ಬೆಂಗಳೂರು : ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಶಾಸಕ ಯತ್ನಾಳ್ ಅವರೇ, ಮಾನವೀಯ ಸಹಾಯದ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ನಿಮ್ಮ ಈ ರೋಷಾವೇಷವನ್ನು, ನಿಮ್ಮ ಹೈಕಮಾಂಡ್ ಮುಂದೆ ರಾಜ್ಯಕ್ಕೊಬ್ಬ ವಿಪಕ್ಷೀಯ ನಾಯಕನ ಸ್ಥಾನವನ್ನು ಆರಿಸುವುದಕ್ಕಾಗಿ ಬಳಸಿಕೊಳ್ಳಿ. ಇಲ್ಲವೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ಕೇಳುವುದಕ್ಕಾದರೂ ಬಳಸಿ. ಸುಮ್ಮನೇ ಕಾಲಹರಣ ಮಾಡಬೇಡಿ ಎಂದು ಕುಟುಕಿದ್ದಾರೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ, ಹಿಂದೆ Hip joint knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ…
Author: AIN Author
ತುಮಕೂರು: ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ತುಮಕೂರು ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಗಂಗಾವತಿ ಮೂಲದ ಶಂಕರ್(35), ಸತೀಶ್(40) ಮೃತರು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚ್ಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಗದಗ: ಸರಿಯಾದ ಸಮಯಕ್ಕೆ ಬಸ್ ಗಳಿಲ್ಲದೇ ತರಗತಿಗಳಿಂದ ವಿದ್ಯಾರ್ಥಿಗಳು ವಂಚಿತರಾಗ್ತಿದ್ದಾರೆ. ಹೌದು ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದಲ್ಲಿ ಶಾಲಾ ಕಾಲೇಜು ಸಮಯಕ್ಕೆ ಸರಿಯಾದ ಬಸ್ ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸಮಯಕ್ಕೆ ಸರಿಯಾಗಿ ಬಸ್ ಗಳು ಬಾರದ್ರಿಂದ ಖಾಸಗಿ ವಾಹನಗಳಿಗೆ ದುಡ್ಡು ಕೊಟ್ಟು ಪ್ರಯಾಣಿಸೋ ಪರಿಸ್ಥಿತಿ ನಿರ್ಮಾಣವಾಗಿದೆ. ತಂದೆ ತಾಯಿ ದುಡಿದ ದುಡ್ಡನ್ನ ಕೊಟ್ಟು ಖಾಸಗಿ ವಾಹನಗಳಲ್ಲಿ ಓಡಾಡೋ ಪರಿಸ್ಥಿತಿ ಅಂತಾ ವಿದ್ಯಾರ್ಥಿಗಳ ಅಳಲು ತೊಡಿಕೊಂಡಿದ್ದಾರೆ. ಸೀಟ್ ಗಳು ಸಿಗದಿರೋ ಕಾರಣ ಬಸ್ ಗಳ ಬಾಗಿಲಲ್ಲಿ ನಿಂತು ಸಂಚರಿಸೋ ಪರಿಸ್ಥಿತಿಯಾಗಿದ್ದು, ಏನಾದ್ರೂ ಹೆಚ್ಚು ಕಡಿಮೆ ಆದರೆ ಯಾರು ಹೊಣೆ ಎಂದು ಶಾಲಾ ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ತುಮಕೂರು: ಜಿಲ್ಲೆಯ ಹಲವು ಕಡೆ ಬುಧವಾರ ಮಧ್ಯಾಹ್ನ ಸಿಡಿಲು ಹಾಗೂ ಭಾರಿ ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿತು. ಶಿರಾ ತಾಲ್ಲೂಕಿನಲ್ಲಿ ನಿನ್ನೆ ರಾತ್ರಿ ಅಬ್ಬರಿಸಿದ ಮಳೆಯಿಂದ ದ್ವಾರನ ಕುಂಟೆ ಗ್ರಾಮದಲ್ಲಿ ವಿದ್ಯುತ್ ಕಂಬ, ಬೃಹತ್ ಗಾತ್ರದ ಮರ ನೆಲಕ್ಕುರಳಿವೆ. ದ್ವಾರನ ಕುಂಟೆ ಗ್ರಾಮ ದಿಂದ ವಾಜರಹಳ್ಳಿಗೆ ಹೋಗುವ ರಸ್ತೆಯಲ್ಲಿ ಮರ ಹಾಗೂ ಕಂಬ ಉರುಳಿ ಬಿದ್ದಿದ್ದು, ಮಳೆ ಪರಿಣಾಮ ಸಂಚಾರ ದುಸ್ತರವಾಗಿದೆ.
