Author: AIN Author

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್‌ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್‌ ರೂಲ್ಸ್‌ (Tough Rules) ಜಾರಿ ಮಾಡಿದೆ. ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅ‍ಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ. ಏನೇನು ರೂಲ್ಸ್‌? – ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ. – ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ. – ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ. – ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು. – ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ…

Read More

ಭೋಪಾಲ್: ಪ್ರಧಾನಿ ಮೋದಿ (Narendra Modi) ಅವರು ಲಕ್ಷ ರೂಪಾಯಿ ಸೂಟ್‌ಗಳನ್ನ ಧರಿಸುತ್ತಾರೆ. ಆದರೆ ನಾನು ಈ ಬಿಳಿ ಟೀ-ಶರ್ಟ್‌ ಮಾತ್ರ ಧರಿಸುತ್ತೇನೆ ಎಂದು ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ (Madhya Pradesh) ಸತ್ನಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಪ್ರಧಾನಿ ಮೋದಿಯವರ ಭಾಷಣ ಕೇಳಿದ್ದೇನೆ. ಅವರು ಪ್ರತಿ ಭಾಷಣದಲ್ಲಿ ನಾನು ಒಬಿಸಿ ಸಮುದಾಯದವನು ಎಂದು ಎಲ್ಲೆಡೆ ಹೇಳುತ್ತಿದ್ದಾರೆ. ಪದೇ ಪದೇ ಹೇಳುವ ಮೂಲಕ ಅವರು ಪ್ರಧಾನಿಯಾದರು. https://ainlivenews.com/do-you-know-what-happens-when-you-keep-notes-in-the-mobile-cover/ ಅಂಥವರು ಲಕ್ಷ ರೂಪಾಯಿ ಬೆಲೆ ಬಾಳುವ ಸೂಟ್‌ ಧರಿಸುತ್ತಾರೆ. ಒಮ್ಮೆ ಬಳಸಿದ ಬಟ್ಟೆಯನ್ನು ಮತ್ತೊಮ್ಮೆ ಬಳಸಿದ್ದನ್ನು ನೀವು ಎಂದಾದರು ನೋಡಿದ್ದೀರಾ ಎಂದು ರಾಗಾ ಪ್ರಶ್ನಿಸಿದ್ದಾರೆ. ನಾನು ಈ ಒಂದೇ ಒಂದು ಬಿಳಿ ಅಂಗಿಯನ್ನು ಧರಿಸುತ್ತೇನೆ. ನಾನು ಜಾತಿ ಆಧಾರಿತ ಜನಗಣತಿಯ ಬಗ್ಗೆ ಮಾತನಾಡಲು ಪ್ರಾರಂಭಿಸಿದಾಗ, ಮೋದಿ ಅವರ ಭಾಷಣದಿಂದ ಜಾತಿ ಕಣ್ಮರೆಯಾಯಿತು. ನಾನು ಅದರ ಬಗ್ಗೆ ಮಾತನಾಡಲು ಪ್ರಾರಂಭಿಸಿದಾಗಿನಿಂದ, ಭಾರತದಲ್ಲಿ ಜಾತಿ ಇಲ್ಲ…

Read More

ಬೆಂಗಳೂರಿನ ಕುರುಬರಹಳ್ಳಿ ಸರ್ಕಲ್ ನಲ್ಲಿರುವ  ಅಣ್ಣಾವ್ರ ಪುತ್ಥಳಿ ಮುಂದೆ  ಶಂಕರ ಆರಾಧ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಮಾಯಾನಗರಿ (Mayanagari) ಚಲನಚಿತ್ರದ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಇದೊಂದು ಬಿಗ್ ಬಜೆಟ್ ನಲ್ಲಿ ನಿರ್ಮಾಣವಾದ ಥ್ರಿಲ್ಲರ್ ಚಿತ್ರವಾಗಿದ್ದು ಮೂರು ಅಥವಾ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.  ನಿರ್ದೇಶಕನಾಗಬೇಕೆಂಬ  ಕನಸು ಹೊತ್ತು ಬರುವ ಯುವಕನ ಪಾತ್ರದಲ್ಲಿ ನಟ  ಅನೀಶ್ ತೇಜೇಶ್ವರ್ ಅವರು  ಕಾಣಿಸಿಕೊಂಡಿದ್ದು, ಶ್ರಾವ್ಯರಾವ್  ನಾಯಕಿಯಾಗಿ ನಟಿಸಿದ್ದಾರೆ. ಕಾಮಿಡಿ, ಲವ್, ಆಕ್ಷನ್, ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರವನ್ನು ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶಂಕರ್ ಆರಾಧ್ಯ ಅವರೇ ನಿರ್ಮಾಣ ಸಹ ಮಾಡಿದ್ದಾರೆ.  ಶ್ವೇತಾ ಶಂಕರ್ ಸಹ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ,  ಶ್ರೀನಿವಾಸ್ ಅವರ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ. ವಿಕ್ರಮ್ ಮೋರ್  ಅವರ ಸಾಹಸ ಸಂಯೋಜನೆ,  ಮದನ್ – ಹರಿಣಿ ಹಾಗೂ ಮುರಳಿ ಅವರ ನೃತ್ಯನಿರ್ದೇಶನ, ವಿಜಯ್ ಎಂ. ಕುಮಾರ್ ಅವರ ಸಂಕಲನವೂ…

