ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ನಾಡಿನಲ್ಲೇ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ನಗರದಲ್ಲಿ ವರ್ಷದ ಮೊದಲ ಹಬ್ಬದ ಸಂಭ್ರಮದಲ್ಲಿ ಸಿಟಿ ಮಂದಿ ಮುಳುಗಿದ್ದು, ನಗರದ ಕೆಆರ್ ಮಾರ್ಕೆಟ್ ನಲ್ಲಿ ಹಬ್ಬದ ಖರೀದಿಯಲ್ಲಿ ಜನತೆ ಮುಗಿಬಿದ್ದಿದ್ದಾರೆ. ಮಾರ್ಕೆಟ್ ನಲ್ಲಿ ಎಲ್ಲಿ ನೋಡಿದರೂ ಜನತೆ ತುಂಬಿ ತುಳುಕುತ್ತಿದ್ದಾರೆ. ಬೆಳಗ್ಗೆಯಿಂದಲೇ ಹಬ್ಬದ ಖರೀದಿಗೆ ಬೇಕಾಗುವ ವಸ್ತುಗಳು ಖರೀದಿಗೆ ಜನ ಬರುತ್ತಿದ್ದು, ದರ ಏರಿಕೆ ನಡುವೆಯೂ ಹಬ್ಬದ ಖರೀದಿ ಭರಾಟೆ ಜೋರುಯಾಗಿದೆ. ಕೆಆರ್ ಮಾರ್ಕೆಟ್ ನಲ್ಲಿ ಖರೀದಿಗೆ ಜನತೆ ಮುಗಿಬಿದ್ದಿದ್ದು, ಕೆಆರ್ ಮಾರ್ಕೆಟ್ ಜಂಗುಳಿಯಿಂದ ತುಳುಕಿ ತುಂಬುತ್ತಿದೆ.
Author: AIN Author
ಕನ್ನಡ ಚಿತ್ರರಂಗವೀಗ ಹೊಸಾ ಹರಿವಿನ ಮೂಲಕ ತಾಜಾತನದಿಂದ ನಳನಳಿಸಲಾರಂಭಿಸಿದೆ. ಹೊಸಬರ ತಂಡ, ಹೊಸಾ ಆಲೋಚನೆಗಳಿಂದ ಕಳೆಗಟ್ಟಿಕೊಳ್ಳುತ್ತಿದೆ. ಅದನ್ನು ಮತ್ತಷ್ಟು ಹೊಳಪಾಗಿಸುವಂಥಾ ಮತ್ತೊಂದು ಚಿತ್ರವೀಗ ಸದ್ದೇ ಇಲ್ಲದಂತೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ತಯಾರಾಗಿದೆ. `ಸಾರಾಂಶ’ (Saaramsha) ಎಂಬ ಈ ಚಿತ್ರವನ್ನು ಬಹುಮುಖ ಪ್ರತಿಭೆ ಸೂರ್ಯ ವಸಿಷ್ಠ (Surya Vasistha) ನಿರ್ದೇಶನ ಮಾಡಿದ್ದಾರೆ. ಶೀರ್ಷಿಕೆಯಲ್ಲಿಯೇ ವೈಶಿಷ್ಟ್ಯವೊಂದನ್ನು ಬಚ್ಚಿಟ್ಟುಕೊಂಡಂತಿರೋ ಈ ಸಿನಿಮಾ ಪ್ರೇಕ್ಷಕರನ್ನು ಮುಖಾಮುಖಿಯಾಗುವ ಸನ್ನಾಹದಲ್ಲಿದೆ. ವಿಶೇಷವೆಂದರೆ, ಇತ್ತೀಚಿನ ವರ್ಷಗಳಲ್ಲಿ ವಿರಳವಾದರೂ ಹೊಸಾ ಸಾಧ್ಯತೆಗಳತ್ತ ತೆರೆದುಕೊಳ್ಳುತ್ತಿರುವ ಶ್ರುತಿ ಹರಿಹರನ್ (Shruti Hariharan) ಇಲ್ಲಿ ಪ್ರಧಾನ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಓರ್ವ ಕಥೆಗಾರ ತಾನು ಸೃಷ್ಟಿಸಿದ ಪಾತ್ರವನ್ನೇ ಎದುರುಗೊಳ್ಳುವ ರೋಮಾಂಚಕ ಕಥಾ ಎಳೆ, ಆ ಪಾತ್ರವನ್ನು ಕಥೆಗಾರ ಬರೆದನೋ, ಆ ಪಾತ್ರವೇ ಕಥೆಗಾರನ ಮೂಲಕ ಬರೆಸಿಕೊಳ್ಳುತ್ತಿದೆಯೋ ಎಂಬಂಥಾ ಸೂಕ್ಷ್ಮ ಕದಲಿಕೆಯ ಸುತ್ತ ಈ ಸಿನಿಮಾ ಚಲಿಸುತ್ತದೆಯಂತೆ. ಸದ್ಯಕ್ಕೆ ನಿರ್ದೇಶಕರು ಇವಿಷ್ಟು ವಿಚಾರವನ್ನಷ್ಟೇ ಬಿಟ್ಟುಕೊಟ್ಟಿದ್ದಾರೆ. ಅದರ ಜೊತೆಗೆ ಮೋಹಕ ವಾಸ್ತವಿಕತೆ ಅಥವಾ ಮ್ಯಾಜಿಕಲ್ ರಿಯಲಿಸಂ ಎಂಬ ವಿರಳ ಜಾನರಿಗೆ ಈ…
ಚಿತ್ರದುರ್ಗ: ಎಲ್ಲ ಜಾತಿಯಲ್ಲೂ ರಾಮಭಕ್ತರಿದ್ದಾರೆ. ಬಿಜೆಪಿಯವರು ರಾಮನ ಹೆಸರು ದುರುಪಯೋಗ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್ ಆಂಜನೇಯ ಆರೋಪಿಸಿದರು. ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಆಹ್ವಾನ ಪತ್ರಿಕೆ ಕಾಂಗ್ರೆಸ್ ಪಕ್ಷ ಯಾಕೆ ತಿರಸ್ಕರಿಸಿದೆ ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ಇನ್ನೂ ದೇವಸ್ಥಾನವೇ ಪೂರ್ಣ ಆಗಿಲ್ಲ ಉದ್ಘಾಟನೆ ಮಾಡಲು ಹೊರಟಿದ್ದಾರೆ. ಲೋಕಸಭಾ ಚುನಾವಣೆ ಲಾಭ ಪಡೆಯಲು ತರಾತುರಿಯಲ್ಲಿ ದೇಗುಲ ನಿರ್ಮಾಣ ಮಾಡ್ತಿದ್ದಾರೆ. ಎಲೆಕ್ಷನ್ ಆದಮೇಲೆ ಮಾಡಬೇಕಿತ್ತು. ಆದರೆ ಚುನಾವಣೆಯಲ್ಲಿ ರಾಮನ ಹೆಸರು ಹೇಳಿಕೊಂಡು ವೋಟ್ ಪಡೆಯಬಹುದು ಲೆಕ್ಕಾಚಾರದಲ್ಲಿ ಮಾಡ್ತಿದ್ದಾರೆ. https://ainlivenews.com/mukesh-ambani-property-once-again-joins-the-100-billion-club/ ಹೀಗಾಗಿ ಬಿಜೆಪಿಯವರು ಉದ್ಘಾಟನೆ ಮಾಡ್ತಿರೋ ಪೂಜೆಗೆ ನಾವು ಹೋಗಲ್ಲ ಅಂತ ಹೇಳಿದ್ದೇವೆ ಅಷ್ಟೇ ಎಂದರು. ನಾವು ಹಿಂದೂಗಳಲ್ಲ ಅಂತಾ ಎಲ್ಲೂ ಹೇಳಿಲ್ಲ, ರಾಮನ ಪೂಜೆಗೆ ನಮ್ಮ ವಿರೋಧವಿಲ್ಲ. ನಾವೆಲ್ಲರೂ ಹಿಂದೂಗಳೇ, ರಾಮನ ಪೂಜೆಯನ್ನೂ ಮಾಡುತ್ತಿಲ್ವೇ? ನಾವೆಲ್ಲ ರಾಮನ ಭಕ್ತರೇ. ಬಿಜೆಪಿ ರಾಮನ ಹೆಸರಲಿ ರಾಜಕೀಯ ಮಾಡ್ತಿರೋದ್ರಿಂದ ನಾವು ಹೋಗಲ್ಲ ಅಂತ ಹೇಳಿದ್ದೇವೆ ಎಂದರು.
