Author: AIN Author

ಬೆಂಗಳೂರು:- ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ CM ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ. ವಿದ್ಯುತ್‌ ಕಳ್ಳತನದ ಆರೋಪದ ಮೇಲೆ ಅವರ ಮೇಲೆ ಪ್ರಕರಣ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿವಾಸಕ್ಕೆ ದೀಪಾಲಂಕಾರ ಮಾಡಲು ವಿದ್ಯುತ್‌ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್‌ ಗಂಭೀರ ಆರೋಪ ಮಾಡಿ ವಿಡಿಯೊ ಸಹಿತ ಟ್ವೀಟ್‌ ಮಾಡಿತ್ತು. ಈಗ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ಜಯನಗರ ಬೆಸ್ಕಾಂ ಜಾಗೃತ ದಳದಿಂದ ಎಫ್‌ಐಆರ್ ದಾಖಲು ಮಾಡಲಾಗಿದೆ. ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಂಗಳವಾರ ರಂದು ಅಪರಾಧ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಇಇ ಪ್ರಶಾಂತ್‌ ಕುಮಾರ್‌ ಎಂಬುವವರು ದೂರು ನೀಡಿದ್ದಾರೆ. ಈ ದೂರಿನನ್ವಯ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ.

Read More

ಬೆಂಗಳೂರು:- ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಈಗಾಗಲೇ ಮದುವೆ ಆಗಿದೆ, ಮಗಳು ಕೂಡ ಇದ್ದಾಳೆ ಎಂದು ವರ್ತೂರ್ ಸಂತೋಷ್ ಅವರ ಮಾವ ಸತ್ಯ ಬಿಚ್ಚಿಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನನ್ನ ಮಗಳಿಗೆ‌ ಮನೆಯಲ್ಲಿ ಹೊಡೆದು ಬಡೆದು ಮಾಡ್ತಿದ್ದ. ದೊಡ್ಡವರಿಗೆ ತಿಳಿಸಿ ನನ್ನ ಮಗಳನ್ನ ತವರುಮನೆಗೆ ಕರೆದುಕೊಂಡು ಬಂದ್ವಿ. ದೊಡ್ಡವರಿಗೆಲ್ಲ ತಿಳಿಸಿದ್ದಕ್ಕೆ ನಿಮ್ಮ ಮನೆಗೆ ಕರೆದುಕೊಂಡು ಹೋಗ್ರಿ ಅಂದ್ರು. ಇವಾಗ ಒಂದು ಹೆಣ್ಣು ಮಗು ಆಗಿದೆ. ಪ್ರೆಗ್ನೆಂಟ್ ಆಗಿದ್ದ ನನ್ನ ಮಗಳನ್ನ ಹೊಡೆಯುತ್ತಿದ್ದ ನಾವಿದನ್ನ ನೋಡಿಕೊಂಡಿರಬೇಕಿತ್ತಾ…!? ಅವರ ಮನೆಯವರು ಕಂಪ್ಲೆಂಟ್ ಕೊಡಬೇಡಿ ಅಂದಿದ್ರು. ಬೇಡ ಅಂತೇಳಿ ನಾವು ಮಗಳನ್ನ ಕರೆದುಕೊಂಡು ಬಂದ್ವಿ ಎಂದರು. ಇನ್ನೂ ನಮ್ಮ ಮಗಳ ಕುತ್ತಿಗೆಗೆ ಸಂತೋಷ್ ಚಾಕು ಇಟ್ಟಿದ್ದ. ಮಗಳನ್ನ ತವರಿಗೆ ಕರೆದುಕೊಂಡು ಬಂದು ಎರಡು ವರ್ಷ ಆಯ್ತು. ಇದುವರೆಗೂ ಹೆಂಡ್ತಿ ಮಗಳನ್ನ ನೋಡಲಿಕ್ಕೆ ಬಂದಿಲ್ಲ. ಬಿಗ್ ಬಾಸ್ ಹೋದ್ಮೇಲೆ ಗೊತ್ತಾಗ್ತಿದೆ ಬೇರೆ ಮದುವೆ ಆಗ್ತಾನಂತೆ ಅಂತ. ಮಾರ್ಚ್ 05 2020 ರಂದು ನನ್ನ…

