ಮಂಗಳೂರು:-ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯುವ ಮೋರ್ಚಾ ಕಾರ್ಯ ವಿಸ್ತರಣೆ ಮಾಡಿದ ಅವರು ಅತ್ಯುತ್ತಮ ಸಂಘಟಕರು, ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಅವರು ನಮ್ಮ ಜತೆ ರಾಜ್ಯದಲ್ಲಿ ಪ್ರವಾಸ ಮಾಡಿದ ಅನುಭವ ಇರುವವರು. ಉತ್ತಮ ರೀತಿಯಲ್ಲಿ ಪಕ್ಷವನ್ನು ಸಂಘಟಿಸುವ ವಿಶ್ವಾಸವಿದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ’ ಎಂದರು. ‘ಅಧ್ಯಕ್ಷನಾಗಿ ಆಯ್ಕೆಯಾದಾಗ ದಕ್ಷಿಣ ಕನ್ನಡ ಜಿಲ್ಲೆಯವನು ಪ್ರವಾಸ ಮಾಡಿ ಅನುಭವ ಇಲ್ಲ ಎಂಬ ಮಾತು ಇತ್ತು. ಇಡೀ ರಾಜ್ಯವನ್ನು 18 ಬಾರಿ ಸುತ್ತಿದ್ದೇನೆ. ಅನೇಕ ಚುನಾವಣೆಗಳು, ಉಪಚುನಾವಣೆಗಳನ್ನು ಗೆದ್ದಿದ್ದೇವೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಇಡೀ ರಾಜ್ಯದಲ್ಲಿ ಪ್ರವಾಸ ಮಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟಿರುವ ಬಗ್ಗೆ ತೃಪ್ತಿಯಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಡಿ.ವಿ. ಸದಾನಂದ ಗೌಡರ ರಾಜಕೀಯ ನಿವೃತ್ತಿ ಘೋಷಣೆಯ ಬಗ್ಗೆ ಕೇಳಿದ ಪ್ರಶ್ನೆಗೆ,…
Author: AIN Author
ಕಲಬುರಗಿ :-ಜಿಲ್ಲೆಯ ಅಳಿಯನಿಗೆ ಸಿಕ್ಕಿತು ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..ಹೌದು ಕಲಬುರಗಿಯ ಖ್ಯಾತ ಉದ್ಯಮಿ ಶಿವಾನಂದ ಮಾನ್ಕರ್ ಮಗಳನ್ನು ವರಿಸಿದ್ದ ಬಿವೈ ವಿಜಯೇಂದ್ರ ಇದೀಗ ಬಿಜೆಪಿಗೆ ಸಾರಥಿ.. ಹೀಗಾಗಿ ಮಾಜಿ ಸಿಎಂ ಯಡಿಯೂರಪ್ಪ ಬೀಗರ ಕಲಬುರಗಿ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ನಿರೀಕ್ಷೆಯಂತೆ ಪಕ್ಷದಲ್ಲಿ ಉನ್ನತ ಸ್ಥಾನ ಸಿಕ್ಕಿರೋದಕ್ಕೆ ಸಖತ್ ಖುಷಿಯಾಗಿದೆ ಅನ್ನೋದು ಬಿಎಸ್ವೈ ಬೀಗರ ಮಾತು..
