಿಸಿದಂತೆ ಮಹಿಳೆಯೊಬ್ಬರು ಭಾರೀ ಮೊತ್ತದ ದಂಡವನ್ನು ತೆತ್ತಿದ್ದಾರೆ. ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ವಾಹನ ವ್ಹೀಲಿಂಗ್ ಮಾಡಲು ಬಳಕೆ ಆಗಿತ್ತು. ಈ ಸಂಬಂಧ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದ ಪೊಲೀಸರು ಆತನಿಂದಲೂ ದಂಡ ವಸೂಲಿ ಮಾಡಿದ್ದರು. ವಾಹನ ಮಾಲೀಕರಾದ ಮಹಿಳೆಗೆ ಬರೊಬ್ಬರಿ 25,200 ರೂಪಾಯಿ ದಂಡ ಕಟ್ಟಿದ್ದಾರೆ. ಇದೇ ವರ್ಷ ಜನವರಿಯಲ್ಲಿ ನಗರದ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ತಮ್ಮ ಮಿತಿಯಲ್ಲಿ ವ್ಹೀಲಿಂಗ್ ಮಾಡಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಅಪ್ರಾಪ್ತ ಸವಾರರನ್ನು ಬಂಧಿಸಿದ್ದರು. ಹುಡುಗ ತನ್ನ ನೆರೆಹೊರೆಯವರ ಹೆಸರಿನಲ್ಲಿ ನೋಂದಾಯಿಸಿದ ಸ್ಕೂಟರ್ ವ್ಹೀಲಿಂಗ್‌ಗೆ ಬಳಸಿದ್ದಾನೆ ಎಂಬುದು ತಿಳಿದು ಬಂದಿತ್ತು. ಈ ಅಪ್ರಾಪ್ತ ವಯಸ್ಕನು ಸಿಕ್ಕಿಬಿದ್ದ ತಕ್ಷಣ ಮಾಡಿದ ತಪ್ಪಿಗೆ ಜೆಜೆ ಮಂಡಳಿಯ ಅಡಿಯಲ್ಲಿ ರೂ 1,500 ದಂಡವನ್ನು ಪಾವತಿಸಿದ. ಅಪ್ರಾಪ್ತರು ವಾಹನ ಸವಾರಿ ಮಾಡಿದರೆ ಮಾಲೀಕರನ್ನು ಜವಾಬ್ದಾರಿ ಮಾಡುವ ನಿಯಮ ಇದೆ. ಅದರ ಅಡಿ ವಾಹನದ ಮಾಲೀಕರಾದ ಮಂಜುಳಾ ಎಂ ಅವರಿಗೆ ದಂಡ ವಿಧಿಸಲಾಗಿತ್ತು. ಆದರೆ ಅವರು ಈವರೆಗೂ ಪಾವತಿಸಿರಲಿಲ್ಲ. ಹೀಗಾಗಿ ಅವರ…

