Author: AIN Author

ಬೆಂಗಳೂರು: ಬೀದಿನಾಯಿ ಕಚ್ಚಿ ಸತ್ತರೆ 5 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 5 ಸಾವಿರ ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಪ್ರಕರಣದ ಕುರಿತು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 2023ರ ಅ.6ರಂದು ಸಭೆ ನಡೆಸಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಐದು ಸಾವಿರ ರೂ. ಹಾಗೂ ಜೀವ ಕಳೆದುಕೊಂಡವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಕುರಿತು ರ್ಚಚಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮುಂದಿನ 4 ವಾರಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿತು

Read More

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ  ಸವಾಲ್ ಹಾಕಿದ್ದಾರೆ. ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ…

Read More

ಹಾಸನ: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ಆಗುತ್ತಿದ್ದಂತೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಆದರೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪರ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್​​ ಮಾಡಿದ್ದಾರೆ. ಒಂದು ಕ್ಷೇತ್ರದ ಜವಾಬ್ದಾರಿ ಇರುವಾಗ ಇದೆಲ್ಲ ಸಾಮಾನ್ಯ. ಅಧಿಕಾರ ಇದ್ದಾಗ ಕೆಲಸ ಮಾಡಬೇಕೆಂದು ಹೇಳ್ತಾರೆ, ಇದು ತಪ್ಪಾ? ಯತೀಂದ್ರ ಶಾಸಕರಾಗಿದ್ದರು, ಕೆಲಸ ಆಗಬೇಕೆಂದು ಹೇಳಿರಬಹುದು. https://ainlivenews.com/joint_pain_suprem_ray_treatment_reiki/ ಯತೀಂದ್ರ ಮುಖ್ಯಮಂತ್ರಿ ಕ್ಷೇತ್ರದ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದೆಕ್ಕಲ್ಲಾ ನಾನು ಸಣ್ಣದಾಗಿ ಮಾತನಾಡಲು ಹೋಗಲ್ಲ. ಹೆಚ್​ಡಿಡಿ PWD ಸಚಿವರಾಗಿದ್ದಾಗ ನಾನು ಅವರ ಕ್ಷೇತ್ರ ನೋಡಿಕೊಳ್ತಿದ್ದೆ. ಹಾಗಾಗಿ ಒಂದು ಕ್ಷೇತ್ರದ ಜವಾಬ್ದಾರಿ ಇದ್ದಾಗ ಏನೋ ಮಾತಾಡಿರುತ್ತಾರೆ ಎಂದು ಹಾಸನದಲ್ಲಿ ಯತೀಂದ್ರ ಪರ JDS​ ಶಾಸಕ ಹೆಚ್​.ಡಿ.ರೇವಣ್ಣ ಬ್ಯಾಟಿಂಗ್ ಮಾಡಿದ್ದಾರೆ.

Read More

ಬೆಂಗಳೂರು: ನಾನು ವಿಡಿಯೊ ನೋಡಿಲ್ಲ, ನನಗೆ ಗೊತ್ತಿಲ್ಲ, ನಾನೇಕೆ ಪ್ರತಿಕ್ರಿಯಿಸಿಲ್ಲ, ಗೊತ್ತಿಲ್ಲದಿರುವ ವಿಷಯ ಬಗ್ಗೆ ಮಾತನಾಡುವುದಿಲ್ಲ ಎಂದು ಹರಕೆಯ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಅವರು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಉಂಟಾಗಿದೆ ಎಂದು ವಿವಾದ ಎದ್ದಿದ್ದು, ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ಕೇಳಿದಾಗ ಗೃಹ ಸಚಿವ ಡಾ ಜಿ ಪರಮೇಶ್ವರ್ ನಿರಾಕರಿಸಿದ್ದಾರೆ. ಸರ್ಕಾರದಲ್ಲಿ ಪ್ರತಿನಿತ್ಯ ನೂರೆಂಟು ವಿಚಾರಗಳು, ಮಾತುಗಳು ನಡೆಯುತ್ತಿವೆ. ನಮ್ಮ ಆಡಳಿತದಲ್ಲಿ ಹತ್ತಾರು ವಿಷಯಗಳಿವೆ. ಅವರು ಯಾವುದೋ ವಿಚಾರ ಬಗ್ಗೆ ಮಾತನಾಡಿರಬಹುದು, ವಿರೋಧ ಪಕ್ಷದವರು ದಿನನಿತ್ಯ ಆರೋಪ ಮಾಡುತ್ತಾರೆ. ಅವರ ಮಾತಿಗೆಲ್ಲಾ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದರು. ನಮ್ಮಗೆ ಆಡಳಿತ ನಡೆಸಲು ಜನರು ನಮಗೆ ಅವಕಾಶ ಕೊಟ್ಟಿದ್ದಾರೆ. ಆಡಳಿತ ಮಾಡುತ್ತಿದ್ದೇವೆ, ಜನರಿಗೆ ನೀಡಿದ ಭರವಸೆಗಳನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ, ವಿರೋಧ ಪಕ್ಷದವರು ಅವರ ಕೆಲಸ ಮಾಡುತ್ತಿದ್ದಾರೆ ಎಂದರು.

