Author: AIN Author

ಒಳ್ಳೆಯ ಹುಡುಗ ಪ್ರಥಮ್ (Pratham) ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ಫಸ್ಟ್ ನೈಟ್ ವಿತ್ ದೇವ’ (First Night with Deva) ಎಂದು ಹಸರಿಡಲಾಗಿದೆ. ಈ ಚಿತ್ರದ ಮೂಲಕ ಕನ್ನಡಕ್ಕೆ ಮಿಸ್ ಇಂಡಿಯಾ ರನ್ನರ್ ಅಪ್ ಆಗಿರುವ ಮಾನ್ಯ ಸಿಂಗ್ (Manya Singh) ಎಂಟ್ರಿ ಕೊಡುತ್ತಿದ್ದಾರೆ. ನವೆಂಬರ್ 16ರಂದು ಈ ಸಿನಿಮಾಗೆ ಚಾಲನೆ ಸಿಗಲಿದೆ. ಪ್ರಥಮ್ ಡಬಲ್ ಸಂಭ್ರಮದಲ್ಲಿದ್ದಾರೆ. ಇದೇ ತಿಂಗಳು ಅವರ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ಹೊಸ ಸಿನಿಮಾವನ್ನೂ ಒಪ್ಪಿಕೊಂಡಿದ್ದಾರೆ. ಕ್ಯಾಚಿ ಟೈಟಲ್ ನಿಂದಾಗಿ ಸಿನಿಮಾ ಗಮನ ಸೆಳೆಯುತ್ತಿದೆ. ಈ ಹಿಂದೆ ಕರ್ನಾಟಕದ ಅಳಿಯ ಎಂಬ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡಿದ್ದ ಪ್ರಥಮ್, ಇದೀಗ ಫಸ್ಟ್ ನೈಟ್ ಗೆ ಸಿದ್ಧವಾಗಿದ್ದಾರೆ. ಈ ಸಿನಿಮಾದ ಮೂಲಕ ಕನ್ನಡಕ್ಕೆ ಬರುತ್ತಿರುವ ಮಾನ್ಯ ಈ ಹಿಂದೆ ಫೆಮಿನಾ ಮಿಸ್ ಇಂಡಿಯಾದಲ್ಲಿ ಭಾಗಿಯಾಗಿದ್ದರು. ತಂದೆ ಆಟೋ ರಿಕ್ಷಾ ಚಾಲಕ ಎನ್ನುವ ಕಾರಣಕ್ಕಾಗಿ ಸಾಕಷ್ಟು ಸುದ್ದಿ ಆಗಿದ್ದರು. ಇದೀಗ ಕನ್ನಡ ಚಿತ್ರದ…

Read More

ಬೆಳಗಾವಿ:- ಬಿಜೆಪಿಯಲ್ಲಿ ಯಡಿಯೂರಪ್ಪಗೆ ಇದ್ದಷ್ಟು ಆಕರ್ಷಣೆ ಯಾರಿಗೂ ಇಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಟುಂಬ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲವೆಂದು ಬಿಜೆಪಿ ವರಿಷ್ಠರು ನಿಯಮ ಮಾಡಿದ್ದಾರಾದರೂ ಈಗ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ಮೊದಲು ಕಾಂಗ್ರೆಸ್‌ ಟೀಕೆ ಮಾಡುತ್ತಿದ್ದರು. ಈಗ ಅವರ ಪಕ್ಷದಲ್ಲಿಯೂ ವರಿಷ್ಠರ ಮಕ್ಕಳು ಶಾಸಕರು, ವಿಧಾನ ಪರಿಷತ್ ಸದಸ್ಯರು ಆಗಿದ್ದಾರೆ ಎಂದ ಅವರು, ಯಡಿಯೂರಪ್ಪ ಮಗ ಎಂದಾಕ್ಷಣ ಎಲ್ಲರೂ ಅವರ ಹಿಂದೆ ಬರುವುದಿಲ್ಲ. ಅಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗಿದ್ದ ಆಕರ್ಷಣೆ ಯಾರಿಗೂ ಬರಲಾರದು. ಅದೇ ರೀತಿ ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಇನ್ನು ವಿಜಯೇಂದ್ರ ಅವರು ಕಲಿಯಬೇಕಾದದ್ದು ಬಹಳಷ್ಟಿದೆ. ಪಕ್ಷವೂ ಅವರನ್ನು ಸಾಕಷ್ಟು ಬಳಸಿಕೊಳ್ಳಬೇಕಿದೆ ಎಂದರಲ್ಲದೆ ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟವಿಲ್ಲ ಖಚಿತವಾಗಿ

