Author: AIN Author

ಸೈಬರ್ ಕ್ರೈಮ್ ಎನ್ನುವುದು ಈಗೀಗ ಹೆಚ್ಚಾಗುತ್ತಿದೆ. ಅಮಾಯಕರನ್ನು ವಂಚಿಸಲು ಕ್ರಿಮಿನಲ್‌ಗಳು ನಾನಾ ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ, ಅಂತೆಯೇ ಸೈಬರ್‌ ಸೆಕ್ಯುರಿಟಿ ಕಂಪನಿಗಳ ವರದಿಗಳ ಪ್ರಕಾರ ಇಮೇಲ್‌ಗಳ ಮೂಲಕ ಫಿಶಿಂಗ್ ದಾಳಿಯ ಸಂಖ್ಯೆ ಹೆಚ್ಚಳವಾಗುತ್ತಿದೆ. ಫಿಶಿಂಗ್ ಮತ್ತು ಸ್ಕ್ಯಾಮ್ ಪೇಜ್‌ಗಳಿಗೆ ಲಿಂಕ್‌ಗಳನ್ನು ಎನ್‌ಕೋಡ್ ಮಾಡಲು ವಂಚಕರು QR ಕೋಡ್‌ಗಳನ್ನು ಬಳಸುತ್ತಿದ್ದಾರೆ ಎಂಬುದು ಈಗ ಗಮನಕ್ಕೆ ಬಂದಿದೆ. ಹೀಗಾಗಿ ಬಳಕೆದಾರರು ಈ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಬೇಕಾಗಿದೆ. ಫಿಶಿಂಗ್ ದಾಳಿ ಎನ್ನುವುದು ಕೂಡಾ ಒಂದು ರೀತಿಯ ಸೈಬರ್ ದಾಳಿಯಾಗಿದೆ. ಇದರಲ್ಲಿ ಹ್ಯಾಕರ್‌ಗಳು ಪ್ರತಿಷ್ಠಿತ ಮೂಲದಿಂದ ಬಂದಿದೆ ಎನ್ನುವಂತೆ ತೋರಿಸುವ ಮೋಸದ ಸಂದೇಶಗಳನ್ನು ಕಳಿಸುತ್ತಾರೆ. ಈ ಪ್ರತಿಷ್ಠಿತ ಹೆಸರನ್ನೇ ಅಸಲಿ ಎಂದು ನಂಬಿ ಮೋಸ ಹೋದರೆ ಕಷ್ಟ ಕಟ್ಟಿಟ್ಟ ಬುತ್ತಿ. ಈ ರೀತಿಯ ದಾಳಿಗಳನ್ನು ಸಾಮಾನ್ಯವಾಗಿ ಇಮೇಲ್ ಮೂಲಕ ಮಾಡಲಾಗುತ್ತದೆ. ಸೈಬರ್ ದಾಳಿಯನ್ನು ಪ್ರಾರಂಭಿಸಲು ಸೈಬರ್ ಅಪರಾಧಿಗಳು ಲಿಂಕ್‌ಗಳನ್ನು ಕಳುಹಿಸುವುದು ಈಗೀಗ ಸಾಮಾನ್ಯವಾಗಿದೆ. ಅಮಾಯಕರನ್ನು ಗುರಿಯಾಗಿಸಿಕೊಂಡು ಸೈಬರ್ ಕ್ರೈಮ್ ವಂಚಕರು ಬಳಸುವ ತಂತ್ರಗಳ ಬಗ್ಗೆ ಸಾಕಷ್ಟು…

