ನವದೆಹಲಿ:- ರಾಮಮಂದಿರ ಉದ್ಘಾಟನೆಗೂ ಮುನ್ನ ಮಾರುಕಟ್ಟೆಗೆ ರಾಮನ ನೋಟು ಲಗ್ಗೆ ಇಟ್ಟಿತಾ ಹೀಗೋಂದು ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧಿ ಆಕೃತಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಒಂದು ಬದಿಯಲ್ಲಿ ಶ್ರೀರಾಮನ ಭಾವಚಿತ್ರವನ್ನು ಅಚ್ಚು ಹಾಕಿದರೆ, ನೋಟಿನ ಇನ್ನೊಂದು ಬದಿಯಲ್ಲಿ ಕೆಂಪು ಕೋಟೆಯ ಬದಲಿಗೆ ಅಯೋಧ್ಯೆ ದೇವಾಲಯದ ಮಾದರಿಯನ್ನು ಮುದ್ರಿಸಲಾಗಿದೆ. ಗಾಂಧೀಜಿ ಅವರ ಕನ್ನಡಕ ಬದಲು ಶ್ರೀರಾಮನ ಬಾಣ ಮತ್ತು ಬಿಲ್ಲು ಇರುವಂತೆ ವಿನ್ಯಾಸಗೊಳಿಸಲಾಗಿದೆ. ಹೀಗೆ ಮುದ್ರಿಸಿರುವ ನಫೋಟುಗಳ ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ಈ ನೋಟು ಬಿಡುಗಡೆಯಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪರ ಹಾಗೂ ವಿರೋಧ ಚರ್ಚೆ ಶುರುವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ನೋಟುಗಳ ಸಕಲಿ…
Author: AIN Author
ಮೊಟ್ಟೆಯಲ್ಲಿ ಪ್ರೋಟೀನ್ ಅಧಿಕವಾಗಿದೆ ಆದರೆ ನೀವು ಅದನ್ನು ವಿರುದ್ಧ ಪದಾರ್ಥಗಳೊಂದಿಗೆ ಸೇವಿಸಿದರೆ ಅದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾದರೆ ಮೊಟ್ಟೆಯೊಂದಿಗೆ ಯಾವ ಆಹಾರ ಸೇವಿಸಬಾರದು ಎಂಬುದನ್ನು ತಿಳಿಯೋಣ.. ಉಪಹಾರಕ್ಕೆ ಮೊಟ್ಟೆ ಹಾಗೂ ಬಾಳೆಹಣ್ಣು ಒಟ್ಟಿಗೆ ತಿನ್ನುವುದು ಹಾನಿಕಾರಕವಾಗಿದೆ. ಮೊಟ್ಟೆಯಲ್ಲಿ ಹೆಚ್ಚು ಪ್ರೋಟೀನ್ ಇರುತ್ತದೆ, ಆದರೆ ಬಾಳೆಹಣ್ಣು ಹೆಚ್ಚು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಇವೆರಡನ್ನು ಒಟ್ಟಿಗೆ ತಿಂದರೆ ಹೊಟ್ಟೆ ಭಾರವಾಗುತ್ತದೆ ಮತ್ತು ಜೀರ್ಣವಾಗಲು ಸಮಯ ತೆಗೆದುಕೊಳ್ಳುತ್ತದೆ. ಹಾಲು, ಮೊಸರು, ಚೀಸ್ ಅನ್ನು ಮೊಟ್ಟೆಗಳೊಂದಿಗೆ ಸೇವಿಸಬಾರದು. ಮೊಟ್ಟೆಯ ಜೊತೆಗೆ ಡೈರಿ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೆಚ್ಚುವರಿಯಾಗಿ, ಅವುಗಳನ್ನು ಸೇವಿಸುವುದರಿಂದ ನೀವು ಹೊಟ್ಟೆಯುಬ್ಬರವನ್ನು ಅನುಭವಿಸಬಹುದು, ಇದು ಅಜೀರ್ಣ, ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಆಗುತ್ತದೆ. ಮೊಟ್ಟೆ ಮತ್ತು ಸಕ್ಕರೆ ಎರಡೂ ಆಹಾರ ಪದಾರ್ಥಗಳಲ್ಲಿರುವ ಅಮೈನೋ ಆಮ್ಲವು ರಕ್ತದಲ್ಲಿ ಹೆಪ್ಪುಗಟ್ಟುವಿಕೆಗೆ ಕಾರಣವಾಗುವ ಸಾಧ್ಯತೆಗಳಿರುವುದರಿಂದ ಈ ಎರಡು ಆಹಾರ ಪದಾರ್ಥಗಳನ್ನು ಒಟ್ಟಿಗೆ ಸೇವಿಸುವುದು ನಿಮ್ಮ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ. ಮೊಟ್ಟೆಗಳೊಂದಿಗೆ ಬಿಸಿ ಚಹಾವನ್ನು ಸೇವಿಸುತ್ತಾರೆ. ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ…
