ಬೆಂಗಳೂರು : ದೇಶದಲ್ಲಿ 25 ಕೋಟಿ ಜನರು ಬಡತನಮುಕ್ತರಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಗರೀಬಿ ಹಠಾವೋ ಎಂದಿದ್ದು ಕಾಂಗ್ರೆಸ್. ಆದರೆ, ಅದನ್ನು ಸಾಧಿಸಿ, ಬಡತನ ನಿರ್ಮೂಲನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ. ಇದಲ್ಲವೇ ಅಚ್ಛೆದಿನ್? ಎಂದು ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಟ್ಟಿದ್ದಾರೆ. ಕಳೆದ 9 ವರ್ಷದಲ್ಲಿ ಭಾರತದ ಬಡತನ ಸಂಖ್ಯೆ ಕುಸಿತ, ಇದು ನೀತಿ ಆಯೋಗದ ವರದಿ. 2013-14ರ ವೇಳೆಗೆ ಭಾರತದಲ್ಲಿ ಶೇ.29.17 ರಷ್ಟಿದ್ದ ಬಡನತ ಸಂಖ್ಯೆ ಅನುಪಾತ 2022-23ರ ವೇಳೆ ಶೇಕಡಾ 11.28ಕ್ಕೆ ಕುಸಿತ ಕಂಡಿದೆ. 9 ವರ್ಷದಲ್ಲಿ 24.82 ಕೋಟಿ ಮಂದಿ ಬಡತನದಿಂದ ಹೊರ ಬಂದಿದ್ದಾರೆ ಎಂದು ಹೇಳಿದ್ದಾರೆ. 2013 ರಿಂದ 2023ರ ಅವಧಿಯಲ್ಲಿ ಒಟ್ಟು 24.8 ಕೋಟಿ ಭಾರತೀಯರು ಬಡತನ ರೇಖೆಯಿಂದ ಹೊರ ಬಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನೀತಿ ಆಯೋಗ ಸಿದ್ಧಪಡಿಸಿದ ಬಹು ಆಯಾಮ ಅಳತೆ ಆಧಾರದಲ್ಲಿ ನಡೆದ ಅಧ್ಯಯನದಲ್ಲಿ ಈ…
Author: AIN Author
ಸಿಂಪಲ್ ಆಗಿ ಎರಡು ಪೊಂಗಲ್ ಒಮ್ಮೆಗೆ ಮಾಡುವುದು ಹೇಗೆ ಇಲ್ಲಿದೆ ನೋಡಿ ತಯಾರಿಸುವ ವಿಧಾನ.. ಬೇಕಾಗುವ ಪದಾರ್ಥಗಳು: ಸಿಹಿಪೊಂಗಲ್ ಗೆ ಹೆಸರು ಬೇಳೆ- ಒಂದು ಕಪ್, ಅಕ್ಕಿ- ಒಂದು ಕಪ್, ತುಪ್ಪ- ಎರಡು ಚಮಚ, ಅಲ್ಪ ಪ್ರಮಾಣದಲ್ಲಿ ಗೋಡಂಬಿ, ದ್ರಾಕ್ಷಿ, ಖಾರಾಪೊಂಗಲ್ ಗೆ ಹಸಿಶುಂಠಿ, ಕೊತ್ತಂಬರಿ, ಕರಿಬೇವು, ಅರಿಶಿನ, ಕೊಬ್ಬರಿ, ಉಪ್ಪು, ಜೀರಿಗೆ, ಹಸಿಮೆಣಸು. ಮಾಡುವ ವಿಧಾನ: ಹೆಸರು ಬೇಳೆಯನ್ನು ಚೆನ್ನಾಗಿ ಹುರಿದು ಬಳಿಕ ಅಕ್ಕಿಯನ್ನು ಹಾಕಿ ಸ್ವಲ್ಪ ಬಾಡಿಸಿ ಬಳಿಕ ತುಪ್ಪದಲ್ಲಿ ಗೋಡಂಬಿ, ದ್ರಾಕ್ಷಿಯನ್ನು ಹುರಿದು ಹಾಕಿ ಕುಕ್ಕರ್ನಲ್ಲಿ ಸ್ವಲ್ಪ ನೀರು ಹಾಕಿ ರುಚಿಗೆ ತಕ್ಕಂತೆ ಸ್ವಲ್ಪ ಉಪ್ಪು ಹಾಕಿ ಒಂದು ವಿಶಲ್ ಕೂಗಿಸಿದರೆ ಪೊಂಗಲ್ ರೆಡಿಯಾಗಲಿದೆ. ಇಲ್ಲಿ ಹೆಸರುಬೇಳೆ ಮತ್ತು ಅಕ್ಕಿಯ ಜೊತೆಯಲ್ಲಿ ಬೆಲ್ಲದ ನೀರನ್ನು ಸೋಸಿ ಹಾಕಿ ಅದಕ್ಕೆ ಕೊಬ್ಬರಿ, ದ್ರಾಕ್ಷಿ, ಕೇಸರಿಯನ್ನು ತುಪ್ಪದಲ್ಲಿ ಹುರಿದು ಹಾಕಿ ಬೇಯಿಸಿದರೆ ಸಿಹಿಪೊಂಗಲ್ ತಯಾರಾಗಲಿದೆ. ಇನ್ನು ಖಾರಾಪೊಂಗಲ್ ಗೆ ಹೆಸರುಬೇಳೆ ಮತ್ತು ಅಕ್ಕಿಯ ಜೊತೆಗೆ ಹಸಿಶುಂಠಿ, ಕೊತ್ತಂಬರಿ, ಕರಿಬೇವು, ಅರಿಶಿನ,…
