Author: AIN Author

ಪಟಾಕಿ ಹಚ್ಚುವ ಸಂಭ್ರಮದಲ್ಲಿ ಎಚ್ಚರದಿಂದ ಇರುವುದು ಅಗತ್ಯ. ಹಬ್ಬಗಳು ಸಂತೋಷದಾಯಕ ಸಂಭ್ರಮವಾಗಿದ್ದು, ಈ ಸಂದರ್ಭದಲ್ಲಿ ಯಾವುದೇ ಅಪಘಾತಕ್ಕೆ ಒಳಗಾಗದಂತೆ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಕಣ್ಣುಗಳನ್ನು ರಕ್ಷಿಸುವ ವಿಷಯಕ್ಕೆ ಬಂದಾಗ ಕಣ್ಣಿನ ಅಪಘಾತದ ಸಂದರ್ಭದಲ್ಲಿ ಏನು ಮಾಡಬೇಕು ಎಂದು ತಿಳಿಯುವುದು ಅತ್ಯಗತ್ಯ. ಅಂತಹ ಅಪಘಾತಗಳ ಅಪಾಯವನ್ನು ಕಡಿಮೆ ಮಾಡಲು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುವುದು ಅಷ್ಟೇ ಮುಖ್ಯ. ಈ ಸಂಬಂಧ ಒರ್ಬಿಸಿಟ್ ಇನ್​ ಇಂಡಿಯಾ ಕಂಟ್ರಿ ನಿರ್ದೇಶಕರಾದ ಡಾ ರಿಶಿ ರಾಜ್​ ಬೊರ್ಹಾ ಮಾತನಾಡಿದ್ದಾರೆ. ಮುನ್ನೆಚ್ಚರಿಕೆ ಅಗತ್ಯ: ಪರಿಸರ ಸ್ನೇಹಿ ಪಟಾಕಿಗಳನ್ನು ಆಯ್ಕೆ ಮಾಡುವುದು, ರಕ್ಷಣಾತ್ಮಕ ಕನ್ನಡಕ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು ಮುಖ್ಯವಾಗಿದೆ. ಪಟಾಕಿ ಹೊಡೆಯುವ ಸಂದರ್ಭದಲ್ಲಿ ಮಕ್ಕಳ ಮೇಲ್ವಿಚಾರಣೆ ಮಾಡುವುದು ಅತ್ಯಗತ್ಯ ಆಗಿದ್ದು, ಅದು ಕಣ್ಣಿನ ಅಪಘಾತಗಳ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಅಪಘಾತವಾದ ಸಂದರ್ಭದಲ್ಲಿ ಏನು ಮಾಡಬೇಕು?: ಅನೇಕ ವೇಳೆ ಎಷ್ಟೇ ಮುನ್ನೆಚ್ಚರಿಕೆ ಪಡೆದ ಬಳಿಕವೂ ಅವಘಡಗು ಸಂಭವಿಸುತ್ತಿರುತ್ತವೆ. ನಿಮ್ಮ ಸುತ್ತಮುತ್ತ ಯಾರಿಗಾದರೂ ಪಟಾಕಿಯಿಂದ ಗಾಯಗಳಾದಾಗ ಈ ಮುನ್ನೆಚ್ಚರಿಕೆಯನ್ನು ತಕ್ಷಣಕ್ಕೆ…

