Author: AIN Author

ಬೆಂಗಳೂರು:- ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಮಾಜಿ ಶಾಸಕ ಸಿಟಿ ರವಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಮಧ್ಯಪ್ರದೇಶದಿಂದ ಕೆಂಪೇಗೌಡ ಏರ್ಪೋಟ್ ನಲ್ಲಿ ಬಂದಿಳಿದ ಬಳಿಕ ಮಾತನಾಡಿದ ಅವರು, ಪಕ್ಷ ನೇಮಕ ಮಾಡಿದೆ ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28 ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಬದಲಾಗದೆ ಇರೋದು ಕಾರ್ಯಕರ್ತ ಅನ್ನೂದು ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಎಂದರು. ಇನ್ನೂ ನೂತನ ಅಧ್ಯಕ್ಷನ ಆಯ್ಕೆ ಬಗ್ಗೆ ಕಾಂಗ್ರೇಸ್ ಟ್ವಿಟ್ ವಿಚಾರವಾಗಿ ಮಾತನಾಡಿ, ಅಸಮಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರಿಯಾ ಪ್ರಧಾನ ಕಾರ್ಯದರ್ಶಿ ವರೆಗೂ ಜವಬ್ದಾರಿ ನಿರ್ವಹಿಸಿದ್ದೀನಿ. ಈಗಾಗಲೆ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ ಎಂದು ಅಸಮಧಾನ ಹೊರ ಹಾಕಿ ತಲೆ…

Read More

ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು. ವಿಶೇಷವಾಗಿ ಚಿಕ್ಕಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80ಕ್ಕೂ ಹೆಚ್ಚು ಮಕ್ಕಳು ವೈರಸ್​​​ನಿಂದ ಸೋಂಕಿಗೆ ಒಳಗಾಗಿದ್ದಾರೆ. ಕೇರಳ ರಾಜ್ಯವು ನಿಗೂಢ ಕಾಯಿಲೆ ಟೊಮ್ಯಾಟೋ ಜ್ವರದಿಂದ ಬೆಚ್ಚಿಬಿದ್ದಿದೆ. ಹೀಗಾಗಿ ಕರ್ನಾಟಕ ರಾಜ್ಯಕ್ಕೂ ಅಪ್ಪಳಿಸಿಬಿಡ್ತಾ ಈ ಕಾಯಿಲೆ ಎಂಬ ಆತಂಕದಿಂದಲೇ ರಾಜ್ಯ ಆರೋಗ್ಯ ಇಲಾಖೆಗೆ ಕೊರೊನಾ ನಾಲ್ಕನೇ ಅಲೆ ಜೊತೆಗೆ ಟೊಮ್ಯಾಟೋ ಟೆನ್ಷನ್ ಕೂಡ ಜಾಸ್ತಿಯಾಗಿದೆ. ಇದರಿಂದಾಗಿ ಕರುನಾಡಿಗೆ ಸಾಂಕ್ರಾಮಿಕ ಜ್ವರ ಕಾಲಿಡದಂತೆ ಮಕ್ಕಳ ಆರೋಗ್ಯ ಸ್ಥಿತಿಗತಿ ಮೇಲೆ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಲಾಗಿದೆ. ಟೊಮೆಟೊ ಜ್ವರದ ಲಕ್ಷಣಗಳೇನು? ಅಧಿಕ ಜ್ವರ, ಮೈಕೈ ನೋವು, ಕೀಲು ಊತ ಮತ್ತು ಸುಸ್ತು ಇತರ ಕೆಲವು ಲಕ್ಷಣ ಟೊಮೆಟೊ ಜ್ವರ ಪೀಡಿತ ಮಕ್ಕಳಲ್ಲಿ ಟೊಮೇಟೋ ಗಾತ್ರದ ಕೆಂಪು ದದ್ದುಗಳು ಕಂಡು ಬಂದಿವೆ. ಸೋಂಕಿತ ಮಗು ನಿರ್ಜಲೀಕರಣದ ಕಾರಣದಿಂದಾಗಿ ಬಾಯಿಯಲ್ಲಿ ಕಿರಿಕಿರಿ ಉಂಟಾಗುತ್ತದೆ ದದ್ದುಗಳ ಮೇಲೆ ಉಂಟಾಗುವ ಹುಣ್ಣುಗಳಿಂದ ಹುಳುಗಳು ಹೊರಬರುತ್ತವೆ ಮೈಮೇಲೆ…

