Author: AIN Author

ಬೆಂಗಳೂರು: ನಗರದ ಮುಖ್ಯರಸ್ತೆಯ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಜಾಗರೂಕತೆಯಿಂದ ಭಾರಿ ಅಪಾಯದ ಘಟನೆಯೊಂದು ತಪ್ಪಿದಂತಾಗಿದೆ. ದಾಸನಪುರ ಡಿಪೋದಿಂದ ನೆಲಮಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದ ಬಿಎಂಟಿಸಿ ಬಸ್‌ ನಗರದ ಜೆಪಿ ಆಸ್ಪತ್ರೆ ಸಮೀಪ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಇನ್ನೂ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಭಯಗೊಂಡಿದ್ದಾರೆ. ಬಸ್‌ ನಲ್ಲಿದ್ದ ಜನರು ಕೂಗಾಡಿದ್ದಾರೆ, ತಕ್ಷಣ ಬಸ್‌ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿ ನಂತರ ಹಿಂದೆ ಬರುತ್ತಿದ್ದ ಬಸ್‌ನಲ್ಲಿದ್ದ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ನಂದಿಸುವ ಮೂಲಕ ಜಾಗರೂಕತೆಯಿಂದ ಭಾರಿ ಅಪಾಯವನ್ನು ತಪ್ಪಿಸಿದ್ದಾರೆ. ಅಲ್ಲದೇ ಬೆಂಕಿ ಅವಘಡದ ಘಟನೆಯಲ್ಲಿಅದೃಷ್ಟವಶಾತ್‌ ಯಾರಿಗೂ ತೊಂದರೆ ಆಗಿಲ್ಲ. ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿದು ಜನರು ಹೆಚ್ಚಾಗಿ ಸೇರಿಕೊಂಡ ಪರಿಣಾಮ ಸ್ಥಳಕ್ಕೆ ಟೌನ್‌ ಇನ್‌ಸ್ಪೆಕ್ಟರ್‌ ಶಶಿಧರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದೀಪಾವಳಿ ಸಂಭ್ರಮ ಭಾನುವಾರ ರಂಗೇರಿತ್ತು. ವಿಶ್ವಕಪ್ ಕೊನೆಯ ಲೀಗ್ ಪಂದ್ಯ ನೆದರ್ಲ್ಯಾಂಡ್ಸ್ ಮತ್ತು ಭಾರತದ ನಡುವೆ ಭಾನುವಾರ ಪಂದ್ಯ ನಡೆದಿದೆ. ವಿರಾಟ್ ಕೊಹ್ಲಿ ‘ಶತಕಗಳ ಅರ್ಧಶತಕ’ ದಾಖಲೆ ಮಾಡಲಿಲ್ಲ. ಆದರೆ ಮೂವರು ಬ್ಯಾಟರ್‌ಗಳ ಅರ್ಧಶತಕ ಮತ್ತು ಎರಡು ಶತಕಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ದೊರೆಯಿತು. ಅದರಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಅವರ ಮಿಂಚಿನ ಶತಕವೂ ಒಂದಾಗಿತ್ತು. ಇದಲ್ಲದೇ ಆತಿಥೇಯ ಬಳಗದ ಒಂಬತ್ತು ಆಟಗಾರರ ಬೌಲಿಂಗ್ ನೋಡುವ ಅವಕಾಶವೂ ದೊರೆಯಿತು! ಒಟ್ಟಾರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದೀಪಾವಳಿ ಸಂಭ್ರಮಕ್ಕೆ ರಂಗೇರಿತು. ಪಂದ್ಯದಲ್ಲಿ ಒಟ್ಟು 19 ಸಿಕ್ಸರ್, 56 ಬೌಂಡರಿಗಳು ಪಟಾಕಿಗಳಂತೆ ಸಿಡಿದವು. ಮೊದಲೇ ನಿರೀಕ್ಷಿಸಿದಂತೆ ಭಾರತ ತಂಡವು 160 ರನ್‌ಗಳಿಂದ ಜಯಿಸಿತು. ಇದರೊಂದಿಗೆ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಭಾರತವು ಅಜೇಯವಾಗುಳಿಯಿತು. ಇನ್ನೆರಡು ದಿನಗಳ ನಂತರ ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ರೋಹಿತ್ ಶರ್ಮಾ ಬಳಗವು ಎದುರಿಸಲಿದೆ ಇಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಬ್ಯಾಟಿಂಗ್…

