Author: AIN Author

ಕೋಲ್ಕತ್ತಾ: ಇಂಡಿಯನ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಅವರ 35ನೇ ಹುಟ್ಟುಹಬ್ಬದಂದು ಬೆಂಗಾಲ್ ಕ್ರಿಕೆಟ್ ಮಂಡಳಿಯು (CAB) ಚಿನ್ನದ ಬ್ಯಾಟ್ಉಡುಗೊರೆ! ಅನ್ನು ಉಡುಗೊರೆಯಾಗಿ ನೀಡಿದೆ. ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ (Sourav Ganguly) ಸಹೋದರ, ಸಿಎಬಿ ಮಂಡಳಿಯ ಅಧ್ಯಕ್ಷ ಸ್ನೇಹಶಿಶ್ ಗಂಗೂಲಿ (Snehasish Ganguly) ಅವರು ಕೊಹ್ಲಿಗೆ ಈ ಗಿಫ್ಟ್ ಅನ್ನು ಹಸ್ತಾಂತರ ಮಾಡಿದರು. ಈ ಚಿನ್ನದ ಬ್ಯಾಟಿನ ಮೇಲೆ ‘ಹ್ಯಾಪಿ ಬರ್ತ್ ಡೇ ವಿರಾಟ್’ ಎಂದು ವಿಶ್ ಮಾಡಲಾಗಿದೆ. ಅದರ ಕೆಳಗೆ ‘ನೀವು ಸಮರ್ಪಣೆಯ ಸಂಕೇತವಾಗಿದ್ದೀರಿ. ಅಲ್ಲದೆ ವಯಸ್ಸು ಕೇವಲ ನಂಬರ್ ಅಷ್ಟೇ ಎಂಬುದನ್ನು ನೀವು ಪ್ರೂವ್ ಮಾಡಿದ್ದೀರಿ ಎಂಬುದಾಗಿಯೂ ಬರೆಯಲಾಗಿದೆ. ಭಾನುವಾರ ದಕ್ಷಿಣ ಆಫ್ರಿಕಾದ‌ (South Africa) ವಿರುದ್ಧ ನಡೆದ ಏಕದಿನ ವಿಶ್ವಕಪ್ (World Cup 2023) ಟೂರ್ನಿಯ ಪಂದ್ಯದಲ್ಲಿ ಕೊಹ್ಲಿ 49 ಶತಕ ಸಿಡಿಸಿದ್ದಾರೆ. ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಿದ್ದರು. 1998 ರಲ್ಲಿ ಸಚಿನ್ ತಮ್ಮ 25ನೇ ಹುಟ್ಟುಹಬ್ಬದಂದು…

