Author: AIN Author

ಬೆಳಗಾವಿ: ಮುಂಬರುವ ಲೋಕಸಭೆ ಚುನಾವಣೆಗೆ ಬೆಳಗಾವಿ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮಾಜದ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡುವ ಚಿಂತನೆ ಇದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ”ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ. ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆದಿದೆ. ಅಭ್ಯರ್ಥಿಗಳ ಆಯ್ಕೆಗಾಗಿ ಮೊದಲು ಅರ್ಜಿ ಕರೆಯಲಾಗುತ್ತದೆ. ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವರು ಅರ್ಜಿ ಸಲ್ಲಿಸಬೇಕು,” ಎಂದು ಹೇಳಿದ ಅವರು, https://ainlivenews.com/joint_pain_suprem_ray_treatment_reiki/  ”ರಾಹುಲ್‌ ಜಾರಕಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಲೋಕಸಭೆಗೆ ಸ್ಪರ್ಧೆ ಮಾಡುವ ಬಗ್ಗೆ ಎಲ್ಲಿಯೂ ಹೇಳಿಲ್ಲ,” ಎಂದರು. ”ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಕೆಲ ಯುವಕರು ಗುಂಪು ಕಟ್ಟಿಕೊಂಡು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದಕ್ಕೆ ಪೊಲೀಸ್‌ ಅಧಿಕಾರಿಗಳು ಕಾರಣರಲ್ಲ,” ಎಂದರು.

Read More

ದುಡಿಯುವ ಹಂಬಲ ಇರುವ ಹೆಣ್ಣು ಮಕ್ಕಳಿಗಾಗಿ, ಮನೆಯಲ್ಲೇ ಕುಳಿತು ಅಧಿಕ ಸಂಬಳ ಪಡೆಯಬಹುದಾದ ವರ್ಕ್‌ ಫ್ರಮ್‌ ಹೋಮ್‌ ಉದ್ಯೋಗಗಳ ಬಗ್ಗೆ ತಿಳಿಸಲಾಗುತ್ತದೆ. ನೇಮಕಾತಿದಾರರಾಗಿ ಕೆಲಸ ಮಾಡುವುದು ಮಾನವ ಸಂಪನ್ಮೂಲ ವ್ಯಕ್ತಿಗಳ(HR) ಸಹಾಯಕಿ ಆಗಿ ಉದ್ಯೋಗ ಮಾಡಬಹುದು. ಆನ್‌ಲೈನ್ ಮೂಲಕ ಅಭ್ಯರ್ಥಿಗಳ ಬಯೋಡಾಟಾ ಪರಿಶೀಲಿಸಿ, ಸೂಕ್ತವಾದವರ ಹಿನ್ನೆಲೆ ಚೆಕ್‌ ಮಾಡಿ, ಸಂದರ್ಶನಕ್ಕೆ ಆಹ್ವಾನಿಸುವುದು, ನೇಮಕಾತಿಗೆ ಸಹಾಯ ಮಾಡುವುದು ಈ ಜಾಬ್ ರೋಲ್‌ ಕರ್ತವ್ಯಾಗಿದೆ. ಫ್ರೀಲ್ಯಾನ್ಸ್‌ ರೈಟರ್ ಹವ್ಯಾಸಿ ಬರಹಗಾರರಾಗಿ ಕೆಲಸ ಮಾಡಲು ಯಾವುದೇ ನಿಗದಿತ ವಿದ್ಯಾರ್ಹತೆ ಬೇಕಿಲ್ಲ. ಆದರೆ ಬರವಣಿಗೆ ಕಲೆ ಬೇಕು ಅಷ್ಟೆ. ಬರವಣಿಗೆ ಗೊತ್ತಿರುವವರು, ಹಲವು ವೆಬ್‌ಸೈಟ್‌ಗಳಿಗೆ ತಮ್ಮ ಲೇಖನಗಳನ್ನು ನೀಡುವ ಮೂಲಕ ಮನೆಯಿಂದಲೇ ಹವ್ಯಾಸಿ ಬರಹಗಾರರಾಗಿ ಸಂಪಾದನೆ ಮಾಡಬಹುದು. ಡಾಟಾ ಫ್ರೂಫ್‌ ರೀಡರ್ ಫ್ರೂಫ್‌ ರೀಡರ್ ಕೇವಲ ಕಂಟೆಂಟ್ ಗ್ರಾಮರ್ ತಪ್ಪುಗಳನ್ನು ಮಾತ್ರ ಚೆಕ್‌ ಮಾಡುವುದಲ್ಲದೇ, ಮಾಹಿತಿ ಸರಿಯಾಗಿದೆಯೇ, ಫಾರ್ಮ್ಯಾಟ್ ಸರಿ ಇದೆಯೇ ಎಂದು ಪರಿಶೀಲಿಸಬೇಕು. ಅಲ್ಲದೇ ಕಂಟೆಂಟ್‌ ಬಗೆಗಿನ ಇತರೆ ಕೆಲಸಗಳನ್ನು ಸಹ ಮಾಡಬಹುದು ಆನ್‌ಲೈನ್‌ ಟೀಚರ್…