ಸುಲಭವಾಗಿ ತಯಾರಿಸಬಹುದಾದ ಟಿಫಿನ್ ಗಳಲ್ಲಿ ಉಪ್ಪಿಟ್ಟು ಕೂಡ ಒಂದಾಗಿದೆ. ಇದನ್ನು ಬಹಳ ಕಡಿಮೆ ಸಮಯದಲ್ಲಿ ತಯಾರಿಸುವುದು. ಇನ್ನೂ ಈ ಉಪ್ಪಿಟ್ಟು ತಿನ್ನುವುದರಿಂದ ವಿವಿಧ ಪ್ರಯೋಜನಗಳನ್ನು ಪಡೆಯಬಹುದು. ಉಪ್ಪಿಟ್ಟು ಮೂಳೆಗಳನ್ನು ಬಲಪಡಿಸುತ್ತದೆ. ಹೃದಯ ಮತ್ತು ಶ್ವಾಸಕೋಶಗಳನ್ನು ಆರೋಗ್ಯವಾಗಿಡಲು ಇದು ತುಂಬಾ ಉಪಯುಕ್ತವಾಗಿದೆ. ಉಪ್ಪಿಟ್ಟು ಪ್ರೋಟೀನ್ ಕೂಡ ಸಮೃದ್ಧವಾಗಿದೆ. ಇದನ್ನು ಬಹಳ ಕಡಿಮೆ ಎಣ್ಣೆಯಿಂದ ತಯಾರಿಸುವುದರಿಂದ ಆರೋಗ್ಯಕ್ಕೆ ಹಾನಿ ಮಾಡುವುದಿಲ್ಲ. ಉಪ್ಪಿಟ್ಟಿನಲ್ಲಿ ಕ್ಯಾರೆಟ್, ಬೀನ್ಸ್, ಬಟಾಣಿ ಇತ್ಯಾದಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹಾಕಿದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದಕ್ಕಾಗಿಯೇ ಉಪ್ಪಿಟ್ಟು ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸುವುದು ಮಾತ್ರವಲ್ಲದೆ ಜೀರ್ಣಕ್ರಿಯೆಯನ್ನು ಸುಲಭವಾಗಿ ಸುಧಾರಿಸುತ್ತದೆ. ತೂಕ ಇಳಿಸಿಕೊಳ್ಳಲು ಉಪ್ಪಿಟ್ಟು ತುಂಬಾ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಉತ್ತರಪ್ರದೇಶ: ಅಯೋಧ್ಯೆಯ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಜನವರಿ 22ರಂದು ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಪಟಾಕಿ ಹೊತ್ತೊಯ್ಯುತ್ತಿದ್ದ ಟ್ರಕ್ ಅಗ್ನಿಗೆ ಆಹುತಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಬಳಿ ಘಟನೆ ನಡೆದಿದೆ. ಸ್ಥಳೀಯರು ಇದನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಶ್ರೀರಾಮ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಂಭ್ರಮವನ್ನು ಕೊಂಡಾಡಲು ಟ್ರಕ್ವೊಂದರಲ್ಲಿ ಪಟಾಕಿ ಹೊತ್ತೊಯ್ಯಲಾ ಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಿಡಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಪಟಾಕಿಗೆ ಹೊತ್ತಿಕೊಂಡಿದೆ. ಇದರಿಂದ ಬೆಂಕಿ ತೀವ್ರತೆ ಹರಡುವ ತೀವ್ರತೆ ಹೆಚ್ಚಾಹಿ, ಟ್ರಕ್ ಸಂಪೂರ್ಣ ಭಸ್ಮವಾಗಿದೆ. ಈ ಘಟನೆಯನ್ನು ಸ್ಥಳೀಯರು ವೀಡಿಯೋ ಮಾಡಿದ್ದು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿ ಸಭೆ ಮಾಡಲಾಯಿತು ಸಭೆಯಲ್ಲಿ ಹಿಂದಿನ ಸಬೆಯ ನಡವಳಿಯಂತೆ ಪ್ರಗತಿ ಕುರಿತು. ಬಾಲ್ಯವಿವಾಹ ತಡೆದು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಬಾಲಕಿಯರ ಬಾಲಮಂದಿರದಲ್ಲಿ ರಕ್ಷಣೆ ಮತ್ತು ಪೋಷಣೆ ವ್ಯವಸ್ಥೆ ಕಲ್ಪಿಸಿದ ಕುರಿತು. ತಡೆದ ಬಾಲ್ಯವಿವಾಹ ಗಳ ಅನುಪಾಲನೆ. ಶಾಲೆಬಿಟ್ಟ ಮಕ್ಕಳ ಮನೆಬೇಟಿ ಮಾಡಿ ಮಕ್ಕಳ ನ್ನು ಮರಳಿ ಶಾಲೆಗೆ ಕರೆತರುವುದು .ತಾಯಿ ಕಾರ್ಡ್ ನೀಡುವಾಗ ವಯಸ್ಸಿನ ದಾಖಲಾತಿ ಪರಿಶೀಲನೆ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು.ನೋಡಲ್ ಅಧಿಕಾರಿಗಳಾಗಿ ಕೊಪ್ಪಳ ಶಿಶುಅಭಿವೃದ್ದಿ ಯೋಜನಾಧಿಕಾರಿಗಳಾದ ಶ್ರೀಮತಿ ಜಯಶ್ರೀ ರವರು ಭಾಗವಹಿಸಿದ್ದರು. ಒಟ್ಟು 26 ಜನ ಬಾಗವಹಿಸಿದ್ದರು.
