Author: AIN Author

ಬೆಂಗಳೂರು:- 6 ನಾಯಿಮರಿಗಳ ಸಾವಿಗೆ ಕಾರಣ ಆರೋಪ ಹೊತ್ತ ವೃದ್ಧೆಗೆ ದಂಡ ಹೆಚ್ಚಿಸಲು ಕೋರಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ ಮಹಿಳೆಯ ಮನೆ ಮುಂದೆ ಬೀದಿನಾಯಿ 8 ಮರಿ ಹಾಕಿತ್ತು. ನಾಯಿಗಳ ಶಬ್ದ ಸಹಿಸದೇ ಮಹಿಳೆ ಮರಿಗಳನ್ನು ಬೇರೆಡೆ ಬಿಟ್ಟಿದ್ದರು. ತಾಯಿಯಿಂದ ದೂರವಾದ ನಾಯಿಮರಿಗಳು ಆಹಾರವಿಲ್ಲದೇ ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಪೊನ್ನಮ್ಮ ವಿರುದ್ಧ ಪ್ರಾಣಿ ಕಲ್ಯಾಣ ಅಧಿಕಾರಿ ಹೆಚ್.ಬಿ.ಹರೀಶ್ ಕೇಸ್ ದಾಖಲಿಸಿದ್ದರು. ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಕೋರ್ಟ್​ನಲ್ಲಿ ತಪ್ಪೊಪ್ಪಿಕೊಂಡ ಮಹಿಳೆಗೆ ಮ್ಯಾಜಿಸ್ಟ್ರೇಟ್ ಕೋರ್ಟ್ 1 ಸಾವಿರ ರೂ. ದಂಡ ವಿಧಿಸಿ ಬಿಡುಗಡೆ ಮಾಡಿತ್ತು. ಶಿಕ್ಷೆ ಹೆಚ್ಚಳ ಕೋರಿ ದೂರುದಾರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗೆ ದಂಡ ಹೆಚ್ಚಳಕ್ಕೆ ನ್ಯಾಯಮೂರ್ತಿ ಜೆ.ಎಂ.ಖಾಜಿ ನಕಾರವೆತ್ತಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು:- ಹೃದಯಾಘಾತ ಹಿನ್ನೆಲೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಜ್ಞ ವೈದ್ಯರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ.

