Author: AIN Author

ಅಸಮರ್ಪಕ ಆಹಾರ ಶೈಲಿ, ನಿದ್ದೆ ಸರಿಯಾಗಿ ಮಾಡದಿರುವುದು, ಹೆಚ್ಚು ಕರಿದ ಆಹಾರಗಳ ಸೇವನೆಯಿಂದ ಹೊಟ್ಟೆಯಲ್ಲಿ ಸರಿಯಾಗಿ ಆಹಾರ ಜೀರ್ಣವಾಗದೆ ಮಲಬದ್ಧತೆ ಕಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಈ ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.  ಮಲಬದ್ಧತೆಯನ್ನು ಕಡೆಗಣಿಸಿದರೆ ಅದು ಗಂಭೀರ ಕಾಯಿಲೆಗೆ ಕಾರಣವಾಗಬಹುದು. ಹೀಗಾಗಿ ಆರಂಭದ ಹಂತದಲ್ಲಿಯೇ ಮಲಬದ್ಧತೆಯನ್ನು ಸರಿಪಡಿಸಿಕೊಳ್ಳುವುದು ಉತ್ತಮವಾಗಿದೆ. ಪ್ರತಿನಿತ್ಯ ಮಲವಿಸರ್ಜನೆ ಸರಿಯಾಗಿ ಆಗಬೇಕೆಂದರೆ ಒಂದಷ್ಟು ಮನೆಮದ್ದುಗಳು ಸಹಾಯ ಮಾಡುತ್ತದೆ. ಪಾಲಕ್‌ ಸೊಪ್ಪಿನ ಜ್ಯೂಸ್‌ ಮಲಬದ್ಧತೆ ಸಮಸ್ಯೆ ನಿವಾರಣೆಯಾಗಬೇಕೆಂದರೆ ತಿಂದ ಆಹಾರ ಸರಿಯಾಗಿ ಜೀರ್ಣವಾಗಬೇಕು. ಮೈದಾ, ಕರಿದ ಆಹಾರಗಳನ್ನು ಹೆಚ್ಚು ಸೇವನೆ ಮಾಡಿದಾಗ ಅದು ಜೀರ್ಣವಾಗದೇ ಕರುಳಿಗೆ ಸುತ್ತಿಕೊಳ್ಳಬಹುದು. ಅದನ್ನು ಸರಿಪಡಿಸಲು ಸರಿಯಾದ ಆಹಾರ ಸೇವನೆ ಆಗತ್ಯವಾಗಿರುತ್ತದೆ. ಅದಕ್ಕೆ ಪಾಲಕ್‌ ಸೊಪ್ಪು ಸಹಾಯ ಮಾಡುತ್ತದೆ. ಹೀಗೆ ಮಾಡಿ ಪಾಲಕ್‌ ಸೊಪ್ಪನ್ನು ಮಿಕ್ಸಿ ಮಾಡಿ ಅದರ ರಸ ತೆಗೆದುಕೊಳ್ಳಿ. ನಂತರ ಅದಕ್ಕೆ ಅರ್ಧ ಚಮಚ ತುಪ್ಪವನ್ನು ಸೇರಿಸಿ ಸ್ವಲ್ಪ ಬಿಸಿ ಮಾಡಿಕೊಳ್ಳಿ. ಅದನ್ನು ಸೇವನೆ ಮಾಡಿ. ಮಲಬದ್ಧತೆ ಇರುವಾಗ ಸೇವನೆ ಮಾಡಿದರೆ…

Read More

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. HPCL ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಹುದ್ದೆಗಳ ಸಂಖ್ಯೆ: 37 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ಉಪ ಜನರಲ್ ಮ್ಯಾನೇಜರ್, ಹಿರಿಯ ಅಧಿಕಾರಿ ವೇತನ: ರೂ.60000-280000/- ಪ್ರತಿ ತಿಂಗಳು HPCL ಹುದ್ದೆಯ ವಿವರಗಳು ಉಪ ಪ್ರಧಾನ ವ್ಯವಸ್ಥಾಪಕರು- 1 ಮುಖ್ಯ ವ್ಯವಸ್ಥಾಪಕರು/ಉಪ ಜನರಲ್ ಮ್ಯಾನೇಜರ್- 3 ಹಿರಿಯ ವ್ಯವಸ್ಥಾಪಕರು- 6 ಅಸಿಸ್ಟೆಂಟ್ ಮ್ಯಾನೇಜರ್/ಮ್ಯಾನೇಜರ್- 14 ಹಿರಿಯ ಅಧಿಕಾರಿ- 13 HPCL ನೇಮಕಾತಿ 2023 ಅರ್ಹತಾ ವಿವರಗಳು ಡೆಪ್ಯುಟಿ ಜನರಲ್ ಮ್ಯಾನೇಜರ್- M.E ಅಥವಾ M.Tech, Ph.D ಮುಖ್ಯ ವ್ಯವಸ್ಥಾಪಕರು/ಉಪ ಜನರಲ್ ಮ್ಯಾನೇಜರ್- M.E ಅಥವಾ…