Read More

ಬೆಂಗಳೂರು: ಮಾಜಿ ಸಿಎಂ ಆಗಿ ವಿದ್ಯುತ್​​​​ ಕಳ್ಳತನ ಮಾಡಿದ್ದು ತಪ್ಪು ಅಲ್ವಾ? ಇದನ್ನು ಮುಚ್ಚಿಕೊಳ್ಳಲು ಯತೀಂದ್ರ ವಿಡಿಯೋ ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾತನಾಡಿದ ಅವರು ಯತೀಂದ್ರ ಎಲ್ಲಿಯಾದರೂ ವರ್ಗಾವಣೆ ವಿಚಾರ ಮಾತಾಡಿದ್ದಾರಾ? ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆಗಾಗಿ ಹಣ ಪಡೆದಿಲ್ಲ. ಹಣ ಪಡೆದಿದ್ದರೆ ರಾಜಕೀಯದಿಂದ ನಿವೃತ್ತಿಯಾಗುವೆ ಎಂದರು. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ದಂಧೆ, ಹಗರಣಗಳಲ್ಲಿ ಭಾಗಿಯಾಗಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕಾಗಿ ಏನೆಲ್ಲಾ ಆರೋಪ ಮಾಡಬಹುದು, ಮಾಡಿಕೊಳ್ಳಲಿ, ಕುಮಾರಸ್ವಾಮಿ ಆರೋಪಗಳ ಬಗ್ಗೆ ಬೇಕಾದರೆ ತನಿಖೆ ಮಾಡಿಕೊಳ್ಳಲಿ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು.

Read More

ಬೆಂಗಳೂರು:  ವರ್ಗಾವಣೆ ಬಗ್ಗೆ ಸಿಎಂ ಪುತ್ರ ಯತೀಂದ್ರ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ವಿಚಾರದ ಬಗ್ಗೆ ಅವರು ಮಾತನಾಡಿದ್ದಾರೋ ಗೊತ್ತಿಲ್ಲ. ಇದಕ್ಕೆ ಸ್ಪಷ್ಟೀಕರಣ ಕೊಡಬೇಕಾಗತ್ತೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದು ಏನು ಅಂತ ಇದರಲ್ಲಿ ಎಷ್ಟು ರಿಯಾಲಿಟಿ ಇದೆ ನೋಡಬೇಕು. ನಂತರ ಸಂಬಂಧ ಪಟ್ಟವರು ಸ್ವಷ್ಟನೆ ಕೊಡುತ್ತಾರೆ.  ಕುಮಾರಸ್ವಾಮಿಯವರ ಆರೋಪಕ್ಕೆ ನಾನು ಉತ್ತರ ಕೊಡಲು ಆಗಲ್ಲ. ಸಂಬಂಧ ಪಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡಬೇಕಾಗುತ್ತದೆ. ಅದು ನನ್ನ ಇಲಾಖೆ ಅಲ್ಲ ನನಗೆ ಸಂಬಂಧಪಟ್ಟ ವಿಚಾರ ಇಲ್ಲ ಎಂದರು. ಮಾಜಿ ಸಿಎಂ ಆಗಿ ವಿದ್ಯುತ್​​​​ ಕಳ್ಳತನ ಮಾಡಿದ್ದು ತಪ್ಪು ಅಲ್ವಾ? ಇದನ್ನು ಮುಚ್ಚಿಕೊಳ್ಳಲು ಯತೀಂದ್ರ ವಿಡಿಯೋ ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಯತೀಂದ್ರ ಎಲ್ಲಿಯಾದರೂ ವರ್ಗಾವಣೆ ವಿಚಾರ ಮಾತಾಡಿದ್ದಾರಾ? ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆಗಾಗಿ ಹಣ ಪಡೆದಿಲ್ಲ. ಹಣ ಪಡೆದಿದ್ದರೆ ರಾಜಕೀಯದಿಂದ ನಿವೃತ್ತಿಯಾಗುವೆ ಎಂದರು.