Read More

 ಸ್ಪಿನ್ ಬೌಲಿಂಗ್ ತಂತ್ರವನ್ನು ಮರು ಮೌಲ್ಯಮಾಪನ ಮಾಡುವ ಬಗ್ಗೆ ನಾನು ನೀಡಿದ್ದ ಸಲಹೆಯನ್ನು ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಆಝಮ್‌ ಹಾಗೂ ಪಿಸಿಬಿ ಕ್ರಿಕೆಟ್‌ ನಿರ್ದೇಶದ ಮಿಕ್ಕಿ ಆರ್ಥರ್‌ ಅವರು ನಿರಾಕರಿಸಿದ್ದರು ಶನಿವಾರ ಇಂಗ್ಲೆಂಡ್‌ ವಿರುದ್ಧ ಪಾಕಿಸ್ತಾನ ತಂಡ 93 ರನ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಸ್‌ ರೇಸ್‌ನಿಂದ ಅಧಿಕೃತವಾಗಿ ಹೊರ ನಡೆಯಿತು. ಒಟ್ಟಾರೆ ಆಡಿದ್ದ 9 ಪಂದ್ಯಗಳಿಂದ 4ರಲ್ಲಿ ಗೆಲುವು ಪಡೆಯುವ ಮೂಲಕ ಬಾಬರ್‌ ಆಝಮ್ ಪಡೆ 5ನೇ ಸ್ಥಾನದೊಂದಿಗೆ ಏಕದಿನ ವಿಶ್ವಕಪ್ ಟೂರ್ನಿಯ ಅಭಿಯಾನವನ್ನು ಮುಗಿಸಿತು. ಸಂದರ್ಶನವೊಂದರಲ್ಲಿ ಮಾತನಾಡಿದ ಮಿಸ್ಬಾ ಉಲ್‌ ಹಕ್‌, “ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಮುಖ್ಯಸ್ಥ ಝಕಾ ಅಶ್ರಫ್‌ ಅವರು ಏಕದಿನ ವಿಶ್ವಕಪ್‌ ನಿಮಿತ್ತ ನನ್ನ ಮತ್ತು ಮೊಹಮದ್‌ ಹಫೀಝ್‌ ಬಳಿ ಸಲಹೆ ಕೇಳಿದ್ದರು. ಅದರಂತೆ ನಾನು, ಏಷ್ಯಾ ಕಪ್‌ಗೂ ಮುನ್ನ ಶದಾಬ್‌ ಖಾನ್‌ ಮತ್ತು ಮೊಹಮ್ಮದ್‌ ನವಾಝ್‌ ಅವರ ಜೊತೆ ಮತ್ತೊಬ್ಬ ಸ್ಪಿನ್ನರ್‌ ಅಗತ್ಯವಿದೆ ಎಂದು ಹೇಳಿದ್ದೆ,”…

Read More

ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಅತ್ಯಾಚಾರವೆಸಗಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಲಾಲೋಟ್ ಪ್ರದೇಶದಲ್ಲಿ ನಡೆದಿದೆ‌. ಭೂಪೇಂದ್ರ ಸಿಂಗ್ ಎಂಬ ಸಬ್ ಇನ್ಸ್‌ಪೆಕ್ಟರ್‌ 4 ವರ್ಷದ ಬಾಲಕಿಯನ್ನು ಮಧ್ಯಾಹ್ನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಸ್ಥಳೀಯ ನಿವಾಸಿಗಳು ಥಳಿಸಿದ್ದಾರೆ. ಬಳಿಕ ರಾಹುವಾಸ್ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್, ”ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಮಧ್ಯಾಹ್ನ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ”ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‌ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು…