Read More

ಹಾಸನ :- ಹೆಚ್​ಡಿಕೆ ಮನೆಗೆ ಅಕ್ರಮವಾಗಿ ವಿದ್ಯುತ್ ಪಡೆದ ಪ್ರಕರಣ ‘ನಮ್ಮಿಂದ್ರ ಆ ರೀತಿಯ ತಪ್ಪೇನಾದರೂ ಆಗಿದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳುತ್ತೇನೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಹೇಳಿದರು ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಪಡೆದ ಪ್ರಕರಣ ‘ನಮ್ಮಿಂದ್ರ ಆ ರೀತಿಯ ತಪ್ಪೇನಾದರೂ ಆಗಿದ್ದರೆ ರಾಜ್ಯದ ಜನರಿಗೆ ಕ್ಷಮೆ ಕೇಳುತ್ತೇನೆ. ನಮ್ಮ ಮನೆಯ ಕೆಲ ಹುಡುಗರು ತಪ್ಪು ಮಾಡಿರಬಹುದು ಎಂದು ಹೇಳಿದರು. ಇನ್ನು ಇದೇ ವೇಳೆ ‘ಪ್ರತಿ ವರ್ಷ 9 ರಿಂದ 15 ದಿನ ಹಾಸನಾಂಬೆ ದರ್ಶನ ಸಿಗುತ್ತದೆ. ಈ ಬಾರಿ ಪ್ರತಿ ದಿನ ದಿನಕ್ಕೆ ಒಂದರಿಂದ ಒಂದೂವರೆ ಲಕ್ಷ ಭಕ್ತರು ದರ್ಶನ ಪಡೆದಿದ್ದು, ಶಾಸಕರು, ಜಿಲ್ಲಾಡಳಿತ ಜವಾಬ್ದಾರಿಯಿಂದ ವ್ಯವಸ್ಥೆ ‌ಮಾಡಿದ್ದಾರೆ. ರಾಜ್ಯದಲ್ಲೇ ಹಾಸನಾಂಬೆ ‌ತಾಯಿಯ ಶಕ್ತಿ ಬಗ್ಗೆ ಚರ್ಚೆ ಆಗುತ್ತಿರುತ್ತದೆ. ಹಚ್ಚಿದ ದೀಪ‌ ಒಂದು ವರ್ಷದವರೆಗೆ ಇರುತ್ತದೆ ಎಂಬ ನಂಬಿಕೆ ಇದೆ. ಎಲ್ಲರಿಗೂ ಒಳ್ಳೆಯದಾಗಲಿ,…