ಬೆಂಗಳೂರು: ನವೆಂಬರ್ ಒಳಗೆ ಜಾತಿ ಜನಗಣತಿ ಬಿಡುಗಡೆ ಮಾಡದಿದ್ದರೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಸಾಧು ಸಂತರ ಶಾಪ ತಟ್ಟುತ್ತದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪ, ಹಿಂದುಳಿದ ವರ್ಗಗಳ ವರದಿ ನವೆಂಬರ್ ಒಳಗೆ ಬಿಡುಗಡೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ 1001ನೇ ಸಲ ಹೇಳಿದ್ದಾರೆ. ಹಿಂದುಳಿದ, ದಲಿತ ಮಠಾಧಿಪತಿಗಳ ಒಕ್ಕೂಟಕ್ಕೆ ನವೆಂಬರ್ನಲ್ಲಿ ಬಿಡುಗಡೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ ನವೆಂಬರ್ ಒಳಗೆ ಬಿಡುಗಡೆ ಮಾಡದಿದ್ದರೆ ಸಿದ್ದರಾಮಯ್ಯಗೆ ಸಾಧು ಸಂತರ ಶಾಪ ತಟ್ಟುತ್ತದೆ. ಈ ಸರ್ಕಾರ ಬಹಳ ದಿನ ಇರಲ್ಲ, ಹಾಳಾಗಿ ಹೋಗುತ್ತದೆ ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್ನಲ್ಲಿ ನಾನೇ ಸಿಎಂ ಎಂದು ಹೇಳಿಕೊಳ್ಳುವವರ ಸಂಖ್ಯೆ ವೋಟರ್ ಲಿಸ್ಟ್ನಂತೆ ಬೆಳೆಯುತ್ತಿದೆ. ಮಾತೆತ್ತಿದರೆ ಕೇಂದ್ರ ಪರಿಹಾರ ಕೊಟ್ಟಿಲ್ಲ ಎನ್ನುತ್ತಾರೆ. ಕದ್ದು ತಮಿಳುನಾಡಿಗೆ ನೀರು ಬಿಟ್ರಲ್ಲ, ಆಗ ಇವರು ಪ್ರಧಾನಿಯವರನ್ನು ಕೇಳಿದ್ರಾ? ಸಿದ್ದರಾಮಯ್ಯ ಈಗ ಸಿಎಂ, ಇನ್ನೆಷ್ಟು ದಿನ ಸಿಎಂ ಸ್ಥಾನದಲ್ಲಿ ಇರ್ತಾರೋ ಗೊತ್ತಿಲ್ಲ. ರೈತರಿಗೆ ಪರಿಹಾರ…
ದೊಡ್ಡಬಳ್ಳಾಪುರ: ಅಂಗನವಾಡಿ ಕಟ್ಟಡ ಶೀಥಲಾವಸ್ಥೆ ಹಂತಕ್ಕೆ ತಲುಪಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಹಣ ಹಣ ಮಂಜೂರಾಗಿದ್ದರು ಸಹ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ಹಂತಕ್ಕೆ ತಲುಪಿದ್ದು, ಕಳೆದ 4 ನಾಲ್ಕು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ.15 ರಿಂದ 20 ಮಕ್ಕಳು ಅಂಗನವಾಡಿ ಕೇಂದ್ರದಲ್ಲಿದ್ದು ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಬೇಕಾದ ಸೌಲಭ್ಯಗಳ ವ್ಯವಸ್ಥೆ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ 2022 ರಲ್ಲಿ ಖನಿಜ ಪ್ರತಿಷ್ಠಾನ ನಿಧಿ ಯೋಜನೆಯಡಿ 10 ಲಕ್ಷ ಮತ್ತು ನರೇಗಾ ಯೋಜನೆಯಡಿ 05 ಲಕ್ಷ ಹಣ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಂಜೂರಾಗಿದೆ. ಆದರೆ ಮಂಜುರಾತಿಯಾಗಿ ವರ್ಷಗಳೆ ಕಳೆದರು ಸಂಭಂದಿಸಿದ ಅಧಿಕಾರಿಗಳು ಗಮನ ಅರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ‘ಕಟ್ಟಡ ನೆಲಸಮ ಮಾಡುವಂತೆ ಗ್ರಾಮ ಪಂಚಾಯ್ತಿಗೆ ಆದೇಶ’ ಶೀಥಿಲಾವಸ್ಥೆ ಹಂತಕ್ಕೆ ತಲುಪಿರುವ ಅಂಗನವಾಡಿ ಕಟ್ಟಡವನ್ನು ನೆಲಸಮ ಮಾಡುವಂತೆ…
ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಬಲಗೈ ಬಂಟರಿಬ್ಬರನ್ನ ಪೋಲೀಸರು ಬಂಧಿಸಿದ್ದಾರೆ RD ಎಸ್ಕೇಪ್ ಆದ ನಂತ್ರ ಮಹಾರಾಷ್ಟ್ರಕ್ಕೆ ತೆರಳಲು ಇಬ್ಬರು ಆಪ್ತರು ಸೊಲ್ಲಾಪುರದ ವರೆಗೆ ಕಾರಲ್ಲಿ ಡ್ರಾಪ್ ಮಾಡಿದ್ರು ಎನ್ನಲಾಗಿದೆ.ಹೀಗಾಗಿ ಕಿಂಗ್ ಪಿನ್ ಗೆ ಸಹಕಾರ ನೀಡಿದ ಆರೋಪದ ಹಿನ್ನಲೆ ರವಿ ಸೇರಿದಂತೆ ಇಬ್ಬರು ಆರೋಪಿಗಳನ್ನ ಪೋಲೀಸರು ಲಾಕ್ ಮಾಡಿದ್ದಾರೆ.
