ಹಾಸನ:- ಜೆಡಿಎಸ್-ಬಿಜೆಪಿ ನಿಜವಾದ ಬಂಡವಾಳ ಶೀಘ್ರ ಹೊರಬರಲಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮುಂದೆ ಬರಲಿರುವ ಸಂಸದರ ಚುನಾವಣೆ ಹೊತ್ತಿಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ನಿಜವಾದ ಬಂಡವಾಳ ಹೊರಗೆ ಬರಲಿದೆ ಎಂದರು. ಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆ ಎರಡು ಪಕ್ಷಗಳ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ. ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದೆ. ಆದರೆ ಕೇಂದ್ರಸರ್ಕಾರ ರಾಜ್ಯಕ್ಕೆ ಅಗತ್ಯ ನೆರವನ್ನು ನೀಡುತ್ತಿಲ್ಲ ಎಂದು ದೂರಿದರು. ಪ್ರಧಾನಿ ನರೇಂದ್ರ ಮೋದಿಯವರು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬರದ ಸಂಕಷ್ಟಕ್ಕೆ ಈಡಾಗಿರುವ ಜನರ ನೋವನ್ನು ಕೇಳುತ್ತಿಲ್ಲ. ಬದಲಿಗೆ ಐದು ರಾಜ್ಯದ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಆರೋಪ ಮಾಡುವುದು ಬಿಟ್ಟರೆ ದೇಶದ ಅಭಿವೃದ್ಧಿಯ ಕಡೆ ಗಮನ ಇಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದಲ್ಲಿಯೇ ಭಿನ್ನಾಭಿಪ್ರಾಯ ಇದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆರೋಪಕ್ಕೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಎಲ್ಲ ಪಕ್ಷದಲ್ಲಿಯೂ ಭಿನ್ನಾಭಿಪ್ರಾಯ ಸಾಮಾನ್ಯ. ನಮ್ಮಲ್ಲಿ ಯಾವುದೇ…
Author: AIN Author
ಹುಬ್ಬಳ್ಳಿ:- ರಾಜ್ಯದಲ್ಲಿ ನಾಲ್ಕು ಬಣಗಳ ಸಮ್ಮಿಶ್ರ ಸರ್ಕಾರ ಇದೆ ಎಂದು ಮುರುಗೇಶ ನಿರಾಣಿ ಟೀಕೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ ಅವರ ಬಣಗಳ ಸಮ್ಮಿಶ್ರ ಸರ್ಕಾರ ಇದೆ’ ಎಂದರು. ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ಜನಾದೇಶ ಪಡೆದಿದೆ. ಈ ಸರ್ಕಾರ ಐದು ವರ್ಷ ಪೂರೈಸಬೇಕು ಎಂಬುದು ನಮ್ಮ ಅಪೇಕ್ಷೆ. ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಳಜಗಳದಿಂದಾಗಿ ಸರ್ಕಾರ ಬೀಳುವ ಸಾಧ್ಯತೆ ಇದೆ. ಕಾದು ನೋಡೋಣ’ ಎಂದರು. ‘ವಿಜಯೇಂದ್ರ ಅವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಕಾರ ನೀಡುತ್ತೇವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡವರನ್ನು ಮನವೊಲಿಸಿ ಪಕ್ಷ ಸಂಘಟನೆ ಮಾಡುತ್ತೇವೆ’ ಎಂದು ಹೇಳಿದರು.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಇಂದು ನಡೆದ ವಿಶ್ವಕಪ್ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿದೆ. ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ ದ್ವಿಶತಕ ಜೊತೆಯಾಟ ಹಾಗೂ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ 50 ಓವರ್ಗಳಲ್ಲಿ 410 ರನ್ ಗಳಿಸಿ ಎದುರಾಳಿ ನೆದರ್ಲೆಂಡ್ಸ್ ತಂಡಕ್ಕೆ 410 ರನ್ಗಳ ಗುರಿ ನೀಡಿತ್ತು. ಇದನ್ನು ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡವು ಭಾರತ ತಂಡದ ಬೌಲರ್ ಗಳ ದಾಳಿಗೆ ತತ್ತರಿಸಿ ಹೋಗಿತ್ತು. ಕೇವಲ 47 ಓವರ್ ಗಳಲ್ಲಿ 10 ವಿಕೆಟ್ ಗಳ ನಷ್ಟಕ್ಕೆ 250 ರನ್ ಗಳನ್ನು ಮಾತ್ರ ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಭಾರತ ತನ್ನ ಗೆಲುವಿನ ಓಟ ಮುಂದುವರಿಸಿದೆ.