Read More

ಬೆಂಗಳೂರು:- ಕಳೆದ ಹಲವು ವರ್ಷಗಳಿಂದ ನಾನು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ ಅದರಂತೆ ಈ ಬಾರಿಯೂ ಆಚರಿಸದಿರಲು ನಿರ್ಧರಿಸಿದ್ದೇನೆ. ಇದೇ ತಿಂಗಳ 22 ರಂದು ನನ್ನ ಹುಟ್ಟು ಹಬ್ಬವಿದೆ..ಕೆಲವರು ನನ್ನ ಹುಟ್ಟು ಹಬ್ಬ ಆಚರಿಸಲು ತಯಾರಿ ತಯಾರಿ ನಡೆಸಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.ಆ ದಿನದಂದು ನಾನು ಕಲಬುರಗಿ ಬೆಂಗಳೂರು ಎರಡೂ ಕಡೆ ಲಭ್ಯವಿರುವುದಿಲ್ಲ. ನನ್ನ ಬರ್ತ್ ಡೇ ಆಚರಿಸಬೇಕೆಂದು ಶ್ರಮ ಹಾಕಬೇಡಿ.ಬದಲಾಗಿ ನಿಮ್ಮ ಪರಿಶ್ರಮ ಬಡಜನರ ಹಿತಕ್ಕಾಗಿ ಇರಲಿ. ಹೀಗಂತ ಟ್ವೀಟ್ ಮೂಲಕ ಅಭಿಮಾನಿಗಳಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ..

Read More

ಹುಬ್ಬಳ್ಳಿ,: ದೀಪಾವಳಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಬೆಂಬಲ ನೀಡಿದ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಅವರು ದೀಪಗಳ ಹಬ್ಬ ದೀಪಾವಳಿ ಆಚರಿಸಿದ್ದೇನೆ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ನಾವು ಹಬ್ಬ-ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರು ಹಬ್ಬ ಆಚರಿಸುವಂತಾಗಬೇಕು ಎಂಬುದು ಮೋದಿಜೀಯ ಆಶಯ. ಇದನ್ನು ಸಾಕರಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಹೌದು ಎಂದಿದ್ದು #VocalForLocal ದೀಪಾವಳಿಯ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಒಂದಾದ ಮಣ್ಣಿನ ದೀಪದ ಹಣತೆಯನ್ನು ಖರೀದಿಸುವ ಮೂಲಕ ಪ್ರಧಾನಮಂತ್ರಿ ಶ್ರೀ @narendramodi ಅವರ #VocalForLocal ಅಭಿಯಾನದಲ್ಲಿ ಭಾಗವಹಿಸಿ, ದೀಪಗಳ ಹಬ್ಬ ದೀಪಾವಳಿ ಆಚರಿಸಿದೆನು. ನಾವು ಹಬ್ಬ ಹರಿದಿನಗಳಲ್ಲಿ ಸಂಭ್ರಮಿಸುವಂತೆ ನಮ್ಮವರ ಪ್ರಮುಖ ಹಬ್ಬಗಳಲ್ಲಿ ಒಂದಾದ ದೀಪಾವಳಿಯ ಸಂದರ್ಭದಲ್ಲಿ ನಾವೆಲ್ಲರೂ ಸ್ಥಳೀಯ ಕರಕುಶಲಕರ್ಮಿಗಳಿಂದ…

Read More

ರಾಯ್ಪುರ:- ಅಧಿಕಾರಕ್ಕೆ ಬಂದರೆ ಛತ್ತೀಸ್‌ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ ತರಲಾಗುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಮುಂಬರುವ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆಯೇ ಛತ್ತೀಸ್‌ಗಢದಲ್ಲಿಯೂ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು. ಛತ್ತೀಸ್‌ಗಢದಲ್ಲಿ 70 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಚುನಾವಣಾ ಕದನಕ್ಕೆ ದುಮುಕಿದ್ದಾರೆ. ರಾಜ್ಯದಲ್ಲಿ ತನ್ನ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್‌ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