Read More

ನಮ್ಮ ಆಹಾರ ಸೇವನೆಯಲ್ಲಿ ಕೊಂಚ ವ್ಯತ್ಯಾಸವಾದರೂ ಅದರ ಅದು ಹೊಟ್ಟೆಯ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಹೆಚ್ಚು ಸೇವಿಸದರೂ ಕಷ್ಟ, ಕಡಿಮೆ ಸೇವಿಸಿದರೂ ಕಷ್ಟ. ಹೀಗಾಗಿ ಸಮತೋಲಿತ ಆಹಾರವನ್ನು ಸೇವನೆ ಮಾಡುವುದು ಮುಖ್ಯವಾಗಿರುತ್ತದೆ.  ಆದರೂ ಕೆಲವೊಮ್ಮೆ ತಿಂದ ಆಹಾರ ಅಜೀರ್ಣವಾಗಿ ಹೊಟ್ಟೆ ನೋವು ಕಾಡಬಹುದು. ಅಜೀರ್ಣವಾದರೆ ಹೊಟ್ಟೆ ಮುರಿಯುವುದು, ವಾಕರಿಕೆಯಂತಹ ಸಮಸ್ಯೆಗಳೂ ಉಂಟಾಗುತ್ತದೆ. ಇದಕ್ಕೇನು ಭಯಪಡುವ ಅಗತ್ಯವಿಲ್ಲ, ಮನೆಮದ್ದಿನಿಂದಲೇ ಶಮನ ಮಾಡಿಕೊಳ್ಳಬಹುದು. ಸೋಂಪಿನ ಕಾಳುಗಳು ಊಟದ ಬಳಿಕ ದಿನನಿತ್ಯ ಸೋಂಪಿನ ಕಾಳುಗಳನ್ನು ಸೇವನೆ ಮಾಡುವುದರಿಂದ ಅಜೀರ್ಣವನ್ನು ಶಮನ ಮಾಡಿಕೊಳ್ಳಬಹುದಾಗಿದೆ. ಇದು ಹೊಟ್ಟೆ ಸೆಳೆತ, ವಾಕರಿಕೆ ಮತ್ತು ಉಬ್ಬುವಿಕೆಯನ್ನು ಸಹ ಸರಾಗಗೊಳಿಸುತ್ತದೆ. ಸೋಂಪಿನ ಕಾಳುಗಳು ಫೆನ್‌ಕೋನ್ ಮತ್ತು ಎಸ್ಟ್ರಾಗೋಲ್ ಎಂಬ ತೈಲ ಸಂಯುಕ್ತಗಳನ್ನು ಹೊಂದಿದ್ದು ಅದು ಕರುಳಿನ ಅನಿಲವನ್ನು ಹೊರಹಾಕಲು ಸಹಾಯ ಮಾಡುತ್ತದೆ, ಜೀರ್ಣಕಾರಿ ರಸಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಆಂಟಿಸ್ಪಾಸ್ಮೊಡಿಕ್ ಗುಣಲಕ್ಷಣಗಳನ್ನು ಹೊಂದಿದೆ. ಅಡುಗೆ ಸೋಡ ಅಡುಗೆ ಸೋಡಾವು ಅಜೀರ್ಣವನ್ನು ಸರಿಪಡಿಸುತ್ತದೆ. ಅಲ್ಲದೆ ಹೊಟ್ಟೆಯುಬ್ಬರ, ಗ್ಯಾಸ್ಟ್ರಿಕ್‌ ಸಮಸ್ಯೆಯನ್ನೂ ನಿವಾರಣೆ ಮಾಡುತ್ತದೆ. ಅದಕ್ಕಾಗಿ…