Read More

ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅವರು ಸಿನಿಮಾ, ಜಾಹೀರಾತುಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ‘ಕಾಫಿ ವಿತ್ ಕರಣ್’ ಸೀಸನ್ 8ರಲ್ಲಿ (Koffe With Karan 8) ಅನನ್ಯಾ ಪಾಂಡೆ (Ananya Panday) ಜೊತೆ ಸಾರಾ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ವೇಳೆ, ಕಾರ್ತಿಕ್ ಆರ್ಯನ್ ಜೊತೆಗಿನ ಬ್ರೇಕಪ್ ಬಗ್ಗೆ ನಟಿ ಮೌನ ಮುರಿದಿದ್ದಾರೆ. ಅನನ್ಯಾ ಪಾಂಡೆ ಜೊತೆ ಸಾರಾ ಅಲಿ ಖಾನ್, ಕರಣ್ ಜೋಹರ್ (Karan Johar) ಶೋನಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದಾರೆ. ಕಾರ್ತಿಕ್ ಜೊತೆಗಿನ ಲವ್ ಬ್ರೇಕಪ್ ಕೇಳಿದ ಕರಣ್ ಪ್ರಶ್ನೆಗೆ ನಟಿ ತಬ್ಬಿಬ್ಬಾಗಿದ್ದಾರೆ. ಬಳಿಕ ಹೌದು.. ನಾನು ಕಾರ್ತಿಕ್ ಜೊತೆ ಬ್ರೇಕಪ್ ಮಾಡಿಕೊಂಡಿದ್ದೇನೆ. ನಾವಿಬ್ಬರೂ ಈಗ ಬೆಸ್ಟ್ ಫ್ರೆಂಡ್ಸ್, ಪ್ರೇಮಿಗಳಲ್ಲ ಎಂದಿದ್ದಾರೆ ಸಾರಾ. ಮತ್ತೆ ಕರಣ್, ಬ್ರೇಕಪ್ ಆದ ಮೇಲೆ ನಿಮಗೆ ಬೇಸರ ಆಗಿಲ್ವಾ? ಎಂದು ಕೇಳಿದ್ದಾರೆ. ಹೌದು ಆಗಿತ್ತು. ತುಂಬಾನೇ ನೋವು ಆಗಿತ್ತು. ಈಗ ಎಲ್ಲವನ್ನೂ ಮರೆಯುತ್ತಿದ್ದೇನೆ. ಯಾವುದೇ ಸಂಬಂಧವಾಗಿರಲಿ ಅವರ ಜೊತೆ ಸಾಕಷ್ಟು…

Read More

ಕನ್ನಡದ ಸಿನಿಮಾ ರಂಗದ ಪ್ರತಿಭಾವಂತ ನಟ ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದಲ್ಲಿ ಮೇಘಾ ಶೆಟ್ಟಿ (Megha Shetty) ಕೂಡ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ. ಮೊನ್ನೆಷ್ಟೇ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆದಿದ್ದು, ಈ ಚಿತ್ರದಲ್ಲಿ ಶ್ರುತಿ ಹರಿಹರನ್ ಕೂಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜಲಕ್ಷ್ಮಿ ಎಂಟರ್ ಟೈನ್ಮೆಂಟ್  ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ (Raja Kalai Kumar) ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸುತ್ತಿರುವ ‘ಚೀತಾ’ (Cheeta) ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್. ಎಂ. ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿದೆ. ಪ್ರಜ್ವಲ್ ದೇವರಾಜ್ ಕನ್ನಡ ಬಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದ್ದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡಾನ್ಸರ್ ಆಗಿ, ಡಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ…

Read More

ಬೆಂಗಳೂರು: ನಗರದಲ್ಲಿ ರಸ್ತೆಬದಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ವಾಹನಗಳ ಗಾಜು ಒಡೆದು ಹಾಕಲಾಗಿದ್ದು, ಕೃತ್ಯ ಎಸಗಿದ್ದ ಮೂವರು ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜೀವ್ ಗಾಂಧಿನಗರದ ರಸ್ತೆಗಳಲ್ಲಿ ಕಾರು, ದ್ವಿಚಕ್ರ ವಾಹನ ಹಾಗೂ ಆಟೊಗಳನ್ನು ನಿಲ್ಲಿಸಲಾಗಿತ್ತು. ಮಾಸ್ಕ್ ಧರಿಸಿದ್ದ ಮೂವರು ಕಿಡಿಗೇಡಿಗಳು, ದ್ವಿಚಕ್ರ ವಾಹನದಲ್ಲಿ ಸಂಚರಿಸಿ ಲಾಂಗ್‌ನಿಂದ ವಾಹನಗಳ ಗಾಜು ಒಡೆದು ಪರಾರಿಯಾಗಿದ್ದಾರೆ’ ಎಂದು ಸ್ಥಳೀಯರು ಹೇಳಿದರು. ‘ಆರೋಪಿಗಳ ಕೃತ್ಯದಿಂದಾಗಿ 20ಕ್ಕೂ ಹೆಚ್ಚು ಕಾರುಗಳು, 5 ದ್ವಿಚಕ್ರ ವಾಹನಗಳು ಹಾಗೂ ಆಟೊ ಜಖಂಗೊಂಡಿವೆ. ಕಿಡಿಗೇಡಿಗಳನ್ನು ಪತ್ತೆ ಮಾಡಿ, ಕಠಿಣ ಕ್ರಮ ಜರುಗಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Read More