Read More

ಇಂಗ್ಲೆಂಡ್:‌ ಫಿಟ್‌ನೆಸ್‌ ಉತ್ಸಾಹಿಯಾಗಿದ್ದ ಇಂಗ್ಲೆಂಡ್‌ ಮೂಲದ ಮುಖ್ಯ ವ್ಯವಸ್ಥಾಪಕ ಅಧಿಕಾರಿ 42 ವರ್ಷದ ಪಾಲ್ ವಾಫಮ್ ಇತ್ತೀಚೆಗೆ ತಮ್ಮ ಬೆಳಗಿನ ವಾಕಿಂಗ್‌ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಚುರುಕಿನ ಜೀವನಶೈಲಿ ಹಹಾಗೂ ಅಪಾಯಕಾರಿ ಅಂಶಗಳ ಕೊರತೆಯ ಹೊರತಾಗಿಯೂ ಹಾಕಿ ವೇಲ್ಸ್‌ ಕಂಪನಿಯ ಸಿಇಒ ಆಗಿದ್ದ ವಾಫಮ್‌ಗೆ ಇತ್ತೀಚೆಗೆ ಬೆಳಗಿನ ಜಾವದ ಜಾಗಿಂಗ್‌ ವೇಳೆ ತೀವ್ರ ಎದೆನೋವಿಗೆ ಒಳಗಾಗಿ ರಸ್ತೆಯಲ್ಲಿಯೇ ಕುಸಿದು ಬಿದ್ದಿದ್ದರು. ಕೈಗಳು ಹಾಗೂ ಮೊಣಕಾಲನ್ನು ರಸ್ತೆಯಲ್ಲಿ ಊರಿ ನೋವಿನಂದ ಎದೆ ಹಿಡಿದುಕೊಂಡಿದ್ದರು. ಈ ಹಂತದಲ್ಲಿ ತಕ್ಷಣವೇ ಅವರಿಗೆ ತಾವು ಕಟ್ಟಿದ್ದ ಸ್ಮಾರ್ಟ್‌ವಾಚ್‌ ನೆನಪಾಗಿದೆ. ಅದರಿಂದಲೇ ಪತ್ನಿ ಲೌರಾಗೆ ಕರೆ ಮಾಡಿದ್ದಾರೆ. ಬಳಿಕ ವಾಫಮ್‌ರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಫಮ್ ಅವರ ಅಪಧಮನಿಗಳಲ್ಲಿ ಸಂಪೂರ್ಣ ಬ್ಲಾಕ್‌ ಇದ್ದ ಕಾರಣದಿಂದ ಹೃದಯಾಘಾತಕ್ಕೆ ಒಳಗಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ವೈದ್ಯಕೀಯ ಸಿಬ್ಬಂದಿ ತುರ್ತು ಆಂಜಿಯೋಪ್ಲ್ಯಾಸ್ಟಿಯನ್ನು ನಡೆಸಿ ಬ್ಲಾಕ್‌ ಆಗಿದ್ದ ಅಪಧಮನಿಯನ್ನು ಸರಿ ಮಾಡಿದ್ದಾರೆ, ಇದರಿಂದ ವಾಪಾಮ್‌ನ ಹೃದಯಕ್ಕೆ ರಕ್ತದ ಹರಿವನ್ನು ಪುನಃಸ್ಥಾಪಿಸಿದರು. ಹೆಚ್ಚುವರಿಯಾಗಿ,…

Read More

ರನೌಟ್‌ ಆದ ವಿಚಾರಕ್ಕೆ ಇಬ್ಬರು ಆಟಗಾರರು ಮೈದಾನದಲ್ಲೇ ಬ್ಯಾಟ್‌ ಹಿಡಿದು ಪರಸ್ಪರ ಫೈಟ್‌ ಮಾಡಿಕೊಂಡಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. https://twitter.com/Arhantt_pvt/status/1723188113340821875?ref_src=twsrc%5Etfw%7Ctwcamp%5Etweetembed%7Ctwterm%5E1723188113340821875%7Ctwgr%5E280f5756417afe47873ce2028456e329b5cc1fa5%7Ctwcon%5Es1_c10&ref_url=http%3A%2F%2Fapi-news.dailyhunt.in%2F ಇಲ್ಲೊಂದು ಕ್ರಿಕೆಟ್‌ ಪಂದ್ಯದಲ್ಲಿ‌ ಇಬ್ಬರು ಬ್ಯಾಟರ್‌ ಗಳು ಕ್ರಿಸ್‌ ನಲ್ಲಿರುವಾಗ ರನ್‌ ಓಡುವ ಭರದಲ್ಲಿ ಒಬ್ಬರು ಔಟ್‌ ಆಗಿದ್ದಾರೆ. ತನ್ನನ್ನು ಔಟ್‌ ಮಾಡಿದ್ದಕ್ಕೆ‌ ಬ್ಯಾಟರ್‌ ಸಹ ಆಟಗಾರರನ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಇಬ್ಬರು ಹೊಡೆದಾಡಿಕೊಳ್ಳಲು ಮುಂದಾಗಿದ್ದಾರೆ. ಪರಸ್ಪರ ಬ್ಯಾಟ್‌ ನಿಂದ ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ಅರಿತ ಇತರ ಆಟಗಾರರು ಇಬ್ಬರನ್ನು ಎಳೆದುಕೊಂಡು ಹೋಗಿದ್ದಾರೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವುದರ ಸ್ಪಷ್ಟ ಮಾಹಿತಿ ಇಲ್ಲ. ಸೋಶಿಯಲ್‌ ಮೀಡಿಯಾದಲ್ಲಿ ಈ ಕ್ರಿಕೆಟ್‌ ಜಗಳದ ವಿಡಿಯೋ ವೈರಲ್‌ ಆಗಿದೆ.

Read More

ಬೆಂಗಳೂರು:- ರಾಜ್ಯದ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ಜನರ ಹೊಟ್ಟೆ ಮೇಳೆ ಬರೆ ಎಳೆದಿದೆ. ಡಿಸೆಂಬರ್ ವಿದ್ಯುತ್ ಬಿಲ್‌ನಲ್ಲಿ ಯೂನಿಟ್‌ಗೆ 85 ಪೈಸೆ ಹೆಚ್ಚುವರಿ ಶುಲ್ಕ, ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ 35 ಪೈಸೆ ವಿಧಿಸಲು ಸರ್ಕಾರ ಮುಂದಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಕಳೆದ ಜೂನ್ ತಿಂಗಳಿನಲ್ಲಿ ಅಕ್ಟೋಬರ್‌ ತಿಂಗಳಿನಿಂದ ಡಿಸೆಂಬರ್‌ವರೆಗೆ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ ದರ ಹೆಚ್ಚಳ ಮಾಡಲಾಗಿದ್ದ, 50 ಪೈಸೆ ಶುಲ್ಕದೊಂದಿಗೆ ನವೆಂಬರ್ ತಿಂಗಳಿಗೆ ಸೀಮಿತವಾಗಿ 35 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್‌ ಸರ್ಕಾರ “ಗೃಹಜ್ಯೋತಿ” ಯೋಜನೆಯಡಿ ಪ್ರತಿ ಮನೆಗೂ ಉಚಿತವಾಗಿ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುತ್ತಿದ್ದು, ಇದರ ಮೇಲೆ ಬಳಸುವವರು ವಿದ್ಯುತ್‌ ಬಿಲ್‌ ಕಟ್ಟಬೇಕು ಎಂದು ತಿಳಿಸಿತ್ತು. ಇದೀಗ ವಿದ್ಯುತ್ ದರ ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯ ವಿದ್ಯುತ್ ಗ್ರಾಹಕರಿಗೆ ವಿದ್ಯುತ್…

Read More

ಗಂಗಾವತಿ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೊದಲಿನಿಂದಲೂ ಭಿನ್ನಮತ ಇದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಹಳಷ್ಟು ಹಿರಿಯ ನಾಯಕರು ಆಕಾಂಕ್ಷಿಯಾಗಿದ್ದರು. ಈಗ ಸಂಘಟನೆ ಮತ್ತು ಬರುವ ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ನಾಯಕರಲ್ಲಿ ಅಸಮಾಧಾನ ಉಂಟಾಗಿದೆ.  ಇಂದಿಲ್ಲ ನಾಳೆ ಇದು ಸ್ಫೋಟಗೊಳ್ಳುತ್ತದೆ ಎಂದರು. ವಿಧಾನಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹೇಗೆ ಗೆಲ್ಲಿಸುತ್ತಾರೆ? ಎಂದು ಪ್ರಶ್ನಿಸಿದರು. https://ainlivenews.com/joint_pain_suprem_ray_treatment_reiki/ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 25ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ. ತೆಲಂಗಾಣ ಸೇರಿದಂತೆ ಮೂರು ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಯ ನಡೆಯಲಿದೆ. 7ಕ್ಕೂ ಹೆಚ್ಚು ಕ್ಷೇತ್ರಗಳ ಜವಾಬ್ದಾರಿಯನ್ನು ಕಾಂಗ್ರೆಸ್…

Read More

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ. ಭಾರತ ತಂಡವು ಅಜೇಯವಾಗಿ ಸೆಮೀಸ್ ಪ್ರವೇಶಿಸಿದೆ. ವಿಶ್ವಕಪ್ ಲೀಗ್ ಹಂತದಲ್ಲಿ ಭಾರತ ತಂಡದ ಪ್ರದರ್ಶನ ಹೇಗಿತ್ತು ಎನ್ನುವುದನ್ನು ನಾವಿಂದು ನೋಡೋಣ ಬನ್ನಿ. , ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 199 ರನ್‌ಗಳಿಗೆ ಸರ್ವಪತನ ಕಂಡಿತು. ಇನ್ನು ಆರಂಭಿಕ ಆಘಾತದ ನಡುವೆಯೂ ವಿರಾಟ್ ಕೊಹ್ಲಿ(85) ಹಾಗೂ ಕೆ ಎಲ್ ರಾಹುಲ್(97*) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ಭರ್ಜರಿ ಜಯ ಸಾಧಿಸಿತ್ತು. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 272 ರನ್ ಕಲೆಹಾಕಿತು. ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ ರೋಹಿತ್ ಶರ್ಮಾ(131) ಆಕರ್ಷಕ ಶತಕ ಹಾಗೂ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕ(55) ನೆರವಿನಿಂದ 15 ಓವರ್ ಬಾಕಿ ಇರುವಂತೆಯೇ 8 ವಿಕೆಟ್ ಜಯ ಸಾಧಿಸಿತು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ…