ಬಾಲಿವುಡ್ ಸ್ಟಾರ್ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ (Ira Khan)- ನೂಪುರ್ ಶಿಖರೆ ಜೋಡಿ ಜ.10ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮುಂಬೈನ ಪ್ರತಿಷ್ಟಿತ ರೆಸಾರ್ಟ್ವೊಂದರಲ್ಲಿ ಅದ್ದೂರಿ ಆರತಕ್ಷತೆ (Reception) ಆಯೋಜಿಸಿದ್ದಾರೆ. ಈ ಸಮಾರಂಭಕ್ಕೆ ಸಲ್ಮಾನ್ ಖಾನ್, ಶಾರುಖ್ ಖಾನ್ (Sharukh Khan) ದಂಪತಿ ಸೇರಿದಂತೆ ಅನೇಕರು ಭಾಗಿದ್ದಾರೆ. ಮುದ್ದಿನ ಮಗಳು ಇರಾ ಖಾನ್- ನೂಪುರ್ ಮದುವೆಯ ಬಳಿಕ ಆರತಕ್ಷತೆ ಗ್ರ್ಯಾಂಡ್ ಆಗಿ ಹಮ್ಮಿಕೊಂಡಿದ್ದಾರೆ. ನೂಪುರ್ ಕಪ್ಪು ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರೆ, ಇರಾ ಕೆಂಪು ಲೆಹೆಂಗಾ ಧರಿಸಿ ಮಿಂಚಿದ್ದಾರೆ ಇರಾ ಆರತಕ್ಷತೆ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್, ಗೌರಿ- ಶಾರುಖ್ ಖಾನ್ ಜೋಡಿ, ರಣ್ಬೀರ್ ಕಪೂರ್, ಕತ್ರಿನಾ ಕೈಫ್, ಜಯಾ ಬಚ್ಚನ್, ಸುಶ್ಮಿತಾ ಸೇನ್, ತೆಲುಗು ನಟ ನಾಗಚೈತನ್ಯ, ಫರ್ಹಾನ್ ಅಖ್ತರ್, ಜೆನಿಲಿಯಾ ದೇಶ್ಮುಖ್, ಅದಿತಿ- ಸಿದ್ಧಾರ್ಥ್ ಜೋಡಿ, ಅನಿಲ್ ಕಪೂರ್, ಹೇಮಾ ಮಾಲಿನಿ, ರೇಖಾ ಸೇರಿದಂತೆ ಅನೇಕರು ಭಾಗಿಯಾಗುವ ಮೂಲಕ ನವಜೋಡಿಗೆ ಶುಭಕೋರಿದ್ದಾರೆ.
ಬೆಂಗಳೂರು:- ಸಂಕ್ರಾಂತಿ ಹಬ್ಬದ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಯಲಹಂಕದ ಕೊಡಿಗೆಹಳ್ಳಿಯಲ್ಲಿ ಶಾಸಕ ಕೃಷ್ಣೆ ಭೈರೇಗೌಡ ಮತ್ತೆ ಧರ್ಮಪತ್ನಿ ಮಿನಾಕ್ಷಿ ನೇತೃತ್ವದಲ್ಲಿ ಸುಗ್ಗಿ ಹುಗ್ಗಿ ಹಬ್ಬ ಆಯೋಜಿಸಲಾಗಿದೆ. ಸುಗ್ಗಿ ಹುಗ್ಗಿ ಹಬ್ಬ ಜ.13ರಂದು ಉದ್ಘಾಟನೆಗೊಂಡಿದ್ದು, ಇನ್ನು ಎರಡು ದಿನಗಳ ಕಾಲ ನಡೆಯಲಿದೆ. ಸಿಲಿಕಾನ್ ಸಿಟಿಯಲ್ಲಿ ಹಳ್ಳಿಯ ವಾತಾವರಣ ನಿರ್ಮಾಣಗೊಂಡಿದ್ದು, ಹಳ್ಳಿಯ ಸೊಗಡಿನ ಆಟ.. ಎತ್ತುಗಳ ನೋಟ ಕಣ್ಮನಸೆಳೆಯುತ್ತಿದೆ. ಅದರಲ್ಲೂ ಪುಟ್ಟ ಬಾಲಕರಯ ಮಣ್ಣಿನ ಮಡಿಕೆ ಮಾಡುವ ಸಂಭ್ರಮದಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ. ಒಲೆಯಲ್ಲಿ ಪೊಂಗಲ್ ಸೇರಿದಂತೆ ಹಳ್ಳಿಯ ಸೊಗಡನ್ನು ಬಿಂಬಿಸುತ್ತಿದೆ ಎಂದು ಹೇಳಬಹುದಾಗಿದೆ.