Read More

ಬೆಂಗಳೂರು:  ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಮಾಜಿ ಶಾಸಕ ಡಾ.ಯತೀಂದ್ರಗೆ ಫೋನ್ ಕರೆ ಮಾಡಿದ್ದು ಯಾರು? ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ? ವಿವೇಕಾನಂದ ಯಾರು?, ನಾಲ್ಕೈದು ಲಿಸ್ಟ್​ ಕೊಟ್ಟಿದ್ದು ಏನು? ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಫೋನ್ ಮಾಡಿ ಕೇಳಿದ್ಯಾರು? ಅದು ಸಿಎಂ ಪರಿಹಾರ ನಿಧಿಯ ಹೆಸರುಗಳು? ಒಬ್ಬ ಮುಖ್ಯಮಂತ್ರಿ ಫೋನ್ ಮಾಡಿ ಲಿಸ್ಟ್ ಬಗ್ಗೆ ಮಾತಾಡುತ್ತಾರೆ. ಯಾರು ಮಹದೇವ?, ಯಾರು ಲೇಬರ್​ ಇನ್ಸ್​​ಪೆಕ್ಟರ್​ ಅವನು?  ಆರ್​.ಮಹದೇವ್​ ಅವರದ್ದು ವಿಶೇಷ ಕರ್ತವ್ಯ ಏನು? ಸಾರ್ವಜನಿಕವಾಗಿ ಈ ರೀತಿಯಾದರೆ 4 ಗೋಡೆ ಮಧ್ಯೆ ಇನ್ನೇನು ಆಗುತ್ತಿದೆ? ಸಿಎಂ ಕೆಲಸ ಅಂದರೆ ಮಗನಿಗೆ ಫೋನ್​ ಮಾಡಿ ಕೇಳಬಹುದಾ? ಸಾರ್ವಜನಿಕರ ಹಣ ಲೂಟಿ ಮಾಡಿ ಎಂದು ಅಧಿಕಾರ ಕೊಟ್ಟಿದ್ದಾರಾ? ಫೋನ್ ಮಾಡಿ ಹೇಳಿದ್ದಾರಲ್ಲ ಅದರ ದಾಖಲೆ ಬಿಡುಗಡೆ ಮಾಡಿ. ಯಾವ ಶಾಲೆಗಳ ಸಿಎಸ್​​ಆರ್​ ಫಂಡ್​ ಅಂತಾ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

