Author: AIN Author

ಬೆಂಗಳೂರು:   ರೌಡಿಶೀಟರ್ ಸಹದೇವ್ ಹತ್ಯೆ ಪ್ರಕರಣ ಸಂಬಂಧ  ಪುಟ್ಟೇನಹಳ್ಳಿ ಪೊಲೀಸರಿಂದ 8 ಆರೋಪಿಗಳನ್ನ ಬಂಧಿಸಲಾಗಿದೆ. ವಿನಯ್, ಧರ್ಮ ಸೇರಿ ಎಂಟು ಮಂದಿ ಬಂಧಿತ ಆರೋಪಿಗಳು https://ainlivenews.com/only-green-firecrackers-allowed-what-are-the-mandatory-rules-for-bursting-firecrackers/ ಗಣೇಶ ಹಬ್ಬದಿಂದಲೂ ಗಲಾಟೆ ಮಾಡಿಕೊಳ್ಳುತ್ತಿದ್ದ ಗ್ಯಾಂಗ್ ಗಣೇಶ ಬಿಡುವ ವಿಚಾರಕ್ಕೆ ಸಹದೇಹ ಮತ್ತು ವಿನಯ್ ನಡುವೆ ಗಲಾಟೆ.‌. ಈ ವೇಳೆ ಆರೋಪಿ ವಿನಯ್ ಮೇಲೆ ಹಲ್ಲೆ ಮಾಡಿದ್ದ ಸಹದೇವ. ನಂತರ ಆರೋಪಿ ವಿನಯ್ ತಮ್ಮನ ಮೇಲೂ ಹಲ್ಲೆ ಮಾಡಿದ್ದ ಸಹದೇವ.. ನಂತರ ನವೆಂಬರ್ 8 ರಂದು ಟೀ ಕುಡಿಯಲು ಬಂದಿದ್ದ ಸಹದೇವ.. ಈ ವೇಳೆ ಅಲ್ಲಿಯೇ ಇದ್ದ ವಿನಯ್ ಗ್ಯಾಂಗ್.ಕ್ಷುಲ್ಲಕ ವಿಚಾರಕ್ಕೆ ವಿನಯ್ ಸಹದೇವ ನಡುವೆ ಕಿರಿಕ್. ಯಾಕೆ ಅವತ್ತು ಕೊಟ್ಟಿದ್ದು ಸಾಕಾಗಿಲ್ವಾ ಎಂದಿದ್ದ ಸಹದೇವ.. ಈ ವೇಳೆ ಮಾರಕಾಸ್ತ್ರಗಳಿಂದ ಸಹದೇವ ಮೇಲೆ ಅಟ್ಯಾಕ್ ಮಾಡಿದ ವಿನಯ್ ಗ್ಯಾಂಗ್.. ವಿನಯ್, ಧರ್ಮನಿಂದ ಸಹದೇವನ ಮೇಲೆ ಅಟ್ಯಾಕ್.. ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ ಸಹದೇವ.. ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪುಟ್ಟೇನಹಳ್ಳಿ ಪೊಲೀಸರು..

Read More

ಕೋಲಾರ: ಕೋಲಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಯರಗೋಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಲಿದ್ದಾರೆ. HAL ನಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.30 ಕ್ಕೆ ಯರಗೋಳ್ ಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರಿಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಕೃಷ್ಣಬೈರೇಗೌಡ, ಕೆಹೆಚ್ ಮುನಿಯಪ್ಪ ಹಾಗೂ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ. ಅದರಂತೆ ಯರಗೋಳ್ ಡ್ಯಾ. ಪಕ್ಕದಲ್ಲಿಯೇ ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಳಿಸಿದ್ದು ಸುಮಾರು 15 ಸಾವಿರ ಜನರು ಸೇರುವ ನಿರೀಕ್ಷೆ ಇದೆ. https://ainlivenews.com/great-job-opportunity-in-hindustan-aeronautics-limited-posting-in-bangalore/ ಜೊತೆಗೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೂ ಬಂಗಾರಪೇಟೆ, ಕೋಲಾರ, ಮಾಲೂರು ಹಾಗೂ ಮಾರ್ಗ ಮಧ್ಯೆಯ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದ್ದು,2006 ರಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಯರಗೋಳ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು‌…

