Author: AIN Author

ಬೆಂಗಳೂರು:- ಡಿಸೆಂಬರ್ 4ರಿಂದ 15ರ ವರೆಗೆ ಒಟ್ಟು ಹತ್ತು ದಿನಗಳ ಕಾಲ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಡಿ.4ರ ಬೆಳಗ್ಗೆ 11ಗಂಟೆಗೆ ಸದನ ಸಮಾವೇಶಗೊಳ್ಳಲಿದೆ. ಶನಿವಾರ ಮತ್ತು ರವಿವಾರ ಹೊರತುಪಡಿಸಿ ಒಟ್ಟು 10 ದಿನಗಳ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ನಡೆಯಲಿದೆ. ಹದಿನಾರನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಜರುಗಲಿದೆ ಎಂದು ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಹುಬ್ಬಳ್ಳಿ: ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾದ ಸನಾತನ ಧರ್ಮವನ್ನು ಕೈ ಬಿಡಬೇಕೆಂಬ ಬೇಡಿಕೆಯೊಂದಿಗೆ ನಾವು ಸನಾತನಿಗಳಲ್ಲ ಎಂಬ ಅಭಿಯಾನ ಆರಂಭಿಸಲಾಗಿದ್ದು, ರಾಜ್ಯದ ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ವಿಶ್ವ ಬಹುಜನ ಧ್ವಜ ಹಾಗೂ ಸಂವಿಧಾನ ರಕ್ಷಾ ಸೇನಾ ಟ್ರಸ್ಟ್ ಅಧ್ಯಕ್ಷ ಸದಾನಂದ ತೇರದಾಳ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಮುಂತಾದ ಆದರ್ಶಗಳಿಗೆ ಸನಾತನ ವಿರುದ್ಧವಾಗಿದೆ. ಸನಾತನ ಧರ್ಮವು ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ. ಅಸಮಾನತೆ ಪೋಷಿಸುವುದಲ್ಲದೆ ಅಸ್ಪಶ್ಯತೆಯಂತಹ ಸಾಮಾಜಿಕ ಅನಿಷ್ಟಗಳಿಗೆ ಜನ್ಮ ನೀಡುತ್ತದೆ ಎಂದರು. ಸಂಘಟನೆಯ ಬಾಪು ಹೆದ್ದೂರಶೆಟ್ಟಿ ಮಾತನಾಡಿ, ಸಂವಿಧಾನದ ಮೂಲ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಂಬರುವ ದಿನಗಳಲ್ಲಿ ಮೈಸೂರು ಹಾಗೂ ಮಂಗಳೂರು ಮತ್ತಿತರೆಡೆ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು. ಸಂವಿಧಾನ ಕೈಬಿಡಿ ಇಲ್ಲವೆ ಸನಾತನ ಕೈಬಿಡಿ ಎಂದು ಈಗಾಗಲೇ ಹುಬ್ಬಳ್ಳಿಯಲ್ಲಿ ನಾವು ಸನಾತನಿಗಳಲ್ಲ ಕಾರ್ಯಕ್ರಮ ನಡೆಸಲಾಗಿದೆ. ಅಲ್ಲದೆ ಬಲಿ ಚಕ್ರವರ್ತಿ ಸ್ಮರಣಾಂಜಲಿ ಸಮಾರಂಭ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ…

