Author: AIN Author

ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಕಾರ್ತಿಕ್ ಮತ್ತು ಸಂಗೀತಾ ಜೋಡಿಯಾಗಿ ಹೈಲೆಟ್ ಆಗಿದ್ದರು. ಕಾರ್ತಿಕ್ (Karthik Mahesh) ಜೊತೆ ಬ್ರೇಕಪ್ ಮಾಡಿಕೊಂಡಿದ್ದ ಸಂಗೀತಾ ಇದೀಗ ಮುನಿಸು ಮರೆತು ಒಂದಾಗಿದ್ದಾರೆ. ಸಂಕ್ರಾಂತಿ ಹಬ್ಬದಂದು ಮತ್ತೆ ಕಾರ್ತಿಕ್- ಸಂಗೀತಾ (Sangeetha Sringeri) ನಡುವೆ ಸ್ನೇಹ ಚಿಗುರಿದೆ. ಚೆನ್ನಾಗಿದ್ದ ಜೋಡಿ ಕಾರ್ತಿಕ್- ಸಂಗೀತಾ ದೂರ ದೂರ ಆಗಿದ್ದರು. ಮತ್ತೆ ಒಂದಾಗೋದೇ ಇಲ್ವೇನೋ ಅನ್ನುವಷ್ಟರ ಮಟ್ಟಿಗೆ ಜಗಳ ಆಡಿಕೊಂಡಿದ್ದರು. ಈಗ ಸಂಕ್ರಾಂತಿ ಹಬ್ಬದಂದು ಈ ಜೋಡಿ ಸ್ನೇಹಕ್ಕೆ ಬೆಲೆ ಕೊಟ್ಟು ಒಂದಾಗಿದ್ದಾರೆ. ‘ಬಿಗ್ ಬಾಸ್’ ಸಂಕ್ರಾಂತಿ ದಿನದಂದು, ನೀವು ನಿಮ್ಮ ಯಾವ ಒಂದು ಗುಣವನ್ನು ಬಿಡುತ್ತೀರಿ, ಯಾವ ಗುಣವನ್ನು ಇಲ್ಲಿಂದ ನಿಮ್ಮಲ್ಲಿ ಅಳವಡಿಸಿಕೊಳ್ಳುತ್ತೀರಿ ಹಾಗೂ ಯಾರೊಟ್ಟಿಗೆ ದ್ವೇಷವನ್ನು ಬಿಟ್ಟು ಸ್ನೇಹವನ್ನು ಬೆಳೆಸುತ್ತೀರಿ ಎಂದು ಸೂಚಿಸಿ ಆ ವ್ಯಕ್ತಿಯನ್ನು ಕರೆದು ಎಳ್ಳು ಬೆಲ್ಲ ನೀಡಿ ಎಂದು ಆದೇಶ ನೀಡಿದ್ದರು. ಆಗ ಕಾರ್ತಿಕ್, ಇಲ್ಲಿ ನನ್ನ ಮುಂಗೋಪವನ್ನ ಬಿಡುತ್ತೇನೆ. ಯಾಕಂದ್ರೆ, ನಾನು ಬಹಳ ಬೇಗ ರಿಯಾಕ್ಟ್…

Read More

ಹಾವೇರಿ: “ಹಾನಗಲ್​ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಬಿಡುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಅವರಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು. ಪ್ರಕರಣವನ್ನು ಎಸ್​ಐಟಿಗೆ ವಹಿಸಲು ಬಿಜೆಪಿ ಆಗ್ರಹ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಎಸ್​ಐಟಿ ನಲ್ಲಿರುವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು” ಎಂದರು. ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಪ್ರಕರಣ ಮುಚ್ಚಿಹಾಕವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸಂತ್ರಸ್ತೆಯ ಕುಟುಂಬಸ್ಥರು ಪರಿಹಾರದ ಸಂಬಂಧ ನೀಡಿರುವ ಅರ್ಜಿಯನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.…