ಬೆಂಗಳೂರು: ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಮೈದಾನಕ್ಕಿಳಿಯುತ್ತಿದ್ದಂತೆ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತೊಂದು ದಾಖಲೆ ಬರೆದಿದ್ದಾರೆ. ಆದರೆ ಇದೇ ಐತಿಹಾಸಿಕ ಪಂದ್ಯದಲ್ಲಿ ಕೆಟ್ಟ ದಾಖಲೆಯನ್ನೂ ಬರೆದಿದ್ದಾರೆ. 150 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶ್ವದ ಮೊದಲ ಕ್ರಿಕೆಟಿಗನಾಗಿ ಹಿಟ್ಮ್ಯಾನ್ ಹೊರಹೊಮ್ಮಿದ್ದಾರೆ. ಇವರ ನಂತರದ ಸ್ಥಾನವನ್ನು ಐರ್ಲೆಂಡ್ನ ಪೌಲ್ ಸ್ಟೀರ್ಲಿಂಗ್ ಈವರೆಗೆ ಒಟ್ಟು 134 ಟಿ20 ಪಂದ್ಯಗಳನ್ನಾಡಿ ಎರಡನೇ ಸ್ಥಾನದಲ್ಲಿದ್ದಾರೆ. ICC ಪುರುಷರ T20 ವಿಶ್ವಕಪ್ 2022 ರ ಅಂತ್ಯದ ನಂತರ ರೋಹಿತ್ ಮೊದಲ ಬಾರಿಗೆ ಭಾರತದ T20Iಗೆ ಮರಳಿದ್ದರು. ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಯಲ್ಲಿ 100 ಗೆಲುವು ದಾಖಲಿಸಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. Close Player
ಬೆಂಗಳೂರು: ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಎರಡನೇ ಟಿ-20 ಪಂದ್ಯವು ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ದುಬೆ ದರ್ಬಾರ್ನಿಂದ 6 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ್ದ ಭಾರತ, ಇಂದಿನ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಕಿಂಗ್ ಕೊಹ್ಲಿ ಆಗಮನದಿಂದ ತಿಲಕ್ ವರ್ಮಾ ಅವರಿಗೆ ಕೊಕ್ ನೀಡುವ ಸಾಧ್ಯತೆಯಿದೆ. ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ/ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್ ಅಫ್ಘಾನಿಸ್ತಾನ ತಂಡ ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್,…
ಹುಬ್ಬಳ್ಳಿ: ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದ, ಶ್ರೀರಾಮಜನ್ಮಭೂಮಿ ಕುರಿತು ಯಾವುದೇ ನಿರ್ಣಯ ಕೈಗೊಳ್ಳಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ಕಾಂಗ್ರೆಸ್ಸಿನವರು ರಾಮ ಮಂದಿರದ ಯಶಸ್ಸಿನ ಪಾಲು ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮಮಂದಿರ ಉದ್ಘಾಟನೆ ಆಹ್ವಾನ ಪತ್ರಿಕೆ ಜತೆ ನೀಡುತ್ತಿರುವ ಮಂತ್ರಾಕ್ಷತೆ ರಾಜ್ಯ ಸರಕಾರದ ಅನ್ನಭಾಗ್ಯದ ಅಕ್ಕಿ ಎಂದು ಹೇಳುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರ ಈ ವರೆಗೆ ಒಂದೇ ಒಂದು ಅಕ್ಕಿ ಕಾಳನ್ನು ಕೊಟ್ಟಿಲ್ಲ. ಚುನಾವಣೆ ವೇಳೆ ಘೋಷಿಸಿರುವ 10 ಕೆಜಿ ಅಕ್ಕಿಯನ್ನು ಸಹ ನೀಡಿಲ್ಲ. ಈಗ ಮಂತ್ರಾಕ್ಷತೆಗೆ ರಾಜ್ಯ ಸರಕಾರದ ಯೋಜನೆ ಅಕ್ಕಿ ಬಳಸಲಾಗುತ್ತದೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು. https://ainlivenews.com/mukesh-ambani-property-once-again-joins-the-100-billion-club/ ಈ ಹಿಂದೆ ಶ್ರೀರಾಮ ಕಾಲ್ಪನಿಕ, ರಾಮಾಯಣ ನಡೆದ ಬಗ್ಗೆ ಪುರಾವೆ ಇಲ್ಲ ಎಂದು ಹೇಳುತ್ತಿದ್ದವರು, ಇದೀಗ ನಾವು ರಾಮನ ಭಕ್ತರು, ನಮ್ಮ ಯೋಜನೆ ಅಕ್ಕಿಯೇ ಮಂತ್ರಾಕ್ಷತೆಗೆ ಬಳಸುತ್ತಿದ್ದಾರೆ ಎಂದು ಕ್ರೆಡಿಟ್ ಪಡೆಯಲು ಮುಂದಾಗುವ…