ಮಂಗಳೂರು:- ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಬೆಂಗಳೂರು ಮೂಲದ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದರು. ಇದನ್ನು ಗಮನಿಸಿ ಜೋಡಿಯನ್ನು ತಡೆದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ಜೋಡಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಸಂಸದ ಅನಂತ್ಕುಮಾರ್ ಹೆಗಡೆ ಬಂಧನ ಮಾಡಬೇಕಾ, ಬೇಡ್ವಾ ಎಂದು ಸ್ಥಳೀಯ ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಸಂಸದರ ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಂಸದರ ಮೇಲೆ ಎಫ್ಐಆರ್ ಆಗಿದೆ. ಪೊಲೀಸರು ಸಾಕ್ಷ್ಯ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ಅದಾದ ಮೇಲೆ ಮುಂದಿನ ಕ್ರಮ ಏನು ಆಗಬೇಕೋ ಅದು ಕಾನೂನು ರೀತಿ ಆಗುತ್ತದೆ. ಅವರನ್ನು ಅರೆಸ್ಟ್ ಮಾಡಬೇಕಾ, ಮಾಡಬಾರದಾ ಎಂದು ಸ್ಥಳೀಯ ಪೊಲೀಸರು ನಿರ್ಧಾರ ಮಾಡುತ್ತಾರೆ ಎಂದರು. ನಾವು ಗೃಹ ಇಲಾಖೆಯಿಂದ ಯಾವುದೇ ಡೈರೆಕ್ಷನ್ ಕೊಡೋದಿಲ್ಲ. ಅವರನ್ನು ಅರೆಸ್ಟ್ ಮಾಡಿ, ಬಿಡಿ ಅಂತ ನಾನು ಯಾವತ್ತೂ ಯಾರಿಗೂ ಹೇಳಿಲ್ಲ. ಹೇಳೋದು ಇಲ್ಲ. ಸ್ಥಳೀಯ ಪೋಲೀಸರು ಯಾವ ಸೆಕ್ಷನ್ ಹಾಕಬೇಕೋ ಆ ಸೆಕ್ಷನ್ ಹಾಕಿದ್ದಾರೆ. ಆ ಸೆಕ್ಷನ್ನಲ್ಲಿ ಅರೆಸ್ಟ್ ಮಾಡಬೇಕು ಎಂದು ಇದ್ದರೆ ಅರೆಸ್ಟ್ ಮಾಡುತ್ತಾರೆ ಎಂದು ತಿಳಿಸಿದರು
ಕಲಬುರಗಿ : ಬಿಜೆಪಿಯನ್ನ ಮತ್ತಷ್ಟು ಬಲಪಡಿಸಲು ನಿರ್ಧರಿಸಿರುವ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇದೀಗ ಕಲಬುರಗಿಯ ಜಿಲ್ಲಾ ಘಟಕಕ್ಕೆ ಜೋಡೆತ್ತುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನಗರ ಘಟಕಕ್ಕೆ ಚಂದು ಪಾಟೀಲ್ ಹಾಗು ಗ್ರಾಮಾಂತರ ಘಟಕಕ್ಕೆ ಶಿವರಾಜ್ ಪಾಟೀಲ್ ರದ್ದೇವಾಡಗಿ ನೇಮಕವಾಗಿದ್ದಾರೆ..