Read More

ಹೊಟ್ಟೆಯ ಆಮ್ಲೀಯತೆ ಸಮಸ್ಯೆ ಹಲವರನ್ನು ಕಂಗೆಡಿಸುತ್ತದೆ. ಹೊಟ್ಟೆಯ ಆಮ್ಲವು ಅನ್ನನಾಳದ ಕಡೆ ತಿರುಗಿ ಉರಿ ಎಬ್ಬಿಸುವ ಸ್ಥಿತಿ ಇದು. ಹೆಚ್ಚಾದರೆ ಗಂಭೀರ ಕಾಯಿಲೆಗಳಿಗೂ ಕಾರಣವಾಗಬಹುದು. ನಮ್ಮ ದೇಹ ಕೆಲವೊಮ್ಮೆ ಹಲವು ವಿಧಾನಗಳಲ್ಲಿ ನಮ್ಮ ಜೀವನಶೈಲಿಯ ಬಗ್ಗೆ ಎಚ್ಚರಿಕೆ ನೀಡುತ್ತದೆ. ಆಹಾರದ ವಿಚಾರದಲ್ಲಿ ಕಾಳಜಿ ವಹಿಸುವಂತೆ ಸೂಚನೆ ನೀಡುತ್ತಿರುತ್ತದೆ. ಅಂಥದ್ದೇ ಸೂಚನೆಗಳಲ್ಲಿ ಒಂದು ಈ ಆಸಿಡ್ ರಿಫ್ಲಕ್ಸ್. ಈ ಸಮಸ್ಯೆ ಉಂಟಾದಾಗ ಎದೆಯ ಭಾಗದಲ್ಲಿ ಉರಿಯಾಗುತ್ತದೆ. ಕುತ್ತಿಗೆಯವರೆಗೂ ಉರಿ ಬರಬಹುದು. ಬಾಯಿಯಿಂದ ಕೆಟ್ಟ ವಾಸನೆ ಬರಬಹುದು ಹಾಗೂ ಬಾಯಿಯಲ್ಲಿ ಕೆಟ್ಟ ರುಚಿ ತುಂಬಿಕೊಳ್ಳಬಹುದು. ಹೊಟ್ಟೆ ತುಂಬಿಕೊಂಡಿರುವ ಭಾವನೆ ಮೂಡಬಹುದು. ಈ ಸಮಸ್ಯೆ ಹೆಚ್ಚಾದರೆ, ಮಲದಲ್ಲಿ ರಕ್ತವೂ ಬೀಳಬಹುದು. ಕುತ್ತಿಗೆಯಲ್ಲೇ ಆಹಾರ ಸಿಲುಕಿಕೊಂಡಿದೆ ಎನ್ನಿಸಲೂಬಹುದು. ಬಿಕ್ಕಳಿಕೆ, ಅನಾರೋಗ್ಯದ ಭಾವನೆ ಹೆಚ್ಚಾಗಬಹುದು. ನಿರಂತರವಾಗಿ ಹೀಗಾಗುತ್ತಿದ್ದರೆ ತೂಕ ಕಡಿಮೆಯಾಗಬಹುದು. ಅಸ್ತಮಾದಂತೆ ಉಸಿರಾಟದ ತೊಂದರೆಯೂ ಕಾಣಿಸಬಹುದು. ಒತ್ತಡದಿಂದಾಗಿ ಎದೆಯಲ್ಲಿ ಉರಿಯಾಗುತ್ತಿದೆ ಎಂದು ಭಾವಿಸುವುದೂ ಹೆಚ್ಚು. ದೀರ್ಘಕಾಲದ ಒತ್ತಡದಿಂದ ಆಸಿಡ್ ರಿಫ್ಲಕ್ಸ್ ಆರಂಭವಾಗಬಹುದು, ಹೆಚ್ಚಾಗಬಹುದು. ಆದರೆ, ಆರಂಭಿಕ ಹಂತದಲ್ಲಿ ಅದು…

Read More

ಕೊಲಂಬೊ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ (World Cup 2023) ಕ್ರಿಕೆಟ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಟೀಂ ಇಂಡಿಯಾ (Team India) ವಿರುದ್ಧ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕ್ರೀಡಾ ಸಚಿವ ರೋಶನ್‌ ರಣಸಿಂಘೆ (Roshan Ranasinghe) ಶ್ರೀಲಂಕಾದ ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನೇ ವಜಾಗೊಳಿಸಿದ್ದಾರೆ. ಕ್ರಿಕೆಟ್‌ ಮಂಡಳಿಯನ್ನು ವಜಾಗೊಳಿಸಿದ ನಂತರ 1996ರಲ್ಲಿ ಶ್ರೀಲಂಕಾ ತಂಡದ ನಾಯಕನಾಗಿ ಏಕದಿನ ವಿಶ್ವಕಪ್ ಗೆದ್ದುಕೊಟ್ಟಿದ್ದ ಅರ್ಜುನ ರಣತುಂಗ (Arjuna Ranatunga) ಅವರನ್ನ ಮಂಡಳಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ತಿಂಗಳ ನವೆಂಬರ್‌ 2ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 358 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿತ್ತು. ಆದ್ರೆ ಶ್ರೀಲಂಕಾ (Sri Lanka) ಕೇವಲ 55 ರನ್‌ಗಳಿಗೆ ಆಲೌಟ್​ ಆಗಿ 302ರನ್‌ ಗಳ ಸೋಲು ಅನುಭವಿಸಿತ್ತು. ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆದ ಏಕದಿನ ಏಷ್ಯಾಕಪ್‌ ಟೂರ್ನಿಯ ಫೈನಲ್‌ನಲ್ಲೂ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್‌ ಆಗಿ ತವರಿನಲ್ಲೇ ಮುಖಭಂಗ…

