Author: AIN Author

ಚನ್ನಪಟ್ಟಣ:- ಅಧಿಕಾರಿಗಳು ಪ್ರಾಮಾಣಿಕ ಜನಸೇವೆ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಜಿಲ್ಲೆಯಲ್ಲೆಡೆ ಬರ ಆವರಿಸಿದ್ದು, ಕೃಷಿ, ರೇಷ್ಮೇ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ ರೈತರಿಗೆ ನೆರವಾಗಬೇಕು ಎಂದರು. ಬಹುತೇಕ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಲಭ್ಯ ಸಿಬ್ಬಂದಿಯೊಂದಿಗೆ ಸಾರ್ವಜನಿಕ ಕೆಲಸಗಳಿಗೆ ಅಡ್ಡಿಯಾಗದಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಅಧಿಕಾರಿಗಳು ಯಾವುದೇ ಒತ್ತಡಗಳಿಗೆ ಒಳಗಾಗದೆ ಪ್ರಾಮಾಣಿತೆಯಿಂದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕು. ನಾನು ಎಂದಿಗೂ ಕಾನೂನು ಬಾಹಿರ ಕೆಲಸ ಮಾಡಲು ಅವಕಾಶ ನೀಡಿಲ್ಲ. ಹಿಂದೆ ಹೇಗೆ ಕೆಲಸ ಮಾಡಿದಿರೋ ಗೊತ್ತಿಲ್ಲ, ಇನ್ನು ಮುಂದೆ ಬದ್ಧತೆಯಿಂದ ಕೆಲಸ ಮಾಡಿ ಎಂದು ತಾಕೀತು ಮಾಡಿದರು. ತಾಲೂಕಿನಲ್ಲಿ ಅತಿ ಹೆಚ್ಚು ಸಮಸ್ಯೆಗಳು ಸೃಷ್ಟಿಯಾಗುವುದೇ ಕಂದಾಯ ಇಲಾಖೆಯಲ್ಲಿ. ಕಂದಾಯ ಇಲಾಖೆ ಅಧಿಕಾರಿಗಳು ರೈತರನ್ನು ಕಚೇರಿಗೆ ಅಲೆದಾಡಿಸಬೇಡಿ. ಲಂಚಕ್ಕಾಗಿ ಪೀಡಿಸದೇ ಅವರ ಸಂಕಷ್ಟ ಅರಿತು ಕೆಲಸ ಕಾರ್ಯಗಳನ್ನು ತ್ವರಿವಾಗಿ…

Read More

ಬೆಂಗಳೂರು:- ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಆಗುತ್ತಾರೆ, ಡಿಸಿಎಂ ಆಗ್ತಾರೆ ಎಂಬ ವಿಚಾರದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸದ್ಯಕ್ಕೆ ಯಾವ ಚರ್ಚೆಯೂ ಇಲ್ಲ. ಎಲ್ಲರೂ ಚುನಾವಣೆಯಲ್ಲಿ ಬಿಜಿಯಾಗಿದ್ದಾರೆ. ಅದೇನೆ ಇದ್ರೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಅಂತಹ ಚರ್ಚೆ ಈಗ ಸದ್ಯಕ್ಕೆ ನಡೆಯುತ್ತಿಲ್ಲ. ಚುನಾವಣೆ ಮುಗಿದ ಮೇಲೆ ಏನಾಗುತ್ತದೆ, ಮುಗಿದ ಮೇಲೆ ಏನು ಮಾಡ್ತಾರೆ ಕಾದುನೋಡಬೇಕಿದೆ ಎಂದು ಹೇಳಿದರು. ಇನ್ನೂ ಬೆಳಗಾವಿ ರಾಜಕಾರಣದಲ್ಲಿ ಹೊರಗಿನವರ ಹಸ್ತಕ್ಷೇಪದ ವಿಚಾರದಲ್ಲಿ ಬುಸುಗುಡುತ್ತಿರುವ ಸಚಿವ ಸತೀಶ್‌ ಜಾರಕಿಹೊಳಿ ಅವರು ಇದೀಗ ಮತ್ತೊಮ್ಮೆ ತಮ್ಮ ಆಕ್ಷೇಪವನ್ನು ಹೊರಹಾಕಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಮಾತೇ ಇಲ್ಲ ಎಂದರು. ʻʻಡಿ.ಕೆ ಶಿವಕುಮಾರ್ ಅವರು ನಮ್ಮ ಮನೆಗೆ ಸುಮಾರು ಬಾರಿ ಬಂದಿದ್ದಾರೆ. ಈ ವೇಳೆ ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆʼʼ ಎಂದು ಹೇಳಿದ ಅವರು, ನಾವು ಮೈಸೂರಿಗೆ ಭೇಟಿ ನೀಡುವ ವಿಚಾರವೇ ಬೇರೆ,…