ಈಗಾಗಲೇ ರದ್ದೇವಾಡಗಿ ಒಂದು ಬಾರಿ ಅಧ್ಯಕ್ಷರಾಗಿ ಇದೀಗ ಎರಡನೇ ಬಾರಿಗೂ ಆಯ್ಕೆಯಾಗಿ ಜಾಕ್ ಪಾಟ್ ಹೊಡೆದಿದ್ದಾರೆ. ಇಬ್ಬರೂ ಮುಖಂಡರು ಒಟ್ಟಾಗಿ ಕಾರ್ಯಕರ್ತರ ಜೊತೆ ಶ್ರಮಿಸಿ ಲೋಕ ಸಮರ ಗೆಲ್ಲಲು ಮುಂದಾಗಿ ಅಂತ ಬಿವೈವಿ ಕಿವಿಮಾತು ಹೇಳಿದ್ದಾರೆ…
ಬೆಂಗಳೂರು: ನಗರದ ಹಲಸೂರು ಕೆರೆಯ ಸಮೀಪದ ಕೆನ್ನಿಂಗ್ಟನ್ ಜಂಕ್ಷನ್ ಬಳಿ ಕುಸಿದಿದ್ದ ಬಿಬಿಎಂಪಿ ವೈಟ್ ಟಾಪಿಂಗ್ ರಸ್ತೆಯನ್ನು ಲೋಕಾಯುಕ್ತ ಸಂಸ್ಥೆಯ ತಾಂತ್ರಿಕ ವಿಭಾಗದ ಕಾರ್ಯ ಪಾಲಕ ಅಭಿಯಂತರ ನಿರಂಜನ್ ನೇತೃತ್ವದ ತಂಡ ಪರಿಶೀಲನೆ ನಡೆಸಿತು. ವೈಟ್ ಟಾಪಿಂಗ್ ರಸ್ತೆ ಕುಸಿತಕ್ಕೆ ಸಂಬಂಧಪಟ್ಟಂತೆ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತ್ತು. ಈ ಸಂಬಂಧ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಲೋಕಾಯುಕ್ತರಿಗೆ ದೂರು ನೀಡಿದ್ದರು. ಡಾ. ಸತೀಶ್ ಕುಮಾರ್ ನೀಡಿದ ದೂರು ದಾಖಲಿಸಿಕೊಂಡ ಲೋಕಾಯುಕ್ತ ಇಲಾಖೆ, ಗುಂಡಿ ಬಿದ್ದ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಗುಣಮಟ್ಟ ಪರಿಶೀಲನೆ ನಡೆಸಿದೆ. ಪರಿಶೀಲನೆ ಬಳಿಕ ಮಾತನಾಡಿದ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಮೋಹನ್, ಜನರ ಹಣ ಪೋಲಾಗುತ್ತಿರುವುದನ್ನು ಮನಗಂಡು ನಾವು ಲೋಕಾಯುಕ್ತರಿಗೆ ದೂರು ನೀಡಿದ್ದೆವು. ನಮ್ಮ ದೂರಿಗೆ ಸ್ಪಂದಿಸಿದ ಲೋಕಾಯುಕ್ತರು ಸ್ಥಳಕ್ಕೆ ಆಗಮಿಸಿ ಗುಣಮಟ್ಟವನ್ನು ಪರಿಶೀಲನೆ ಮಾಡಿದ್ದಾರೆ ಎಂದರು. ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ರವರು ವಾಹಿನಿಯೊಂದಕ್ಕೆ ಹೇಳಿಕೆ…