Read More

ಗೋವರ್ಧನ ಪೂಜಾ, ಸೂರ್ಯೋದಯ: 06.18 AM, ಸೂರ್ಯಾಸ್ತ : 05.50 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಪಾಡ್ಯ 02:36 PM ತನಕ ನಂತರ ಬಿದಿಗೆ ನಕ್ಷತ್ರ: ಇವತ್ತು ವಿಶಾಖ 03:23 AM ತನಕ ನಂತರ ಅನುರಾಧ ಯೋಗ: ಇವತ್ತು ಶೋಭಾನ 01:57 PM ತನಕ ನಂತರ ಅತಿಗಂಡ ಕರಣ: ಇವತ್ತು ಕಿಂಸ್ತುಘ್ನ 02:50 AM ತನಕ ನಂತರ ಬವ 02:36 PM ತನಕ ನಂತರ ಬಾಲವ ರಾಹು ಕಾಲ: 03:00 ನಿಂದ 04:30 ವರೆಗೂ ಯಮಗಂಡ: 09:00 ನಿಂದ 10:30 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 05.00 PM to 06.36 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:38 ನಿಂದ ಮ.12:22 ವರೆಗೂ ಮೇಷ ರಾಶಿ ಗುತ್ತಿಗೆದಾರರಿಗೆ ಹೊಸ ಟೆಂಡರ್ ಭಾಗ್ಯ, ರಿಯಲ್ ಎಸ್ಟೇಟ್ ಮತ್ತು ಡೆವಲಪರ್ಸ್ ನವರಿಗೆ ಉದ್ಯಮದಲ್ಲಿ…

Read More

ಬೆಂಗಳೂರು:- ಜೆಡಿಎಸ್‌ ಮತ್ತು ಬಿಜೆಪಿ ಜತೆಯಾಗಿ ಲೋಕಸಭಾ ಚುನಾವಣೆ ಎದುರಿಸಲಿವೆ’ ಎಂದು ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಅವರನ್ನು ಪುನರಾಯ್ಕೆ ಮಾಡುವುದಕ್ಕಾಗಿ ಬೆಂಬಲ ನೀಡುತ್ತಿದ್ದೇವೆ. ಈ ಕಾರಣಕ್ಕಾಗಿ ಜೆಡಿಎಸ್‌ ಮತ್ತು ಬಿಜೆಪಿ ಜತೆಯಾಗಿ ಲೋಕಸಭಾ ಚುನಾವಣೆ ಎದುರಿಸಲಿವೆ ಎಂದರು. ಜಂಟಿ ಹೋರಾಟದಿಂದ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಹೆಚ್ಚಿನ ಲಾಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಾವು ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುವುದರಿಂದ 22ರಿಂದ 24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದೊಳಗೆ ಅದನ್ನು ಬಗೆಹರಿಸಿಕೊಳ್ಳುತ್ತೇವೆ’ ಎಂದರು. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿರುವುದು ಉತ್ತಮ ಆಯ್ಕೆ. ಯುವ ಸಮೂಹದಲ್ಲಿ ಸಂಚಲನ ಸೃಷ್ಟಿಸಿರುವ ನಾಯಕನಿಗೆ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಬಿಜೆಪಿ ಹೈಕಮಾಂಡ್‌ ಒಳ್ಳೆಯ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು.