Read More

ನವದೆಹಲಿ: ಶಕೀಬ್‌ ಅಲ್‌ ಹಸನ್‌ (Shakib Al Hasan) ಮತ್ತು ಬಾಂಗ್ಲಾದೇಶ ತಂಡ ಮಾಡಿದ್ದು ನಿಜಕ್ಕೂ ಅವಮಾನಕರ ಕೃತ್ಯ. ಅವರು ಕ್ರಿಕೆಟ್‌ ಆಡಬೇಕೆಂದು ಬಯಸಿದ್ರೆ. ಇಂತಹ ಕೀಳುಮಟ್ಟದ ಮನಸ್ಥಿತಿಯಿಂದ ಹೊರಬರಬೇಕು ಎಂದು ಏಂಜಲೋ ಮಾಥ್ಯೂಸ್ (Angelo Mathews) ಕಿಡಿ ಕಾರಿದ್ದಾರೆ. ಸೋಮವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ (Sri Lanka) ತಂಡವು ಸೋಲನುಭವಿಸಿದ ನಂತರ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದ ನಾಯಕ ಶಕೀಬ್‌ ಅಲ್‌ ಹಸನ್‌ ಅವರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಶಕೀಬ್‌ ಅಲ್‌ ಹಸನ್‌ ಮಾಡಿದ್ದು, ನಿಜಕ್ಕೂ ಅವಮಾನಕರ ಕೃತ್ಯ. ಅವರ ಸಾಮಾನ್ಯ ಜ್ಞಾನ ಎಲ್ಲಿ ಹೋಯ್ತು ಅನ್ನೋದು ನನಗೆ ಗೊತ್ತಾಗಲಿಲ್ಲ. ಅವರು ಕ್ರಿಕೆಟ್‌ ಆಡಬೇಕೆಂದು ಬಯಸಿದ್ರೆ. ಇಂತಹ ಕೀಳುಮಟ್ಟದ ಮನಸ್ಥಿತಿಯಿಂದ ಹೊರಬರಬೇಕು ಎಂದು ಜಾಡಿಸಿದ್ದಾರೆ. ಯಾವುದೇ ಒಬ್ಬ ಆಟಗಾರ ಔಟಾದ ಬಳಿಕ ಮುಂದಿನ ಆಟಗಾರ 2 ನಿಮಿಷದ ಒಳಗೆ ಕ್ರೀಸ್‌ನಲ್ಲಿ ಇರಬೇಕು ಏಂದು ಐಸಿಸಿ ನಿಯಮ ಹೇಳುತ್ತದೆ. ನಾನೂ ಕೂಡ 2 ನಿಮಿಷದಲ್ಲೇ ಕ್ರೀಸ್‌ನಲ್ಲಿ ಇದ್ದೆ. ಆದ್ರೆ…

Read More

ಮಂಗಳೂರಿನ ಬೆಡಗಿ ಅನುಷ್ಕಾ ಶೆಟ್ಟಿ (Anushka Shetty) ಅವರು 42ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬರ್ತ್‌ಡೇ ದಿನ ಅಭಿಮಾನಿಗಳಿಗೆ ಸ್ವೀಟಿ, ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ. ‘ಮಿಸ್ ಶೆಟ್ಟಿ & ಮಿಸ್ಟರ್ ಪೋಲಿ ಶೆಟ್ಟಿ’ ನಂತರ ಹೊಸ ಸಿನಿಮಾ ಬಗ್ಗೆ ಅಪ್‌ಡೇಟ್‌ವೊಂದು ಸಿಕ್ಕಿದೆ. ಸ್ವೀಟಿ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಸ್ವೀಟ್ ನ್ಯೂಸ್ ಸಿಕ್ಕಿದೆ. ‘ಭಾಗಮತಿ’ (Bhaagamathie) ಸಿನಿಮಾದಲ್ಲಿ ಅನುಷ್ಕಾ ನಟಿಸಿ ಎಲ್ಲರ ಮನ ಗೆದ್ದಿದ್ದರು. ಖಡಕ್ ಆಗಿ ಅನುಷ್ಕಾ ನಟಿಸಿದ್ದರು. ಇದೀಗ ಇದರದೇ ಸೀಕ್ವೆಲ್‌ನಲ್ಲಿ ನಟಿಸಲು ಕರಾವಳಿ ಬ್ಯೂಟಿ ತಯಾರಿ ಮಾಡ್ತಿದ್ದಾರೆ ಎನ್ನಲಾಗುತ್ತಿದೆ ಯಾವುದೇ ಪಾತ್ರ ಕೊಟ್ಟರೂ ಕೂಡ ಆ ಪಾತ್ರವೇ ತಾವಾಗಿ ಅನುಷ್ಕಾ ಶೆಟ್ಟಿ ನಟಿಸುತ್ತಾರೆ. ಹಾಗಾಗಿ ‘ಭಾಗಮತಿ 2’ ಸೀಕ್ವೇಲ್ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಬಗೆಗಿನ ನಿರೀಕ್ಷೆ ಡಬಲ್ ಆಗಿದೆ.