Read More

ಮಂಡ್ಯ :- ನೀತಿ ಸಂಹಿತೆ ಜಾರಿಯಾಗುತ್ತೆ ಎಂಬ ಭಯದಲ್ಲಿ ಅನುದಾನ ಇಲ್ಲದಿದ್ರು ಮದ್ದೂರು ಕ್ಷೇತ್ರದಾದ್ಯಂತ ನೂರಾರು ಗುದ್ದಲಿ ಪೂಜೆ ಮಾಡಿ ಹೋಗಿದ್ದಾರೆ ಎಂದು ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಕೆ.ಎಂ.ಉದಯ್ ಕಿಡಿಕಾರಿದ್ದಾರೆ. ಮದ್ದೂರು ತಾಲೂಕಿನ ಕದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರದೊಡ್ಡಿ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದ ಜನತೆಗೆ ಸತತವಾಗಿ ಮಂಕುಬೂದಿ ಎರಚಿ ಮದ್ದೂರು ಕ್ಷೇತ್ರದಾದ್ಯಂತ ಸಿಕ್ಕ ಸಿಕ್ಕ ಕಡೆ ನೂರಾರು ಗುದ್ದಲಿ ಪೂಜೆ ಮಾಡಿ ಹೋಗಿದ್ದಾರೆ. ಯಾವುದಕ್ಕಾದ್ರು ಅನುದಾನ ಬಂದ್ದಿದಿಯಾ, ಅಗ್ರಿಮೆಂಟ್ ಆಗಿದ್ದಿಯಾ, ಅಪ್ರೂವಲ್ ಆಗಿದ್ದಿಯಾ ನೀತಿ ಸಂಹಿತೆ ಘೋಷಣೆಯಾಗುತ್ತೆ ಎಂಬ ಭಯದಲ್ಲಿ ತರಾತುರಿಯಲ್ಲಿ ಗುದ್ದಲಿ ಪೂಜೆ ಮಾಡಿದ್ದಾರೆ. ಕ್ಷೇತ್ರದಲ್ಲಿ ಯಾರೋ ಅನುದಾನ ತಂದು ಪೂಜೆ ಮಾಡಿರೋದಕ್ಕೆ ನಾನು ಪೂಜೆ ಮಾಡೋ ಅಗತ್ಯವಿಲ್ಲ. ಅಂತ ಚೀಪ್ ಪಾಪ್ಯುಲಾರಿಟಿ ತಗಳೋಕೆ ನನಗೂ ಇಷ್ಟವಿಲ್ಲ. ನಾನು ಅಭಿವೃದ್ಧಿ ಮಾಡ್ಬೇಕು ಅಂತ ಬಂದ್ದಿದಿನಿ. ಹೋದ ಕಡೆಯಲ್ಲ ಕ್ಷೇತ್ರದ…

Read More

ರಾಮನಗರ:- ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಆಯ್ಕೆ ಇಂದಿನ ಸ್ಥಿತಿಗೆ ಸರಿಯಾಗಿದೆ ಎಂದು ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಂದಿನ ಪರಿಸ್ಥಿತಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ನೂರಕ್ಕೆ ನೂರರಷ್ಟು ಸರಿಯಾಗಿದೆ’ ಎಂದರು. ವಿಜಯೇಂದ್ರ ಅವರು ಹಿಂದೆ ಪಕ್ಷದ ಉಪಾಧ್ಯಕ್ಷರಾಗಿದ್ದರು. ಅವರಿಗೆ ಅನುಭವ ಇದೆ. ಎಲ್ಲ ಜಿಲ್ಲೆಗಳ ನಾಯಕರ ಪರಿಚಯವೂ ಅವರಿಗಿದೆ. ಹೀಗಾಗಿ, ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಅವರ ಆಯ್ಕೆ ಒಳ್ಳೆಯ ಬೆಳವಣಿಗೆ’ ಎಂದರು. ‘ವಿಜಯೇಂದ್ರ ಅವರ ಆಯ್ಕೆ ಕುಟುಂಬ ರಾಜಕಾರಣ ಎಂದು ಹೇಳಲು ಸಾಧ್ಯವಿಲ್ಲ. ಅವರ ತಂದೆ ಬಿ.ಎಸ್. ಯಡಿಯೂರಪ್ಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದ ಮೇಲೆಯೇ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ. ಅವರು ಹಿಂದೆ ಪಕ್ಷದ ಉಪಾಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿ, ಈಗ ಶಾಸಕರಾಗಿದ್ದಾರೆ’ ಎಂದು ತಿಳಿಸಿದರು. ನನ್ನನ್ನು ಯಾರು ಬೇಕಿದ್ದರೂ ಕಡೆಗಣಿಸಲಿ, ಬಿಡಲಿ. ಕ್ಷೇತ್ರದ ಜನ ನನ್ನನು ಕಡೆಗಣಿಸಿಲ್ಲ. ಬಿಜೆಪಿಯಿಂದಲೂ…