Read More

ಪಾಕಿಸ್ತಾನ: ದೇಶದಲ್ಲಿ ಲ್ಯಾಮಿನೇಷನ್ ಪೇಪರ್ ಕೊರತೆಯಿಂದಾಗಿ ಪಾಕಿಸ್ತಾನಿ ನಾಗರಿಕರು ತಮ್ಮ ಪಾಸ್‌ಪೋರ್ಟ್‌ಗಳನ್ನು ಪಡೆಯಲು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಲ್ಯಾಮಿನೇಶನ್ ಪೇಪರ್ ಪಾಸ್‌ಪೋರ್ಟ್‌ಗಳಲ್ಲಿ ಅತ್ಯಗತ್ಯ ಅಂಶವಾಗಿದೆ ಮತ್ತು ಇದನ್ನು ಸಾಮಾನ್ಯವಾಗಿ ಫ್ರಾನ್ಸ್‌ನಿಂದ ಆಮದು ಮಾಡಿಕೊಳ್ಳಲಾಗುತ್ತದೆ ಎಂದು ಪಾಕಿಸ್ತಾನದ ಡೈರೆಕ್ಟರೇಟ್ ಜನರಲ್ ಆಫ್ ಇಮಿಗ್ರೇಶನ್ ಮತ್ತು ಪಾಸ್‌ಪೋರ್ಟ್‌ಗಳನ್ನು (ಡಿಜಿಐ & ಪಿ) ಉಲ್ಲೇಖಿಸಿ ವರದಿ ಹೇಳಿದೆ. ಕಾಗದದ ಕೊರತೆಯು ರಾಷ್ಟ್ರವ್ಯಾಪಿ ಪಾಸ್‌ಪೋರ್ಟ್‌ಗಳ ಕೊರತೆಗೆ ಕಾರಣವಾಗಿದೆ. ವಿದೇಶದಲ್ಲಿ ಓದಲು ಬಯಸಿರುವ ಅಥವಾ ಆರ್ಥಿಕ ಸಂಕಷ್ಟದಲ್ಲಿರುವ ದೇಶದಿಂದ ಹೊರಹೋಗುವ ಅವರ ಆಶಯಗಳು ಭಗ್ನಗೊಂಡಿರುವ ಕಾರಣ ದೇಶಾದ್ಯಂತ ಜನರು ಕಂಗಾಲಾಗಿದ್ದಾರೆ. ಯುಕೆ ಅಥವಾ ಇಟಲಿಯಂತಹ ಸ್ಥಳಗಳಲ್ಲಿನ ವಿಶ್ವವಿದ್ಯಾಲಯಗಳಿಗೆ ದಾಖಲಾದ ಹಲವಾರು ವಿದ್ಯಾರ್ಥಿಗಳು ತಮ್ಮ ಪಾಸ್‌ ಪೋರ್ಟ್‌ಗಳನ್ನು ಸಮಯಕ್ಕೆ ಸರಿಯಾಗಿ ಪಡೆಯದ ಕಾರಣ ಅವರು ಅಲ್ಲಿಗೆ ಹೋಗಲು ಸಾಧ್ಯವಾಗಿಲ್ಲ. ಸರ್ಕಾರಿ ಇಲಾಖೆಯ ಅಸಮರ್ಥತೆಗೆ ಸಾಮಾನ್ಯ ನಾಗರೀಕರು ಬೆಲೆ ತೆರಬೇಕಾಗಿದೆ ಎಂದು ಅವರು ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ಗೆ ತಿಳಿಸಿದರು. https://ainlivenews.com/joint_pain_suprem_ray_treatment_reiki/ ಆಂತರಿಕ ಸಚಿವಾಲಯದ ಮಾಧ್ಯಮದ ಮಹಾನಿರ್ದೇಶಕ…

