ಲೋಹಿತ್.ಹೆಚ್ (Lohit) ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ ‘ಮಾಫಿಯಾ’ (Mafia) ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮಾಫಿಯಾ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ. ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಕೂಡ ಆಗಿದ್ದು, ಅದಕ್ಕೆ ಅದ್ಭುತ ರೆಸ್ಪಾನ್ಸ್ ಕೂಡ ಸಿಕ್ಕಿತ್ತು. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್…
Author: AIN Author
ಕೋಲಾರ : ಈ ದೇಶಕ್ಕೆ 60 ವರ್ಷಗಳಿಂದ ಕಾಂಗ್ರೆಸ್ ನವರು (Congress) ಅನ್ಯಾಯ ಮಾಡಿದ್ದಾರೆ. ಈಗ ನ್ಯಾಯ ಕೇಳಲು ಯಾತ್ರೆ ಮಾಡುತ್ತಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ (MP Muniswamy) ಕಾಂಗ್ರೆಸ್ ನ್ಯಾಯ ಯಾತ್ರೆ ಕುರಿತು ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಅನ್ಯಾಯ ಮಾಡಿಕೊಂಡಿದ್ದ ಇವರು ಜನರ ಬಳಿ ಹೋದಷ್ಟು ಇವರು ಮಾಡಿರುವ ಅನ್ಯಾಯವನ್ನ ಜನರೇ ಬಿಚ್ಚಿ ಹೇಳುತ್ತಾರೆ. ಅಲ್ಲದೆ ಇವರಿಗೆ ನ್ಯಾಯ ಎಂದು ಹೇಳುವುದಕ್ಕೆ ಅರ್ಹತೆ ಇಲ್ಲ. ಹೀಗಿರುವಾಗ ಇವರ ನ್ಯಾಯ ಏನು ಎಂದು ಪ್ರಶ್ನೆ ಮಾಡಿದ್ರು. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಜಮ್ಮು-ಕಾಶ್ಮೀರ, ಚೀನಾ ಸೇರಿದಂತೆ ಎಮೆರ್ಜೆನ್ಸಿ ಸಮಯದಲ್ಲಿ ಏನು ಮಾಡಿದ್ದೀರಿ ಎಂದು ಜನರಿಗೆ ತಿಳಿದಿದೆ. ಜೊತೆಗೆ ಅಯೋಧ್ಯೆ ರಾಮಮಂದಿರ (Ayodhya Ram Mandir) ಕಟ್ಟುವ ವಿಚಾರದಲ್ಲಿ ಡಿ.ಸಿ ಅವರನ್ನ ಹೇಗೆ ನಡೆಸಿಕೊಂಡು ಎತ್ತಂಗಡಿ ಮಾಡಿದ್ರು ಎಂದು ಮರುಪ್ರಶ್ನೆ ಹಾಕಿದರು.
ಹುಟ್ಟು ಹಬ್ಬದ ದಿನದಂದು ರಾತ್ರಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಅವಘಡದಲ್ಲಿ ಪ್ರಾಣ ಬಿಟ್ಟಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ಮಾಡಿ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಮೃತಪಟ್ಟವರಿಗೆ 5 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಯ ಪರಿಹಾರದ ಚೆಕ್ ಅನ್ನು ಇಂದು ವಿತರಿಸಿದ್ದಾರೆ. ಒಂದು ಕಡೆ ಯಶ್ ಪರಿಹಾರವನ್ನು ನೀಡಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ…
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಯಾವಾಗ ಯಾವ ರೂಪದಲ್ಲಿ ಕಳ್ಳರು ಬರುತ್ತಾರೆ ಅಂತಾನೇ ತಿಳಿಯುವುದಿಲ್ಲ. ಇಲ್ಲೊಬ್ಬ ನಗರದಲ್ಲಿರುವ ಪಿಜಿಗಳನ್ನೇ ಟಾರ್ಗೆಟ್ ಮಾಡಿ ಕದಿಯುತ್ತಿರುವ ಕಿರಾತಕ ಹಾಗಾಗಿ ಪಿಜಿಯಲ್ಲಿರುವ ಹುಡುಗಿಯರೇ ಹುಷಾರ್. ಈ ಐನಾತಿಯ ಟಾರ್ಗೆಟ್ ಅಂದ್ರೆ ಅದು ಪಿಜಿಗಳು ನಗರದ ಪಿಜಿ ಗಳಿಗೆ ಎಂಟ್ರಿ ಕೊಟ್ಟು ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ದೋಚೋದು ಇವನ ಕೆಲಸವಾಗಿದೆ. ಇತ್ತೀಚೆಗೆ ಆಡುಗೋಡಿ ಬಳಿಯ ಪಿಜಿಯೊಂದರಲ್ಲಿ ನುಗ್ಗಿ ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದು ಹಾಗೆ ಒಂದೇ ಗಂಟೆಯಲ್ಲಿ ಮೂರು ಲ್ಯಾಪ್ ಟಾಪ್ ಕದ್ದ ಖದೀಮ ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಲಕ್ಷಾಂತರ ಬೆಲೆ ಬಾಳುವ ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದಾನೆ. ಈ ಬಗ್ಗೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು: ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ನಾಯಿ ಮರಿಯನ್ನು ಬಿಡದ ಖದೀಮರು ಮನೆಯ ಹೊರಗೆ ಆಟವಾಡುತ್ತಿದ್ದ ನಾಯಿಮರಿಯನ್ನು ಹೊತ್ತೊಯ್ದ ಘಟನೆ ಗಿರಿನಗರದಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಬಂದು ನಾಯಿ ಕದ್ದಿರುವ ಖದೀಮರು 10 ತಿಂಗಳ ಡೈಸಿ ಎಂಬ ಹೆಸರಿನ ನಾಯಿಮರಿ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸುಮತಿ ಎಂಬುವವರು ಸಾಕಿದ್ದ ಡೈಸಿ ಹೆಸರಿನ ನಾಯಿಮರಿಯಾಗಿದ್ದು 1 ತಿಂಗಳ ಮರಿ ಇದ್ದಾಗಲೇ ತಂದು ಸಾಕಿದ್ದರು ಸದ್ಯ ನಾಯಿ ಮರಿ ಕಳ್ಳತನ ಬಗ್ಗೆ ದೂರು ದಾಖಲಿಸಿರುವ ಸುಮತಿ ಗಿರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲು ಮಾಡಿದ್ದಾರೆ. ಹಾಗೆ ಯಾರಾದರೂ ನಾಯಿಮರಿಯನ್ನು ಕಂಡರೆ ದೂರು ದಾಖಲಿಸಲು ಕೂಡ ಮನವಿ ಮಾಡಿದ್ದಾರೆ.
ಬೆಂಗಳೂರು: ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಡಾ.ಯತೀಂದ್ರ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಯೆ ನೀಡಿದಾರೆ. ಸಿಎಂ ಬದಲಾವಣೆ ಮಾಡೋದು, ಮುಂದುವರೆಸೋದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅಲ್ಲ. ಕೆಪಿಸಿಸಿ ಅಧ್ಯಕ್ಷರು (KPCC President), ನಾವೆಲ್ಲರೂ ಇದ್ದೇವೆ. ನಾವೆಲ್ಲ ಸೇರಿ 28 ಕ್ಷೇತ್ರ ಗೆಲ್ಲಬೇಕು ಅಂತ ಪ್ರಯತ್ನ ಮಾಡ್ತೀವಿ. ಅಂತಿಮವಾಗಿ ಜನ ಹೇಗೆ ಸಹಕಾರ ಕೊಡ್ತಾರೆ, ಮತ ಹಾಕ್ತಾರೆ ಅನ್ನೋದು ಜನರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ನಮಗೆ ವಿಶ್ವಾಸ ಇದೆ. ನಾವು ಕಾರ್ಯಕ್ರಮ ಕೊಟ್ಟಿದ್ದೇವೆ. ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಜನ ಸಮುದಾಯಕ್ಕೆ ಈ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಹಾಗಾಗಿ ನಾವು ಹೆಚ್ಚು ಸ್ಥಾನ ಗೆಲ್ಲಬೇಕು ಅಂತ ಹೇಳಿ…
ಪಾಟ್ನಾ: ಬಿಹಾರ ಸಚಿವ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರು ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ (Pran Prathistha Ceremony) ಮುನ್ನ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಶ್ರೀರಾಮನು ತನ್ನ ಕನಸಿನಲ್ಲಿ ಬಂದಿದ್ದಾನೆ. ಜನವರಿ 22 ರಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ನನ್ನ ಬಳಿ ಹೇಳಿದ ಎಂದು ತೇಜ್ ಪ್ರತಾಪ್ ಹೇಳಿದ್ದಾರೆ. ಇದೀಗ ಇವರ ಹೇಳಿಕೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ತೇಜ್ ಪ್ರತಾಪ್ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.