Read More

ಸೌತ್ ನಟಿ ಪಾಯಲ್ (Payal) ಸದ್ಯ ‘ಮಂಗಳವಾರಂ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮೊದಲ ಪ್ರೀತಿಯ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ. ರಿಜೆಕ್ಷನ್ ಬಗ್ಗೆ ಮಾತನಾಡಿದ್ದಾರೆ. ಪಾಯಲ್, ತಾವು ಹೈಸ್ಕೂಲಿನಲ್ಲಿ ಇದ್ದಾಗಲೇ ಒಬ್ಬ ಹುಡುಗನನ್ನು ನೋಡಿ ಇಷ್ಟಪಟ್ಟಿದ್ದೆ. ಆದರೆ ಆತ ನನ್ನನ್ನು ರಿಜೆಕ್ಟ್ ಮಾಡಿಬಿಟ್ಟ ಎಂದು ಮಾತನಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಕಡೆಯ ದಿನಗಳಲ್ಲಿ ನಾನು ನನ್ನ ಪ್ರೀತಿಯನ್ನು ಆತನ ಬಳಿ ವ್ಯಕ್ತಪಡಿಸಿದಾಗ ಅವನು ನನ್ನನ್ನು ತಿರಸ್ಕರಿಸಿದ. ನನಗೆ ಪ್ರೇಮ, ಪ್ರೀತಿಯಲ್ಲಿ ಆಸಕ್ತಿಯಿಲ್ಲ ಎಂದುಬಿಟ್ಟ. ಆ ನೋವಿನಿಂದ ಅಂದು ನನಗೆ ಓದಿನತ್ತ ಗಮನ ಹರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪರೀಕ್ಷೆಗಳಲ್ಲಿ ಫೇಲ್ ಆಗಿದ್ದೆ. ಈ ವಿಚಾರವನ್ನು ನನ್ನ ತಾಯಿಯ ಬಳಿ ಹೇಳಿಕೊಂಡು ಅತ್ತುಬಿಟ್ಟಿದ್ದೆ. ಅಂದು ತಾಯಿ ನನ್ನ ಬೆಂಬಲಕ್ಕೆ ನಿಂತರು ಎಂದು ಕನ್ನಡದ ‘ಹೆಡ್‌ಬುಷ್’ (Headbush) ನಟಿ ತಮ್ಮ ಹಳೆಯ ದಿನಗಳನ್ನ ಸ್ಮರಿಸಿದ್ದಾರೆ. ‘ಮಂಗಳವಾರಂ’ ಸಿನಿಮಾದಲ್ಲಿ ಪಾಯಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನವೆಂಬರ್ 17ರಂದು ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.