Read More

ಇಂದಿನ ಯುಗದಲ್ಲಿ ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ಗಳ ಟ್ರೆಂಡ್ ನಿಮ್ಮ ದೈನಂದಿನ ಜೀವನವನ್ನು ಸುಲಭಗೊಳಿಸುತ್ತಿದೆ, ಆದರೆ ಇದು ನಿಮ್ಮ ಆರೋಗ್ಯವನ್ನು ಸಹ ಹಾಳುಮಾಡುತ್ತಿದೆ. ಹೆಚ್ಚು ಮೊಬೈಲ್ ಫೋನ್ ಬಳಸುವವರಲ್ಲಿ ಕಣ್ಣಿನ ಕಿರಿಕಿರಿ ಮತ್ತು ನಿದ್ರಾಹೀನತೆ ಸಾಮಾನ್ಯವಾಗಿದೆ ಎಂದು ಅನೇಕ ಸಂಶೋಧಕರು ಸ್ಪಷ್ಟಪಡಿಸಿದ್ದಾರೆ. ಸ್ಮಾರ್ಟ್‌ಫೋನ್‌ನ ವಿಕಿರಣವು ನಿಮ್ಮ ಆರೋಗ್ಯದ ಮೇಲೆ ಇತರ ಹಲವು ರೀತಿಯಲ್ಲಿ ಪರಿಣಾಮ ಬೀರುತ್ತದೆ ಸಾಮಾನ್ಯವಾಗಿ ರಾತ್ರಿ ಮಲಗುವಾಗ ದಿಂಬಿನ ಕೆಳಗೆ ಫೋನ್ ಇಟ್ಟು ಮಲಗುವ ಅಭ್ಯಾಸವಿರುತ್ತದೆ. ಆದರೆ ಯಾರು ಇದನ್ನು ಮಾಡುತ್ತಿದ್ದರೂ, ಈ ಚಟವು ಸಂಪೂರ್ಣವಾಗಿ ತಪ್ಪು. ಹೀಗೆ ಮಾಡುವುದರಿಂದ ಮುಂದಿನ ದಿನಗಳಲ್ಲಿ ತಲೆನೋವು ಮತ್ತು ತಲೆತಿರುಗುವಿಕೆ ಸಮಸ್ಯೆಗಳು ಬರಬಹುದು.  ಮಕ್ಕಳಿಗೂ ಕೂಡ ಅಪಾಯದಿಂದ ಮುಕ್ತವಾಗದ ಫೋನ್ ಇದೆ. ಸಂಶೋಧನೆಯ ಪ್ರಕಾರ, ಮೊಬೈಲ್ ಫೋನ್ ಅನ್ನು ಮಕ್ಕಳೊಂದಿಗೆ ಇಟ್ಟುಕೊಳ್ಳುವುದರಿಂದ ಹೈಪರ್ಆಕ್ಟಿವಿಟಿ ಮತ್ತು ಕೊರತೆಯ ಅಸ್ವಸ್ಥತೆಗಳಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಶರ್ಟ್ ಕಿಸೆಯಲ್ಲಿ ಫೋನ್ ಇಟ್ಟರೆ ಎಚ್ಚರ ಅಗತ್ಯ. ಮೊಬೈಲ್‌ನಿಂದ ಹೊರಸೂಸುವ ವಿಕಿರಣವು ನಿಮ್ಮ ಹೃದಯದ ಮೇಲೆ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ವಾಹನ ಚಲಾಯಿಸುವವರು ಮೊಬೈಲ್ ಅನ್ನು ಹಿಂದಿನ ಜೇಬಿನಲ್ಲಿ ಇಟ್ಟುಕೊಂಡು…

Read More

ಬೆಂಗಳೂರು:- ನೂತನ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಕಮಲಪಾಳಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.

Read More

ಕೆನಡಾ: ಸಾಮಾನ್ಯವಾಗಿ ಆಗ ತಾನೇ ಹುಟ್ಟಿದ ಮಕ್ಕಳು ಎಷ್ಟು ತೂಕ ಹೊಂದಿರುತ್ತಾರೆ? ಹೆಚ್ಚೆಂದರೆ ಮೂರು ಕೇಜಿ ಅದಕ್ಕೂ ಹೆಚ್ಚೆಂದರೆ 4 ಕೇಜಿ. ಆದರೆ ಕೆನಡಾದಲ್ಲಿ ಆಗ ತಾನೆ ಹುಟ್ಟಿದ ಮಗುವೊಂದು 6. 5 ಕೆಜಿ ತೂಗುವ ಮೂಲಕ ದಾಖಲೆ ಬರೆದಿದೆ. ಕೆನಡಾದಲ್ಲಿ (canada) ಮಹಿಳೆಯೊಬ್ಬರು 6.5 ಕೆಜಿ ತೂಗುವ ಮಗುವೊಂದಕ್ಕೆ ಸಿಸೇರಿಯನ್ ಮೂಲಕ ಜನ್ಮ ನೀಡಿದ್ದು,  13 ವರ್ಷಗಳಲ್ಲೇ ಇಷ್ಟು ತೂಕದ ಮಗುವೊಂದು ಜನಿಸಿದ್ದು ಇದೇ ಮೊದಲಾಗಿದೆ. ಕೆನಡಾ ದಂಪತಿಗಳಾದ ಬ್ರಿಟ್ನಿ ಐರಿ ಹಾಗೂ ಚಾನ್ಸ್‌ ಐರಿ ತಮ್ಮ 5ನೇ ಮಗುವಿಗೆ ಜನ್ಮ ನೀಡಿದ್ದು, ಮಗುವಿನ ತೂಕದಿಂದಾಗಿ ಈ ಮನೆಗೆ ಬಲಭೀಮ ಆಗಮಿಸಿದಂತಾಗಿದೆ. ಮಗುವಿನ ಆಗಮನದಿಂದ  ಫೋಷಕರು ಫುಲ್ ಖುಷ್ ಆಗಿದ್ದಾರೆ. ಮಗುವಿಗೆ ಸೋನಿ ಐರಿ ಎಂದು ಹೆಸರಿಡಲಾಗಿದೆ.  https://ainlivenews.com/joint_pain_suprem_ray_treatment_reiki/ ಸೋನಿ ಐರಿ ಸಾಮಾನ್ಯ ಮಕ್ಕಳಿಗಿಂತ ಎರಡು ಪಟ್ಟು ಹೆಚ್ಚು ತೂಗುತ್ತಿದ್ದು, ಲಡ್ಡುವಿನಂತಿದ್ದ ಮಗುವನ್ನು ನೋಡಿ ಆಸ್ಪತ್ರೆಯ ವೈದ್ಯರು, ನರ್ಸ್‌ಗಳು ಕೂಡ ಸಂತೋಷ ವ್ಯಕ್ತಪಡಿಸಿದ್ದರೆ. ಪೌಂಡ್‌ಗಳ ಲೆಕ್ಕದಲ್ಲಿ  ಹೇಳುವುದಾದರೆ ಈ ಮಗು 14…

