ಸ್ಯಾಂಡಲ್ವುಡ್ ನಟಿ ರಮ್ಯಾ (Ramya) ಅವರು ದೀಪಾವಳಿ ಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷವಾಗಿ ಶುಭಕೋರಿದ್ದಾರೆ. ತಮ್ಮ ಮೊದಲ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Muttina Male Haniye) ಸಿನಿಮಾದಿಂದಲೇ ಮತ್ತೆ ಕಮ್ಬ್ಯಾಕ್ ಆಗುತ್ತಾರೆ ಎಂದು ಹೇಳಲಾಗಿತ್ತು. ಬಳಿಕ ಚಿತ್ರದಿಂದ ಹೊರಬಂದಿದ್ದೇಕೆ ಎಂದು ಇದೀಗ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದಾರೆ ಸ್ವಾತಿ ಮುತ್ತಿನ ಮಳೆ ಹನಿಯೇ’ ಇದು ನನಗೆ ಬಹಳ ವಿಶೇಷವಾದ ಚಿತ್ರ. ನಿರ್ಮಾಪಕಿಯಾಗಿ ನನ್ನ ಮೊದಲ ಚಿತ್ರ ಎಂದಷ್ಟೇ ಅಲ್ಲ. ಜೀವನದ ಬಗ್ಗೆ ನನ್ನ ದೃಷ್ಟಿಕೋನವನ್ನು ಸಂಪೂರ್ಣವಾಗಿ ಬದಲಿಸಿದ ವಿಷಯಾಧರಿತ ಚಿತ್ರ ಎಂದು ಸಿನಿಮಾದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಬರೆದುಕೊಂಡಿದ್ದಾರೆ ಸ್ವಾತಿ ಮುತ್ತಿನ ಮಳೆ…
Author: AIN Author
ವಿಜಯಪುರ: ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸ್ವಾಗತಿಸಿದ್ದಾರೆ. ಜೊತೆಗೆ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ 25 ಕ್ಕೂ ಹೆಚ್ಚು ಲೋಕಸಭೆ ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಸಂತಸ ತಂದಿದೆ ಎಂದು ಸ್ವಾಗತಿಸಿದರು. https://ainlivenews.com/b-y-vijayendra-met-former-prime-minister-hd-deve-gowda/ ಬಿಜೆಪಿ ಯುವಕರಿಗೆ ಪ್ರೋತ್ಸಾಹ ಕೊಡುತ್ತದೆ ಎಂಬುದನ್ನು ಹೈಕಮಾಂಡ್ ಮತ್ತೆ ಎತ್ತಿ ತೋರಿಸಿದೆ. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಬಿ. ಎಸ್. ವೈ ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೂ ಸಿಕ್ಕಿದೆ. ಇನ್ನು ಮುಂದೆ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರ ನಾಯಕತ್ವದಲ್ಲಿ ಯುವಕರು ಸಂಘಟಿತರಾಗಲಿದ್ದು, ರಾಜ್ಯದಲ್ಲಿ ಬಿಜೆಪಿ 25ಕ್ಕೂ ಹೆಚ್ಚು ಲೋಕಸಭೆ ಸೀಟುಗಳಲ್ಲಿ ಗೆಲವು ಸಾಧಿಸಲಿದೆ. ಅಲ್ಲದೇ, ರಾಜ್ಯದಲ್ಲಿ…
ಬಿಗ್ ಬಾಸ್ ಕನ್ನಡ ಸೀಸನ್ 4ರ (Bigg Boss Kannada 4) ವಿನ್ನರ್ ಪ್ರಥಮ್ (Pratham) ಅವರು ತಮ್ಮ ಮದುವೆಯ ಬಗ್ಗೆ ಅಪ್ಡೇಟ್ವೊಂದನ್ನ ಹಂಚಿಕೊಂಡಿದ್ದಾರೆ. ಮದುವೆ (Wedding) ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಮುಂದಿನ ವಾರ ಮದುವೆ. ಅಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ. ಹಾಗಂತ ಸುಮ್ಮನೆ ಫಾರ್ವರ್ಡ್ ಮೇಸೆಜ್ ಹಾಕಿ ನಿಮ್ಮನ್ನ ಮದುವೆಗೆ ಕಾಟಾಚಾರಕ್ಕೆ ಕರೆಯೋದಿಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ. ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲ್ಲಿಯೇ ಹಾರೈಸಿ ಎಂದು ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕುಟುಂಬದವರು ಇಷ್ಟಪಟ್ಟ ಹುಡುಗಿ ಮಂಡ್ಯದ ಭಾನುಶ್ರೀ ಜೊತೆ ಪ್ರಥಮ್ ಇತ್ತೀಚೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈಗ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ.