ಗದಗ: ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಹೊಸ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಹಾಗೂ ಗದಗ ತಾಲೂಕಿನ ಪಾಪನಾಶಿ ಬಳಿ ರಾಜ್ಯ ಹೆದ್ದಾರಿ 45 ರ ಟೋಲ್ ರದ್ದುಪಡಿಸಲು ಆಗ್ರಹಿಸಿ ಗದಗ ಗೂಡ್ಸ್ ಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲೀಕರ ಸಂಘದಿಂದ ಪಾಪನಾಶಿ ಬಳಿ ಟೋಲ್ ಬಂದ್ ಮಾಡಿ ಪ್ರತಿಭಟನೆಯನ್ನ ನಡೆಸಲಾಗ್ತಾ ಇದೆ. ಇನ್ನು ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು ಕೇಂದ್ರದ ಹೊಸ ಹಿಟ್ ಆ್ಯಂಡ್ ರನ್ ಕಾನೂನಿನಿಂದ ಚಾಲಕರು ಮಾಲೀಕರಿಗೆ ತೊಂದರೆ ಆಗ್ತಾ ಇದೆ, ಜೊತೆಗೆ ಟೋಲ್ ಅಂತರ ಕನಿಷ್ಟ 60ಕಿಮಿ ಇರಬೇಕು. ಆದ್ರೆ ಗದಗ ತಾಲೂಕಿನ ಪಾಪನಾಶಿ ಟೋಲ್ ಕೇವಲ 35 ಕಿಮೀ ಅಂತರದಲ್ಲಿದೆ ಹಾಗಾಗಿ ಪಾಪನಾಶಿ ಟೋಲ್ ರದ್ದುಪಡಿಸಲು ಒತ್ತಾಯ ಮಾಡಿದ್ರು. ಕೇಂದ್ರ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ರಸ್ತೆಯಲ್ಲೇ ಕುಳಿತು ಊಟ ಮಾಡೋ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ರು. ಸ್ಥಳಕ್ಕೆ ಜಿಲ್ಲಾಧಿಕಾರಿ ಬಂದು ಮನವಿ ಆಲಿಸಿ ಟೊಲ್ ಬಂದ್ ಮಾಡಲು ಒತ್ತಾಯಿಸಿಸ್ರು.…
ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರೋಟೆಸ್ಟ್ ಮಾಡಲಾಯಿತು. ಅಖಿಲ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಸಲಾಗಿದ್ದು, ನಗರದ ನಾರಾಯಣರಾವ್ ಪಾರ್ಕ್’ನಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕಟ್ಟಡ ಕಾರ್ಮಿಕರು ನಡೆಸಿದರು. ತಮ್ಮ ನ್ಯಾಯಯುತ ಬೇಡಿಕೆ ಈಡೇಸುವಂತೆ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು. ಕಟ್ಟಡ ಕಾರ್ಮಿಕರ ಮಕ್ಕಳ ಮದುವೆ ಸಹಾಯಧನವನ್ನು 1 ಲಕ್ಷದವರೆಗೆ ಹೆಚ್ಚಿಸಬೇಕು, ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ದುರ್ಬಳಕೆ ನಿಲ್ಲಿಸಬೇಕು, ಎಲ್ಲಾ ಕಾರ್ಮಿಕರ ವೇತನವನ್ನು 26 ಸಾವಿರಕ್ಕೆ ಏರಿಸಬೇಕು ಮತ್ತು ಪಿಂಚಣಿ 10 ಸಾವಿರ ನೀಡಬೇಕು, ರಾಜ್ಯದ ಎಲ್ಲಾ ಕಾರ್ಮಿಕ ನೊಂದಾಯಿತ ಸಂಘಗಳಿಗೆ ಸೂಕ್ತ ಮಾನ್ಯತೆ ನೀಡಬೇಕು, ನಕಲಿ ಕಾರ್ಡುಗಳ ಹಾವಳಿ ತಡೆಗಟ್ಟಬೇಕು, ಬಾಕಿ ಇರುವ 2021 ನೇ ಸಾಲಿನ ಶೈಕ್ಷಣಿಕ ಅರ್ಜಿಯನ್ನು ಪರಿಶಿಲಿಸಿ ಕೂಡಲೇ ಹಣ ವರ್ಗಾವಣೆ ಮಾಡಬೇಕು, ಮನೆ ನಿರ್ಮಾಣಕ್ಕೆ 5ಲಕ್ಷ ಧನ ಸಹಾಯ ನೀಡಬೇಕು ಎಂದು ಒತ್ತಾಯ ಮಾಡಿದರು.