Read More

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಂಕ್ರಾಂತಿ ದಿನದಂದು ಬರೋಬ್ಬರಿ ಆರು ಭಾಷೆಯಲ್ಲಿ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ಕನ್ನಡದಲ್ಲಿ ಅವರು ಸಂಕ್ರಾಂತಿ ಬದಲು ಪೊಂಗಲ್ ಅಂತ ಬರೆದು ಶುಭಾಶಯ ಕೋರಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಆರು ಭಾಷೆಯಲ್ಲೂ ಅವರು ಸೋಷಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ. ಒಂದು ಕಡೆ ರಶ್ಮಿಕಾ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದಾರೆ, ಮತ್ತೊಂದು ಕಡೆ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್‌ಮೆಂಟ್ (Engagement) ಮಾಡಿಕೊಳ್ತಿದ್ದಾರೆ ಎಂದು ಸುದ್ದಿ ಹರಡಿದೆ. ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ. ಈಗ ಹರಿದಾಡುತ್ತಿರೋ ಹೊಸ ಸುದ್ದಿ ಏನಪ್ಪಾ ಅಂದರೆ, ಇದೇ ಫೆಬ್ರವರಿ ಎರಡನೇ ವಾರದಲ್ಲಿ ವಿಜಯ್- ರಶ್ಮಿಕಾ ಜೋಡಿ ಆಪ್ತರ…

Read More

ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣ ಉಂಟಾಗಿದ್ದು  ಹೀಗಾಗಿ ಬಹುತೇಕ ಕಡೆ ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಏರ್​ಪೋರ್ಟ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ…

Read More

ಬಳ್ಳಾರಿ:- ತಡ ರಾತ್ರಿ ಬೈಕ್ ಕಳತನಕ್ಕೆ ಕಳ್ಳ ಯತ್ನಿಸಿದ್ದು, ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಳ್ಳಾರಿ ಜಿಲ್ಲೆಯ ಕುಡುತಿನ ಪಟ್ಟಣದಲ್ಲಿ ಘಟನೆ ಜರುಗಿದೆ ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಲಾಗಿದೆ. ಮೋತಿ ವೀರೇಶ್ ಎಂಬುವರಿಗೆ ಸೇರಿದ ಬೈಕ್ ಇದಾಗಿದೆ ಎನ್ನಲಾಗಿದೆ. ಬೈಕ್ ಲಾಕ್ ತೆಗೆದು ತಳ್ಳಿಕೊಂಡು ಪರಾರಿಯಾಗಲು ಯತ್ನಿಸಲಾಗಿದೆ. ಬೈಕ್ ಕಳ್ಳತನ ವಿಷಯ ಗೊತ್ತಾಗ್ತಿದಂತೆ ಯುವಕರು ಕಳ್ಳನ ಬೆನ್ನಟಿದ್ದಾರೆ. ಕೂಡಲೇ ಎಚ್ಚೆತ್ತ ಕಳ್ಳರು, ವೇಣಿವೀರಾಪುರ ಬಳಿ ಬೈಕ್ ಬಿಟ್ಟು ಪರಾರಿ ಆಗಿದ್ದಾರೆ. ಇಬ್ಬರೂ ಖದೀಮರಿಂದ ಪಲ್ಸರ್ ಬೈಕ್ ಕಳ್ಳತನಕ್ಕೆ ಯತ್ನಿಸಲಾಗಿದೆ ಎನ್ನಲಾಗಿದೆ. ಖದೀಮ ಕಳ್ಳತನ ಕೈಚಳಕದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಡಿತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ಕಲಬುರ್ಗಿ:- ಇದೇ ತಿಂಗಳ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದ್ದು ಅಂದು ಎಲ್ಲೆಡೆ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿರೋ ಹಿನ್ನಲೆ ಕಲಬುರಗಿಯಲ್ಲಿ ರಾಮನವಮಿ ಉತ್ಸವ ಸಮಿತಿ ಉಚಿತವಾಗಿ ಹಣತೆಗಳನ್ನ ವಿತರಣೆ ಮಾಡಿತು. ನಗರದ ಶರಣ ಬಸವೇಶ್ವರ ದೇಗುಲದ ಅಂಗಳದಲ್ಲಿ ಈ ಸೇವಾ ಕಾರ್ಯ ನಡೆದಿದ್ದು ರಾಮ ಭಕ್ತರು ಆಸಕ್ತಿಯಿಂದ ಹಣತೆಗಳನ್ನ ಪಡೆದಿದ್ದು ವಿಶೇಷವಾಗಿತ್ತು. ಇದೇವೇಳೆ ಜಿಲ್ಲೆಯ108 ಗುಡಿಗಳಿಗೆ ತಲಾ 1008 ಹಣತೆಗಳನ್ನ ವಿತರಿಸಲು ರಾಮ ನವಮಿ ಉತ್ಸವ ಸಮಿತಿ ಸಂಕಲ್ಪ ಮಾಡಿದೆ ಅಂತ ಸಮಿತಿಯ ಮುಖ್ಯಸ್ಥ ರಾಜು ಭವಾನಿ ಹೇಳಿದ್ದಾರೆ…

Read More

ಎಂಟು ತಿಂಗಳ ದೇಶಿಯ ತಳಿಯಾದ ಕಿಲಾರಿ ಆಕಳ ಕರು ಎರಡು ಲಕ್ಷ ಹತ್ತು ಸಾವಿರ ರೂ.ಗೆ ಮಾರಾಟವಾಗಿದೆ ಈಗ ಕಿಲಾರಿ ತಳಿಯೂ ಅಳಿವಿನ ಅಂಚಿನಲ್ಲಿದ್ದು ಇದನ್ನು ರಕ್ಷಿಸುವುದು ನಮ್ಮೆಲರ ಆದ್ಯ ಕರ್ತವ್ಯವಾಗಿದೆವೆಂದು ನಿಪ್ಪಾಣಿ ಸಮಾದಿಲಿಂಗ ಮಠದ ಸ್ವಾಮೀಜಿ ಅವರ ಅಭಿಪ್ರಾಯ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದ ಅಣ್ಣಪ್ಪ ನಿಕ್ಕಮ ಎಂಬ ರೈತ ಜವಾರಿ ಆಕಳನ್ನು ಸಾಕಿ ಎಲ್ಲರಿಗೂ ಮಾದರಿಯಾಗಿದ್ದಾನೆ. ಈ ಕರುವನ್ನು ಮತ್ತು ತಾಯಿಯನ್ನು ಅವರಖೋಡ ಗ್ರಾಮಸ್ಥರು ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಸ್ವಾಮೀಜಿ ಅವರಿಗೆ ಹಸ್ತಾಂತರಿಸಿದರು. ಈಗ ಎಚ್.ಎಫ್ ತಳಿ(ಆಕಳು) ಹೆಚ್ಚು ಹಾಲು ಕೊಡುತ್ತೆ ಎಂಬ ಕಾರಣಕ್ಕೆ ದೇಶಿ ತಳಿ ಸಾಕುವವರ ಸಂಖ್ಯೆ ಕ್ರಮೇಣ ಕುಗ್ಗುತ್ತಿದೆ. ಎಂಟು ತಿಂಗಳ ಕಿಲಾರಿ ಕರುವನ್ನು ನಿಪ್ಪಾಣಿ ತಾಲ್ಲೂಕಿನ ಸಮಾಧಿಲಿಂಗ ಮಠದ ಸ್ವಾಮೀಜಿಗಳಾದ ಪ್ರಾಣಲಿಂಗ ಶ್ರೀಗಳು ಕೊಳ್ಳುವುದರ ಮೂಲಕ ಸಾಕಿದಂತ ರೈತರನ್ನು ಪ್ರೋತ್ಸಾಹಿಸಿದ್ದಾರೆ. ದೇಶಿಯ ತಳಿಗಳನ್ನು ಸಾಕಿ ನಿರುದ್ಯೋಗವನ್ನು ಹೋಗಲಾಡಿಸಿ ಎಂದು ಯುವಜನತೆಗೆ ಕಿವಿ ಮಾತು ಹೇಳಿದರು.

Read More

ಬೆಂಗಳೂರು : ಅರ್ಧಂಬರ್ಧ ಮಂದಿರ ಉದ್ಘಾಟಿಸಿ ವೋಟು ಬಾಚುತ್ತಿರುವವರು ಹಿಂದೂ ವಿರೋಧಿಗಳಲ್ಲವೇ? ಎಂದು ನಟ ಕಿಶೋರ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ಅಸಲಿ ಹಿಂದೂ ವಿರೋಧಿ ಯಾರು? ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ ವ್ಯಾಪಾರದ ಸರಕು ಅಷ್ಟೇ ಎಂದು ಛೇಡಿಸಿದ್ದಾರೆ. ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ. ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ.. ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ..? ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ..? ಎಂದು ಕಿಡಿಕಾರಿದ್ದಾರೆ. ರಾಮಮಂದಿರದ ರಾಜಕೀಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ, ನಿಜವಾದ ಹಿಂದೂ ವಿರೋಧಿಗಳು ಯಾರು? ಜ್ವಲಂತ ಸಮಸ್ಯೆಗಳನ್ನು ಮರೆಮಾಚಿ, ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ವೋಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ? ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿಬಿಡುವುದಿಲ್ಲವೇ..?…