Read More

ಇಸ್ಲಾಮಾಬಾದ್‌: ವಿಶ್ವಕಪ್‌ 2023 ಟೂರ್ನಿಯಲ್ಲಿ ಪಾಕಿಸ್ತಾನ ಕಳಪೆ ಪ್ರದರ್ಶನ ತೋರಿದೆ. ಭಾರತದಿಂದ ವಾಪಸಾದ ನಂತರ ಪಾಕಿಸ್ತಾನದ (Pakistan) ನಾಯಕ ಬಾಬರ್ ಅಜಂ (Babar Azam) ವೈಟ್ ಬಾಲ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆಯಿದೆ. ವಿಶ್ವಕಪ್‌ 2023ರ (World Cup 2023) ಟೂರ್ನಿಯಲ್ಲಿ ಶ್ರೀಲಂಕಾ (Sri Lanka) ವಿರುದ್ಧ ಆಡಿದ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ (New Zealand) 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಪಾಕಿಸ್ತಾನ ತಂಡ ಎದುರಿಸಲು ಸಾಧ್ಯವಾಗದ ಸವಾಲನ್ನೇ ಮುಂದಿಟ್ಟಿದೆ. ಒಂದು ವೇಳೆ ಕಿವೀಸ್‌ ಹಿಂದಿಕ್ಕೆ ಪಾಕ್‌ ಸೆಮಿಸ್‌ ಪ್ರವೇಶಿಸಲೇಬೇಕಾದರೆ ಪಾಕ್‌ ತಂಡ ಊಹಿಸಲು ಸಾಧ್ಯವಾಗಷ್ಟು ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಬೇಕಿದೆ. ತಮ್ಮ ನಾಯಕತ್ವದ ಪಾಕಿಸ್ತಾನ ತಂಡ ವಿಶ್ವಕಪ್‌ ಸೆಮಿಸ್‌ನಿಂದ ಹೊರಬೀಳುವ ಭೀತಿಯಲ್ಲಿರುವ ಬಾಬರ್ ತನ್ನ ಭವಿಷ್ಯದ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ರಮಿಜ್ ರಾಜಾ ಹಾಗೂ ಅವರಿಗೆ ಹತ್ತಿರವಿರುವವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ನಾಯಕತ್ವದಲ್ಲಿ ಮುಂದುವರಿಯುವ ನಿರ್ಧಾರವು ಬಾಬರ್‌ಗೆ ಬಂದ…

Read More

ದೇಶದಲ್ಲಿ ಡೀಪ್‌ಫೇಕ್‌ (Deepfake) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರು ಡೀಪ್‌ಫೇಕ್‌ ವಿಡಿಯೋ ಸಂಚಲನ ಮೂಡಿಸಿತ್ತು. ಕತ್ರಿನಾ ಕೈಫ್ ಕೂಡ ಇದಕ್ಕೆ ತುತ್ತಾದರು. ಇದೀಗ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ (Sara Tendulkar) ಮತ್ತು ಕ್ರಿಕೆಟಿಗ (Cricket) ಶುಭಮನ್ ಗಿಲ್ (Shubman Gill) ಅವರ ಡೀಪ್‌ಫೇಕ್‌ ಫೋಟೋವೊಂದು ವೈರಲ್ ಆಗುತ್ತಿದೆ. ಇಬ್ಬರೂ ಜೊತೆಗಿರುವ ಫೋಟೋವನ್ನು ಡೀಪ್‌ಫೇಕ್‌ ಮಾಡಿ ಇಬ್ಬರೂ ಡೇಟ್ ಮಾಡುತ್ತಿದ್ದಾರೆ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ಶುಭಮನ್ ಮತ್ತು ಸಾರಾ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತದೆ. ಇಬ್ಬರೂ ಬಹಿರಂಗವಾಗಿ ಈವರೆಗೂ ಆ ಕುರಿತು ಮಾತನಾಡಿಲ್ಲ. ಆದರೂ, ಅವರಿಬ್ಬರ ಜೊತೆಗಿನ ಫೋಟೋವನ್ನು ನಕಲು ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು…