Read More

ಬೆಂಗಳೂರು;- ರಾಜ್ಯದ ಸಚಿವರ ಬೆಂಬಲ ಬ್ಲೂಟೂತ್‌ ಅಕ್ರಮದ ಕಿಂಗ್‌ಪಿನ್‌ ಆರ್‌.ಡಿ.ಪಾಟೀಲ್‌ಗೆ ಇದೆ ಎಂಬ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಡೀ ಸರ್ಕಾರ ಹಗರಣದ ತನಿಖೆಗೆ ಬೆಂಬಲವಾಗಿ ನಿಂತಿದೆ. ನಾವು ಪರೀಕ್ಷೆ ನಡೆಯುವಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. 4 ದಿನದಲ್ಲಿ 20ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ. ಬಿಜೆಪಿ ಸರಕಾರವಿದ್ದಾಗ ಗೃಹ ಸಚಿವರೇ ಪಿಎಸ್‌ಐ ಹಗರಣದ ಮುಖ್ಯ ಆರೋಪಿ ಮನೆಗೆ ಹೋಗಿ ಕಾಜು- ಬದಾಮ್‌ ತಿಂದು ಬಂದಂತೆ ನಾವಂತೂ ತಿಂದಿಲ್ಲ. ಅಕ್ರಮದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಮುಖ್ಯ ಆರೋಪಿ ಆರ್‌.ಡಿ.ಪಾಟೀಲ್‌ ನನ್ನು ಹಿಡಿಯುತ್ತೇವೆ. ಬಿಜೆಪಿಯವರು ಗಾಳಿಯಲ್ಲಿ ಗುಂಡು ಹೊಡೆಯದೆ ವಾಸ್ತವ ಅರಿತು ಮಾತನಾಡಲಿ. ವಿಜಯೇಂದ್ರ ಸರಿಯಾಗಿ ಹೋಮ್‌ ವರ್ಕ್‌ ಮಾಡಿಕೊಂಡು ಬಂದು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

Read More

ಬಾಗಲಕೋಟೆ: ಪ್ರಧಾನ ಮಂತ್ರಿ ಏನಾದರೂ ಹೇಳಲಿ, ನಾವು ನಮ್ಮ ಜನರ ಕೆಲಸ ಮಾಡುತ್ತಾ ಇರತ್ತೇವೆ. ಗ್ಯಾರಂಟಿ ಯೋಜನೆಯಿಂದಾಗಿ ಬಿಜೆಪಿ ಪಕ್ಷದವರಿಗೆ ನಡುಕ ಶುರುವಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೆಗೌಡ ತಿಳಿಸಿದ್ದಾರೆ. ಸಿದ್ದರಾಮಯ್ಯ ಎಷ್ಟ ದಿನ ಸಿಎಂ ಇರ್ತಾರೆ ಗೊತ್ತಿಲ್ಲ, ಸಿಎಂ – ಡಿಸಿಎಂ ಸೇರಿ ರಾಜ್ಯ ಲೂಟಿ ಮಾಡ್ತಿದ್ದಾರೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಸರ್ಕಾರ ಅಲುಗಾಡಿಸಲಿಕ್ಕೆ ಆಲೋಚನೆ ಮಾಡಿದರು. ಆ ರೀತಿ ಮೋದಿ ಅವರ ಹೇಳಿಕೆ ಇರಬಹುದು ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗುತ್ತೆ. ಪ್ರಧಾನಿ ಯವರ ಯಾವ ಪ್ರಯತ್ನವೂ ಈಡೇರುವುದಿಲ್ಲ. ನಮ್ಮಲ್ಲಿ ಸಹಮತವಿದೆ, ನಾವೆಲ್ಲರೂ ಒಂದಾಗಿದ್ದೇವೆ ಎಂದರು. ಇವತ್ತು ಮುಖ್ಯವಾಗಿ ಆಗಬೇಕಿರುವುದು ಜನಗಳ ಕಾರ್ಯ. ನಾವು ಜನಗಳ ಕೆಲಸದ ಬಗ್ಗೆ ಗಮನ ಹರಿಸಿದ್ದೇವೆ. ಬಿಜೆಪಿಯವರು ಆಪರೇಷನ್ ಮಾಡ್ತಾರೋ, ಇನ್ನೊಂದ ಮಾಡ್ತಾರೋ ಮಾಡಲಿ. https://ainlivenews.com/supreme-ray-healing-centre-reiki-treatment/ ಬಿಜೆಪಿ ಆಪರೇಷನ್ ಎದುರಿಸುವ ಶಕ್ತಿ ನಮ್ಮ ಪಕ್ಷಕ್ಕಿದೆ. ರಾಜ್ಯದ ಜನರ ಆಶಿರ್ವಾದ ನಮಗಿದೆ. ಜನರ ಕೆಲಸ…