ಬೆಂಗಳೂರು:- ಕಾಂಗ್ರೆಸ್ಗೆ ತನ್ನ ಶಾಸಕರನ್ನೇ ಸಮಾಧಾನ ಮಾಡಲಾಗುತ್ತಿಲ್ಲ ಎಂದು ಹೇಳುವ ಮೂಲಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು ಈಗ ಇರುವ ಕಾಂಗ್ರೆಸ್ಸಿನವರನ್ನೇ ಸಮಾಧಾನವಾಗಿ- ಇಟ್ಟುಕೊಳ್ಳಲು ಆಗ್ತಿಲ್ಲ. ಒಬ್ಬ ಸಚಿವರು ದುಬೈ ಅಂತಾರೆ, ಅದಕ್ಕೂ ಮುಂಚೆ ಮತ್ತೊಬ್ಬರು ಮೈಸೂರಿಗೆ ಅಂತ ಹೇಳ್ತಾರೆ. ಅವರನ್ನೇ ಸಮಾಧಾನವಾಗಿ ಇಟ್ಟುಕೊಳ್ಳಲು ಆಗದವರು ಪಕ್ಷಕ್ಕೆ ಕರೆದುಕೊಂಡವರಿಗೆ ಏನು ಕೊಡುತ್ತಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದರು. ನ.15ರ ಬಳಿಕ ಬೇರೆ ಪಕ್ಷದಿಂದ ಕಾಂಗ್ರೆಸ್ಗೆ ಬರ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವಾಗಲೂ ಸರ್ಕಾರ ಬಂದಾಗ ಇನ್ ಕಮಿಂಗೂ, ಸರ್ಕಾರದ ಅವಧಿ ಮುಗಿಯಲು ಬಂದಾಗ ಔಟ್ ಗೋಯಿಂಗ್. ಇದು ಸಾಮಾನ್ಯ ಸಂಗತಿ ಅಲ್ವಾ. ಹೊಸದರಲ್ಲಿ ಒಂದಷ್ಟು ಜನ ಪಿಕ್ಚರ್ ಚೆನ್ನಾಗಿರಬಹುದು ಎಂದು ಟಿಕೆಟ್ ತೆಗೆದುಕೊಳ್ಳುತ್ತಾರೆ. ಆಮೇಲೆ “ಇದು ಏನ್ಲಾ ವೇಸ್ಟ್ ಕಣ್ಲಾ ಬಂದಿದ್ದೇ ವೇಸ್ಟ್” ಅಂತ ಅರ್ಧಕ್ಕೆ ಎದ್ದು ಬರ್ತಾರೆ. ಅಲ್ಲಿದ್ದವರೇ ಅಸಮಾಧಾನದಿಂದ ಹೊರಗೆ ಬರ್ತಿದ್ದಾರೆ. ಹೋಗುವವರು ಒಳಗೆ ಹೋಗಿ ಏನು ಮಾಡ್ತಾರೆ ಎಂದು ಪ್ರಶ್ನಿಸಿದರು.…
ಹಾಸನ:- ರಾಜಕಾರಣದಲ್ಲಿ ಕಾಫಿ, ಡಿನ್ನರ್ಗೆ ಬಹಳ ಮಹತ್ವವಿದೆ ಎಂದು ಶಾಸಕ ರವಿ ಗಣಿಗ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾವು 136 ಜನ ಒಗ್ಗಟ್ಟಾಗಿರುವಾಗ ಬಿಜೆಪಿಯವರು ಬಲೆಗೆ ಬೀಳಲ್ಲ. ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಬರ್ತಿನಿ ಅಂದ್ರೆ ಯಾಕೆ ಬೇಡ ಅನ್ನಬೇಕು. ಬೇಡ ಅನ್ನಲು ಆಗುತ್ತಾ! ನಮ್ಮ ಪಕ್ಷಕ್ಕೆ ಬರುವವರಿಗೆ ಸ್ವಾಗತ ಇದೆ. ಆದರೆ ನಾವು ಯಾರ ಮನೆಗೂ ಹೋಗಿ ಕರಿತಿಲ್ಲ, ಬರ್ತಿನಿ ಅಂತಿದ್ಧಾರೆ ನಾವು ಸ್ವಾಗತ ಮಾಡುತ್ತಿದ್ದೇವೆ ಅಷ್ಟೆ. ಬಿಜೆಪಿ-ಜೆಡಿಎಸ್ನಿಂದ ಶಾಸಕರು ಬರ್ತಾರೆ. ಅವರಲ್ಲಿ ಶರಣಗೌಡ ಕಂದಕೂರು ಕಾಂಗ್ರೆಸ್ಗೆ ಬನ್ನಿ ಅಂತ ಹೇಳಿಲ್ಲ. ಎಲ್ಲರೂ ಹಾಸನದಲ್ಲಿ ಇರಬೇಕಾದರೆ ಅವರು ನನ್ನ ಜೊತೆ ಕಾಫಿ ಕುಡಿಯುತ್ತಿದ್ದರು. ನಮ್ಮ ಪಕ್ಷಕ್ಕೆ ಬರ್ತರೆ ಅಂಥ ಹೇಳಲಿಲ್ಲ. ಕಾಫಿ ಕುಡಿಯುತ್ತಿದ್ದರು ಅಂತ ಹೇಳಿದೆ. ಅವರು ನನ್ನ ಗೆಳೆಯ, ರಾಜಕಾರಣದಲ್ಲಿ ಕಾಫಿ ಡಿನ್ನರ್ಗೆ ಬಹಳ ಮಹತ್ವವಿದೆ ಎಂದು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದರ ಬಗ್ಗೆ ಒಗಟಾಗಿ ಹೇಳಿದಂತಿತ್ತು. ಈಗಾಗಲೇ ಹೈಕಮಾಂಡ್ ಅವರು ಏನು ಮಾತನಾಡಬಾರದು ಅಂತ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಹಲವು ದಾಖಲೆಗಳನ್ನು ನಿರ್ಮಿಸಿದೆ. 410 ರನ್ಗಳ ಬೃಹತ್ ಮೊತ್ತವನ್ನು ಪೇರಿಸಿರುವ ರೋಹಿತ್ ಅಂಡ್ ಟೀಂ ಏನೆಲ್ಲಾ ದಾಖಲೆಗಳು ನಿರ್ಮಿಸಿದೆ ಎಂಬುದನ್ನು ನೋಡೋಣ. ವಿಶ್ವಕಪ್ನಲ್ಲಿ ಟೀಂ ಇಂಡಿಯಾ 4ನೇ ವಿಕೆಟ್ಗೆ ಗರಿಷ್ಠ ಜೊತೆಯಾಟ ರನ್ – ಆಟಗಾರರು – ವಿರುದ್ಧ – ಸ್ಥಳ – ವರ್ಷ 208 – ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್- ನೆದರ್ಲೆಂಡ್ಸ್, ಬೆಂಗಳೂರು, 2023 196* – ಎಂಎಸ್ ಧೋನಿ ಮತ್ತು ಸುರೇಶ್ ರೈನಾ – ಜಿಂಬಾಬ್ವೆ, ಆಕ್ಲೆಂಡ್, 2015 165 – ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ – ಆಸ್ಟ್ರೇಲಿಯಾ, ಚೆನ್ನೈ, 