Read More

ಬೆಂಗಳೂರು: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಶತಕದ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿಗೆ (Virat Kohli) ಹೆಚ್ಚಿನ ಗೌರವ ಬೆಂಗಳೂರಿಗರು (Bengaluru) ನೀಡಬೇಕು. ಆರ್‌ಸಿಬಿಯ (RCB) ತಂಡದಲ್ಲೇ ಇರುವ ಕೊಹ್ಲಿಗೆ ಇನ್ನಷ್ಟು ಗೌರವವನ್ನು ನಮ್ಮ ಬಿಬಿಎಂಪಿ (BBMP), ಸರ್ಕಾರ ನೀಡಬೇಕು ಎಂದು ಪಾಲಿಕೆಗೆ ಮನವಿ ಬಂದಿದೆ. ವಿಶ್ವದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಿದ್ದೆ ತಡ, ಅವರ ಹೆಸರನ್ನು ಬೆಂಗಳೂರಿನ ಕೆಲ ರಸ್ತೆಗಳಿಗೆ ಇಡಬೇಕು ಎನ್ನುವ ಒತ್ತಾಯ ಮತ್ತೆ ಮುನ್ನೆಲೆಗೆ ಬಂದಿದೆ. ವಿರಾಟ್ ಕೊಹ್ಲಿ ಹಾಗೂ ನಮ್ಮ ಹೆಮ್ಮೆಯ ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ (Dr.Puneeth Rajkumar) ಹೆಸರಿಡಲು ಪಾಲಿಕೆಗೆ ಈ ಹಿಂದೆಯೇ ಮನವಿ ಮಾಡಲಾಗಿತ್ತು. ಈ ಇಬ್ಬರ ಹೆಸರನ್ನು ಎರಡು ಪ್ರತ್ಯೇಕ ರಸ್ತೆಗಳಿಗೆ ಇರಿಸುವ ಮೂಲಕ ಅಭಿಮಾನಿಗಳ ಆಶಯ ಈಡೇರಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು ಶಾಂತಿನಗರ ಬಸ್ ಟರ್ಮಿನಲ್ ಎದುರಿನ ರಸ್ತೆಗೆ ಡಾ. ಪುನೀತ್ ರಾಜ್‌ಕುಮಾರ್ ಅವರ…

Read More

ಮ್ಯಾಥ್ಯೂಸ್​ ಟೈಮ್ಡ್​ ಔಟ್ ವಿವಾದದ​ ಬಗ್ಗೆ ಟೀಮ್​ ಇಂಡಿಯಾ ಕೋಚ್​ ದ್ರಾವಿಡ್​ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಆಟಗಾರ ಕೂಡ ನಿಯಮ ಪಾಲನೆ ಮಾಡುವುದು ಅಗತ್ಯ ನಿಯಮ ಪಾಲಿಸಿದ್ದಕ್ಕಾಗಿ ಯಾರನ್ನೂ ದೂರಬಾರದು ಎಂದು ಹೇಳಿದ್ದಾರೆ. ಈ ಮೂಲಕ ಟೈಮ್ಡ್​ ಔಟ್​ ತೀರ್ಪಿಗೆ ಮನವಿ ಸಲ್ಲಿಸಿದ ಬಾಂಗ್ಲಾ ನಾಯಕ ಶಕೀಬ್​ ನಿರ್ಧಾರವನ್ನು ಪರೋಕ್ಷವಾಗಿ ಬೆಂಬಲಿಸಿದ್ದಾರೆ. ‘ಎಲ್ಲರೂ ಭಿನ್ನ ಯೋಚನೆ ಹೊಂದಿರುತ್ತಾರೆ. ನಾವೆಲ್ಲರೂ ವಿಚಿತ್ರ ಪ್ರಾಣಿಗಳು. ನಾವೆಲ್ಲರೂ ನಮ್ಮದೇ ಆದ ರೀತಿಯಲ್ಲಿ ಯೋಚಿಸುತ್ತೇವೆ. ನಿಜವಾದ ರೀತಿಯಲ್ಲಿ ಸರಿ ಅಥವಾ ತಪು$್ಪ ಎಂಬುದು ಯಾವುದೂ ಇರುವುದಿಲ್ಲ. ಭಿನ್ನ ಯೋಚನೆ ಹೊಂದಿರುವುದು ಕೂಡ ತಪ್ಪಲ್ಲ. ಯಾರಾದರೂ ನಿಯಮ ಪ್ರಕಾರ ನಡೆದುಕೊಳ್ಳಲು ಬಯಸಿದರೆ ಅದನ್ನು ದೂರುವಂತಿಲ್ಲ. ನೀವು ಬೇಕಿದ್ದರೆ ಅದರಂತೆ ನಡೆದುಕೊಳ್ಳಬೇಕಾಗಿಲ್ಲ. ಆದರೆ ಅದಕ್ಕಾಗಿ ಬೇರೆಯವರನ್ನು ದೂರುವುದು ಸರಿಯಲ್ಲ’ ಎಂದು ದ್ರಾವಿಡ್ ಹೇಳಿದ್ದಾರೆ.

