ಹಾಸನ:- 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ. ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು.…
Author: AIN Author
ಗಂಗಾವತಿ:- ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ 46 ವರ್ಷದ ಮುರ್ತುಜಾ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಮೂಲಕ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ. ತಿಂಗಳಿಗೆ ಎರಡ್ಮೂರು ಅಪಘಾತವಾಗುತ್ತವೆ. ರಸ್ತೆಗೆ ಸ್ಪೀಡ್ ಬ್ರೇಕರ್ ಹಾಕುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದ ಗ್ರಾಮಸ್ಥರು ಒಂದು ಗಂಟೆಗಳ ಕಾಲ ರಸ್ತೆ ರಾಜ್ಯ ಹೆದ್ದಾರಿ ಬಂದ್ ಮಾಡಿದರು. ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಟೆನ್ನಿಸ್ ಲೋಕದ ದಿಗ್ಗಜ ನೊವಾಕ್ ಜೊಕೊವಿಕ್ ಅವರು ಆಧುನಿಕ ಕ್ರಿಕೆಟ್ ಜಗತ್ತಿನ ದಿಗ್ಗಜ ವಿರಾಟ್ ಕೊಹ್ಲಿಯನ್ನು ಮುಕ್ತ ಕಂಠದಿಂದ ಗುಣಗಾನ ಮಾಡಿದ್ದಾರೆ. ವಿರಾಟ್ ಕೊಹ್ಲಿ ಅವರು ನನ್ನ ಬಗ್ಗೆ ಆಡುವ ಮಾತುಗಳನ್ನು ಕೇಳಲು ತುಂಬಾ ಸಂತೋಷವಾಗುತ್ತದೆ ಎಂದ ಸರ್ಬಿಯಾದ ತಾರೆ, ಕ್ರಿಕೆಟ್ ಲೋಕದ ಸ್ಟಾರ್ ಆಟಗಾರನ ಸಾಧನೆಗಳನ್ನು ಕೇಳಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದ್ದಾರೆ. “ನನಗೆ ವಿರಾಟ್ ಕೊಹ್ಲಿಯನ್ನು ನೇರವಾಗಿ ಭೇಟಿ ಆಗಬೇಕು ಎಂದು ತುಂಬಾ ಅನಿಸುತ್ತದೆ. ಕಳೆದ 10 ರಿಂದ 11 ವರ್ಷಗಳಲ್ಲಿ ನಾನು ಭಾರತಕ್ಕೆ ಒಮ್ಮೆ ಮಾತ್ರ ಭೇಟಿ ನೀಡಿದ್ದೇನೆ. ನವದೆಹಲಿಯಲ್ಲಿ 2 ದಿನಗಳ ಕಾಲ ನಡೆದಿದ್ದ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಂಡಿದ್ದೆ. ಅದು ನಾನು ಭಾರತದಲ್ಲಿ ಕಳೆದ ಸುದೀರ್ಘ ಸಮಯವಾಗಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಕಲೆ ಹಾಗೂ ಸಂಸ್ಕೃತಿ ಹೊಂದಿರುವ ದೇಶಕ್ಕೆ ಶೀಘ್ರವೇ ಭೇಟಿ ನೀಡಲು ಬಯಸಿದ್ದೇನೆ,” ಎಂದು ಹೇಳಿದ್ದಾರೆ. ನನಗೆ ಭಾರತದ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಹಲವರ ಜೊತೆಗೆ ವೈಯಕ್ತಿಕವಾಗಿ ವಿಶೇಷ…
ದಾವಣಗೆರೆ:- ಟ್ರ್ಯಾಕ್ಟರ್ಗೆ ಮಾರುತಿ ಓಮಿನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಜರುಗಿದೆ. 64 ವರ್ಷದ ರುದ್ರೇಶಪ್ಪ, 62 ವರ್ಷದ ಮಲ್ಲಿಕಾರ್ಜುನ್ ಹಾಗೂ 80 ವರ್ಷದ ಗಂಗಮ್ಮ ಮೃತ ದುರ್ದೈವಿಗಳು. ರತ್ನಮ್ಮ ಅವರಿಗೆ ತೀವ್ರ ಗಾಯಗಳಾಗಿವೆ. ಇವರು ವಾಹನದಲ್ಲಿ ಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಟೀಮ್ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ ಆಡಿದ 95 ಪಂದ್ಯಗಳಿಂದ ಒಟ್ಟು 490 ವಿಕೆಟ್ಗಳನ್ನು ಪಡೆಯುವ ಮೂಲಕ ದಿಗ್ಗಜ ಬೌಲರ್ ಆಗಿ ಬೆಳೆದುನಿಂತಿದ್ದಾರೆ. ಆದರೆ, ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಅಂಥದ್ದೇ ಛಾಪು ಮೂಡಿಸುವಲ್ಲಿ ಅಶ್ವಿನ್ ವಿಫಲರಾಗಿದ್ದಾರೆ. 