ಉತ್ತರ ಕನ್ನಡ:- ಮುರುಡೇಶ್ವರದಲ್ಲಿ ಕಡಲಬ್ಬರಕ್ಕೆ ಬೀಚ್ ಬಳಿಯಿದ್ದ ಗೂಡಂಗಡಿಗಳಿಗೆ ಹಾನಿ ಆಗಿರುವ ಘಟನೆ ಜರುಗಿದೆ. ನಿನ್ನೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಮುರುಡೇಶ್ವರನ ಸನ್ನಿಧಾನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಬೀಚ್ ಬಳಿ ಇದ್ದ ಗೂಡಂಗಡಿಗಳಲ್ಲಿನ ವಸ್ತುಗಳು ಸಮುದ್ರಪಾಲಾಗಿವೆ. ಇದರಿಂದಾಗಿ ಅಂಗಡಿ ಇಟ್ಟುಕೊಂಡಿದ್ದ ಮಾಲೀಕರೀಗ ಕಂಗಾಲಾಗಿದ್ದು ಕಣ್ಣೀರು ಹಾಕುವಂತ ಪರಿಸ್ಥಿತಿ ಎದುರಾಗಿದೆ. ಒಳ್ಳೆಯ ವ್ಯಾಪಾರದ ನಿರೀಕ್ಷೆಯಲ್ಲಿದ್ದ ವ್ಯಾಪಾರಿಗಳಿಗೆ ಸಮುದ್ರದ ಅಲೆಗಳು ಕಣ್ಣೀರು ತರಿಸಿವೆ. ನಿನ್ನೆ ರಾತ್ರಿ ಏಕಾಏಕಿ ಸಮುದ್ರದ ಅಬ್ಬರ ಹೆಚ್ಚಾದ ಹಿನ್ನೆಲೆ ಗೂಡಂಗಡಿಗಳು ಹಾನಿಗೊಳಗಾಗಿವೆ. ಸಮುದ್ರದ ಅಲೆಯಲ್ಲಿ ಗೂಡಂಗಡಿಗಳ ಹಲವು ಸಾಮಾನುಗಳು ಕೊಚ್ಚಿ ಹೋಗಿವೆ. ತನ್ನ ಅಂಗಡಿ ಹಾನಿಗೊಳಗಾದದ್ದು ನೋಡಿ ಮಹಿಳೆಯೊಬ್ಬರು ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿದೆ.
Author: AIN Author
ವಿಜಯನಗರ:- ಕನ್ಯಾ ಕೊಡೋಕೆ ಯಾರು ಮುಂದೆ ಬರ್ತಿಲ್ಲ ಅಂತಾ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಜರುಗಿದೆ. ಬಿ.ಮಧುಸೂದನ್ (26) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡ ಯುವಕ. ಮದ್ವೆಗಾಗಿ ಮೃತ ಮಧುಸೂದನ್ ಮೂರು ಕನ್ಯಾ ನೋಡಿ ಬಂದಿದ್ದ. ಹುಡಗನ ತಂದೆ ವರ್ತನೆ ಸರಿಯಿಲ್ಲ ಅಂತಾ ಹುಡ್ಗಿ ಕಡೆಯವರು ನಿರಾಕರಣೆ ಮಾಡಿದ್ದಾರೆ. ನನಗೆ ಮದ್ವೆನೇ ಅಗಲ್ಲ ಅಂತಾ ನೊಂದಿದ್ದ ಮಧುಸೂದನ್, ಕನ್ಯೆ ಸಿಗದ ಹಿನ್ನಲೆ, ಮದ್ಯಪಾನದ ಚಟಕ್ಕೆ ಬಿದ್ದಿದ್ದ. ಯುವಕನ ತಂದೆ ಅರೆ ಹುಚ್ಚನ ಹಾಗೇ ವರ್ತನೆ ಮಾಡುವ ಹಿನ್ನಲೆ, ಹುಡುಗಿಯ ಕಡೆಯವರು ವಾಪಾಸ್ ಆಗುತ್ತಿದ್ದಾರೆ. ಮದ್ವೆ ಆಗ್ತಿಲ್ಲ ಅಂತಾ ಮನೊಂದು ಮಧುಸೂದನ್ ವಿಷ ಸೇವಿಸಿದ್ದ. ಜ.05 ರಂದು ವಿಷ ಕುಡಿದಿದ್ದ ಮಧುಸೂದನ್,ಬಳ್ಳಾರಿಯ ವಿಮ್ಸ್ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಿಸದೆ ಜ. 13 ರಂದು ಸಾವನ್ನಪ್ಪಿದ್ದಾನೆ. ಮಧುಸೂದನ್ನ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಣ್ಣು ಸಿಗ್ತಿಲ್ಲ , ಮದ್ವೆನೇ ಆಗಲ್ಲ ಅಂತಾ…