Read More

ಕೋಲಾರ: ನಗರದಲ್ಲಿ ನ.3ರಂದು ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ 17 ವರ್ಷದ ಬಾಲಕ ಕಾರ್ತಿಕ್ ಸಿಂಗ್ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಕೋಲಾರ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹರೀಶರನ್ನು ಅಮಾನತ್ತು ಮಾಡಲಾಗಿದೆ. ಗುರುವಾರ ಕೋಲಾರದಲ್ಲಿ ಕೊಲೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಐಜಿಪಿ ರವಿಕಾಂತೇಗೌಡ, ಈ ಪ್ರಕರಣದಲ್ಲಿನ ಆರೋಪಿಗಳು ಈ ಹಿಂದೆ ಅದೇ ಬಾಲಕನ ಮೇಲೆ ಹಲ್ಲೆ ಮಾಡಿರುತ್ತಾರೆ‌. ಅಲ್ಲದೇ ಆರೋಪಿ ಬೇರೆ ಪ್ರಕರಣದಲ್ಲಿಯೂ ಭಾಗಿಯಾಗಿದ್ದಾನೆ. ನಂತರ ಬಾಲಾಪರಾಧಿ ಕೇಂದ್ರದಿಂದ ಹೊರಗೆ ಬರುತ್ತಾನೆ. ಹೊರ ಪ್ರಕರಣ ರೂವಾರಿ ರೌಡಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುತ್ತಾನೆ. ಈತನ ಚಟುವಟಿಕೆಗಳನ್ನ ನಿಗಾವಹಿಸುವಲ್ಲಿ ಪೊಲೀಸರು ವಿಫಲ ಆಗಿದ್ದಾರೆ. ಅಪ್ರಾಪ್ತರ ಮನಸ್ಥಿತಿಯನ್ನು ನೋಡಿ ವಯಸ್ಕರೆಂದು ತಿಳಿಯಬಹುದು: ಹಿಂದಿನ ದ್ವೇಷದ ಹಿನ್ನಲೆಯಲ್ಲಿ ಕಳೆದ ವಾರ ಪಾರ್ಕ್‌ನಿಂದ ಬಾಲಕನ ಅಪಹರಣ ಮಾಡಿ, ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿ ಬಾಲಕನನ್ನ ಬರ್ಬರವಾಗಿ ಕೊಲೆ ಮಾಡಿರುತ್ತಾರೆ‌. ಈ ಪ್ರಕರಣದಲ್ಲಿ ಎಂಟು ಜನ ಆರೋಪಿಗಳಲ್ಲಿ ಏಳು ಜನರನ್ನ ಬಂಧಿಸಿದ್ದೇವೆ. ಎಸ್ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನ ಮಾಡಲಾಗಿತ್ತು.…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದಕರಿಗೆ 85 ಕೋಟಿ ರೂ. ಫಂಡಿಂಗ್ (Terror Funding) ಮಾಡಿದ ಪ್ರಮುಖ ಪ್ರಕರಣವೊಂದನ್ನು ಎಸ್‍ಐಎ ಅಧಿಕಾರಿಗಳು (State Investigation Agency) ಭೇದಿಸಿದ್ದಾರೆ. ಪ್ರಕರಣ ಸಂಬಂಧ ಹಿರಿಯ ಪೊಲೀಸ್ (Police) ಅಧಿಕಾರಿ ಮತ್ತು ಪ್ರಮುಖ ಉದ್ಯಮಿ ಸೇರಿದಂತೆ ಶಂಕಿತರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದು ಭಯೋತ್ಪಾದಕರಿಗೆ ಹಣ ನೀಡಿದ ಇತ್ತೀಚಿನ ಬಹುದೊಡ್ಡ ಪ್ರಕರಣವಾಗಿದೆ. ಕಾಶ್ಮೀರದ ತನಿಖಾ ಸಂಸ್ಥೆ ಎಸ್‍ಐಎ ಈ ಪ್ರಕರಣದ ಶಂಕಿತರ ಮೇಲೆ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಪ್ರಕರಣದಲ್ಲಿ 85 ಕೋಟಿ ರೂ. ಮೊತ್ತದ ಹಣವನ್ನು ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಕ್ಕೆ ಬಳಸಲಾಗಿದೆ ಎಂಬ ಶಂಕೆ ಇದೆ. ವಿಚಾರಣೆಯ ವೇಳೆ 85 ಕೋಟಿ ರೂ.ಗೂ ಅಧಿಕ ಮೊತ್ತದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು. ಇದಾದ ಬಳಿಕ ಆಗಸ್ಟ್‌ನಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಸುಮಾರು 22 ಸ್ಥಳಗಳಲ್ಲಿ ಅಧಿಕಾರಿಗಳು…

