Author: AIN Author

ಬೆಂಗಳೂರು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. ಒಂದೆಡೆ ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್​​ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದ್ರೂ ನಾನು ಕೆಲಸ ಮಾಡ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.

Read More

ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ – ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ.

Read More

 ದೀಪಾವಳಿ ಪ್ರಯುಕ್ತ ಬಿಗ್‌ಬಾಸ್ ಮನೆಯವರಿಗೆಲ್ಲ ಒಂದು ಭಾವುಕ ಸರ್ಪೈಸ್ ನೀಡಿದ್ದಾರೆ. ಮನೆಮಂದಿಗೆಲ್ಲರಿಗೂ ಅವರ ಮನೆಯಿಂದ ಅವರಿಗಿಷ್ಟವಾದ ತಿನಿಸನ್ನು ತರಿಸಿ ಕೊಡಲಾಗಿದೆ. ಬಾಕ್ಸ್‌ನಲ್ಲಿ ಬಂದ ತಮ್ಮಿಷ್ಟದ ತಿನಿಸನ್ನು ಮಾಡಿ ಕಳಿಸಿದ ಕುಟುಂಬದವರನ್ನು ನೆನಪಿಸಿಕೊಂಡು ಸ್ಪರ್ಧಿಗಳೆಲ್ಲ ಭಾವುಕರಾಗಿದ್ದಾರೆ. ಎಲ್ಲರ ಮನೆಯಿಂದ ತಿಂಡಿ ಬಂದರೂ ಒಬ್ಬ ಸ್ಪರ್ಧಿಯ ಮನೆಯಿಂದ ಮಾತ್ರ ಬಾಕ್ಸ್ ಬಂದಿರಲಿಲ್ಲ. ಅದು ವರ್ತೂರ್‍ ಸಂತೋಷ್ ಮನೆಯಿಂದ. ಇದನ್ನು ನೋಡಿ ವರ್ತೂರ್ ಅವರು ದುಃಖದಿಂದ ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ಆಗಲೇ ಇಡೀ ಮನೆಯವರೆಲ್ಲರೂ ದಂಗಾಗಿಬಿಡುವ ಆ ಘಟನೆ ನಡೆಯಿತು. ಈ ಘಟನೆ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸೆರೆಯಾಗಿದೆ.  ತೆರೆದ ಬಿಗ್‌ಬಾಸ್ ಮನೆಯ ಬಾಗಿಲಿಂದ ವರ್ತೂರ್ ಸಂತೋಷ್ ಅವರ ಅಮ್ಮನೇ ಬುತ್ತಿ ಹಿಡಿದು ನಡೆದುಕೊಂಡು ಬರುತ್ತಿದ್ದರು! ಅವರ ಬಾಯಿಂದ ‘ಕಂದಾ’ ಅಂದಾಗಲಂತೂ ಸ್ಪರ್ಧಿಗಳೆಲ್ಲರಿಗೂ ತಮ್ಮ ಅಮ್ಮನೇ ಕರೆದ ಅನುಭವ. ವರ್ತೂರ್ ಸಂತೋಷ್‌ ಅವರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗುತ್ತೇನೆ ಎಂದು ನಿನ್ನೆಯಿಂದಲೂ ಹೇಳುತ್ತಿದ್ದಾರೆ. ನಿರ್ಧಾರವನ್ನು ಅವರಿಗೇ ಬಿಟ್ಟು ಕಿಚ್ಚ ಸುದೀಪ್‌, ವೀಕೆಂಡ್‌ ಎಪಿಸೋಡ್ ಮುಗಿಸಿದ್ದಾರೆ.…

Read More

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬಿಎಸ್ʼವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ವೀರಶೈವ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗಿದ್ದಾರೆ. BSY, HDK ಒಟ್ಟಾಗಿ ಹೋದ ಕಾರಣಕ್ಕಾಗಿಯೇ ಅಧಿಕಾರ ಸಿಕ್ಕಿದ್ದು. ಇಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. https://ainlivenews.com/b-y-vijayendra-met-former-prime-minister-hd-deve-gowda/ ಈಗ ಅದೇ ರೀತಿ BSY ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಾಗಿದೆ. ಮತ್ತೊಂದು ಕಡೆ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ. ಬಿ.ವೈ.ವಿಜಯೇಂದ್ರ ಯುವ ನಾಯಕ, ಸಮುದಾಯದ ಬೆಂಬಲ ಇದೆ. ಯಡಿಯೂರಪ್ಪ ಸಿಎಂ ಆಗಲು ವಿಜಯೇಂದ್ರ ಚಾಣಾಕ್ಷತನವೂ ಇದೆ. BSY ಮೂಲೆ ಗುಂಪು ಅನ್ನೋ ಕಾರಣಕ್ಕೆ ಬಿಜೆಪಿಗೆ ಹಿನ್ನಡೆಯಾಗಿತ್ತು. ಆದ್ದರಿಂದ ಬಿ.ವೈ.ವಿಜಯೇಂದ್ರ ಆಯ್ಕೆ ಸೂಕ್ತವಾಗಿದೆ ಎಂದರು.