Read More

ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ಬಳಿಕ, ಲೋಕಸಭಾ ಚುನಾವಣೆಗೂ (Lok Sabha Elections) ಮುನ್ನವೇ ಕಾಂಗ್ರೆಸ್‌ 2ನೇ ಹಂತದ ಭಾರತ್‌ ಜೋಡೋ ಯಾತ್ರೆ (Bharat Jodo Yatra) ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಡಿಸೆಂಬರ್‌ ತಿಂಗಳಿಂದ ಫೆಬ್ರವರಿ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲೇ 2ನೇ ಹಂತದ ಭಾರತ್ ಜೋಡೊ ಮುಂದುವರಿಯಲಿದ್ದು, ಹೈಬ್ರಿಡ್ ಮೋಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಕಾರ್ಯಕ್ರದಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ಅಥವಾ ವಾಹನಗಳನ್ನು ಬಳಸಬಹುದಾಗಿದೆ. ಆದ್ರೆ ರಾಹುಲ್‌ ಗಾಂಧಿ ಈ ಮೊದಲಿನಂತೆ ಕಾಲ್ನಡಿಗೆಯಲ್ಲೇ ಯಾತ್ರೆ ಮಾಡಲಿದ್ದಾರೆ.  ಭಾರತ್‌ ಜೋಡೋ ಯಾತ್ರೆಯ ಮೊದಲ ಹಂತವು ಸೆಪ್ಟೆಂಬರ್ 7, 2022 ರಿಂದ ಜನವರಿ 2023ರವರೆಗೂ ನಡೆಯಿತು. ತಮಿಳುನಾಡಿನ (TamilNadu) ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಸರಿಸುಮಾರು 4,080 ಕಿಮೀ ಗಳಷ್ಟು ದೂರ ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆಯನ್ನ ಮುಕ್ತಾಯಗೊಳಿಸಲಾಗಿತ್ತು. https://ainlivenews.com/supreme-ray-healing-centre-reiki-treatment/…

Read More

ಬೆಂಗಳೂರು;- ಫೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಜಾಮೀನು ಸಿಗುತ್ತಾ? ಅಥವಾ ಜೈಲೇ ಗತಿಯಾಗಿತ್ತಾ ಎನ್ನುವುದು ಇಂದು ನಿರ್ಧಾರವಾಗಲಿದೆ. ಕರ್ನಾಟಕ ಹೈಕೋರ್ಟ್ ನಲ್ಲಿಂದು ಮುರುಘಾಮಠದ ಮುರುಘಾಶ್ರೀ ಜಾಮೀನು ಅರ್ಜಿ ಬಗ್ಗೆ ಆದೇಶ ಪ್ರಕಟಸಲಿದೆ. 2022ರ ಸೆಪ್ಟೆಂಬರ್ 1ರಿಂದ ಜೈಲಿನಲ್ಲಿರುವ ಮುರುಘಾಶ್ರೀ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಮುರುಘಾಶ್ರೀ ಪರ ವಕೀಲರು ಹೈಕೋರ್ಟ್​ ಮೆಟ್ಟಲೇರಿದ್ದು, ಇಂದು ಶ್ರೀಗಳ ಭವಿಷ್ಯ ನಿರ್ಧಾರವಾಗಲಿದೆ. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಕದ ತಟ್ಟಿದ್ದರು.ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ…

Read More

ಸ್ಯಾಂಡಲ್​ವುಡ್ ಬಾಕ್ಸ್​ ಆಫೀಸ್ ಸುಲ್ತಾನ, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಇದು ಪಕ್ಕಾ ಸೆಲೆಬ್ರೇಷನ್ ಟೈಮ್. ತಾರಕ್ ಚಿತ್ರದ ನಿರ್ದೇಶಕ ಪ್ರಕಾಶ್ ನಿರ್ದೇಶನದ ಹಾಗೂ ಡಿ ಬಾಸ್ ದರ್ಶನ್ ನಟಿಸುತ್ತಿರುವ ಹೊಸ ಸಿನಿಮಾ D-57 ಚಿತ್ರಕ್ಕೆ ಸದ್ದಿಲ್ಲದೇ ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಮಾಡಲಾಗಿದೆ. ಸದ್ಯಕ್ಕೆ D-57 ಎಂದು ಈ ಸಿನಿಮಾಗೆ ಹೆಸರಿಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ನಟ ದರ್ಶನ್ ಹಾಗೂ ಮಿಲನ ಪ್ರಕಾಶ್ ಕಾಂಬಿನೇಷನ್​ನಲ್ಲಿ ಹೊಸ ಸಿನಿಮಾ ಬರಲಿದೆ ಎಂಬ ಸುದ್ದಿ ಹರಿದಾಡಿದ್ದು, ಇದೀಗ ನಿಜವಾಗಿದೆ. D-57 ಚಿತ್ರದ ಮುಹೂರ್ತದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನಟ ದರ್ಶನ್ ಅವರು ಕಾಟೇರ ಚಿತ್ರದ ಅಂತಿಮ ಹಂತದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅತಿಥಿ ಪಾತ್ರದಲ್ಲಿ ನಟಿಸಿರುವ ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾ ಇದೇ ನವೆಂಬರ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಎರಡು ಸಿಹಿ ಸುದ್ದಿಯ ನಡುವೆಯೇ ಡಿ ಬಾಸ್ ತಮ್ಮ…

