ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್ (Darlene Morais), ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ. ಬ್ರೆಜಿಲಿಯನ್ (Brazilian) ನ ಈ ಗಾಯಕನಿಗೆ (Singer) ಕೇವಲ 28 ವರ್ಷ ವಯಸ್ಸಾಗಿತ್ತು. ಅತೀ ಕಡಿಮೆ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವುದು ಅಭಿಮಾನಿಗಳಿಗೆ ಶಾಕ್ ಆಗಿದೆ. ಜೇಡ ಕಚ್ಚಿದ ದಿನವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೂಡ ಪಡೆದಿದ್ದರು. ಮನೆಗೆ ಬಂದ ಬಳಿಕ ತೀವ್ರ ಆಯಾಸದಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಅವರ ದೇಹದ ಬಣ್ಣ ಕೂಡ ಬದಲಾಗುತ್ತಿದ್ದು, ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.
Author: AIN Author
ಹುಬ್ಬಳ್ಳಿ: ಬಿಜೆಪಿ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದೆ ಅದನ್ನು ಎತ್ತುವ ಕೆಲಸ ಮಾಡಲಿ. ಒಬ್ಬ ವಿರೋಧಪಕ್ಷದ ನಾಯಕರನ್ನು ನೇಮಿಸಲಾಗದಷ್ಟು ದುಸ್ಥಿತಿಗೆ ಬಂದಿರುವ ಬಿಜೆಪಿಯು ಮುರುಕಲು ಮನೆಯಾಗಿದ್ದು, ಕಾಂಗ್ರೆಸ್ಗೆ ನೀತಿ ಪಾಠ ಹೇಳುವು ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅವರು ಟೀಕಿಸಿದ್ದಾರೆ. ಅವರು ಪತ್ರಿಕಾ ಪ್ರಕಟಣೆ ನೀಡಿ, ಬಿಜೆಪಿಗೆ ರಾಜ್ಯದ ಜನ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಅವರ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಅವರಿಗೆ ಅದು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. ನಾಲ್ಕು ಗುಂಪುಗಳಾಗಿವೆ ಎಂದು ಹೇಳುತ್ತಾ ತಿರುಗುತ್ತಿದ್ದಾರೆ. ಇಡೀ ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಒಂದು ರಾಷ್ಟ್ರೀಯ ಪಕ್ಷ ಬಿಜೆಪಿಗೆ ರಾಜ್ಯದ ವಿರೋಧ ಪಕ್ಷದ ನಾಯಕರನ್ನು ನೇಮಿಸಲಾಗದಷ್ಟು ದುಸ್ಥಿತಿಗೆ ಬಂದಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆಯುವಂತಾಗಿದೆ. ಬಿಜೆಪಿಯ ಶಾಸಕರುಗಳು ನಾಯಕರುಗಳು ಅವರ ಪಕ್ಷದ ವಿರುದ್ಧವೇ ಮಾಧ್ಯಮಗಳ ಮುಂದೆ ಹರಿ ಹಾಯುತ್ತಿದ್ದಾರೆ. ಅದರ ಬಗ್ಗೆ ಗಮನ ಕೊಡುವುದು ಬಿಟ್ಟು…
ಬೆಂಗಳೂರು: ಅಗ್ನಿಶಾಮಕ ದಳದ ಮೂಲಕ ಮಾಹಿತಿ ಪಡೆದು ಪಟಾಕಿ ಮಾರಾಟಕ್ಕೆ ಲೈಸೆನ್ಸ್ ನೀಡಲಾಗಿದೆ. ಎಲ್ಲೆಲ್ಲಿ ಮಳಿಗೆ ಹಾಕಬೇಕೆಂದು ಬಿಬಿಎಂಪಿ ಅನುಮತಿ ನೀಡಲಿದೆ. ಬೆಂಗಳೂರಲ್ಲಿ ಒಟ್ಟು 62 ಮೈದಾನದಲ್ಲಿ 320 ಪಟಾಕಿ ಅಂಗಡಿಗಳನ್ನು ಹಾಕಲು ಪರವಾನಿಗೆ ನೀಡಲಾಗಿದೆ. 964 ಜನರು ಪಟಾಕಿ ಮಾರಾಟದ ಲೈಸೆನ್ಸ್ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 263 ಜನರಿಗೆ ಲಾಟರಿ ಮೂಲಕ ಲೈಸೆನ್ಸ್ ನೀಡಲಾಗಿದೆ. ಅನಧಿಕೃತ ಪಟಾಕಿ ಮಾರಾಟ ಪತ್ತೆ ಹಚ್ಚಲು ಟಾಸ್ಕ್ಫೋರ್ಸ್ ರಚಿಸಲಾಗಿದೆ. ಪೊಲೀಸ್, ಅಗ್ನಿಶಾಮಕ, ಬಿಬಿಎಂಪಿ ಸಹಯೋಗದಲ್ಲಿ ಟಾಸ್ಕ್ಫೋರ್ಸ್ ರಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದರು.