Read More

ಬೆಂಗಳೂರು: ಆಸೀಸ್ ಆಲ್​ರೌಂಡರ್ ಗ್ಲೆನ್  (Glenn Maxwell) ಮ್ಯಾಕ್ಸ್​ವೆಲ್ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ (Australia vs Afghanistan) ಸಿಡಿಲಬ್ಬರದ ದ್ವಿಶತಕ ಸಿಡಿಸಿ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. https://ainlivenews.com/knee-pain-treatment-joint-pain-treatment/ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮ್ಯಾಕ್ಸ್​ವೆಲ್  ಸುನಾಮಿ ಎಬ್ಬಿಸಿ ಕಪಿಲ್ ದೇವ್ ದಾಖಲೆಯನ್ನು ಉಡೀಸ್ ಮಾಡಿದ್ದಾರೆ. ಕಪಿಲ್ ದೇವ್ ದಾಖಲೆ ಉಡೀಸ್ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಗ್ಲೆನ್ ಮ್ಯಾಕ್ಸ್‌ವೆಲ್, ವಿಶ್ವಕಪ್ ಆವೃತ್ತಿಯಲ್ಲಿ ನಂ. 5 ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ದ್ವಿಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡರು. ಈ ಮೂಲಕ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಕಪಿಲ್ ದೇವ್ ಹೊಂದಿದ್ದ ಹಿಂದಿನ ದಾಖಲೆಯನ್ನು ಮ್ಯಾಕ್ಸ್‌ವೆಲ್ ಮುರಿದರು. ಮ್ಯಾಕ್ಸ್‌ವೆಲ್ ಬರೆದ ದಾಖಲೆಗಳು  * ಏಕದಿನದಲ್ಲಿ ದ್ವಿಶತಕ ಸಿಡಿಸಿದ ಆಸ್ಟ್ರೇಲಿಯಾದ ಮೊದಲ ಆಟಗಾರ * ಏಕದಿನದ ಚೇಸ್‌ನಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ದಾಖಲು * 200ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ನಾನ್ ಓಪನರ್ * 5 ಅಥವಾ…

Read More

ಕಲಬುರಗಿ:  ಬ್ಲೂಟೂತ್‌ ಅಕ್ರಮದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ಗೆ ಆಡಳಿತ ಪಕ್ಷದ ಘಟಾನುಘಟಿಗಳ ಬೆಂಬಲವಿದೆ ಎಂಬ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ.  ಇಡೀ ಸರ್ಕಾರ ಹಗರಣದ ತನಿಖೆಗೆ ಬೆಂಬಲವಾಗಿ ನಿಂತಿದೆ. ನಾವು ಪರೀಕ್ಷೆ ನಡೆಯುವಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. 4 ದಿನದಲ್ಲಿ 20ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ. https://ainlivenews.com/knee-pain-treatment-joint-pain-treatment/ ಬಿಜೆಪಿ ಸರಕಾರವಿದ್ದಾಗ ಗೃಹ ಸಚಿವರೇ ಪಿಎಸ್‌ಐ ಹಗರಣದ ಮುಖ್ಯ ಆರೋಪಿ ಮನೆಗೆ ಹೋಗಿ ಕಾಜು- ಬದಾಮ್‌ ತಿಂದು ಬಂದಂತೆ ನಾವಂತೂ ತಿಂದಿಲ್ಲ. ಅಕ್ರಮದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.  ಮುಖ್ಯ ಆರೋಪಿ ಆರ್‌.ಡಿ.ಪಾಟೀಲ್‌ ನನ್ನು ಹಿಡಿಯುತ್ತೇವೆ. ಬಿಜೆಪಿಯವರು ಗಾಳಿಯಲ್ಲಿ ಗುಂಡು ಹೊಡೆಯದೆ ವಾಸ್ತವ ಅರಿತು ಮಾತನಾಡಲಿ. ವಿಜಯೇಂದ್ರ ಸರಿಯಾಗಿ ಹೋಮ್‌ ವರ್ಕ್‌ ಮಾಡಿಕೊಂಡು ಬಂದು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

Read More

ತೆಲುಗಿನ ಖ್ಯಾತ ನಟ ಪ್ರಭಾಸ್ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಗಾಗಿ ಅವರು ಇಟಲಿಗೆ (Italy) ಹಾರಿದ್ದರು. ಇದೀಗ ಯಶಸ್ವಿ ಶಸ್ತ್ರ ಚಿಕಿತ್ಸೆ (Surgery) ನೆರವೇರಿದ್ದು, ಚಿಕಿತ್ಸೆ ನಂತರ ಹೈದರಾಬಾದ್ (Hyderabad) ಗೆ ವಾಪಸ್ಸು ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳು ನೆಚ್ಚಿನ ನಟ ಕಂಡು ಸಂಭ್ರಮಿಸಿದ್ದಾರೆ. ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ. ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ…

