ಬೆಂಗಳೂರು: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಅವರು ಹೇಳಿದ್ದಿಷ್ಟು; “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸಾಬೂನಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರಿ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬರುತ್ತದೆ. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುತ್ತದೆ. ಕೂಡಲೇ ಸಚಿವರು ಕೆಎಸ್ ಡಿಎಲ್ ಎಂಡಿ ಪ್ರಶಾಂತ್ ಅವ್ರಿಗೆ ಮಾಹಿತಿ ನೀಡುತ್ತಾರೆ. ನಂತರ ಈ ಜಾಲದ ಹುಡುಕಾಟ ನಡೆಯುತ್ತದೆ. ಇದು ಹೈದರಾಬಾದ್ ನಲ್ಲಿದೆ ಎಂದು ತಿಳಿಯುತ್ತದೆ. ಇದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ಆರ್ಡರ್ ನೀಡುತ್ತಾರೆ. ಅವರು ಇದನ್ನು ಪೂರೈಸುವುದಾಗಿ ಒಪ್ಪಿಕೊಳ್ಳುತ್ತಾರೆ. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ…
Author: AIN Author
ಕುಶಾಲನಗರದಲ್ಲಿ ಲಾಡ್ಜ್ ಹಾಗು ಹೋಟೆಲ್ ಗಳಿಂದ ಕಳುಷಿತ ನೀರನ್ನು ಚೆರಂಡಿ ಮೂಲಕ ಕಾವೇರಿ ನದಿಗೆ ಹರಿಸಲಾಗುತ್ತಿತ್ತು. ಕಳೆದ ಮೂರು ದಿನಗಳ ಹಿಂದೆ ಈ ಬಗ್ಗೆ “ಚಾನಲ್ ಕೂರ್ಗ್ ನಲ್ಲಿ ವರದಿ ಪ್ರಕಟಿಸಿ ಕ್ರಮಕ್ಕೆ ಒತ್ತಾಯ ಮಾಡಲಾಗಿತ್ತು. ಇಂದು ಕುಶಾಲನಗರ ಪುರಸಭೆ ವತಿಯಿಂದ ಚರಂಡಿಯ ದುರಸ್ತಿ ಕಾರ್ಯ ಹಾಗೂ ಕಲುಷಿತ ನೀರನ್ನು ಬಿಡುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನಾದರೂ ಪುರಸಭೆ ಪರವಾನಿಗೆಯನ್ನು ನೀಡುವಾಗ ಎಲ್ಲಾ ಮಾನದಂಡಗಳನ್ನು ಪರಿಶೀಲಿಸಿ ಪರವಾನಿಗೆ ನೀಡುವಂತೆ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ. ಇಂತದ್ದೇ ಘಟನೆ ಮರುಕಳಿಸಿದರೆ ಪುರಸಭೆಯ ಮುಖ್ಯ ಅಧಿಕಾರಿ ಹಾಗೂ ಆಡಳಿತ ಮಂಡಳಿಯನ್ನು ಗುರಿಯಾಗಿರಿಸಿ ಕಾನೂನಿನ ಮೊರೆ ಹೋಗಲಾಗುವುದು ಎಂದು ಎಚ್ಚರಿಸಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಜಿಲ್ಲೆಯಲ್ಲಿ ಪರಿಸರ ಇಲಾಖೆ ಇದ್ದು, ಪರಿಸರ ಸಂರಕ್ಷಣೆ ಹಾಗೂ ನೈರ್ಮಲ್ಯವನ್ನು ಪಾಲಿಸಿದವರ ಮೇಲೆ ಕ್ರಮ ಕೈಗೊಳ್ಳಬೇಕಾದ ಈ ಇಲಾಖೆ ಬೆಚ್ಚಿಗಿನ ಮಹಡಿಯ ಮೇಲೆ ಮೇಲೆ ತಂಪಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕುಳಿತಿದ್ದಾರೆ. ಇಲಾಖೆ ವತಿಯಿಂದ ಯಾವುದೇ ಕ್ರಮ ಇದುವರೆಗೆ ಕೈಗೊಳ್ಳದಿರುವ ಬಗ್ಗೆ ತಮ್ಮ…