ಗದಗ: ಬರ ಪರಿಸ್ಥಿತಿ ಬಗ್ಗೆ ಗಮನ ಕೊಡಬೇಕಿದ್ದ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅದ್ಧೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹೌದು ರಾಜ್ಯ ಎಂಥ ಸಂಕಷ್ಟದಲ್ಲಿದೆ ಎಂಬ ಕಿಂಚಿತ್ ಪರಿವೆಯೂ ಅವನಿಗಿದ್ದಂತಿಲ್ಲ. ರೈತರು ಮಳೆಯಿಲ್ಲದೆ ಕಂಗಾಲಾಗಿದ್ದಾರೆ. ರಾಜ್ಯದ ಪ್ರಮುಖ ನಗರಗಳಲ್ಲಿ ಬೇಸಿಗೆಯಲ್ಲಿ ಕುಡಿಯಲು ಸಹ ನೀರು ಸಿಗದ ಆತಂಕವಿದೆ. ರೈತರ ದನಕರುಗಳಿಗೆ ತಿನ್ನಲು ಮೇವಿಲ್ಲ. ಇದರ ಮಧ್ಯೆ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅವರ 48 ನೇ ವರ್ಷದ ಹುಟ್ಟು ಹಬ್ಬವನ್ನ ಸಂಜೆ ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ ಮಾಡ್ಲಾಗಿದೆ.. ಫಯರ್ ವರ್ಕ್ ಸ್ವಾಗತದೊಂದಿದೆ ತಹಶೀಲ್ದಾರ್ ಸಾಹೇಬರಿಗೆ ಸ್ವಾಗತಿಸಿ ಕೇಕ್ ಕಟ್ ಮಾಡ್ಲಾಗಿದೆ.. ತಹಶೀಲ್ದಾರ್ ಅವರು ಹಾಡು ಹಾಡುವ ಮೂಲಕ ಸಭಿಕರನ್ನ ರಂಜಿಸುವ ಕೆಲಸವನ್ನೂ ಮಾಡಿದ್ದಾರೆ.. ಬರ ಪರಿಸ್ಥಿತಿ ಬಗ್ಗೆ ಗಮನ ಕೊಡಬೇಕಿದ್ದ ತಹಶೀಲ್ದಾರ್ ಸಾಹೇಬರು ಅದ್ಧೂರಿ ಹುಟ್ಟು ಹಬ್ಬದ ಮಾಡ್ಕೊಂಡಿರೋದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹುಟ್ಟಿದೆ.
ಬೆಂಗಳೂರು: ವಿಶ್ವ ಸಾರ್ವಜನಿಕ ಸಾರಿಗೆ ದಿನ ಹಿನ್ನಲೆಯಲ್ಲಿ ಇಂದು ಬಸ್ ಗಳಲ್ಲಿ ಪ್ರಯಾಣ ಮಾಡಿದ ಬೆಂಗಳೂರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ , ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಹಾಗೂ ಸಂಚಾರಿ ಡಿಸಿಪಿ ಕುಲದೀಪ್ ಜೈನ್ ರಿಂದ ಬಸ್ ನಲ್ಲಿ ಪ್ರಯಾಣ ಮಾಡಿದರು. ಸಾರ್ವಜನಿಕ ಸಾರಿಗೆ ಬಳಕೆಯನ್ನ ಪ್ರೋತ್ಸಾಹಿಸಲು ಬಸ್ ನಲ್ಲಿ ಪ್ರಯಾಣ ಮಾಡಿದೆ ಎಂದು ತಿಳಿಸಿದರು.
ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಮದ್ದೂರು ಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೌದು ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದ್ದು, ಸಹಪಾಠಿಗಳೇ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಪುನೀತ್ ಎಂಬಾತ ಮೈಸೂರಿನ ಯುವ ದಸರಾದಲ್ಲಿ ಸಂತ್ರಸ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಪರಿಚಯದ ಬಳಿಕ ಪ್ರೀತಿ ಮಾಡುವುದಾಗಿ ನಂಬಿಸಿ, ಸಲುಗೆಯನ್ನು ಬೆಳೆಸಿಕೊಂಡಿದ್ದ. ಈ ನಡುವೆ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿದ್ದ ಕಾಮುಕ, ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದ. ಅತ್ಯಾಚಾರದ ವಿಡಿಯೊ ಮಾಡಿಕೊಂಡ ಕಿರಾತಕರು ಆನಂತರ ಅಪ್ರಾಪ್ತೆ ಮೊಬೈಲ್ಗೆ ಕಳುಹಿಸಿ ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದಾರೆ. ಇವರ ಕಿರುಕುಳದಿಂದ ಕಂಗಲಾದ ಅಪ್ರಾಪ್ತೆ ನಡೆದಿದ್ದನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಅಪ್ರಾಪ್ತೆ ಪೋಷಕರಿಂದ ದೂರು ದಾಖಲಾದ ಬೆನ್ನಲ್ಲೇ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಬಳ್ಳಾರಿ: ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು ಖಂಡಿಸಿ ರೈತ ಸಂಘ ಶುಕ್ರವಾರ ಕರೆ ನೀಡಿರುವ ಬಳ್ಳಾರಿ ಬಂದ್ ಶುರುವಾಗಿದೆ. ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ ವರೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಮಾಧವರೆಡ್ಡಿ ನೇತೃತ್ವದ ರೈತ ಸಂಘ ಬಳ್ಳಾರಿ ಬಂದ್ಗೆ ಕರೆ ನೀಡಿದೆ. ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನವೆಂಬರ್ ಅಂತ್ಯದವರೆಗೆ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ನಂತರ ಬೆಂಗಳೂರಿನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ನ.10ರ ವರೆಗೆ ಮಾತ್ರ ನೀಡಲಿದೆ ಎಂದು ಹೇಳಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ. https://ainlivenews.com/knee-pain-treatment-joint-pain-treatment/ ಪೆಟ್ರೋಲ್ ಬಂಕ್, ಹಾಲಿನ ಅಂಗಡಿಗಳು ಸೇರಿ ಅಗತ್ಯ ಸೇವೆಗಳು ಆರಂಭಗೊಂಡಿವೆ. ಹೊಟೇಲ್ಗಳು ವಿರಳ ಸಂಖ್ಯೆಯಲ್ಲಿ ತೆರೆದಿವೆ. ಬೀದಿ ಬದಿ ವ್ಯಾಪಾರಸ್ಥರು ವಹಿವಾಟನ್ನು ಬೆಳಿಗ್ಗೆಯಿಂದಲೇ ಆರಂಭಿಸಿದ್ದಾರೆ. ರೈತ ಸಂಘದ ಬಂದ್ ಗೆ ವಿವಿಧ ಸಂಘಟನೆಗಳಿಗೆಬೆಂಬಲ ವ್ಯಕ್ತಪಡಿಸಿವೆ.