Read More

ಬಾಹ್ಯಾಕಾಶದಲ್ಲಿ ಎಂಟು ತಿಂಗಳ ಹಿಂದೆ ಕಳೆದುಹೋಗಿದ್ದ ಎರಡು ಟೊಮೆಟೊಗಳು ಮತ್ತೆ ಸಿಕ್ಕಿವೆ ಎಂದು ನಾಸಾ ಹೇಳಿದೆ. ಗಗನಯಾತ್ರಿ ಫ್ರಾಂಕ್ ರುಬಿಯೊ ಅವರ ಬಳಿಯಿದ್ದ ಈ ಎರಡು ಟೊಮೆಟೊಗಳು ಎಂಟು ತಿಂಗಳ ಹಿಂದೆ ಕಾಣೆಯಾಗಿದ್ದವು. 2022 ರಲ್ಲಿ ಬಾಹ್ಯಾಕಾಶ ನಿಲ್ದಾಣದಲ್ಲಿ ನಡೆಸಿದ ಇಎಕ್ಸ್​ಪೋಸ್ಡ್​ ರೂಟ್ ಆನ್-ಆರ್ಬಿಟ್ ಟೆಸ್ಟ್ ಸಿಸ್ಟಮ್  ಪ್ರಯೋಗದ ಭಾಗವಾಗಿ ಟೊಮೆಟೊಗಳನ್ನು ಕೊಯ್ಲು ಮಾಡುವಾಗ ಈ ಎರಡು ಟೊಮೆಟೊಗಳು ಆಕಸ್ಮಿಕವಾಗಿ ಕಳೆದು ಹೋಗಿದ್ದವು ಎಂದು ನಾಸಾ ಎಕ್ಸ್​ನಲ್ಲಿ ತಿಳಿಸಿದೆ. ಈ ಘಟನೆಯು NASA ದಲ್ಲಿ ಒಂದು ಹಾಸ್ಯ ಅನುಭವವಾಗಿ ಮಾರ್ಪಟ್ಟಿತು, ರುಬಿಯೊ ತಿಂಗಳುಗಳ ಕಾಲ “ಟೊಮೆಟೋವನ್ನು ತಿಂದ” ಎಂದು ತಮಾಷೆಯಾಗಿ ಆತನನ್ನು ದೂಷಿಸಿದರು. ಗಗನಯಾತ್ರಿಗಳು ಸೆಪ್ಟೆಂಬರ್‌ನಲ್ಲಿ ISS ಲೈವ್‌ಸ್ಟ್ರೀಮ್‌ನಲ್ಲಿ ಕಾಣೆಯಾದ ಟೊಮೆಟೊವನ್ನು ಸಾರ್ವಜನಿಕವಾಗಿ ಚರ್ಚಿಸಿದರು, ಅಲ್ಲಿ ರೂಬಿಯೊ ಹಾಸ್ಯಮಯವಾಗಿ “ನನ್ನ ದಿನದ 18 ರಿಂದ 20 ಗಂಟೆಗಳ ಕಾಲ ಅದನ್ನು ಹುಡುಕುತ್ತಿದ್ದೇನೆ” ಎಂದು ಉಲ್ಲೇಖಿಸಿದರು. ಆರು ಬೆಡ್‌ರೂಮ್‌ಗಳ ಮನೆಗೆ ಸಮಾನವಾದ ವಿಶಾಲವಾದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಣ್ಣ ವಸ್ತುವನ್ನು ಪತ್ತೆಹಚ್ಚುವ ಸವಾಲುಗಳನ್ನು ಒಪ್ಪಿಕೊಳ್ಳಲಾಯಿತು.…

Read More

ಹುಬ್ಬಳ್ಳಿ:ಕುರಿಗಾಹಿ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದರ್ಪ ತೋರಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸೂಳಿಕಟ್ಟಿ ಅರಣ್ಯ ವೃತ್ತದಲ್ಲಿ ಕುರಿ ಮೇಯಿಸುತ್ತಿದ್ದ ಕುರಿಗಾಹಿ ಬೀರಪ್ಪನ ಬಳಿ ಸೂಳಿಕಟ್ಟಿ ಫಾರೆಸ್ಟ್ ಗಾರ್ಡ್ ಆನಂದ‌ ಹಾಗೂ ಇಲಾಖೆಯ ಮತ್ತೋರ್ವ ಸಿಬ್ಬಂದಿ ಲಂಚ ಕೇಳಿದ್ದಾರೆ. ಹಣ ಇಲ್ಲವೆ, ಕುರಿ ಕೊಡುವಂತೆ ಫಾರೆಸ್ಟ್ ಗಾರ್ಡ್ ಆನಂದ ಒತ್ತಾಯಿಸಿದ್ದಾನೆ. ಮಾಮೂಲಿ ಕೊಡದೆ ಅರಣ್ಯದಲ್ಲಿ ಕುರಿ ಮೇಯಿಸಿದರೇ ಒದ್ದು ಬಿಡುತ್ತೇನೆ. ಗೌಳಿಗರು ಅರಣ್ಯ ಅಧಿಕಾರಿಗಳಿಗೆ ಕೋಳಿ, ಹುಂಜ, ಹಣ ಕೊಡುತ್ತಾರೆ. ಕುರುಬರು ಹಣ ಕೊಡಬೇಕು, ಇಲ್ದಿದಿದ್ದರೇ ಕೇಸ್ ಹಾಕಿ ಜೈಲಿಗೆ ಕಳಿಸುತ್ತೇವೆ ಅಂತಾ ಅವಾಜ್ ಹಾಕಿದ್ದಾರೆ. ಆನಂದ ಹಾಗೂ ಸಹಚರನ ವರ್ತನೆ ಮೊಬೈಲ್‌ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read More