Read More

ನವದೆಹಲಿ:- ತಮ್ಮ ಸಾಮರ್ಥ್ಯದಿಂದ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿಜಯೇಂದ್ರ ಅವರು ಪಕ್ಷದ ಆಸ್ತಿ. ವಿಜಯೇಂದ್ರರವರು ತಮ್ಮ ಸಾಮರ್ಥ್ಯದ ಮೂಲಕ ಈ ನಾಯಕತ್ವವನ್ನು ಗಳಿಸಿದ್ದಾರೆ. ಪಕ್ಷ ಸಂಘಟನೆಗೆ ಸಾಕಷ್ಟು ಸಮಯವನ್ನು ಮೀಸಲಿಟ್ಟಿದ್ದಲ್ಲದೆ, ಅವರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭವಾಗಿದ್ದು, ಪಕ್ಷಕ್ಕೆ ತಾವು ದೊಡ್ಡ ಆಸ್ತಿ ಎಂದು ಅವರು ಸಾಬೀತುಪಡಿಸಿದ್ದಾರೆ. ಯುವ ನಾಯಕರಾಗಿರುವ ವಿಜಯೇಂದ್ರ ಅವರ ನೇಮಕವು, ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದರು. ನಾವು ಯಾರನ್ನೂ ಕಡೆಗಣಿಸುವುದಿಲ್ಲ. ವಿಷಯವು ತಂತ್ರವಾಗಿದೆ. ಯಾವ ತಂತ್ರವು ಉಪಯುಕ್ತವಾಗಿದೆ ಎಂಬುದನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನಾವು ಎಲ್ಲಾ ಪ್ರಮುಖ ನಾಯಕರನ್ನು ಚುನಾವಣಾ ಪ್ರಚಾರದ ಮುಖ್ಯ ಭಾಗವಾಗಿ ಮಾಡುತ್ತೇವೆ. ನಮ್ಮ ರಾಜ್ಯದ ಎಲ್ಲಾ ದೊಡ್ಡ ನಾಯಕರ ಕಾರ್ಯಕ್ರಮಗಳನ್ನು ನೋಡಿ, ಅವರು ಎಲ್ಲೆಂದರಲ್ಲಿ ಹೋಗುತ್ತಿದ್ದಾರೆ, ತಮ್ಮನ್ನು ಮಾತ್ರವಲ್ಲದೆ ಇತರರನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದೇ ರೀತಿ ಪಂಚರಾಜ್ಯ ಚುನಾವಣೆಗಳ ಬಗ್ಗೆಯೂ ಜೆಪಿ ನಡ್ಡಾ ಅವರನ್ನು…

Read More

ನಾಳೆ ಭಾರತ vs ನ್ಯೂಜಿಲೆಂಡ್​ ಸೆಮೀಸ್​ ಫೈಟ್​ ನಡೆಯಲಿದ್ದು, ನಕಲಿ ಟಿಕೆಟ್​ ಬಗ್ಗೆ ಅಭಿಮಾನಿಗಳು ಎಚ್ಚರ ವಹಿಸಬೇಕಾಗಿದ. ಕೋಲ್ಕತ್ತಾದಲ್ಲಿ ವಿಶ್ವಕಪ್​ ಪಂದ್ಯಗಳ ಟಿಕೆಟ್ ಅಕ್ರಮ ಮಾರಾಟ ಪ್ರಕರಣದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭಾರತ ಮತ್ತು ನ್ಯೂಜಿಲೆಂಡ್​ ನಡುವಣ ಹೈವೋಲ್ಟೇಜ್​ ಸೆಮೀಸ್​ ಪಂದ್ಯದ ಟಿಕೆಟ್ ಖರೀದಿಸುವಾಗ ಹೆಚ್ಚು ಜಾಗರೂಕರಾಗಿರಿ ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ವಿಶ್ವಕಪ್​ನ ಮುಂದಿನ ಮೂರು ಪಂದ್ಯಗಳ ಟಿಕೆಟ್​ಗಳು ಮಾರಾಟವಾಗಿದೆ. ಮುಂಬೈ ಪೊಲೀಸ್ ಡಿಸಿಪಿ ಪ್ರವೀಣ್ ಮುಂಡೆ ವಿಶ್ವಕಪ್ ಟಿಕೆಟ್‌ಗಳ ಬ್ಲಾಕ್ ಮಾರ್ಕೆಟಿಂಗ್ ಬಗ್ಗೆ ಮಾತನಾಡಿದ್ದಾರೆ. ”ನವೆಂಬರ್ 2 ರಂದು ಭಾರತ ಮತ್ತು ಶ್ರೀಲಂಕಾ ಪಂದ್ಯದ ವೇಳೆ ನಕಲಿ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಕ್ಕಾಗಿ ಕೆಲವು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ”ಎಂದು ಹೇಳಿದರು. “ನಾವು ಈಗಾಗಲೇ ಕೆಲವು ವ್ಯಕ್ತಿಗಳನ್ನು ಬ್ಲಾಕ್ ಮಾರ್ಕೆಟಿಂಗ್‌ ಆರೋಪದ ಮೇಲೆ ಬಂಧಿಸಿದ್ದೇವೆ. ಭಾರತ ಮತ್ತು ಶ್ರೀಲಂಕಾ ಪಂದ್ಯದ ಸಂದರ್ಭದಲ್ಲಿ, ನಾವು ಕ್ರೀಡಾಂಗಣದ ಹೊರಗೆ ನಕಲಿ ಟಿಕೆಟ್‌ಗಳನ್ನು ಮಾರಾಟ ಮಾಡಿದ ಕೆಲವು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದೇವೆ.…