ಹುಬ್ಬಳ್ಳಿ: ಬಹುಜನ ಸಮಾಜ ಪಾರ್ಟಿ ಯ ರಾಷ್ಟ್ರೀಯ ಅಧ್ಯಕ್ಷರು, ಉತ್ತರ ಪ್ರದೇಶದ ಮಾಜಿ ಮುಖ್ಯ ಮಂತ್ರಿಗಳು, ಉಕ್ಕಿನ ಮಹಿಳೆ ಬೆಹನ್ ಕುಮಾರಿ ಮಾಯಾವತಿಜಿ ರವರ 68ನೇ ಹುಟ್ಟು ಹಬ್ಬವನ್ನ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾಸಭಾ ಕ್ಷೇತ್ರದಲ್ಲಿ ಆಚರಿಸಲಾಯಿತು. ಈ ಸಮಯದಲ್ಲಿ ಬಿಎಸ್ ಪಿ ಧಾರವಾಡ ಜಿಲ್ಲಾ ಉಸ್ತುವಾರಿ ರೇವಣಸಿದ್ಧ ಹೊಸಮನಿ ಮತ್ತು ಪಕ್ಷದ ಹಿರಿಯ ಮುಖಂಡರು ನಿಸಾರ್ ಅಹ್ಮದ್ ಮುಲ್ಲಾ, ಶೌಕತ್ ಅಲಿ ಹೊಸಳ್ಳಿ, ಪಧಾಧಿಕಾರಿಗಳದ ನಾಗರಾಜ್ ಗಳಗಿ, ದ್ಯಾಮಣ್ಣ ಕಮ್ಮಾರ, ಯಾಸೀನ್ ಮೇಗಡೆ, ತೌಸೀಫ್ ಔರಂಗವಾಲೆ, ತೌಸೀಫ್ ಮುಲ್ಲಾ, ರಫೀಕ್ ಮುಲ್ಲಾ, ಹಸನ ಗದಗಕರ್, ಜಾಕೀರ್, ಮದಾರ್ ಮ ಕೇಂದ್ರ, ಆರಿಫ್, ಅಷ್ಪಾಕ್ ತಡಕೋಡ ಪಾಲ್ಗೊಂಡಿದ್ದರು.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬಗ್ಗೆ ಏಕವಚನದಲ್ಲಿ ಮಾತನಾಡಿದ ಸಂಸದ ಅನಂತ್ಕುಮಾರ್ ಹೆಗಡೆಯವರ ಹೇಳಿಕೆ ವೈಯಕ್ತಿಕವಾಗಿ ಬೇಸರ ತರಿಸಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. https://ainlivenews.com/postponement-of-congress-workers-convention-scheduled-on-january-21/ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅನಂತ್ಕುಮಾರ್ ಹೆಗಡೆಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಪಕ್ಷದ ಹಿರಿಯ ನಾಯಕರು. ಅವರಿಗೆ ನಿಷ್ಕಲ್ಮಶ ಭಾವನೆ ಇದೆ. ಏನು ಬಾಯಿಗೆ ಬರುತ್ತೋ ಅದನ್ನು ಅವರು ನನ್ನ ಹಾಗೆ ಮಾತಾಡಿ ಬಿಡ್ತಾರೆ. ಹಿಂದೆ ಮುಂದೆ ನೋಡೋದೇ ಇಲ್ಲ. ಸಿದ್ದರಾಮಯ್ಯ ಕೇವಲ ಸಿದ್ದರಾಮಯ್ಯ ಅಲ್ಲ, ಈ ರಾಜ್ಯದ ಸಿಎಂ. ಸಿದ್ದರಾಮಯ್ಯ ಏನೋ ಮಾತಾಡ್ತಾರೆ ಎಂದು ನಾವ್ಯಾಕೆ ಚಿಕ್ಕವರಾಗಬೇಕು? ನಾವು ಚಿಕ್ಕವರಾಗೋದು ಬೇಡ ಎಂದಿದ್ದಾರೆ. ಅನಂತ್ಕುಮಾರ್ ಹೆಗಡೆಯವರು ಸುಸಂಸ್ಕೃತ ಕುಟುಂಬದಿಂದ ಬಂದವರು. ನಾವು ನಮ್ಮ ಭಾಷೆ ಹಿಡಿತದಲ್ಲಿ ಇಟ್ಕೋಬೇಕಾಗುತ್ತೆ. ಅವರ ಹೇಳಿಕೆ ವೈಯಕ್ತಿಕವಾಗಿ ನನಗೆ ಸ್ವಲ್ಪ ಬೇಸರ ತರಿಸಿದೆ ಎಂದು ಅವರು ಹೇಳಿದ್ದಾರೆ. ಅನಂತ್ಕುಮಾರ್ ಹೆಗಡೆಯವರ ಹೇಳಿಕೆಯಗೆ ನಯವಾಗಿಯೇ ವಿರೋಧಿಸಿದ ಅವರು, ಸಿದ್ದರಾಮಯ್ಯ ಭಾಷೆ ಏನು, ಹೇಗೆ ಎಂದು ನಮಗೆ ಬೇಡ. ಅವರು ಸಿಎಂ…