Read More

ಬೆಂಗಳೂರು:- ಬಿಎಚ್‌ಎಲ್ ಲೇಔಟ್‌ನ ಕೃಷ್ಣಪ್ಪ ಗಾರ್ಡನ್ ಬಳಿ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಬರ್ಬರವಾಗಿ ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಜರುಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ತಬ್ರೇಜ್ ಕೊಲೆಯಾದ ವ್ಯಕ್ತಿ, ಶಬ್ಬೀರ್ ಎಂಬಾತನ ಪತ್ನಿಯ ಜತೆ ತಬ್ರೇಜ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಈ ಹಿಂದೆ ಹಲವಾರು ಬಾರಿ ರಾಜಿ ಪಂಚಾಯಿತಿ ನಡೆದಿತ್ತು. ಬುಧವಾರ ಮತ್ತೆ ಸಂಧಾನಕ್ಕೆಂದು ಕರೆದು ತಬ್ರೇಜ್‌ನ ಶಬ್ಬೀರ್‌ ಗ್ಯಾಂಗ್‌ ಕೊಂದಿದೆ ಎಂದ ಆರೋಪ ಕೇಳಿಬಂದಿದೆ.

Read More

ಆನೇಕಲ್ :- ರಾಜಧಾನಿ ಬೆಂಗಳೂರಿನ ದೊಮ್ಮಸಂದ್ರದಲ್ಲಿ ಬುಲೆಟ್ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ಜರುಗಿದೆ. ಟ್ರ್ಯಾಕ್ಟರ್ ಅತಿವೇಗವಾಗಿ ಬಂದು‌ ಡಿಕ್ಕಿ ಹೊಡೆದಿದ್ದರಿಂದ ಬೈಕ್‌ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು, ಈ ವೇಳೆ ಅವರ ಮೇಲೆ ಟ್ರ್ಯಾಕ್ಟರ್‌ ಹರಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಟ್ರಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು:- ಹಲಸೂರು ಕೆರೆಯಲ್ಲಿ ಛ‌ಠ್ ಪೂಜೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ. 19-11-2023 ಹಾಗೂ 20-11-2023ರಂದು “ಛ‌ಠ್ ಪೂಜೆ” – ಸೂರ್ಯದೇವರ ಆರಾಧನೆ ಕಾರ್ಯಕ್ರಮದ ಸಲುವಾಗಿ ಹಲಸೂರು ಕೆರೆ, ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು ಪಾಲಿಕೆ ಹೇಳಿದೆ. ಸದರಿ “ಛಠ್ ಪೂಜೆ”ಯಲ್ಲಿ ಭಾಗವಹಿಸುವ ಸಾರ್ವಜನಿಕರು ಹಲಸೂರು ಕೆರೆಯ ಉತ್ತರ ದಿಕ್ಕಿನಲ್ಲಿರುವ, ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯ (ಕಾರಾ ಕೆಫೆ ರೆಸ್ಟೋರೆಂಟ್ ಮುಂಭಾಗದ) ಮುಖ್ಯ ದ್ವಾರದ ಮೂಲಕವೇ ಬಂದು ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಮಾತ್ರವೇ “ಛಠ್, ಪೂಜೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಸದರಿ ಪೂಜೆಯಲ್ಲಿ ಭಾಗವಹಿಸುವ ಸಾರ್ವಜನಿಕರು ಯಾವುದೇ ರೀತಿಯ ಪ್ಲಾಸ್ಟಿಕ್ ಪೇಪರ್ ಮುಂತಾದ ವಿಷಯುಕ್ತ ವಸ್ತುಗಳನ್ನು ಕೆರೆಯ ಅಂಗಳಕ್ಕೆ ತರಬಾರದೆಂದು ಸೂಚಿಸಲಾಗಿದೆ ಹಾಗೂ ಹಲಸೂರು ಕೆರೆಯ ಬೇರೆ ದಿಕ್ಕಿನ ದ್ವಾರಗಳು ಮುಚ್ಚಿರುತ್ತದೆ ಎಂಬುದಾಗಿ ತಿಳಿಸಲಾಗಿದೆ. ಪೂರ್ವ ವಲಯದ ಬೇರೆ ಯಾವುದೇ ಸ್ಥಳದಲ್ಲಿ “ಛ‌ಠ್ ಪೂಜೆಗೆ ವ್ಯವಸ್ಥೆ ಕಲ್ಪಿಸಿರುವುದಿಲ್ಲವೆಂದು ಪೂರ್ವ ವಲಯ ಆಯುಕ್ತರಾದ ಶ್ರೀಮತಿ ಆರ್.ಸ್ನೇಹಲ್, ಭಾ.ಆ.ಸೇ*…

