Author: AIN Author

ತಿರುವನಂತಪುರಂ: ಕೇರಳದ (Kerala) ಕೊಚ್ಚಿಯಲ್ಲಿ (Kochi) ನಡೆದ ಕ್ರಿಶ್ಚಿಯನ್ನರ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ (Blast) ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 45 ವರ್ಷದ ಮಹಿಳೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರನ್ನು ಸಾಲಿ ಪ್ರದೀಪ್ (45) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 10:30 ರ ಸುಮಾರಿಗೆ ಅವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ ಮೃತ ಮಹಿಳೆಯ ಮಗಳು ಲಿಬ್ನಾ ತಿಂಗಳ ಹಿಂದೆ ಸ್ಫೋಟ ಸಂಭವಿಸಿದ ವೇಳೆ ತೀವ್ರವಾದ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಳು. ಆಕೆಯ ಸಹೋದರನ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ. ರಾಜ್ಯ ಆರೋಗ್ಯ ಇಲಾಖೆಯು ಅಧಿಕಾರಿಗಳ ಪ್ರಕಾರ ದುರ್ಘಟನೆಯ ಬಳಿಕ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ವೈದ್ಯಕೀಯ ಮಂಡಳಿಯನ್ನು ರಚಿಸಿದೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಅಕ್ಟೋಬರ್ 29 ರಂದು ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದವು. ಘಟನೆ ಬಳಿಕ ಡೊಮಿನಿಕ್ ಮಾರ್ಟಿನ್ ಎಂಬಾತ ತಾನೇ ಬಾಂಬ್‌ಗಳನ್ನು ಸ್ಫೋಟಿಸಿರುವುದಾಗಿ ಹೇಳಿ ಪೊಲೀಸರಿಗೆ ಶರಣಾಗಿದ್ದ. ಇದೀಗ ಆರೋಪಿಯನ್ನು…

Read More

ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ. ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ…

Read More

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಇಂದು (ನ.12) ಬರ ಪರಿಶೀಲನೆ ನಡೆಸಲಿದೆ. ಜೆಡಿಎಸ್ ಮುಖಂಡರು ಹುಣಸೂರು ತಾಲೂಕಿನ ಬೆಟ್ಟದೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.  https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿಟಿ ದೇವೇಗೌಡ ನೇತೃತ್ವದಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕರಾದ ಸಾ.ರಾ.ಮಹೇಶ್ ಅಶ್ವಿನ್ ಕುಮಾರ್ ಸೇರಿ ಹಲವು ನಾಯಕರು ಬರ ಪರಿಶೀಲನೆ ಮಾಡಲಿದ್ದಾರೆ.

Read More

ತುಮಕೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷ ಬಿ.ವೈ.ವಿಜಯೇಂದ್ರಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಬಳಿಕ ಸಿದ್ಧಗಂಗಾ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ನಂತರ ಮನೆದೇವರು ಎಡೆಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. https://ainlivenews.com/did-sending-a-message-to-a-girl-lead-to-murder-what-does-igp-ravikante-gowda-say/

Read More

ಬೆಂಗಳೂರು: ಗಣಪತಿ ದೇವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿದ ಸಾಣೇಹಳ್ಳಿಯ  ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ  ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ದೂರು ನೀಡಿದ್ದಾರೆ. ಗಣೇಶನ ಆರಾಧನೆ, ಆರಾಧಕರ ಆಚಾರ ವಿಚಾರಗಳ ಬಗ್ಗೆ ಸಾಣೇಹಳ್ಳಿ ಸ್ವಾಮೀಜಿಯವರು ಬಹಳ ತುಚ್ಚ ಮಾತುಗಳಿಂದ ನಿಂದಿಸಿರುವುದು ಅಕ್ಷಮ್ಯ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ  ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು  ನೀಡಿದ್ದಾರೆ. https://ainlivenews.com/24-hour-service-at-minto-hospital-for-diwali-firework-incident/ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, ಸಮಾಜದ ಒಂದು ವರ್ಗವನ್ನು ಓಲೈಸುವ ಭರದಲ್ಲಿ, ದೇಶದ ಬಹುಸಂಖ್ಯಾತರ ಆರಾಧನೆಯ, ನಂಬಿಕೆಯ ಕೇಂದ್ರ ಬಿಂದುವಾಗಿರುವ, ಶತಮಾನಗಳಿಂದ ಪೂಜಿಸಲ್ಪಡುತ್ತಿರುವ ಗಣಪತಿ ದೇವರ ಕುರಿತು ಅತ್ಯಂತ ಕೀಳು ಹೇಳಿಕೆ ನೀಡಿದ್ದಾರಲ್ಲದೇ, ಭಕ್ತವರ್ಗದ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ನವೆಂಬರ್ 2ರ ಗುರುವಾರದಂದು ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶಿವಧ್ವಜಾರೋಹಣ ನೆರವೇರಿಸಿ ಮಾತನಾಡುವಾಗ “ಗಣಪತಿಯನ್ನು ಸ್ತುತಿಸುವುದು ಮೌಡ್ಯದ ಆಚರಣೆ, ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿಯ ಸಂದರ್ಭಕ್ಕೆ ನೆಪಮಾತ್ರಕ್ಕೆ…