Read More

ರಾಮನಗರ : ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಅಲ್ಲದಿದ್ರೆ ದೆಹಲಿ ಅಂತ ಮಾಡಲಿ. ದೆಹಲಿ ಅಂತ ಮಾಡಿದ್ರೆ ಪ್ರಪಂಚದ ಮೂಲೆ ಮೂಲೆ ಇಂದ ಎಲ್ಲಾ ಬರ್ತಾರೆ. ರಾಮನಗರವನ್ನ ಬೆಂಗಳೂರು ಮಾಡೋದು ಬೇಡ, https://ainlivenews.com/great-job-opportunity-in-hindustan-aeronautics-limited-posting-in-bangalore/  ದೆಹಲಿ ಅಥವಾ ದುಬೈ ಅಂತಾನೆ ಮಾಡಿ ಎಂದು ಕುಟುಕಿದ್ದಾರೆ. ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ. ನೀವೇನು ಮೂಲಭೂತ ಸೌಕರ್ಯ ಕೊಡ್ತಿರಿ, ಅಭಿವೃದ್ಧಿ ಮಾಡ್ತೀರಿ ಅದರ ಮೇಲೆ ಜನ ಬರೋದು. ಅವರಿಗೆ ಬೇರೆ ಕೆಲಸ ಇಲ್ಲ, ಜನರ ಕೆಲಸ ಮಾಡಲ್ಲ. ಜನರ ಗಮನಸೆಳೆಯೋಕೆ ಹೀಗೆ ಮಾತನಾಡ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Read More

ಬೆಂಗಳೂರು: ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ‌ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. https://ainlivenews.com/good-news-for-metro-passengers-6-tickets-can-be-purchased-through-qr-code/ ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳಕ್ಕೆ ಅವಕಾಶ ನೀಡಬೇಕು. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ‌ ನೀಡಬೇಕು ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ. ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸುದ್ದಿಗಾರರ ಜೊತೆ ಮಾತನಾಡಿ, “ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ” ಎಂದು ಹೇಳಿದರು.

Read More

ಕೊಲಂಬೊ: ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ (ICC ODI World Cup 2023) ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲು ವಿಫಲವಾದ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ (Sri Lanka Cricket) ಮತ್ತೊಂದು ಆಘಾತವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Board) ಶ್ರೀಲಂಕಾ ಕ್ರಿಕೆಟ್​ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಶ್ರೀಲಂಕಾ ಸರ್ಕಾರ ಹಸ್ತಕ್ಷೇಪ ನಡೆಸುತ್ತಿರುವ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ ಐಸಿಸಿ ಮಂಡಳಿಯು ಇಂದು ಸಭೆ ನಡೆಸಿತು. ಜೊತೆಗೆ ಶ್ರೀಲಂಕಾ ಕ್ರಿಕೆಟ್ ಸದಸ್ಯರಾಗಿ ಅದರ ಜವಾಬ್ದಾರಿಗಳನ್ನು ಗಂಭೀರವಾಗಿ ಉಲ್ಲಂಘಿಸುತ್ತಿದೆ ಎನ್ನುವುದನ್ನು ಖಚಿತಪಡಿಸಿದೆ. ಶ್ರೀಲಂಕಾದಲ್ಲಿ ಕ್ರಿಕೆಟ್ ಹಾಗೂ ಅದರ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸುವ ಅವಶ್ಯಕತೆ ಮತ್ತು ಆಡಳಿತ, ನಿಯಂತ್ರಣ ಮತ್ತು/ಅಥವಾ ಆಡಳಿತದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿರಬಾರದು ಎನ್ನುವ ಅಗತ್ಯವನ್ನು ಪೂರೈಸುವಲ್ಲಿ ಮಂಡಳಿ ವಿಫಲವಾಗಿದೆ ಎಂದು ಐಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅಮಾನತುಗೊಳಿಸುವಿಕೆಯ ಷರತ್ತುಗಳನ್ನು ಐಸಿಸಿ ಮಂಡಳಿಯು ಸರಿಯಾದ ಸಮಯದಲ್ಲಿ ನಿರ್ಧರಿಸುತ್ತದೆ. ನವೆಂಬರ್‌ 21 ರಂದು ಐಸಿಸಿ…

Read More

ಮೈಸೂರು: ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಮಂಜು ಎಸ್. ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಕಛೇರಿಯ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಜಿಲ್ಲಾ ಮ, ತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಮತ್ತು ಅವುಗಳ ರೂಪುರೇಷೆಗಳನ್ನು ತಯಾರಿಸುವ ಬಗ್ಗೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣೆಗೆ ಬದ್ದವಾಗಿದ್ದು, ಅವುಗಳ ಉಲ್ಲಂಘನೆಯಾಗಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ತಮಗೆ ನಿಗದಿ ಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸದಸ್ಯರು ತಿಳಿಸಿದರು. https://ainlivenews.com/great-job-opportunity-in-hindustan-aeronautics-limited-posting-in-bangalore/ ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ…

