ರಾಯಚೂರು:- ಲಿಂಗಸೂರು ತಾಲೂಕಿನ ಹಟ್ಟಿ ಪಟ್ಟಣದ ಸರ್ಕಲ್ ಇನ್ಸ್ಪೆಕ್ಟರ್ ಗೆ ಪೊಲೀಸ್ ಸ್ಟೇಷನ್ ಆವರಣದಲ್ಲಿ ಪ್ರತಿಭಟನೆ ಕಾರರು ಮುಗಿಬಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ. ಲ್ಯಾಬ್ ಟೆಕ್ನಿಷಿಯನ್ ಮಂಜುಳಾ ಕೊಲೆ ಕೇಸ್ ಗೆ ಆತ್ಮಹತ್ಯ ಎಂದು ಎಫ್ಐಆರ್ ದಾಖಲಿಸಿದ್ದು, ಬೆಳ್ಳಂ ಬೆಳಗ್ಗೆ ಹಟ್ಟಿ ಪಟ್ಟಣದಲ್ಲಿ 40 ವರ್ಷದ ಲ್ಯಾಬ್ ಟೆಕ್ನಿಷಿಯನ್ ಮಂಜುಳಾ ದೇಹ ಹೊತ್ತಿ ಉರಿದಿದೆ. ಪಟ್ಟಣದ ಗುಂಡುರಾವ್ ಕಾಲೋನಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಮಂಜುಳಾ ಶವ ಪತ್ತೆಯಾಗಿತ್ತು. ಕೊಲೆಯಾಗಿದ್ದ ಕೇಸಿಗೆ ಆತ್ಮಹತ್ಯೆ ಎಂದು ಎಫ್ ಆರ್ ಮಾಡಿಕೊಂಡಿದ್ದ ತನಿಖಾಧಿಕಾರಿ CPI ಹೊಸಕೆರಪ್ಪ ಗೆ ಪ್ರತಿಭಟನಾಕಾರರು ತರಾಟೆ ತೆಗೆದುಕೊಂಡಿದ್ದಾರೆ. ಕೊಲೆಯಾಗಿ ಹದಿನೈದು ದಿನ ಕಳೆದರೂ ಆರೋಪಿಗಳು ಪತ್ತೆ ಇಲ್ಲ. ನೀವು ಸುಳ್ಳು ಹೇಳುತ್ತೀರಿ ನಿಮ್ಮ ಮೇಲೆ ನಂಬಿಕೆ ಇಲ್ಲ ಆರೋಪಿಗಳ ಜೊತೆ ಶಾಮೀಲಾಗಿದ್ದೀರಿ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.
Author: AIN Author
ಹುಬ್ಬಳ್ಳಿ : ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಹೊರೆ ತಪ್ಪಿಸಲು ’ಭಾರತ್ ದಾಲ್’ ಎಂಬ ಬ್ರಾಂಡ್ನಲ್ಲಿ ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಕಡಲೆ ಬೇಳೆ ಮತ್ತು ಈರುಳ್ಳಿ ಮಾರಾಟ ಮಾರಾಟ ಆರಂಭಿಸಿರುವುದಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಸಾಲಿನಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ದೀಪಾವಳಿ ಉಡುಗೊರೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾರುಕಟ್ಟೆಯಲ್ಲಿ ಪ್ರತಿ ಕೇಜಿಗೆ ಅಂದಾಜು 120 ರೂ. ಗಳಿಗೆ ಮಾರಾಟವಾಗುವ ಕಡಲೆ ಬೇಳೆಯನ್ನು ಕೇವಲ ಕೇಜಿಗೆ 1 ಕೆಜಿ ಪ್ಯಾಕ್ಗೆ 60 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ಅದರಂತೆ ಪ್ರತಿ ಕೇಜಿಗೆ 80 ರೂ.ಗಳಿಗೆ ಮಾರಾಟವಾಗುತ್ತಿರುವ ಈರುಳ್ಳಿಯನ್ನು ಕೇಜಿಗೆ 25 ರೂ. ನಂತೆ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ಹಾಗೂ ಧಾರವಾಡದಲ್ಲಿ ಒಂದು ಸಂಚಾರಿ ವಾಹನಗಳಲ್ಲಿ ಕಡಲೆ ಬೇಳೆ ಹಾಗೂ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತಿದೆ. ಈಗಾಗಲೇ 1,153 ಕ್ವಿಂಟಾಲ್ ಕಡಲೆ ಬೇಳೆ ಮತ್ತು 176 ಕ್ವಿಂಟಾಲ್ ಈರುಳ್ಳಿ ಮಾರಾಟ ಮಾಡಲಾಗಿದೆ.…
