Author: AIN Author

ಚೆನ್ನೈ: ತಮಿಳುನಾಡಿನಲ್ಲಿ (Tamil Nadu) ಈಶಾನ್ಯ ಮಾನ್ಸೂನ್ ತೀವ್ರಗೊಂಡಿದೆ. ಭಾರೀ (Rain) ಮಳೆಯ ಹಿನ್ನೆಲೆ ರಾಜ್ಯದ ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ 5 ಜಿಲ್ಲೆಗಳಲ್ಲಿ ಹಾಗೂ ನೀಲಗಿರಿಯ ಕೆಲವು ತಾಲೂಕುಗಳಲ್ಲಿ ಗುರುವಾರ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಕಲ್ಲರ್ ಮತ್ತು ಅಡ್ಡೆರ್ಲಿ ನಡುವಿನ ಹಳಿಯ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದೆ. ಈ ಹಿನ್ನೆಲೆ ನೀಲಗಿರಿ ಬೆಟ್ಟದ ರೈಲ್ವೆ ವಿಭಾಗದಲ್ಲಿ 2 ರೈಲುಗಳನ್ನು ರದ್ದುಗೊಳಿಸಲಾಗಿದೆ. https://ainlivenews.com/knee-pain-treatment-joint-pain-treatment/ ಭಾರತೀಯ ಹವಾಮಾನ ಇಲಾಖೆ (IMD) ಗುರುವಾರ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಭಾರತದ ದಕ್ಷಿಣ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಕಣ್ಣೂರು ಜಿಲ್ಲೆಯಲ್ಲಿ ಬುಧವಾರ 7 ಸೆಂ.ಮೀ ಮಳೆ ದಾಖಲಾಗಿದೆ. ಐಎಂಡಿ ಪ್ರಕಾರ ಕೇರಳದಲ್ಲಿ ಮುಂದಿನ 2 ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡಿನಲ್ಲೂ ಮುಂದಿನ 2 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Read More

ರಾಯ್ಪುರ: ಅಯೋಧ್ಯೆ ರಾಮಮಂದಿರದ (Ayodhya RamaMandir) ವಿಚಾರದಲ್ಲಿ ಕ್ರೆಡಿಟ್ ಪಾಲಿಟಿಕ್ಸ್ ಶುರುವಾಗಿದೆ. ಮೊನ್ನೆಯಷ್ಟೇ ಕಮಲ್‍ನಾಥ್ ಮಾತಾಡ್ತಾ, ರಾಜೀವ್ ಗಾಂಧಿಗೂ ಇದರ ಕ್ರೆಡಿಟ್ ಕೊಡಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ನಾವೇ ಕ್ರೆಡಿಟ್ ತಗೋತಿಲ್ಲ ಅಂತಾ ಅಮಿತ್ ಶಾ (AmitShah) ಹೇಳಿದ್ದರು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ನನ್ನಿಂದಾಗಿಯೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಛತ್ತೀಸ್‍ಘಡದ ಬಿಶ್ರಮ್‍ಪುರ ರ‍್ಯಾಲಿಯಲ್ಲಿ ಮೋದಿ ಈ ಮಾತನ್ನು ಹೇಳಿದ್ದಾರೆ. https://ainlivenews.com/knee-pain-treatment-joint-pain-treatment/ ವಾಜಪೇಯಿ ಅವರ ಕಾಲದಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿತ್ತು. ಈಗ ಮತ್ತೆ ಇಲ್ಲಿನ ಜನ ಬಿಜೆಪಿ ಸರ್ಕಾರ (BJP Govt) ಬರಬೇಕು ಎಂದು ಹೇಳುತ್ತಿದ್ದಾರೆ ಅಂತ ಮೋದಿ ಹೇಳಿದರು. ಸ್ವಾತಂತ್ರ್ಯ ಬಂದಾಗಿನಿಂದ ಆದಿವಾಸಿಗಳು ಕಾಂಗ್ರೆಸ್ ಕಣ್ಣಿಗೆ ಬಿದ್ದಿರಲಿಲ್ಲ. ನಿಮ್ಮ ಮತ್ತು ನಿಮ್ಮ ಮಕ್ಕಳ ಬಗ್ಗೆ ಅವರು ತಲೆಕೆಡಿಸಿಕೊಂಡಿಲ್ಲ. ಆದರೆ ಆದಿವಾಸಿಗಳ ಅಭಿವೃದ್ಧಿಗೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡುತ್ತದೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಬಹುದೆಂದು ನೀವು ಎಂದಾದರೂ ಊಹಿಸಿದ್ದಿರೇ ಎಂದು ಇದೇ ವೇಳೆ ಪ್ರಧಾನಿ (PM…