ಶಿವಮೊಗ್ಗ:- ಕೊಟ್ಟಿರುವ ಜವಾಬ್ದಾರಿ ವಿಜಯೇಂದ್ರ ಸವಾಲಾಗಿ ಸ್ವೀಕರಿಸುತ್ತಾನೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇದೊಂದು ದೊಡ್ಡ ಜವಾಬ್ದಾರಿ, ಇದೊಂದು ಯೋಗ, ಕೇಂದ್ರದಲ್ಲಿ ಮೋದಿ ಪ್ರಧಾನಮಂತ್ರಿ, ನಡ್ಡಾ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜಕಾರಣವನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾನೆ. ಕಾರ್ಯಕರ್ತರ ಶಕ್ತಿ ಸಂಘಟನೆ ಲೋಕಸಭೆ, ಜಿ.ಪಂ ತಾ.ಪಂ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡ್ತಾನೆ. ವಿಜಯೇಂದ್ರ ಕೊಟ್ಟಿರುವ ಜವಾಬ್ದಾರಿ ಸವಾಲಾಗಿ ಸ್ವೀಕರಿಸ್ತಾನೆ ಯಶಸ್ವಿಯಾಗಿ ನಿರ್ವಹಣೆ ಮಾಡ್ತಾನೆ ಎಂದು ಭರವಸೆ ವ್ಯಕ್ತಪಡಿಸಿದರು. ಹಿಂದೆ ಕಟೀಲ್ ಸಹ ಒಳ್ಳೆಯ ಕೆಲಸ ಮಾಡಿದ್ದರು. ಈಶ್ವರಪ್ಪ, ಅನಂತಕುಮಾರ್ ಬಿ.ಬಿ.ಶಿವಪ್ಪ ಅಂತಹವರು ಪಕ್ಷ ಸಂಘಟನೆ ಮಾಡಿದ್ದಾರೆ. ಇದೀಗ ಬಿವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ನಾಯಕರು. ರಾಜಕಾರಣ ಒಂದು ಸವಾಲು ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಅಧಿಕಾರ ಬಂದಾಗ ಸನಿಹಕ್ಕೆ ಬರೋದು ಸಹಜ. ಅದೇ ಅಧಿಕಾರ ಇಲ್ಲದಿದ್ದಾಗ ಹಿಂದೆ ಮುಂದೆ ನೋಡೋದು ಸಹಜ. ಹಿರಿಯರ ಜೊತೆ ಪಕ್ಷ ಸಂಘಟನೆ ಯಶಸ್ವಿಯಾಗಿ ಮಾಡುತ್ತಾನೆ. ಕೊಟ್ಟಿರುವ…
ಬೆಂಗಳೂರು:- ಬಿಜೆಪಿ ಹೈಕಮಾಂಡ್ ವಿರುದ್ಧ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿ ನಾಯಕರ ಮೇಲೆ ಕೋಪಗೊಳ್ಳಬೇಡಿ ಎಂದು ಹೈಕಮಾಂಡ್ಗೆ ಮನವಿ ಮಾಡಿದ ಅವರು, ಬಾಕಿ ಇರುವ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕಾತಿಗಳನ್ನು ಶೀಘ್ರವಾಗಿ ಮಾಡುವಂತೆ ಒತ್ತಾಯ ಮಾಡಿದರು. ಸದಾನಂದ ಗೌಡರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಎರಡು ದಿನಗಳ ನಂತರ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಜೆಪಿ ನಾಯಕರ ವರ್ತನೆಯಿಂದ ನನಗೆ ನೋವಾಗಿದೆ. ನಾವು ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕೇಂದ್ರ ನಾಯಕರ ವಿರುದ್ಧ ನನಗೆ ಅಸಮಾಧಾನವಿದೆ ಎಂದರು. ಇಂದಿಗೂ ನಾನು ಕೇಂದ್ರ ನಾಯಕರಲ್ಲಿ ಕೇಳಿಕೊಳ್ಳುತ್ತೇನೆ. ಕರ್ನಾಟಕದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ವಿಧಾನಸಭೆ ಚುನಾವಣೆಯಲ್ಲಿ ನಾವು ಏನನ್ನು ಕಳೆದುಕೊಂಡಿದ್ದೇವೆ, ಅದನ್ನು ಲೋಕಸಭೆ ಚುನಾವಣೆಯಲ್ಲಿ ಆಸಕ್ತಿಯಿಂದ ನಿಮಗೆ ಹಿಂತಿರುಗಿಸುತ್ತೇವೆ. ನಮ್ಮ ಮೇಲೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ.