Read More

ಬೆಂಗಳೂರು:- ನಿಗದಿತ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳನ್ನು ನಿರಾಕರಿಸುವುದು ಸರಿಯಲ್ಲ ಎಂದು ಬೆಂಗಳೂರು ಹೈಕೋರ್ಟ್ ಹೇಳಿದೆ. ಬೆಂಗಳೂರಿನ ನಿವಾಸಿ ಪಿ.ಆರ್. ದೇವರಾಜು ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಅರ್ಜಿದಾರ ಸಲ್ಲಿಸಬೇಕಾದ ಮೂಲ ಜಾತಿ ಪ್ರಮಾಣಪತ್ರ ಸ್ವೀಕರಿಸಿ, ಸೂಪರ್ ನ್ಯೂಮರರಿ ಹುದ್ದೆಗೆ ಮೀಸಲಾತಿ ಅಡಿ ಲೆಕ್ಕ ಸಹಾಯಕ ಗ್ರೇಡ್ 1ಗೆ ನೇಮಕ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಜೊತೆಗೆ, ಅರ್ಜಿದಾರರನ್ನು ಸಾಮಾನ್ಯ ವರ್ಗಕ್ಕೆ ತಳ್ಳಿರುವ ಮೂಲಕ ಕರ್ನಾಟಕ ಹಾಲು ಮಹಾ ಮಂಡಳಿ ತಪ್ಪು ಮಾಡಿದೆ. ಸಣ್ಣ ಸೂಚನೆಯಲ್ಲಿ ಸರಿಪಡಿಸಿ ನೈಸರ್ಗಿಕ ನ್ಯಾಯ ಒದಗಿಸಬಹುದಾಗಿತ್ತು. ಆ ಕ್ರಮಕ್ಕೆ ಮುಂದಾಗದಿರುವುದಕ್ಕೆ ಸಕಾರಣ ನೀಡಿಲ್ಲ. ಈ ಬೆಳವಣಿಗೆ ಅರ್ಜಿದಾರರ ಪರ ವಕೀಲರ ವಾದಿಸಿರುವಂತೆ ಅನ್ಯಾಯದ ಪರಮಾವಧಿಯಾಗಿದೆ ಎಂದು ಪೀಠ ತಿಳಿಸಿದೆ. ಅಲ್ಲದೇ, ಜಾತಿ ಪ್ರಮಾಣ ಪತ್ರ ನಕಲಿ ಇದ್ದಲ್ಲಿ ಸ್ವೀಕಾರಾರ್ಹವಲ್ಲ ಎಂಬುದಾಗಿ ಕೆಎಂಎಫ್ ವಾದಿಸುತ್ತಿಲ್ಲ.…

Read More

ನವದೆಹಲಿ;- ಯುವಜನರ ಆಶೋತ್ತರಗಳನ್ನು ಕೇಂದ್ರ ಸರ್ಕಾರ ಹೊಸಕಿ ಹಾಕಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಯುವಜನರ ಆಶೋತ್ತರಗಳನ್ನು ಹೊಸಕಿಹಾಕಿದೆ ಎಂದರು. ಯುವಜನರು ಉದ್ಯೋಗಾವಕಾಶಕ್ಕಾಗಿ ಎದುರು ನೋಡುತ್ತಿದ್ದರು. ಆದರೆ, ಮೋದಿ ನೇತೃತ್ವದ ಸರ್ಕಾರವು ಕಳೆದ 45 ವರ್ಷಗಳ ಅತಿಹೆಚ್ಚಿನ ನಿರುದ್ಯೋಗ ‍ಪ್ರಮಾಣವನ್ನು ಕರುಣಿಸಿತು’ ಎಂದು ಖರ್ಗೆ ಅವರು ‘ಎಕ್ಸ್‌’ನ ಪೋಸ್ಟ್‌ ಮೂಲಕ ವ್ಯಂಗ್ಯವಾಡಿದ್ದಾರೆ. ಯುವಜನರು ಆರ್ಥಿಕ ಸಬಲೀಕರಣವನ್ನು ಎದುರು ನೋಡುತ್ತಿದ್ದರು. ಅದಕ್ಕೆ ಬದಲಾಗಿ ಸರ್ಕಾರವು ಬೆಲೆ ಏರಿಕೆಯ ಬಿಸಿ ಮುಟ್ಟಿಸಿತು. ಇದರಿಂದಾಗಿ ಜನರ ಉಳಿತಾಯವು 47 ವರ್ಷಗಳಷ್ಟು ಹಿಂದಕ್ಕೆ ಹೋಯಿತು. ಅವರು ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಬಯಸಿದ್ದರು. ಆದರೆ ಮೋದಿ ನೇತೃತ್ವದ ಸರ್ಕಾರವು ದೇಶ ಹಿಂದೆಂದೂ ಕಾಣದ ಆರ್ಥಿಕ ಅಸಮಾನತೆ ಸೃಷ್ಟಿಸಿತು. ಮಧ್ಯಮ ವರ್ಗ ಮತ್ತು ಬಡವರು ಸಂಕಷ್ಟದಲ್ಲಿದ್ದಾರೆ, ದೇಶದ ಒಟ್ಟು ಆಸ್ತಿಯಲ್ಲಿ ಶೇ 60ರಷ್ಟು ಆಸ್ತಿಯು ಶೇ 5ರಷ್ಟು ಮಂದಿ ಶ್ರೀಮಂತರ ಬಳಿ ಇದೆ ಎಂದು ಹೇಳಿದ್ದಾರೆ.