ಲೀಗ್ ಹಂತದ ಪಂದ್ಯಗಳು ಮುಗಿದು ಸೆಮಿಫೈನಲ್ ಫೀವರ್ ಎಲ್ಲೆಡೆ ಶುರುವಾಗಿದೆ. ನಾಳೆ ಮೊದಲ ಸೆಮಿಫೈನಲ್ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಫೈನಲ್ ಸುತ್ತಿಗೇರಲು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ಮತ್ತು ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಕಾದಾಡಲಿವೆ. ಆದರೆ, ಭಾರತದಲ್ಲಿ ತೀರ ಪ್ರದೇಶಗಳಲ್ಲಿ ಮಾನ್ಸೂನ್ ಕಾರಣದಿಂದಾಗಿ ನಿರ್ಣಾಯಕ ಹಂತದ ಪಂದ್ಯಗಳಿಗೆ ಮಳೆ ಭೀತಿಯು ಕಾಡತೊಡಗಿದೆ. ಐತಿಹಾಸಿಕ ಟೂರ್ನಿ ಮುಗಿಲು ಇನ್ನೂ ಎರಡೇ ಹೆಜ್ಜೆ ಬಾಕಿ ಇದೆ. ಈ ಸಂದರ್ಭದಲ್ಲಿ ಮಳೆ ಎದುರಾದರೆ ಕ್ರೀಡಾಭಿಮಾನಿಗಳಿಗೆ ಅದಕ್ಕಿಂತ ದೊಡ್ಡ ನಿರಾಸೆ ಬೇರೊಂದಿಲ್ಲ. ಮಳೆ ಬರದಿರಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಒಂದು ವೇಳೆ ಮಳೆ ಬಂದರೆ ಪಂದ್ಯ ರದ್ದಾಗಲಿದೆಯಾ? ಫೈನಲ್ ಪಂದ್ಯಕ್ಕೆ ತಂಡವನ್ನು ಹೇಗೆ ನಿರ್ಧರಿಸುತ್ತಾರೆ? ಮಳೆ ಬಂದರೂ ಮತ್ತೊಂದು ದಿನ ಪಂದ್ಯ ನಡೆಯಲಿದೆಯಾ? ಸಮಿಫೈನಲ್ಗೆ ವರಣನ ಅಡ್ಡಿಯಾದರೆ ಫೈನಲ್ ಆಯ್ಕೆಗೆ ಏನೆಲ್ಲ ದಾರಿಗಳಿವೆ ಎಂಬುದನ್ನು ನಾವೀಗ ತಿಳಿದುಕೊಳ್ಳೋಣ. ಮೊದಲನೆಯದಾಗಿ ಸಮಿಫೈನಲ್ ಪಂದ್ಯಗಳು ಅತ್ಯಂತ ನಿರ್ಣಾಯಕ ಘಟ್ಟವಾಗಿರುವುದರಿಂದ ಒಂದು ವೇಳೆ ಮಳೆ ಬಂದರೂ ಐಸಿಸಿ ನಿಯಮದಂತೆ…
ಬೆಂಗಳೂರ:- ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಅವರನ್ನು ಮಾಜಿ ಸಚಿವರಾದ ಸಿ.ಟಿ ರವಿ ಅವರು ಭೇಟಿ ಮಾಡಿದರು. ಬೆಂಗಳೂರಿನ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ, ಶಾಲು ಹೊದಿಸಿ ಸಿಟಿ ರವಿ ಅಭಿನಂದಿಸಿದ್ದಾರೆ. ಇದೇ ವೇಳೆ ರಾಜಕೀಯ ಸಂಬಂಧ ಕೆಲವು ಸಮಯ ಚರ್ಚೆ ನಡೆಸಿದರು. ಇನ್ನೂ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ, ಸಿಟಿ ರವಿ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿತ್ತು. ಇದೀಗ ಬಿವೈ ವಿಜಯೇಂದ್ರರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು: ವಿಶ್ವಕಪ್ 2023ರ (World Cup 2023) ಪಂದ್ಯಾವಳಿಯ ಕೊನೆಯ 3 ಪಂದ್ಯಗಳು ಬಾಕಿ ಉಳಿದಿವೆ. ಇನ್ನು 3 ಪಂದ್ಯಗಳು ನಡೆದರೆ ವಿಶ್ವ ಕ್ರಿಕೆಟ್ ಏಕದಿನ ಪಂದ್ಯಗಳ ಸಾಮ್ರಾಟ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಇನ್ನೆರಡು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯ ನಡೆದರೆ ವಿಶ್ವ ವಿಜೇತ ತಂಡ ಯಾವುದು ಎಂಬುದು ಗೊತ್ತಾಗಲಿದೆ. ಸೆಮಿಫೈನಲ್ ಹಣಾಹಣಿಗೆ ಮುಂಬೈನ ವಾಂಖೆಡೆ, ಕೋಲ್ಕತ್ತಾದ ಈಡನ್ ಗಾರ್ಡನ್ ವೇದಿಕೆ ಸಿದ್ಧವಾಗಿದ್ದು ಮೊದಲ ಸೆಮಿಫೈನಲ್ ನಲ್ಲಿ ಟೀಂ ಇಂಡಿಯಾ-ನ್ಯೂಜಿಲೆಂಡ್ (India Vs Newzealand) ತಂಡದ ವಿರುದ್ಧ ಸೆಣಸಲು ಸಿದ್ಧವಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನವೆಂಬರ್ 15ರಂದು ಮೊದಲ ಸೆಮಿಫೈನಲ್ ನಡೆಯಲಿದೆ. ಟೂರ್ನಿಯ 2ನೇ ಸೆಮಿಫೈನಲ್ (World Cup SemiFinal) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನವೆಂಬರ್ 16ರಂದು ನಡೆಯಲಿದೆ. ಫೈನಲ್ ಪಂದ್ಯ ನವೆಂಬರ್ 19ರಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಮಿಫೈನಲ್ ಮ್ಯಾಚ್ ವೇಳೆ ಮಳೆ ಬಂದರೆ ಏನಾಗಬಹುದು..? ಮಳೆ ಬಂದರೆ ಯಾವ ತಂಡ ಫೈನಲ್…
ಸ್ಮಾರ್ಟ್ ಫೋನ್ಗಳು ಈಗ ಎಲ್ಲರ ಬದುಕಿನ ಭಾಗವಾಗಿದೆ. ದಿನದ ಸಾಕಷ್ಟು ಕೆಲಸ ಕಾರ್ಯಗಳಿಗೆ ಸ್ಮಾರ್ಟ್ಫೋನ್ಗಳೇ ಆಧಾರವಾಗಿವೆ.