Read More

ಈ ವಿಧಾನಗಳಲ್ಲಿ ಜೀರಿಗೆ ನೀರನ್ನು ಸೇವಿಸಿದರೆ ಬಹಳ ಬೇಗನೆ ತೂಕವನ್ನು ಕಳೆದುಕೊಳ್ಳಬಹುದು. 1. ತೂಕ ನಷ್ಟಕ್ಕೆ ಜೀರಿಗೆ ಮತ್ತು ಕರಿಬೇವಿನ ನೀರು : ಜೀರಿಗೆ ಮತ್ತು ಕರಿಬೇವಿನ ಎಲೆಯ ನೀರು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಾತ್ರಿ ಒಂದು ಲೋಟ ನೀರಿಗೆ 1 ಚಮಚ ಜೀರಿಗೆ ಮತ್ತು 5-7 ಕರಿಬೇವಿನ ಎಲೆಗಳನ್ನು ಹಾಕಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಕುಡಿಯಿರಿ.ಪ್ರತಿದಿನ ಈ ಪಾನೀಯವನ್ನು ಕುಡಿಯುವುದರಿಂದ ಚಯಾಪಚಯ ದರ ಹೆಚ್ಚಾಗುತ್ತದೆ. ಅಲ್ಲದೆ ಜೀರಿಗೆ ಮತ್ತು ಕರಿಬೇವಿನ ಎಲೆಗಳ ನೀರು BMI ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 2. ತೂಕ ನಷ್ಟಕ್ಕೆ ಜೀರಿಗೆ ಮತ್ತು ಕೊತ್ತಂಬರಿ ನೀರು : ಜೀರಿಗೆ ಮತ್ತು ಕೊತ್ತಂಬರಿ ಎರಡೂ ತೂಕವನ್ನು ಕಡಿಮೆ ಮಾಡುತ್ತದೆ. ಇಲ್ಲಿ ಕೂಡಾ ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಈ ನೀರನ್ನು ಕುಡಿಯಬೇಕು. ಇದು ನಿಮ್ಮನ್ನು ದೀರ್ಘಕಾಲ ಹಸಿವಿನಿಂದ ದೂರವಿಟ್ಟು ತೂಕವನ್ನು ಕಡಿಮೆ ಮಾಡುತ್ತದೆ. ಜೀರಿಗೆ…

Read More

ಮಲಯಾಳಂ (Malayalam) ಸಿನಿಮಾ (Music) ರಂಗದ ಹೆಸರಾಂತ ಸಂಗೀತ ನಿರ್ದೇಶಕ, ಸಿನಿಮಾ ಸಂಗೀತದಲ್ಲಿ ಸಾಕಷ್ಟ ಪ್ರಯೋಗಗಳನ್ನು ಮಾಡಿರುವ ಕೆ.ಜೆ. ಜಾಯ್ (KJ Joy) ನಿಧನರಾಗಿದ್ದಾರೆ (Passed Away). ಅವರಿಗೆ 77 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಲವ್ ಲೆಟರ್ ಸಿನಿಮಾದ ಮೂಲಕ 1975ರಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ್ದರು ಜಾಯ್. ನಂತರ ಸರ್ಪಂ, ಪ್ರಿಯಾಪುತ್ರನ್, ಸ್ನೇಹ ಯಮುನಾ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದ ಹೆಗ್ಗಳಿಕೆ ಇವರದ್ದು. ಸಿನಿಮಾ ಸಂಗೀತದ ವಿಚಾರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಿದ್ದಾರೆ ಜಾಯ್. ಮಲಯಾಳಂ ಸಿನಿಮಾ ರಂಗಕ್ಕೆ ಕೀ ಬೋರ್ಡ್ ಸೇರಿದಂತೆ ಅನೇಕ ಆಧುನಿಕ ವಾದ್ಯವನ್ನು ಪರಿಚಯಿಸಿದವರು. ಹಾಗಾಗಿ ಮಲಯಾಳಂ ಸಿನಿಮಾ ಕ್ಷೇತ್ರ ಮೊದಲ ಟೆಕ್ನೋ ಸಂಗೀತಾಗಾರ ಎಂದು ಕರೆಯುತ್ತಿದೆ.

Read More