Read More

ಬಾಗಲಕೋಟೆ:  ಹಿಂಗಾರು ಮಳೆ ಕೂಡ ಕೈ ಕೊಟ್ಟಿದ್ದು, ರೈತರ ಬದುಕು ಭರವಸೆಯಿಲ್ಲದ ದೋಣಿಯಂತಾಗಿದೆ. ಈ ಮಧ್ಯೆ ಇದೀಗ ಗೋವಿನ ಜೋಳ ಬೆಳೆ ಫಸಲು ಬಂದಿದೆ. ಉತ್ತಮ ಬೆಲೆ ಕೂಡ ಸಿಕ್ಕಿದೆ. ಆದರೆ ರೈತರು ಮಾತ್ರ ಬೆಲೆ ಏರಿದೆ ಅಂತ ಖುಷಿಪಡುವ ಹಾಗಿಲ್ಲ. ಮುಂಗಾರು ಮಳೆ ಸಂಪೂರ್ಣ ಕೈ ಕೊಟ್ಟಿದೆ. ಎಲ್ಲ ಬೆಳೆಗಳು ಮಳೆಯಿಲ್ಲದೆ ಹಾಳಾಗಿವೆ. ಹಿಂಗಾರು ಮಳೆ ಕೂಡ ನಿರಾಸೆ ಮೂಡಿಸಿದೆ. ಇದರಿಂದ ಕೃಷಿ ಉತ್ಪನ್ನದಲ್ಲಿ ಭಾರಿ ಇಳಿಮುಖವಾಗಿ ಧಾನ್ಯಗಳ ಬೆಲೆ ಏರುತ್ತಿದೆ. ಇದೀಗ ಗೋವಿನಜೋಳ ರೇಟ್ ಕೂಡ ಚೆನ್ನಾಗಿದೆ. ಒಂದು ಕ್ವಿಂಟಲ್​ಗೆ 2300 ರೂ. ಇದ್ದು ಇದು ಗೋವಿನ ಜೋಳದ ಮಟ್ಟಿಗೆ ಒಂದೊಳ್ಳೆ ಬೆಲೆಯಾಗಿದೆ. ಆದರೆ ಇಷ್ಟು ಒಳ್ಳೆಯ ಬೆಲೆ ಇದ್ದರೂ ರೈತರು ಸಂಭ್ರಮ ಪಡದಂತಾಗಿದೆ. ಇದಕ್ಕೆ ಕಾರಣ ಹೊಲದಲ್ಲಿ ಬಾರಿ ಪ್ರಮಾಣದಲ್ಲಿ ಇಳುವರಿ ಕಡಿಮೆಯಾಗಿರೋದು. ಒಣಬೇಸಾಯ ಗೋವಿನ ಜೋಳವಂತೂ ಎಲ್ಲವೂ ಲಾಸ್ ಆಗಿದೆ. ನೀರಾವರಿ ಗೋವಿನಜೋಳ ಮಾರುಕಟ್ಟೆಗೆ ಬಂದಿದೆ. ಆದರೆ ಅದರಲ್ಲೂ ಇಳುವರಿ ಕಡಿಮೆ ಆಗಿದೆ. ಬಾಗಲಕೋಟೆ ತಾಲ್ಲೂಕಿನ…