Read More

ತುಮಕೂರು:-ಹೈಕಮಾಂಡ್‌ ಒಪ್ಪಿ ಟಿಕೆಟ್‌ ನೀಡಿದರೆ ಸ್ಪರ್ಧಿಸುವುದಾಗಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು. ಈ ಸಂಬಂಧ ಮಾತನಾಡಿದ ಅವರು,ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇದೆ. ಹೈಕಮಾಂಡ್‌ ಒಪ್ಪಿ ಟಿಕೆಟ್‌ ನೀಡಿದರೆ ಸ್ಪರ್ಧಿಸುವುದಾಗಿ ಹೇಳಿದರು. ಲೋಕಸಭೆಯನ್ನೂ ಒಮ್ಮೆ ನೋಡುವ ಆಸೆಯಿದೆ. ಹೈಕಮಾಂಡ್‌ ಒಪ್ಪಿ ಟಿಕೆಟ್‌ ನೀಡಿದರೆ ಸ್ಪರ್ಧಿಸುತ್ತೇನೆ. ಎಸ್‌.ಪಿ.ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ಬರುವ ಬಗ್ಗೆ ನನ್ನ ಬಳಿಯೂ ಕೆಲವರು ಚರ್ಚೆ ನಡೆಸಿದ್ದಾರೆ. ಡಾ.ಜಿ.ಪರಮೇಶ್ವರ್‌ ಹತ್ತಿರವೂ ಕೆಲವರು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಡಿ.ಸಿ.ಗೌರಿಶಂಕರ್‌ ಕಾಂಗ್ರೆಸ್‌ ಸೇರುವ ವಿಚಾರ ಗೊತ್ತಿಲ್ಲ ಎಂದರು. ಶೀಘ್ರದಲ್ಲೇ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ. ಅದನ್ನು ಸಾರ್ವಜನಿಕರ ಚರ್ಚೆಗೆ ಬಿಡಲಾಗುವುದು. ಅಲ್ಲಿ ಬರುವ ಅಭಿಪ್ರಾಯವನ್ನು ಪರಿಗಣಿಸಿ, ಯಾವುದನ್ನು ಬಿಡಬೇಕು, ತೆಗೆದುಕೊಳ್ಳಬೇಕು ಎಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.ವರದಿ ಬಂದಾಕ್ಷಣ ಒಪ್ಪಬೇಕೆಂಬ ನಿಯಮವಿಲ್ಲ ಎಂದು ಹೇಳಿದರು. ಮಾಸ್‌ ಲೀಡರ್‌ ಆಗಲು ಸಾಧ್ಯವಿಲ್ಲ: ಸರ್ಕಾರ ಇದ್ದಾಗ ಉಪ ಚುನಾವಣೆಗಳಲ್ಲಿ ಎರಡು ಸ್ಥಾನ ಗೆದ್ದಾಕ್ಷಣ ಮಾಸ್‌ ಲೀಡರ್‌ ಆಗಲು ಸಾಧ್ಯವಿಲ್ಲ, ಜನರ…

Read More

ಬುಧವಾರ ನಡೆಯುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ರೋಹಿತ್ ಶರ್ಮಾ ಅವರಿಗೆ ಅಗ್ನಿಪರೀಕ್ಷೆಯಾಗಿದೆ. ರೋಹಿತ್ ನಾಯಕತ್ವದ ಬಳಗವು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಡಲಿದೆ. 2019ರ ಸೆಮಿಫೈನಲ್‌ನಲ್ಲಿ ಕಿವೀಸ್ ಬಳಗದ ಎದುರು ಸೋತಿದ್ದ ಭಾರತ ತಂಡವು ಪ್ರಶಸ್ತಿ ಗೆಲುವಿನ ಅವಕಾಶ ಕಳೆದುಕೊಂಡಿತ್ತು. ಆಗ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಾಗಿದ್ದರು. ಈಗ ಆ ಸೋಲಿನ ಮುಯ್ಯಿ ತೀರಿಸಿಕೊಳ್ಳುವುದರ ಜೊತೆಗೆ 12 ವರ್ಷಗಳ ನಂತರ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಡುವ ಛಲ ಭಾರತ ತಂಡದಲ್ಲಿದೆ. ತಮ್ಮ ತವರೂರಿನ ಅಂಗಳದಲ್ಲಿ ಗೆಲುವಿನ ಸಂಭ್ರಮ ಆಚರಿಸುವ ಆತ್ಮವಿಶ್ವಾಸ 36 ವರ್ಷದ ಶರ್ಮಾಗೂ ಇದೆ. ಟೂರ್ನಿಯ ಲೀಗ್ ಸುತ್ತಿನಲ್ಲಿ ಎಲ್ಲ ಒಂಬತ್ತು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದೊಂದಿಗೆ ನಾಲ್ಕರ ಘಟ್ಟಕ್ಕೆ ಆತಿಥೇಯರು ಲಗ್ಗೆ ಹಾಕಿದ್ದಾರೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಗುರಿ ಬೆನ್ನಟ್ಟಿದ್ದ ಸಂದರ್ಭದಲ್ಲಿ 2 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಆದರೆ ಆ ಪಂದ್ಯದಲ್ಲಿ ವಿರಾಟ್ ಮತ್ತು ಕನ್ನಡಿಗ ಕೆ.ಎಲ್. ರಾಹುಲ್ ಅವರ ಅಮೋಘ ಜೊತೆಯಾಟದಿಂದಾಗಿ ತಂಡ…

