Author: AIN Author

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್ ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್ ಫೇಕ್ ಕಾಟ ಮುಂದುವರೆದಿದೆ. ಬಾಲಿವುಡ್ (Bollywood) ನಟಿ ಕತ್ರಿನಾ ಕೈಫ್‍  (Katrina Kaif) ಫೋಟೋ ಕೂಡ ಡೀಪ್ ಫೇಕ್ ಮಾಡಲಾಗಿದೆ. https://ainlivenews.com/knee-pain-treatment-joint-pain-treatment/ ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ…

Read More

ಧಾರವಾಡ: ಬಾಲಕರ ವಸತಿ ನಿಲಯಕ್ಕೆ ಸಚಿವ ಹೆಚ್ ಸಿ ಮಹದೇವಪ್ಪ ಧಿಡೀರ್ ಭೇಟಿ ನೀಡಿದ್ದಾರೆ. ಧಾರವಾಡದ ಸರಕಾರಿ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯವಾಗಿದ್ದು, ವಸತಿ ನಿಲಯದ ಅಡುಗೆ ಕೋಣೆಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಬಳಿಕ ವಸತಿ ನಿಲಯದ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಫೀಡ್ ಬ್ಯಾಕ್ ಕೇಳಿದ್ದಾರೆ. ಹಾಸ್ಟೆಲ್ ವಾರ್ಡನ್‌ಗಳಿಂದ ವಸತಿ ನಿಲಯ ಕುರಿತು ಮಾಹಿತಿ ಪಡೆದುಕೊಂಡ ಸಚಿವರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು‌ ಅಧಿಕಾರಿಗಳಿ‌ ಸೂಚನೆ ನೀಡಿದ್ದಾರೆ.

Read More

ಬೆಂಗಳೂರು: ಚಲಿಸ್ತಿದ್ದ ಫ್ಲೈಟ್‌ನಲ್ಲಿ ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ. ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸ್‌ ಏರ್‌ಲೈನ್ಸ್‌ನ LH 0754 ವಿಮಾನದಲ್ಲಿ ಪಕ್ಕದ ಸೀಟ್‌ನಲ್ಲಿದ್ದ ವ್ಯಕ್ತಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. https://ainlivenews.com/knee-pain-treatment-joint-pain-treatment/ ಸೀಟ್‌ನಲ್ಲಿ ನಿದ್ದೆಗೆ ಜಾರಿದ್ದ ತಿರುಪತಿ ಮೂಲದ ಮಹಿಳೆಗೆ ಸಹ ಪ್ರಯಾಣಿಕ ರಂಗನಾಥ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Read More

ಬಾಲಿವುಡ್ ಖ್ಯಾತ ಗಾಯಕ (Singer) ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್ (Honey Singh) ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಪಂಜಾಬಿ (Punjabi)ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್ (Honey Singh) ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು. ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ…

Read More

ರೂಪಾ ರಾವ್ ಈ ಹೆಸರು ನಿಮ್ಮೆಲ್ಲರಿಗೂ ಚಿರಪರಿಚಿತವೇ. ಮೂಲತಃ ಬೆಂಗಳೂರಿನವರಾದ ರೂಪಾ ರಾವ್ ಮಹಿಳಾ ನಿರ್ದೇಶಕಿಯಾಗಿ ಗುರ್ತಿಸಿಕೊಂಡಿದ್ದಾರೆ. ಇಂಗ್ಲೀಷ್, ಹಿಂದಿ, ಜರ್ಮನ್ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಶಾರ್ಟ್ಫಿಲ್ಮ್, ಡಾಕ್ಯೂಮೆಂಟರಿ, ವೆಬ್ ಸೀರೀಸ್ ಡೈರೆಕ್ಟ್ ಮಾಡಿ ಹೆಸರು ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ‘ಗಂಟುಮೂಟೆ’ ಹೆಸರಲ್ಲೊಂದು ಸಿನಿಮಾ ಮಾಡಿದ್ದರು. ವಿಭಿನ್ನ ಕಥಾಹಂದರವುಳ್ಳ ಈ ಸಿನಿಮಾ ಕನ್ನಡಿಗರ ಮನಸೂರೆಗೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲಿ ಸ್ಪರ್ಧೆ ಮಾಡಿತ್ತು. ಒಂದಿಷ್ಟು ಅವಾರ್ಡ್‌ಗಳನ್ನು ಕೊಳ್ಳೆಹೊಡೆಯೋ ಮೂಲಕ ನಿರ್ದೇಶಕಿ ರೂಪಾ ರಾವ್‌ಗೆ ಜನಪ್ರಿಯತೆಯ ಕಿರೀಟ ತೊಡಿಸಿತ್ತು. ಇದೀಗ ರೂಪಾ ರಾವ್ (Roopa Rao) ಮತ್ತೆ ಕನ್ನಡ ಕಲಾಭಿಮಾನಿಗಳನ್ನು ಎದುರುಗೊಳ್ಳಲು ರೆಡಿಯಾಗಿದ್ದಾರೆ. ಆದರೆ, ನಿರ್ದೇಶಕಿಯಾಗಿ ಅಲ್ಲ ಬದಲಾಗಿ ನಿರ್ಮಾಪಕಿಯಾಗಿ ಎಂಬುದು ವಿಶೇಷ. ಸಿನಿಮಾ ನಿರ್ಮಾಣ ಸುಲಭದ ಕೆಲಸವಲ್ಲ. ಚಿತ್ರಕ್ಕಾಗಿ ತಮ್ಮ ಮನೆಯ ಖಜಾನೆಯನ್ನೆಲ್ಲಾ ಖಾಲಿ ಮಾಡಿಕೊಳ್ಳುವುದು ಇದೆಯಲ್ಲ ಅದಕ್ಕೆ ಬಂಢ ಧೈರ್ಯ ಬೇಕು. ಆ ಎದೆಗಾರಿಕೆ ಒನ್ ಟು ಡಬ್ಬಲ್ ಇರುವುದರಿಂದಲೇ ನಿರ್ದೇಶಕಿ ರೂಪಾ ರಾವ್ ಗ್ಯಾಂಗ್‌ಸ್ಟರ್…