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕದವಾದ ಬಳಿಕ ಮೊದಲು ಕಾರ್ಯಕರ್ತನ ಮನೆಗೆ ಭೇಟಿ ನೀಡಿದ ಬಿ ವೈ ವಿಜಯೇಂದ್ರ‌. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 40ರ ಶಶಿಧರ್ ಎಂಬ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಸಿಹಿ ನೀಡಿ ಸಂಭ್ರಮಪಟ್ಟರು. ಕಾರ್ಯಕರ್ತ ಶಶಿಧರ್ ಗೆ ಸಿಹಿ ತಿನ್ನಿಸಿದ ನೂತನ ನಿಯೋಜಿತ ಅಧ್ಯಕ್ಷ ವಿಜಯೇಂದ್ರ‌ ಚುನಾವಣೆಯಲ್ಲಿ ಸೋತ ನಂತರ ಲೀಡರ್ ಶಿಪ್ ಇಲ್ಲದೇ, ಅಸಮಧಾನ ಗೊಂಡು ದೂರ ಉಳಿದಿದ್ದ ಕಾರ್ಯಕರ್ತರು ಇದೀಗ ಅಂತಹ ಕಾರ್ಯಕರ್ತರಿಗೆ ಧೈರ್ಯ ತುಂಬಿ, ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿರುವ ವಿಜಯೇಂದ್ರ . ಎಲ್ಲ ಬೂತ್ ಗಳಲ್ಲಿ ಪಕ್ಷದ ಸಂಘಟನೆ ಬಲ ಪಡಿಸ್ತೇವೆ ಈ ದೃಷ್ಟಿಯಿಂದ ಪಕ್ಷದ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ ಬೂತ್ ಗೆದ್ದರೆ ದೇಶ ಗೆಲ್ತೇವೆ ಅನ್ನೋದು ಅಮಿತ್ ಶಾ, ಜೆ ಪಿ ನಡ್ಡಾ ವಿಶ್ವಾಸ ಈ‌ ನಿಟ್ಟಿನಲ್ಲಿ ಮೊದಲ ದಿನ ಬೂತ್ ಅಧ್ಯಕ್ಷರ ಮನೆಗೆ ಬಂದಿದ್ದೆನೆ, ಸಂತೋಷ ತಂದಿದೆ ಘಟಾನುಘಟಿ ನಾಯಕರೂ ಬೂತ್ ಅಧ್ಯಕ್ಷರಾಗಿ ಬಂದವರುಬಿಜೆಪಿ…

Read More

ರಿಷಬ್ ಪಂತ್ ಅವರು ಮುಂದಿನ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ದೆಹಲಿ ಕ್ಯಾಪಿಟಲ್ಸ್‌ ತಂಡದ ನಿರ್ದೇಶಕ ಸೌರವ್‌ ಗಂಗೂಲಿ ಹೇಳಿದರು. ದೆಹಲಿ ತಂಡದ ನಾಯಕರೂ ಆಗಿರುವ ಪಂತ್‌, ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ದೆಹಲಿ- ಡೆಹ್ರಾಡೂನ್ ಹೆದ್ದಾರಿಯ ರೂರ್ಕಿ ಬಳಿ ಅವರು ಚಲಾಯಿಸುತ್ತಿದ್ದ ಮರ್ಸಿಡಿಸ್‌ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದಿತ್ತು. ಜಾಧವಪುರ ವಿಶ್ವವಿದ್ಯಾಲಯದ ಸಾಲ್ಟ್‌ಲೇಕ್‌ ಕ್ಯಾಂಪಸ್‌ ಮೈದಾನದಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡದ ಆಟಗಾರರ ಜೊತೆ ಪಂತ್‌ ಗುರುವಾರ ಕೆಲ ಕಾಲ ಕಳೆದರು. ‘ಪಂತ್ ಗುಣಮುಖರಾಗಿದ್ದಾರೆ. ಬರುವ ಐಪಿಎಲ್‌ನಲ್ಲಿ ಆಡಲಿದ್ದಾರೆ’ ಎಂದು ಗಂಗೂಲಿ ವರದಿಗಾರರಿಗೆ ತಿಳಿಸಿದರು. ಪಂತ್‌ ಅನುಪಸ್ಥಿತಿಯಲ್ಲಿ ಕಳೆದ ಐಪಿಎಲ್‌ ಆವೃತ್ತಿಯಲ್ಲಿ ಡೇವಿಡ್‌ ವಾರ್ನರ್‌ ತಂಡವನ್ನು ಮುನ್ನಡೆಸಿದ್ದರು. ಆದರೆ ತಂಡ ಕೊನೆಯಿಂದ ಎರಡನೇ ಸ್ಥಾನ ಗಳಿಸಿ ದಯನೀಯ ಹಿನ್ನಡೆ ಕಂಡಿತ್ತು. ‘ಅವರು ಗುರುವಾರ ಅಭ್ಯಾಸ ನಡೆಸಿಲ್ಲ. ಅದಕ್ಕಾಗಿ ಅವರಿಗೆ ಸಾಕಷ್ಟು ಸಮಯವಿದೆ. ಜನವರಿಯೊಳಗೆ (2024) ಅವರು ಇನ್ನಷ್ಟು ಫಿಟ್‌ ಆಗಲಿದ್ದಾರೆ’ ಎಂದು ಗಂಗೂಲಿ ಹೇಳಿದರು.