ಬೆಂಗಳೂರು: ಕೆಲಸಕ್ಕಾಗಿ ಉದ್ಯಮಕ್ಕೆ ಹೋಗುವ ಹೆಣ್ಣುಮಕ್ಕಳು ಎಷ್ಟೇ ಕಾಳಜಿಯಿಂದ ಎಚ್ಚರ ವಹಿಸಿ ಕೆಲಸ ಮಾಡಿದರು ಸಾಕಾಗುವುದಿಲ್ಲ. ಅವರು ಧರಿಸುವ ಬಟ್ಟೆ, ತಲೆ ಕೂದಲು, ವೇಲುಗಳೇ ಅವರಿಗೆ ಅಪಾಯ ತಂದು ಅವರ ಸಾವಿಗೂ ಕಾರಣವಾಗಬಹುದು. ಹೌದು, ರಾಜ್ಯದ ರಾಜಧಾನಿ ಬೆಂಗಳೂರಿನ ಒಂದು ಕಾರ್ಖಾನೆಯಲ್ಲಿ ಅಂತಹುದೇ ಘಟನೆ ನಡೆದಿದೆ. ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ (Paint Mixer) ಕೂದಲು ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ (Sri Paints Factory) ಇಂತಹ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಘಟನೆ ವಿವರ ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಸತತ ಮಳೆಗೆ ಭಾರಿ ಅವಘಡ ಸೃಷ್ಟಿಯಾಗಿದೆ.. ಚಿತ್ತಾಪುರ ತಾಲೂಕಿನ ಅಲ್ಲೂರು ಕೆ ಗ್ರಾಮದಲ್ಲಿ ರೈತ ನಾಗರೆಡ್ಡಿಗೆ ಸೇರಿದ ಅಪಾರ ಪ್ರಮಾಣದ ಕಬ್ಬು ಸಂಪೂರ್ಣ ನೆಲಕಚ್ಚಿದೆ.. ಸಾಲಸೂಲ ಮಾಡಿ ಬೆಳೆದಿದ್ದ ಕಬ್ಬು ಮಳೆಗೆ ಹಾಳಾದ ಪರಿಣಾಮ ಸರ್ಕಾರ ನೆರವಿಗೆ ಬರಬೇಕೆಂದು ಅನ್ನದಾತ ಆಗ್ರಹಿಸಿದ್ದಾನೆ.
ಬೆಂಗಳೂರು: ಉಸಿರುಗಟ್ಟಿಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೂಡ್ಲು ಬಳಿಯ ನಂಜಾರೆಡ್ಡಿ ಲೇಔಟ್ ನಲ್ಲಿ ನಡೆದಿದೆ. ಅನುರಾಧ ಅಲಿಯಾಸ್ ಅಲೀಮಾ ಅಸಹಜ ರೀತಿಯಲ್ಲಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ರಾಜಶೇಖರ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿ, ಆರಂಭದಲ್ಲಿ ಈ ಘಟನೆ ಸಂಬಂಧಿಸಿ ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೇ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂಬ ಸಾವಿನ ಸಿಕ್ರೇಟ್ ಬಯಲಾಗಿದೆ. ರಾಜಶೇಖರನ ಜೊತೆ ಅನುರಾಧ ಎರಡನೇ ಮದುವೆಯಾಗಿದ್ದಳು. ರಾಜಶೇಖರಗೆ ಬೇರೊಬ್ಬ ಮಹಿಳೆ ಜೊತೆಗೆ ಸಂಬಂಧ ಇದೆ ಅನ್ನೋ ವಿಚಾರಕ್ಕೆ ಗಲಾಟೆ ತೀವ್ರಗೊಂಡು, ಕೈಗಳಿಂದ ಕುತ್ತಿಗೆ ಹಿಸುಕಿ ನಂತರ ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ಅವನೇ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಪೊಲೀಸ್ ಠಾಣೆಗೆ ಅಗಮಿಸಿದ ಆರೋಪಿ ಆತ್ಮಹತ್ಯೆ ಎಂದು ಪೊಲೀಸರನ್ನು ನಂಬಿಸಿದ್ದಾನೆ. ಇದರ ಪ್ರಕಾರ ಪರಪ್ಪನ ಅಗ್ರಹಾರ ಪೊಲೀಸರು ಆತ್ಮಹತ್ಯೆ ಪ್ರಕರಣ ಎಂದು ದಾಖಲು ಮಾಡಿಕೊಂಡಿದ್ದರು. ಮರಣೋತ್ತರ ಪರೀಕ್ಷೆ ವರದಿ…