ನ್ಯೂಯಾರ್ಕ್: ಹಂದಿಯ ಹೃದಯ ಕಸಿ ಪಡೆದ ವ್ಯಕ್ತಿಯೊಬ್ಬರು ಶಸ್ತ್ರಚಿಕಿತ್ಸೆಯ 40 ದಿನಗಳ ನಂತರ ಸಾವಿಗೀಡಾಗಿದ್ದಾರೆ. ಇವರು ವಿಶ್ವದಲ್ಲೇ ಹಂದಿ ಹೃದಯ ಕಸಿಗೊಳಗಾಗಿದ್ದ 2ನೇ ವ್ಯಕ್ತಿಯಾಗಿದ್ದರು. 58 ವರ್ಷದ ಲಾರೆನ್ಸ್ ಫೌಸೆಟ್ಟೆ ಮೃತವ್ಯಕ್ತಿ. ಹೃದಯಾಘಾತ ದಿಂದ ಅವರು ಸಾವನ್ನಪ್ಪಿದ್ದು, ಅವರಿಗೆ ಅತ್ಯಂತ ಪ್ರಾಯೋಗಿಕ ಶಸ್ತ್ರಚಿಕಿತ್ಸೆಯ ಮೂಲಕ 40 ದಿನಗಳ ಹಿಂದಷ್ಟೇ ಹಂದಿಯ ಹೃದಯ ಅಳವಡಿಸಲಾಗಿತ್ತು. ಸೆಪ್ಟೆಂಬರ್ 20 ರಂದು ಅವರಿಗೆ ಹಂದಿಯ ಹೃದಯ ಅಳವಡಿಸಲಾಗಿತ್ತು. ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ ವಿಶ್ವವಿದ್ಯಾಲಯದ ಪ್ರಕಾರ, ಅವರಿಗೆ ಮೊದಲ ತಿಂಗಳಲ್ಲಿ ಹೃದಯವೂ ಆರೋಗ್ಯಕರವಾಗಿ ಕಾರ್ಯನಿರ್ವಹಿಸಿತ್ತು. ಆದರೆ ಇತ್ತೀಚೆಗೆ ಅದು ಸರಿಯಾಗಿ ಸ್ಪಂದಿಸದೇ ನಿರಾಕರಿಸುವ ಲಕ್ಷಣವನ್ನು ತೋರಿಸುತ್ತಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರು ಸುಮಾರು ಆರು ವಾರಗಳ ಕಾಲ ಬದುಕಿದ್ದು ಆಕ್ಟೋಬರ್ 30 ರಂದು ಸಾವನ್ನಪ್ಪಿದ್ದಾರೆ ಎಂದು ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ. https://ainlivenews.com/knee-pain-treatment-joint-pain-treatment/ ಹಂದಿಯ ಹೃದಯ ಅಳವಡಿಸಿದ ನಂತರ ಫೌಸೆಟ್ ಆರೋಗ್ಯ ಸುಧಾರಿಸಿತ್ತು, ಅವರು ಕುಟುಂಬ ಸದಸ್ಯರೊಂದಿಗೆ ಖುಷಿಯಿಂದ ಸಮಯ ಕಳೆದಿದ್ದರು. ಜೊತೆಗೆ…
ಬಿಗ್ ದೀಪಾವಳಿ ಸೇಲ್ನಲ್ಲಿ ಕಾರು ಖರೀದಿಸುವವರಿಗೆ ಅತಿ ಕಡಿಮೆ ಬೆಲೆಗೆ ನಿಮ್ಮ ಆದಾಯಕ್ಕೆ ಅನುಗುಣವಾಗಿ ಕಾರು ಕೊಳ್ಳಬಹುದು. ನಿಮಗೆ ತಕ್ಕಮೈಲೆಜ್ ಕೊಡುವಂತಹ ಕಾರಿಗಳು ಈಗ ಶೋರೂಂಗಳಲ್ಲಿ ಲಭ್ಯವಾಗಿವೆ. ಯಾವುವು ಅಂತೀರಾ ನೋಡೋಣ ಬನ್ನಿ.. ಮಾರುತಿ ಸುಜುಕಿ ಬ್ರೆಝಾ: ಬ್ರೆಝಾ ಮೂಲ ರೂಪಾಂತರದ ಬೆಲೆಯು ರೂ. 8.29 ಲಕ್ಷ (ಎಕ್ಸ್ ಶೋ ರೂಂ) ರೂ.ನಿಂದ ಪ್ರಾರಂಭವಾಗುತ್ತದೆ. ಇದರ ವಿಶೇಷತೆ ಎಂದರೆ ಮಾರುತಿ ಕಾರುಗಳಲ್ಲಿಯೇ ಅತ್ಯಂತ ಸುರಕ್ಷಿತ ಕಾರಾಗಿ ಗುರ್ತಿಸಿಕೊಂಡಿದೆ. ಗ್ಲೋಬಲ್ NCAP ನಿಂದ 4-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಮಾರುತಿ ಸುಜುಕಿ ಬ್ರೆಝಾ: ಬ್ರೆಝಾ ಮೂಲ ರೂಪಾಂತರದ ಬೆಲೆಯು ರೂ. 