Read More

ದೊಡ್ಡಬಳ್ಳಾಪುರ:- ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ.ದೊಡ್ಡಬಳ್ಳಾಪುರ ನಗರದಲ್ಲಿ ಸರಣಿ ಬೀದಿ‌ನಾಯಿಗಳ ದಾಳಿ ಪ್ರಕರಣ ಮುಂದುವರೆದಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 14 ಮಂದಿ ಮೇಲೆ ಬೀದಿ‌ ನಾಯಿಗಳು ದಾಳಿ ನಡೆಸಿವೆ. ಇಲ್ಲಿನ ಟಿಬಿ ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ, ಡಿ ಕ್ರಾಸ್‌ ಸೇರಿದಂತೆ ಹಲವು ಕಡೆ ಬೀದಿ ನಾಯಿಗಳು ದಾಳಿ ಮಾಡಿರುವುದು ವರದಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಮಕ್ಕಳು ಸೇರಿದಂತೆ ಪುರುಷರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಸದ್ಯ ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ದೀಪದ ಹಬ್ಬ ಹಲವರ ಬಾಳಿಗೆ ಕತ್ತಲು ತಂದಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯವಾದ 70 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ನಗರದ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಒಟ್ಟು 41 ಕಣ್ಣಿನ ಗಾಯದ ಪ್ರಕರಣಗಳು ವರದಿಯಾಗಿವೆ. “ಸೋಮವಾರ 11 ಮಂದಿ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಅದರಲ್ಲಿ ಮೂವರು ಮಕ್ಕಳು. ಇಬ್ಬರು ಹುಡುಗರು ಮತ್ತು ಒಬ್ಬ ಹುಡುಗಿ. ಒಬ್ಬ ಹುಡುಗನ ಎಡಗಣ್ಣಿನಲ್ಲಿ ಇನ್ನೊಬ್ಬನಿಗೆ ಬಲಗಣ್ಣಿನಲ್ಲಿ ಮತ್ತು ಹುಡುಗಿಯ ಎರಡೂ ಕಣ್ಣುಗಳಿಗೆ ಹಾನಿಯಾಗಿದೆ ಎಂದು ಶಂಕರ ಕಣ್ಣಿನ ಆಸ್ಪತ್ರೆ ವೈದ್ಯ ಡಾ ಆನಂದ್ ಬಾಲಸುಬ್ರಮಣ್ಯಂ ಹೇಳಿರುವುದಾಗಿ ಹೇಳಿದೆ. ನವೆಂಬರ್ 12 ಮತ್ತು 13 ರಂದು ರಾಜ್ಯದ ಮಿಂಟೋ ಆಸ್ಪತ್ರೆಯಲ್ಲಿ ಒಟ್ಟು ಒಂಬತ್ತು ಪ್ರಕರಣಗಳು ವರದಿಯಾಗಿವೆ. ನಾರಾಯಣ ನೇತ್ರಾಲಯದಲ್ಲಿ 24 ಪ್ರಕರಣಗಳು ವರದಿಯಾಗಿವೆ.