Read More

ಬೆಂಗಳೂರು;- ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ದಾಳಿ ನಡೆಸಿದ್ದು, 13 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳಿಂದ 10 ಲಕ್ಷ ರೂ. ನಗದು ಇನ್ನಿತರ ಬೆಟ್ಟಿಂಗ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ನಗರದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಪರಿಣಾಮಕಾರಿಯಾಗಿ ನಡೆಯುತ್ತಿವೆ. ಈ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಮೂಲತಃ ಹೈದ್ರಾಬಾದ್‍ನವರು ಎಂದು ತಿಳಿದುಬಂದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು. ನಗರದಾದ್ಯಂತ ಚೀತಾ, ಹೊಯ್ಸಳ ನಿರಂತರ ಬೀಟ್ ಮಾಡುತ್ತಿವೆ. ನೈಟ್ ಬೀಟ್ ಸಹ ವ್ಯವಸ್ಥಿತವಾಗಿ ನಡೆಯುತ್ತಿದೆ. ಯಾವುದೇ ರೀತಿಯ ಅಪರಾಧ ಚಟುವಟಿಕೆಗಳು, ಆನ್‍ಲೈನ್, ಆಫ್‍ಲೈನ್ ದಂಧೆಗಳ ಸೇರಿದಂತೆ ಎಲ್ಲದರ ವಿರುದ್ಧ ಪೊಲೀಸ್ ಇಲಾಖೆ ಗಂಭೀರ ನಿಗಾ ವಹಿಸಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

Read More

ಐಫೋನ್ 14, 128GB ರೂಪಾಂತರವು ಫ್ಲಿಪ್‌ಕಾರ್ಟ್‌ನಲ್ಲಿ 14,901 ರೂ. ಗಳ ಫ್ಲಾಟ್ ರಿಯಾಯಿತಿಯಲ್ಲಿ ಲಭ್ಯವಿದೆ. ಈ ಫೋನ್ 54,999 ರೂ. ಗೆ ಮಾರಾಟವಾಗುತ್ತಿದೆ. ಇದರ ಮೂಲ ಬೆಲೆ 69,900 ರೂ. ಆಗಿದೆ. ಇದಲ್ಲದೆ, ಬ್ಯಾಂಕ್ ಕೊಡುಗೆಗಳು ಸಹ ಲಭ್ಯವಿದೆ. SBI ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ 1,000 ರೂ. ವರೆಗೆ 10 ಪ್ರತಿಶತ ತ್ವರಿತ ರಿಯಾಯಿತಿ ಇದೆ. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ನಲ್ಲಿ ಶೇಕಡಾ 5 ರಷ್ಟು ಕ್ಯಾಶ್‌ಬ್ಯಾಕ್ ಕೂಡ ಇದೆ. ಇದರ ಜೊತೆಗೆ, ನಿಮ್ಮ ಹಳೆಯ ಫೋನ್ ಅನ್ನು ವಿನಿಮಯ ಮಾಡಿಕೊಂಡರೆ ಇನ್ನೂ ಕಡಿಮೆ ಬೆಲೆಯಲ್ಲಿ ಐಫೋನ್ 14 ಅನ್ನು ಪಡೆಯಬಹುದು. ನಿಮ್ಮ ಫೋನ್ ಉತ್ತಮ ಸ್ಥಿತಿಯಲ್ಲಿದೆ, ಹೆಚ್ಚಿನ ಡಿಸ್ಕೌಂಟ್ ನೀಡಲಾಗುತ್ತದೆ. ಐಫೋನ್ 14 ಕಳೆದ ವರ್ಷ ಭಾರತದಲ್ಲಿ ಬಿಡುಗಡೆ ಮಾಡಲಾಗಿತ್ತು. ಐಫೋನ್ 14 ಜೊತೆಗೆ ಐಫೋನ್ 14 ಪ್ಲಸ್, ಐಫೋನ್ 14 ಪ್ರೊ ಮತ್ತು ಐಫೋನ್ 14 ಪ್ರೊ ಮ್ಯಾಕ್ಸ್ ಅನಾವರಣಗೊಂಡಿತ್ತು. ಐಫೋನ್ 14 ಮತ್ತು 2021 ರ ಐಫೋನ್…

Read More