8.29 ಲಕ್ಷ (ಎಕ್ಸ್ ಶೋ ರೂಂ) ರೂ.ನಿಂದ ಪ್ರಾರಂಭವಾಗುತ್ತದೆ. ಇದರ ವಿಶೇಷತೆ ಎಂದರೆ ಮಾರುತಿ ಕಾರುಗಳಲ್ಲಿಯೇ ಅತ್ಯಂತ ಸುರಕ್ಷಿತ ಕಾರಾಗಿ ಗುರ್ತಿಸಿಕೊಂಡಿದೆ. ಗ್ಲೋಬಲ್ NCAP ನಿಂದ 4-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಪಡೆದುಕೊಂಡಿದೆ. ಮಾರುತಿ ಸುಜುಕಿ ಬ್ರೆಝಾ: ಇದರ ಬೆಲೆ 8.29ಲಕ್ಷರೂ.ನಿಂದ ಪ್ರಾರಂಭವಾಗಿದ್ದು ಇದರವೇಶೆಷತೆ ಏನ್ ಗೊತ್ತಾ ಮಾರುತಿಕಾರುಗಳಲ್ಲಲಿಯೇ ಅತ್ಯಂತ…
ಬೆಂಗಳೂರು;- ಖಾಸಗಿ ಬಸ್ಗಳಲ್ಲಿ ಧ್ವನಿ ಪ್ರಕಟಣೆ ಅಳವಡಿಸಲು ಹೈಕೋರ್ಟ್ ಸೂಚನೆ ನೀಡಿದೆ. ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ, ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೋ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ಗಳೂ ಕೂಡ ಸಂಚಾರ ಕೈಗೊಳ್ಳುತ್ತಿರುವುದರಿಂದ, ಆ ಬಸ್ಗಳಲ್ಲಿ ವಿಶೇಷ ಚೇತನರ ಪ್ರಯಾಣಕ್ಕೆ ಅಗತ್ಯ ನೆರವನ್ನು ಕಲ್ಪಿಸಿಕೊಡಬೇಕಿದೆ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರ ಈ ವಿಚಾರದಲ್ಲಿ ಸಾಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ. ಸರ್ಕಾರ ಖಾಸಗಿ ಬಸ್ ಆಪರೇಟರ್ಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿ ಸುತ್ತೋಲೆ ಹೊರಡಿಸಬೇಕು. ಆ ನಿರ್ದೇಶನ ಹಾಲಿ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್ಗಳಿಗೆ ಮಾತ್ರವಲ್ಲ, ಹೊಸದಾಗಿ ಪರ್ಮಿಟ್ ನೀಡುವ ಬಸ್ಗಳಿಗೂ ಅನ್ವಯವಾಗುವಂತೆ ಇರಬೇಕು ಎಂದು ನ್ಯಾಯಾಲಯ ತಾಕೀತು ಮಾಡಿತು.…
ಈ ಬಾರಿ ಚಳಿ ಹೆಚ್ಚಾಗಿಯೇ ಇದೆ. ಚಳಿಗಾಲ ಬಂತು ಅಂದ್ರೆ ಸಾಕು ಎಲ್ಲಿಲ್ಲದ ಕಾಯಿಲೆಗಳು ನಮ್ಮನ್ನ ಹುಡುಕುತ್ತಾ ಬರುತ್ತವೆ. ಜ್ವರ, ಶೀತ ಕೆಮ್ಮು ಮತ್ತು ಶೀತಗಳ ಹೊರತಾಗಿ, ಅತೀ ನೋವನ್ನುಂಟು ಮಾಡುವ ಗಂಟಲು ನೋವು ಹೆಚ್ಚಾಗಿ ಕಾಣಿಸುತ್ತವೆ. ಚಳಿಗಾಲದಲ್ಲಿ ವೈರಸ್ಗಳು ಬೇಗ ಮನುಷ್ಯರನ್ನ ಆವರಿಸುತ್ತವೆ. ಅತಿ ಹೆಚ್ಚು ಗಂಟಲು ನೋವು ಕಾಣಿಸಿಕೊಳ್ಳೋದಕ್ಕೆ ಬ್ಯಾಕ್ಟೀರಿಯಾಗಳು ಸಹ ಕಾರಣ ಎಂದು ಹೇಳಲಾಗುತ್ತೆ. ಸ್ಟ್ರೆಪ್ಟೋಕೊಕಸ್ ಬ್ಯಾಕ್ಟೀರಿಯಾದಿಂದ ಉಂಟಾಗುವ ಸ್ಟ್ರೆಪ್ ಗಂಟಲಿಗೆ ಹೆಚ್ಚು ಅಪಾಯಕಾರಿ. ಸ್ಟ್ರೆಪ್ಟೋಕೊಕಸ್ ಬ್ಯಾಕ್ಟೀರಿಯಾದ ಸೋಂಕಿನಿಂದಲೂ ಹೆಚ್ಚಿನ ಜ್ವರ ಉಂಟಾಗುತ್ತದೆ. ಸ್ಟ್ರೆಪ್ ಥ್ರೋಟ್ ಸೋಂಕು ವೈರಲ್ ಗಂಟಲಿನ ಸೋಂಕಿಗಿಂತ ಹೆಚ್ಚು ತೊಂದರೆ ಉಂಟುಮಾಡಬಹುದು. ಆದರೆ, ಗಾಬರಿಯಾಗಬೇಡಿ, ಗಂಟಲು ನೋವನ್ನು ತೊಡೆದುಹಾಕಲು ನೀವು ಕೆಲವು ಮನೆಮದ್ದುಗಳನ್ನ ಉಪಯೋಗಿಸಬಹುದು. ಶೀತ ಮತ್ತು ಗಂಟಲು ನೋವು ತೊಡೆದುಹಾಕಲು ಕೆಲವೊಂದು ಪರಿಹಾರಗಳು 1.ಅರಿಶಿನ ಚಹಾ: ಗಂಟಲು ನೋವಿನ ಸಮಸ್ಯೆ ಪ್ರತಿಯೊಬ್ಬರಲ್ಲಿ ಕಾಡೋದು ಸಹಜ, ಗಂಟಲು ನೋವಿನ ವಿರುದ್ಧ ಅರಿಶಿಣ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತದೆ. ಅರಿಶಿನ ಚಹಾ ಗಂಟಲಿನ ಉರಿಯೂತವನ್ನು…
ನವದೆಹಲಿ: ಪಸ್ತುತ ನಡೆಯುತ್ತಿರುವ 2023 ರ ಐಸಿಸಿ ವಿಶ್ವಕಪ್ನಲ್ಲಿ ಭಾರತದ ಬ್ಯಾಟರ್ ಶುಭಮನ್ ಗಿಲ್ (Shubman Gill) ವಿಶ್ವದ ನಂ. 1 ODI ಬ್ಯಾಟರ್ ಆಗಿ, ಬಾಬರ್ ಅಜಂರನ್ನು (Babar Azam) ಸಿಂಹಾಸನದಿಂದ ಕೆಳಗಿಳಿಸಿದ್ದಾರೆ. ಬುಧವಾರ ಐಸಿಸಿ ಪುರುಷರ ODI ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ ಪ್ರಕಟಿಸಿದ್ದು, ಮೆನ್ ಇನ್ ಬ್ಲೂ ಓಪನರ್ ಪಾಕಿಸ್ತಾನದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಶುಭಮನ್ ಅವರು ಒಟ್ಟು 830 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಆ ಮೂಲಕ ಬಾಬರ್ ಅವರನ್ನು ಹಿಂದಿಕ್ಕಿದ್ದಾರೆ. ಬಾಬರ್ 824 ರೇಟಿಂಗ್ನೊಂದಿಗೆ ನಂ. 2 ಸ್ಥಾನಕ್ಕೆ ಕುಸಿದಿದ್ದಾರೆ. 24 ವರ್ಷದ ಭಾರತದ ಆರಂಭಿಕ ಆಟಗಾರ ಗಿಲ್ ನವೆಂಬರ್ 2 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಫಾರ್ಮ್ ಪ್ರದರ್ಶಿಸಿದರು. ಅದರೊಟ್ಟಿಗೆ ಭಾರತದ ಗೆಲುವಿಗೆ ಕೊಡುಗೆ ನೀಡಿದರು ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಯುವ ತಾರೆ ರೆಡ್-ಹಾಟ್ ಫಾರ್ಮ್ನಲ್ಲಿದ್ದಾರೆ. ರನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಈ ವರ್ಷ 26 ODIಗಳಲ್ಲಿ 63.00 ಸರಾಸರಿಯಲ್ಲಿ 1,149…