ನಮ್ಮ ಆಂಡ್ರಾಯ್ಡ್ ಫೋನ್ನನ್ನು ಫಾಸ್ಟ್ ಆಗಿಸಲು ಕೆಲವೊಂದು ಮಾರ್ಗೋಪಾಯಗಳಿವೆ. ಇವುಗಳನ್ನು ಪಾಲಿಸಿಕೊಂಡು ಹೋದರೆ ಫೋನ್ ಸ್ಲೋ ಆಗುವ ಕಷ್ಟದಿಂದ ಕೊಂಚ ಮುಕ್ತಿ ಪಡೆಯುವ ಸಾಧ್ಯತೆಗಳು ಹೆಚ್ಚಿರುತ್ತವೆ. ಆ ಮಾರ್ಗೋಪಾಯಗಳೇನು.? ಇಲ್ಲಿದೆ ಕೆಲ ಸರಳ ಟಿಪ್ಸ್. ಕ್ಯಾಶೆಕ್ಲಿಯರ್ಮಾಡಿ : ದಿನ ಕಳೆದಂತೆ ಕ್ಯಾಶೆ ಡೇಟಾ ಸಂಗ್ರಹವಾಗುತ್ತಾ ಹೋಗುತ್ತದೆ. ಇದು ನಿಮ್ಮ ಫೋನನ್ನು ನಿಧಾನಗೊಳಿಸುತ್ತದೆ. ಹೀಗಾಗಿ ಕ್ಯಾಶೆ ಡೇಟಾ ಕ್ಲಿಯರ್ ಮಾಡುವುದು ಬಹಳ ಅಗತ್ಯ. ಅದಕ್ಕೆ ನೀವು ಸೆಟ್ಟಿಂಗ್ಗೆ > ಸ್ಟೋರೇಜ್ > ಕ್ಯಾಶೆಡ್ ಡೇಟಾಕ್ಕೆ ಹೋಗಿ ಕ್ಲಿಯರ್ ಮಾಡಬೇಕು. ಹೀಗೆ ಆಗಾಗ ಕ್ಯಾಶೆ ಡೇಟಾ ಕ್ಲಿಯರ್ ಮಾಡುತ್ತಿದ್ದರೆ ಮೆಮೋರಿ ಸ್ಪೇಸ್ ಫ್ರೀ ಆಗುತ್ತದೆ ಮತ್ತು ನಿಮ್ಮ ಡಿವೈಜ್ನ ಪರ್ಫಾರ್ಮೆನ್ಸ್ ಉತ್ತಮವಾಗುತ್ತದೆ. ಅನಗತ್ಯಆಪ್ಗಳು : ಸಾಕಷ್ಟು ಆಪ್ಗಳನ್ನು ನಾವು ಬಳಸುತ್ತೇವೆ. ಆದರೆ ಕೆಲವೊಂದು ಆಪ್ಗಳನ್ನು ಒಮ್ಮೆ ಬಳಸಿ ಮತ್ತೆ ಅವುಗಳತ್ತ ತಿರುಗಿಯೂ ನೋಡುವುದಿಲ್ಲ ಅಥವಾ ಅಪರೂಪಕ್ಕೊಮ್ಮೆ ಬಳಸುತ್ತೇವೆ. ಹೀಗೆ ನಿಮ್ಮ ಮೊಬೈಲ್ನಲ್ಲಿ ಇರುವ ಅನಗತ್ಯ…
ಅಲ್ಲುಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾದ ಬಗ್ಗೆ ಅತೀವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹಾಗಾಗಿ ಪದೇ ಪದೇ ಸಿನಿಮಾದ ಬಗ್ಗೆ ಅಭಿಮಾನಿಗಳು ಕೇಳುತ್ತಲೇ ಇರುತ್ತಾರೆ. ಇದೀಗ ಸ್ವತಃ ಅಲ್ಲು ಅರ್ಜುನ್ ಅವರೇ ಹೊಸದೊಂದು ಅಪ್ ಡೇಟ್ ನೀಡಿದ್ದು, ಹಾಡಿನ ಚಿತ್ರೀಕರಣವನ್ನು (Shooting) ರಾಮೋಜಿರಾವ್ ಸ್ಟುಡಿಯೋದಲ್ಲಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮುಂದಿನ ವರ್ಷ ಆಗಸ್ಟ್ 15ರಂದು ಸಿನಿಮಾ ರಿಲೀಸ್ ಮಾಡುವ ಕುರಿತು ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಪುಷ್ಪ ಸಿನಿಮಾದ ‘ವೂಂ ಅಂಟಾವ ಮಾವ..’ ಹಾಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. ಈ ಹಾಡೇ ಪಷ್ಪ ಸಿನಿಮಾಗೆ ಜನರನ್ನೂ ಕರೆತಂದಿದ್ದು. ಸೋಷಿಯಲ್ ಮೀಡಿಯಾದಲ್ಲಂತೂ ಕೋಟ್ಯಂತರ ಜನರು ರೀಲ್ಸ್ ಮಾಡಿದ್ದರು. ಈ ಹಾಡಿಗೆ ಸಮಂತಾ (Samantha) ಸಖತ್ತಾಗಿಯೇ ಸೊಂಟ ಬಳುಕಿಸಿದ್ದರು. ಈ ಯಶಸ್ಸನ್ನು ಮತ್ತೊಂದು ಬಾರಿ ಬಳಸಿಕೊಳ್ಳಲು ನಿರ್ದೇಶಕರು ಪ್ಲ್ಯಾನ್ ಮಾಡಿದ್ದಾರೆ. ಪುಷ್ಪ 2 ಸಿನಿಮಾದಲ್ಲೂ ಐಟಂ ಸಾಂಗ್ (Item Song) ವೊಂದಿದ್ದು, ಅದಕ್ಕೆ ಸಮಂತಾ ಅವರೇ ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಡಾನ್ಸ್ ಮಾಸ್ಟರ್ ಮತ್ತು ನಿರ್ದೇಶಕರು…
ಟೊಮೇಟೊ ಬೆಲೆ ಇಳಿಕೆಯಾಗಲು ಇನ್ನೂ ಒಂದು ತಿಂಗಳು ಕಾಯಬೇಕು ಎನ್ನಬಹುದು. ಆದಾಗ್ಯೂ, ಪ್ರಸ್ತುತ ಪರಿಸ್ಥಿತಿಗಳನ್ನು ಗಮನಿಸಿದರೆ, ಟೊಮೆಟೊ ಬೆಲೆ ಹೆಚ್ಚು ಕೈಗೆಟುಕುವ ಮಟ್ಟಕ್ಕೆ ಇಳಿಯಲು ಸುಮಾರು ಒಂದು ತಿಂಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದ್ದರಿಂದ, ಟೊಮೆಟೊ ಬೆಲೆಯಲ್ಲಿ ಕುಸಿತವನ್ನು ನಿರೀಕ್ಷಿಸುವ ಮೊದಲು ತಾಳ್ಮೆಯಿಂದಿರಿ ಮತ್ತು ಈ ಅವಧಿಯವರೆಗೆ ಕಾಯುವುದು ಉತ್ತಮ. ಟೊಮ್ಯಾಟೊದಿಂದ ಮಾಡಿದ ಊಟವನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಆದಾಗ್ಯೂ, ಟೊಮೆಟೊ ಆಧಾರಿತ ಭಕ್ಷ್ಯಗಳ ಅತಿಯಾದ ಸೇವನೆಯು ನಮ್ಮ ಮೇಲೆ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡಬಹುದು. ಈ ಭಕ್ಷ್ಯಗಳನ್ನು ಅತಿಯಾಗಿ ತಿನ್ನುವುದು ಪ್ರತಿಕೂಲ ಪ್ರತಿಕ್ರಿಯೆಗಳಿಗೆ ಕಾರಣವಾಗಬಹುದು, ಅವುಗಳಲ್ಲಿ ಒಂದು ಕೆಲವು ಸಂದರ್ಭಗಳಲ್ಲಿ ಮೂತ್ರಪಿಂಡದ ಕಲ್ಲುಗಳ ಸಾಧ್ಯತೆಯಿದೆ. ಕಿಡ್ನಿ ಸ್ಟೋನ್ ಇರುವವರು ಟೊಮೇಟೊ ಸೇವಿಸಿದರೆ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮಗಳು ಉಂಟಾಗಬಹುದು ಎನ್ನುತ್ತಾರೆ ವೈದ್ಯರು. ಈ ಸಮಸ್ಯೆಯು ಟೊಮೆಟೊಗಳಲ್ಲಿ ಹೆಚ್ಚಿನ ಮಟ್ಟದ ಆಕ್ಸಲೇಟ್ನಿಂದ ಉಂಟಾಗುತ್ತದೆ, ಇದು ಮೂತ್ರಪಿಂಡದ ಕಲ್ಲುಗಳ ರಚನೆಗೆ ಕೊಡುಗೆ ನೀಡುತ್ತದೆ. ಜೊತೆಗೆ, ಟೊಮ್ಯಾಟೊ ಹೆಚ್ಚಿನ ಸೇವನೆಯು ದೇಹದಲ್ಲಿ ಕ್ಯಾಲ್ಸಿಯಂ ಉತ್ಪಾದನೆಯನ್ನು…