ಬೆಂಗಳೂರು:- ಕರ್ನಾಟಕ ರಕ್ಷಣಾ ವೇದಿಕೆಯು ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಇಂದು ಸಂಜೆ 5 ಗಂಟೆಯಿಂದ ‘ಎಕ್ಸ್’ ಅಭಿಯಾನ ಹಮ್ಮಿಕೊಂಡಿದೆ. ‘#ಕನ್ನಡಬಾವುಟ_ನಮ್ಮಗುರುತು’, ‘#KannadaFlag_MyPride’ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಈ ಅಭಿಯಾನ ನಡೆಯಲಿದೆ. ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆಯನ್ನು ಅಂಗೀಕರಿಸಬೇಕೆಂದು ‘ಎಕ್ಸ್‌’ ಅಭಿಯಾನದ ಮೂಲಕ ಒತ್ತಾಯಿಸಲಾಗುವುದು ಎಂದು ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ. ‘ಕನ್ನಡಿಗರಿಗೆ ಕನ್ನಡ ಬಾವುಟ ಮೊದಲ ಗುರುತು. ಭಾರತ ಒಕ್ಕೂಟದ ಭಾಗವಾಗಿ ನಮ್ಮದೇ ಆದ ಬಾವುಟವೊಂದನ್ನು ಹೊಂದುವುದಕ್ಕೆ ಅವಕಾಶ ಇರಬೇಕು‌. ಈಗಾಗಲೇ ಕೋಟ್ಯಂತರ ಕನ್ನಡಿಗರು ಕನ್ನಡ ಬಾವುಟವನ್ನು ಆರಾಧಿಸುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರ ಕೂಡಲೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು’ ಎಂದು ‍ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Read More

ಇದೀಗ ತನ್ನ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಬಹಳ ಉಪಯುಕ್ತವಾದ ಆಯ್ಕೆಯೊಂದನ್ನು ವಾಟ್ಸ್​ಆ್ಯಪ್ ನೀಡಿದೆ. WABetaInfo ಮಾಡಿರುವ ವರದಿಯ ಪ್ರಕಾರ, ಬಳಕೆದಾರರು ಇದೀಗ ಫೋನ್ ನಂಬರ್ ಪ್ರೈವಸಿ ಆಯ್ಕೆಯನ್ನು ಪಡೆದಿದ್ದಾರೆ ಎಂದು ಹೇಳಿದೆ. ವಾಟ್ಸ್​ಆ್ಯಪ್​ನ (WhatsApp) ನೂತನ ಬೇಟಾ ವರ್ಷನ್ ಅಪ್ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಫೋನ್ ನಂಬರ್ ಪ್ರೈವಸಿ ಫೀಚರ್ ಕಮ್ಯೂನಿಟಿ ಅನೌನ್ಸ್​ಮೆಂಟ್ ಗ್ರೂಪ್​ನಲ್ಲಿ ಕಾಣಸಿಗಲಿದೆ. ಹೆಸರೇ ಸೂಚಿಸುವಂತೆ, ಬಳಕೆದಾರರು ತಮ್ಮ ಮೊಬೈಲ್ ನಂಬರ್ ಅನ್ನು ಕಮ್ಯೂನಿಟಿ ಅನೌನ್ಸ್​ಮೆಂಟ್ ಗ್ರೂಪ್​ನಲ್ಲಿ ಮರೆಮಾಡುವ ಮೂಲಕ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಈ ವೈಶಿಷ್ಟ್ಯವು ಸಹಾಯ ಮಾಡುತ್ತದೆ. ಈ ವೈಶಿಷ್ಟ್ಯದೊಂದಿಗೆ, ಅವರ ಫೋನ್ ಸಂಖ್ಯೆಯು ಕಮ್ಯೂನಿಟಿ ಅಡ್ಮಿನ್ ಮತ್ತು ಅವರ ನಂಬರ್ ಅನ್ನು ಸೇವ್ ಮಾಡಿಟ್ಟುಕೊಂಡವರಿಗೆ ಮಾತ್ರ ಗೋಚರಿಸುತ್ತದೆ. ಗ್ರೂಪ್​ನಲ್ಲಿ ಇರುವ ಇತರೆ ಸದಸ್ಯರಿಂದ ತಮ್ಮ ಮೊಬೈಲ್ ಸಂಖ್ಯೆಗಳನ್ನು ಮರೆಮಾಡಲು ಇದು ಬಳಕೆದಾರರಿಗೆ ಸಹಾಯ ಮಾಡುತ್ತದೆ.