ಕೋಲಾರ: ಶ್ರೀರಾಮನ ಕಟೌಟ್ ಹಾಗೂ ಪ್ಲೆಕ್ಸ್ ಅನ್ನು ದುಷ್ಕರ್ಮಿಗಳು ಬ್ಲೇಡ್ನಿಂದ ಹರಿದಿರುವ ಘಟನೆ ಮುಳಬಾಗಿಲು ನಗರದ ಗುಣಗಂಟೆಪಾಳ್ಯದಲ್ಲಿ ನಡೆದಿದೆ. ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ 21 ಮತ್ತು 22 ರಂದು ಎರಡು ದಿನ ಈ ಕಾರ್ಯಕ್ರಮಗಳು ನಡೆಯಲಿದ್ದವು ಹೀಗಾಗಿ ನಗರದಲ್ಲಿ ಬ್ಯಾನರ್ ಮತ್ತು ಶ್ರೀರಾಮ ಕಟೌಟ್ ನಿಲ್ಲಿಸಲಾಗಿತ್ತು. ಈ ಬ್ಯಾನರ್ ಮತ್ತು ಕಟ್ಔಟ್ಗಳನ್ನು ನಿನ್ನೆ (ಜ.16)ರ ರಾತ್ರಿ 10.44ರ ಸುಮಾರಿಗೆ ಯಾರೋ ದುಷ್ಕರ್ಮಿಗಳು ಬ್ಲೇಡ್ನಿಂದ ಹರಿದು ಹಾಕಿದ್ದಾರೆ. ಶ್ರೀರಾಮನ ಕಟೌಟ್ನ್ನು ಹರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪ್ರಕರಣ ಸಂಬಂಧ ಮುಳಬಾಗಿಲು ಪೊಲೀಸರು ಇಬ್ಬರು ಆರೋಪಿಗಳನ್ನು…
ಮಂಡ್ಯ: ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದಾರೆ. ಮೈಸೂರಿಗೆ ತೆರಳುತ್ತಿದ್ದ ವೇಳೆ ಮಂಡ್ಯದ ಮದ್ದೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಕಂದಾಯ ಸಚಿವರ ದಿಢೀರ್ ಭೇಟಿ ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿ ಆಗಿದ್ದಾರೆ. ಇದೇ ವೇಳೆ ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ರೈತರೊಬ್ಬರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ದೂರು ನೀಡಲಾಗಿದೆ. ಇನ್ನು ಸಚಿವ ಕೃಷ್ಣಭೈರೇಗೌಡ ಜನರ ಎದುರೇ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಜಾಗ ಸರ್ವೇ ಮಾಡಿಕೊಡಲು ಎಷ್ಟು ದಿನ ಬೇಕು? ನೆಪ ಹೇಳಿಕೊಂಡು ಕಾಲ ಕಳೆಯಲು ಬಂದಿದ್ದೀರಾ ಇಲ್ಲಿ. ಒಂದೊಂದು ಕೆಲಸ ಮಾಡಿಸಲು ನಾನೇ ಬರಬೇಕು? ಎಂದು ಅಧಿಕಾರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕಲಬುರಗಿ: ಮಹಾರಾಷ್ಟ್ರದ ಸೊಲ್ಲಾಪುರದಲ್ಲಿನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಡಿದ್ದು ಜನವರಿ 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೋಲಾಪುರಕ್ಕೆ, ತೆರಳಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮರಳಿ ಮಧ್ಯಾಹ್ನ 1 ಗಂಟೆಗೆ ವಾಪಾಸ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.. ಹೀಗಾಗಿ SPG ತಂಡ ಕಲಬುರಗಿಗೆ ಆಗಮಿಸಿದ್ದು ಬಂದೋಬಸ್ತ್ ಕುರಿತಂತೆ ಜಿಲ್ಲಾಡಳಿತದ ಜೊತೆ ಇವತ್ತು ಚರ್ಚೆ ನಡೆಸಿದ್ರು..