ಲಕ್ನೋ: ಅಯೋಧ್ಯೆಯ (Ayodhya) ಸರಯು ನದಿಯ ತಟದಲ್ಲಿ 22 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಬರೆಯಲಾಗಿದೆ. ಈ ಸ್ಮರಣೀಯ ಸಂದರ್ಭದ ಮರುದಿನವೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ. ದೀಪೋತ್ಸವದ (Deepotsava) ದಿನ ಕೆಲವು ಮಕ್ಕಳು ಘಾಟ್ನಲ್ಲಿ ದೀಪದಿಂದ ಎಣ್ಣೆಯನ್ನು, ತೆಗೆದುಕೊಂಡು ಪಾತ್ರೆಗಳಲ್ಲಿ ತುಂಬುತ್ತಿರುವ ದೃಶ್ಯದ ವೀಡಿಯೋವನ್ನು ಅಖಿಲೇಶ್ ಯಾದವ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ದೈವಿಕತೆಯ ನಡುವೆ ಬಡತನ… ಬಡತನವು ದೀಪಗಳಿಂದ ಎಣ್ಣೆಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರೆ, ಆಚರಣೆಯ ಬೆಳಕು ಮಂದವಾಗುತ್ತದೆ. ಘಟ್ಟ ಮಾತ್ರವಲ್ಲದೆ ಪ್ರತಿಯೊಬ್ಬ ಬಡವರ ಮನೆಯೂ ಬೆಳಗುವ ಇಂತಹ ಹಬ್ಬ ಬರಲಿ ಎಂಬುದು ನಮ್ಮ ಹಾರೈಕೆ ಎಂದು ಎಸ್ಪಿ ಮುಖ್ಯಸ್ಥ ಬರೆದುಕೊಂಡಿದ್ದಾರೆ. https://twitter.com/yadavakhilesh/status/1723401256113426697?ref_src=twsrc%5Etfw%7Ctwcamp%5Etweetembed%7Ctwterm%5E1723401256113426697%7Ctwgr%5Ec3770c91c37f5227f9988fdd22c64456e873017a%7Ctwcon%5Es1_&ref_url=https%3A%2F%2Fpublictv.in%2Fakhilesh-yadav-shares-video-of-children-taking-oil-from-earthen-lamps-in-ayodhya%2F 7ನೇ ಆವೃತ್ತಿಯ ದೀಪೋತ್ಸವದಂದು ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಿ ವಿಶ್ವ ದಾಖಲೆ ಬರೆಯಲಾಯಿತು. ಒಟ್ಟು 22.23 ಲಕ್ಷ ಮಣ್ಣಿನ ದೀಪಗಳು ಅಯೋಧ್ಯೆಯನ್ನು ಬೆಳಗಿದವು. ಕಳೆದ…