Read More

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿರುವ ಗೃಹ ಸಚಿವ ಅಮಿತ್‌ ಶಾ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ರಾಜಸ್ಥಾನದ ನಾಗೌರ್‌ನಲ್ಲಿ ಅಮಿತ್ ಶಾ ರಥದಲ್ಲಿ (Chariot) ನಿಂತು ಪಕ್ಷದ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುವ ರಥದ ಮೇಲಿನ ಭಾಗ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. https://ainlivenews.com/knee-pain-treatment-joint-pain-treatment/ ರಥ ತಾಗಿದ ಕೂಡಲೇ ಕಿಡಿ ಹೊತ್ತಿಕೊಂಡಿದೆ. ಕೂಡಲೇ ರಥದ ಹಿಂದೆ ಇದ್ದ ಇತರ ವಾಹನಗಳನ್ನು ತಕ್ಷಣವೇ ನಿಲ್ಲಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ಪರ್ಬತ್‌ಸರ್‌ನಲ್ಲಿ ಎರಡೂ ಬದಿಗಳಲ್ಲಿ ಅಂಗಡಿಗಳು ಮತ್ತು ಮನೆಗಳಿರುವ ಸಾಲಿನಲ್ಲಿ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ಬಳಿಕ ಶಾ ಅವರು ಮತ್ತೊಂದು ವಾಹನದ ಮೂಲಕ ಪರ್ಬತ್ಸರ್‌ಗೆ ತೆರಳಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು.

Read More

ಕನ್ನಡ ಚಿತ್ರರಂಗದ ಇವೆಂಟ್ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸುಸಜ್ಜಿತವಾದ ಸಭಾಂಗಣ MMB legacy ಆರಂಭವಾಗಿ ಒಂದು ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಎಂ.ಎಂ.ಬಿ ಲೆಗಸಿಯ ಮುಖ್ಯಸ್ಥ ನವರಸನ್ ಅದ್ದೂರಿ ಸಮಾರಂಭ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಮೈ ಮೂವೀ ಬಜಾರ್ ಪ್ರಶಸ್ತಿ ಲೋಗೊ ಸಹ ಅನಾವರಣವಾಯಿತು. ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ಚಂದನ್ ಶೆಟ್ಟಿ, ಸಂಜನಾ ಆನಂದ್, ಅಪೂರ್ವ ಸೇರಿ ಮೈ ಮೂವೀ ಬಜಾರ್ ನ‌ ಪ್ರಶಸ್ತಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಮಾಜಿ ಅಧ್ಯಕ್ಷರಾದ ಕೆ.ವಿ.ಚಂದ್ರಶೇಖರ್, ಭಾ.ಮ.ಹರೀಶ್, ನಿರ್ಮಾಪಕರಾದ ಸಂಜಯ್ ಗೌಡ, ರಮೇಶ್ ರೆಡ್ಡಿ, ದೇವೇಂದ್ರ, ಭಾ.ಮ.ಗಿರೀಶ್, ಜಗದೀಶ್, ಕೃಷ್ಣ ಸಾರ್ಥಕ್, ರಾಜೇಶ್, ಗಿರೀಶ್ ಕುಮಾರ್, ಗೋವಿಂದರಾಜು, ಚೇತನ್ ಗೌಡ, ರವಿರಾಜ್, ಶ್ರೀನಿವಾಸ್ (ಹೈದರಾಬಾದ್) ಹಾಗೂ ನಿರ್ದೇಶಕರಾದ ಹರಿ ಸಂತು, ಮಹೇಶ್ ಕುಮಾರ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ ಪ್ರೋತ್ಸಾಹದ ಮಾತುಗಳ ಮೂಲಕ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ನವರಸನ್, MMB…

Read More

ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ. ವಿಧಾನಸೌಧ ಅಥವಾ ಫ್ರೀಡಂಪಾರ್ಕ್​ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ತಿಳಿಸಿದರು. ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್​​​ ಸೂಚನೆ ಕೊಟ್ಟಿದೆ. ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್​ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್​ ಸೂಚಿಸಿದೆ ಎಂದು ತಿಳಿಸಿದರು.