Read More

ಮುಂಬೈ: ಬ್ಯಾಟಿಂಗ್‌ನಲ್ಲಿ ಅಬ್ಬರಿಸುತ್ತಿರುವ ರೋಹಿತ್‌ ಶರ್ಮಾ (Rohit Sharma) ನಾಯಕನಾಗಿ ಭಾರತದ (Team India) ಪರ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್‌ (New Zealand) ವಿರುದ್ಧದ ಸೆಮಿಫೈನಲ್‌ (Semi Final) ಗೆಲ್ಲುವ ಮೂಲಕ ವಿಶ್ವಕಪ್‌ನಲ್ಲಿ ಆರಂಭದಿಂದ ಸೆಮಿಫೈನಲ್‌ವರೆಗೆ ಸತತ 10 ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್‌ ಶರ್ಮಾ ಪಾತ್ರರಾಗಿದ್ದಾರೆ. ಎಂಎಸ್‌ ಧೋನಿ (MS Dhoni) ನೇತೃತ್ವದಲ್ಲಿ 2011 ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯವನ್ನು ಸೋತಿತ್ತು. ಮೊದಲು ಬ್ಯಾಟ್‌ ಮಾಡಿದ್ದ ಭಾರತ 296 ರನ್‌ಗಳಿಗೆ ಆಲೌಟ್‌ ಆಗಿದ್ದರೆ ದಕ್ಷಿಣ ಆಫ್ರಿಕಾ 49.4 ಓವರ್‌ಗಳಲ್ಲಿ 300 ರನ್‌ ಹೊಡೆಯುವ ಮೂಲಕ ಜಯ ಗಳಿಸಿತ್ತು. 2015 ಮತ್ತು 2019 ವಿಶ್ವಕಪ್‌ ಸೆಮಿಫೈನಲಿನಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ವಿರುದ್ಧ ಭಾರತ ಸೋತಿತ್ತು. ಈಗ ಭಾರತ ನಾಲ್ಕನೇಯ ಬಾರಿಗೆ ಫೈನಲ್‌ ಪ್ರವೇಶಿಸಿದೆ. 2003ರಲ್ಲಿ ಭಾರತ ರನ್ನರ್‌ ಅಪ್‌ ಆಗಿದ್ದರೆ 1983 ಮತ್ತು 2011ರಲ್ಲಿ ಚಾಂಪಿಯನ್‌ ಆಗಿ…

Read More

ಬೆಂಗಳೂರು:- ಅನಧಿಕೃತ ಪಟಾಕಿ‌ ಮಳಿಗೆ ತೆರೆಯಲು ಅವಕಾಶ ನೀಡಿದ ಆರೋಪದ ಹಿನ್ನೆಲೆ, ಜೆ.ಬಿ.ನಗರ ಇನ್ಸ್​​ಪೆಕ್ಟರ್​​ ರನ್ನು ಸಸ್ಪೆಂಡ್ ಮಾಡಲಾಗಿದೆ. ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಜಿ.ಬಿ.ನಗರ ಪೊಲೀಸ್ ಠಾಣೆಗೆ ಇನ್ಸ್​​ಪೆಕ್ಟರ್ ಆಗಿ ಬಸವರಾಜ್ ಅವರು ಅಧಿಕಾರ ಸ್ವೀಕರಿಸಿದ್ದರು. ದೀಪಾವಳಿ ಹಿನ್ನೆಲೆಯಲ್ಲಿ ನಗರದಲ್ಲಿ ಅನಧಿಕೃತವಾಗಿ ಪಟಾಕಿ ಮಳಿಗೆ ಮಾಲೀಕರಿಗೆ ಮಾರಾಟಕ್ಕೆ ಅನುಮತಿ ನೀಡಬಾರದು. ಒಂದು ವೇಳೆ ಕಾನೂನುಬಾಹಿರವಾಗಿ ಪಟಾಕಿ ಮಾರಾಟ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಯುಕ್ತರು ತಾಕೀತು ಮಾಡಿದ್ದರು. ಜೀವನಭೀಮಾನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಪಟಾಕಿ ಮಾರಾಟಕ್ಕೆ ಅನುಮತಿ ನೀಡಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಅನುಮತಿ ಇಲ್ಲದೇ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಕಂಡುಬಂತು. ವಿಚಾರಣೆಯಲ್ಲಿ ಮೇಲ್ನೋಟಕ್ಕೆ ಇನ್ಸ್​ಪೆಕ್ಟರ್​ ಬಸವರಾಜ್ ಅವರು ನಿರ್ಲಕ್ಷ್ಯವಹಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನ ಸಸ್ಪೆಂಡ್ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Read More