Read More

ಬೆಂಗಳೂರು:- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜನರ ಸಮಸ್ಯೆ ಆಲಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂದು ನೋಡಿದ್ದೇನೆ. ಉಪಮುಖ್ಯಮಂತ್ರಿ ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ಅವರು ಬೆಂಗಳೂರು ನೋಡುತ್ತಿರುತ್ತಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾರ್ಯಗಳಿಗೆ ಯಾವುದೆ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆ ಆಗಿದ್ದ ಹಣ ವಾಪಸ್ ಪಡೆದಿದ್ದಾರೆ. ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದಲ್ಲೆ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೆ ಸರಕಾರ ಕಡೆಗಣನೆ ಮಾಡಿದೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ…

Read More

ಬೆಂಗಳೂರು:-ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಸಿದ್ದನಹೊಸಹಳ್ಳಿಯಲ್ಲಿ ಬೈಕ್​ಗಳ ನಡುವೇ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಒಂದು ಬೈಕ್ ವೇಗವಾಗಿಬರುತ್ತದೆ, ಈ ವೇಳೆ ಎದುರುಗಡೆಯಿಂದ ಬರುವ ಟಿಟಿ ತಪ್ಪಿಸಲು ಹೋಗಿ ಪಕ್ಕದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕುಡಿತದ ಅಮಲಿನಲ್ಲಿದ್ದವನ ಅತೀಯಾಟಕ್ಕೆ ತಾನೂ ಸಾವನ್ನಪ್ಪಿದ್ದು, ‍ರಾಜಸ್ಥಾನ ಮೂಲದ ಕೂಲಿ‌ ಕಾರ್ಮಿಕನ ಪ್ರಾಣ ತೆಗೆದಿದ್ದಾನೆ. ಇಲ್ಲಿ ಸಾವನ್ನಪ್ಪಿರೋದು ಓರ್ವ ರಾಜಸ್ಥಾನ ಮೂಲದ ರಾಜೇಶ್ ಹಾಗೂ ಮತ್ತೊಬ್ಬ ಬೆಂಗಳೂರು ಉತ್ತರ ತಾಲೂಕು ಹೆಗ್ಗಡದೇವನಪುರ ನಿವಾಸಿ ಧನರಾಜ್ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಮಾದನಾಯಕನಹಳ್ಳಿ ಪೊಲೀಸರು ಅಂಬ್ಯೂಲನ್ಸ್ ಮುಖಾಂತರವಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹಗಳನ್ನು ಸಾಗಿಸಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗಳೊಂದಿಗೆ ಪಾರಾಗಿದ್ದಾರೆ. ಇನ್ನು ಈ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Read More

ಬೆಂಗಳೂರು:- ಕೇರಳದಲ್ಲಿ ಜೆಡಿಎಸ್​​ ಕಾರ್ಯಕಾರಣಿ ಸಭೆಯನ್ನು ನ. 15 ರಂದು ಆಯೋಜಿಸಿದ್ದು, ಸಭೆಯಲ್ಲಿ ಯಾರು ಹಾಜರಾಗದಂತೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸೂಚನೆ ನೀಡಿದ್ದಾರೆ. ಪತ್ರ ಬರೆದಿರುವ ಗೌಡ್ರು, JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಕರೆದ ಸಭೆಗೆ ಹಾಜರಾಗಬೇಡಿ. ಕರೆದಿರುವ ಸಭೆ ಅಧಿಕೃತ ಸಭೆ ಅಲ್ಲ, ಯಾರು ಕೂಡ ಹಾಜರಾಗಬಾರದು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಿಗೆ ಪತ್ರ ಬರೆಯಲಾಗಿದೆ. JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಅವರು 15 ನವೆಂಬರ್ ರಂದು ಬೆಳಿಗ್ಗೆ 10 ಗಂಟೆಗೆ ಕೇರಳ ಆರ್ಟ್ಸ್ ಮತ್ತು ಕ್ರಾಫ್ಟ್ಸ್ ವಿಲೇಜ್, ವೆಲ್ಲರ್, ತಿರುವನಂತಪುರದಲ್ಲಿ ಜನತಾ ದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯನ್ನು ಆಯೋಜಿಸಿದ್ದಾರೆ. ಸಿ.ಕೆ ನಾನು ಅವರು ಕರೆದಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯೂ ಯಾವುದೇ ಅಧಿಕಾರವಿಲ್ಲದೆ ಮತ್ತು ಜೆಡಿಎಸ್​ ಪಕ್ಷದ ಸಂವಿಧಾನದ ಪರಿಚ್ಛೇದದ ಉಲ್ಲಂಘನೆಯಾಗಿದೆ. ಅಂತಹ ಸಭೆ ನಡೆಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮತಿ ಇಲ್ಲ. ಹೀಗಾಗಿ ಇದೊಂದು ಅನಧಿಕೃತ ಸಭೆ ಆಗಿದೆ. ಆದ್ದರಿಂದ,…

Read More

ಚಿತ್ರದುರ್ಗ :- ಚಿತ್ರಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಂತರ್ ರಾಜ್ಯ ಶ್ರೀಗಂಧ ಕಳ್ಳರ ಗ್ಯಾಂಗ್ ಅನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ. ಕೊಳಾಳ್ ಬಳಿ ಇಕೋ ಕಾರಿನಲ್ಲಿದ್ದ 6 ಮಂದಿ ಅರೆಸ್ಟ್ ಮಾಡಲಾಗಿದೆ. 91 KG ಶ್ರೀಗಂಧ, 15.5 KG ರಕ್ತಚಂದನ, 25.4KG ಆನೆದಂತ, 34 .1 KG ಪೆಂಗೋಲಿನ್ ಚಿಪ್ಪು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ್ದ 1ಲಕ್ಷ ಹಣ, 2 ಕಾರ್, 9 ಮೊಬೈಲ್ ಸೇರಿ ಮಾರಕಾಸ್ತ್ರ ವಶಕ್ಕೆ ಪಡೆಯಲಾಗಿದೆ. A-1ಚಂದ್ರಶೇಖರ್ , A2- ಖಲೀಲ್,A-3 ಪ್ರಶಾಂತ್, A-4 ರಂಗಸ್ವಾಮಿ, A-5 ಪುನೀತ್ ನಾಯ್ಕ್, A-6 ರಾಮಾನಾಯ್ಕ್ ಬಂಧಿತರು. ಚಿತ್ರಹಳ್ಳಿ, ಶ್ರೀರಾಂಪುರ, ಐಮಂಗಲ ಸೇರಿ ವಿವಿಧ ಠಾಣೆಯಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿದ್ದರು. ಈ ಸಂಬಂಧ ಖಚಿತ ಮಾಹಿತಿ ಪಡೆದು ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಹಿರಿಯೂರು ನಗರದ ಬಬ್ಬೂರು ಬಾಡಿಗೆ ಮನೆಯಲ್ಲಿ…