Read More

ಬಂಗಾರಪೇಟೆ :- ಪ್ರಧಾನಿ ಮೋದಿಯಿಂದ ದೇಶ ದಿವಾಳಿ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನೇ ದಿವಾಳಿ ಮಾಡಿದೆ ಎಂದು ಅಸಂಬದ್ಧವಾಗಿ ಟೀಕಿಸುವ ಪ್ರಧಾನಿ ಮೋದಿ ದೇಶವನ್ನೇ ದಿವಾಳಿ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನಮ್ಮ ದೇಶದ ಸಾಲ ₹53.11 ಲಕ್ಷ ಕೋಟಿ ಅಷ್ಟೇ ಇತ್ತು. ಆದರೆ ಇದೀಗ ಅದು 125 ಲಕ್ಷ ಕೋಟಿ ರು.ವರೆಗೂ ಮುಟ್ಟಿದೆ ಎಂದರು. ಇನ್ನು, ಪದೇ ಪದೇ ಕಾಂಗ್ರೆಸ್ ಹೆಚ್ಚು ದಿನ ಇರುವುದಿಲ್ಲ ಎಂದು ಮೋದಿ ಅಲ್ಲಲ್ಲಿ ಭವಿಷ್ಯ ನುಡಿಯುತ್ತಾರೆ. ಅದು ಕೇವಲ ಅವರ ಹಗಲುಗನಸು ಎಂದೂ ತಿರುಗೇಟು ನೀಡಿದರು.

Read More

ಬೆಂಗಳೂರು :-ಪಟಾಕಿ ಅವಘಡಗಳು ನಗರದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡಗಳು ಸಂಭವಿಸುತ್ತಿದ್ದು, ಮಿಂಟೊ ಕಣ್ಣಿನ ಆಸ್ಪ‍ತ್ರೆಯಲ್ಲಿ ಒಂದು ಪ್ರಕರಣ ವರದಿಯಾಗಿದೆ. 7 ವರ್ಷದ ಬಾಲಕ ಪಟಾಕಿಯಿಂದಾದ ಗಾಯದ ಕಾರಣ ಮಿಂಟೊ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಿಜಲಿ ಪಟಾಕಿ ಸಿಡಿತ ವೀಕ್ಷಿಸುತ್ತಿದ್ದಾಗ ಕಣ್ಣಿಗೆ ಕಿಡಿ ಸಿಡಿದು, ಎರಡೂ ಕಣ್ಣಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಬಾಲಕನ ಕಣ್ಣಿನ ಒಳಗೆ ರಕ್ತ ಹೆಪ್ಪುಗಟ್ಟಿದೆ. ಇದರಿಂದ ಕ್ಯಾಟರ್‍ಯಾಕ್ಟ್ ಸಮಸ್ಯೆಯೂ ಕಂಡುಬಂದಿದ್ದು, ಶಸ್ತ್ರಚಿಕಿತ್ಸೆ ಮಾಡಬೇಕಿದೆ. ಪಟಾಕಿಗಳನ್ನು ಸಿಡಿಸುವವರು ಮಾತ್ರವಲ್ಲದೆ, ನೋಡುವವರಿಗೂ ಅಪಾಯವಿರುತ್ತದೆ‌. ಆದ್ದರಿಂದ ಪಟಾಕಿಯಿಂದ ಅಂತರ ಕಾಯ್ದುಕೊಳ್ಳಬೇಕು’ ಎಂದು ಮಿಂಟೊ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Read More