Read More

ಚಿಕ್ಕಮಗಳೂರು: ಮಧ್ಯಪ್ರದೇಶ ಚುನಾವಣಾ ಪ್ರಚಾರ ಇರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ನಾನು ಯಾವತ್ತೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಒಂದು ವೇಳೆ, ಬೇಡ ಎನಿಸಿದರೆ ರಾಜಕೀಯ ಬಿಟ್ಟು ಸುಮ್ಮನೆ ಕುಳಿತುಕೊಳ್ಳುತ್ತೇನೆ. ಆದರೆ, ಬೇರೆ ಪಕ್ಷಕ್ಕೆ ಹೋಗಿ ರಾಜಕೀಯ ಮಾಡಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರ ಜೊತೆ ಅವರು ಮಾತನಾಡಿದರು. ನಾನು 20 ವರ್ಷ ಶಾಸಕನಾಗಿದ್ದೆ. 35 ವರ್ಷದಿಂದ ಪಕ್ಷದ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ಹೊತ್ತು ಕೆಲಸ ಮಾಡಿದ್ದೇನೆ. ಜಗಳವಾಡಿದರೂ ನಮ್ಮ ಮನೆಯೊಳಗೇ ಜಗಳ, ಹೊಸಿಲು ದಾಟಿ ಬೇರೆಯವರ ಮನೆಗೆ ಹೋಗಿ ನಮ್ಮ ಮನೆಯ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಿಲ್ಲ. ಪಕ್ಷ ಏನೂ ಜವಾಬ್ದಾರಿ ಕೊಟ್ಟಿಲ್ಲ ಎಂದರೂ ಬಿಜೆಪಿಗೆ ಮತ ಕೊಡಿ ಎಂದೇ ಕೇಳುತ್ತೇನೆ. https://ainlivenews.com/joint_pain_suprem_ray_treatment_reiki/ ಬೇರೆ ಪಕ್ಷಕ್ಕೆ ಮತ ಕೊಡಿ ಎಂದು ಕೇಳಲಿಕ್ಕೆ ಆಗುವುದಿಲ್ಲ. ನನಗೆ ಬುದ್ಧಿ ಬಂದಾಗಿನಿಂದ, ಬಿಜೆಪಿಗೆ ಸೇರಿದಾಗಿನಿಂದ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಮತ ಕೇಳಿಲ್ಲ,…

Read More

ಯಾವುದೇ ರೆಸ್ಟೋರೆಂಟ್‌ಗಳಿಗೆ ಹೋದರೂ ವೈಟರ್ ಸೂಪ್ ಅಥವಾ ಸ್ಟಾರ್ಟರ್ಸ್ ಏನಾದ್ರೂ ತೆಗೆದುಕೊಳ್ಳುತ್ತೀರಾ ಎಂದು ಮೊದಲು ಕೇಳುತ್ತಾರೆ. ಊಟಕ್ಕೂ ಮೊದಲು ಸೂಪ್ ಸೇವಿಸುವುದರಿಂದ ಚಯಾಪಚಯ ಕ್ರಿಯೆ ಸರಿಯಾಗಿ ಆಗುತ್ತದೆ. ಅಲ್ಲದೇ ದೇಹಕ್ಕೆ ನವಚೈತನ್ಯವನ್ನು ತುಂಬುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಮನೆಯಲ್ಲೇ ವೆಜಿಟೇಬಲ್ ಮ್ಯಾಂಚೋ ಸೂಪ್ ಯಾವ ರೀತಿ ಮಾಡಬಹುದು ಎಂಬುದನ್ನು ತಿಳಿಸಿಕೊಡುತ್ತೇವೆ ಬೇಕಾಗುವ ಸಾಮಗ್ರಿಗಳು: ನೀರು – 4 ಕಪ್ ಹೆಚ್ಚಿದ ಶುಂಠಿ – 1 ಚಮಚ ಹೆಚ್ಚಿದ ಬೆಳ್ಳುಳ್ಳಿ – 1 ಚಮಚ ಹೆಚ್ಚಿದ ಹಸಿರು ಮೆಣಸಿನಕಾಯಿ – 1 ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ ಹೆಚ್ಚಿದ ಫ್ರೆಂಚ್ ಬೀನ್ಸ್ – 2 ಚಮಚ ಹೆಚ್ಚಿದ ಕ್ಯಾರೆಟ್ – 2 ಚಮಚ ಹೆಚ್ಚಿದ ಕ್ಯಾಬೇಜ್ – 2 ಚಮಚ ಹೆಚ್ಚಿದ ಕ್ಯಾಪ್ಸಿಕಮ್ – 2 ಚಮಚ ಹೆಚ್ಚಿದ ಮಶ್ರೂಮ್ – 2 ಚಮಚ ಹೆಚ್ಚಿದ ಸ್ಪ್ರಿಂಗ್ ಆನಿಯನ್ – 2 ಚಮಚ ಪೆಪ್ಪರ್ ಪೌಡರ್ – 1…