Read More

ಚಿಕ್ಕಬಳ್ಳಾಪುರ: KSRTC ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ (Road accident) ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವು ಮೂವರ ಸ್ಥಿತಿ ಗಂಭೀರ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಚಿನ್ನಸಂದ್ರ ಗೇಟ್ ಬಳಿ ಘಟನೆ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಒಬ್ಬ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. https://ainlivenews.com/knee-pain-treatment-joint-pain-treatment/ ಗಾಯಾಳುಗಳನ್ನು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.  ಅಪಘಾತದ ರಭಸಕ್ಕೆ ಮಿನಿ ಬಸ್ ನಜ್ಜುಗುಜ್ಜಾಗಿ ಛಿದ್ರ ಛಿದ್ರವಾಗಿದೆ. ಕೈವಾರ ಮೂಲದ ಇಲ್ಲು (40) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ಚಿಂತಾಮಣಿ – ಬೆಂಗಳೂರು ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.

Read More

ಬೆಂಗಳೂರು: ಉಸಿರುಗಟ್ಟಿಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೂಡ್ಲು ಬಳಿಯ ನಂಜಾರೆಡ್ಡಿ ಲೇಔಟ್ ನಲ್ಲಿ ನಡೆದಿದೆ. ಅನುರಾಧ ಅಲಿಯಾಸ್ ಅಲೀಮಾ ಅಸಹಜ ರೀತಿಯಲ್ಲಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ರಾಜಶೇಖರ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿ,  ಆರಂಭದಲ್ಲಿ ಈ ಘಟನೆ ಸಂಬಂಧಿಸಿ ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೇ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂಬ ಸಾವಿನ ಸಿಕ್ರೇಟ್ ಬಯಲಾಗಿದೆ. ರಾಜಶೇಖರನ ಜೊತೆ ಅನುರಾಧ ಎರಡನೇ ಮದುವೆಯಾಗಿದ್ದಳು. ರಾಜಶೇಖರಗೆ ಬೇರೊಬ್ಬ ಮಹಿಳೆ ಜೊತೆಗೆ ಸಂಬಂಧ ಇದೆ ಅನ್ನೋ ವಿಚಾರಕ್ಕೆ ಗಲಾಟೆ ತೀವ್ರಗೊಂಡು, ಕೈಗಳಿಂದ ಕುತ್ತಿಗೆ ಹಿಸುಕಿ ನಂತರ ವೇಲ್​​ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಅವನೇ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಪೊಲೀಸ್ ಠಾಣೆಗೆ ಅಗಮಿಸಿದ ಆರೋಪಿ ಆತ್ಮಹತ್ಯೆ ಎಂದು ಪೊಲೀಸರನ್ನು ನಂಬಿಸಿದ್ದಾನೆ. ಇದರ ಪ್ರಕಾರ ಪರಪ್ಪನ ಅಗ್ರಹಾರ ಪೊಲೀಸರು ಆತ್ಮಹತ್ಯೆ ಪ್ರಕರಣ ಎಂದು ದಾಖಲು ಮಾಡಿಕೊಂಡಿದ್ದರು. ಮರಣೋತ್ತರ ಪರೀಕ್ಷೆ ವರದಿ…

Read More

ಉಡುಪಿ: ಉಡುಪಿ ನಗರದ ಬನ್ನಂಜೆ ಜಯಲಕ್ಷ್ಮಿ ಸಿಲ್ಕ್ಸ್  ಎದುರು ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ಇಂದು ಒಂದು ಗಂಟೆ ಕಾಲ ಹೈಡ್ರಾಮ ನಡೆಯಿತು. ಆಟೋ ಚಾಲಕರೊಬ್ಬರು ಅಂಗಡಿ ಮುಂಭಾಗದಲ್ಲಿ ಆಟೋ ನಿಲ್ಲಿಸಿದಾಗ  ಜಯಲಕ್ಷ್ಮೀ ಸಿಲ್ಕ್ಸ್ ನ  ಮಾಲೀಕರೇ ಬಂದು ಅಟೋ ಚಾಲಕನ ಕೀ ಕಿತ್ತುಕೊಂಡ ಬಳಿಕ ಈ ಡ್ರಾಮಾ ಪ್ರಾರಂಭಗೊಂಡಿತು. ಕೀ ಕಿತ್ತುಕೊಂಡ ಬಳಿಕ ಎರಡು ವಾಹನಗಳನ್ನು ಅಟೋ ತೆಗೆಯದಂತೆ ಅಡ್ಡವಾಗಿ ಇಡಲಾಯಿತು ಎಂದು ಆಟೋ ಚಾಲಕ ಆರೋಪಿಸಿದ್ದಾರೆ. https://ainlivenews.com/knee-pain-treatment-joint-pain-treatment/ ಈ ಘಟನೆ ಬಳಿಕ ಬನ್ನಂಜೆ ರಸ್ತೆಯಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಯ್ತು.ಆಟೋ ಚಾಲಕರು ಸ್ಥಳದಲ್ಲಿ ಸೇರಿ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರಿಗೆ ಕರೆ ಮಾಡಿದರೂ ಪರಿಸ್ಥಿತಿ ಸರಿ ದಾರಿಗೆ ಬಂದಿರಲಿಲ್ಲ. ಇಲ್ಲಿ ನಿತ್ಯ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆಟೋ ಚಾಲಕರು ಆರೋಪಿಸಿದರು.  ಪೊಲೀಸರು ಸ್ಥಳಕ್ಕೆ ಬಂದ ಬಳಿಕ ಅವರನ್ನು ಸಮಾಧಾನಪಡಿಸಲಾಯಿತು. ಘಟನೆಯಿಂದ ಆಕ್ರೋಶಗೊಂಡಿರುವ ಆಟೋ ಚಾಲಕರು ಎಸ್ಪಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