Read More

ದೊಡ್ಡಬಳ್ಳಾಪುರ : ಕೆಲಸದಿಂದ ಮನೆಯತ್ತ ನಡೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಅಪರಿಚಿತ ಬಸ್ ಡಿಕ್ಕಿ ಹೊಡೆದಿದೆ, ಘಟನೆ ನಂತರ ಚಾಲಕ ಬಸ್ ಸಮೇತ ಪರಾರಿಯಾಗಿದ್ದಾನೆ, ಹಿಟ್ ಅಂಡ್ ರನ್ ಕೇಸ್ ನಲ್ಲಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದೊಡ್ಡಬಳ್ಳಾಪುರ ನಗರದ ಮುತ್ತೂರಿನ ಅಂಜನೇಯ ದೇವಸ್ಥಾನದ ಬಳಿ ರಾತ್ರಿ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ, ಘಟನೆಯಲ್ಲಿ 26 ವರ್ಷದ ಖದೀರ್ ಪಾಷಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಮೃತ ವ್ಯಕ್ತಿ ಮೂತ್ತೂರಿನ ನಿವಾಸಿಯಾಗಿದ್ದು, ಮೂಟೆ ಹೊರುವ ಕೆಲಸ ಮಾಡುತ್ತಿದ್ದ, ರಾತ್ರಿ 8 ಗಂಟೆ ಸಮಯದಲ್ಲಿ ಕೆಲಸ ಮುಗಿದ ನಂತರ ರೈಲ್ವೆ ಸ್ಟೇಷನ್ ನಿಂದ ಊಟವನ್ನ ಪರ್ಸಲ್ ತಗೊಂಡ್ ಬರುವಾಗ, ರಸ್ತೆಯ ಪಕ್ಕದಲ್ಲಿ ನೆಡದುಕೊಂಡು ಹೋಗುತ್ತಿದ್ದ ಕದೀರ್ ಪಾಷನಿಗೆ ಅಪರಿಚ ವಾಹನ ಡಿಕ್ಕಿ ಹೊಡೆದಿದೆ,  ಘಟನೆ ನಂತರ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. https://ainlivenews.com/knee-pain-treatment-joint-pain-treatment/ ಮುತ್ತೂರು ಬಳಿ ಅಪಘಾತಗಳು ಸಾಮಾನ್ಯವಾಗಿವೆ ಎಂಬುದು ಸ್ಥಳೀಯರ ಆರೋಪ, ಕಿರಿದಾದ ರಸ್ತೆ,  ರಸ್ತೆ ಬದಿಯಲ್ಲಿ ಬೀದಿ ದೀಪಗಳು ಅಳವಡಿಸದೆ ಇರೋದು ಮತ್ತು ಹಮ್ಸ್…

Read More

ಮುಂಬೈ: ವೇಗವಾಗಿ ಬಂದ ಕಾರೊಂದು (Car) ಹಲವಾರು ವಾಹನಗಳಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈನ (Mumbai) ಬಾಂದ್ರಾ ವರ್ಲಿ ಸೀ ಲಿಂಕ್‍ನಲ್ಲಿರುವ ಟೋಲ್ ಪ್ಲಾಜಾದಲ್ಲಿ ನಡೆದಿದೆ. ಬಾಂದ್ರಾ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ರಾತ್ರಿ 10.15ರ ಸುಮಾರಿಗೆ ಟೋಲ್ ಬಳಿ ಕಾರೊಂದಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ವೇಗವಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಟೋಲ್ ಸರದಿಯಲ್ಲಿದ್ದ ಹಲವಾರು ಕಾರುಗಳಿಗೆ ಇನ್ನೋವಾ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಹಿಳೆಯರು ಮತ್ತು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. https://ainlivenews.com/knee-pain-treatment-joint-pain-treatment/ ಗಾಯಗೊಂಡ ಆರು ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಇನ್ನೋವಾ ಕಾರಿನ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Read More