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ (Lashkar e Taiba Terrorist) ಅಕ್ರಮ್ ಘಾಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಒಂದು ವಾರದ ಅವಧಿಯಲ್ಲಿ ನಡೆದ ಭಾರತದ ಮೋಸ್ಟ್ ವಾಂಟೆಡ್ ಉಗ್ರನ ಎರಡನೇ ಹತ್ಯೆ ಇದಾಗಿದೆ. ಬಜೌರ್ ಜಿಲ್ಲೆಯಲ್ಲಿ ಬೈಕ್ನಲ್ಲಿ ಬಂದ ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕ್ರಮ್ ಖಾನ್ ಅಲಿಯಾಸ್ ಘಾಜಿ (Akram Ghazi) 2018-2020 ರ ಅವಧಿಯಲ್ಲಿ ಲಷ್ಕರ್ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಕಳೆದ ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ. ಜಮ್ಮು ಮತ್ತು ಕಾಶ್ಮೀರದಲ್ಲಿ 2018 ರ ಸುಂಜ್ವಾನ್ ಭಯೋತ್ಪಾದನಾ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬನಾಗಿದ್ದ ಖ್ವಾಜಾ ಶಾಹಿದ್ನನ್ನು ಭಾನುವಾರ ಅಪಹರಿಸಲಾಗಿತ್ತು. https://ainlivenews.com/knee-pain-treatment-joint-pain-treatment/ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದನ ಮಾಡಲಾಯಿತು. ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ.…
ಶಿವಮೊಗ್ಗ: ಕೆಇಎ ನಡೆಸಿದ ಎಫ್ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡಿರುವ ಆರ್ಡಿ ಪಾಟೀಲ್ ಕುರಿತು ಮಾತನಾಡಿದ ಮಾಜಿ ಗೃಹಸಚಿವ, ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಎಲ್ಲಾ ಪರೀಕ್ಷೆಗಳಲ್ಲೂ ಆರ್.ಡಿ.ಪಾಟೀಲ್ ಅಕ್ರಮ ಮಾಡಿದ್ದಾನೆ. ನಮ್ಮ ಸರ್ಕಾರ ಇದ್ದಾಗ ಹೆಡೆಮುರಿ ಕಟ್ಟಿ ಅರೆಸ್ಟ್ ಮಾಡಿದ್ದೆವು. ಬಳಿಕ ಜಾಮೀನಿನ ಮೇಲೆ ಆರ್.ಡಿ.ಪಾಟೀಲ್ ಹೊರ ಬಂದಿದ್ದ. https://ainlivenews.com/knee-pain-treatment-joint-pain-treatment/ ಈಗ R.D.ಪಾಟೀಲ್ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು? ಪೊಲೀಸರ ಕೈವಾಡವಿಲ್ಲದೆ ಆತ ತಪ್ಪಿಸಿಕೊಂಡು ಹೋಗಲು ಆಗಲ್ಲ. ಆರ್.ಡಿ.ಪಾಟೀಲ್ ರಕ್ಷಣೆಗೆ ಪ್ರಿಯಾಂಕ್ ಖರ್ಗೆ ನಿಂತಿದ್ದಾರೆ. ಪರೀಕ್ಷಾ ಕೇಂದ್ರ ಸೆಲೆಕ್ಟ್ ಮಾಡುವುದು ಸಹ ಆರ್.ಡಿ.ಪಾಟೀಲ್. ಇಂತಹ ವ್ಯಕ್ತಿಗಳಿಗೆ ರಕ್ಷಣೆ ಕೊಡುವುದು ಕಾಂಗ್ರೆಸ್ ಸರ್ಕಾರದವರು. ಪೊಲೀಸರ ವಿರುದ್ಧವೂ ತನಿಖೆ ಮಾಡಲಿ ಎಂದರು.
ಬೆಂಗಳೂರು: ವಿಶ್ವಕಪ್ (World Cup) ಟೂರ್ನಿಯಲ್ಲಿ ಅದ್ಬುತ ಪ್ರದರ್ಶನದ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದ ಕರ್ನಾಟಕ ಮೂಲದ ನ್ಯೂಜಿಲೆಂಡ್ ಆಟಗಾರ ರಚಿನ್ ರವೀಂದ್ರ (Rachin Ravindra) ಅವರ ಅಜ್ಜಿ ದೃಷ್ಟಿ ತೆಗೆಯುವ ವೀಡಿಯೋ ವೈರಲ್ ಆಗಿದೆ. ಶ್ರೀಲಂಕಾ ಪಂದ್ಯದ ನಂತರ ಬೆಂಗಳೂರಿನಲ್ಲೇ ಇರುವ ತಮ್ಮ ಅಜ್ಜಿ ಮನೆಗೆ ಭೇಟಿ ರಚಿನ್ ಭೇಟಿ ನೀಡಿದ್ದಾರೆ. ಈ ವೇಳೆ ತಮ್ಮ ಮೊಮ್ಮಗನಿಗೆ ಯಾರ ದೃಷ್ಟಿಯೂ ಬೀಳಬಾರದು ಎಂದು ಅಜ್ಜಿ ಪ್ರೀತಿಯಿಂದ ದೃಷ್ಟಿ ತೆಗೆದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಮೊದಲ ಬಾರಿಗೆ ವಿಶ್ವಕಪ್ ಆಡುತ್ತಿರುವ ರಚಿನ್ ಈ ಆವೃತ್ತಿಯಲ್ಲಿ ಒಟ್ಟು ಮೂರು ಶತಕ ಬಾರಿಸಿ ಕ್ರಿಕೆಟ್ ದಂತಕತೆ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ 565 ರನ್ ಗಳಿಸಿರುವ ಅವರು ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.