ಕಲಬುರ್ಗಿ :- ಮಕ್ಕಳ ವಿಭಾಗದಲ್ಲಿನ ಗುಣಮಟ್ಟದ ಸೇವೆಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕೇಂದ್ರ ಸರ್ಕಾರ ಶಹಬ್ಬಾಶ್ ಅಂತ ಸರ್ಟಿಫಿಕೇಟ್ ನೀಡಿದೆ. ಮಕ್ಕಳ ವಿಭಾಗದ ಪೀಡಿಯಾಟ್ರಿಕ್ OPD ಪೀಡಿಯಾಟ್ರಿಕ್ ವಾರ್ಡ್, SNCU & NRC ಘಟಕಗಳಿಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶೇ.92 ಅಂಕದೊಂದಿಗೆ ಗುಣಮಟ್ಟದ ವಿಭಾಗ ಎಂದು ಪ್ರಮಾಣೀಕರಿಸಿದೆ. ಮುಸ್ಕಾನ್ ಕಾರ್ಯಕ್ರಮದ ಅಡಿಯಲ್ಲಿ ಈ ಸರ್ಟಿಫಿಕೇಟ್ ನೀಡಿದೆ. ಇದಕ್ಕಾಗಿ ಶ್ರಮಿಸಿದ ಜಿಮ್ಸ್ ವೈದ್ಯ ಹಾಗೂ ವೈದ್ಯೇತರ ಎಲ್ಲಾ ಸಿಬ್ಬಂದಿ ಅಭಿನಂದನೆಗೆ ಅರ್ಹರು ಅಂತ DC ಫೌಜಿಯಾ ತರನ್ನುಮ್ ಹರ್ಷ ವ್ಯಕ್ತಪಡಿಸಿದ್ದಾರೆ…

Read More

ಹಲವು ಜನರಿಗೆ ಬೂದು ಕೂದಲು ಅಥವಾ ಬಿಳಿ ಕೂದಲು ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಅದರಲ್ಲಿಯೂ ಕೆಲವರು ಚಿಕ್ಕ ವಯಸ್ಸಿನಲ್ಲಿದ್ದಾಗಲೇ ಬಿಳಿ ಕೂದಲು ಹೊಂದುತ್ತಿದ್ದಾರೆ. ಹೆಚ್ಚಿನ ಒತ್ತಡ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳಿಂದ ಕೂದಲು ಬೆಳ್ಳಗಾಗುತ್ತಿರುವ ಸಮಸ್ಯೆ ಕಾಡುತ್ತಿರಬಹುದು. ಕೆಲವು ಮನೆ ಮದ್ದುಗಳನ್ನು ಮಾಡಿಕೊಳ್ಳುವ ಮೂಲಕ ಕೂದಲು ಉದುರುವಿಕೆಯನ್ನು ನಿಯಂತ್ರಣಕ್ಕೆ ತಂದುಕೊಳ್ಳಬಹುದು. ಸೀಬೆಯ ಹಣ್ಣಿನ ಎಲೆಗಳಲ್ಲಿ ಕಂಡುಬರುವ ದೊಡ್ಡ ಪ್ರಮಾಣದ ವಿಟಮಿನ್ ಬಿ ಮತ್ತು ಸಿ ಕಿರುಚೀಲಗಳ ಪೋಷಣೆಗೆ ಮತ್ತು ಕೂದಲ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಕೂದಲಿನ ಇತರ ಅನೇಕ ಔಷಧೀಯ ಪ್ರಯೋಜನಗಳ ಪೈಕಿ,ಪೇರಲ ಎಲೆಗಳಲ್ಲಿನ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡ ಬಲ್ಲವು. ಇದರಿಂದಾಗಿ ಇದು ಕೂದಲು ಹಾನಿಯಾಗುವುದನ್ನು ತಡೆಯುತ್ತದೆ. ಸೀಬೆಯ ಎಲೆಯಲ್ಲಿರುವ ನೋವು ನಿವಾರಕ, ಆಂಟಿ ಮೈಕ್ರೋಬಿಯಲ್, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಲಕ್ಷಣಗಳು ಅತ್ಯುತ್ತಮ ನೆತ್ತಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ತಲೆಹೊಟ್ಟು ಚಿಕಿತ್ಸೆಗೆ ಸಹಾಯ ಮಾಡುತ್ತದೆ. ಇದರ ಸಾರವನ್ನು ನಿಮ್ಮ ನೆತ್ತಿಗೆ ಹಾಳಾಗಿ ಮಸಾಜ್ ಮಾಡುವ ಮೂಲಕ ನೀವು…