ಕನ್ನಡದ ‘ಕಿಸ್’ ನಟಿ ಶ್ರೀಲೀಲಾ (Sreeleela) ತೆಲುಗು ಅಂಗಳದಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚ್ತಿದ್ದಾರೆ. ಸ್ಟಾರ್ ನಟರಿಗೆ ಸಾಲು ಸಾಲು ಸಿನಿಮಾಗಳಿಗೆ ಹೀರೋಯಿನ್ ಆಗುವ ಮೂಲಕ ರಶ್ಮಿಕಾ, ಪೂಜಾ, ಕೃತಿ ಶೆಟ್ಟಿಗೆ ಶ್ರೀಲೀಲಾ ಠಕ್ಕರ್ ಕೊಡ್ತಿದ್ದಾರೆ. ಹೀಗಿರುವಾಗ ಶ್ರೀಲೀಲಾ ಕನ್ನಡ ಸಿನಿಮಾ ಮಾಡಲ್ವಾ ಎಂದು ಎದುರು ನೋಡ್ತಿದ್ದವರಿಗೆ ನಟಿ ಸಿಹಿ ಸುದ್ದಿ ನೀಡಿದ್ದಾರೆ. ‘ಭರಾಟೆ’ ಬ್ಯೂಟಿ ಶ್ರೀಲೀಲಾ ಈಗ ಟಾಲಿವುಡ್‌ನ(Tollywood) ಡ್ರೀಮ್‌ ಗರ್ಲ್‌ ಆಗಿ ಮೆರೆಯುತ್ತಿದ್ದಾರೆ. ಒಂದು ಸಿನಿಮಾಗೆ 3ರಿಂದ 4 ಕೋಟಿ ರೂಪಾಯಿ ಸಂಭಾವನೆ ಜಾರ್ಜ್ ಮಾಡುವ ಮೂಲಕ ಸೆನ್ಸೇಷನ್ ಕ್ರಿಯೆಟ್ ಮಾಡ್ತಿದ್ದಾರೆ ತೆಲುಗಿನಲ್ಲೇ ಬ್ಯುಸಿ ನಟಿಯಾಗಿರೋ ಶ್ರೀಲೀಲಾ ಕಡೆಯದಾಗಿ ‘ಬೈಟು ಲವ್’ ಚಿತ್ರದಲ್ಲಿ ಧನ್ವೀರ್‌ಗೆ ಜೋಡಿಯಾಗಿ ನಟಿಸಿದ್ರು. ಸದ್ಯ ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ ಜೊತೆ ‘ಜ್ಯೂನಿಯರ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರ ಕನ್ನಡದ ಜೊತೆ ತೆಲುಗಿನಲ್ಲಿಯೂ ರಿಲೀಸ್ ಆಗಲಿದೆ. ಈ ಚಿತ್ರ ಬಿಟ್ಟು ಇದೀಗ ಕನ್ನಡದ ಹೊಸ ಚಿತ್ರಕ್ಕೆ ಶ್ರೀಲೀಲಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸದ್ಯದಲ್ಲೇ ತಮ್ಮ…

Read More

ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಗುರುವಾರ ನಡೆದ ಸೌತ್ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್​​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ 49.4 ಓವರ್​ಗಳಲ್ಲಿ 212 ರನ್​ಗಳಿಸಿ ಆಲೌಟ್ ಆಯಿತು. 213 ರನ್​ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡವು 193 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇದಾಗ್ಯೂ ಅಂತಿಮ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಫೈನಲ್​ಗೆ ಪ್ರವೇಶಿಸಿರುವ ಆಸ್ಟ್ರೇಲಿಯಾ ತಂಡವು ನವೆಂಬರ್ 19 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಅಂತಿಮ…