ಬಿಗ್ಬಾಸ್ ಕನ್ನಡ (Bigg Boss Kannada) ಹತ್ತನೇ ಸೀಸನ್ ಅಂತಿಮ ಹಂತಕ್ಕೆ ಕ್ಷಣಗಣನೆ ಶುರುವಾಗಿದೆ. ಹದಿನಾಲ್ಕು ವಾರಗಳನ್ನು ಮುಗಿಸಿ ಹದಿನೈದನೇ ವಾರಕ್ಕೆ ಕಾಲಿಟ್ಟಿರುವ ಬಿಗ್ಬಾಸ್ ರಿಯಾಲಿಟಿ ಷೋ ದಿನದಿಂದ ದಿನಕ್ಕೆ ಕುತೂಹಲದ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಂತದಲ್ಲಿ ಈ ಸೀಸನ್ ಬಿಗ್ಬಾಸ್ ಜರ್ನಿಯನ್ನು ಹೊರಳಿ ನೋಡಿದರೂ ಕುತೂಹಲಕಾರಿ ಚಿತ್ರಣ ಸಿಗುತ್ತದೆ. ಈ ಬಾರಿ ಮನೆಯೊಳಗಿನ ಸದಸ್ಯರು ಎಷ್ಟು ವೈವಿಧ್ಯಪೂರ್ಣವಾಗಿದ್ದರೋ ಮನೆಗೆ ಭೇಟಿ ನೀಡಿದ ಅತಿಥಿಗಳೂ ಷೋಗೆ ಅಷ್ಟೇ ಗಾಢವಾದ ಬಣ್ಣವನ್ನು ತುಂಬಿದ್ದಾರೆ. ಹಾಗಾದ್ರೆ ಬಿಗ್ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟು ಕಲರ್ಫುಲ್ ಮಾಡಿದ ಗೆಸ್ಟ್ಗಳು ಯಾರು? ಅವರು ಭೇಟಿ ನೀಡಿದ ಸಂದರ್ಭ ಹೇಗಿತ್ತು? ಇಲ್ಲಿದೆ ಒಂದು ಚಿತ್ರಣ. ಬಿಗ್ಬಾಸ್ ಷೋ ಮೊದಲ ಬೆಳಗಿನಲ್ಲಿಯೇ ಒಂದು ಸರ್ಫೈಸ್ ವಿಸಿಟ್ ಕಾದಿತ್ತು. ಅಂದು ಬೆಳಿಗ್ಗೆ ಚಿಕ್ಕಬಳ್ಳಾಪುರ ಎಂಎಲ್ಎ ಪ್ರದೀಪ್ ಈಶ್ವರ್ ಬಿಗ್ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು. ಮನೆಯೊಳಗಿನ ಸದಸ್ಯರು ಅವರ ಸ್ಪೂರ್ತಿದಾಯಕ ಮಾತು ಕೇಳಿ ಕಣ್ಣಲ್ಲಿ ನೀರನ್ನೂ ಎದೆಯಲ್ಲಿ ವಿಶ್ವಾಸವನ್ನೂ ತುಂಬಿಕೊಂಡು ಆಟಕ್ಕೆ ಅಣಿಯಾಗಿದ್ದರು. ಆರಂಭದಲ್ಲಿ…
ಬೆಂಗಳೂರು: ನಗರದಲ್ಲಿ KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದ ಇಬ್ಬರು ಪುಂಡರನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ. ನಗರದಲ್ಲಿ ಕುಡಿದ ಮತ್ತಿನಲ್ಲಿ ಬಸ್ ಅಡ್ಡಗಟ್ಟಿ ಬಸ್ ನ ಗ್ಲಾಸ್ ಗಳನ್ನ ದೊಣ್ಣೆಗಳಿಂದ ಹೊಡೆದ ಪುಂಡರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. https://ainlivenews.com/bullies-attack-in-bengaluru-ksrtc-buses-are-broken-glass/ ಬಸ್ ಗಳಿಗೆ ಮಾತ್ರ ಕಲ್ಲು ಹೊಡೆದಿಲ್ಲ ಎರಡು ಕಾರು, ಆಟೋಗಳ ಗ್ಲಾಸ್ ಗಳನ್ನು ಹೊಡೆದಿದ್ದು ಹಾಗೆ ಕುಡಿದ ನಶೆಯಲ್ಲಿ ಕಂಡ ಕಂಡ ವಾಹನಗಳ ಗ್ಲಾಸ್ ಗಳನ್ನ ಹೊಡೆದು ಅಟ್ಟಹಾಸ ಮೆರೆದಿದ್ದಾರೆ ಆಟೋದಲ್ಲಿದ್ದ ಐವರು ಗ್ಯಾಂಗ್, ರಾಡ್ ಗಳನ್ನ ಇಟ್ಕೊಂಡಿದ್ರು ಅಂತ ಬಸ್ ಚಾಲಕರ ಆರೋಪ ಮಾಡಿದ್ದು ವಿಜಯನಗರ, ಮೈಸೂರು ಡಿಪೋ ಹುಣಸೂರು ಮೈಸೂರು ಡಿಪೋ ಗೆ ಸೇರಿದ ಬಸ್ ಗಳು
ಚಿಕ್ಕಮಗಳೂರು: ಮಂದಿರ ಕೆಡವಿ ಕಟ್ಟಿದ ಮಸೀದಿಯಲ್ಲಿ ನಮಾಜ್ ಮಾಡಿದರೆ ಅದು ಹರಾಮ್ ಆಗುತ್ತದೆ ಅಂತಾ ಮುಸ್ಲಿಮರಿಗೂ ಒಂದು ದಿನ ಎನಿಸಬಹುದು ಎಂದು ಮಾಜಿ ಸಚಿವ ಸಿ.ಟಿ.ರವಿ (C.T.Ravi) ಹೇಳಿಕೆ ನೀಡಿದರು. ಚಿಕ್ಕಮಗಳೂರು (Chikkamagaluru) ನಗರದ ಕೋದಂಡರಾಮಸ್ವಾಮಿ ದೇವಾಲಯವನ್ನ ಶುಚಿ ಮಾಡಿದ ಬಳಿಕ ಮಾತನಾಡಿದ ಅವರು, ಘಜ್ನಿ, ಕಿಲ್ಜಿ, ಘೋರಿ, ಔರಂಗಜೇಬ್, ಮೊಘಲರು ಹಾಗೂ ಟಿಪ್ಪು ಕಾಲದಲ್ಲಿ 42 ಸಾವಿರ ದೇಗುಲ ಧ್ವಂಸ ಮಾಡಿದ್ದಾರೆ. ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನ ಗುರುತಿಸಿಕೊಳ್ಳುವುದಿಲ್ಲ. ಮುಸ್ಲಿಮರು ಭಾರತೀಯ ಸನಾತನ ಪರಂಪರೆಯಲ್ಲಿ ವಿಶ್ವಾಸವಿಟ್ಟು ಭಾರತದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೂ ಒಂದು ದಿನ ಮನ ಪರಿವರ್ತನೆಯ ದಿನ ಬರಬಹುದು ಎಂದರು. ಮುಸ್ಲಿಮರಿಗೂ ಒಂದು ದಿನ ಮಂದಿರ ಕೆಡವಿ ಕಟ್ಟಿದ ಮಸೀದಿಯಲ್ಲಿ ನಮಾಜ್ ಮಾಡಿದರೆ, ಅದು ಹರಾಮ್ ಆಗುತ್ತೆ ಎನಿಸಬಹುದು. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಹರಾಮ್ ಆಗುತ್ತೆ ಎನಿಸಿದ ದಿನ ಅವರು ಉದಾರತೆಯನ್ನ ಪ್ರದರ್ಶನ ಮಾಡಬಹುದು ಎಂದು ಸಿ.ಟಿ.ರವಿ ಹೇಳಿದರು. ಘಜ್ನಿ, ಘೋರಿ, ಮೊಘಲರ ಜೊತೆ ಗುರುತಿಸಿಕೊಳ್ಳುವ ಮಾನಸಿಕತೆ ಅಪಾಯಕಾರಿ. ಹಾಗಂತ…
ಬೆಂಗಳೂರು: ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? ಎಂದು ಬಿಜೆಪಿ (BJP), ಸಚಿವ ರಾಜಣ್ಣ (KN Rajanna) ಅವರಿಗೆ ತಿರುಗೇಟು ನೀಡಿದೆ. ʻಒಂದು ಟೆಂಟ್ನಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತ ಹೇಳ್ತಿದ್ರುʼ ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ ಬಿಜೆಪಿ, ಶ್ರೀರಾಮನ (Shri Rama) ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? ಎಂದು ಪ್ರಶ್ನಿಸಿದೆ. ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ. ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್ ಕಾರ್ಯಕರ್ತರೂ ಕ್ಷಮಿಸಲಾರರು ಎಂದು ಅಸಮಾಧಾನ ಹೊರಹಾಕಿದೆ. ಅಧಿಕಾರದ ಮದ, ಕಾಂಗ್ರೆಸ್…
ಬೆಂಗಳೂರು: ಕಾಟೇರ’ ಚಿತ್ರದ ಸಕ್ಸಸ್ ಪಾರ್ಟಿಯಲ್ಲಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಚಿತ್ರತಂಡ ಪಾರ್ಟಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು ನಟ ದರ್ಶನ್ & ಟೀಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅವಧಿ ಮೀರಿ ಕಾರ್ಯಾಚರಣೆ ನಡೆಸಿದ ಆರೋಪದಡಿ ಯಶವಂತಪುರದ ಜೆಟ್ ಲ್ಯಾಗ್ ಪಬ್ನ ಬಾರ್ ಪರವಾನಗಿಯನ್ನು 25 ದಿನಗಳ ಕಾಲ ಅಮಾನತುಗೊಳಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ದಯಾನಂದ ಆದೇಶ ಹೊರಡಿಸಿದ್ದಾರೆ. ಕಾಟೇರ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ನಟರಾದ ದರ್ಶನ್, ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಷ್, ಚಿಕ್ಕಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಜೆಟ್ಲ್ಯಾಗ್ ಪಬ್ನಲ್ಲಿ ಜ.3ರಂದು ನಿಯಮ ಉಲ್ಲಂಘಿಸಿ ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಸಂಬಂಧ ಸುಬ್ರಮಣ್ಯನಗರ ಠಾಣೆ ಪೊಲೀಸರು ಪಬ್ನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ದರ್ಶನ್ ನಟನೆಯ ಕಾಟೇರ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆಯಾಗಿತ್ತು. ಸೆಲೆಬ್ರಿಟಿ ಶೋ…
ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ. ಉಡುಪಿಯಲ್ಲಿ (Udupi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ರಾಮಮಂದಿರ (Ram Mandir) ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮ ಮಂದಿರ ಅವರದ್ದೂ (BJP) ಅಲ್ಲ ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದು ತಿಳಿಸಿದ್ದಾರೆ.
ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (Educational Institution) ರಜೆ (Holiday) ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ ಗೋವಾದಲ್ಲೂ ರಜೆ ಗೋವಾದಲ್ಲೂ ಕೂಡ ಸಾರ್ವಜನಿಕ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ನೀಡಿದ್ದಾರೆ. ಜನವರಿ 22 ರಂದು ರಾಜ್ಯದಲ್ಲಿ ಸಂಭ್ರಮ ಮೇಳೈಸಬೇಕು. ಹೀಗಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ಯಾವುದೇ ಕೆಲಸ ಮಾಡುವುದು ಬೇಡ. ದೀಪಾವಳಿಯಂತೆ ಆ ದಿನವನ್ನು ಆಚರಿಸಿ…
ನವದೆಹಲಿ: ಭಾರತ (India) ಮತ್ತು ಅರ್ಜೆಂಟೀನಾ (Argentina) ನಡುವೆ 5 ಲಿಥಿಯಂ ಬ್ಲಾಕ್ಗಳ ಪರಿಶೋಧನೆ ಹಾಗೂ ಗಣಿಗಾರಿಕೆಗೆ ಒಪ್ಪಂದ ಏರ್ಪಟ್ಟಿದೆ. ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್ಗಳ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟ್ವಿಟ್ಟರ್ ಮೂಲಕ ಮಾಹಿತಿ ರವಾನಿಸಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಅರ್ಜೆಂಟೀನಾದಲ್ಲಿ 5 ಲಿಥಿಯಂ ಬ್ಲಾಕ್ಗಳಲ್ಲಿ ಗಣಿಗಾರಿಕೆ (Lithium Mining) ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಹಿ ಹಾಕುವ ಮೂಲಕ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಖನೀಜ್ ಬಿಡೇಶ್ ಇಂಡಿಯಾ ಲಿಮಿಟೆಡ್ ಮತ್ತು CAMYEN, ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದ ಸರ್ಕಾರಿ ಸ್ವಾಮ್ಯದ ಕಂಪನಿ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಯೋಜನೆ ಭಾರತಕ್ಕೆ ಲಿಥಿಯಂ ಪೂರೈಕೆಯನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ.