Author: AIN Author

ಹೊಟ್ಟೆಯ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರಿಗೂ ಕಾಡುತ್ತದೆ. ಮುಖ್ಯವಾಗಿ ಆಹಾರ ಸೇವನೆಯಲ್ಲಿ ವ್ಯತ್ಯಾಸವಾದಾಗ ಹೊಟ್ಟೆ ಕೆಡುತ್ತದೆ. ಇನ್ನು ಕೆಲವೊಮ್ಮೆ ಸೋಂಕು ತಗುಲಿ ಹೊಟ್ಟೆಯಲ್ಲಿ ಗುಳ್ಳೆಗಳಾಗುತ್ತವೆ. ಅದನ್ನು ಹೊಟ್ಟೆಯ ಹುಣ್ಣು ಎನ್ನುತ್ತಾರೆ. ಆರಂಭದ ಹಂತದಲ್ಲಿ ಹೊಟ್ಟೆಯ ನೋವು, ಗುಳ್ಳೆಯದ ಲಕ್ಷಣಗಳು ಕಾಣಿಸಿಕೊಂಡರೆ ಮನೆಮದ್ದಿನ ಮೂಲಕ ಅದನ್ನು ಪರಿಹಾರ ಮಾಡಿಕೊಳ್ಳಬಹುದು. ಆದರೆ ಕಡಿಮೆಯಾಗದೇ ಇದ್ದರೆ ವೈದ್ಯರಲ್ಲಿ ತೋರಿಸುವುದು ಉತ್ತಮ . ಹಾಗಾದರೆ ಹೊಟ್ಟೆಯ ಹುಣ್ಣಿನ ಲಕ್ಷಣಗಳು ಯಾವೆಲ್ಲಾ, ಅದಕ್ಕೆ ಮನೆಯಲ್ಲಿ ಯಾವ ರೀತಿ ಮದ್ದುಗಳನ್ನು ಮಾಡಬಹುದು ಎನ್ನುವ ಮಾಹಿತಿ ಇಲ್ಲಿದೆ ನೋಡಿ. ಹೊಟ್ಟೆ ಹುಣ್ಣಿನ ಲಕ್ಷಣಗಳೆಂದರೆ ಗ್ಯಾಸ್ಟ್ರಿಕ್‌ ಮತ್ತು ಹೊಟ್ಟೆ ಉಬ್ಬಿದ ಅನುಭವ ವಾಕರಿಕೆ ವಾಂತಿ ಅಜೀರ್ಣ ಎದೆಯುರಿ ಮತ್ತು ಹುಳಿ ತೇಗು ಹೊಟ್ಟೆಯ ನೋವು ​ಅರಿಶಿನ ಉರಿಯೂತವನ್ನು ಕಡಿಮೆ ಮಾಡುವ ಮತ್ತು ಸೋಂಕನ್ನು ನಿವಾರಿಸುವ ಗುಣವನ್ನು ಅರಿಶಿನ ಹೊಂದಿದೆ. ಹೀಗಾಗಿ ಹೊಟ್ಟೆ ಹುಣ್ಣಿಗೆ ಉತ್ತಮ ಮನೆಮದ್ದಾಗಲಿದೆ. ಇದು ಹೊಟ್ಟೆಯ ಒಳಪದರದಲ್ಲಿ ಉರಿಯೂತ ಮತ್ತು ಊತವನ್ನು ಕಡಿಮೆ ಮಾಡಬಹುದು. ಹೀಗಾಗಿ ಆಹಾರದಲ್ಲಿ ಅರಿಶಿನವನ್ನು…

Read More

ಆಗ್ರಾ: ನಾಲ್ವರು ಕಾಮುಕರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾ ಜಿಲ್ಲೆಯ ಹೋಟೆಲಿನಲ್ಲಿ  ನಡೆದಿದೆ. 25 ವರ್ಷ ವಯಸ್ಸಿನ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೊವನ್ನು (Video) ಈ ಹಿಂದೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕ್ಷೇಪಾರ್ಹ ವಿಡಿಯೋವನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್‌ (Black Mail) ಮಾಡಲಾಗುತ್ತಿತ್ತು. ಬಲವಂತವಾಗಿ ಮದ್ಯ ಸೇವಿಸಿ ಆಕೆಯ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. https://twitter.com/primetvindia/status/1723920400076394497?ref_src=twsrc%5Etfw%7Ctwcamp%5Etweetembed%7Ctwterm%5E1723920400076394497%7Ctwgr%5E57711f13da516c94e7af459b06efb9f47bdd9f16%7Ctwcon%5Es1_&ref_url=https%3A%2F%2Fwww.opindia.com%2F2023%2F11%2Fup-woman-gang-raped-assaulted-in-agra-hotel-5-arrested%2F ಆರೋಪಿಗಳ ವಿರುದ್ಧ ಅತ್ಯಾಚಾರದ ಆರೋಪಗಳಲ್ಲದೆ, ಕೊಲೆ ಯತ್ನದ ಆರೋಪಗಳನ್ನು ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಹೋಟೆಲಿನ ಉದ್ಯೋಗಿಯಾಗಿದ್ದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಸಂತ್ರಸ್ತೆ ಸಹಾಯಕ್ಕಾಗಿ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Read More

ಬೆಂಗಳೂರು:- ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಇಳಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 14ಕ್ಕೆ): 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 724 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ 24 ಕ್ಯಾರಟ್​ನ…

Read More

ಬೆಂಗಳೂರು:- ಬೈಯಪ್ಪನಹಳ್ಳಿ‌ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಭ್ರೂಣ ಲಿಂಗ‌ ಪತ್ತೆ ಪ್ರಕರಣದ‌ ತನಿಖೆ ನಡೆಸುತ್ತಿರುವ ಆರೋಪಿ‌ ವೈದ್ಯ ಹಾಗೂ ಅವರ ಸಹಾಯಕರನ್ನು ಬಂಧಿಸಿದ್ದಾರೆ. ತುಳಸಿರಾಮ್ (41), ಮೈಸೂರು ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ ವ್ಯವಸ್ಥಾಪಕರಾದ ಸಿ.ಎಂ. ಮೀನಾ (38) ಹಾಗೂ ಆಸ್ಪತ್ರೆಯ ಸ್ವಾಗತಗಾರ್ತಿ ರಿಜ್ಮಾ ಖಾನಂ (38) ಬಂಧಿತರು. ಅ. 15ರಂದು ಬೆಂಗಳೂರಿನಿಂದ ಮಂಡ್ಯಕ್ಕೆ ಗರ್ಭಿಣಿಯೊಬ್ಬರನ್ನು ಭ್ರೂಣ ಲಿಂಗ ಪತ್ತೆಗಾಗಿ ಕಾರಿನಲ್ಲಿ ಕರೆದೊಯ್ಯಲಾಗುತ್ತಿತ್ತು. ಕಾರು ನೋಡಿ ಅನುಮಾನಗೊಂಡಿದ್ದ ಪೊಲೀಸರು, ಬೆನ್ನಟ್ಟಿ ಕಾರು ನಿಲ್ಲಿಸಿದ್ದರು. ಕಾರಿನಲ್ಲಿದ್ದವರನ್ನು ವಿಚಾರಣೆ ನಡೆಸಿದಾಗ, ಭ್ರೂಣ ಲಿಂಗ ಪತ್ತೆ ಜಾಲದ ಮಾಹಿತಿ ಲಭ್ಯವಾಗಿತ್ತು’ ಎಂದು ಪೊಲೀಸರು ಹೇಳಿದರು. ‘ವೈದ್ಯನ ಸಂಬಂಧಿಯೂ ಆಗಿದ್ದ ವೀರೇಶ್, ನವೀನ್‌ಕುಮಾರ್, ಶಿವಲಿಂಗೇಗೌಡ ಹಾಗೂ ನಯನ್‌ಕುಮಾರ್‌ನನ್ನು ಆರಂಭದಲ್ಲಿ ಬಂಧಿಸಲಾಗಿತ್ತು. ಅವರು ನೀಡಿದ್ದ ಮಾಹಿತಿ ಆಧರಿಸಿ ತನಿಖೆ ಮುಂದುವರಿಸಿ ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು. ಬಂಧಿತ ವೈದ್ಯ ತುಳಸಿರಾಮ್ ಹಾಗೂ ಇತರರು, ಮೂರು ವರ್ಷಗಳಿಂದ ಭ್ರೂಣ ಲಿಂಗ ಪತ್ತೆ ಮತ್ತು ಗರ್ಭಪಾತ ಮಾಡುತ್ತಿದ್ದರು ಎಂಬುದು…

Read More

ಬೆಂಗಳೂರು:-ನಾನು ಯಾವತ್ತು ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂದು ನಿರೀಕ್ಷಿಸಿರಲಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಇಡೀ ದೇಶದಲ್ಲಿ ಯುವಕರಿಗೆ ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ ನಿಜ. ಈಗ ಆ ಹಿನ್ನಡೆಯ ಕಾರಣದ ಬಗ್ಗೆ ಚರ್ಚೆ ಬೇಡ, ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಪಕ್ಷದ ವರಿಷ್ಠರು, ನಾಯಕರೊಂದಿಗೆ ಚರ್ಚಿಸಿ, ಅವರ ಸಲಹೆ ಮೇರೆಗೆ ಕೆಲಸ ಮಾಡಲಾಗುವುದು ಎಂದರು. ಇಡೀ ದೇಶದ ಜನತೆ ಪ್ರಧಾನಿ ಮೋದಿ ಕಡೆಗೆ ನೋಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ನಮ್ಮ ಪಕ್ಷ ಜಯಭೇರಿ ಭಾರಿಸುವ ವಿಶ್ವಾಸ ತಮಗಿದೆ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷನಾಗಿ ಘೋಷಣೆಯಾದ ತಕ್ಷಣವೇ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಟ್ಟಿದ್ದೇನೆ. ಇದರೊಂದಿಗೆ ಎಲ್ಲರ ಪ್ರೀತಿ ಉಳಿಸಿಕೊಳ್ಳಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಅವರು ರಾಜ್ಯದ ಜನತೆಯಿಂದ…

Read More

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ‘ಅಪರಿಚಿತ’ ಬಂದೂಕುಧಾರಿಗಳಿಂದ ಉಗ್ರರ ಸಂಹಾರ ಕಾರ್ಯಾಚರಣೆ ಮುಂದುವರಿದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನಾ ಮಸೂದ್ ಅಜರ್‌ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್‌ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಶದಲ್ಲಿ ಭಾಗವಹಿಸಿ ಭಾಷಣ ಮಾಡಲು ತೆರಳುತ್ತಿದ್ದ ರಹೀಮ್ ಉಲ್ಲಾ ಗುಂಡೇಟಿಗೆ ಬಲಿಯಾಗಿದ್ದಾನೆ. https://ainlivenews.com/b-y-vijayendra-met-former-prime-minister-hd-deve-gowda/ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಇದು ನಿರ್ದಿಷ್ಟ ಹತ್ಯೆಯ ಪ್ರಕರಣದಂತೆ ಕಾಣಿಸುತ್ತಿದೆ ಎಂದು ಪೊಲೀಸ್ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ತಾರೀಖ್ ಪಾಕಿಸ್ತಾನದಲ್ಲಿ ಖ್ಯಾತ ಮೌಲಾನಾನಾಗಿದ್ದು, ಆತನ ಭಾಷಣಗಳನ್ನು ಕೇಳಲು ಸಾವಿರಾರು ಜನರು ಸೇರುತ್ತಾರೆ. ಧಾರ್ಮಿಕ ಸಮಾವೇಶಗಳಲ್ಲಿ ಆತ ಭಾರತ ವಿರೋಧಿ ಭಾಷಣಗಳನ್ನು ಮಾಡುತ್ತಿದ್ದ.

Read More

ಬೆಂಗಳೂರು:- ಅಪಘಾತದ ದೂರಿಗೆ ವಿಳಂಬ ಮಾಡಿದ ಸಾರಿಗೆ ನಿಗಮ, ಚಾಲಕ, ಕಂಡಕ್ಟರ್‌ಗೆ ₹17 ಲಕ್ಷ ದಂಡ ವಿಧಿಸಲಾಗಿದೆ. ಪರಿಹಾರವನ್ನು ಮೃತನ ಕುಟುಂಬಕ್ಕೆ ನೀಡಬೇಕೆಂದು ಹೈಕೋರ್ಟ್‌ ಆದೇಶಿಸಿದೆ. ಇದೇ ವೇಳೆ, ಬಸ್‌ ಪ್ರಯಾಣಿಕ ಅಪಘಾತಕ್ಕೆ ಗುರಿಯಾಗಿ ಗಾಯಗೊಂಡರೆ ಕೂಡಲೇ ಆತನಿಗೆ ವೈದ್ಯಕೀಯ ನೆರವು ಕಲ್ಪಿಸುವುದು ಮತ್ತು ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡುವುದು ಬಸ್‌ ಚಾಲಕ ಮತ್ತು ನಿರ್ವಾಹಕನ ಕರ್ತವ್ಯ ಎಂದು ಹೇಳಿದೆ. ಪ್ರಯಾಣಿಕನೋರ್ವ ಕರ್ನಾಟಕ ವಾಯವ್ಯ ರಸ್ತೆ ಸಾರಿಗೆ ನಿಗಮಕ್ಕೆ (ಎನ್‌ಡಬ್ಲ್ಯೂಕೆಆರ್‌ಟಿಸಿ) ಸೇರಿದ ಬಸ್‌ನಿಂದ ನಿಲ್ದಾಣದಲ್ಲಿ ಕಳಗೆ ಇಳಿಯುವಾಗ ಚಾಲಕ ದಿಢೀರ್‌ ಆಗಿ ಬಸ್‌ ಮುಂದಕ್ಕೆ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದ. ಘಟನೆ ಸಂಬಂಧ ದೂರು ನೀಡಲು ನಾಲ್ಕು ದಿನಗಳ ಕಾಲ ವಿಳಂಬ ಮಾಡಿದ ಹಾಗೂ ಬಸ್‌ ಮುಂದೆ ಚಲಾಯಿಸುವಲ್ಲಿ ಚಾಲಕ ಹಾಗೂ ನಿರ್ವಾಹಕ ತೋರಿದ ನಿರ್ಲಕ್ಷ್ಯ, ಕರ್ತವ್ಯ ಲೋಪವನ್ನು ಪರಿಗಣಿಸಿದ ಹೈಕೋರ್ಟ್‌ ಈ ಆದೇಶ ಮಾಡಿದೆ. ಅಲ್ಲದೆ, ಮೃತಪಟ್ಟ ಪ್ರಯಾಣಿಕನ ಕುಟುಂಬಕ್ಕೆ ಶೇ.6ರಷ್ಟು…

Read More

ಚಾಮರಾಜನಗರ: ಮಾದಪ್ಪನ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಹಬ್ಬದ ಪ್ರಯುಕ್ತ ಬೆತ್ತದಲ್ಲಿ ವಿಜೃಂಭಣೆಯಿಂದ ರಥೋತ್ಸವ ನಡೆಯಲಿದ್ದು, ರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 8:50ಕ್ಕೆ ಮಾದಪ್ಪನ ರಥೋತ್ಸವ ನಡೆಯಲಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿದೆ. ಕಾಲ್ನಡಿಗೆಯಲ್ಲಿ ಆಗಮಿಸಿರುವ ಸಹಸ್ರಾರು ಭಕ್ತರು, ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದಾರೆ. ನೆರೆಯ ರಾಜ್ಯದಿಂದಲೂ ಸಹಸ್ರಾರು ಭಕ್ತರು ಆಗಮಿಸಿದ್ದು, ರಥೋತ್ಸವದಲ್ಲಿ ಪಾಲ್ಗೊಳ್ಳಲು ಬೆಟ್ಟದಲ್ಲಿ ಲಕ್ಷಾಂತರ ಭಕ್ತರು ವಾಸ್ತವ್ಯ ಹೂಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ವಿದ್ಯುತ್ ದೀಪಾಲಂಕಾರ ನಡೆದಿದ್ದು, ಮಾದಪ್ಪನ ಬೆಟ್ಟದಲ್ಲಿ ಭಕ್ತರಿಗೆ ಉಚಿತ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

Read More

ಬೆಂಗಳೂರು:- ಸೋಮವಾರದ ಮೊದಲ 12 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಕಣಮಾಲಿನ್ಯ 2.5 ಮಟ್ಟದಲ್ಲಿ ಶೇಕಡಾ 55 ರಷ್ಟು ಹೆಚ್ಚಳವಾಗಿದೆ ಎಂದು ಎನ್‌ಸಿಎಪಿ ಟ್ರ್ಯಾಕರ್ ವರದಿ ತಿಳಿಸಿದೆ. ನವೆಂಬರ್ 11 ರಿಂದ ದೀಪಾವಳಿ ಪೂರ್ವದ ಕಣಮಾಲಿನ್ಯ 2.5 ಮಟ್ಟವನ್ನು ಸೋಮವಾರ ಬೆಳಿಗ್ಗೆ 12 ರಿಂದ ಮಧ್ಯಾಹ್ನ 12 ರವರೆಗಿನ 12 ಗಂಟೆಗಳ ಅಂಕಿಅಂಶಗಳ ಜೊತೆ ಹೋಲಿಕೆ ಮಾಡಿ ಸಂಶೋಧಕರು 11 ನಗರಗಳ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಿದ್ದಾರೆ. ಕಣಮಾಲಿನ್ಯ 2.5 ಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ದೈನಂದಿನ ಸುರಕ್ಷಿತ ಮಿತಿ ಪ್ರತಿ ಘನ ಮೀಟರ್‌ಗೆ 15 ಮೈಕ್ರೋಗ್ರಾಂಗಳು. 2022 ದೀಪಾವಳಿ ದಿನಗಳಿಗೆ ಹೋಲಿಸಿದರೆ, ಬೆಂಗಳೂರು ಉತ್ತಮವಾಗಿದೆ ಆದರೆ ಉಳಿದ ನಗರಗಳಲ್ಲಿ ಮಾಲಿನ್ಯ ಏರಿಕೆ ಕಂಡಿವೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಸರಾಸರಿ ಪಿಎಂ 2.5 ಕಳೆದ ವರ್ಷ ಪ್ರತಿ ಘನಕ್ಕೆ 81.5 ಮೈಕ್ರೋಗ್ರಾಂ ಆಗಿತ್ತು. ಈ ವರ್ಷ 65.8ಕ್ಕೆ ಇಳಿಕೆಯಾಗಿದೆ. ಆದಾಗ್ಯೂ, ಕೆಲವು ನಗರಗಳು ಅಂಕಿಅಂಶಗಳು ಸುಮಾರು ದ್ವಿಗುಣಗೊಂಡಿವೆ.

Read More

ಬೆಂಗಳೂರು:- ₹ 40 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂನ ನಾಗವಾರ ಉಪ ವಿಭಾಗದ ಕಚೇರಿಯ ಸಹಾಯಕ ಲೆಕ್ಕಾಧಿಕಾರಿ ನವೀನ್‌ ಕುಮಾರ್‌ ಎಚ್.ಪಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಿದ್ಯುತ್‌ ಸಂಪರ್ಕವೊಂದರ ಗ್ರಾಹಕರ ಹೆಸರು ಬದಲಾವಣೆಗೆ ಪಿ.ಆರ್‌. ದೀಪಕ್‌ ಎಂಬುವವರು ಬೆಸ್ಕಾಂನ ನಾಗವಾರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕ್ರಿಯೆ ಪೂರ್ಣಗೊಳಿಸಲು ಸಹಾಯಕ ಲೆಕ್ಕಾಧಿಕಾರಿ ₹ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಚೌಕಾಸಿ ನಡೆಸಿದಾಗ ₹ 40 ಸಾವಿರ ಕೊಟ್ಟರೆ ಹೆಸರು ಬದಲಾವಣೆ ಮಾಡುವುದಾಗಿ ಒಪ್ಪಿಕೊಂಡಿದ್ದರು. ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ಘಟಕಕ್ಕೆ ದೂರು ಸಲ್ಲಿಸಿದ್ದರು. ಆರೋಪಿಯ ಸೂಚನೆಯಂತೆ ದೀಪಕ್‌ ಅವರು ನಾಗವಾರ ಉಪ ವಿಭಾಗ ಕಚೇರಿಯಲ್ಲಿ ಸೋಮವಾರ ಭೇಟಿಮಾಡಿ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದರು. ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಎಸ್‌ಪಿ-2 ಕೆ. ವಂಶಿಕೃಷ್ಣ ಮಾರ್ಗದರ್ಶನದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಕುಮಾರಸ್ವಾಮಿ, ಬಾಲಾಜಿ ಬಾಬು, ಶಂಕರಪ್ಪ…

Read More