ಬೆಂಗಳೂರು:- ಬಿಜೆಪಿಯ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕ ಬೆನ್ನಿಗೇ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿ ಧನ್ಯವಾದಗಳನ್ನು ತಿಳಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ಅವರು ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೆಸರುಗಳನ್ನು ಉಲ್ಲೇಖಿಸಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ತಮಗೆಲ್ಲ ತುಂಬು ಹೃದಯದ ಕೃತಜ್ಞತೆಗಳು ಎಂದು ವಿಜಯೇಂದ್ರ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆ ಮುಖಾಂತರ ಹೇಳಿಕೊಂಡಿದ್ದಾರೆ. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂಬುದಾಗಿ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನ :- ವ್ಯಂಗ್ಯದ ಮಾತು ನಿಲ್ಲಿಸದಿದ್ದರೆ ನನ್ನ ಶಕ್ತಿ ತೋರಿಸುವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಎಚ್.ಡಿ. ಕುಮಾರಸ್ವಾಮಿ ಅವರು ಈಗಾಗಲೇ 2-3 ಬಾರಿ ಸಾರ್ವಜನಿಕವಾಗಿ ನನ್ನ ಹಿಂದಿನ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದು, ಮಜ್ಜಿಗೆ ಮಾರಾಟ ಮಾಡುತ್ತಿದ್ದವರು ಎಂದು ಅಪಹಾಸ್ಯ ಮಾಡಿದ್ದಾರೆ’ ಎಂದರು. ಈ ರೀತಿ ಹೇಳುವ ಮೂಲಕ ಅವರ ಗೌರವವನ್ನು ಅವರೇ ಕಳೆದುಕೊಳ್ಳುತ್ತಿದ್ದಾರೆ. ನಾನು ರಾಜಕೀಯಕ್ಕೂ ಮುನ್ನ ಜೀವನೋಪಾಯಕ್ಕೆ ಈ ರೀತಿ ವ್ಯವಹಾರ ಮಾಡಿರಬಹುದು. ಅದನ್ನೇ ನೆಪವಾಗಿ ಇಟ್ಟುಕೊಂಡು ಹಿಯಾಳಿಸುವ ಕೆಲಸ ಮಾಡಬಾರದು. ಮತ್ತೊಬ್ಬರ ತೇಜೋವಧೆ ಬೇಡ’ ಎಂದು ಹೇಳಿದರು. ‘ನನ್ನ ಬಗ್ಗೆ ಮಾತನಾಡುವ ಅವರು. ಈ ಹಿಂದೆ ಬಿಬಿಎಂಪಿಯಲ್ಲಿ ಕಸ ಎತ್ತುವ ಟೆಂಡರ್ ಪಡೆದಿದ್ದರು. ಅದನ್ನು ನಾನು ಹೇಳಿದರೆ, ನನಗೂ ಅವರಿಗೂ ವ್ಯತ್ಯಾಸ ಇರುವುದಿಲ್ಲ’ ಎಂದರು. ‘ಕ್ಷೇತ್ರದ ಜನರ ಆಶಯದಂತೆ ನಾನು ಪಕ್ಷಾಂತರ ಮಾಡಿ ಕಾಂಗ್ರೆಸ್ ಸೇರಿದ್ದೇನೆ. ಆದರೆ ಇವರು ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಾರೆ. ಅವರು ದೊಡ್ಡವರು. ನಾವು ಅದನ್ನು…