Read More

ಟೆಲ್ ಅವಿವ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಹಮಾಸ್ಗ ಬೆಂಬಲ ಸೂಚಿಸಿರುವ ಯೆಮನ್ನ ಹೌಥೀ ಉಗ್ರರು ಇಸ್ರೇಲ್ ಮೇಲೆ ಡ್ರೋನ್ ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಸುಮಾರು 1 ಸಾವಿರ ಮೈಲಿಗೂ ಹೆಚ್ಚು ದೂರದಲ್ಲಿದ್ದುಕೊಂಡೇ ಹೌಥೀಸ್ ಉಗ್ರರು ಡ್ರೋನ್ಗಳ ಮೂಲಕ ದಾಳಿ ನಡೆಸಿದ್ದಾರೆ. ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಆರಂಭಿಸಿದಾಗಿನಿಂದಲೂ ಹೌಥಿ ಉಗ್ರರು ಹಮಾಸ್ಗೆ ಬೆಂಬಲ ಸೂಚಿಸುತ್ತಲೇ ಇದ್ದಾರೆ. ಇಸ್ರೇಲ್ ಮೇಲೆ ಬ್ಯಾಲೆಸ್ಟಿಕ್ ಕ್ಷಿಪಣಿಗಳು (ballistic missiles) ಮತ್ತು ಡ್ರೋನ್ಗಳ ಮೂಲಕ ದಾಳಿ ನಡೆಸಲಾಗಿದೆ. ಇನ್ನು ಮುಂದೆ ಸಹ ಹಲವು ದಾಳಿ ನಡೆಸಿ, ಪ್ಯಾಲೆಸ್ತೀನಿಯನ್ನರ ಗೆಲುವಿಗೆ ಸಹಕಾರ ನೀಡಲಾಗುತ್ತದೆ ಎಂದು ಹೌಥಿ ಉಗ್ರ ಸಂಘಟನೆಯ ವಕ್ತಾರ ಯಹ್ಯ ಸಾರಿ ಹೇಳಿದ್ದಾನೆ. ಸಂಘರ್ಷ ಆರಂಭವಾದ ಬಳಿಕ ಇದು 3ನೇ ಬಾರಿ ಹೌಥಿಗಳು ದಾಳಿ ನಡೆಸುತ್ತಿದ್ದಾರೆ. ಅ.28ರಂದು ಹೌಥಿ ಉಗ್ರರು ಕ್ಷಿಪಣಿ ದಾಳಿ ನಡೆಸಿದ್ದರು, ಇದು ಈಜಿಪ್ಟ್ನಲ್ಲಿ ಸ್ಫೋಟಗೊಂಡಿತ್ತು. ನಡೆಸಿದ ದಾಳಿಯನ್ನು ಅಮೆರಿಕ ನೌಕಾಪಡೆ ಪ್ರತಿ ಬಂಧಿಸಿತ್ತು ಎಂದು ಅವನು ಹೇಳಿದ್ದಾನೆ

Read More

ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಕಣ್ಣಿಗೆ, ಚರ್ಮಕ್ಕೆ ಹಾನಿಯಾಗುವುದನ್ನು ತಡೆಗಟ್ಟಲು ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ. https://ainlivenews.com/muhurta-fix-for-bjps-new-president-vijayendras-inauguration/ ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರಿನ ನಗರದ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಆಸ್ಪತ್ರೆಗೆ ಬರುವ ಗಾಯಾಳುಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರು ಮುಂದಿನ ಒಂದು ವಾರ 24X7 ಕಾರ್ಯ ನಿರ್ವಹಿಸಲಿದ್ದಾರೆ. ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್​​ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್​ಗಳನ್ನ ಮೀಸಲಿರಿಸಿದೆ. ಪಟಾಕಿ ದುರಂತ ಎದುರಿಸಲು ಮಿಂಟೋ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ತುರ್ತು ಚಿಕಿತ್ಸೆಗೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಔಷಧಿಗಳನ್ನು, ಐ ಡ್ರಾಪ್ಸ್ ಎಲ್ಲವನ್ನು ವಾರ್ಡ್​ಗಳಲ್ಲಿ ಶೇಖರಿಸಿದೆ.