Read More

ಬೆಂಗಳೂರು:- CM ಪುತ್ರ ವರ್ಗಾವಣೆ ಬಗ್ಗೆ ಮಾತನಾಡಿಲ್ಲ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವರುಣಾ ಕ್ಷೇತ್ರದ ಶಾಲೆಗಳ ಅಭಿವೃದ್ಧಿ ವಿಚಾರದಲ್ಲಿ ನಡೆದ ದೂರವಾಣಿ ಮಾತುಕತೆಯನ್ನು ವರ್ಗಾವಣೆಯದ್ದು ಎಂದು ಕಲ್ಪಿಸಿಕೊಂಡು ಹೆಚ್ ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿರುವುದು ಮಾಜಿ ಮುಖ್ಯಮಂತ್ರಿಯಾದ ಅವರಿಗೆ ಶೋಭೆ ತರಲ್ಲ. ಇದೊಂದು ಹಳೆಯ ಕ್ಲಿಪಿಂಗ್. ವರ್ಗಾವಣೆ ಸಂಬಂಧ ಯಾವುದೇ ಮಾತು ಆಡಿಲ್ಲ. ಶಾಲೆಗಳ ಅಭಿವೃದ್ಧಿಗೆ ಸೀಮಿತವಾಗಿ ಮಾತನಾಡಿದ್ದಾರೆ. ಆದರೂ ಅದನ್ನೇ ರಾಜಕೀಯವಾಗಿ ಬಳಸಿಕೊಂಡು ಇಲ್ಲ ಸಲ್ಲದ ಆರೋಪ ಮಾಡಿರುವುದು ಸರಿಯಲ್ಲ. ತಮ್ಮ ಮೇಲಿನ ವಿವಾದದ ಗಮನ ಬೇರೆಡೆ ಸೆಳೆಯಲು ಯತೀಂದ್ರ ವಿಚಾರ ಎಳೆದು ತಂದಿದ್ದಾರೆ ಎಂದು ದೂರಿದ್ದಾರೆ. ರಾಜಕಾರಣದಲ್ಲಿ ಸತ್ಯಾಂಶ ಇದ್ದರೆ, ದಾಖಲೆ ಸಮೇತ ಆರೋಪ ಮಾಡಲಿ. ಅದು ಬಿಟ್ಟು ಹತಾಶರಾಗಿ ಕಥೆ ಕಟ್ಟಿ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ ಎಂದು ಹೇಳಿದ್ದಾರೆ

Read More

ಬೇಸಿಗೆ ಕಾಲದಲ್ಲಿ ಎಲ್ಲಾ ಕಡೆ ಕಂಡುಬರುವ ಸೇಬುಹಣ್ಣು ಆರೋಗ್ಯಕ್ಕೆ ಬಲು ಪ್ರಯೋಜನಕಾರಿ. ಮುಖ್ಯವಾಗಿ ಹೃದಯದ ಕಾಯಿಲೆಗಳು ಬರಬಾರದು ಎನ್ನುವ ಕಾರಣಕ್ಕೆ ಪ್ರತಿಯೊಬ್ಬರೂ ದಿನ ಒಂದೊಂದು ಸೇಬು ಹಣ್ಣು ತಿನ್ನಲು ಬಯಸುತ್ತಾರೆ.  ಆದರೆ ನಮ್ಮ ಅಭ್ಯಾಸ ಹೇಗೆ ಬಂದಿದೆ ಎಂದರೆ ಸೇಬು ಹಣ್ಣಿನ ಸಿಪ್ಪೆಯ ಮೇಲ್ಭಾಗದಲ್ಲಿ ಸೇಬು ಹಣ್ಣಿಗೆ ಯಾವುದೇ ಕೀಟಗಳು ಹಾವಳಿ ಮಾಡಬಾರದು ಎನ್ನುವ ಕಾರಣಕ್ಕೆ ಮೇಣದ ಲೇಪನ ಮಾಡಿರುತ್ತಾರೆ. ಹಾಗಾಗಿ ಇದು ಆರೋಗ್ಯಕ್ಕೆ ಕೆಟ್ಟದ್ದು ಎಂಬ ಕಾರಣದಿಂದ ಸೇಬು ಹಣ್ಣಿನ ಸಿಪ್ಪೆಯನ್ನು ತೆಗೆದು ಹಾಕಿ ಕೇವಲ ಒಳಗಿನ ತಿರುಳನ್ನು ತಿನ್ನುತ್ತೇವೆ. ಆದರೆ ಸರಿಯಾಗಿ ಸ್ವಚ್ಛ ಮಾಡಿಕೊಂಡು ಸಿಪ್ಪೆಸಹಿತ ಸೇಬುಹಣ್ಣನ್ನು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳು ಎರಡು ಪಟ್ಟು ಆಗುತ್ತವೆ. ಒಂದು ಅಧ್ಯಯನ ಹೇಳುವಂತೆ ಸೇಬು ಹಣ್ಣಿನ ಸಿಪ್ಪೆಯಲ್ಲಿ ಅತಿ ಹೆಚ್ಚಿನ ಪ್ರಮಾಣದ ಫಿನಾಲಿಕ್ ಸಂಯುಕ್ತಗಳು ಕಂಡು ಬರುತ್ತದೆ. ಇವುಗಳು ಕೇವಲ ಸಣ್ಣ ಪ್ರಮಾಣದಲ್ಲಿ ಇದ್ದರೂ ಸಹ ಸೇಬು ಹಣ್ಣಿನ ತೂಕಕ್ಕೆ ಬಹು ಮುಖ್ಯ ಕಾರಣ ಆಗುತ್ತದೆ. ಸೇಬು ಹಣ್ಣಿನ ಸಿಪ್ಪೆಯ…