Read More

ಸೂರ್ಯೋದಯ: 06:53, ಸೂರ್ಯಾಸ್ತ : 05:59 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪುಷ್ಯ ಮಾಸ, ಶುಕ್ಲ ಪಕ್ಷ, ಉತ್ತರಾಯಣ, ಹೇಮಂತ ಋತು, ತಿಥಿ: ಅಷ್ಟಮಿ ನಕ್ಷತ್ರ: ಅಶ್ವಿನಿ ಯೋಗ: ಸಿದ್ದಿ, ಕರಣ: ವಿಶಿಷ್ಟ, ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಮೇಷ ರಾಶಿ: ಖಾದ್ಯತೈಲ ವ್ಯಾಪಾರಸ್ಥರಿಗೆ ಅಧಿಕ ಲಾಭ, ರಿಯಲ್ ಎಸ್ಟೇಟ್ ಉದ್ಯಮದಾರರು ಸಿಹಿ-ಕಹಿ ಸಮವಾಗಿ ಸ್ವೀಕರಿಸಲೇಬೇಕು,ಬಾಳಿನ ಸಂಗಾತಿಯೊಂದಿಗೆ ವಾಗ್ವಾದ ಉಂಟಾಗಿ ಮನಸ್ತಾಪಕ್ಕೆ ಕಾರಣವಾಗುತ್ತದೆ, ಆಸ್ತಿಗಾಗಿ ತಂದೆ ಜೊತೆ ಕಿರಿಕಿರಿ ಸಾಧ್ಯತೆ, ಆರೋಗ್ಯದ ಬಗ್ಗೆ ಜಾಗೃಕತೆ ಅವಶ್ಯಕ, ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆ, ಕೆಲಸದಲ್ಲಿ ಮಾನಸಿಕ ಒತ್ತಡ, ಗುತ್ತಿಗೆದಾರರ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರ ಬಹುಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ, ಹೂಡಿಕೆಗೆ ಸಕಾಲವಲ್ಲ, ನವದಂಪತಿಗಳ ವೈವಾಹಿಕ ಜೀವನ ಸುಖಮಯ, ಶತ್ರುಗಳಿಂದ ದೂರವುಳಿಯುವುದು ಉತ್ತಮ, ವಾಹನ ಸವಾರಿ ಮಾಡುವಾಗ ಎಚ್ಚರಿಕೆ ಇರಲಿ, ಮದುವೆ ಮಾತುಕತೆಗಳು…

Read More

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಸಂಜೆ ಮಹತ್ವದ ಮಾತುಕತೆ ನಡೆಸಿದರು. ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು. ಅಮಿತ್ ಶಾ ಅವರ ಜತೆ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು; ಕರ್ನಾಟಕದ ಪ್ರತಿಯೊಂದು ವಿದ್ಯಮಾನವನ್ನು ಅವರ ಗಮನಕ್ಕೆ ತಂದರು. ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್ ಡಿ ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳೆಲ್ಲವನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜತೆ…