ಬಿಗ್ ಬಾಸ್ ಮನೆಯಲ್ಲಿ (Bigg Boss Kannada 10) ಕಾರ್ತಿಕ್ ಮತ್ತು ಸಂಗೀತಾ ಜೋಡಿಯಾಗಿ ಹೈಲೆಟ್ ಆಗಿದ್ದರು. ಕಾರ್ತಿಕ್ (Karthik Mahesh) ಜೊತೆ ಬ್ರೇಕಪ್ ಮಾಡಿಕೊಂಡಿದ್ದ ಸಂಗೀತಾ ಇದೀಗ ಮುನಿಸು ಮರೆತು ಒಂದಾಗಿದ್ದಾರೆ. ಸಂಕ್ರಾಂತಿ ಹಬ್ಬದಂದು ಮತ್ತೆ ಕಾರ್ತಿಕ್- ಸಂಗೀತಾ (Sangeetha Sringeri) ನಡುವೆ ಸ್ನೇಹ ಚಿಗುರಿದೆ. ಚೆನ್ನಾಗಿದ್ದ ಜೋಡಿ ಕಾರ್ತಿಕ್- ಸಂಗೀತಾ ದೂರ ದೂರ ಆಗಿದ್ದರು. ಮತ್ತೆ ಒಂದಾಗೋದೇ ಇಲ್ವೇನೋ ಅನ್ನುವಷ್ಟರ ಮಟ್ಟಿಗೆ ಜಗಳ ಆಡಿಕೊಂಡಿದ್ದರು. ಈಗ ಸಂಕ್ರಾಂತಿ ಹಬ್ಬದಂದು ಈ ಜೋಡಿ ಸ್ನೇಹಕ್ಕೆ ಬೆಲೆ ಕೊಟ್ಟು ಒಂದಾಗಿದ್ದಾರೆ. ‘ಬಿಗ್ ಬಾಸ್’ ಸಂಕ್ರಾಂತಿ ದಿನದಂದು, ನೀವು ನಿಮ್ಮ ಯಾವ ಒಂದು ಗುಣವನ್ನು ಬಿಡುತ್ತೀರಿ, ಯಾವ ಗುಣವನ್ನು ಇಲ್ಲಿಂದ ನಿಮ್ಮಲ್ಲಿ ಅಳವಡಿಸಿಕೊಳ್ಳುತ್ತೀರಿ ಹಾಗೂ ಯಾರೊಟ್ಟಿಗೆ ದ್ವೇಷವನ್ನು ಬಿಟ್ಟು ಸ್ನೇಹವನ್ನು ಬೆಳೆಸುತ್ತೀರಿ ಎಂದು ಸೂಚಿಸಿ ಆ ವ್ಯಕ್ತಿಯನ್ನು ಕರೆದು ಎಳ್ಳು ಬೆಲ್ಲ ನೀಡಿ ಎಂದು ಆದೇಶ ನೀಡಿದ್ದರು. ಆಗ ಕಾರ್ತಿಕ್, ಇಲ್ಲಿ ನನ್ನ ಮುಂಗೋಪವನ್ನ ಬಿಡುತ್ತೇನೆ. ಯಾಕಂದ್ರೆ, ನಾನು ಬಹಳ ಬೇಗ ರಿಯಾಕ್ಟ್…
ಹಾವೇರಿ: “ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಬಿಡುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಅವರಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು. ಪ್ರಕರಣವನ್ನು ಎಸ್ಐಟಿಗೆ ವಹಿಸಲು ಬಿಜೆಪಿ ಆಗ್ರಹ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಎಸ್ಐಟಿ ನಲ್ಲಿರುವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು” ಎಂದರು. ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಪ್ರಕರಣ ಮುಚ್ಚಿಹಾಕವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸಂತ್ರಸ್ತೆಯ ಕುಟುಂಬಸ್ಥರು ಪರಿಹಾರದ ಸಂಬಂಧ ನೀಡಿರುವ ಅರ್ಜಿಯನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.…
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಂಕ್ರಾಂತಿ ದಿನದಂದು ಬರೋಬ್ಬರಿ ಆರು ಭಾಷೆಯಲ್ಲಿ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ಕನ್ನಡದಲ್ಲಿ ಅವರು ಸಂಕ್ರಾಂತಿ ಬದಲು ಪೊಂಗಲ್ ಅಂತ ಬರೆದು ಶುಭಾಶಯ ಕೋರಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಆರು ಭಾಷೆಯಲ್ಲೂ ಅವರು ಸೋಷಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ. ಒಂದು ಕಡೆ ರಶ್ಮಿಕಾ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದಾರೆ, ಮತ್ತೊಂದು ಕಡೆ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್ಮೆಂಟ್ (Engagement) ಮಾಡಿಕೊಳ್ತಿದ್ದಾರೆ ಎಂದು ಸುದ್ದಿ ಹರಡಿದೆ. ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ. ಈಗ ಹರಿದಾಡುತ್ತಿರೋ ಹೊಸ ಸುದ್ದಿ ಏನಪ್ಪಾ ಅಂದರೆ, ಇದೇ ಫೆಬ್ರವರಿ ಎರಡನೇ ವಾರದಲ್ಲಿ ವಿಜಯ್- ರಶ್ಮಿಕಾ ಜೋಡಿ ಆಪ್ತರ…
ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣ ಉಂಟಾಗಿದ್ದು ಹೀಗಾಗಿ ಬಹುತೇಕ ಕಡೆ ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರು ಏರ್ಪೋರ್ಟ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ…
ಬಳ್ಳಾರಿ:- ತಡ ರಾತ್ರಿ ಬೈಕ್ ಕಳತನಕ್ಕೆ ಕಳ್ಳ ಯತ್ನಿಸಿದ್ದು, ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಳ್ಳಾರಿ ಜಿಲ್ಲೆಯ ಕುಡುತಿನ ಪಟ್ಟಣದಲ್ಲಿ ಘಟನೆ ಜರುಗಿದೆ ಮನೆ ಮುಂದೆ ಪಾರ್ಕ್ ಮಾಡಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಲಾಗಿದೆ. ಮೋತಿ ವೀರೇಶ್ ಎಂಬುವರಿಗೆ ಸೇರಿದ ಬೈಕ್ ಇದಾಗಿದೆ ಎನ್ನಲಾಗಿದೆ. ಬೈಕ್ ಲಾಕ್ ತೆಗೆದು ತಳ್ಳಿಕೊಂಡು ಪರಾರಿಯಾಗಲು ಯತ್ನಿಸಲಾಗಿದೆ. ಬೈಕ್ ಕಳ್ಳತನ ವಿಷಯ ಗೊತ್ತಾಗ್ತಿದಂತೆ ಯುವಕರು ಕಳ್ಳನ ಬೆನ್ನಟಿದ್ದಾರೆ. ಕೂಡಲೇ ಎಚ್ಚೆತ್ತ ಕಳ್ಳರು, ವೇಣಿವೀರಾಪುರ ಬಳಿ ಬೈಕ್ ಬಿಟ್ಟು ಪರಾರಿ ಆಗಿದ್ದಾರೆ. ಇಬ್ಬರೂ ಖದೀಮರಿಂದ ಪಲ್ಸರ್ ಬೈಕ್ ಕಳ್ಳತನಕ್ಕೆ ಯತ್ನಿಸಲಾಗಿದೆ ಎನ್ನಲಾಗಿದೆ. ಖದೀಮ ಕಳ್ಳತನ ಕೈಚಳಕದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಡಿತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಕಲಬುರ್ಗಿ:- ಇದೇ ತಿಂಗಳ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದ್ದು ಅಂದು ಎಲ್ಲೆಡೆ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿರೋ ಹಿನ್ನಲೆ ಕಲಬುರಗಿಯಲ್ಲಿ ರಾಮನವಮಿ ಉತ್ಸವ ಸಮಿತಿ ಉಚಿತವಾಗಿ ಹಣತೆಗಳನ್ನ ವಿತರಣೆ ಮಾಡಿತು. ನಗರದ ಶರಣ ಬಸವೇಶ್ವರ ದೇಗುಲದ ಅಂಗಳದಲ್ಲಿ ಈ ಸೇವಾ ಕಾರ್ಯ ನಡೆದಿದ್ದು ರಾಮ ಭಕ್ತರು ಆಸಕ್ತಿಯಿಂದ ಹಣತೆಗಳನ್ನ ಪಡೆದಿದ್ದು ವಿಶೇಷವಾಗಿತ್ತು. ಇದೇವೇಳೆ ಜಿಲ್ಲೆಯ108 ಗುಡಿಗಳಿಗೆ ತಲಾ 1008 ಹಣತೆಗಳನ್ನ ವಿತರಿಸಲು ರಾಮ ನವಮಿ ಉತ್ಸವ ಸಮಿತಿ ಸಂಕಲ್ಪ ಮಾಡಿದೆ ಅಂತ ಸಮಿತಿಯ ಮುಖ್ಯಸ್ಥ ರಾಜು ಭವಾನಿ ಹೇಳಿದ್ದಾರೆ…