ಬೆಂಗಳೂರು: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದ್ದು, ಈ ಅಕ್ರಮದಲ್ಲಿ ಬಿಜೆಪಿ ನಾಯಕರ ಪಾಲೆಷ್ಟು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರವಾಗಿ ಮಾಹಿತಿ ನೀಡಿದ ಪ್ರಿಯಾಂಕ್ ಅವರು ಹೇಳಿದ್ದಿಷ್ಟು; “ನಮ್ಮ ವಿಶ್ವ ವಿಖ್ಯಾತ ಮೈಸೂರು ಸ್ಯಾಂಡಲ್ ಸಾಬೂನಿನ ನಕಲಿ ಉತ್ಪನ್ನಗಳ ಮಾರಾಟದ ಬಗ್ಗೆ ಮಾಧ್ಯಮಗಳಲ್ಲಿ ಭಾರಿ ಚರ್ಚೆಯಾಗಿದೆ. ಜನವರಿ ಮೊದಲ ವಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಿಕ ಕರೆ ಬರುತ್ತದೆ. ಅದರಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುತ್ತದೆ. ಕೂಡಲೇ ಸಚಿವರು ಕೆಎಸ್ ಡಿಎಲ್ ಎಂಡಿ ಪ್ರಶಾಂತ್ ಅವ್ರಿಗೆ ಮಾಹಿತಿ ನೀಡುತ್ತಾರೆ. ನಂತರ ಈ ಜಾಲದ ಹುಡುಕಾಟ ನಡೆಯುತ್ತದೆ. ಇದು ಹೈದರಾಬಾದ್ ನಲ್ಲಿದೆ ಎಂದು ತಿಳಿಯುತ್ತದೆ. ಇದನ್ನು ತಡೆಗಟ್ಟಲು ಕೆಲವು ಅಧಿಕಾರಿಗಳು ಹೋಗಿ 25 ಲಕ್ಷದ ಆರ್ಡರ್ ನೀಡುತ್ತಾರೆ. ಅವರು ಇದನ್ನು ಪೂರೈಸುವುದಾಗಿ ಒಪ್ಪಿಕೊಳ್ಳುತ್ತಾರೆ. ಇದು ದೊಡ್ಡ ಮಟ್ಟದ ಆರ್ಡರ್ ಆಗಿರುವುದರಿಂದ ನಿಮ್ಮ…
ಕುಶಾಲನಗರದಲ್ಲಿ ಲಾಡ್ಜ್ ಹಾಗು ಹೋಟೆಲ್ ಗಳಿಂದ ಕಳುಷಿತ ನೀರನ್ನು ಚೆರಂಡಿ ಮೂಲಕ ಕಾವೇರಿ ನದಿಗೆ ಹರಿಸಲಾಗುತ್ತಿತ್ತು. ಕಳೆದ ಮೂರು ದಿನಗಳ ಹಿಂದೆ ಈ ಬಗ್ಗೆ “ಚಾನಲ್ ಕೂರ್ಗ್ ನಲ್ಲಿ ವರದಿ ಪ್ರಕಟಿಸಿ ಕ್ರಮಕ್ಕೆ ಒತ್ತಾಯ ಮಾಡಲಾಗಿತ್ತು. ಇಂದು ಕುಶಾಲನಗರ ಪುರಸಭೆ ವತಿಯಿಂದ ಚರಂಡಿಯ ದುರಸ್ತಿ ಕಾರ್ಯ ಹಾಗೂ ಕಲುಷಿತ ನೀರನ್ನು ಬಿಡುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನಾದರೂ ಪುರಸಭೆ ಪರವಾನಿಗೆಯನ್ನು ನೀಡುವಾಗ ಎಲ್ಲಾ ಮಾನದಂಡಗಳನ್ನು ಪರಿಶೀಲಿಸಿ ಪರವಾನಿಗೆ ನೀಡುವಂತೆ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ. ಇಂತದ್ದೇ ಘಟನೆ ಮರುಕಳಿಸಿದರೆ ಪುರಸಭೆಯ ಮುಖ್ಯ ಅಧಿಕಾರಿ ಹಾಗೂ ಆಡಳಿತ ಮಂಡಳಿಯನ್ನು ಗುರಿಯಾಗಿರಿಸಿ ಕಾನೂನಿನ ಮೊರೆ ಹೋಗಲಾಗುವುದು ಎಂದು ಎಚ್ಚರಿಸಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಜಿಲ್ಲೆಯಲ್ಲಿ ಪರಿಸರ ಇಲಾಖೆ ಇದ್ದು, ಪರಿಸರ ಸಂರಕ್ಷಣೆ ಹಾಗೂ ನೈರ್ಮಲ್ಯವನ್ನು ಪಾಲಿಸಿದವರ ಮೇಲೆ ಕ್ರಮ ಕೈಗೊಳ್ಳಬೇಕಾದ ಈ ಇಲಾಖೆ ಬೆಚ್ಚಿಗಿನ ಮಹಡಿಯ ಮೇಲೆ ಮೇಲೆ ತಂಪಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕುಳಿತಿದ್ದಾರೆ. ಇಲಾಖೆ ವತಿಯಿಂದ ಯಾವುದೇ ಕ್ರಮ ಇದುವರೆಗೆ ಕೈಗೊಳ್ಳದಿರುವ ಬಗ್ಗೆ ತಮ್ಮ…
ಬಿಗ್ಬಾಸ್ ಕನ್ನಡ (Bigg Boss Kannada) ಹತ್ತನೇ ಸೀಸನ್ ಅಂತಿಮ ಹಂತಕ್ಕೆ ಕ್ಷಣಗಣನೆ ಶುರುವಾಗಿದೆ. ಹದಿನಾಲ್ಕು ವಾರಗಳನ್ನು ಮುಗಿಸಿ ಹದಿನೈದನೇ ವಾರಕ್ಕೆ ಕಾಲಿಟ್ಟಿರುವ ಬಿಗ್ಬಾಸ್ ರಿಯಾಲಿಟಿ ಷೋ ದಿನದಿಂದ ದಿನಕ್ಕೆ ಕುತೂಹಲದ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಹಂತದಲ್ಲಿ ಈ ಸೀಸನ್ ಬಿಗ್ಬಾಸ್ ಜರ್ನಿಯನ್ನು ಹೊರಳಿ ನೋಡಿದರೂ ಕುತೂಹಲಕಾರಿ ಚಿತ್ರಣ ಸಿಗುತ್ತದೆ. ಈ ಬಾರಿ ಮನೆಯೊಳಗಿನ ಸದಸ್ಯರು ಎಷ್ಟು ವೈವಿಧ್ಯಪೂರ್ಣವಾಗಿದ್ದರೋ ಮನೆಗೆ ಭೇಟಿ ನೀಡಿದ ಅತಿಥಿಗಳೂ ಷೋಗೆ ಅಷ್ಟೇ ಗಾಢವಾದ ಬಣ್ಣವನ್ನು ತುಂಬಿದ್ದಾರೆ. ಹಾಗಾದ್ರೆ ಬಿಗ್ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟು ಕಲರ್ಫುಲ್ ಮಾಡಿದ ಗೆಸ್ಟ್ಗಳು ಯಾರು? ಅವರು ಭೇಟಿ ನೀಡಿದ ಸಂದರ್ಭ ಹೇಗಿತ್ತು? ಇಲ್ಲಿದೆ ಒಂದು ಚಿತ್ರಣ. ಬಿಗ್ಬಾಸ್ ಷೋ ಮೊದಲ ಬೆಳಗಿನಲ್ಲಿಯೇ ಒಂದು ಸರ್ಫೈಸ್ ವಿಸಿಟ್ ಕಾದಿತ್ತು. ಅಂದು ಬೆಳಿಗ್ಗೆ ಚಿಕ್ಕಬಳ್ಳಾಪುರ ಎಂಎಲ್ಎ ಪ್ರದೀಪ್ ಈಶ್ವರ್ ಬಿಗ್ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು. ಮನೆಯೊಳಗಿನ ಸದಸ್ಯರು ಅವರ ಸ್ಪೂರ್ತಿದಾಯಕ ಮಾತು ಕೇಳಿ ಕಣ್ಣಲ್ಲಿ ನೀರನ್ನೂ ಎದೆಯಲ್ಲಿ ವಿಶ್ವಾಸವನ್ನೂ ತುಂಬಿಕೊಂಡು ಆಟಕ್ಕೆ ಅಣಿಯಾಗಿದ್ದರು. ಆರಂಭದಲ್ಲಿ…