ಭಾರತೀಯ ಕ್ರಿಕೆಟ್ (Marriage) ರಂಗದ ಹೆಸರಾಂತ ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು(Mohammed Shami) ಮದುವೆಯಾಗಲು ಓಪನ್ ಆಫರ್ ಮಾಡಿದ್ದಾರೆ ದಕ್ಷಿಣದ ನಟಿ ಪಾಯಲ್ ಘೋಷ್. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಶಮಿಯನ್ನು ಮದುವೆಯಾಗಲು ರೆಡಿ ಇದ್ದೇನೆ. ಅವರು ಒಪ್ಪಿಕೊಳ್ಳಬೇಕು ಅಷ್ಟೇ’ ಎಂದು ಬರೆದುಕೊಂಡಿದ್ದಾರೆ. ಪಾಯಲ್ ಈ ಆಫರ್ ಸಖತ್ ವೈರಲ್ ಕೂಡ ಆಗಿದೆ. ಇಂಥದ್ದೇ ಕಾರಣಗಳಿಂದಾಗಿ ಪಾಯಲ್ ಸದಾ ಸುದ್ದಿಯಲ್ಲಿರುತ್ತಾರೆ. ಮೀಟೂ ಆರೋಪದ ಮೂಲಕ ಬಾಲಿವುಡ್ (Bollywood) ಗೆ ಬೆಂಕಿ ಹಚ್ಚಿದ್ದ ನಟಿ ಪಾಯಲ್ ಘೋಷ್ (Payal Ghosh) ಮೊನ್ನೆಯಷ್ಟೇ ಮತ್ತೊಂದು ಬಾಂಬ್ ಸಿಡಿಸಿದ್ದರು. ಈ ಹಿಂದೆ ಮೀಟೂ (Metoo) ಅಭಿಯಾನದಲ್ಲಿ ಪಾಲ್ಗೊಂಡಿದ್ದ ಪಾಯಲ್, ‘ಬಾಲಿವುಡ್ ಟಾಪ್ ನಿರ್ದೇಶಕರೊಬ್ಬರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದು ಅವರು ಆರೋಪ (Allegation) ಮಾಡಿದ್ದರು. ಇದೀಗ ಪಾಯಲ್ ಘೋಷ್ 11ನೇ ಸಿನಿಮಾವನ್ನು ಮುಗಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಈ ಖುಷಿಯ ಜೊತೆಗೆ ಕಹಿ…
ಬೆಂಗಳೂರು;- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಭಾರಿ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಹೆಚ್ಚು ಮಳೆಯಾಗಲಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ವರ್ಷಧಾರೆಯ ಸಾಧ್ಯತೆ ಇದೆ ಎಂದು ಹೇಳಿದೆ.
ಕನ್ನಡದಲ್ಲಿ ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿ, ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ಲಿಯೋನಿಲ್ಲಾ ಶ್ವೇತಾ ಡಿಸೋಜಾ (Leonilla Shweta D’Souza) ಇದೀಗ ಮತ್ತೆ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುತ್ತಿರುವ ನೆಲ್ಸನ್ ಚಿತ್ರದಲ್ಲಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಹೊಸ ರೀತಿಯ ಪಾತ್ರ ಎನ್ನಲಾಗುತ್ತಿದೆ. ಗೊಂಬೆಗಳ ಲವ್ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ (Arun Kumar) ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ (Nelson) ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್…