Read More

ಹಳ್ಳಿ ಕಾರ್’​ ಎಂದೇ ಖ್ಯಾತರಾದ ವರ್ತೂರು ಸಂತೋಷ್​ ಇದೀಗ ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ವಿಚಾರಗಳಿಂದ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ತಮ್ಮ ಕತ್ತಿನಲ್ಲಿ ಧರಿಸಿದ್ದ ಲಾಕೆಟ್​ ಹುಲಿ ಉಗುರು ಎಂಬ ವಿವಾದಕ್ಕೆ ಸಿಲುಕಿ ಬಿಗ್​ ಮನೆಯಿಂದ ರಾತ್ರೋ ರಾತ್ರಿ ಹೊರಬಂದಿದ್ದರು. ಆದಾದ ಬಳಿಕ ಇತ್ತೀಚೆಗೆ ಸುದೀಪ್​ ಮುಂದೆ ನಾನು ಮನೆಯಲ್ಲಿ ಉಳಿಯಲು ಇಷ್ಟಪಡಿಸುವುದಿಲ್ಲ, ಕಳಿಸಿಬಿಡಿ ಎಂದು ಹಠ ಮಾಡುವ ಮೂಲಕ ಸುದ್ದಿಯಾಗಿದ್ದರು. ಈಗ ಅವರ ಮದುವೆ ಕುರಿತಾದ ಒಂದು ವಿಡಿಯೋ ಮೂಲಕ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಏನಿದು ಮದುವೆ ಕಥೆ? ಬಿಗ್​ ಬಾಸ್​ ಮನೆಗೆ ವಿವಿಧ ಕ್ಷೇತ್ರಗಳಿಂದ ಬಂದಿರುವ ಸ್ಪರ್ಧಿಗಳ ಪೈಕಿ ರೈತಾಪಿ ವರ್ಗವನ್ನು ಪ್ರತಿನಿಧಿಸುವ ಒಬ್ಬ ಕೃಷಿಕನಾಗಿ ಎಂಟ್ರಿ ಕೊಟ್ಟ ವರ್ತೂರು ಸಂತೋಷ್​, ಮನೆಯಲ್ಲಿನ ಚಟುವಟಿಕೆಗಳಲ್ಲಿ ತಮ್ಮ ಪಾಲ್ಗೊಳ್ಳುವಿಕೆಯಿಂದ ಎಲ್ಲರ ಗಮನ ಸೆಳೆದಿದ್ದರು. ಜನಸಾಮಾನ್ಯರಿಂದ ಬಹುಮತಗಳನ್ನು ಪಡೆದು ವಾರಾಂತ್ಯದಲ್ಲಿ ಸೇಫ್​ ಆಗುತ್ತಿರುವ ವರ್ತೂರು ಸಂತೋಷ್​ ಮದುವೆಯಾಗಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.…