Read More

ಹುಬ್ಬಳ್ಳಿ:- ಎಮ್ಮೆಗಳ ಅಲಂಕಾರಕ್ಕೆ ಕವಡೆ ಸರ, ಕೋಡು ಕೊಂಬುಗಳಿಗೆ ತುರಾಯಿಗಳು, ಹೊಸ ಹಗ್ಗಗಳು, ಕೋಡುಗಳಿಗೆ ಹೊಸ ಬಣ್ಣ ಬಳಿಯುವುದು ಹೀಗೆ ದೀಪಾವಳಿ ಹಬ್ಬವನ್ನ ಗೌಳಿಗ ಸಮಾಜದವರು ಅತ್ಯಂತ ವಿಶೇಷವಾಗಿ ಆಚರಣೆ ಮಾಡಿದರು. ಈ ಕುರಿತು ಒಂದು ವರದಿ.. ದೀಪಾವಳಿ ಹಬ್ಬದಂದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೌಳಿಗರ ಉತ್ಸಾಹಕ್ಕೆ ಎಲ್ಲೆ ಇಲ್ಲ. ಅವರು ತಮ್ಮ ಮಕ್ಕಳಗಿಂತಲೂ ಹೆಚ್ಚಾಗಿ ಪ್ರೀತಿಯಿಂದ ಜೋಪಾನ ಮಾಡಿರುವ ಎಮ್ಮೆಯನ್ನ ಶೃಂಗಾರ ಮಾಡಿ ಓಡಿಸಿದ ಸಂಭ್ರಮಕ್ಕೆ ಪಾರವೇ ಇರಲಿಲ್ಲ.ಉತ್ತರ ಭಾರತದಿಂದ ಬಂದ ಯಾದವರು ಹಣಬರ ಸಮುದಾಯದವರು ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಮಲೆನಾಡಿನ ಸೆರಗಿನಂತಿರುವ ಈ ಊರಿನಲ್ಲಿ ಯಾದವರ ಶ್ರಮದಿಂದಲೇ ಧಾರವಾಡ ಪೇಡೆ ಜನಪ್ರಿಯ ವಾಗಲು ಸಾಧ್ಯವಾಗಿದೆ ‌ ವರ್ಷವಿಡೀ ಹಾಲು ಕೊಟ್ಟು ಪೊರೆಯುವ ಎಮ್ಮೆಗಳಿಗೆ ಸಿಂಗಾರ ಮಾಡಿ, ದ್ವಾದಶಿಯಂದು ದೋಸೆ ಮಾಡಿ ನೈವೇದ್ಯ ಹಿಡಿದು ಬಲಿಪಾಡ್ಯಮಿಯ ದಿನ ಎಮ್ಮೆಗಳ ಓಟ ಏರ್ಪಡಿಸಲಾಗುತ್ತದೆ‌ ಎನ್ನುತ್ತಾರೆ ಗೌಳಿದ ಸಮಾಜ ಹಿರಿಯರು, ನೆಹರು ಮೈದಾನದಲ್ಲಿ ಸಾಂಪ್ರದಾಯಿಕ ಪೂಜೆ ನಂತರ ಗೌಳಿ ಗಲ್ಲಿ, ಮರಾಠಾ ಗಲ್ಲಿ,…

Read More

ಬೆಳಗಾವಿ: ಉಡುಪಿ ಜಿಲ್ಲೆಯಲ್ಲಿ ನಡೆದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ. ಶೀಘ್ರದಲ್ಲೇ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೋಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Read More