Read More

ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರಿಗೆ ಹುಟ್ಟುಹಬ್ಬದ (Birthday) ಸಂಭ್ರಮ. ಈ ಸಂದರ್ಭದಲ್ಲಿ ಅವರು ನಾಯಕಿಯಾಗಿ ನಟಿಸಿರುವ ‘ಭೈರಾದೇವಿ’ ಚಿತ್ರದ ಟೀಸರ್ ಹಾಗೂ ‘ಅಜಾಗ್ರತ’ ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಈ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ತಮಗೆ ದೀಪಾವಳಿ ಹಬ್ಬದ ಶುಭಾಶಯ ಎಂದು ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ಈ ಬಾರಿ ನನ್ನ ಹುಟ್ಟುಹಬ್ಬ ಮತ್ತಷ್ಟು ವಿಶೇಷ. ಏಕೆಂದರೆ ನನ್ನ ಅಭಿನಯದ ಭೈರಾದೇವಿ (Bhairadevi) ಚಿತ್ರದ ಟೀಸರ್ ಬಿಡುಗಡೆ ಹಾಗೂ ಅಜಾಗ್ರತ (Ajagrata) ಪೋಸ್ಟರ್ ಬಿಡುಗಡೆ ಇಂದು ಆಗಿದೆ. ಈ ಎರಡು ಚಿತ್ರಗಳು ಶಮಿಕಾ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗುತ್ತಿದೆ.  ಭೈರಾದೇವಿ ನನ್ನ ಇಪ್ಪತ್ತು ವರ್ಷಗಳ ಸಿನಿಜರ್ನಿಯಲ್ಲೇ ವಿಭಿನ್ನವಾದ ಚಿತ್ರ. ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ‌. ನನಗೆ ಸ್ಮಶಾನ ಎಂದರೆ ಭಯ. ಈ ಚಿತ್ರದ ಚಿತ್ರೀಕರಣ ಹೆಚ್ಚಿನ ಭಾಗ ಸ್ಮಶಾನದಲ್ಲೇ ನಡೆದಿದೆ. ಈ ಚಿತ್ರಕ್ಕೆ ಪಟ್ಟಿರುವಷ್ಟು ಶ್ರಮ ನಾನು ಯಾವ ಚಿತ್ರಕ್ಕೂ ಪಟ್ಟಿಲ್ಲ. ಇಂದು…

Read More

ಸಲ್ಮಾನ್ ಖಾನ್ (Salman Khan) ನಟನೆಯ ಟೈಗರ್ 3 ಸಿನಿಮಾ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಟಿಸಿ ಘಟನೆ ನಡೆದಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರವೊಂದನ್ನು ಮಾಡಿದ್ದಾರೆ. ಅವರ ಎಂಟ್ರಿಗೆ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹಾಗಾಗಿ ಥಿಯೇಟರ್ ತುಂಬಾ ಪಟಾಕಿಯ ಕಿಡಿಗಳು ಹಾರಾಡಿವೆ. ಹೊಗೆ ತುಂಬಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ಮಲೇಗಾಂವ್ (Malegaon) ನಲ್ಲಿ ಮೊನ್ನೆಯಿಂದ ಟೈಗರ್ 3 (Tiger 3) ಸಿನಿಮಾ ಪ್ರದರ್ಶನ ನಡೆಯುತ್ತಿದೆ. ನಿನ್ನೆ ದೀಪಾವಳಿ ಆಗಿದ್ದರಿಂದ ಸಾಕಷ್ಟು ಅಭಿಮಾನಿಗಳು ಥಿಯೇಟರ್ ಗೆ ಆಗಮಿಸಿ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ಕೆಲ ಕಿಡಿಗೇಡಿ ಅಭಿಮಾನಿಗಳು ಶಾರುಖ್ ಖಾನ್ ಎಂಟ್ರಿಗೆ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹೀಗಾಗಿ ಥಿಯೇಟರ್ ತುಂಬೆಲ್ಲ ಪಟಾಕಿಯ ಕಿಡಿಗಳು ತುಂಬಿಕೊಂಡಿದ್ದವು. ಈ ಕುರಿತು ಥಿಯೇಟರ್ ಮಾಲೀಕರು ಮಾಧ್ಯಮಗಳ ಜೊತೆ ಮಾತನಾಡಿ, ಅಭಿಮಾನಿಗಳಿಂದಾಗಿ ಥಿಯೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾಕಷ್ಟು ಹಾನಿ ಕೂಡ…