ಬೆಂಗಳೂರು : ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಗಾಂಜಾಗಾಗಿ ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ ನಡೆದಿರುವ ವಿಚಾರ ಸಂಬಂಧ ಬಿಜೆಪಿ ಪ್ರತಿಕ್ರಿಯಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಲ್ಬುರ್ಗಿಯನ್ನು ರಿಪಬ್ಲಿಕ್ ಅನ್ನಾಗಿಸಿಕೊಂಡಿರುವ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರ ಉಸ್ತುವಾರಿಯಲ್ಲಿ ಬರೀ ಅಕ್ರಮಗಳದ್ದೇ ಸದ್ದು ಎಂದು ಲೇವಡಿ ಮಾಡಿದೆ. ಜೈಲಿನಲ್ಲಿರುವ ವಿಚಾರಣಾಧೀನ ಖೈದಿ ಹಾಗೂ ಜೈಲು ಸಿಬ್ಬಂದಿಗಳ ನಡುವೆ ಗಾಂಜಾಗಾಗಿ ಹೊಡೆದಾಟ ನಡೆದಿದೆ. ಕರ್ನಾಟಕದ ಉಳಿದೆಡೆ ಜೈಲು ಶಿಕ್ಷೆ ಅನುಭವಿಸುವ ತಾಣವಾದರೆ, ಕಲ್ಬುರ್ಗಿಯಲ್ಲಿ ಮಾತ್ರ ಜೈಲು ಮಜಾ ಮಾಡುವ, ವ್ಯಸನ ಮಾಡುವ ತಾಣವಾಗಿದೆ ಎಂದು ಚಾಟಿ ಬೀಸಿದೆ. ಸಚಿವ ಪ್ರಿಯಾಂಕ್ ಖರ್ಗೆಯವರ ಕೃಪಾಕಟಾಕ್ಷದಿಂದ ಕಲ್ಬುರ್ಗಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದೆ. ಮಾತ್ರವಲ್ಲದೆ ಜೈಲುಗಳು ಸಹ ಅಕ್ರಮದ ತಾಣಗಳಾಗುತ್ತಿರುವುದು ನಿಜಕ್ಕೂ ದುರಂತ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದೆ.
ಬೆಂಗಳೂರು: ರಾಜ್ಯ ಸರ್ಕಾರವು IAS ಮತ್ತು KAS ತರಬೇತಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ರಾಜ್ಯದಲ್ಲಿ ಇನ್ಮುಂದೆ ಕೋಚಿಂಗ್ ಸೆಂಟರ್ಗಳ ನೋಂದಣಿ ಕಡ್ಡಾಯವಾಗಿ ಮಾಡಬೇಕು. ರಾಜ್ಯದಲ್ಲಿ ಎಗ್ಗಿಲ್ಲದೇ ಕೋಚಿಂಗ್ ಸೆಂಟರ್ಗಳು ತಲೆಯೆತ್ತಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತೇವೆ ಎಂದು ಅಭ್ಯರ್ಥಿಗಳಿಂದ ಹಣ ಪಡೆಯುತ್ತಿವೆ. ಹೀಗಾಗಿ ಕೋಚಿಂಗ್ ಸೆಂಟರ್ಗಳು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ. ಸುತ್ತೋಲೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಸಂಸ್ಥೆಗಳು 15 ದಿನಗಳಲ್ಲಿ 25,000 ರೂಪಾಯಿ ಶುಲ್ಕವನ್ನು ಪಾವತಿಸಿ ನೋಂದಾಯಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