Read More

ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ “ಶಕ್ತಿ” ಯೋಜನೆ ಐದು ತಿಂಗಳು ಪೂರೈಸಿದೆ. ವಾ.ಕ.ರ.ಸಾ.ಸಂಸ್ಥೆಯ ಬಸ್ಸುಗಳಲ್ಲಿ ಒಟ್ಟು 21.76 ಕೋಟಿ ಮಹಿಳೆಯರು ಉಚಿತ ಸಂಚಾರ ಮಾಡಿದ್ದು, ಪ್ರಯಾಣದ ಟಿಕೆಟ್ ಮೌಲ್ಯ ರೂ.556.41 ಕೋಟಿ ಗಳಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರದಿಂದ ಯಶಸ್ವಿಯಾಗಿ ಮುಂದುವರೆದಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಜೂನ್ 11ರಿಂದ ನವೆಂಬರ್ 10 ರವರೆಗೆ ಐದು ತಿಂಗಳ ಅವಧಿಯಲ್ಲಿ ಒಟ್ಟು 21,76,17,297 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಗಳ ಮೌಲ್ಯ ರೂ.556,41,82,443 ಗಳಾಗಿದೆ. ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ…

Read More

ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಇಂಗ್ಲೆಂಡ್ ತಂಡ 9 ವಿಕೆಟ್ ಕಳೆದುಕೊಂಡು ಪಾಕಿಸ್ತಾನ ಗೆಲುವಿಗೆ 338 ರನ್ ಗಳ ಗುರಿ ನೀಡಿದೆ. ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ಬೃಹತ್ ಮೊತ್ತ ಪೇರಿಸುವ ಕನನಸಿನಲ್ಲಿದ್ದ ಪಾಕ್ ಟಾಸ್ ನಲ್ಲಿಯೇ ನಿರಾಸೆಯಾಯಿತು. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ನಿರ್ಧಾರ ಪ್ರಕಟಿಸಿತು. ಪರಿಣಾಮ ಪಾಕಿಸ್ತಾನ ಪಂದ್ಯ ಶುರುವಾಗುದಕ್ಕೂ ಮೊದಲೇ ಸೆಮೀಸ್ ರೇಸ್ ನಿಂದ ಬಹುತೇಕ ಹೊರಬಿದ್ದಿತು. ಪಾಕ್ ವಿರುದ್ಧ ಬ್ಯಾಟಿಂಗ್ ಅರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಟೂರ್ನಿಯಲ್ಲಿ ಮೊದಲ ಬಾರಿ ಓಪನರ್ ಗಳು ತಕ್ಕ ಮಟ್ಟಿನ ಉತ್ತಮ ಅಡಿಪಾಯ ಹಾಕಿದರು. ಡೇವಿಡ್ ಮಲನ್ 31 ರನ್ ಗಳಿಸಿ ಇಫ್ತಿಕಾರ್ ಎಸೆತದಲ್ಲಿ ಔಟ್ ಆದರೆ ಇನ್ನೋರ್ವ ಆರಂಭಿಕ ಜಾನಿ ಬೈರ್ ಸ್ಟೋವ್ 7 ಬೌಂಡರಿ 1 ಸಿಕ್ಸರ್ ಸಹಿತ 59 ರನ್ ಗೆ ಹಾರಿಸ್ ರವೊಫ್ ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ಜೋ ರೂಟ್ 4 ಬೌಂಡರಿ ಸಹಿತ…