Read More

ಬೆಂಗಳೂರು:  ನಗರದಲ್ಲಿ ಯೂವಕನೋರ್ವ ನಡುರಸ್ತೆಯಲ್ಲೇ ಯುವತಿಯ  ಬಟ್ಟೆಯನ್ನು ಎಳೆದಾಡಿ, ಅಶ್ಲೀಲವಾಗಿ ನಿಂದಿಸಿ ಕಿರುಕುಳ ನೀಡಿರುವವ ಘಟನೆ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದುರು ನಡೆದಿದೆ. ನವೆಂಬರ್ 6 ರಂದು ರಾತ್ರಿ 10.40ರ ಸುಮಾರಿಗೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ (DCP) ಕಚೇರಿ ಎದರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಿಂದಿಸಿದ್ದಾನೆ. ಈ ವೇಳೆ ಬೈಕ್ ನಲ್ಲಿ ಯುವತಿಯನ್ನ ಪಾಲೋ ಮಾಡಿ ಬಂದ ಕಿಡಿಗೇಡಿ ಯುವಕ‌ ಸೌತ್ ಎಂಡ್ ಸರ್ಕಲ್ ಡಿಸಿಪಿ ಕಚೇರಿ ಮುಂದೆ ಯುವತಿಗೆ ಕಿರುಕುಳ ರಸ್ತೆಯಲ್ಲಿ ಯುವತಿ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಿಂದನೆ ನಂತರ ಬೈಕ್ ಯೂಟರ್ನ್ ತೆಗೆದುಕೊಂಡು ಎಸ್ಕೇಪ್ ಆದ ಆಸಾಮಿ ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಯುವತಿ ಪ್ರಕರಣ ದಾಖಲಿಸಿ ಕಿಡಿಗೇಡಿ ಯುವಕನಿಗೆ ಪೊಲೀಸರ ಶೋಧಕಾರ್ಯ ನಡೆಯುತ್ತಿದೆ.

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು, ಮಾರ್ಗದರ್ಶನ ನೀಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಸಚಿವ ಎಸ್​​ಎಂ ಕೃಷ್ಣ ತಿಳಿಸಿದರು. ಹಿರಿಯರಾದ ನಾವು ಸಮನ್ವಯ ಸಾಧಿಸಿಕೊಂಡು ಹೋಗಬೇಕಾಗುತ್ತದೆ. ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಿ ಸಾಧನೆ ಮಾಡಬೇಕು. ಈ ಯುವ ಮುಖಂಡನ ಹೆಗಲಿನ ಮೇಲೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ದೊಡ್ಡ ಜವಾಬ್ದಾರಿಗಳನ್ನು ಹೊರೆಸಿದ್ದಾರೆ. ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಅವರಲ್ಲರೂ ಗುರುತಿಸಿದ್ದಾರೆ ಎಂದರು.

Read More

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. https://ainlivenews.com/b-y-vijayendra-met-former-prime-minister-hd-deve-gowda/ ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಭೇಟಿಯಾದ ಉದ್ದೇಶ ಬೇರೆ. ಅಡ್ಜಸ್ಟ್ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತಾವೆಂದು ಕಾದುನೋಡೋಣ ಎಂದರು.

Read More

ಬೆಂಗಳೂರು: ಶಾಸಕ ಬಿ ವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಸೋಮವಾರ  ಮಾಜಿ ಮುಖ್ಯಮಂತ್ರಿ  ಎಸ್ .ಎಂ. ಕೃಷ್ಣ ಅವರನ್ನು ಸದಾಶಿವನಗರದಲ್ಲಿರುವ  ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಕಳೆದ 20 ನಿಮಿಷದಿಂದ ಎಚ್.ಎಂ ಕೃಷ್ಣ ಜೊತೆ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿಯ ಕಾರ್ಯಕರ್ತರು ಕೂಡ ಭಾಗಿಯಾಗಿದ್ದರು. ಎಸ್.ಎಂ ಕೃಷ್ಣ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ ಎಂದು ಮಾಜಿ ಸಿಎಂ ಕೃಷ್ಣ ಭೇಟಿ ಬಳಿಕ ವಿಜಯೇಂದ್ರ ಹೇಳಿದರು. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.…

Read More