Read More

ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ರೌಡಿಶೀಟರ್​ಗಳ ಮನೆಯಲ್ಲಿದ್ದ ಲಾಂಗ್, ಮಚ್ಚು, ದಾಖಲೆ ವಶಕ್ಕೆ ಪಡೆಯಲಾಗಿದೆ. ವಾರಂಟ್​ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ರೇಡ್ ಮಾಡಲಾಗಿದೆ. https://ainlivenews.com/knee-pain-treatment-joint-pain-treatment/ ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರದ ಪೂರ್ವ ,ಪಶ್ಚಿಮ , ಉತ್ತರ ,ದಕ್ಷಿಣ ,ವೈಟ್ ಫೀಲ್ಡ್ ,ಆಗ್ನೇಯ ,ಈಶಾನ್ಯ ವಿಭಾಗದಲ್ಲಿ ಸಿಸಿಬಿ ದಾಳಿ ನಡೆಸಿದೆ. ಅಲ್ಲದೇ ರೌಡಿಗಳು ಬಡ್ಡಿ ವ್ಯವಹಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವುದು ಸಹ ತಿಳಿದುಬಂದಿದ್ದು, ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಚೆಕ್ ಹಾಗೈ ಸ್ಟ್ಯಾಂಪ್ ಪೇಪರ್ ಯಾರಿಗೆ ಸೇರಿದ್ದು? ರೌಡಿ ಬಳಿ ಹೇಗೆ ಬಂದವು? ಬಲವಂತವಾಗಿ ಯಾವುದಾದರೂ ಲ್ಯಾಂಡ್ ಮತ್ತು ಸೈಟ್ ಕಬ್ಜಾ ಮಾಡಿದ್ದಾರೆ? ಬೆದರಿಕೆ…

Read More

ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ. 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. https://ainlivenews.com/knee-pain-treatment-joint-pain-treatment/ ಮಾನವ ಕಳ್ಳ ಸಾಗಣೆ ಸಂಬಂಧ ರಾಜ್ಯ ಗುಪ್ತಚರ ಇಲಾಖೆ ಎನ್ ಐ ಎ. ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು ಈ ಮಾಹಿತಿಯನ್ನ ಅಧರಿಸಿ ಕಾರ್ಯಾಚರಣೆ ಕೈಗೊಂಡಿರುವ ಎನ್ ಐ ಎ ಕೆಲಸದ ಆಮಿಷ ತೋರಿಸಿ‌ ಬಾಂಗ್ಲಾ ಯುವತಿಯರನ್ನ ನಗರಕ್ಕೆ ಕರೆಸುತ್ತಿದ್ದ ಆರೋಪಿಗಳು.

Read More

ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ (Kambala) ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು. https://ainlivenews.com/knee-pain-treatment-joint-pain-treatment/ ಈ ಬಾರಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ(Aishwarya Rai), ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ (Anushka Shetty) ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ. ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.