ಬೆಂಗಳೂರು:- ವಿಜಯದ ನಿರೀಕ್ಷೆಯಲ್ಲಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಲಭಿಸಿದ್ದು, ರಾಜ್ಯದಲ್ಲಿ ರಾಜಾಹುಲಿ ಪ್ರಭಾವ ಮಾತ್ರ ತಗ್ಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ವಿಜಯ ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಆ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ನೇಮಕವನ್ನು ಪ್ರಮುಖ ದಾಳವಾಗಿ ಪ್ರಯೋಗಿಸಿದೆ. ಲೋಕಸಭೆ ಚುನಾವಣೆಯಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಈಗಾಗಲೇ ನಾನಾ ಪಟ್ಟುಗಳನ್ನು ಹಾಕುತ್ತಿರುವ ಕಮಲಪಡೆ, ಅದರ ಮೊದಲ ಹಂತವಾಗಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷರ ಪಟ್ಟ ನೀಡಿದೆ ಎನ್ನಲಾಗಿದೆ. ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಜಯ ಗಳಿಸಲು ಸಾಧ್ಯವಾಗದಿರುವುದು ಹಾಗೂ ರಾಜ್ಯದಲ್ಲಿ ಅಧಿಕಾರ ತಪ್ಪಿ ಹೋಗಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿತ್ತು. ಅವೆಲ್ಲ ನಕಾರಾತ್ಮಕ ಸಂಗತಿಗಳನ್ನು ಮರೆಮಾಚುವ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಭರ್ಜರಿ ವಿಜಯದ ನಿರೀಕ್ಷೆಯಲ್ಲಿರುವ ಬಿಜೆಪಿ ಅದನ್ನು ವಿಜಯೇಂದ್ರ ಮೂಲಕ ಸಾಧಿಸಲು ತಂತ್ರ ಹೂಡಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿ, ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿಸಿದ ಬೆನ್ನಿಗೇ ರಾಜ್ಯ ಬಿಜೆಪಿಯಲ್ಲಿ ಒಂದು ಆಂತರಿಕ…
ಬೆಂಗಳೂರು:- ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಪ್ರವಹಿಸಿದ ವಿಚಾರವಾಗಿ ಮಾಜಿ ಸಚಿವ ಶಾಸಕ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಳಗ್ಗೆ ಘಟನೆ ನಡೆದದ್ದು ವಿಷಯ ಗೊತ್ತಾಯಿತು. ಸಂಬಂಧಿಸಿದವರ ಜೊತೆ ಮಾತಾಡಿದೆ. ಮೆಡಿಕಲ್ ಕಾಲೇಜು ವೈದ್ಯಾಧಿಕಾರಿ ಜೊತೆ ಮಾತಾಡಿದೆ. ಅಸ್ವಸ್ಥ ಹೆಣ್ಣು ಮಗಳಿಗೆ ಚಿಕಿತ್ಸೆ ಕೊಡುತ್ತಿರೋದಾಗಿ ಹೇಳಿದ್ದಾರೆ. ದಿನಾ ಒಂದು ಲಕ್ಷ ಜನ ಬರ್ತಿದ್ದಾರೆ. ಹಲವು ಇಲಾಖೆ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡ್ತಿದ್ದಾರೆ. ಕೆಲ ಅಧಿಕಾರಿಗಳು ಅವರೇ ಆಸ್ಪತ್ರೆಗೆ ಸೇರುವಂತಾಗಿದೆ. ಇಲ್ಲಿಯವರೆಗೂ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಆದ್ರೆ ಈಗ ಅಂತ ಘಟನೆ ಆಗಿದೆ. ಮುಂದೆ ಆಗದಂತೆ ತಾಯಿ ಕಾಪಾಡಲಿ. ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇನೆ. ಇಂಧನ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಜಿಲ್ಲಾಧಿಕಾರಿ ಬೆಂಗಳೂರಿಗೆ ಬಂದಿದ್ರು. ಅವರಿಗೂ ವಿಚಾರ ಗೊತ್ತಿಲ್ಲ ಎಂದರು. ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿ, ಮೈತ್ರಿ ಬಗ್ಗೆ, ಜೆಡಿಎಸ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳೋದು ಬೇಡ. ಯಾರೂ ಜೆಡಿಎಸ್ ಮುಳುಗೋಯ್ತು ಅಂತ ತಿಳಿಯೋದು ಬೇಡ.…
ಬೆಂಗಳೂರು:- ನಗರದಲ್ಲಿ ಪುಟ್ ಪಾಥ್ ತೆರವು ಕಾರ್ಯ ಮತ್ತೆ ಮುಂದುವರಿದಿದೆ. ಮಲ್ಲೇಶ್ವರಂನಲ್ಲಿ ಪಾಟ್ ಪಾಥ್ ಮೇಲೆ ವ್ಯಾಪಾರ ಮಾಡುತ್ತಿದ್ದವರ ಮೇಲೆ ಪಾಲಿಕೆ ಅಧಿಕಾರಿಗಳ ಏಕಾಏಕಿ ದಬ್ಬಾಳಿಕೆ ಮಾಡಿದ್ದಾರೆ. ಪಾಲಿಕೆ ಅಧಿಕಾರಿಗಳು ಏಕಾಏಕಿ ಬಂದು ರಸ್ತೆಗೆ ಹೂ ಚೆಲ್ಲಿ ಹೊರಟು ಹೋಗಿದ್ದಾರೆ. ಸಾಲ ಮಾಡಿ ಬಂಡವಾಳ ಹಾಕಿದ್ದೇವೆ ಅಂತಾ ರಸ್ತೆಯಲ್ಲೇ ವ್ಯಾಪಾರಗಾರರು ಕೂತಿದ್ದಾರೆ. ಹಬ್ಬ ಇದೆ ದಯವಿಟ್ಟು ಮೂರು ದಿನ ಅವಕಾಶ ಮಾಡಿ ಕೊಡಿ ಬೀದಿ ಬದಿ ವ್ಯಾಪಾರಗಾರರು ಕೇಳಿಕೊಂಡರೂ, ಅಧಿಕಾರಿಗಳು ಮಾತ್ರ ತೆರವು ಮಾಡಿ ತೆರಳಿದ್ದಾರೆ.
ಬೆಂಗಳೂರು: ಸರಕಾರವು ರಾಜ್ಯವನ್ನು ದೇಶದ ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರದಲ್ಲಿ ದೇಶಕ್ಕೇ `ನಂಬರ್ 1’ ಮಾಡುವ ಗುರಿಯೊಂದಿಗೆ ಕರಡು ನೀತಿ ರೂಪಿಸಿದ್ದು, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಬಂಡವಾಳ ಆಕರ್ಷಿಸುವ ಮತ್ತು 1 ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶಗಳನ್ನು ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. 2023ರಿಂದ 2028ರವರೆಗಿನ ಐದು ವರ್ಷಗಳ ಅವಧಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿರುವ ನೀತಿಯ ಕರಡಿನ ಬಗ್ಗೆ ಚರ್ಚಿಸಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಉದ್ಯಮ ಪ್ರತಿನಿಧಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂಬರುವ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳು ನಮ್ಮ ಸಂಚಾರ ಕ್ಷೇತ್ರವನ್ನು ಆಳಲಿವೆ. ಕರಡು ನೀತಿಯಲ್ಲಿ ಬಂಡವಾಳ ಸಬ್ಸಿಡಿಯನ್ನು ಹೆಚ್ಚಿಸಬೇಕೆನ್ನುವ ಸಲಹೆ ಕೊಡಲಾಗಿದೆ. ಜೊತೆಗೆ, ಉತ್ಪಾದನೆ ಆಧರಿಸಿ ಕೊಡುವ ಪ್ರೋತ್ಸಾಹ ಭತ್ಯೆಯನ್ನು ಈಗಿನಂತೆ ಶೇಕಡ 1ರ ಪ್ರಮಾಣದಲ್ಲೇ ಮುಂದುವರಿಸಿಕೊಂಡು ಹೋಗುವ ಚಿಂತನೆಯೂ ಇದರಲ್ಲಿದೆ ಎಂದು ಅವರು ತಿಳಿಸಿದರು. ಕರಡು ನೀತಿಯು…