Read More

ತುಮಕೂರು:- ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ವಿದ್ಯಾ ಚೌಡೇಶ್ವರಿ ದೇವಿಗೆ ವಜ್ರ ಖಚಿತ ಕಿರೀಟವನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಅರ್ಪಿಸಿದ್ದಾರೆ. ಬಳಿಕ ಹೋಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಗೌಡ್ರು, ಶ್ರೀ ಬಾಲ ಮಂಜುನಾಥ ಶ್ರೀಗಳು ಶ್ರೀ ಕ್ಷೇತ್ರಕ್ಕೆ ಬರಲು ಆಹ್ವಾನ ನೀಡಿದ್ದರು. ವಿದ್ಯಾ ಚೌಡೇಶ್ವರಿಯ ಉತ್ತರಾಯಣ ಪುಣ್ಯಕಾಲ. ಅತ್ಯಂತ ವಿಶೇಷವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ವರ್ಧಂತಿ ಉತ್ಸವ ಮತ್ತು ಅಮ್ಮನವರ ಚಿಕ್ಕಮ್ಮ ಜಾತ್ರೆಯು ಶಾಸ್ತ್ರೋಕ್ತವಾಗಿ ನಡೆದಿದೆ. ನಾನು ಉಪವಾಸ ವ್ರತ ಕೈಗೊಂಡು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು. ನನ್ನ ಎರಡು ಮಂಡಿ ಚೆನ್ನಾಗಿಲ್ಲ, ಆದರೂ ಕೂಡ ದೀರ್ಘ ದಂಡ ನಮಸ್ಕಾರ ಮಾಡಿದ್ದೇನೆ. ಇಲ್ಲಿ ನಡೆದಂತಹ ಹೋಮ ಅತ್ಯಂತ ವಿಶೇಷವಾಗಿತ್ತು. ಶ್ರೀ ವಿದ್ಯಾ ಚೌಡೇಶ್ವರಿ ದೇವಿಗೆ ಒಂದು ಕಿರೀಟ ಧಾರಣೆ ಮಾಡಿಸಿದ್ದೇನೆ. ಶ್ರೀ ಚೌಡೇಶ್ವರಿ ದೇವಿಯ ಶಕ್ತಿಯಿಂದಾಗಿ ಮೂರು ಬಾರಿ ನಾನು ಪ್ರದಕ್ಷಿಣೆ ಹಾಕಿದ್ದೇನೆ ಎಂದರು.

Read More

ಬೆಂಗಳೂರು:- ರಾಜ್ಯದಲ್ಲಿ ಇಂದು 87 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಇಂದು 38 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.14ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7,579 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 672 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 165 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ಇನ್ನೂ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಗಳು ಇಳಿಮುಖಗೊಂಡಿದೆ. ಕೊವಿಡ್ ಕೇಸ್ ಇಳಿಕೆ ಬೆನ್ನಲ್ಲೇ ಪ್ರಸ್ತುತ ಮಾರ್ಗಸೂಚಿ ಪಾಲಿಸಲು ಆರೋಗ್ಯ ಇಲಾಖೆ ಸಲಹೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರಲ್ಲಿ ILI ಲಕ್ಷಣ ಇರುವವರಿಗೆ ಟೆಸ್ಟ್ ಕಡ್ಡಾಯ. ಹೋಮ್ ಐಸೋಲೇಷನ್​ನಲ್ಲಿರುವ ಸೋಂಕಿತರ ಬಗ್ಗೆ ಪಿಹೆಚ್​ಸಿ, ಯುಪಿಹೆಚ್​ಸಿ, ನಮ್ಮ ಕ್ಲಿನಿಕ್ ಸಿಬ್ಬಂದಿ ಗಮನ ಹರಿಸಬೇಕು. ಆರೋಗ್ಯ ಸಮಸ್ಯೆ ಇರುವ ಸೋಂಕಿತರ ಉಸಿರಾಟದ ಬಗ್ಗೆ ಗಮನಹರಿಸುವುದು,…

Read More