Read More

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಲ್ಲಿ ಕೂಡ ಹೊಸ ನಿಯಮಗಳು ಜಾರಿಯಾಗಿವೆ. ಇತ್ತೀಚಿಗೆ ನಿರ್ಮಲ ಸೀತಾರಾಮನ್ ಅವರು ತೆರಿಗೆ ಪಾವತಿಯಲ್ಲಿ ಅನೇಕ ವಿನಾಯಿತಿಯನ್ನು ನೀಡುತ್ತಿದ್ದಾರೆ. ಭಾರತದಲ್ಲಿ ಹಲವು ಆದಾಯಗಳಿಗೆ ತೆರಿಗೆ ಇಲ್ಲ ಅನ್ನುವ ಮಾಹಿತಿ ಇನ್ನೂ ಕೂಡ ಸಾಕಷ್ಟು ಜನರಿಗೆ ತಿಳಿದಿಲ್ಲ ಎಂದು ಹೇಳಬಹುದು. ವ್ಯಾಪಾರ ಅಥವಾ ಉದ್ಯೋಗದಿಂದ ಬಂದ ಆದಾಯದ ಮೂಲಗಳಿಗೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ .ಆದರೆ ಕೆಲವು ತೆರಿಗೆ ವಿಧಿಸದ ಗಳಿಕೆಗಳಿವೆ. ಇಲಾಖೆಯು ಕೆಲ ಮೂಲದ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ನೀಡುತ್ತದೆ. ಇದೀಗ ಯಾವ ಆದಾಯಕ್ಕೆ ತೆರಿಗೆ ಪಾವತಿಸುವ ಅಗತ್ಯ ಇರುವುದಿಲ್ಲ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ. ಇನ್ನುಮುಂದೆ ಈ 5 ಆದಾಯಗಳಿಗೆ ತೆರಿಗೆ ಕಟ್ಟುವ ಅಗತ್ಯ ಇಲ್ಲ ಕೃಷಿ ಮೇಲಿನ ಆದಾಯ ಭಾರತ ಕೃಷಿ ಪ್ರಧಾನ ದೇಶವಾಗಿದೆ. ಕೃಷಿ ಚಟುವಟಿಕೆಗಳಿಂದ ಗಳಿಸಿದ ಆದಾಯವು ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 10(1) ಅಡಿಯಲ್ಲಿ ಆದಾಯ ತೆರಿಗೆಯಿಂದ ಮುಕ್ತವಾಗಿದೆ. ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕೃಷಿ ಕ್ಷೇತ್ರವನ್ನು ಬೆಂಬಲಿಸುವುದು…