Read More

ಆದರ್ಶ ಪತ್ನಿ ಎಂದೂ ಕೇಳಿಬರುವುದು ಸಹಜವೇ. ಆದರೆ ಆದರ್ಶ ಪತಿ ಹೀಗಿರಬೇಕು ಎನ್ನುವ ಮಾತು ಕೇಳಿಬರುವುದು ಸ್ವಲ್ಪ ಕಮ್ಮಿಯೇ. ಹೆಣ್ಣಾದವಳು ತನ್ನ ಗಂಡನಲ್ಲಿ ಈ ರೀತಿಯ ಆದರ್ಶ ಗುಣಗಳು ಇರಬೇಕು ಎಂದು ಬಯಸುತ್ತಾಳೆ. ಆ ಸಂದರ್ಭದಲ್ಲಿ ಆಕೆಯ ಬಾಯಿಯಿಂದ ಆದರ್ಶ ಗಂಡ ಎನ್ನುವ ಶಬ್ದ ಬರುವುದು ಬಿಟ್ಟರೆ, ಸಾಮಾನ್ಯವಾಗಿ ಬುದ್ಧಿ ಮಾತು ಹೇಳುವಾಗ ಪತ್ನಿಯ ಆದರ್ಶದ ಬಗ್ಗೆಯೇ ಮಾತನಾಡುವುದು ತಲೆ ತಲಾಂತರಗಳಿಂದಲೂ ನಡೆದುಕೊಂಡು ಬಂದಿದೆ. ಇದರ ನಡುವೆಯೇ ಆದರ್ಶ ಗಂಡ ಹೀಗೆ ಇರಬೇಕು ಎಂದು ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುವ ಗೀತಾದ ನಾಯಕ ಹೇಳಿಕೊಟ್ಟಿದ್ದು, ಅದರ ಪ್ರೊಮೋ ಸಕತ್​ ವೈರಲ್​ ಆಗುತ್ತಿದೆ. ನಿಜವಾಗಿಯೂ ಆದರ್ಶ ಗಂಡ ಹೀಗೆಯೇ ಇರಬೇಕು ಎನ್ನುತ್ತಿದ್ದಾರೆ ಮಹಿಳೆಯರು. ಅಷ್ಟಕ್ಕೂ ಈ ಸೀರಿಯಲ್ ಅತ್ತೆ-ಸೊಸೆಗೆ ಸಂಬಂಧಿಸಿದ ಕಥೆಯಾದರೂ ಗೀತಾ ಗಂಡನಿಗೂ ಪಾತ್ರದಲ್ಲಿ ಪ್ರಾಮುಖ್ಯತೆ ಇದೆ. ಮೂರು ಪಾತ್ರಗಳ ಸುತ್ತ ಸುತ್ತುತ್ತಿರುವ ಕಥೆ ಇದಾಗಿದೆ. ಇದೀಗ ಇಂಥದ್ದೊಂದು ಡೈಲಾಗ್​ ಇರುವ ಪ್ರೋಮೋ ರಿಲೀಸ್​ ಮಾಡಿರುವ ತಂಡ, ಪ್ರೇಕ್ಷಕರನ್ನು ತನ್ನತ್ತ…

Read More

ಬೆಂಗಳೂರು:- ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ನನಗೆ ಯಾರದ್ದೂ ವಿರೋಧ ಇಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತಮ್ಮ ಆಯ್ಕೆಗೆ ಯಾರ ವಿರೋಧವೂ ಇಲ್ಲ. ಭಾರತವನ್ನು ಶಕ್ತಿಶಾಲಿಯನ್ನಾಗಿಸಿ ಮುನ್ನಡೆಸಿಕೊಂಡು ಹೋಗುತ್ತಿರುವ ನೇಂದ್ರ ಮೋದಿ ಅವರು ಮೂರನೇ ಸಲಕ್ಕೆ ಪ್ರಧಾನಿಯಾಗಬೇಕು ಎಂದು ಗಣೇಶನಲ್ಲಿ ಪ್ರಾರ್ಥಿಸಿದ್ದೇನೆ, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು. ರಾಜ್ಯದಲ್ಲಿ ಹಿರಿಯರಿದ್ದರೂ ನನಗೆ ಕೇಂದ್ರದ ವರಿಷ್ಠಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಎಲ್ಲರನ್ನೂ ವಿಶ್ಚಾಸಕ್ಕೆ ತೆಗೆದುಕೊಂಡು ಪಕ್ಷದ ಕೆಲಸ ಮಾಡಲಾಗುವುದು. ನನ್ನ ಆಯ್ಕೆ ಮೋದಿ, ಜೆ.ಪಿ.ನಡ್ಡಾ, ಅಮಿತ್ ಷಾ‌ ಅವರ ತೀರ್ಮಾನವಾಗಿದ್ದು ಇದಕ್ಕೆ ಯಾರ ವಿರೋಧವಿಲ್ಲ‌ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

Read More