Read More

ಬೆಂಗಳೂರು:- ಭಾರತ ಹಾಗೂ ನೆದರ್‌ಲ್ಯಾಂಡ್ ಕ್ರಿಕೆಟ್ ಪಂದ್ಯಾವಳಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಹಿನ್ನೆಲೆ, ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಸಂಬಂಧ ಮಾತನಾಡಿದ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್, ಕ್ಯಾಬ್ ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ನಾಳೆ ಕ್ರಿಕೆಟ್ ವೀಕ್ಷಣೆಗೆ ಬರುವ ಕ್ರೀಡಾಭಿಮಾನಿಗಳ ಹೆಚ್ಚಳದಿಂದ ಸಂಚಾರ ದಟ್ಟಣೆ ಉಂಟಾಗಲಿದೆ. ಸಾರ್ವಜನಿಕರು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಪ್ರಯಾಣ ಸಾಧ್ಯವಾದಷ್ಡು ಕಡಿಮೆ ಮಾಡಿದ್ರೆ ಉತ್ತಮ. ಈಗಾಗಲೇ ಅಗತ್ಯ ಬಂದೋಬಸ್ತ್ ಕಲ್ಪಿಸಿ ಯಾವುದೇ ರೀತಿಯ ಸಂಚಾರ ದಟ್ಡಣೆ ಆಗದಂತೆ ಕ್ರಮವಹಿಸಲಾಗಿದೆ ಎಂದರು. ಬೆಂಗಳೂರಲ್ಲಿ ಒಟ್ಟು ಐದು ಪಂದ್ಯ ನಿಗದಿಯಾಗಿತ್ತು. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದೆ, ಐದನೇ ಮತ್ತು ಕೊನೆಯ ಪಂದ್ಯ ಭಾರತ-ನೆದರ್ಲ್ಯಾಂಡ್ ನಡುವೆ ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಚಿನ್ನಸ್ವಾಮಿ‌ ಸ್ಟೇಡಿಯಂ ಸುತ್ತ-ಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 9 ಜನ ಎಸಿಪಿ, 28 ಇನ್ಸ್ ಪೆಕ್ಟರ್, 86 ಜನ ಪಿಎಸ್‌ಐ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು…

Read More

ಹಾಸನ :- ಪಕ್ಷ ಕಟ್ಟುವ ಕುರಿತು ಹಾಸನಾಂಬೆ ಎದುರು ಪ್ರತಿಜ್ಞೆ ಮಾಡಿದ್ದೇವೆ ಎಂದು GT ದೇವೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಾಸನಾಂಬೆ ಎದುರು ಪಕ್ಷ ಬಿಡಲ್ಲ ಎಂದು ಜೆಡಿಎಸ್‌ ಶಾಸಕರು ಆಣೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಹಾಸನಾಂಬೆ ಎದುರು ನಾವ್ಯಾರು ಆಣೆ ಮಾಡಿಲ್ಲ, ಪಕ್ಷ ಕಟ್ಟುವ ಕುರಿತು ಪ್ರತಿಜ್ಞೆ ಮಾಡಿದ್ದೇವೆ ಎಂದರು. ಜೆಡಿಎಸ್ ನಾಯಕರು ಯಾರು ಪಕ್ಷ ಬಿಡುವುದಿಲ್ಲ. ಲಕ್ಷಾಂತರ ಜನರು ಬರುವ ತಾಯಿ ಎದುರು ಆಣೆ – ಪ್ರಮಾಣ ಸಾಧ್ಯವಾ? ನಾವೆಲ್ಲರೂ ಕೂಡ ನಮ್ಮ ಮನಸಿನಲ್ಲಿರುವುದನ್ನು ಕೇಳಿಕೊಂಡಿದ್ದೇವೆ‌. ರಾಜ್ಯದಲ್ಲಿ ಪಕ್ಷ ಬಲವರ್ಧನೆ, ಕುಮಾರಸ್ವಾಮಿಯನ್ನು ಸಿಎಂ ಮಾಡುವುದು ನಮ್ಮ ಗುರಿ. ಆ ಕುರಿತು ನಾವು ಸಂಘಟನಾತ್ಮಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆ ವಿಚಾರವಾಗಿ ಮಾತನಾಡಿ, ಬಿ ವೈ ವಿಜಯೇಂದ್ರ ಪ್ರಬಲ ಸಮುದಾಯದ ನಾಯಕ. ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದು ಒಳ್ಳೆಯ ಬೆಳವಣಿಗೆ. ಯಡಿಯೂರಪ್ಪ ಸಿಎಂ ಆಗಬೇಕು ಅಂತ 50…

Read More