ಧಾರವಾಡ: – ಚಾಲಕನ ನಿಯಂತ್ರಣ ತಪ್ಪಿದ ಕಾರವೊಂದು ರಸ್ತೆ ಪಕ್ಕದ ವಾಟರ್ ಪೈಪ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರಿಗೆ ಗಂಭೀರ ಗಾಯವಾದ ಘಟನೆ ಧಾರವಾಡ ತಾಲೂಕಿನ ಅಮ್ಮಿನಭಾವಿ ಹೊರವಲಯದ ಧಾರವಾಡ ಸವದತ್ತಿ ರಸ್ತೆಯಲ್ಲಿ ನಡೆದಿದೆ. ಧಾರವಾಡ ಸವದತ್ತಿ ರಸ್ತೆಯ ಮೂಲಕ ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಯುವಕರು ಕಾರನಲ್ಲಿ ದಾಂಡೇಲಿಗೆ ತೆರಳುತ್ತಿದ್ದರು. ಈ ವೇಳೆ ಅಮ್ಮಿನಭಾವಿ ಬಳಿ ಬರುತ್ತಿದಂತೆ ಕಾರ್ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದಾಗಿ ಕಾರ್ ಸ್ಪೀಡಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ವಾಟರ್ ಪೈಪಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ರಾಮದುರ್ಗ ತಾಲೂಕಿನ ಊದಪೂಡ್ ಗ್ರಾಮದವರೆಂದು ತಿಳಿದು ಬಂದಿದೆ. ಸಾಗರ ಹಿರೆಮಠ, ಮಹಾಂತೇಶ ಬಡಿಗೇರಿ, ಮಂಜುನಾಥ್ ಕರಡಿಗುಡ್ಡ ಸೇರಿ ಇನ್ನೋರ್ವನಿಗೆ ಗಾಯವಾಗಿದ್ದು, ಧಾರವಾಡ ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಇನ್ನೂ ಘಟನೆ ನಡೆಯುತ್ತಿದಂತೆ, ಜಮೀನಿಗಳಿಗೆ ಬಂದಿದ್ದ ಜನರು ಹಾಗೂ ಸ್ಥಳೀಯರು ಅಪಘಾತಕ್ಕೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುವುದಕ್ಕೆ ಲೈಸೆನ್ಸ್ ಕೊಟ್ಟಂತಾಗಿದೆ. ಮುಖ್ಯಮಂತ್ರಿಗಳ ಈ ನಿಲುವನ್ನು ಖಂಡಿಸುತ್ತೇನೆ. ಅವರಿಗೆ ಸಂತ್ರಸ್ತ ಮಹಿಳೆಗೆ ನ್ಯಾಯಕೊಡಿಸುವ ಉದ್ದೇಶ ಇದ್ದರೆ ಕೂಡಲೆ ಎಸ್ ಐಟಿ ರಚನೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ. ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ಥೆಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಮನೆಗೆ ಕಳಿಸಿರುವುದಕ್ಕೆ ಸಿಎಂ ಬಳಿ ಉತ್ತರ ಇಲ್ಲ. ಹಾಗೂ ಅವಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೇಳಿರುವುದು. ಸರ್ಕಾರ ಇಷ್ಟು ದೊಡ್ಡ ಆರೋಗ್ಯ ಇಲಾಖೆ ಇದ್ದು, ಅವಳಿಗೆ ಸೂಕ್ತ ಚಿಕಿತ್ಸೆ ಕೊಡಲು ತಯಾರಿಲ್ಲ ಎಂದರೆ, ಮತ್ತು ಆ ಜವಾಬ್ದಾರಿಯನ್ನು ತಮ್ಮ ಶಾಸಕರಿಗೆ ವಹಿಸಿರುವಂಥದ್ದು. ಈ ಪ್ರಕರಣವನ್ನು ಮುಚ್ಚಿ ಹಾಕುವ ಹಾಗೂ ಆ ಹೆಣ್ಣು ಮಗಳನ್ನು ಸಂಪೂರ್ಣ…