2023 142 – ವಿನೋದ್ ಕಾಂಬ್ಲಿ ಮತ್ತು ನವಜೋತ್ ಸಿಂಗ್ ಸಿಧು – ಜಿಂಬಾಬ್ವೆ, ಕಾನ್ಪುರ್, 1996 141 – ರವೀಂದ್ರ ಜಡೇಜಾ ಮತ್ತು ಆರ್ಆರ್ ಸಿಂಗ್, ಆಸ್ಟ್ರೇಲಿಯಾ, ದಿ ಓವಲ್, 1999 ಏಕದಿನ ವಿಶ್ವಕಪ್ನಲ್ಲಿ ಅಧಿಕ ಮೊತ್ತ…
ಬೆಂಗಳೂರು:- ಕೇಂದ್ರದಲ್ಲಿ ಮತ್ತೆ ಬಿಜೆಪಿ ತರುವುದು ನಮ್ಮ ಗುರಿ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿ, ಕೇಂದ್ರದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕು. ಪ್ರತಿ ಕಾರ್ಯಕರ್ತನಿಗೂ ಅವರದೇ ಜವಾಬ್ದಾರಿ ಇರಲಿದೆ’ ಎಂದರು ಪಕ್ಷದಲ್ಲಿ ಆಂತರಿಕವಾಗಿ ಹಲವು ಬಣಗಳಲ್ಲಿ ಹಂಚಿಹೋಗಿರುವ ಮುಖಂಡರನ್ನು ಒಗ್ಗೂಡಿಸುವ ಕೆಲಸ ಮಾಡಬೇಕಿದೆ. ಪಕ್ಷ ಬಿಡಲು ಯೋಚಿಸುತ್ತಿರುವ ಮುಖಂಡರನ್ನು ಪಕ್ಷದಲ್ಲೇ ಉಳಿಸುವ ಕೆಲಸ ಮಾಡುತ್ತೇನೆ’ ಎಂದರು.
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಕೇಂದ್ರ ಸಚಿವ ಭಗವಂತ ಖೂಬಾ ಅವರು ಭೇಟಿ ಆಗಿದ್ದಾರೆ. ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕೆ ಸನ್ಮಾನಿಸಿ, ಸಿಹಿ ತಿನಿಸಿದರು. ನಂತರ ಬರುವ ಲೋಕಸಭೆ ಚುನಾವಣೆ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು. ‘ನಿಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಅವರಿಂದ ಸಂಘಟನೆ ಕಲೆ ಕರಗತವಾಗಿದೆ. ಎಲ್ಲರನ್ನೂ ಜೊತೆಗೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ನಿಮ್ಮಲ್ಲಿದೆ. ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡುವಂತಾಗಲಿ’ ಎಂದು ಶುಭ ಹಾರೈಸಿದರು.
ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರು ನಾಯಕಿಯಾಗಿ ನಟಿಸಿರುವ “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಈ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇಂದು ನನ್ನ ಹುಟ್ಟುಹಬ್ಬ. ನೀವೆಲ್ಲಾ ಬಂದಿರುವುದು ಖುಷಿಯಾಗಿದೆ. ತಮಗೆ ದೀಪಾವಳಿ ಹಬ್ಬದ ಶುಭಾಶಯ ಎಂದು ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ಈ ಬಾರಿ ನನ್ನ ಹುಟ್ಟುಹಬ್ಬ ಮತ್ತಷ್ಟು ವಿಶೇಷ. ಏಕೆಂದರೆ ನನ್ನ ಅಭಿನಯದ “ಭೈರಾದೇವಿ” ಚಿತ್ರದ ಟೀಸರ್ ಬಿಡುಗಡೆ ಹಾಗೂ “ಅಜಾಗ್ರತ” ಪೋಸ್ಟರ್ ಬಿಡುಗಡೆ ಇಂದು ಆಗಿದೆ. ಈ ಎರಡು ಚಿತ್ರಗಳು ಶಮಿಕಾ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗುತ್ತಿದೆ. “ಭೈರಾದೇವಿ” ನನ್ನ ಇಪ್ಪತ್ತು ವರ್ಷಗಳ ಸಿನಿಜರ್ನಿಯಲ್ಲೇ ವಿಭಿನ್ನವಾದ ಚಿತ್ರ. ಅಘೋರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನನಗೆ ಸ್ಮಶಾನ ಎಂದರೆ ಭಯ. ಈ ಚಿತ್ರದ ಚಿತ್ರೀಕರಣ ಹೆಚ್ಚಿನ ಭಾಗ ಸ್ಮಶಾನದಲ್ಲೇ ನಡೆದಿದೆ. ಈ ಚಿತ್ರಕ್ಕೆ ಪಟ್ಟಿರುವಷ್ಟು ಶ್ರಮ ನಾನು ಯಾವ ಚಿತ್ರಕ್ಕೂ ಪಟ್ಟಿಲ್ಲ.…
ಬೆಂಗಳೂರು :- ಗೃಹ ಸಚಿವರ ಆಪ್ತನೆಂದು ಪರಿಚಯಿಸಿಕೊಂಡು ವ್ಯಕ್ತಿಯಿಂದ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ ಕಾಲೇಜಿನಿಂದ ನಕಲಿ ಶುಲ್ಕ ರಶೀದಿಯನ್ನು ಸಹ ನೀಡಿ ಆರೋಪಿಗಳು ವಂಚಿಸಿದ್ದಾರೆ. 53 ವರ್ಷದ ವ್ಯಕ್ತಿ ಮತ್ತು ಅವರ ಮಗಳು ಕಾಲೇಜಿಗೆ ತೆರಳಿ ವಿಚಾರಿಸಿದಾಗ ಈ ವಂಚನೆ ಬೆಳಕಿಗೆ ಬಂದಿದೆ. ಆರ್. ಆರ್. ನಗರ ನಿವಾಸಿಯಾದ ದೂರುದಾರರ ಪುತ್ರಿ ಎಂಬಿಬಿಎಸ್ ಮುಗಿಸಿ ಪಿಜಿ ಕೌನ್ಸೆಲಿಂಗ್ ಸಮಯದಲ್ಲಿ ಸೀಟಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಪರಿಚಯಸ್ಥರೊಬ್ಬರ ಮೂಲಕ ಕೊರಟಗೆರೆ ಮೂಲದ ಮೊಹಮ್ಮದ್ ಜುಬೇರ್ ಎಂಬಾತ ಪರಿಚಯವಾಗಿದ್ದ. ಜಯನಗರದ ರೆಸ್ಟೋರೆಂಟ್ನಲ್ಲಿ ಭೇಟಿಯಾಗಿ ತುಮಕೂರಿನ ಕಾಲೇಜಿನಲ್ಲಿ ಪಿಜಿ ಸೀಟು ಕೊಡಿಸುವುದಾಗಿ ಭರವಸೆ ನೀಡಿದ್ದ. ಪ್ರತಿಯಾಗಿ 4.5 ಲಕ್ಷ ರೂ. ಹಣ ಪಡೆದಿದ್ದ. ದೂರುದಾರರು ತಮ್ಮ ಬ್ಯಾಂಕ್ ಖಾತೆಯಿಂದ ಆರೋಪಿಯ ಪೇಟಿಎಂ ಖಾತೆಗೆ ಹಣ ವರ್ಗಾಯಿಸಿದ್ದರು. ನಂತರ ಜುಬೇರ್ ಕಾಲೇಜಿನ ಹೆಸರಿನ ಶುಲ್ಕದ ರಸೀದಿ ನೀಡಿದ್ದ. ಆದರೆ ನಂತರದಲ್ಲಿ ಕಾಲೇಜಿನಿಂದ ಯಾವುದೇ ಮಾಹಿತಿ ಅಥವಾ ಸಂದೇಶಗಳು ಬಾರದಿದ್ದಾಗ…