Read More

ಬೆಂಗಳೂರು: ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗಳ ಬೃಹತ್ ಗೆಲುವು ದಾಖಲಿಸಿ ಟಾಪ್ 1 ತಂಡವಾಗಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿರುವ ಟೀಮ್ ಇಂಡಿಯಾ, ಸೆಮಿಫೈನಲ್ ಪಂದ್ಯದಲ್ಲಿ ಮುಗ್ಗರಿಸಿ ಚಾಂಪಿಯನ್ಸ್ ಪಟ್ಟ ಅಲಂಕರಿಸುವ ಅವಕಾಶ ಕೈಚೆಲ್ಲಲಿದೆ ಎಂದು ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ವಾರ್ನಿಂಗ್ ಕೊಟ್ಟಿದ್ದಾರೆ. ಭಾನುವಾರ ಕೋಲ್ಕತ್ತಾದ ಈಡೆನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾ, ವಿರಾಟ್ ಕೊಹ್ಲಿ (101* ರನ್) ಶತಕ ಹಾಗೂ ಶ್ರೇಯಸ್ ಅಯ್ಯರ್ (77 ರನ್) ಅರ್ಧ ಶತಕ ನೆರವಿನಿಂದ 50 ಓವರ್ ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 326 ರನ್ ಗಳಿಸಿತ್ತು. ಪಾಕಿಸ್ತಾನ ತಂಡದ ಸಹ ಆಟಗಾರ ಶೋಯಿಬ್ ಮಲಿಕ್ ರೊಂದಿಗೆ ಎ ಸ್ಪೋರ್ಟ್ಸ್ ಗಾಗಿ ನಡೆಸಿರುವ ಸಂಭಾಷಣೆಯಲ್ಲಿ ಸೆಮಿಫೈನಲ್ ಹಂತದಲ್ಲಿ ಟೀಮ್ ಇಂಡಿಯಾ ಸೋಲು ಕಾಣಲಿದೆ ಎಂದು ಮಿಸ್ಬಾ ಉಲ್ ಹಕ್ ಎಚ್ಚರಿಕೆ…

Read More

ದೋಹಾ: ಕತಾರ್ ನಲ್ಲಿರುವ ಕರ್ನಾಟಕ ಸಂಘವು 68ನೇ ಕನ್ನಡ ರಾಜ್ಯೋತ್ಸವನ್ನು ನವೆಂಬರ್ 3 ರಂದು ಅದ್ದೂರಿ ಕಾರ್ಯಕ್ರಮದ ಮೂಲಕ ಆಚರಿಸಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪತ್ರಕರ್ತರಾದ ಜೋಗಿ ಖ್ಯಾತಿಯ ಗಿರೀಶ್ ರಾವ್ ಹತ್ವಾರ್ ಹಾಗೂ ಸ್ಯಾಂಡಲ್ ವುಡ್‍ನ ಕ್ರೇಜಿ ಸ್ಟಾರ್ ವಿ ರವಿಚಂದ್ರನ್ ಅವರು ಭಾಗವಹಿಸಿದ್ದರು. ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಮಣಿಕಂಠನ್, ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗೆಲು, ಐಸಿಬಿಫ್ ನ ಅಧ್ಯಕ್ಷ ಶಾನವಸ್ ಬವ, ಕರ್ನಾಟಕ ಸಂಘದ ಸಲಹಾ ಮಂಡಳಿ ಸದಸ್ಯರು, ಸೋದರ ಸಂಸ್ಥೆಗಳ ಅಧ್ಯಕ್ಷರು ರಾಜ್ಯೋತ್ಸವದ ಆಚರಣೆಯಲ್ಲಿ ಪಾಲ್ಗೊಂಡರು. ರವಿಚಂದ್ರನ್  (Ravichandran) ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಮಹೇಶ್ ಗೌಡ ಅವರ ಪ್ರೀತಿಯ ಕರೆ ಅವರನ್ನು ಕತಾರ್‍ಗೆ ಬರುವಂತೆ ಪ್ರೇರೇಪಿಸಿದ್ದು ಹಾಗೂ ಅವರ ಕತಾರ್ ನ ಪ್ರವಾಸ ನೆನಪಿನಲ್ಲಿ ಉಳಿಯುವಂತದ್ದು ಎಂದು ಸಭೆಗೆ ತಿಳಿಸಿದರು. ಅವರ ತಂದೆಯ ಜೀವನ ಶೈಲಿಯನ್ನು ನೆನೆಸಿಕೊಂಡ ಅವರು, ಮುಂಬರುವ ದಿನಗಳಲ್ಲಿ ಪ್ರೇಮಲೋಕ ಚಿತ್ರದ ಭಾಗ-2 ನಿರ್ಮಿಸಿ ಬಿಡುಗಡೆಗೊಳಿಸುವ ಭರವಸೆ…

Read More