Read More

ಮಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಉತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಸಾಮಾನ್ಯ ಕಾರ್ಯಕರ್ತರಾಗಿ ಬಂದ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಿರುವುದು ಕಾರ್ಯಕರ್ತರಲ್ಲಿ ಹೊಸ ಹುರುಪು, ಉತ್ಸಾಹ ತಂದಿದೆ ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಕಾಂಗ್ರೆಸ್ ಪಕ್ಷದ ಆಡಳಿತದ ವೈಫಲ್ಯಗಳು ಎದ್ದು ಕಂಡುಬರುತ್ತಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬರ ನಿರ್ವಹಣೆಯಲ್ಲಿ ಸಂಪೂರ್ಣ ಸೋತಿದೆ. ಇದೆಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರ ಅವರಿಗೆ ಇದೆ. ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ವಿಜಯೇಂದ್ರ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದರು. https://ainlivenews.com/great-job-opportunity-in-hindustan-aeronautics-limited-posting-in-bangalore/ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಕೆಲಸ ತೃಪ್ತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದವನೆಂಬ ಅಪವಾದವಿತ್ತು. ಇಡೀ ರಾಜ್ಯವನ್ನು ಹದಿನೆಂಟು ಬಾರಿ ಸುತ್ತಿದ್ದು, ಮತಗಟ್ಟೆಯನ್ನು ಪೇಜ್ ಪ್ರಮುಖ್ ವರೆಗೆ ಸಂಘಟನೆ ಮಾಡುವ ಕೆಲಸ ಮಾಡಿದ್ದೇನೆ.…

Read More

ಬೆಂಗಳೂರು:- ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಾಗಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ನೀಡಲಾಗಿದೆ. ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದವು. ತನಿಖೆಗಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಅವರು ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ. ಕೆಇಎ ಪರೀಕ್ಷೆ ಅಕ್ರಮ ಆರೋಪಿ ಕಿಂಗ್​ಪಿನ್​ ಆರ್​.ಡಿ ಪಾಟೀಲ್​ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ನ 6. ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್‌ನ ಕಾಂಪೌಂಡ್ ಹಾರಿ ಆರ್‌.ಡಿ. ಪಾಟೀಲ್ ಎಸ್ಕೇಪ್ ಆಗಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಶುಕ್ರವಾರ ಮಹಾರಾಷ್ಟ್ರದ ಸೊಲ್ಲಾಪುರಲ್ಲಿ ಸಿಕ್ಕಿಬಿದ್ದಿದ್ದ. ಸದ್ಯ ಆತನನ್ನು ಬಂಧಿಸಿ ಕಲಬುರಗಿಗೆ ತರಲಾಗಿದೆ.

Read More

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ (Karnataka BJP) ಅಸಮಾಧಾನ, ಕಾಂಗ್ರೆಸ್ ಟೀಕೆಗಳ ನಡುವೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ (BY Vijayendra) ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಅಧಿಕಾರ ಸ್ವೀಕಾರ ಮಾಡಲಿದ್ದಾರೆ. https://ainlivenews.com/by-vijayendra-blessed-by-nirmalanandanath-sri/ ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ (Palace Ground) ಪದಗ್ರಹಣ ಸಮಾವೇಶ ನಡೆಯಲಿದೆ. ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ. ಈ ವಿಚಾರವನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ (JP Nadda) ಜೊತೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ ವಿಜಯೇಂದ್ರ ಮೊದಲ ದಿನವೇ ಪಕ್ಷ ಸಂಘಟನೆಯ ಕೆಲಸಕ್ಕೆ ಕೈ ಹಾಕಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಬೂತ್ ಅಧ್ಯಕ್ಷನ ಮನೆಗೆ ವಿಜಯೇಂದ್ರ ಮೊದಲ ಭೇಟಿ ನೀಡಿದರು. ಈ ಮೂಲಕ ಪಕ್ಷದ ಸಂಘಟನೆಯೇ ತಮ್ಮ ಮೊದಲ ಆದ್ಯತೆ. ಲೋಕಸಭೆ ಚುನಾವಣೆ ಗೆಲ್ಲುವುದೇ ನಮ್ಮ ಮುಂದಿರುವ ಸವಾಲು ಎಂಬ ಸಂದೇಶ ರವಾನಿಸಿದರು. ಚಾಮರಾಜನಗರ,…

Read More