Read More

ಡ್ರೋನ್ ಪ್ರತಾಪ್ (Drone Prathap) ಅವರು ದೊಡ್ಮನೆಗೆ ಕಾಲಿಡುವ ಮುನ್ನ ಜನರಿಗೆ ಇದ್ದ ಅಭಿಪ್ರಾಯವೇ ಬೇರೆಯಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆದ ಬಳಿಕ ಪ್ರತಾಪ್ ಮೇಲೆ ಜನರಿಗೆ ನಂಬಿಕೆ ಇರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಬಿಗ್ ಬಾಸ್‌ಗೆ (Bigg Boss Kannada 10) ಬಂದ ಮೇಲೆ ಡ್ರೋನ್ ಪ್ರತಾಪ್ ಅವರು ಅಪಾರ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಇನ್ನೂ ದೊಡ್ಮನೆಯಲ್ಲಿ ಪ್ರತಾಪ್, ಬುದ್ಧಿವಂತ ಎಂದು ತಿಳಿದ ಮೇಲೆ ಅವರ ಜೊತೆ ಫ್ರೆಂಡ್‌ಶಿಪ್ ಮಾಡಿಕೊಳ್ಳಲು ತುಕಾಲಿ ಸಂತೂ, ವರ್ತೂರು ಸಂತೋಷ್, ವಿನಯ್, ಸ್ನೇಹಿತ್ ಮುಂದಾಗಿದ್ದಾರೆ. https://ainlivenews.com/knee-pain-treatment-joint-pain-treatment/ ಸಂತೋಷ್‌ಗೆ ಮನೆಯ ಒಳಗೆ ಇರುವ ಸ್ಪರ್ಧಿಗಳ ಬಗ್ಗೆ ಜನರಿಗೆ ಯಾವ ರೀತಿಯ ಅಭಿಪ್ರಾಯ ಇದೆ ಅನ್ನೋದು ಅವರಿಗೆ ತಿಳಿದಿದೆ. ಹೀಗಾಗಿ, ದೊಡ್ಮನೆ ಒಳಗೆ ಬಂದ ಅವರು ವಿನಯ್ & ಟೀಮ್‌ನಿಂದ ದೂರಯುಳಿದಿದ್ದಾರೆ. ತುಕಾಲಿ ಸಂತೂ ಬಳಿ ಸಂತೋಷ್ ಹೋಗಿ ಪ್ರತಾಪ್ ಜೊತೆ ಸೇರಿಕೊಳ್ಳೋಕೆ ಅವರು ಸೂಚಿಸಿದ್ದಾರೆ. ವಿನಯ್-ಕಾರ್ತಿಕ್ ಕಿತ್ತಾಡುತ್ತಿದ್ದರು. ಆದರೆ, ಈಗ ಅವರಿಬ್ಬರೂ ಒಂದಾಗಿದ್ದಾರೆ. ಪ್ರತಾಪ್…

Read More

ಬೆಂಗಳೂರಿನ ಶ್ವಾನ ಪ್ರೇಮಿಗಳೇ ಈ ಸ್ಟೋರಿ ಮಿಸ್ ಮಾಡಬೇಡಿ ನೀವು ಪೆಟ್ಸ್ ಪ್ರೇಮಿಗಳಾ ಹಾಗಿದ್ರೆ ಇನ್ಮುಂದೆ ಈ ಹೊಸ ಪ್ರಾಬ್ಲಂ ಫೇಸ್ ಮಾಡಲು ರೆಡಿ ಆಗಿ ಎಂದು ತಿಳಿಸುತ್ತದೆ ಏನಪ್ಪಾ ಅಂತೀರಾ ಇಲ್ಲಿದೆ ನೋಡಿ . https://ainlivenews.com/knee-pain-treatment-joint-pain-treatment/ ಸಿಲಿಕಾನ್ ಸಿಟಿಯಲ್ಲಿ ಶ್ವಾನ ಸಾಕಲು ಇಡಬೇಕಂತೆ ಠೇವಣಿ ಹಾಗೆ ಜೊತೆಗೆ ನಿಮ್ ಮನೆಲಿ ಶ್ವಾನ ಇದ್ರೆ ಇಲ್ಲಿ ಪಾಲಿಸಬೇಕಂತೆ ಶಿಫ್ಟ್ ಚಾರ್ಟ್ ಎಂದು ಪ್ರಕಟಣೆ ಮೂಲಕ ತಿಳಿಸಲಾಗುತ್ತಿದೆ. ಶ್ವಾನ ಸಾಕಲು ಸಾವಿರ ಸಾವಿರ ದುಡ್ಡು ಕೊಡಬೇಕು ನಿಗಧಿತ ಟೈಮ್ ಲ್ಲಿ ಮಾತ್ರ ಆಚೆ ತರಬೇಕು ನಾಯಿ ಸಾಕಲು ನಯಾ ರೂಲ್ಸ್ ತಂದ ನಗರದ ಈ ಅಪಾರ್ಟ್ಮೆಂಟ್ ಅಪಾರ್ಟ್ಮೆಂಟ್ ಅಲ್ಲಿ ನಾಯಿ ಸಾಕಲು 10 ಸಾವಿರ ದುಡ್ಡು ಠೇವಣಿ ಇಡಬೇಕಂತೆ ಸಿಲಿಕಾನ್ ಸಿಟಿಯಲ್ಲಿ ನಾಯಿ ಸಾಕೋದು ತುಂಬಾ ಕಾಸ್ಟ್ಲಿ ಗುರು ಅಂತಿದ್ದಾರೆ ಸಿಟಿ ಮಂದಿ 1,000 ಕ್ಕೂ ಹೆಚ್ಚು ಜನರು ವಾಸಿಸುವ ಬೆಂಗಳೂರಿನ ಅಪಾರ್ಟ್ಮೆಂಟ್ ಇದು ಎಲೆಕ್ಟ್ರಾನಿಕ್ಸ್ ಸಿಟಿಯ ಇಟ್ಟಿನ ಮಹಾವೀರ್ ಅಪಾರ್ಟ್‌ಮೆಂಟ್‌ನಲ್ಲಿ ಈ…

Read More