Read More

ಬೆಂಗಳೂರು:- ಬಹು ನಿರೀಕ್ಷಿತ ಬೆಂಗಳೂರು ಹವಾಮಾನ ಕ್ರಿಯಾ ಯೋಜನೆಯು ಶೀಘ್ರವೇ ಅನುಷ್ಠಾನಗೊಳ್ಳಲಿದ್ದು, ಈ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿ‌.ಎಂ‌.ಆರ್.ಸಿ.ಎಲ್ ವ್ಯವಸ್ತಾಪಕ‌ ನಿರ್ದೇಶಕರಾದ ಅಂಜುಂ ಫರ್ವೇಜ್ , ಸಿ-40 ಸಂಸ್ಥೆಯ ರೀಜಿನಲ್ ಡೈರೆಕ್ಟರ್(ಸೌತ್ & ವೆಸ್ಟ್ ಏಶಿಯಾ) ಶೃತಿ ನಾರಾಯಣ್, WRI ಇಂಡಿಯಾದ ಎಕ್ಸಿಕ್ಯೂಟಿವ್ ಪ್ರೋಗ್ರಾಂ ಡೈರೆಕ್ಟರ್ ಜಯದಿಂದ್ವ ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಗೂ ಸಂಸ್ಥೆಯ ಪ್ರತಿನಿಧಿಗಳು ಹಾಜರಿದ್ದರು.

Read More

ಚಾಮರಾಜನಗರ:- ಚಲಿಸುತ್ತಿದ್ದ ಬಸ್ ಗೆ ವ್ಯಕ್ತಿಯೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಾಮರಾಜನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತ ದುರ್ದೈವಿ. ಚಾಮರಾಜನಗರ ಬಸ್ ನಿಲ್ದಾಣದಿಂದ ಗುಂಡ್ಲುಪೇಟೆಯತ್ತ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ರಂಗಸ್ವಾಮಿ ಹಿಂಬದಿ ಚಕ್ರಕ್ಕೆ ಹಾರಿದ್ದಾನೆ. ಇದನ್ನು ಚಾಲಕ ಗಮನಿಸಿ ಬ್ರೇಕ್ ಹಾಕಿದರಾದರೂ ಈತನ ಮೇಲೆ ಚಕ್ರ ಉರುಳಿದ್ದರಿಂದ ಸ್ಥಳದಲ್ಲೇ ಆತ ಅಸುನೀಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆಯನ್ನು ಕಂಡ ಸಾರ್ವಜನಿಕರು ಕ್ಷಣ ಕಾಲ ವಿಚಲಿತರಾಗಿದ್ದಾರೆ. ಮಾಹಿತಿ ಅರಿತ ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇನ್ನು, ಆತ್ಮಹತ್ಯೆ ದೃಶ್ಯ ಅಂಗಡಿಯೊಂದರ ಮುಂಭಾಗ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More

ಕಲಬುರಗಿ:- ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ CID ಇದೀಗ ನೀರಾವರಿ ಇಲಾಖೆಯ ಇಂಜಿನಿಯರ್ ರುದ್ರಗೌಡ ಎಂಬಾತನನ್ನ ಖೆಡ್ಡಾಗೆ ಕೆಡವಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಆರೋಪ ಹೊಂದಿರುವ ರುದ್ರಗೌಡ ಮೂಲತ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದವನು. ಸದ್ಯ ಅಥಣಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಎನ್ನಲಾಗಿದೆ.. ವಿಶೇಷ ಅಂದ್ರೆ ಬಂಧಿತ ರುದ್ರಗೌಡ ಬಳಿ 17 ಹಾಲ್ಟಿಕೇಟ್ ಗಳು ಪತ್ತೆಯಾಗಿದ್ದು ಬೆಳಕಿಗೆ ಬಂದಿದೆ..ಹೀಗಾಗಿ ಹಾಲ್ಟಿಕೇಟ್ ಹಿಂದಿನ ಕಥೆ ಏನೂಂತ ಬಾಯ್ಬಿಡಿಸಲು ಮುಂದಾಗಿದ್ದಾರೆ…

Read More