Read More

ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗಬೇಕು ಎಂದು ವರ್ತೂರು ಸಂತೋಷ್ ಅವರು ತೀರ್ಮಾನಿಸಿದ್ದಾರೆ. ಆದರೆ ಅವರ ಮನವೊಲಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ. ಹಾಗಿದ್ದರೂ ಕೂಡ ವರ್ತೂರು ಸಂತೋಷ್​ ಅವರು ದೊಡ್ಮನೆ ತೊರೆಯಲು ಏನೇನೋ ಪ್ಲ್ಯಾನ್​ ಮಾಡುತ್ತಿದ್ದಾರೆ. ‘ಎರಡು ದೊಡ್ಡ ಡ್ರೋನ್​ ತರಿಸು. ಅದರ ಮೇಲೆ ಕಾಲಿಟ್ಟುಕೊಂಡು ಹಾರಿ ಹೋಗ್ತೀನಿ’ ಎಂದು ಪ್ರತಾಪ್​ಗೆ ವರ್ತೂರು ಸಂತೋಷ್​ ಹೇಳಿದ್ದಾರೆ. ಅವರಿಗೆ ತುಕಾಲಿ ಸಂತೋಷ್​ ಕೂಡ ಒಂದಷ್ಟು ಐಡಿಯಾ ಕೊಟ್ಟಿದ್ದಾರೆ. ‘ನಿಮ್ಮನ್ನೆಲ್ಲ ಹೊಡೆದರೆ ಸಾಕು. ಅವರೇ ನನ್ನನ್ನು ಹೊರಗೆ ಕಳಿಸುತ್ತಾರೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ. ಈ ಮೂವರ ಸಂಭಾಷಣೆ ಇರುವ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ.

Read More

ಬೆಂಗಳೂರು:- ಬಿಎಂಟಿಸಿಯಲ್ಲಿ ಟಿಕೆಟ್ ರಹಿತ ಪ್ರಯಾಣ ಬೆಳೆಸಿದವರಿಗೆ ದಂಡದ ಬಿಸಿ ಮುಟ್ಟಿಸಲಾಗಿದೆ. ಒಟ್ಟು 3350 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಟಿಕೆಟನ್ನು ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಮಹಿಳೆಯ ಆಸನದಲ್ಲಿ ಕುಳಿತು ಪ್ರಯಾಣಿಸುವ ಪುರುಷರನ್ನು ಪತ್ತೆ ಹಚ್ಚಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 6,99,325 ರೂ.ಗಳನ್ನು ವಸೂಲಿ ಮಾಡಲಾಗಿದೆ. ಟಿಕೆಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 15,165 ಟ್ರಿಪ್‍ಗಳನ್ನು ತಪಾಸಣೆ ನಡೆಸಿವೆ. 3350 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ 6,72,125 ರೂ.ದಂಡ ವಸೂಲಿ ಮಾಡಿ, ಸಂಸ್ಥೆಯ ನಿರ್ವಾಹಕರ ವಿರುದ್ಧ 953 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 272 ಪುರುಷ ಪ್ರಯಾಣಿಕರಿಂದ ಒಟ್ಟು 27,200 ರೂ.ದಂಡ ವಿಧಿಸಲಾಗಿರುತ್ತದೆ. ಪ್ರಯಾಣಿಕರು ಬಿಎಂಟಿಸಿ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ…

Read More