Read More

ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿದರೆ ಒಳ್ಳೆಯದೇ ಎಂದು ಪ್ರಶ್ನಿಸಿದರೆ, ಖಂಡಿತವಾಗಿಯೂ ಹೌದು. ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅದರಿಂದ ಹಲವಾರು ರೀತಿಯ ಲಾಭಗಳು ಆರೋಗ್ಯ ಮತ್ತು ಸಾಮಾನ್ಯ ಜೀವನದ ಮೇಲೆ ಆಗುವುದು. ಆ ಲಾಭಗಳು ಯಾವುದು ಎಂದು ತಿಳಿಯುವ.. ತೂಕ ಇಳಿಸಲು ನೆರವಾಗುವುದು ದೇಹದಲ್ಲಿ ಬೊಜ್ಜು ಆವರಿಸಿಕೊಂಡು, ಅನಾರೋಗ್ಯಕಾರಿ ಆಗಿ ತೂಕ ಬೆಳೆದಿದ್ದರೆ ಆಗ ಅದನ್ನು ಇಳಿಸಲು ಹಸಿ ಬೆಳ್ಳುಳ್ಳಿ ಸೇವಿಸಿ. ಹಸಿ ಬೆಳ್ಳಿಯಲ್ಲಿ ಕೆಟ್ಟ ಮತ್ತು ಅಧಿಕ ಕೊಬ್ಬನ್ನು ಕರಗಿಸುವಂತಹ ಅಂಶಗಳು ಇವೆ. ವಿವಿಧ ರೀತಿಯ ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿಯು ಚಯಾಪಚಯ ಕ್ರಿಯೆ ವೃದ್ಧಿಸುವುದು ಎಂದು ಕಂಡುಕೊಳ್ಳಲಾಗಿದೆ. ರಕ್ತದಲ್ಲಿ ಸಕ್ಕರೆ ಮಟ್ಟ ಕಾಪಾಡಲು ಮಧುಮೇಹಿಗಳಿಗೆ ಬೆಳ್ಳುಳ್ಳಿಯು ತುಂಬಾ ಪ್ರಯೋಜನಕಾರಿ. ಇದರಲ್ಲಿ ಇರುವಂತಹ ಅಲಿಸಿನ್ ಎನ್ನುವ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಮತ್ತು ತಗ್ಗಿಸುವುದು. ಬೆಳ್ಳುಳ್ಳಿಯನ್ನು ಜಜ್ಜಿಕೊಂಡಾಗ ಅಥವಾ ಕತ್ತರಿಸಿದಾಗ ಅಲಿಸಿನ್ ಹೆಚ್ಚಾಗುವುದು. ಜಜ್ಜಿಕೊಂಡ ಬೆಳ್ಳುಳ್ಳಿಯನ್ನು ದಿನದಲ್ಲಿ ಎರಡು ಸಲ ಸೇವಿಸಿದರೆ, ಆಗ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿ ಇರುವುದು.…

Read More

ಬೆಂಗಳೂರು:- ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ. ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ಮಾಜಿ ಸಿಎಂ ಮೇಲೆ ಬೆಸ್ಕಾಂ ಜಾಗೃತ ದಳ ಪ್ರಕರಣದ ದಾಖಲಿಸಿಕೊಂಡಿತ್ತು. ಹೀಗಾಗಿ ಎಚ್‌ಡಿಕೆ ಅವರನ್ನು ವ್ಯಂಗ್ಯವಾಡಲು ಕಿಡಿಗೇಡಿಗಳು ಪೋಸ್ಟರ್‌ ಅಂಟಿಸಿದ್ದಾರೆ. ಕುಮಾರಸ್ವಾಮಿ ಕರೆಂಟ್‌ 200 ಯುನಿಟ್‌ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್‌ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಜೆಡಿಎಸ್‌ ಕಾರ್ಯಕರ್ತರು, ಮಾಜಿ ಸಿಎಂ ಎಚ್‌ಡಿಕೆಗೆ ಅವಮಾನ ಮಾಡಲು ಕಾಂಗ್ರೆಸ್‌ ಕಾರ್ಯಕರ್ತರು ಈ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ ಎಂದು ಆರೋಪಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Read More