Read More

‘ಸಜನಿ’ (Sajani) ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಪಾದಾರ್ಪಣೆ ಮಾಡಿದ ನಟಿ ಶರ್ಮಿಳಾ ಮಾಂಡ್ರೆ ಇದೀಗ ತಮಿಳು ಸಿನಿಮಾವೊಂದಕ್ಕೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿದ್ದಾರೆ. ಕನ್ನಡದ ನಿರ್ದೇಶಕ ವಿನಯ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ಶರ್ಮಿಳಾ ಸಾಥ್ ನೀಡಿದ್ದಾರೆ ಮಲೇಷಿಯಾ ಮೂಲದ ಪುನ್ನಗೈ ಪೂ ಗೀತಾ ನಿರ್ಮಾಣದ ಈ ಚಿತ್ರದ ಸಂಪೂರ್ಣ ಜವಾಬ್ದಾರಿ ಶರ್ಮಿಳಾ (Sharmiela Mandre) ಹೊತ್ತಿದ್ದಾರೆ. ಕನ್ನಡದ ‘ಮುಂದಿನ ನಿಲ್ದಾಣ’ ಚಿತ್ರ ನಿರ್ದೇಶಿಸಿದ್ದ ವಿನಯ್ ಭಾರದ್ವಾಜ್ ತಮಿಳಿನ ‘ಸಿಲ್ ನೋಡಿಗಳಿಲ್’ ಆ್ಯಕ್ಷನ್ ಕಟ್ ಹೇಳಿದ್ದಾರೆ. ಲಂಡನ್‌ನಲ್ಲಿ ವಾಸವಿರುವ ಗಂಡ-ಹೆಂಡತಿ ನಡುವೆ ಮತ್ತೊಬ್ಬ ಯುವತಿಯ ಆಗಮನವಾಗುತ್ತದೆ. ಅಲ್ಲೊಂದು ಕೊಲೆ ಕೂಡ ಆಗುತ್ತದೆ. ಈ ಕೊಲೆ ಮಾಡಿದ್ದು ಯಾರು? ಎಂಬ ಕುತೂಹಲಕಾರಿ ಅಂಶಗಳು ನಮ್ಮ ಚಿತ್ರದಲ್ಲಿದೆ. ‘ಸಿಲ್ ನೋಡಿಗಳಿಲ್’ ಎಂದರೆ ಕೆಲವೇ ಕ್ಷಣಗಳಲ್ಲಿ ಎಂದು ಅರ್ಥ. ಸದ್ಯ ತಮಿಳಿನಲ್ಲಿ ಈ ಚಿತ್ರ ನವೆಂಬರ್ 24ರಂದು ರಿಲೀಸ್ ಆಗುತ್ತಿದೆ. ನಂತರದ ದಿನಗಳಲ್ಲಿ ಕನ್ನಡದಲ್ಲಿ ನಿರ್ಮಿಸುವ ಯೋಜನೆ ಇದೆ ಎಂದು ನಟಿ ಶರ್ಮಿಳಾ ತಿಳಿಸಿದ್ದಾರೆ

Read More

ಸೌತ್ ಬ್ಯೂಟಿ ಮೃಣಾಲ್ ಠಾಕೂರ್ (Mrunal Thakur) ಅವರು ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ಡೇಟಿಂಗ್ ವಿಷ್ಯವಾಗಿಯೇ ಹೆಚ್ಚೆಚ್ಚು ಸುದ್ದಿಯಲ್ಲಿದ್ದಾರೆ. ರ‍್ಯಾಪರ್ ಬಾದಶಾ (Rapper Badshash) ಜೊತೆ ಮೃಣಾಲ್ ಕದ್ದು ಮುಚ್ಚಿ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಇದೀಗ ಗಾಸಿಪ್ ಪ್ರಿಯರ ಚರ್ಚೆಗೆ ಕಾರಣವಾಗಿದೆ. ದೀಪಾವಳಿ ಹಬ್ಬದಂದು ಫ್ಯಾನ್ಸ್‌ಗೆ ಮೃಣಾಲ್‌ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ. ಬಾಲಿವುಡ್ ಕಾರ್ಯಕ್ರಮವೊಂದರಲ್ಲಿ ಗೆಳೆಯನ ಜೊತೆ ಕೈ ಕೈ ಹಿಡಿದು ಮೃಣಾಲ್ ಕಾಣಿಸಿಕೊಂಡಿದ್ದಾರೆ. ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ, ತಮ್ಮ ನಿವಾಸದಲ್ಲಿ ದೀಪಾವಳಿ ಹಬ್ಬಕ್ಕೆ ನಟ-ನಟಿಯರಿಗೆ ಆಹ್ವಾನ ನೀಡಿದ್ದರು. ಆಗ ಮೃಣಾಲ್ ಜೊತೆ ರ‍್ಯಾಪರ್ ಬಾದಶಾ ಕೂಡ ಆಗಮಿಸಿದ್ದರು. ಶಿಲ್ಪಾ ಮನೆಯ ಹಬ್ಬದ ಸಂಭ್ರಮದಲ್ಲಿ ಭಾಗಿಯಾದ ನಂತರ ಪಾರ್ಟಿ ಮುಗಿಸಿ ತೆರಳುವಾಗ ಇಬ್ಬರು ಪರಸ್ಪರ ಕೈ ಹಿಡಿದುಕೊಂಡು ಓಡಾಡಿದ್ದಾರೆ. ಈ ಬೆನ್ನಲ್ಲೇ ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ ಎಂದೇ ಸುದ್ದಿ ಹಬ್ಬಿದೆ.‌ ದೀಪಾವಳಿ ಹಬ್ಬದಂದು ಫ್ಯಾನ್ಸ್‌ಗೆ ಮೃಣಾಲ್‌ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ. ಬಾಲಿವುಡ್ ಕಾರ್ಯಕ್ರಮವೊಂದರಲ್ಲಿ ಗೆಳೆಯನ ಜೊತೆ ಕೈ ಕೈ…

Read More

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕೈಚಳಕ ತೋರಿದ್ದ ಕಳ್ಳಿಯನ್ನ ಬಂಧಿಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಲಕ್ಷ್ಮಮ್ಮ ಬಂಧಿತ ಆರೋಪಿಯಾಗಿದ್ದಾಳೆ. ರಂಜಿತ ಎಂಬುವವರ ಮನೆಯಲ್ಲಿ‌ ಹಲವು ದಿನಗಳಿಂದ ಕೆಲಸಕ್ಕಿದ್ದ ಲಕ್ಷ್ಮಮ್ಮ, ಮನೆಯಲ್ಲಿ ಯಾರು ಇಲ್ಲದ ವೇಳೆ 20 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಳು. ಈ ಹಿನ್ನೆಲೆ ರಂಜಿತ ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದರು. https://ainlivenews.com/spending-twice-as-much-money-as-allocated-transport-department-will-go-ahead/ ಸದ್ಯ ಲಕ್ಷ್ಮಮ್ಮನನ್ನು ಬಂಧಿಸಿರುವ ಪೊಲೀಸರು 20 ಲಕ್ಷಕ್ಕೂ ಅಧಿಕ ಮೌಲ್ಯದ 374 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Read More

ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ತನಿಖೆ ಕೈಗೊಂಡಿರುವ CID ಎಲ್ಲಾ ಠಾಣೆಯ ಫೈಲ್ ಗಳನ್ನ ತರಿಸಿಕೊಂಡು ಮಾಹಿತಿ ಕಲೆಹಾಕ್ತಿದೆ.. ಇವತ್ತೂ ಸಹ ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣದ ದಾಖಲೆಗಳನ್ನ ಠಾಣಾಧಿಕಾರಿಗಳು CID ಕಚೇರಿಗೆ ತಂದು ಒಪ್ಪಿಸಿದ್ರು ಅದೇ ರೀತಿಯಾಗಿ ಅಫಜಲಪುರ ಠಾಣೆಯ ದಾಖಲೆ ಪತ್ರಗಳನ್ನ CPI ಪಂಡಿತ್ ಸಗರ್ ತಂದು CID ಸುಪರ್ದಿಗೆ ನೀಡಿದ್ರು..