Read More

ಸೆಮಿಫೈನಲ್ ಪ್ರವೇಶಿಸಲು ಕಠಿಣ ಸವಾಲು ಎದುರಿಸುತ್ತಿರುವ ಪಾಕಿಸ್ತಾನ ತಂಡ ತನ್ನ 9ನೇ ಹಾಗೂ ಕೊನೇ ಲೀಗ್​ ಪಂದ್ಯದಲ್ಲಿ ಶನಿವಾರ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡವನ್ನು ಎದುರಿಸಲಿದೆ. ಆಂಗ್ಲರು 2019ರಲ್ಲಿ ಗೆದ್ದ ವಿಶ್ವ ಕಿರೀಟವನ್ನು ಈ ಬಾರಿ ಕಳೆದುಕೊಳ್ಳುವುದು ಈಗಾಗಲೆ ಖಚಿತಗೊಂಡಿರುವ ನಡುವೆ, 2025ರ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಅರ್ಹತೆಗಾಗಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಈ ಮೂಲಕ ಗೆಲುವಿನೊಂದಿಗೆ ವಿಶ್ವಕಪ್​ ಅಭಿಯಾನ ಮುಗಿಸುವ ತವಕದಲ್ಲಿದ್ದಾರೆ. ಇದುವರೆಗೆ ಆಡಿರುವ 8 ಪಂದ್ಯಗಳಲ್ಲಿ 4 ಗೆಲುವು, 4 ಸೋಲಿನ ಸಹಿತ 8 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಪಾಕಿಸ್ತಾನ, ನ್ಯೂಜಿಲೆಂಡ್​ ತಂಡವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬೇಕಾದರೆ ಬರೀ ಗೆದ್ದರಷ್ಟೇ ಸಾಕಾಗದು. ರನ್​ರೇಟ್​ನಲ್ಲೂ ನ್ಯೂಜಿಲೆಂಡ್​ ತಂಡವನ್ನು ಮೀರಿಸುವುದು ಅಗತ್ಯವಾಗಿದೆ. ಆದರೆ ಇದಕ್ಕಾಗಿ ಪಾಕ್​, ಮೊದಲು ಬ್ಯಾಟಿಂಗ್​ಗೆ ಇಳಿದಾಗ ಕನಿಷ್ಠ 287 ರನ್​ಗಳಿಂದ ಪಂದ್ಯ ಗೆಲ್ಲಬೇಕಾಗಿದೆ. ಒಂದು ವೇಳೆ ಪಾಕ್​ ಚೇಸಿಂಗ್​ ಮಾಡುವುದಾದರೆ, 284 ಎಸೆತ ಉಳಿದಿರುವಂತೆಯೇ ಗುರಿ ತಲುಪಬೇಕಾಗುತ್ತದೆ. ಅಂದರೆ, ಒಂದು ವೇಳೆ ಇಂಗ್ಲೆಂಡ್​ ಮೊದಲು ಬ್ಯಾಟಿಂಗ್​ಗೆ ಇಳಿದರೆ ಪಾಕಿಸ್ತಾನ…

Read More

ಶಿವಮೊಗ್ಗ: ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಸ್ಥಿತಿ ಭೀಷ್ಮನಂತಿದೆ. ಕುರುಕ್ಷೇತ್ರ ಯುದ್ಧ ಮಾತ್ರ ಮಾಡಬೇಕು. ಪಟ್ಟಕ್ಕೆ ಕೂರುವ ಹಾಗಿಲ್ಲ. ಅದರ ಯಶ ಬೇರೆಯವರು ತೆಗೆದುಕೊಳ್ಳುತ್ತಿದ್ದಾರೆ. ಈಗಾಗಲೇ ಬಾಣಗಳನ್ನೂ ಬಿಟ್ಟು ಅವರಿಗೆ ಘಾಸಿಗೊಳಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್‌ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಡಿಯೂರಪ್ಪ ಅವರ ಅಪ್ಪಟ ಶಿಷ್ಯ. ಅವರಿಗಾದ ಅನ್ಯಾಯದ ಬಗ್ಗೆ ನನಗೆ ನೋವಿದೆ. ವಿಪರ್ಯಾಸವೆಂದರೆ ಅವರ ಪುತ್ರರಿಗೆ ಈ ವಿಚಾರ ಬೇಕಾಗಿಲ್ಲ ಎನಿಸುತ್ತದೆ. ವಯಸ್ಸಿನ ಕಾರಣಕ್ಕೆ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಆದರೆ ಚುನಾವಣೆ ವೇಳೆಯಲ್ಲಿಅವರೇ ಪ್ರಚಾರ, ಬರ ಅಧ್ಯಯನಕ್ಕೂ ಬೇಕು. ಹಾಗಾದರೆ ಈಗ ಅವರಿಗೆ ವಯಸ್ಸಾಗಿಲ್ಲವೆ? ಪಾಪ ಹಿರಿಜೀವವನ್ನು ಬಿಜೆಪಿ ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ ಎಂದರು. https://ainlivenews.com/knee-pain-treatment-joint-pain-treatment/ ಇನ್ನು ಬಿಜೆಪಿಯ ಬರ ಅಧ್ಯಯನದ ಬಗ್ಗೆ ಟೀಕೆ ಮಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಬರ ಅಧ್ಯಯನ ಮಾಡುತ್ತಿರುವುದೇ ಒಂದು ವಿಡಂಬನೆ. ಈಗಾಗಲೇ ಕೇಂದ್ರದ ತಜ್ಞರ ತಂಡ ಭೇಟಿ ನೀಡಿದೆ. ವೈಜ್ಞಾನಿಕ ಅಂಕಿ ಅಂಶಗಳನ್ನು ಸಲ್ಲಿಸಿದೆ. ರಾಜ್ಯ ಸರಕಾರ…

Read More