Read More

ಪ್ರವಾಸ ಹೋಗುವುದೆಂದರೆ ಯಾರಿಗಿಷ್ಟ ಇರೋದಿಲ್ಲ ಹೇಳಿ .. ಅದು ಬೇರೆ ಬೇರೆ ಹೊಸ ಜಾಗ ನೋಡೋದು ಅಂದ್ರೆ ತುಂಬಾ ಜನಕ್ಕೆ ಏನೋ ಖುಷಿ . ದೇಶ ಸುತ್ತಿನೋಡು ಕೋಶ ಓದಿ ನೋಡು ಅನ್ನುವ ಗಾದೆ ಮಾತಿನ ಹಾಗೆ ದೇಶ ವಿದೇಶಗಳಿಗೆ ಹೋಗೋದು ಅಂದ್ರೆ ಕೆಲವರಿಗೆ ಇಷ್ಟ. ನಾವು ನಿಮಗೆ ಹೇಳ್ತೀವಿ ನೋಡಿ ಅತ್ಯಂತ ಸುಂದರ ಪ್ರವಾಸಿ ತಾಣಗಳ ಬಗ್ಗೆ ತಿಳಿಯೋಣ. ಸಾಂಪ್ರದಾಯಿಕ ಪ್ರವಾಸಿ ಆಕರ್ಷಣೆಗಳು ಒಂದು ಕಾರಣಕ್ಕಾಗಿ ಜನಪ್ರಿಯವಾಗಿವೆ. ಐಫೆಲ್ ಟವರ್‌ನ ಮುಂದೆ ಫೋಟೋ ಸ್ನ್ಯಾಪ್ ಮಾಡುವುದು ಅಥವಾ ಐಸ್‌ಲ್ಯಾಂಡ್‌ನ ಬ್ಲೂ ಲಗೂನ್‌ನಲ್ಲಿ ಸ್ನಾನ ಮಾಡುವುದು ಸ್ವಲ್ಪ ಕ್ಲೀಷೆ ಆಗಿರಬಹುದು, ಆದರೆ ಅಂತಿಮವಾಗಿ ಪೋಸ್ಟ್‌ಕಾರ್ಡ್‌ನಲ್ಲಿ ಬದಲಿಗೆ ಪ್ರಖ್ಯಾತ ಹೆಗ್ಗುರುತನ್ನು ಅಥವಾ ನೈಸರ್ಗಿಕ ಅದ್ಭುತವನ್ನು ವೈಯಕ್ತಿಕವಾಗಿ ನೋಡುವುದರಲ್ಲಿ ಏನಾದರೂ ಶಕ್ತಿಯುತವಾಗಿದೆ ಚೀನಾ: ಚೀನಾದ ಮಹಾಗೋಡೆ 13,000 ಮೈಲುಗಳಷ್ಟು ಉದ್ದವಿರುವ, ಚೀನಾದ ಮಹಾಗೋಡೆಯು UNESCO ವಿಶ್ವ ಪರಂಪರೆಯ ತಾಣವಾಗಿದೆ ಮತ್ತು 2007 ರಲ್ಲಿ ವಿಶ್ವದ ಹೊಸ ಏಳು ಅದ್ಭುತಗಳಲ್ಲಿ ಒಂದಾಗಿ ಆಯ್ಕೆಯಾಗಿದೆ. ಗ್ರೇಟ್ ವಾಲ್‌ನ…

Read More

ಮುಂಬೈ: ಅಕ್ಟೋಬರ್ 5ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ. ಆರಂಭದಿಂದ ಇಲ್ಲಿಯವರೆಗೂ ಒಂದು ಪಂದ್ಯವನ್ನು ಸೋಲದೆ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆಯುವಲ್ಲಿ ಪಾಕಿಸ್ತಾನ ವಿಫಲವಾಗಿದ್ದು, ಮನೆ ಕಡೆ ಹೋಗುವುದು ಖಚಿತವಾಗಿದೆ. ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ 337 ರನ್​​ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶವನ್ನು ತಪ್ಪಿಸಿಕೊಂಡಿತು. ಭಾರತ ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ. ಆದಾಗ್ಯೂ, ಈ ಪಂದ್ಯ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವ ಭಾರತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನವೆಂಬರ್ 15ರಂದು ಮುಂಬೈಯಲ್ಲಿ ಭಾರತ Vs ನ್ಯೂಜಿಲೆಂಡ್ ವಿರುದ್ಧ ಮೊದಲ ಸೆಮಿಫೈನಲ್ ಪಂದ್ಯ ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ನವೆಂಬರ್ 16 ರಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ Vs ಆಸ್ಟ್ರೇಲಿಯಾ ನಡುವೆ…

Read More

ಬೆಂಗಳೂರು:- ದೀಪಾವಳಿ ಹಬ್ಬದ ದಿನದಂದೆ ಫರ್ನೀಚರ್ ಶೋ ರೂಂಗೆ ಬೆಂಕಿ ಬಿದ್ದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಬೆಂಗಳೂರು ಹೊರಮಾವು ಔಟರ್ ರಿಂಗ್ ರೋಡ್ ನಲ್ಲಿನ ಸ್ಟಾನ್ಲಿ ಫರ್ನೀಚರ್ ಶೋರೂಂ ನಲ್ಲಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ‌ ಬಿಲ್ಡಿಂಗ್ ನಲ್ಲಿ ಮೂರು ಕಂಪನಿಗಳಿದ್ದವು. ಈ ಪೈಕಿ ಫರ್ನೀಚರ್ ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ನೆಲಮಹಡಿ ಹಾಗೂ ಮೊದಲನೇ ಮಹಡಿಯಲ್ಲಿ ಫರ್ನೀಚರ್ ಶೋರೂಂ ಇದ್ದು, ರಾತ್ರಿ 12 ಗಂಟೆ ಸುಮಾರಿಗೆ ಘಟನೆ ಜರುಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮೂವರು ಸೆಕ್ಯೂರಿಟಿ ಗಾರ್ಡ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನ ಅಗ್ನಿಶಾಮಕದಳ ಸಿಬ್ಬಂಧಿ ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಫರ್ನಿಚರ್ ಶೋರೂಂ ಸಂಪೂರ್ಣ ಭಸ್ಮವಾಗಿದೆ. ಉಳಿದಂತೆ ಕೋಚಿಂಗ್ ಸೆಂಟರ್ ಹಾಗೂ ಐಟಿ ಕಂಪನಿ ಸಣ್ಣಪುಟ್ಟ ವಸ್ತುಗಳು ಬೆಂಕಿಗೆ ಆಹುತಿ ಆಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಢ ನಡೆದಿರುವ ಶಂಕೆ ವ್ಯಕ್ತವಾಗಿದೆ. ಎರಡನೇ ಮಹಡಿಯಲ್ಲಿ ಕಾಮೆಡ್ ಕೋಂಚಿಂಗ್ ಸೆಂಟರ್…