Read More

ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಿಯೇಂದ್ರ ಅವರಿಗೆ ಕೋಲಾರದ ರಾಮಸಂದ್ರ ಗೇಟ್ ಬಳಿ ಅದ್ದೂರಿ ಸ್ವಾಗತ ದೊರೆತಿದೆ. ಸಂಸದ ಮುನಿಸ್ವಾಮಿ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್, ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ. ಬಿವೈ ವಿಜಯೇಂದ್ರ  ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಬಿವೈ ವಿಜಯೇಂದ್ರ ಮುಳಬಾಗಲು ಕುರುಡುಮಲೆ ವಿನಾಯಕನ ದರ್ಶನಕ್ಕೆ‌ ಆಗಮಿಸಿದರು.

Read More

ಸಿರುಗುಪ್ಪ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಬದಿಯಲ್ಲಿರುವ ಶೌಚಾಲಯ ಕಟ್ಟಡದ ಹಿಂದಿರುವ ಕೇವಲ ಒಂದು ಅಡಿ ಅಗಲದ ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಯು ಮೊಸಳೆ ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ,  ಹೌಹಾರಿ ಓಡಿ ಬಂದಿ​ದ್ದಾನೆ.  ಬಳಿಕ ಜನರು ಮೊಸಳೆಯನ್ನು ನೋಡಲು ಮತ್ತು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಲು ಮುಗಿಬಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆ ಹಿಡಿಯುವ ಕಾರ್ಯಾಚರಣೆ ನಡೆಸಿದರು.

Read More

ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಖಾತೆಗೆ 20 ಲಕ್ಷ ರೂ.ಜಮೆ ಆಗಿರೋ ಬ್ಯಾಂಕ್ ಪಾವತಿ ರಸೀದಿ ಎಲ್ಲೆಡೆ ವೈರಲ್ ಆಗಿದೆ.. ದಾಖಲೆ ಇಟ್ಟು ಮಾತಾಡ್ರೋ ಅಂತ ಮಾಧ್ಯಮಗಳ ಮುಂದೆ ಕೂಗಾಡಿದ್ದ RDಗೆ ಇದೀಗ ಉತ್ತರ ಸಿಕ್ಕಂತಾಗಿದೆ.. ನಗರದ ಆಕ್ಸಿಸ್ ಬ್ಯಾಂಕಿನ RD ಪಾಟೀಲ್ ಖಾತೆಗೆ ಫೆಬ್ರವರಿ 15 ರಂದು 20 ಲಕ್ಷ ರೂಪಾಯಿ ಜಮೆ ಆಗಿದೆ..402 ಪಿಎಸ್ಐ ನೇಮಕಾತಿ ಪರೀಕ್ಷೆ ಮುನ್ನವೇ ಈ ಹಣ ಜಮೆಯಾಗಿದೆ.. ಅದಕ್ಕೂ ಮುನ್ನ 545 ಪಿಎಸ್ಐ ನೇಮಕಾತಿಗಾಗಿ ಪರೀಕ್ಷೆ ನಡೆದು ಅಕ್ರಮ ಬಯಲಾಗಿತ್ತು..ಹೀಗಾಗಿ 402 ಪಿಎಸ್ಐ ನೇಮಕಾತಿಯನ್ನ ಸರ್ಕಾರ ತಡೆಹಿಡಿದಿತ್ತು..ಆದ್ರೆ ಅದಕ್ಕೂ ಮುನ್ನವೇ ಅಭ್ಯರ್ಥಿಯೊಬ್ಬರಿಂದ 20 ಹಣ ಪಡೆದಿದ್ದ ಅನ್ನೋ ಮಾತು ಕೇಳಿ ಬರ್ತಿದೆ..

Read More