Read More

ಚೆನ್ನೈ: ತನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ ಎಂದು ದೇವರನ್ನು ಶಪಿಸಿ ಮತ್ತು ದೇವಾಲಯದ ಒಳಗೆ ಪೆಟ್ರೋಲ್ ಬಾಂಬ್ ಎಸೆದ ಘಟನೆ ನಡೆದಿದೆ. ನಗರದ ಪ್ಯಾರಿಸ್ ಕಾರ್ನರ್ ಪ್ರದೇಶದಲ್ಲಿ ಇತಿಹಾಸ ಶೀಟರ್ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಮೇಲೆ ಮೊಲೊಟೊವ್ ಕಾಕ್ಟೈಲ್  ಎಸೆದ ನಂತರ ಉದ್ವಿಗ್ನತೆ ಉಂಟಾಗಿದೆ. ಆರೋಪಿಯನ್ನು ಮುರಳೀಕೃಷ್ಣನ್ (38) ಎಂದು ಗುರುತಿಸಲಾಗಿದ್ದು, ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ಪೊಲೀಸರ ಪ್ರಕಾರ, ಆರೋಪಿಯು ಕುಡಿದ ಅಮಲಿನಲ್ಲಿ, ಕೈಯಲ್ಲಿ ಪೆಟ್ರೋಲ್ ಬಾಂಬ್ ನೊಂದಿಗೆ ದೇವಾಲಯದ ಮುಂದೆ ವಿವಾದದಲ್ಲಿ ಭಾಗಿಯಾಗಿದ್ದನು. ತನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ ಎಂದು ಅವನು ದೇವರನ್ನು ಶಪಿಸಿ ಮತ್ತು ದೇವಾಲಯದ ಒಳಗೆ ಪೆಟ್ರೋಲ್ ಬಾಂಬ್ ಎಸೆದನು. ಕಳೆದ ನಾಲ್ಕು ವರ್ಷಗಳಿಂದ ಈ ದೇವರನ್ನು ಪೂಜಿಸುತ್ತಿದ್ದೇನೆ ಆದರೆ ದೇವರು ಪ್ರತಿಯಾಗಿ ಏನನ್ನೂ ನೀಡಲಿಲ್ಲ ಎಂದು ಮುರಳಿ ಕೃಷ್ಣನ್ ಪೊಲೀಸರಿಗೆ ತಿಳಿಸಿದ್ದಾರೆ.

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್‌ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್‌ ರೂಲ್ಸ್‌ (Tough Rules) ಜಾರಿ ಮಾಡಿದೆ. ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅ‍ಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ. ಏನೇನುರೂಲ್ಸ್‌? – ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ. – ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ. – ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ. – ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು. – ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ ಇರುವ…

Read More