Read More

ಬೆಂಗಳೂರು:- ಹೆಚ್ ಡಿಕೆಗೂ, ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ ಎಂದು DCM ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ?. ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ” ಎಂದು ಪ್ರಶ್ನಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಹೀಗೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ. ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತನೆಯೇ ಇಲ್ಲ. ಪಾಪ ಅವರಿಗೆ ಅವರ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರ ಬಳಿ ಕೇಳಿ ತಿಳಿದುಕೊಳ್ಳಬೇಕು” ಎಂದು ತಿರುಗೇಟು ನೀಡಿದ್ದಾರೆ.

Read More

ಬೆಂಗಳೂರು:-;ವಯಸ್ಸಾದ ತಂದೆ-ತಾಯಿ ನೋಡಿಕೊಳ್ಳುವುದು ಮಕ್ಕಳ ಜವಬ್ದಾರಿ ಎಂದು ಹೈಕೋರ್ಟ್ ಹೇಳಿದೆ. ಜೀವನದ ಸಂಧ್ಯಾಕಾಲದಲ್ಲಿರುವ ಪೋಷಕರನ್ನು ಆರೈಕೆ ಮಾಡುವ ಜವಾಬ್ದಾರಿಯನ್ನು ಕಾನೂನು, ಧರ್ಮ ಮತ್ತು ನೈತಿಕತೆಯು ಮಕ್ಕಳ ಮೇಲೆ ಹೇರುತ್ತದೆ. ಪೋಷಕರ ಆಸ್ತಿಯನ್ನು ಮಕ್ಕಳು ಉಡುಗೊರೆಯಾಗಿ ಪಡೆದಾಗ ಈ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ತಂದೆಯಿಂದ ಆಸ್ತಿಯನ್ನು ಗಿಫ್ಟ್‌ ಡೀಡ್‌ ಆಗಿ ಪಡೆದಿರುವುದನ್ನು ಅಮಾನ್ಯಗೊಳಿಸಿದ್ದ ತುಮಕೂರು ವಲಯದ ‘ಪೋಷಕರ ಕಲ್ಯಾಣ ಮತ್ತು ಹಿರಿಯ ನಾಗರಿಕರ ನಿರ್ವಹಣೆ ಕಾಯ್ದೆಯಡಿಯ ನ್ಯಾಯಾಧಿಕರಣ’ದ ಉಪ ವಿಭಾಗಾಧಿಕಾರಿಯ ಆದೇಶ ಮತ್ತು ಅದನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ಪುರಸ್ಕರಿಸಿದೆ. ವಯಸ್ಸಾದ ತಂದೆ ಮತ್ತು ತಾಯಿಯನ್ನು ನೋಡಿಕೊಳ್ಳುವುದು ಮಕ್ಕಳ ಹೊಣೆಗಾರಿಕೆಯಾಗಿದೆಯೇ ಹೊರತು ದಯೆ-ದಾನದ ವಿಚಾರವಲ್ಲ. ವೃದ್ಧಾಪ್ಯ ತಂದೆ-ತಾಯಿಯನ್ನು ಆರೈಕೆ ಮಾಡುವುದು ಮಕ್ಕಳ ಶಾಸನಬದ್ಧ ಜವಾಬ್ದಾರಿ. ‘ರಕ್ಷಂತಿ ಸ್ಥಾವಿರೇ ಪುತ್ರ’ ಎಂದು ಸಹಸ್ರಾರು ವರ್ಷಗಳಿಂದ…

Read More