37 ವರ್ಷದ ಅನುಭವಿ ಆಟಗಾರ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ಆಡಿದ್ದರು. ಲೀಗ್ ಹಂತದಲ್ಲಿ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಆಡಿದ್ದ ಅಶ್ವಿನ್ 34 ರನ್ ಕೊಟ್ಟು 1 ವಿಕೆಟ್ ಪಡೆದಿದ್ದರು. ಬಳಿಕ ಅವರನ್ನು ಯಾವುದೇ ಪಂದ್ಯಕ್ಕೆ ಆಯ್ಕೆ ಮಾಡಲಾಗಲಿಲ್ಲ. “ಅಶ್ವಿನ್ ಒಬ್ಬ ದಿಗ್ಗಜ ಬೌಲರ್ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೂ ಅವರು ಒಡಿಐ ಮತ್ತು ಟಿ20-ಐ ಕ್ರಿಕೆಟ್ ಆಡಲು ನಾಲಾಯಕ್ ಅವರ ಬ್ಯಾಟಿಂಗ್ ಮೂಲಕ ಕೊಡುಗೆ ಏನಿದೆ? ಒಬ್ಬ ಫೀಲ್ಡರ್ ಆಗಿ ಅವರು ಎಷ್ಟು ಪರಿಣಾಮಕಾರಿ? ಟೆಸ್ಟ್ ತಂಡದಲ್ಲಿ ಖಂಡಿತಾ…
ಡಾರ್ಲಿಂಗ್ ಪ್ರಭಾಸ್ (Prabhas) ತಮ್ಮ ಹೆಸರಿಗೆ ಹೊಸ ಅಕ್ಷರ ಸೇರಿಸಿಕೊಂಡ್ರ? ಸಿನಿಜರ್ನಿ ಮತ್ತಷ್ಟು ಸೂಪರ್ ಆಗ್ಲಿ ಅಂತ ಸಂಖ್ಯಾಶಾಸ್ತ್ರ ಫಾಲೋ ಮಾಡ್ತಿದ್ದಾರ? ಪ್ರಭಾಸ್ ಹೆಸರಿನಲ್ಲಿ ಆಗಿರುವ ಬದಲಾವಣೆ ಏನು? ಈ ಬದಲಾವಣೆ ವರ್ಕೌಟ್ ಆಗುತ್ತಾ? ಇಲ್ಲಿದೆ ಮಾಹಿತಿ. ‘ಸಲಾರ್’ (Salaar) ಸಂಭ್ರಮದಲ್ಲಿರುವ ಡಾರ್ಲಿಂಗ್ ಪ್ರಭಾಸ್ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಸಂಭಾವನೆ ಕೂಡ ಜಾಸ್ತಿ ಮಾಡಿಕೊಂಡಿದ್ದಾರೆ ಅನ್ನೋ ಟಾಕ್ ಕೂಡ ಶುರುವಾಗಿದೆ. ಸಂಪಾದನೆ ಬಗ್ಗೆ ಆಮೇಲೆ ಮಾತಾಡೋಣ ಸದ್ಯಕ್ಕೆ ಸೌಂಡ್ ಮಾಡ್ತಿರೋ ವಿಚಾರ ‘ರಾಜಾ ಸಾಬ್’ (Raja Saab) ಸಿನಿಮಾದ ಟೈಟಲ್ ಪೋಸ್ಟರ್ನಲ್ಲಿ ಪ್ರಭಾಸ್ ಹೆಸರು ಜೊತೆಗೆ ಮತ್ತೊಂದು ಎಸ್ ಎನ್ನುವ ಅಕ್ಷರ ಸೇರಿಕೊಂಡಿದೆ. ಈ ಎಸ್ ಅಕ್ಷರ ಬಹಳಷ್ಟು ಪ್ರಶ್ನೆಗಳನ್ನ ಹುಟ್ಟು ಹಾಕಿದೆ. ಡಾರ್ಲಿಂಗ್ ಸಂಖ್ಯಾಶಾಸ್ತ್ರ ಫಾಲೋ ಮಾಡ್ತಿದ್ದಾರೆ ಎನ್ನುವ ಡೌಟ್ ಶುರುವಾಗಿದೆ. ಮಾರುತಿ ನಿರ್ದೇಶನದ ‘ರಾಜಾಸಾಬ್’ ಫಸ್ಟ್ ಲುಕ್ ಪೋಸ್ಟರ್ ಜೊತೆಗೆ ಟೀಸರ್ ಕೂಡ ರಿಲೀಸ್ ಆಗಿದೆ. ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ಗೆ ಮುಂದಿನ ಸಿನಿಮಾ ಬಗ್ಗೆ ಪ್ರಭಾಸ್ ಅಪ್ಡೇಟ್…
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಚಳಿ ಆರಂಭವಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಬಿಸಿಲಿರಲಿದ್ದು ಒಣಹವೆ ಮುಂದುವರೆಯಲಿದೆ. ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾಖಲಾಗಿದೆ.
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಎಂಗೇಜ್ ಆಗಲಿದ್ದಾರೆ ಎನ್ನುವ ಮಾಹಿತಿಯ ಬೆನ್ನಲ್ಲೇ ಈ ಜೋಡಿ ವಿಯೆಟ್ನಾಂನಲ್ಲಿ (Vietnam) ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ. ಅವರ ನಿಶ್ಚಿತಾರ್ಥ ಸುದ್ದಿಗೆ ಮತ್ತಷ್ಟು ಬಲ ಬಂದಿದೆ. ವಿಯೆಟ್ನಾಂನಲ್ಲಿ ಇಬ್ಬರೂ ಮಸ್ತ್ ಮಜಾ ಮಾಡ್ತಿರೋ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ವಿಜಯ್ ದೇವರಕೊಂಡ (Vijay Devarakonda) ಹೆಸರು ತಳುಕು ಹಾಕಿಕೊಂಡಿರೋದು ಇದೇ ಮೊದಲ ಬಾರಿ ಏನಲ್ಲ. ಆದರೆ, ಈ ಬಾರಿಯಂತೂ ಅವರು ಗ್ಯಾರಂಟಿ ಜೊತೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್ಮೆಂಟ್ (Engagement) ಮಾಡಿಕೊಳ್ತಿದ್ದಾರೆ ಎನ್ನುವುದು ತಾಜಾ ಸುದ್ದಿ. ‘ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ.
ಬೆಂಗಳೂರು:- ತುಮಕೂರು ಬಿಜೆಪಿ ಟಿಕೆಟ್ಗೆ ಮಾಜಿ ಸಚಿವ ಮಾಧುಸ್ವಾಮಿ ಪೈಪೋಟಿ ನಡೆಸಿದ್ದಾರೆ. ಮಾಜಿ ಸಚಿವ ವಿ ಸೋಮಣ್ಣ ಸಹ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಹೀಗಾಗಿ ಈ ವಿದ್ಯಮಾನ ರಾಜ್ಯ ಬಿಜೆಪಿಯಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಸೋಮಣ್ಣ ಕಳೆದ ವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅವರು ಹೈಕಮಾಂಡ್ನಿಂದ ಲೋಕಸಭೆ ಟಿಕೆಟ್ಗೆ ಬೇಡಿಕೆ ಇಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ರಾಜ್ಯಸಭಾ ಟಿಕೆಟ್ ಕೇಳಿರುವುದಾಗಿ ಹೇಳಿದ್ದರು. ಆದರೆ, ಕಠಿಣವಾದ ಮೂರು ಲೋಸಕಭೆ ಕ್ಷೇತ್ರಗಳನ್ನು ಕೊಡಿ ಗೆಲ್ಲಿಸಿಕೊಂಡು ಬರುವೆ ಎಂದು ಹೈಕಮಾಂಡ್ಗೆ ತಿಳಿಸಿದ್ದರು. ಸೋಮಣ್ಣ ಘೋಷಣೆ ಬಳಿಕ ಮಾಧುಸ್ವಾಮಿ ಬಿಜೆಪಿಯಿಂದ ಲೋಕಸಭೆ ಪಡೆಯುವ ಆಕಾಂಕ್ಷಿಯಾಗಿದ್ದಾರೆ. ಕೆಲವು ವರದಿಗಳ ಪ್ರಕಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಮಾಧುಸ್ವಾಮಿಗೆ ಬೆಂಬಲ ನೀಡಿದ್ದಾರೆ. ಮಾಜಿ ಸಚಿವರು ಟಿಕೆಟ್ಗಾಗಿ ಹರಸಾಹಸ ಪಡುತ್ತಿದ್ದರೂ ಬಿಜೆಪಿ ಮುಖಂಡರಿಗೇ ತುಮಕೂರಿನಿಂದ…
ಸ್ಯಾಂಡಲ್ವುಡ್ ನಟ ಸದ್ಯ ‘ಮ್ಯಾಕ್ಸ್’ (Max Film) ಸಿನಿಮಾ ಮತ್ತು ಬಿಗ್ ಬಾಸ್ ಶೋ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ‘ಮ್ಯಾಕ್ಸ್’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್ ಸಿಕ್ಕಿರಲಿಲ್ಲ. ಇದೀಗ ಚಿತ್ರದ ಕೆಲಸ ಎಲ್ಲಿಯವರೆಗೂ ಬಂತು ಎಂದು ಸುದೀಪ್ (Sudeep) ಮಾಹಿತಿ ಬೆಳ್ಳಂಬೆಳಿಗ್ಗೆ ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇನೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್ಡೇಟ್ ಕೇಳುತ್ತಿದ್ದರು. ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ ಪೂರ್ಣಗೊಳ್ಳದೆ ಆ ಬಗ್ಗೆ ಅಪ್ಡೇಟ್ ನೀಡೋದು ಹೇಗೆ ಅನ್ನೋದು ಸುದೀಪ್ ಅವರ ಪ್ರಶ್ನೆ. ನವೆಂಬರ್ನಲ್ಲಿ ಮಳೆಯಿಂದ ಶೂಟ್…