ಬೆಂಗಳೂರು:- ಭಾರತದಲ್ಲಿ ರಾಮಜಪ ಶುರುವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಮರ್ಯಾದಾ ಪರುಷೋತ್ತಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ಭಾರತದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದೆ. ಜನವರಿ 22ರಂದೇ ಹೆರಿಗೆ ಆಗಲಿ ಎಂದು ಗರ್ಭಿಣಿಯರು ಬಯಸುತ್ತಿದ್ದಾರೆ. ಈ ಟ್ರೆಂಡ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಶುರುವಾಗಿದೆ. ರಾಮ ಮಂದಿರದಲ್ಲಿ ರಾಮ ಮೂರ್ತಿ ಪ್ರತಿಷ್ಠಾಪನೆಯ ದಿನವೇ ಡೆಲಿವರಿ ಡೇಟ್ ನೀಡುವಂತೆ ರಿಕ್ವೇಸ್ಟ್ ಮಾಡುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಯ ದಿನವೇ ಸಿಜೀರಿನ್ ಮಾಡಿಸಿ ಅಂತ ಗರ್ಭಿಣಿಯರು ವೈದ್ಯರ ಪಟ್ಟು ಹಿಡಿದಿದ್ದಾರೆ. ರಾಮ ಮೂರ್ತಿ ಪ್ರತಿಷ್ಠಾಪನೆಯ ದಿನ ತುಂಬಾ ಒಳ್ಳೆಯ ದಿನವಾಗಿದೆ. ಹೀಗಾಗಿ ಸಾಕಷ್ಟು ಗರ್ಭಿಣಿಯರು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೇವರಿ 22 ರಂದೇ ಡೆಲಿವೇರಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಸಾಕಷ್ಟು ಗರ್ಭಿಣಿಯರಿಂದ ಜನೇವರಿ 22 ದಿನಕ್ಕೆ ರಿಕ್ವೇಸ್ಟ್ ಬರ್ತಿವೆ . ಆದ್ರೆ ಎಲ್ಲರಿಗೂ ಅವತ್ತೆ ಡೆಲಿವರಿ ಮಾಡುವುದಕ್ಕೆ ಕಷ್ಟ ಸಾಧ್ಯ ಅಂತ ವೈದ್ಯರು ಹೇಳುತ್ತಿದ್ದಾರೆ. ಡೆಲಿವರಿ ನಿಗಧಿಯಾದ ದಿನಾಂಕಕ್ಕಿಂತ ಒಂದು ವಾರದ ಹಿಂದೆ…
ಹಾಂಗ್ಕಾಂಗ್ನಲ್ಲಿ ಇದೇ ಜನವರಿ 21ರಂದು ನಡೆಯಲಿರುವ 19ನೇ ಏಷ್ಯನ್ ಮ್ಯಾರಥಾನ್ ಚಾಂಪಿಯನ್ಶಿಪ್ನಲ್ಲಿ (Asian Marathon Championships) ಭಾರತವನ್ನು ಕೊಡಗಿನ ಟಿ. ಶೆಟ್ಟಿಗೇರಿಯ ಬಿ.ಬೆಳ್ಳಿಯಪ್ಪ ಅವರು ಪ್ರತಿನಿಧಿಸಲಿದ್ದಾರೆ. ಪುರುಷರ ವಿಭಾಗದಲ್ಲಿ ಇಬ್ಬರು ಸ್ಪರ್ಧಿಗಳು ಭಾರತವನ್ನು ಪ್ರತಿನಿಧಿಸುತ್ತಿದ್ದು, ಕರ್ನಾಟಕದ ಬೆಳ್ಳಿಯಪ್ಪ ಅವರೊಂದಿಗೆ ಉತ್ತರಾಖಂಡದವರು ಸೇರಿದ್ದಾರೆ. ಕಳೆದ ವರ್ಷ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಮ್ಯಾರಥಾನ್ನಲ್ಲಿ (National Marathon) ಬೆಳ್ಳಿಯಪ್ಪ ಬೆಳ್ಳಿ ಪದಕ ಪಡೆದು ಏಷ್ಯನ್ ಮ್ಯಾರಥಾನ್ ಚಾಂಪಿಯನ್ ಷಿಪ್ನಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದರು. ಭಾರತೀಯ ಸೇನೆಯಲ್ಲಿರುವ ಈವರು ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ನಲ್ಲಿದ್ದು ಊಟಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಬೆಳ್ಳಿಯಪ್ಪ ಮೂಲತಃ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಬೋಪಯ್ಯ ಹಾಗೂ ರೋಜಾ ದಂಪತಿ ಪುತ್ರರಾಗಿದ್ದಾರೆ.