Read More

ಬೆಂಗಳೂರು: ಕಾರ್ಮಿಕರ (Labours) ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು, ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ವಿಧಾನಸೌಧದ (Vidhana Soudha) ಕಾರ್ಮಿಕ ಇಲಾಖೆಯ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನ ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನ ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು ಶೂದ್ರ ಮತ್ತು ಮಹಿಳೆಯರನ್ನು ಶತ-ಶತಮಾನಗಳ ಕಾಲ ಶಿಕ್ಷಣದಿಂದ (Education) ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು, ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆ ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. ಅದಕ್ಕಾಗಿ 9.60 ಲಕ್ಷ ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ…

Read More

ಬೆಂಗಳೂರು: ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಸುಮಾರು 126 ಕೋಟಿ ರೂ. ಅನುದಾನವನ್ನು (Grant) ನಮ್ಮ ಸರ್ಕಾರ (BJP) ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದ ಕಾಮಗಾರಿಗಳನ್ನು ರದ್ದುಪಡಿಸಿ, 126 ಕೋಟಿ ಹಣವನ್ನು ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಮಾಡಿದ್ದಾರೆ. ಸತ್ಯಾಗ್ರಹ ಮಾಡಿ ಮನವಿ ಮಾಡಿದರೂ ಸಹ ಈವರೆಗೆ ಕ್ಷೇತ್ರದ 126 ಕೋಟಿ ಅನುದಾನ ನನಗೆ ಹಿಂತಿರುಗಿಸಿಲ್ಲ ಎಂದು ಶಾಸಕ ಮುನಿರತ್ನ (Munirathna) ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು (BS Yediyurappa) ನನ್ನ ಬಳಿ ಅನುದಾನ ಹಿಂತಿರುಗಿಸಿದ್ದಾರ ಎಂದು ಕೇಳಿದ ಸಂದರ್ಭ ನಾನು ಇಲ್ಲ ಎಂದು ಹೇಳಿದ್ದೆ. ನಾನು ಕಾಮಗಾರಿಗಳನ್ನು (Work) ವೀಕ್ಷಣೆ ಮಾಡುತ್ತೇನೆ. ಕಾಮಗಾರಿ ವೀಕ್ಷಣೆಗೆ ದಿನಾಂಕ ನಿಗದಿ ಮಾಡುವಂತೆ ಯಡಿಯೂರಪ್ಪ ಸೂಚಿಸಿದ್ದರು. ಅದರ ಪ್ರಕಾರ ಇವತ್ತು ವೀಕ್ಷಣೆ ಮಾಡಿದ್ದಾರೆ ಎಂದರು. ನಮ್ಮ ಕ್ಷೇತ್ರದ ಅನುದಾನ ಹಿಂತಿರುಗಿಸುವಂತೆ ಸಂಸದ ಡಿಕೆ ಸುರೇಶ್ (DK Suresh) ಅವರಿಗೆ ಮನವಿ ಮಾಡುತ್ತೇನೆ. ಯಾವ ಕಾಮಗಾರಿಗೆ ನಾವು ಅನುದಾನ ತಂದಿದ್ದೆವೋ ಅದನ್ನು ಮತ್ತೆ ನಮಗೆ…

Read More