Read More

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಪಾಪ ಏನೂ ಕೆಲಸ ಇಲ್ಲ ಅನಿಸುತ್ತೆ. ಆರೋಪಗಳನ್ನೂ ಮಾಡುವುದನ್ನೇ ಅವರ ಕೆಲಸವಾಗಿ ಮಾಡಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಪಾಪ ಏನೂ ಕೆಲಸ ಇಲ್ಲ. ಯತೀಂದ್ರ ಅವರು ಕೆಡಿಪಿ ಸದಸ್ಯರಿದ್ದಾರೆ. ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಜನ ಸಂಪರ್ಕ ಸಭೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಶಾಲೆಗಳಿಗೆ ಮೂಲಸೌಲಭ್ಯ ಕಲ್ಪಿಸುವ ವಿಚಾರವಾಗಿ ಯತೀಂದ್ರ ಮಾತನಾಡಿದ್ದಾರೆ” ಎಂದರು. ಕುಮಾರಸ್ವಾಮಿ ಅವರು ಯತೀಂದ್ರ ಕುರಿತು ಹಂಚಿಕೊಂಡಿರುವ ವಿಡಿಯೋದಲ್ಲಿ ಎಲ್ಲಾದರೂ ವರ್ಗಾವಣೆ ಅಂತ ಪದ ಇದೆಯಾ? ಲಂಚದ ಬಗ್ಗೆ ಎಲ್ಲಿ ಮಾತನಾಡಿದ್ದಾರೆ? ಸುಮ್ಮನೇ ಪ್ರಚಾರ ಮಾಡಿ ನಮ್ಮ ಹುಡುಗನನ್ನು ಲೀಡರ್‌ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು

Read More

ಬೆಂಗಳೂರು : ಪಕ್ಷಕ್ಕೆ ನನ್ನದೂ ದುಡಿಮೆ,‌ ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ನನ್ನ ಅಭಿಪ್ರಾಯವನ್ನ ಮುಂದೆ ತಿಳಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಅಸಮಾಧಾನ ಹೊರಹಾಕಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಒಬ್ಬ ಕೆಲಸ ಮಾಡುವವನಿಗೆ, ಪಾಪ್ಯುಲರ್ ಆದವರಿಗೆ ಮುಜುಗರ ಸಂಗತಿಗಳು ಆಗುತ್ತೆ. ನಾನು ಯಾವುದೇ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ಅದೆಲ್ಲಾ ನಡೆಯುತ್ತಿರುತ್ತೆ. ಆದರೆ, ಕಾಂಗ್ರೆಸ್ ಸೇರುವ ಅವಶ್ಯಕತೆ ನನಗೆ ಈಗ ಇಲ್ಲ. ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಕಾರ್ಯಕ್ರಮ ಇದೆ. ಹಿಂದಿನ ಶ್ರೀಗಳು ಹೇಳಿದ್ದಂತೆ ಕುಟುಂಬದಿಂದ ಕೆಲಸ ‌ಮಾಡಿಸಿದ್ದಂತೆ, ಅದರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ‌ ಎಂದು ತಿಳಿಸಿದರು. ಸಿದ್ಧಗಂಗಾ ಮಠದಲ್ಲಿ ಸಮಾರಂಭದಲ್ಲಿ ಶಕ್ತಿ ಪ್ರದರ್ಶನವೇ? ಎಂಬ ಸುದ್ದಿಗಾರರ ಪ್ರಶ್ನೆಗೆ, ಮಠದಲ್ಲಿ ಕಾರ್ಯಕ್ರಮ ಮಾಡಿ ಶಕ್ತಿ ಪ್ರದರ್ಶನ ಮಾಡುವ ಅವಶ್ಯಕತೆ ನನಗಿಲ್ಲ. ಸಹಜವಾಗಿ ಉದ್ಘಾಟನೆಗೆ ಆಡಳಿತದಲ್ಲಿರುವವರು…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಮಗ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಂದೆ ಜೊತೆ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್‌ನಲ್ಲಿ ಬರೆದಿರುವ ಹೆಚ್‌ಡಿ ಕುಮಾರಸ್ವಾಮಿ, ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವೀಡಿಯೋ ತುಣುಕೇ ಸಾಕ್ಷಿ ಎಂದು ಕೆಂಡ ಕಾರಿದ್ದಾರೆ. ಹೆಚ್‌ಡಿಕೆ ಟ್ವೀಟ್‌ನಲ್ಲೇನಿದೆ? ಕಾಸಿಗಾಗಿ ಹುದ್ದೆ ಉರುಫ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ…

Read More